Connect with us

ರಾಜಕೀಯ

ಭಾರತದ ಸಂವಿಧಾನದ ಏಕೈಕ ಶಿಲ್ಪಿ, ಸಂವಿಧಾನದ ಪಿತಾಮಹ ಡಾ ಅಂಬೇಡ್ಕರ್

Published

on

  • ಅಲ್‌ಮೆಯಿಡಾ ಗ್ಲಾಡ್‌ಸನ್

ಭಾರತದ ಸಂವಿಧಾನದ ಏಕೈಕ ಶಿಲ್ಪಿ, ಸಂವಿಧಾನದ ಪಿತಾಮಹ ಡಾ ಅಂಬೇಡ್ಕರ್ ಮಾತ್ರ ಯಾಕೆಂದರೆ 395 ವಿಧಿಗಳು, 8 ಅನುಚ್ಛೇದಗಳು, 22 ಭಾಗಗಳು, ಒಂದು ಲಕ್ಷಕ್ಕಿಂತಲೂ ಹೆಚ್ಚು ಶಬ್ದಗಳು ಹಾಗೂ ಇನ್ನೂರಕ್ಕಿಂತ ಹೆಚ್ಚು ಪುಟಗಳ ಸಂವಿಧಾನವನ್ನು ರಚಿಸುವಲ್ಲಿ ಡಾ ಅಂಬೇಡ್ಕರ್ ಪಟ್ಟ ಶ್ರಮ, ವ್ಯಯಿಸಿದ ಸಮಯ ಎಲ್ಲರಿಗಿಂತಲೂ ಹೆಚ್ಚು.

ಸಂವಿಧಾನ ಕರಡು ಸಮಿತಿಯ ಸದಸ್ಯರಾಗಿ ಕೃಷ್ಣಸ್ವಾಮಿ ಅಯ್ಯರ್, ಗೋಪಾಲಸ್ವಾಮಿ ಅಯ್ಯಂಗಾರ್, ಕೆ ಎಮ್ ಮುನ್ಶಿಯಂಥ ಘಟಾನುಘಟಿಗಳು ಇದ್ದರೂ, ಸಮಿತಿಯ ಅಧ್ಯಕ್ಷರನ್ನಾಗಿ ಆರಿಸಿದ್ದು ಬಾಬಾಸಾಹೇಬರನ್ನು ಅವರ ಸಾಮರ್ಥ್ಯ ಹಾಗೂ ಅಗಾಧವಾದ ಜ್ಞಾನದಾಧರದಲ್ಲಿ. ಸಂವಿಧಾನ ಕರಡು ಸಮಿತಿಯಲ್ಲಿ ಬಾಬಾಸಾಹೇಬರ ಜೊತೆ ಇನ್ನೂ ಆರು ಜನರಿದ್ದರು. ಆದರೆ ಕಾರಾಣಾಂತರಗಳಿಂದ ಕರಡು ಸಮಿತಿಯ ಹೆಚ್ಚಿನ ಸದಸ್ಯರು ಸಂವಿಧಾನ ರಚನೆಯಲ್ಲಿ ಭಾಗವಹಿಸಲೇ ಇಲ್ಲ. ಒಬ್ಬರು ತೀರಿಹೋದರು, ಇನ್ನೊಬ್ಬರು ಅಮೇರಿಕಾಕ್ಕೆ ಹೋದರೆ, ಮತ್ತೋರ್ವರು ತಮ್ಮ ರಾಜ್ಯದ ವಿಷಯಗಳಲ್ಲೇ ತಲ್ಲೀನರಾದರು. ಇನ್ನಿಬ್ಬರು ಅನಾರೋಗ್ಯದ ನಿಮಿತ್ತ ದೆಹಲಿ ಕಡೆ ಬರಲೇ ಇಲ್ಲ. ಹೀಗಾಗಿ ಇಡೀ ಸಂವಿಧಾನವನ್ನು ರಚಿಸುವ ಸಂಪೂರ್ಣ ಜವಾಬ್ದಾರಿ ಬಾಬಾಸಾಹೇಬರ ಹೆಗಲಿಗೇ ಬಿತ್ತು. ಸುಮಾರು ಎರಡೂವರೆ ವರುಷಗಳ ಕಾಲ ನಡೆದ ಸಂವಿಧಾನ ರಚನೆ, ನವೆಂಬರ್ 26, 1949ರಂದು ಸಂವಿಧಾನ ಸಭೆಯ ಅನುಮೋದನೆ ಪಡೆಯುವ ಮೊದಲು ಸುಮಾರು 2500 ಬಾರಿ ತಿದ್ದುಪಡಿಗೆ ಒಳಗಾಗಿತ್ತು. ಕೊನೆಗೆ ಈ ಸಂವಿಧಾನ ಅನುಮೋದನೆಯಾದಾಗ ಅದು ಜಗತ್ತಿನ ಅತೀ ದೊಡ್ಡ ಸಂವಿಧಾನವೆಂದು ಪರಿಗಣಿಸಲ್ಪಟ್ಟಿತ್ತು. ಸದ್ಯಕ್ಕೆ ನಮ್ಮ ಸಂವಿಧಾನ ಜಗತ್ತಿನ ಎರಡನೆಯ ಅತೀ ದೊಡ್ಡ ಸಂವಿಧಾನ. ಮೊದಲನೆಯ ಸ್ಥಾನದಲ್ಲಿ ಈವಾಗ ಅಲ್ಬೇನಿಯಾದ ಸಂವಿಧಾನ ಇದೆ.

ನಮ್ಮ ದೇಶ ಯಾವುದೇ ದೇಶದ ಸಂವಿಧಾನದ ಕಾಪಿ-ಪೇಸ್ಟ್ ಅಲ್ಲ ಸಂಘಿಗಳು ಹೇಳುವಂತೆ. ಹೌದು ಬ್ರಿಟನ್, ಅಮೇರಿಕಾ, ಐರ್ಲೆಂಡ್, ಫ್ರಾನ್ಸ್, ಆಸ್ಟ್ರೇಲಿಯಾ, ಜರ್ಮನಿ, ಯುಎಸ್‍ಎಸ್‍ಆರ್ ಮುಂತಾದ ದೇಶಗಳ ಸಂವಿಧಾನಗಳ ಪ್ರಭಾವ ನಮ್ಮ ಸಂವಿಧಾನದ ಮೇಲೂ ಇದೆ. ಆದರೆ ಅಲ್ಲಿಂದ ಕಾಪಿಯಾಗಿಲ್ಲ ಬದಲಾಗಿ ಅವುಗಳ ಕೆಲ ಆಶಯಗಳನ್ನು ಮೂಲಾಧಾರವಾಗಿಟ್ಟು, ಭಾರತದ ಸಾಮಾಜಿಕ, ಆರ್ಥಿಕ, ಧಾರ್ಮಿಕ, ಸಾಂಸ್ಕೃತಿಕ, ಭೌಗೋಳಿಕ, ಭಾಷಿಕಾ ವಿವಿಧತೆಗಳಿಗೆ ಅನುಸಾರವಾಗಿ ಭಾರತದ ಸಂವಿಧಾನವನ್ನು ರಚಿಸಲಾಗಿದೆ.

ಸಂವಿಧಾನ ಕರಡು ಸಮಿತಿಯ ಸದಸ್ಯರಾಗಿದ್ದವರು ಬಾಬಾಸಾಹೇಬ್ ಅಂಬೇಡ್ಕರ್, ಗೋಪಾಲಸ್ವಾಮಿ ಅಯ್ಯಂಗಾರ್, ಕೃಷ್ಣಸ್ವಾಮಿ ಅಯ್ಯರ್, ಕೆ‍ಎಮ್ ಮುನ್ಶಿ, ಸಯ್ಯದ್ ಮಹಮೂದ್ ಸಾ’ದುಲ್ಲಾ, ಬಿ ಎಲ್ ಮಿಟ್ಟರ್, ಡಿ ಪಿ ಖೈತಾನ್. (ಮಿಟ್ಟರ್ ಅವರ ಅನಾರೋಗ್ಯದ ಕಾರಣದಿಂದ ಸಮಿತಿಯಿಂದ ಹೊರಗುಳಿದಾಗ ನಮ್ಮ ಮೈಸೂರಿನ ಮಾಧವ ರಾವ್ ಅವರ ಜಾಗಕ್ಕೆ ಆಯ್ಕೆಯಾಗಿದ್ದರೆ, ಡಿ ಪಿ ಖೈತಾನ್ 1948ರಲ್ಲಿ ತೀರಿಹೋದ ಕಾರಣ ಅವರ ಜಾಗಕ್ಕೆ ಟಿ ಟಿ ಕೃಷ್ಣಮಾಚಾರಿ ಆಯ್ಕೆಯಾಗಿದ್ದರು). ಭಾರತದ ಸಂವಿಧಾನ ನವೆಂಬರ್ 26, 1949ರಂದು ಸಂವಿಧಾನ ಸಭೆಯ ಅನುಮೋದನೆ ಪಡೆದಾಗ ಸಂವಿಧಾನ ಸಭೆಯನ್ನುದ್ದೇಶಿಸಿ ಮಾತಾನಾಡಿದ ಟಿ ಟಿ ಕೃಷ್ಣಮಾಚಾರಿ ಹೀಗೆಂದಿದ್ದಾರೆ “ಕರಡು ರಚನಾ ಸಮಿತಿಗೆ ಈ ಸಂವಿಧಾನ ಸಭೆ ಏಳು ಜನರನ್ನು ನೇಮಿಸಿತ್ತು. ಅದರಲ್ಲಿ ಒಬ್ಬರು ರಾಜೀನಾಮೆ ಕೊಟ್ಟಾಗ ಅವರ ಜಾಗಕ್ಕೆ ಇನ್ನೋರ್ವರ ಆಯ್ಕೆಯಾಯಿತು. ಒಬ್ಬರು ತೀರಿಹೋದರು, ಒಬ್ಬರು ಅಮೇರಿಕಾಕ್ಕೆ ಹೋದರೆ, ಮತ್ತೊಬ್ಬ ಸದಸ್ಯರು ತಾವು ಪ್ರತಿನಿಧಿಸುತ್ತಿದ್ದ ರಾಜ್ಯದ ವಿಷಯಗಳಲ್ಲೇ ತಲ್ಲೀನರಾಗಿದ್ದರೆ, ಇನ್ನಿಬ್ಬರು ದೆಹಲಿಯಿಂದ ದೂರವಿದ್ದು, ಅವರ ಅನಾರೋಗ್ಯದ ಕಾರಣದಿಂದ ಸಂವಿಧಾನ ರಚನೆಯಲ್ಲಿ ಭಾಗವಹಿಸಲಿಲ್ಲ. ಹೀಗಾಗಿ ಸಂವಿಧಾನವನ್ನು ರಚಿಸುವ ಸಂಪೂರ್ಣ ಜವಾಬ್ದಾರಿ ಡಾ ಅಂಬೇಡ್ಕರ್ ಅವರ ಹೆಗಲಿಗೆ ಬಿತ್ತು. ಈ ಜವಾಬ್ದಾರಿಯನ್ನು ಸಮರ್ಪಕವಾಗಿ ಹಾಗೂ ಪ್ರಶಂಸನೀಯ ರೀತಿಯಲ್ಲಿ ನಿಭಾಯಿಸಿದಕ್ಕಾಗಿ ನಾವೆಲ್ಲರೂ ಅವರಿಗೆ ಋಣಿಯಾಗಿರಬೇಕೆಂದು ನನ್ನ ಅಭಿಪ್ರಾಯ.”

ಭಾರತದ ಪ್ರಪ್ರಥಮ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್ ಸಂವಿಧಾನ ಸಭೆಯ ಡಿಬೇಟ್‍ನಲ್ಲಿ ಒಂದೊಮ್ಮೆ ಹೀಗೆಂದಿದ್ದರು. “ಅಧ್ಯಕ್ಷನ ಸ್ಥಾನದಲ್ಲಿದ್ದು ಕರಡು ರಚನೆ ಸಮಿತಿಯ ದೈನಂದಿನ ಕೆಲಸಗಳನ್ನು ನಾನು ಬಲು ಹತ್ತಿರದಿಂದ ನೋಡಿದ್ಡೇನೆ. ಹಾಗಾಗಿ ಬೇರೆಯರವರಿಗಿಂತ ಹೆಚ್ಚಾಗಿ ಸಂವಿಧಾನ ಕರಡು ರಚನೆ ಸಮಿತಿಯ ಸದಸ್ಯರು ಹಾಗೂ ಪ್ರತ್ಯೇಕವಾಗಿ ಸಮಿತಿ ಅಧ್ಯಕ್ಷರು ಎಷ್ಟೊಂದು ಶೃದ್ಧೆ ಹಾಗೂ ಚೈತನ್ಯದಿಂದ ಈ ಸಂವಿಧಾನವನ್ನು ರಚಿಸಿದ್ದಾರೆ ಎಂದು ನನಗೆ ತಿಳಿದಿದೆ. ಅಂಬೇಡ್ಕರ್ ಅವರನ್ನು ಕರಡು ಸಮಿತಿಗೆ ಆಯ್ಕೆ ಮಾಡಿ, ತದನಂತರ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದಕ್ಕಿಂತ ಹೆಚ್ಚಿನ ಒಳ್ಳೆಯ ಕೆಲಸವನ್ನು ನಾವು ಮಾಡಿಲ್ಲ.”

ಹೀಗಾಗಿ ಬಾಬಾಸಾಹೇಬ್ ಕೊಟ್ಟ ಸಂವಿಧಾನದ ಕಾರಣದಿಂದಲೇ ಇವತ್ತು ಐಎ‍ಎಸ್ ಆಫೀಸರ್ ಆಗಿರುವ ಶಿಕ್ಷಣಾ ಇಲಾಖೆಯ ಅಧಿಕಾರಿ ಉಮಾಶಂಕರ್ ಸಂವಿಧಾನ ರಚನೆಯ ಬಗ್ಗೆ ಹೊರಡಿಸಿರುವ ಸುತ್ತೋಲೆಯಲ್ಲಿ ಆಗಿರುವುದು ಪ್ರಮಾದವಲ್ಲ ಬಟ್ ಅಪರಾಧ. ಸಂವಿಧಾನದ ಕಾರಣದಿಂದಲೇ ಇಂಥ ಉನ್ನತ ಹುದ್ದೇಗೇರಿರುವ ವ್ಯಕ್ತಿಗಳು ಮನಸ್ಸಿನಲ್ಲಿ ಇಷ್ಟೊಂದು ಕೊಳಕನ್ನು ಹಾಗೂ ನೀಚತನವನ್ನು ತುಂಬಿಸಿಕೊಂಡಿದ್ದಾರೆಂದರೆ ಅವರು ಸಂವಿಧಾನದ ಪಾಲಕರಾಗಿರಲು ಸಾಧ್ಯವೇ ಇಲ್ಲ. ಇವರನ್ನು ಕೇವಲ ಅಮಾನತ್ತುಗೊಳಿಸಿದರೆ ಸಾಕಾಗೋಲ್ಲ ಬದಲಾಗಿ ಅವರನ್ನು ಸೇವೆಯಿಂದ ವಜಾ ಮಾಡಬೇಕು. ಸಂವಿಧಾನದ ನೆರಳಿನಡಿಯಲ್ಲಿ ಕುಳಿತು ತಮ್ಮ ರಾಜಕೀಯ ಹಾಗೂ ವ್ಯಯಕ್ತಿಕ ಸಿದ್ದಾಂತಗಳನ್ನು ಪ್ರತಿಪಾದಿಸುವ ಬದಲು ನೇರವಾಗಿ ಸೇವೆಗೆ ರಾಜೀನಾಮೆ ಕೊಟ್ಟು ಹೊರಬಂದು ತಮಗೆ ಬೇಕಾದ ರಾಜಕೀಯ ಪಕ್ಷವನ್ನು ಸೇರಲಿ. ಹಾಗಾಗಿ ಉಮಾಶಂಕರ್ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವ ತನಕ ಪಟ್ಟು ಸಡಿಲಿಸದೆ ಹೋರಾಡಬೇಕು. ನಮ್ಮ ಬ್ಯೂರೋಕ್ರಸಿಯಲ್ಲಿ ತುಂಬಿರುವ ಇಂಥ ನೀಚರನ್ನು ಗುರುತಿಸಿ ಹೊರಗಟ್ಟಿಲ್ಲವೆಂದರೆ ಮುಂದೊಂದು ದಿನ ಇವರೇ ಇಡೀ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡೋಡು ಗ್ಯಾರಂಟಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಬಿಜೆಪಿ ರೈತ ಮೋರ್ಚಾದಿಂದ ಬಂದ್‌ಗೆ ಕರೆ; ಹಲವು ವೃತ್ತಗಳಲ್ಲಿ ಟೈರ್‌ಗೆ ಬೆಂಕಿ, ಬೆಂಕಿ ನಂದಿಸಿದ ಪೊಲೀಸರು

Published

on

ಮೇಲ್ಭದ್ರ ನೀರಿಗಾಗಿ ದಾವಣಗೆರೆ ಬಂದ್‌: ಗುಟ್ಕಾ–ಪಾನ್‌ ಮಸಾಲಾ ನಿಷೇಧಕ್ಕೂ ಆಗ್ರಹ, ನಗರದಲ್ಲಿ ಪ್ರತಿಭಟನೆ ಕಾವು

ಸುದ್ದಿದಿನ,ದಾವಣಗೆರೆ: ಮೇಲ್ಭದ್ರ ಯೋಜನೆಯ ನೀರನ್ನು ಸಮರ್ಪಕವಾಗಿ ಬಿಡುಗಡೆ ಮಾಡಬೇಕು ಎಂಬ ಬೇಡಿಕೆ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ದಾವಣಗೆರೆಯಲ್ಲಿ ಬಿಜೆಪಿ ರೈತ ಮೋರ್ಚಾ ಬಂದ್‌ಗೆ ಕರೆ ನೀಡಿದೆ. ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ನಗರದ ವಿವಿಧ ವೃತ್ತಗಳಲ್ಲಿ ಪ್ರತಿಭಟನಾಕಾರರು ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಮೇಲ್ಭದ್ರ ಯೋಜನೆಯ ನೀರು ದಾವಣಗೆರೆ ಭಾಗದ ರೈತರ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ನೀರಿನ ಲಭ್ಯತೆ ಕೃಷಿ ಚಟುವಟಿಕೆಗಳ ಮೇಲೆ ನೇರ ಪರಿಣಾಮ ಬೀರುವ ಹಿನ್ನೆಲೆಯಲ್ಲಿ, ನೀರು ಬಿಡುಗಡೆ ವಿಚಾರದಲ್ಲಿ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ರೈತರ ಬೇಡಿಕೆಗೆ ತ್ವರಿತವಾಗಿ ಸ್ಪಂದಿಸಬೇಕು ಎಂಬ ಆಗ್ರಹವೂ ಕೇಳಿಬಂತು.

http://Visit : www.suddidina.com

davangere-bandh-upper-bhadra-water-release-gutka-pan-masala-ban-protest-renukacharya

ಗುಟ್ಕಾ, ಪಾನ್‌ ಮಸಾಲಾ ನಿಷೇಧಕ್ಕೂ ಆಗ್ರಹ

ಬಂದ್‌ನ ಮತ್ತೊಂದು ಪ್ರಮುಖ ಬೇಡಿಕೆ ಗುಟ್ಕಾ ಹಾಗೂ ಪಾನ್‌ ಮಸಾಲಾ ನಿಷೇಧಕ್ಕೆ ಸಂಬಂಧಿಸಿದೆ. ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಇಂತಹ ಉತ್ಪನ್ನಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರೈತ ಮೋರ್ಚಾ ಒತ್ತಾಯಿಸಿದೆ.

ಈ ಎರಡು ಪ್ರಮುಖ ವಿಚಾರಗಳನ್ನು ಮುಂದಿಟ್ಟುಕೊಂಡು ಬಂದ್‌ಗೆ ಬೆಂಬಲ ನೀಡುವಂತೆ ವ್ಯಾಪಾರಸ್ಥರು, ವಿದ್ಯಾರ್ಥಿಗಳು, ಶಾಲಾ-ಕಾಲೇಜು ಆಡಳಿತ ಮಂಡಳಿಗಳು ಹಾಗೂ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನೆಯ ವಾತಾವರಣ ನಿರ್ಮಾಣವಾಗಿದ್ದು, ಬಂದ್‌ಗೆ ಬೆಂಬಲ ಪಡೆಯಲು ಸಂಘಟಕರು ಕರೆ ನೀಡಿದ್ದಾರೆ.

https://x.com/ians_india/status/2094602342230528256

ಟೈರ್‌ಗೆ ಬೆಂಕಿ; ಪೊಲೀಸರ ಮಧ್ಯಪ್ರವೇಶ

ಪ್ರತಿಭಟನೆಯ ವೇಳೆ ನಗರದ ಹಲವು ವೃತ್ತಗಳಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಲಾಯಿತು. ಇದರಿಂದ ಕೆಲಕಾಲ ರಸ್ತೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿ ನಿಯಂತ್ರಣದಲ್ಲಿಡಲು ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದರು.

ಸಾರ್ವಜನಿಕ ಪ್ರತಿಭಟನೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ. ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಪರಿಸ್ಥಿತಿಯನ್ನು ಗಮನಿಸಲಾಗಿದ್ದು, ಸಂಚಾರಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವ ಪ್ರಯತ್ನ ನಡೆದಿದೆ.

ಬಂದ್‌ಗೆ ವ್ಯಾಪಾರಸ್ಥರ ಬೆಂಬಲ?

ಬಂದ್ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ವ್ಯಾಪಾರಸ್ಥರು, ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಗಳು ಸಹಕರಿಸಬೇಕು ಎಂದು ಪ್ರತಿಭಟನಾಕಾರರು ಮನವಿ ಮಾಡಿದ್ದಾರೆ. ಆದರೆ ಬಂದ್‌ಗೆ ವಿವಿಧ ವರ್ಗಗಳಿಂದ ಎಷ್ಟರ ಮಟ್ಟಿಗೆ ಬೆಂಬಲ ದೊರೆಯಲಿದೆ ಎಂಬುದು ದಿನದ ಬೆಳವಣಿಗೆಗಳಿಂದ ಸ್ಪಷ್ಟವಾಗಲಿದೆ.

ಮೇಲ್ಭದ್ರ ನೀರಿನ ವಿಚಾರ ದಾವಣಗೆರೆ ಜಿಲ್ಲೆಯ ರೈತರ ಪಾಲಿಗೆ ದೀರ್ಘಕಾಲದ ಪ್ರಮುಖ ವಿಷಯವಾಗಿದ್ದು, ಇದೀಗ ಈ ಬೇಡಿಕೆ ಮತ್ತೊಮ್ಮೆ ರಾಜಕೀಯ ಹಾಗೂ ಸಾರ್ವಜನಿಕ ಚರ್ಚೆಯ ಕೇಂದ್ರಕ್ಕೆ ಬಂದಿದೆ. ಇದರ ಜತೆಗೆ ಗುಟ್ಕಾ ಮತ್ತು ಪಾನ್‌ ಮಸಾಲಾ ನಿಷೇಧದ ಬೇಡಿಕೆಯನ್ನೂ ಮುನ್ನೆಲೆಗೆ ತರುವ ಮೂಲಕ ಬಿಜೆಪಿ ರೈತ ಮೋರ್ಚಾ ಹೋರಾಟಕ್ಕೆ ವ್ಯಾಪಕ ಸ್ವರೂಪ ನೀಡಲು ಮುಂದಾಗಿದೆ.

ಒಟ್ಟಿನಲ್ಲಿ, ಮೇಲ್ಭದ್ರ ನೀರು ಬಿಡುಗಡೆ ಮತ್ತು ಗುಟ್ಕಾ–ಪಾನ್‌ ಮಸಾಲಾ ನಿಷೇಧ ಎಂಬ ಎರಡು ಪ್ರಮುಖ ಬೇಡಿಕೆಗಳೊಂದಿಗೆ ದಾವಣಗೆರೆಯಲ್ಲಿ ಬಂದ್‌ ಹಾಗೂ ಪ್ರತಿಭಟನೆ ಕಾವು ಪಡೆದಿದ್ದು, ಸರಕಾರದ ಮುಂದಿನ ಪ್ರತಿಕ್ರಿಯೆ ಇದೀಗ ಕುತೂಹಲ ಮೂಡಿಸಿದೆ.

Continue Reading

ದಿನದ ಸುದ್ದಿ

ಕುಂದುಕೊರತೆಗಳಿಗೆ ತ್ವರಿತ ಪರಿಹಾರ ನೀಡಲು ಏಕೀಕೃತ ವ್ಯವಸ್ಥೆ; ಶನಿವಾರ ಜನಸಂಪರ್ಕ, ಬುಧವಾರ ಮೂರು ಹಂತದ ಪರಿಶೀಲನೆ

Published

on

Prajaseva Abhiyana: ಇನ್ಮುಂದೆ ಕಚೇರಿಗೆ ಅಲೆದಾಟ ಬೇಡ; ಜನರ ಮನೆ ಬಾಗಿಲಿಗೇ ಸರ್ಕಾರ, ಸೆ.5ರಿಂದ ‘ಪ್ರಜಾಸೇವಾ’ಗೆ ಚಾಲನೆ!

ಬೆಂಗಳೂರು: ಸರ್ಕಾರಿ ಸೇವೆ ಪಡೆಯಲು ಕಚೇರಿಯಿಂದ ಕಚೇರಿಗೆ ಅಲೆಯಬೇಕಾದ ದಿನಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕರ್ನಾಟಕ ಸರ್ಕಾರ ‘ಪ್ರಜಾಸೇವಾ ಅಭಿಯಾನ’ಕ್ಕೆ ಚಾಲನೆ ನೀಡಲು ಸಜ್ಜಾಗಿದೆ. ಸೆಪ್ಟೆಂಬರ್ 5ರಂದು ವಿಜಯನಗರ ಜಿಲ್ಲೆಯ ಕೂಡ್ಲಿಗಿ ಹೋಬಳಿಯಿಂದ ಅಭಿಯಾನ ಆರಂಭವಾಗಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲೇ ಅಥವಾ ನಿಗದಿತ ಕಾಲಮಿತಿಯಲ್ಲಿ ಪರಿಹರಿಸುವ ವ್ಯವಸ್ಥೆ ರೂಪಿಸಲಾಗಿದೆ.

ಇದುವರೆಗೆ ವಿವಿಧ ಇಲಾಖೆ, ಯೋಜನೆ ಅಥವಾ ಸರ್ಕಾರಿ ಸೇವೆಗಳಿಗೆ ಸಂಬಂಧಿಸಿದ ಸಮಸ್ಯೆ ಎದುರಾದಾಗ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಸಂಪರ್ಕಿಸಲು ಜನರು ಹಲವು ಬಾರಿ ಕಚೇರಿಗಳಿಗೆ ತೆರಳಬೇಕಾಗುತ್ತಿತ್ತು. ಇದೀಗ ಈ ಅಲೆದಾಟ ಕಡಿಮೆ ಮಾಡಿ ಜನರ ಮನೆ ಬಾಗಿಲಿಗೆ ಆಡಳಿತವನ್ನು ಕೊಂಡೊಯ್ಯುವುದು ಪ್ರಜಾಸೇವೆಯ ಪ್ರಮುಖ ಉದ್ದೇಶವಾಗಿದೆ.

ಹೈಲೈಟ್ಸ್: ಸೆ.5ರಿಂದ ಹೊಸ ಆಡಳಿತ ವ್ಯವಸ್ಥೆಗೆ ಚಾಲನೆ

  • ಸೆಪ್ಟೆಂಬರ್ 5ರಿಂದ ಕೂಡ್ಲಿಗಿಯಲ್ಲಿ ಪ್ರಜಾಸೇವಾ ಅಭಿಯಾನಕ್ಕೆ ಚಾಲನೆ
  • ಪ್ರತಿ ಶನಿವಾರ ತಾಲ್ಲೂಕು/ಹೋಬಳಿ ಮಟ್ಟದಲ್ಲಿ ಜನಸಂಪರ್ಕ ಸಭೆ
  • ಬುಧವಾರ ತಾಲ್ಲೂಕು, ಉಪವಿಭಾಗ ಮತ್ತು ಜಿಲ್ಲಾ ಮಟ್ಟದಲ್ಲಿ ಮೂರು ಹಂತದ ಪರಿಶೀಲನೆ
  • ಗ್ರಾಮ ಒನ್ ಕೇಂದ್ರ ಹಾಗೂ ಸಭಾ ಸ್ಥಳದಲ್ಲೇ ಆನ್‌ಲೈನ್ ಅರ್ಜಿ ಸಲ್ಲಿಕೆ ವ್ಯವಸ್ಥೆ
  • 1902 ಸಹಾಯವಾಣಿ ಮತ್ತು IPGRS ಮೂಲಕ ಕುಂದುಕೊರತೆ ದಾಖಲಿಸುವ ಅವಕಾಶ

http://Visit : www.suddidina.com

ಪ್ರತಿ ಶನಿವಾರ ಜನರೊಂದಿಗೆ ನೇರ ಸಂಪರ್ಕ

ಪ್ರತಿ ಶನಿವಾರ ತಾಲ್ಲೂಕು ಅಥವಾ ಹೋಬಳಿ ಮಟ್ಟದಲ್ಲಿ ಪ್ರಜಾಸೇವಾ ಸಭೆಗಳನ್ನು ಪರ್ಯಾಯವಾಗಿ ನಡೆಸಲು ನಿರ್ಧರಿಸಲಾಗಿದೆ. ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಕೇಂದ್ರದಲ್ಲಿ ಸಭೆ ನಡೆಯಲಿದೆ. ಎರಡನೇ ಮತ್ತು ನಾಲ್ಕನೇ ಶನಿವಾರ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಅಥವಾ ಹೋಬಳಿ ಮಟ್ಟದಲ್ಲಿ ಸಭೆ ಆಯೋಜಿಸಲಾಗುತ್ತದೆ.

ಸಭೆಗಳ ಕುರಿತು ಸಾರ್ವಜನಿಕರಿಗೆ ಕನಿಷ್ಠ 15 ದಿನಗಳ ಮುಂಚಿತವಾಗಿ ಮಾಹಿತಿ ನೀಡಲಾಗುತ್ತದೆ. ಮನೆ-ಮನೆಗೆ ಕರಪತ್ರ ವಿತರಿಸುವುದರ ಜತೆಗೆ AI ಆಧಾರಿತ ಕಾಲ್ ಸೆಂಟರ್ ಮೂಲಕ ಸಭೆಯ ದಿನಾಂಕ, ಸ್ಥಳ ಹಾಗೂ ಸಮಯದ ಕುರಿತು ಮಾಹಿತಿ ನೀಡಲಾಗುತ್ತದೆ.

ಗ್ರಾಮ ಒನ್‌ನಲ್ಲೇ ಅರ್ಜಿ ಸಲ್ಲಿಕೆ

ಜನರು ತಮ್ಮ ಅರ್ಜಿ ಹಾಗೂ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮ ಒನ್ ಕೇಂದ್ರದಲ್ಲಿ ಸಲ್ಲಿಸಬಹುದು. ಸಭಾ ಸ್ಥಳದಲ್ಲಿಯೂ ಗ್ರಾಮ ಒನ್ ಮಳಿಗೆ ಸ್ಥಾಪಿಸಿ ಕಂಪ್ಯೂಟರ್, ಪ್ರಿಂಟರ್ ಮತ್ತು ಇಂಟರ್ನೆಟ್ ಸೌಲಭ್ಯ ಕಲ್ಪಿಸಲಾಗುತ್ತದೆ.

ಈ ಸಭೆಗಳಲ್ಲಿ ಹೊಸ ಅಹವಾಲುಗಳು ಮತ್ತು ಈಗಾಗಲೇ ದೂರು ದಾಖಲಿಸಿದ್ದರೂ ಪರಿಹಾರವಾಗದ ಅಹವಾಲುಗಳಿಗೆ ಪ್ರತ್ಯೇಕ ವ್ಯವಸ್ಥೆ ಇರಲಿದೆ. 21 ದಿನಗಳ ಬಳಿಕವೂ ಸಮರ್ಪಕ ಪರಿಹಾರ ಸಿಗದ ಪ್ರಕರಣಗಳನ್ನೂ ಆದ್ಯತೆಯಿಂದ ಪರಿಗಣಿಸಲಾಗುತ್ತದೆ.

ಬುಧವಾರ ಮೂರು ಹಂತದ ಪರಿಶೀಲನೆ

ಪ್ರಜಾಸೇವಾ ಸಭೆಗಳಲ್ಲಿ ಸ್ವೀಕರಿಸಿದ ಅರ್ಜಿ ಮತ್ತು ಅಹವಾಲುಗಳ ಮೇಲೆ ಪ್ರತಿ ಬುಧವಾರ ಮೂರು ಹಂತದ ಪರಿಶೀಲನೆ ನಡೆಯಲಿದೆ. ಬೆಳಗ್ಗೆ 9ರಿಂದ 11ರವರೆಗೆ ತಾಲ್ಲೂಕು ಮಟ್ಟದಲ್ಲಿ, 11ರಿಂದ ಮಧ್ಯಾಹ್ನ 1ರವರೆಗೆ ಉಪವಿಭಾಗ ಮಟ್ಟದಲ್ಲಿ ಹಾಗೂ ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ಜಿಲ್ಲಾ ಮಟ್ಟದಲ್ಲಿ ಪರಿಶೀಲನೆ ನಡೆಯಲಿದೆ.

ತಾಲ್ಲೂಕಿನಲ್ಲಿ ಬಗೆಹರಿಯದ ಸಮಸ್ಯೆಗಳು ಉಪವಿಭಾಗಾಧಿಕಾರಿಗೆ, ಅಲ್ಲಿಂದ ಜಿಲ್ಲಾಧಿಕಾರಿಗೆ ಮೇಲ್ದರ್ಜೆಗೆ ವರ್ಗಾವಣೆಯಾಗಲಿವೆ. ನಿಗದಿತ ಅವಧಿಯಲ್ಲಿ ಪರಿಹಾರವಾಗದ ಪ್ರಕರಣಗಳು ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರ ಮಟ್ಟಕ್ಕೂ ಸ್ವಯಂಚಾಲಿತವಾಗಿ ಎಸ್ಕಲೇಷನ್ ಆಗುವ ವ್ಯವಸ್ಥೆ ಇರಲಿದೆ.

ಸ್ಥಳದಲ್ಲೇ ಮಂಜೂರಾತಿ, ಆನ್‌ಲೈನ್‌ನಲ್ಲಿ ಸ್ಥಿತಿ

ಅರ್ಹ ಫಲಾನುಭವಿಗಳಿಗೆ ಕೆಲವು ಯೋಜನೆಗಳ ಮಂಜೂರಾತಿ ಪತ್ರವನ್ನು ಸ್ಥಳದಲ್ಲೇ ನೀಡಲು ಅವಕಾಶವಿದೆ. ಅರ್ಜಿ ಅಥವಾ ದೂರು ಯಾವ ಹಂತದಲ್ಲಿದೆ ಎಂಬುದನ್ನು ಸಾರ್ವಜನಿಕರು ನೈಜ-ಸಮಯದ ಸ್ಥಿತಿ ಪರಿಶೀಲನಾ ವ್ಯವಸ್ಥೆಯ ಮೂಲಕ ತಿಳಿದುಕೊಳ್ಳಬಹುದು.

ಇದಲ್ಲದೆ, ಪ್ರತಿ ಸಭೆಯ ಸಂಪೂರ್ಣ ವಿವರ, ಛಾಯಾಚಿತ್ರ, ವೀಡಿಯೋ ಹಾಗೂ ಫಲಾನುಭವಿಗಳ ಅಭಿಪ್ರಾಯಗಳನ್ನು ಪೋರ್ಟಲ್‌ನಲ್ಲಿ ದಾಖಲಿಸಲಾಗುತ್ತದೆ. ಸಾರ್ವಜನಿಕರು 1902 ಸಹಾಯವಾಣಿ ಅಥವಾ ಅಧಿಕೃತ IPGRS ಪೋರ್ಟಲ್ ಮೂಲಕವೂ ಕುಂದುಕೊರತೆ ದಾಖಲಿಸಬಹುದು.

ಆಡಳಿತಕ್ಕೆ ಹೊಣೆಗಾರಿಕೆ, ಜನರಿಗೆ ಉತ್ತರ

ಪ್ರಜಾಸೇವಾ ಅಭಿಯಾನದ ಯಶಸ್ಸು ಕೇವಲ ಸಭೆ ನಡೆಸುವುದರಲ್ಲಿ ಇಲ್ಲ; ದೂರು ಸ್ವೀಕರಿಸಿ, ಕಾಲಮಿತಿಯಲ್ಲಿ ಪರಿಹರಿಸಿ, ಅದರ ಹೊಣೆಗಾರಿಕೆಯನ್ನು ನಿಗದಿಪಡಿಸುವುದರಲ್ಲಿ ಇದೆ. ಜಿಲ್ಲಾಉಸ್ತುವಾರಿ ಕಾರ್ಯದರ್ಶಿಗಳು, ಅಧಿಕಾರಿಗಳು, ಸಚಿವರು ಹಾಗೂ ಜನಪ್ರತಿನಿಧಿಗಳ ನಿರಂತರ ಮೇಲ್ವಿಚಾರಣೆಯ ಮೂಲಕ ಬಾಕಿ ಪ್ರಕರಣಗಳ ವಿಲೇವಾರಿಗೆ ಒತ್ತು ನೀಡಲಾಗಿದೆ. ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ, ಪಾರದರ್ಶಕತೆ ಮತ್ತು ಉತ್ತರದಾಯಿತ್ವ ಹೆಚ್ಚಿಸುವ ಈ ವ್ಯವಸ್ಥೆ ಆಡಳಿತದ ಹೊಸ ಮಾದರಿಯಾಗುವ ನಿರೀಕ್ಷೆ ಮೂಡಿಸಿದೆ.

Continue Reading

ದಿನದ ಸುದ್ದಿ

ಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್‌-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!

Published

on

kalaburagi-municipal-corporation-mayor-deputy-mayor-election-congress-win
ಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್‌-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!

ಸುದ್ದಿದಿನ,ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೇಲುಗೈ ಸಾಧಿಸಿದೆ. ತೀವ್ರ ಕುತೂಹಲ ಕೆರಳಿಸಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು 35 ಮತಗಳನ್ನು ಪಡೆಯುವ ಮೂಲಕ ಜಯಗಳಿಸಿದ್ದು, ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ಮತ್ತೊಮ್ಮೆ ತನ್ನದಾಗಿಸಿಕೊಂಡಿದ್ದಾರೆ. ಬಿಜೆಪಿಯ ಅಭ್ಯರ್ಥಿಗಳು 29 ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದ್ದಾರೆ.

ಈ ಫಲಿತಾಂಶದೊಂದಿಗೆ ಕಲಬುರಗಿ ಮಹಾನಗರ ಪಾಲಿಕೆಯ ರಾಜಕೀಯದಲ್ಲಿ ಕಾಂಗ್ರೆಸ್ ತನ್ನ ಪ್ರಾಬಲ್ಯವನ್ನು ಮುಂದುವರಿಸಿದೆ. ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣಗೊಂಡಿದೆ.

ಮೇಯರ್ ಸ್ಥಾನಕ್ಕೆ ಅಜಿಲ್ ಅಹಮದ್ ಗೋಲಾ

ಈ ಚುನಾವಣೆಯಲ್ಲಿ 21ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯ ಅಜಿಲ್ ಅಹಮದ್ ಗೋಲಾ ಅವರು ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಮತದಾನದ ಬಳಿಕ ಕಾಂಗ್ರೆಸ್ ಅಭ್ಯರ್ಥಿಗೆ ಬಹುಮತ ದೊರೆತಿದ್ದು, ಅವರು ಮೇಯರ್ ಸ್ಥಾನವನ್ನು ಅಲಂಕರಿಸಿದ್ದಾರೆ.

ಪಾಲಿಕೆಯ ಮುಂದಿನ ಆಡಳಿತದಲ್ಲಿ ಮೇಯರ್ ಸ್ಥಾನ ಪ್ರಮುಖವಾಗಿರುವ ಹಿನ್ನೆಲೆಯಲ್ಲಿ ಅಜಿಲ್ ಅಹಮದ್ ಗೋಲಾ ಅವರ ಆಯ್ಕೆ ಇದೀಗ ಗಮನ ಸೆಳೆದಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ 35 ಮತಗಳು ದೊರೆತಿರುವುದು ಚುನಾವಣೆಯಲ್ಲಿ ಪಕ್ಷದ ಬಲವನ್ನು ತೋರಿಸಿದೆ.

ಉಪ ಮೇಯರ್ ಸ್ಥಾನವೂ ಕಾಂಗ್ರೆಸ್ ಪಾಲು

20ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯೆ ಫಹಾನಾ ಖಮ್ರೋ ಜಗೀರ್ದಾರ್ ಅವರು ಉಪ ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ದೊರೆತ ಬಹುಮತದ ಹಿನ್ನೆಲೆಯಲ್ಲಿ ಫಹಾನಾ ಖಮ್ರೋ ಜಗೀರ್ದಾರ್ ಅವರು ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಮೇಯರ್ ಹಾಗೂ ಉಪ ಮೇಯರ್ ಎರಡೂ ಸ್ಥಾನಗಳು ಕಾಂಗ್ರೆಸ್ ಪಾಲಾಗಿರುವುದರಿಂದ ಪಾಲಿಕೆಯ ಆಡಳಿತದ ಮೇಲೆ ಪಕ್ಷದ ಹಿಡಿತ ಮತ್ತಷ್ಟು ಬಲಗೊಂಡಿದೆ.

ಆಗಸ್ಟ್ 7ರಿಂದ ಆಗಸ್ಟ್ 29ಕ್ಕೆ ಮುಂದೂಡಿಕೆ

ಆರಂಭದಲ್ಲಿ ಈ ಚುನಾವಣೆ ಆಗಸ್ಟ್ 7ರಂದು ನಡೆಯಬೇಕಿತ್ತು. ಆದರೆ ಕೆಲವು ಅನಿವಾರ್ಯ ಕಾರಣಗಳಿಂದ ಚುನಾವಣೆ ಮುಂದೂಡಲ್ಪಟ್ಟಿತ್ತು. ಬಳಿಕ ಪ್ರಾದೇಶಿಕ ಆಯುಕ್ತರ ಆದೇಶದ ನಂತರ ಪರಿಷ್ಕೃತ ದಿನಾಂಕ ನಿಗದಿಪಡಿಸಿ ಆಗಸ್ಟ್ 29ರಂದು ಚುನಾವಣೆ ನಡೆಸಲಾಯಿತು.

ಅದರಂತೆ ಶನಿವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳನ್ನು ಗೆದ್ದುಕೊಂಡಿದ್ದಾರೆ. ಒಟ್ಟು ಮತಗಳ ಲೆಕ್ಕಾಚಾರದಲ್ಲಿ ಕಾಂಗ್ರೆಸ್ 35 ಮತಗಳನ್ನು ಪಡೆದರೆ, ಬಿಜೆಪಿ 29 ಮತಗಳಿಗೆ ಸೀಮಿತವಾಯಿತು.

ಈ ಮೂಲಕ ಕಲಬುರಗಿ ಮಹಾನಗರ ಪಾಲಿಕೆಯ 24ನೇ ಅವಧಿಯ ಆಡಳಿತದ ಚುಕ್ಕಾಣಿ ಮತ್ತೊಮ್ಮೆ ಕಾಂಗ್ರೆಸ್ ಕೈಗೆ ಬಂದಂತಾಗಿದೆ. ಮುಂದಿನ ದಿನಗಳಲ್ಲಿ ಪಾಲಿಕೆಯ ಅಭಿವೃದ್ಧಿ ಹಾಗೂ ಆಡಳಿತಾತ್ಮಕ ವಿಚಾರಗಳಲ್ಲಿ ಹೊಸ ಮೇಯರ್ ಮತ್ತು ಉಪ ಮೇಯರ್ ಅವರ ಕಾರ್ಯವೈಖರಿ ಹೇಗಿರಲಿದೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.

Continue Reading

Trending