ದಿನದ ಸುದ್ದಿ
ದಾವಣಗೆರೆ | ಜನಸ್ಪಂದನ ಸಭೆಗೆ ಅರ್ಜಿಗಳ ಮಹಾಪೂರ
ಸುದ್ದಿದಿನ,ದಾವಣಗೆರೆ : ಸಾರ್ವಜನಿಕರು ದೂರು ಮತ್ತು ಅಹವಾಲುಗಳನ್ನು ನೀಡುವುದು ಕರ್ತವ್ಯ. ಅದರಂತೆ ಚುನಾವಣೆಗಳಲ್ಲಿ ಮತದಾನ ಮಾಡಬೇಕಿರುವುದು ನಾಗರಿಕರಾದ ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯವೆಂದು ದೂರುನೀಡಲು ಬಂದಿದ್ದ ಮಹಿಳಾ ವಕೀಲರೊಬ್ಬರಿಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸಲಹೆ ನೀಡಿದರು.
ಸೋಮವಾರ ಜಿಲ್ಲಾಡಳಿತ ಭವನದಲ್ಲಿ ನಡೆದ ಜನಸ್ಪಂದನದಲ್ಲಿ ಜನರ ಅವಹಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ದೂರು ನೀಡಲು ಆಗಮಿಸಿದ್ದ ಮಹಿಳಾ ವಕೀಲರೊಬ್ಬರಿಗೆ ನೀವು ಈ ಬಾರಿಯ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತದಾನ ಮಾಡಿದ್ದಿರಾ ಎಂದಾಗ, ಆ ಮಹಿಳೆ ಇಲ್ಲ ಎಂದು ಹೇಳಿದರು. ಇದಕ್ಕೆ ಜಿಲ್ಲಾಧಿಕಾರಿಗಳು ನಾಗರಿಕರಾಗಿ ಮತದಾನ ಮಾಡಬೇಕಿರುವುದು ನಮ್ಮ ಮುಖ್ಯ ಕರ್ತವ್ಯ, ಮತದಾನ ನಮ್ಮ ಹಕ್ಕು ಅದನ್ನು ಬಳಸಬೇಕಿರುವುದು ನಮ್ಮ ಜವಬ್ದಾರಿ ಸಲಹೆ ನೀಡಿದರು.
ಜನಸ್ಪಂದನ ಸಭೆಯಲ್ಲಿ ದೇವರಾಜ್ ಅರಸ್ ಬಡಾವಣೆಯ ನಿವಾಸಿಯೊಬ್ಬರು ಕೋರ್ಟ್ನ ಹಿಂಭಾಗ ಮತ್ತು ಸುತ್ತ ಮುತ್ತ ಪ್ರದೇಶಗಳಲ್ಲಿ ಸ್ವಚ್ಚತೆ ಇಲ್ಲ, ಇಲ್ಲಿ ವಾಸಿಸುವ ಜನಸಾಮಾನ್ಯರಿಗೆ ಇದರಿಂದ ತೊಂದರೆಯಾಗುತ್ತಿದೆ. ಮತ್ತು ರಿಂಗ್ ರಸ್ತೆ ಹಾಗೂ ಕೋರ್ಟ್ ಹಿಂಭಾಗದ ರಸ್ತೆಗಳಲ್ಲಿ ಓಡಾಡಲು ಸಾರ್ವಜನಿಕರಿಗೆ ಭಯದ ವಾತವರಣವಿದೆ. ಇದರ ಬಗ್ಗೆ ಮಹಾನಗರಪಾಲಿಕೆ ಹಲವಾರು ಬಾರಿ ದೂರು ನೀಡಿದ್ದರು ಯಾವುದೇ ಪ್ರಯೋಜನವಾಗಿಲ್ಲವೆಂದು ದೂರಿದರು.
ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ನಗರದ ಹಲವಾರು ಸ್ಥಳಗಳಲ್ಲಿ ಇದೇ ರೀತಿಯ ಸಮಸ್ಯೆಗಳಿದ್ದು, ಅದರ ಬಗ್ಗೆ ಗಮನ ಹರಿಸಿ ಸ್ವಚ್ಚತೆಗೆ ಆದ್ಯತೆ ನೀಡುವಂತೆ ಮಹಾನಗರಪಾಲಿಕೆ ಆಯುಕ್ತರಿಗೆ ತಿಳಿಸಿದರು.
ಎಸ್ಪಿಎಸ್ ನಗರದ ನಿವಾಸಿಯಾದ ಮಂಜುಳ ಎಸ್ ಹಿರೇಮಠ್ ಎಂಬುವರು, ನಾನು ಬಿ.ಎ ಪದವೀಧರಳಾಗಿದ್ದು, ಅಂಗವಿಕಲರ ಅಧಿನಿಯಮದಡಿ ಅಂಗವಿಕಲರ ಸಹಾಯವಾಣಿಯ ಸಲಹೆಗಾರ ಹುದ್ದೆಗೆ ಅರ್ಜಿ ಸಲ್ಲಿಸಿದ್ದು, ಅರ್ಜಿಯನ್ನು ತಿರಸ್ಕರಿಸಲಾಗಿದೆ. ಈ ಅರ್ಜಿಯನ್ನು ಪರಿಶೀಲಿಸಿ ನನಗೆ ಉದ್ಯೋಗ ದೊರಕಿಸಿಕೊಡಬೇಕೆಂದು ಮನವಿ ಮಾಡಿಕೊಂಡರು. ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಈ ಹುದ್ದೆಯು ವಿಕಲಚೇತನದಡಿ ಇದ್ದು, ಬೇರೆಯವರು ಕಾರ್ಯ ನಿರ್ವಹಿಸುತ್ತಿದ್ದರೆ ಅವರನ್ನು ತೆಗೆದು ಹಾಕಿ ಇವರಿಗೆ ಉದ್ಯೋಗ ನೀಡುವಂತೆ ತಿಳಿಸಿದರು.
ದೇವರಾಜ್ ಅರಸ್ ಬಡಾವಣೆಯ ನಿವಾಸಿ ಸುನಂದ ಎಂಬುವರು ಲಕ್ಷೀ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಹಿರಿಯ ನಾಗರಿಕ ಠೇವಣಿ ಯೋಜನೆಯಡಿ ಒಂದು ಲಕ್ಷ ಹಣವನ್ನು ಠೇವಣಿ ಮಾಡಲಾಗಿತ್ತು. ನಮ್ಮ ಠೇವಣಿ ಅವಧಿ ಮುಗಿದು, ಬಾಂಡ್ ಮೆಚ್ಯುರಿಟಿ ಆಗಿದ್ದರು ನಮಗೆ ಹಣ ನೀಡದೇ ಸತಾಯಿಸುತ್ತಿದ್ದಾರೆ ಎಂದು ದೂರು ನೀಡಿದರು.
ಜಿಲ್ಲಾಧಿಕಾರಿ ಈ ಬಗ್ಗೆ ಸೊಸೈಟಿಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿದಾಗ ಒಟ್ಟು 1200 ಈ ರೀತಿಯ ಘಟನೆಗಳು ನಡೆದಿವೆ. ಇದಕ್ಕೆ ಸಂಬಂಧ ಪಟ್ಟ ಅಧಿಕಾರಿಗೆ ನೋಟಿಸ್ ನೀಡಲಾಗಿದ್ದು, ಆ ವ್ಯಕ್ತಿ 15 ದಿನಗಳಿಂದ ಕಚೇರಿಗೆ ಬಂದಿಲ್ಲ. ಇದಕ್ಕೆ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.
ನಗರದ ನಿವಾಸಿ ಮಲ್ಲಿಕಾರ್ಜಿನ್ ಇಂಗಳೇಶ್ವರ ಎಂಬುವರು ಪುಷ್ಪ ಮಹಾಲಿಂಗಪ್ಪ ಶಾಲೆಯವರ ಜಾಗ ಎಷ್ಟಿದೆ ಎಂಬುದು ತಿಳಿದಿಲ್ಲ, ಶಾಲೆಯ ಸುತ್ತ ಮುತ್ತ ದೊಡ್ಡ ಬಿಲ್ಡಂಗ್ ಅನುಮತಿಯಿಲ್ಲದೇ ನಿರ್ಮಾಣವಾಗುತ್ತಿವೆ ಇದರ ಬಗ್ಗೆ ಜಿಲ್ಲಾಧಿಕಾರಿಗಳು ತನಿಖೆ ನಡೆಸಸಬೇಕೆಂದು ದೂರು ಅರ್ಜಿ ಸಲ್ಲಿಸಿದರು.
ವಾಕ್ ಮತ್ತು ಶ್ರವಣ ದೋಷವುಳ್ಳ ಅನೇಕ ಜನ ವಿಕಲಚೇತನರು ನಮಗೆ ಸ್ವಯಂ ಉದ್ಯೋಗ ಯೋಜನೆಯಡಿ ಸಾಲ ಸೌಲಭ್ಯಗಳನ್ನು ಒದಗಿಸಿಕೊಡಿ ಎಂದು ಮನವಿ ಮಾಡಿದರು.
ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ನಿಮಗೆ ಅವಶ್ಯವಿರುವ ಸಹಾಯ ಮಾಡಲು ನಾನು ಸಿದ್ಧನಿದ್ದೆ, ನಿಮ್ಮ ಅನುಕೂಲಕ್ಕಾಗಿ ಸಂಬಂಧಿಸಿದ ಎಲ್ಲ ಇಲಾಖೆಗಳ ಸಮ್ಮಖದಲ್ಲಿ ಅಭೆ ನಡೆಸಿ ಅಗತ್ಯವಾದ ಸಹಾಯ ವ್ಯವಸ್ಥೆ ಮಾಡಲಾಗುವುದೆಂದು ತಿಳಿಸಿದರು.
ನಂಜನಗೌಡ ಎಂಬುವರು ಉಚ್ಚಂಗಿದುರ್ಗ ಕ್ಷೇತ್ರವು ಐತಿಹಾಸಿಕವಾಗಿ ಹೆಚ್ಚು ಪ್ರಸಿದ್ದಿ ಹೊಂದಿದ್ದು, ದಾವಣಗೆರೆಯಿಂದ ಅಣಜಿ ಕ್ರಾಸ್ ಮುಂಖಾತರ ಉಚ್ಚಂಗಿದುರ್ಗಕ್ಕೆ ಕೆಎಸ್ಆರ್ಟಿಸಿ ಬಸ್ ಸೇವೆ ಒದಗಿಸಬೇಕೆಂದು ಮನವಿ ಪತ್ರ ಸಲ್ಲಿಸಿದರು.
ಹರಿಹರ ನಿವಾಸಿ ನಿಸಾರ್ ಅಹಮದ್ರವರು ನಾನು ಬಡ ವರ್ಗದವನಾಗಿದ್ದು, ಶೇ.75 ರಷ್ಟು ಅಂಗವಿಕಲತೆ ಹೊಂದಿದ್ದೇನೆ. ನನಗೆ ಸರ್ಕಾರದ ವತಿಯಿಂದ ಆಶ್ರಯ ಯೋಜನೆಯಡಿ ಮನೆಯನ್ನು ನೀಡಬೇಕೆಂದು ಮನವಿ ಮಾಡಿಕೊಂಡರು.
ವಿಜಯ ನಗರ ನಿವಾಸಿ ಗೋಪಾಲಮ್ಮ ಎಂಬುವವರು, ನಾನು ಅಂಗನವಾಡಿ ಮತ್ತು ಪೋಸ್ಟ್ ಆಫೀಸ್ಗಳಲ್ಲಿ ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದ್ದೇನೆ. ನನಗೆ ಯಾವುದಾರೊಂದು ಕೆಲಸ ದೊರಕಿಸಿಕೊಡಿ ಎಂದು ಮನವಿ ಮಾಡಿಕೊಂಡರು.
ಜಿಲ್ಲಾಧಿಕಾರಿಗಳು ನೀವು ಅರ್ಜಿ ಸಲ್ಲಿಸಿರುವ ಇಲಾಖೆಗಳಲ್ಲಿ ಯಾವುದಾದರು ಹುದ್ದೆ ಖಾಲಿ ಇದ್ದರೆ ಹೊರಗುತ್ತಿಗೆ ಆಧಾರದಲ್ಲಿ ಅವಕಾಶ ಕಲ್ಪಿಸಿಕೊಡಲಾಗುವುದು ಎಂದರು..
ಶಂಕರ್ ವಿಹಾರ ನಗರದ ಮಹಿಳೆಯರು, ಬಡಾವಣೆಯಲ್ಲಿ ಸಮರ್ಪಕ ರಸ್ತೆ ಮತ್ತು ಚರಂಡಿ, ವ್ಯವಸ್ಥೆ ಸರಿಪಡಿಸುವಂತೆ ಮನವಿ ಮಾಡಿದರು.ಜಿಲ್ಲಾಧಿಕಾರಿಗಳು ಈ ಸಮಸ್ಯೆಯನ್ನು ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ಪಾಲಿಕೆ ಆಯುಕ್ತರಿಗೆ ತಿಳಿಸಿದರು.
ಕಸ್ತೂರಮ್ಮ ಎಂಬುವವರು ನನಗೆ ವಿಧವಾ ವೇತನ ಮಂಜೂರಾಗಿದ್ದು, ಇದುವರೆಗೂ ನನ್ನ ಖಾತೆಗೆ ಹಣ ಜಮಾ ಆಗಿರುವುದಿಲ್ಲ. ಈ ಕುರಿತು ವಿಚಾರಿಸಿದರೆ ನನಗೆ ಯಾವುದೇ ಮಾಹಿತಿ ತಿಳಿಯುತ್ತಿಲ್ಲ. ನನಗೆ ವಿಧವಾ ವೇತನ ಬರುವಂತೆ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಜಾಲಿನಗರ ನಿವಾಸಿ ಆಶಾ ಅಬ್ದುಲ್ ಅಜೀಜ್ಸಾಭ್ ಇವರು ಸಂಧ್ಯಾ ಸುರಕ್ಷ ಯೋಜನೆಯಲ್ಲಿ ತಮಗೆ ಪಿಂಚಣಿ ಮಂಜೂರಾಗಿದ್ದು, 11 ತಿಂಗಳಾದರೂ ನಮಗೆ ಪಿಂಚಣಿ ಹಣ ಬಂದಿಲ.್ಲ ಈ ಪಿಂಚಣಿ ಹಣವನ್ನು ಒದಗಿಸಿಕೊಡುವಂತೆ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಸಂಬಂಧಿಸಿದ ಅಧಿಕಾರಿಗಳು ಇದರ ಬಗ್ಗೆ ಗಮನ ಹರಿಸಿ ಒಂದು ವಾರದೊಳಗೆ ಪಿಂಚಣಿ ಹಣ ಇವರ ಖಾತೆಗೆ ಹೋಗಬೇಕೆಂದು ಎ.ಡಿಯವರಿಗೆ ತಿಳಿಸಿದರು.
ನ್ಯಾಮತಿ ತಾಲ್ಲೂಕಿನ ಗಂಜೇನಹಳ್ಳಿಯ ಬಗರ ಹುಕುಂ ಸಮಿತಿಯಲ್ಲಿ ನಿರ್ಧರಿಸಿದಂತೆ ಚಿಕ್ಕತ್ತಿನಹಳ್ಳಿಯಲ್ಲಿ ಮಂಜೂರಾದ ಸಾಗುವಳಿ ಮಾಡಲು ಪಡೆದ ಭೂಮಿಯ ಮ್ಯುಟೇಷನ್ ಹಾಗೂ ಪಹಣಿ ಮಂಜೂರಾಗಿರುವುದಿಲ್ಲ. ಈ ಕುರಿತು ನ್ಯಾಮತಿ ತಾಲ್ಲೂಕು ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಸಿ ಮನವಿ ಸಲ್ಲಿಸಿದರು.
ನಗರದ ಎಂ.ಬಿ ಕೇರಿಯ ಲಕ್ಕಮ್ಮ ಎಂಬುವವರು ತಾವು ಕಸಬಾ ಹೋಬಳಿಯ 2.12 ಗುಂಟೆ ಜಮೀನು ಇದ್ದು, ಜಮೀನು ಪೋಡಿಗಾಗಿ ಈಗಾಗಲೇ ಅರ್ಜಿ ಸಲ್ಲಸಿ ಹಲವು ವರ್ಷ ಕಳೆದರೂ ತಮ್ಮ ಹೆಸರಿಗೆ ಇನ್ನು ಪೋಡಿಯಾಗಿರುವುದಿಲ್ಲ ಎಂದು ಮನವಿ ಸಲ್ಲಿಸಿ, ಪೋಡಿ ಮಾಡಿಸಿಕೋಡಲು ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಜಿಲ್ಲಾ ಪಂಚಾಯತ್ನ ಉಪ ಕಾರ್ಯzರ್ಶಿಗಳಿಗೆ ಈ ಸಮಸ್ಯೆಯ ಬಗ್ಗೆ ಪತ್ರ ಪರಿಶೀಲನೆ ನಡೆಸಿ, ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಸಾರ್ವಜನಿಕರಿಂದ ಅನೇಕ ಅರ್ಜಿಗಳು ಬಂದಿದ್ದನ್ನು ಗಮನಿಸಿದ ಜಿಲ್ಲಾಧಿಕಾರಿಗಳು, ಸಭೆಯಲ್ಲಿದ್ದ ಅಧಿಕಾರಿಗಳನ್ನುದ್ದೇಶಿಸಿ ಎಲ್ಲಾ ಇಲಾಖೆಯವರು ನಿಮ್ಮ ಕಚೇರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಅಲ್ಲೇ ಬಗೆಹರಿಸಿದರೆ, ಜನರು ಜಿಲ್ಲಾಡಳಿತ ಕಚೇರಿಗೆ ಬರಲು ಅವಕಾಶವಿರುವುದಿಲ್ಲ. ಇಲ್ಲಿರುವ ಎಲ್ಲಾ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸುವ ಗುಣ ಬೆಳೆಸಿಕೊಳ್ಳಿ ಎಂದು ಹೇಳಿದರು.
ಕಾನೂನುನ್ನು ಹೊರತು ಪಡಿಸಿ ಸಾರ್ವಜನಿಕರ ಕಾಳಜಿ ವಹಿಸಿ ಕೆಲಸ ಮಾಡಬೇಕು. ಕಚೇರಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ಅಧಿಕಾರಿಗಳು ನಡೆದುಕೊಳ್ಳುವ ರೀತಿಯಿಂದ ನಮ್ಮ ಕಚೇರಿಯ ವರ್ಚಸ್ಸುನ್ನು ಹೆಚ್ಚಿಸುತ್ತದೆ. ಆದ್ದರಿಂದ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಪ್ರೀತಿ ಮತ್ತು ಕಾಳಜಿಯಿಂದ ವರ್ತಿಸುವ ಗುಣ ಬೆಳೆಸಿಕೊಳ್ಳಿ. ಸಾರ್ವಜನಿಕರ ಮನವಿಯನ್ನು ಆಲಿಸಿಕೊಂಡು ಅವರ ಸಮಸ್ಯಗೆ ಪರಿಹಾರ ಒದಗಿಸುವ ಕಾರ್ಯವಾಗಬೇಕೆ ಎಂದು ತಿಳಿಸಿದರು.
ಸಭೆಯಲ್ಲಿ ವೃದ್ದಾಪ್ಯ ವೇತನ, ವಿಧವಾ ವೇತನ, ಖಾತೆ ವರ್ಗಾವಣೆ, ಬಸ್ ವ್ಯವಸ್ಥೆ ಕಲ್ಪಿಸುವ ಕುರಿತು, ಸಾಲ ಸೌಲಭ್ಯಗಳ ಕುರಿತು ಹಾಗೂ ಅಂಗವಿಕಲರಿಗೆ ಸ್ವಉದ್ಯೋಗಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅನೇಕ ಅಹವಾಲುಗಳನ್ನು ಸ್ವೀಕರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಆನಂದಪ್ಪ, ಪ್ರಭಾರ ಅಪರ ಜಿಲ್ಲಾಧಿಕಾರಿ ನಜ್ಮಾ, ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್ ಬಳ್ಳಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಹೆಚ್ ವಿಜಯ್ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಸುದ್ದಿದಿನ. ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್ಕಿಟ್ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.
ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.
ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.
ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್ನಾಥ್ ಜೈನ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಇಲಾಖಾ ತನಿಖೆ ನಡೆಸದೆ ಕಾಲ ವಿಳಂಬ ಮಾಡುತ್ತಿರುವ ಚಿತ್ರದುರ್ಗ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ 06 ಅರ್ಜಿ ಸಲ್ಲಿಸಿ, ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಉಪವಿಭಾಗಗಳಿಗೆ ಬಿಡುಗಡೆಯಾದ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿದ್ದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ಸದರಿ ಪ್ರಕರಣವನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿದ್ದರು.
ನಿಯಮಾನುಸಾರ ಇಲಾಖೆ ತನಿಖೆ ನಡೆಸದೆ ಕಾಲ ವಿಳಂಬ ಮಾಡುವ ಉದ್ದೇಶದಿಂದ 6 ತಾಲ್ಲೂಕು ಉಪ ವಿಭಾಗಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಆದೇಶ ಹೊರಡಿದ್ದು, ಇದರಂತೆ ವಕೀಲ ಡಾ.ಕೆ.ಎ.ಓಬಳಪ್ಪ ಇವರು ಎಲ್ಲಾ ಉಪವಿಭಾಗಗಳಿಗೆ ಭೇಟಿ ನೀಡಿ ದಾಖಲೆ ಪರಿಶೀಲನೆ ಮಾಡಿದಾಗ ದಾಖಲೆಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ.
ಈ ಬಗ್ಗೆ ಕಾರ್ಯಪಾಲಕ ಅಭಿಯಂತರರಿಗೆ ದೂರು ನೀಡಿದರೂ ನಿರ್ಲಕ್ಷö್ಯ ತೋರಿದ ಕಾರಣ, ಕರ್ತವ್ಯ ಲೋಪದ ಅಡಿಯಲ್ಲಿ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್ನಾಥ್ ಜೈನ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

