ನಿತ್ಯ ಭವಿಷ್ಯ
ನಿಮ್ಮ ಮನಸ್ಸಿನಲ್ಲಿ ಇರುವ ಸಾವಿರ ಸಮಸ್ಯೆಗಳಿಗೆ ಒಂದೇ ಪರಿಹಾರ : ದಿನದ ಭವಿಷ್ಯ ಓದಿ, ಕರೆ ಮಾಡಿ | ಗುರುವಾರ 14-11-2019
ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರ ಪಂಡಿತ ಗುರು ದೀಕ್ಷಿತ್ ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಇಲ್ಲಿದೆ ಒಂದು ದಿವ್ಯ ಮಂದಿರ9036933032
ಮೇಷ ರಾಶಿ
ಕುಟುಂಬದಿಂದ ಸಂತೋಷದ ಕ್ಷಣಗಳನ್ನು ಅನುಭವಿಸುವಿರಿ. ಮಕ್ಕಳಿಂದ ಕೊಂಚ ನೆಮ್ಮದಿ ಸಿಗಲಿದೆ. ಕುಟುಂಬ ಸಮೇತ ದೂರದ ಪ್ರಯಾಣ ಮಾಡುವಿರಿ. ಕುಟುಂಬದಲ್ಲಿ ವಿವಾಹ ಕಾರ್ಯ ಮಾಡುವ ವಿಚಾರ ಮಾಡಲಿದ್ದೀರಿ. ಹೊಸ ವಾಹನ ಖರೀದಿ, ವಿಚಾರ ಮಾಡುವಿರಿ. ಸುವರ್ಣ ಖರೀದಿ ಮಾಡುವ ವಿಚಾರ ಮಾಡುವಿರಿ. ಪಿತ್ರಾರ್ಜಿತ ಆಸ್ತಿಯಲ್ಲಿ ಮನಸ್ತಾಪ ವಾಗಲಿದೆ.
ಅದೃಷ್ಟ ಸಂಖ್ಯೆ 5
ಪಂಡಿತ್ ಗುರು ದೀಕ್ಷಿತ್
9036933032
ವೃಷಭ ರಾಶಿ
ಪತಿ-ಪತ್ನಿ ನಡುವೆ ಮನಸ್ತಾಪ ವಾಗಲಿದೆ. ಸಂಬಂಧಿಕರ ಕಡೆಯಿಂದ ಬೇಸರ ಸಂಗತಿಗಳು ಗಮನಕ್ಕೆ ಬರಲಿದೆ. ದೂರದ ಪ್ರಯಾಣ ಬೇಡ. ವಿರೋಧಿಗಳು ನಿಮ್ಮ ಬಗ್ಗೆ ಒಳಸಂಚು ಮಾಡಲಿದ್ದಾರೆ ಜಾಗೃತಿವಹಿಸಿ. ಗೆಳೆಯರ ಕಡೆಯಿಂದ ಮನಸ್ತಾಪ ವಾಗಲಿದೆ. ಪ್ರೀತಿ-ಪ್ರೇಮ-ಪ್ರಣಯ ವಿಚಾರದಲ್ಲಿ ವಿರಸ ಕಾಡಲಿದೆ. ಯಾರೋ ಮಾಡಿರುವಂತ ಅಪವಾದಕ್ಕೆ ಗುರಿಯಾಗುವ ಸಾಧ್ಯತೆ ಇದೆ. ನಿಮ್ಮ ಮಾತಿಗೆ ಯಾರು, ಮಾನ್ಯತೆ ನೀಡುವುದಿಲ್ಲ.
ಅದೃಷ್ಟ ಸಂಖ್ಯೆ 4
ಪಂಡಿತ್ ಗುರು ದೀಕ್ಷಿತ್
9036933032
ಮಿಥುನ ರಾಶಿ
ಸಹೋದರ, ಸಹೋದರಿಯರ ಕಡೆಯಿಂದ, ಮನಸ್ತಾಪ ಸೃಷ್ಟಿಯಾಗಲಿದೆ. ಆಸ್ತಿ ವಿಚಾರದಲ್ಲಿ, ಎಲ್ಲರಿಗೂ ವೈರಾಗ್ಯ ಸೃಷ್ಟಿಯಾಗಲಿದೆ. ವಿರೋಧಿಗಳು ನಿಮ್ಮ ಬಗ್ಗೆ ಒಳಸಂಚು ಮಾಡುವರು ಜಾಗ್ರತೆವಹಿಸಿ. ದೂರದ ಪ್ರಯಾಣ ಬೇಡ. ಪತ್ನಿಯ ಸಹಾಯದಿಂದ ಹಣಕಾಸಿನ ಸಮಸ್ಯೆ ಪರಿಹಾರವಾಗಲಿದೆ. ಸಂಬಂಧಿಕರ ಕಡೆಯಿಂದ, ವಿರೋಧಗಳು ಸೃಷ್ಟಿಯಾಗಲಿವೆ. ದಾನ, ಧರ್ಮ, ದೇವರ ಕಾರ್ಯಕ್ಕೆ ದಾನ ಕೊಡುವಿರಿ. ಪ್ರೀತಿ-ಪ್ರೇಮ ವಿಚಾರದಲ್ಲಿ ಮನಸ್ತಾಪ ವಾಗಲಿದೆ.
ಅದೃಷ್ಟ ಸಂಖ್ಯೆ 6
ಪಂಡಿತ್ ಗುರು ದೀಕ್ಷಿತ್
9036933032
ಕರ್ಕಟಕ ರಾಶಿ
ಕುಟುಂಬದಲ್ಲಿ ಶುಭಕಾರ್ಯಗಳ ಬಗ್ಗೆ ವಿಚಾರ ಮಾಡುವಿರಿ. ನಿವೇಶನ ಖರೀದಿ ಬಗ್ಗೆ ವಿಚಾರ ಬರುತ್ತದೆ. ಗೃಹ ಕಟ್ಟಡದ ಬಗ್ಗೆ ವಿಚಾರ ಮಾಡಲಿದ್ದೀರಿ. ಆಸ್ತಿ ವಿಚಾರದಲ್ಲಿ ಬೇಸರ ಸೃಷ್ಟಿಯಾಗಲಿದೆ. ವಾಹನ ಖರೀದಿ ಮಾಡುವಿರಿ. ಯಾರೋ ಮಾಡಿರುವಂತಹ ಅಪವಾದ ನಿಮ್ಮ ಮೇಲೆ ಬರುವುದು ಜಾಗ್ರತೆವಹಿಸಿ. ಹಣಕಾಸಿನ ಸಮಸ್ಯೆ ಎದುರಿಸುವಿರಿ. ಸಾಲದಿಂದ ಮುಕ್ತಿ ಆಗಲು ಹರಸಾಹಸ ಪಡುವಿರಿ.
ಅದೃಷ್ಟ ಸಂಖ್ಯೆ 2
ಪಂಡಿತ್ ಗುರು ದೀಕ್ಷಿತ್
9036933032
ಸಿಂಹರಾಶಿ
ಈ ದಿನ ಅಡತಡೆಗಳು ತುಂಬಾ ಬರುವುದು ಜಾಗ್ರತೆವಹಿಸಿ. ಕುಟುಂಬದ ಸದಸ್ಯರ ಕಡೆಯಿಂದ ಬೇಸರದ ಸಂಗತಿಗಳು ಕಣ್ಣಿಗೆ ಗೋಚರಿಸಲಿವೆ. ಗೆಳೆಯರ ಕಡೆಯಿಂದ ಬೇಸರ. ಕುಟುಂಬ ಸದಸ್ಯರ, ಕಡೆಯಿಂದ ಮನಸ್ತಾಪ. ಬಾಳ ಸಂಗಾತಿಯಿಂದ ಮನಸ್ತಾಪ. ಜಾಗ್ರತೆಯಿಂದ ವಾಹನ ಚಲಾಯಿಸಿ. ಹಣಕಾಸಿನಲ್ಲಿ ಏರುಪೇರು. ವ್ಯಾಪಾರದಲ್ಲಿ ನಷ್ಟ. ಉದ್ಯಮ ದಾರಿಗೆ ನಷ್ಟವಾಗಲಿದೆ.
ಅದೃಷ್ಟ ಸಂಖ್ಯೆ 9
ಪಂಡಿತ್ ಗುರು ದೀಕ್ಷಿತ್
9036933032
ಕನ್ಯಾ ರಾಶಿ
ಹೊಸ ಉದ್ಯಮ ಪ್ರಾರಂಭಿಸುವ ಬಗ್ಗೆ ಚಿಂತೆ ಮಾಡಬೇಡಿ. ಆಸ್ತಿ ಖರೀದಿಸುವ ಬಗ್ಗೆ ವಿಚಾರ ಮಾಡಿ ಸಂಬಂಧಿಸಿದ ಕಾನೂನು ಸಲಹೆ ಪಡೆದು ಮುಂದುವರಿಯಿರಿ. ಪತಿ-ಪತ್ನಿಯಲ್ಲಿ ವಿರಸ ಸೃಷ್ಟಿಯಾಗಲಿದೆ ತಾವು ತಾಳ್ಮೆಯಿಂದ ಇರುವುದು ಒಳಿತು. ಹೊಸ ಉದ್ಯಮ, ಹೋಟೆಲು ಬಿಸಿನೆಸ್, ಬಟ್ಟೆ ವ್ಯಾಪಾರ, ದಿನಸಿ ವ್ಯಾಪಾರ, ಸೂಕ್ತ ಸಮಯವಲ್ಲ. ಗೃಹ ಕಟ್ಟಡ ವಿಚಾರ ಮಾಡುವಿರಿ. ತಮಗೆ ಹಣಕಾಸಿನ ನೆರವು ಸಿಗಲಿದೆ. ಸಹೋದರ ಕಡೆಯಿಂದ, ಗೆಳೆಯರೆ ಕಡೆಯಿಂದ , ಸಹಾಯವಾಗಲಿದೆ. ಆತುರ ಬೇಡ ಸಮಾಧಾನ ಒಳಿತು.
ಅದೃಷ್ಟ ಸಂಖ್ಯೆ 7
ಪಂಡಿತ್ ಗುರು ದೀಕ್ಷಿತ್
9036933032
ತುಲಾ ರಾಶಿ
ಕುಟುಂಬದಿಂದ ಕೊಂಚ ನೆಮ್ಮದಿ ಸಿಗಲಿದೆ. ಪ್ರೇಯಸಿದಿಂದ ವಿರಸ. ವ್ಯವಹಾರದಲ್ಲಿ ಕೊಂಚ ನೆಮ್ಮದಿ ಸಿಗಲಿದೆ. ಪಿತ್ರಾರ್ಜಿತ ಆಸ್ತಿ ಕೈ ಸೇರುವ ಸಾಧ್ಯತೆ ಇದೆ. ಮಕ್ಕಳಿಂದ ಸಂತೋಷವನ್ನು, ಹಂಚಿಕೊಳ್ಳುವ ಸಾಧ್ಯತೆ ಇದೆ. ವಿದೇಶ ಪ್ರಯಾಣ ಕನಸು ನನಸಾಗಲಿದೆ. ಸಹೋದರ ಸಹೋದರಿಯರ ಕಡೆಯಿಂದ, ಉತ್ತಮ ಬೆಂಬಲ ಸಿಗಲಿದೆ. ಸಮಾಜದಲ್ಲಿ ರಾಜಮನ್ನಣೆ ಸಿಗಲಿದೆ. ಬಹುದಿನದ ಆಸೆ, ಈಡೇರಿಲಿದೆ.
ಅದೃಷ್ಟ ಸಂಖ್ಯೆ 6
ಪಂಡಿತ್ ಗುರು ದೀಕ್ಷಿತ್
9036933032
ವೃಶ್ಚಿಕ ರಾಶಿ
ಉದ್ಯಮದಲ್ಲಿ ಪ್ರಗತಿ ಕಾಣಲಿದೆ. ಹೊಸ ಉದ್ಯಮ ಆರಂಭಿಸುವ ಯೋಚನೆ ಮಾಡುವಿರಿ. ಆಸ್ತಿ ವಿಚಾರದಲ್ಲಿ ಕೊಂಚ ನೆಮ್ಮದಿ ಸಿಗಲಿದೆ. ಎಲ್ಲರ ಒಮ್ಮತ ಅಭಿಪ್ರಾಯ ವ್ಯಕ್ತಪಡಿಸಲಿದ್ದಾರೆ. ಹಣಕಾಸಿನ ಅಡಚಣೆಯಿಂದ ನಿರಾಳರಾಗುವಿರಿ. ತೀರ್ಥಯಾತ್ರೆ ಕೈಗೊಳ್ಳುವ ಸಾಧ್ಯತೆ ಇದೆ. ಗೃಹ ಕಟ್ಟಡ ಯೋಚನೆ ಮಾಡಲಿದ್ದೀರಿ. ಬೆಲೆಬಾಳುವ ಆಭರಣಗಳು ಖರೀದಿ ಮಾಡಲಿದ್ದೀರಿ. ದೂರದಿಂದ ಸ್ನೇಹಿತರ ಆಗಮನ ಸಾಧ್ಯತೆ.
ಅದೃಷ್ಟ ಸಂಖ್ಯೆ 3
ಪಂಡಿತ್ ಗುರು ದೀಕ್ಷಿತ್
9036933032
ಧನಸು ರಾಶಿ
ಮಕ್ಕಳ ಭವಿಷ್ಯಕ್ಕಾಗಿ ಚಿಂತಿಸುವ ದಿನವಾಗಿದೆ. ಮಕ್ಕಳಿಂದ ಮನಸ್ತಾಪವಾಗುವ ಸಾಧ್ಯತೆ ಇದೆ. ಹಣಕಾಸಿನಲ್ಲಿ, ಏರುಪೇರು
ಆಗುವ ಸಾಧ್ಯತೆ ಇದೆ. ವಾಹನ ಖರೀದಿ ಮುಂದೂಡುವುದು ಒಳಿತು. ಹೊಸ ವ್ಯವಹಾರಕ್ಕೆ ಕೈ ಹಾಕಬೇಡಿ. ಪಾಲುದಾರಿಕೆ ವ್ಯವಹಾರ ಮಾಡಬೇಡಿ. ಜಾಮೀನು ನಿರಾಕರಣೆ ಮಾಡಿರಿ. ಲೇವಾದೇವಿಯಲ್ಲಿ ಜಾಗೃತೆ ವಹಿಸಿ.
ಅದೃಷ್ಟ ಸಂಖ್ಯೆ 9
ಪಂಡಿತ್ ಗುರು ದೀಕ್ಷಿತ್
9036933032
ಮಕರ ರಾಶಿ
ವ್ಯವಹಾರಗಳಲ್ಲಿ ಆದಷ್ಟು ಜಾಗ್ರತೆ ಇರಲಿ. ಮೋಸದ ವ್ಯಾಪಾರಗಳಿಂದ ದೂರವಿರುವುದು ಸೂಕ್ತ. ಕ್ರೀಡೆಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ. ಕುಟುಂಬದಲ್ಲಿ ನಡೆಯುವ ವಿದ್ಯಮಾನಗಳು ಮಾನಸಿಕ ಕ್ಲೇಶ ತರಬಹುದು. ಸಂಗಾತಿಯೊಡನೆ ಮಾತನಾಡಿಕೊಂಡು ಸಮಸ್ಯೆಗಳನ್ನು ಬಗೆಹರಿಸಿ.
ಅದೃಷ್ಟ ಸಂಖ್ಯೆ 2
ಪಂಡಿತ್ ಗುರು ದೀಕ್ಷಿತ್
9036933032
ಕುಂಭ ರಾಶಿ
ಕೆಲಸದಲ್ಲಿ ವಿಳಂಬ ಆವರಿಸಬಹುದು. ಅಧಿಕಾರಿಗಳಿಂದ ನಿಮ್ಮ ವಿರುದ್ಧ ಆಪಾದನೆಗಳು ಬರುವ ಸಾಧ್ಯತೆ ಇದೆ. ನೆರೆಹೊರೆಯವರ ಜೊತೆ ಉತ್ತಮ ಬಾಂಧವ್ಯ ರೂಡಿಸಿಕೊಳ್ಳಿ. ಆರ್ಥಿಕ ಬೆಳವಣಿಗೆಗೆ ಸೂಕ್ತ ದಾರಿ ಹುಡುಕುವುದು ಒಳಿತು.
ಅದೃಷ್ಟ ಸಂಖ್ಯೆ 4
ಪಂಡಿತ್ ಗುರು ದೀಕ್ಷಿತ್
9036933032
ಮೀನ ರಾಶಿ
ಗೆಲುವಿನ ಲೆಕ್ಕಾಚಾರ ನಿಖರವಾಗಿದೆ. ಸಂಗಾತಿಯೊಡನೆ ಪ್ರವಾಸದ ಚಿಂತನೆ ಮಾಡುವಿರಿ. ಅನುಕೂಲಕರ ವಾತಾವರಣ ನಿಮ್ಮ ಯೋಜನೆಗಳಿಗೆ ಸಿಗಲಿದೆ. ಇನ್ನೊಬ್ಬರೊಡನೆ ತುಲನೆ ಮಾಡಿಕೊಳ್ಳುವುದು ಸರಿ ಕಾಣುವುದಿಲ್ಲ. ಮಕ್ಕಳು ನಿಮ್ಮ ಕೆಲಸಗಳಿಗೆ ಬೆಂಬಲವಾಗಿ ನಿಲ್ಲಲಿದ್ದಾರೆ.
ಅದೃಷ್ಟ ಸಂಖ್ಯೆ 5
ಪಂಡಿತ್ ಗುರು ದೀಕ್ಷಿತ್
9903693303
ಗುರು ದೀಕ್ಷಿತ್ ಜ್ಯೋತಿಷ್ಯ ಪಂಡಿತರು, ವಾಸ್ತು ಶಾಸ್ತ್ರ ಸಲಹೆಗಾರರು, ಹಾಗೂ ಸಂಖ್ಯಾಶಾಸ್ತ್ರ ಸಲಹೆಗಾರರು ಸಂಪರ್ಕಿಸುವ ಮೊಬೈಲ್ ಸಂಖ್ಯೆ- 9036933032
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ3 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ4 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ5 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ


