ದಿನದ ಸುದ್ದಿ
ಗೋಕಾಕ್ ಪಟ್ಟಣ ನೆರೆಯಿಂದ ಕಂಗೆಟ್ಟಾಗ, ರಮೇಶ್ ಜಾರಕಿಹೊಳಿ ಹೋಟೆಲ್ನ ಎಸಿ ರೂಮ್ನಲ್ಲಿ ಮಸ್ತಿ ಮಾಡ್ತಿದ್ರು : ಸಿದ್ದರಾಮಯ್ಯ ಕಿಡಿ

ಸುದ್ದಿದಿನ,ಡೆಸ್ಕ್ : ಗೋಕಾಕ್ನಲ್ಲಿ ಇಂದು ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಬೃಹತ್ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ನಮ್ಮ ಪಕ್ಷದ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರ ಪರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ ಯಾಚಿಸಿದರು.
ಕಳೆದ ಚುನಾವಣೆಯಲ್ಲಿ ಕ್ಷೇತ್ರದ ಜನಾದೇಶ ಪಡೆದು ಗೆದ್ದಿದ್ದ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಪಕ್ಷಕ್ಕೆ ತನ್ನನ್ನು ತಾನು ಮಾರಿಕೊಂಡಿದ್ದರ ಫಲ ಇಂದು ಗೋಕಾಕ್ ಕ್ಷೇತ್ರ ಉಪಚುನಾವಣೆ ಎದುರಿಸುವಂತಾಗಿದೆ. ಪಕ್ಷಾಂತರ ಮಾಡಿದ ಶಾಸಕರೆಲ್ಲ ರಾಜಕೀಯದಲ್ಲಿರಲು ಅನರ್ಹರು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮತ್ತೆ ಅಂಥವರಿಗೆ ಮತ ನೀಡುತ್ತೀರ? ಮಂತ್ರಿಯಾಗಿದ್ದ ಸತೀಶ್ ಜಾರಕಿಹೊಳಿ ಅವರನ್ನು ಸಂಪುಟದಿಂದ ಕೈಬಿಟ್ಟು, ರಮೇಶ್ ಜಾರಕಿಹೊಳಿ ಅವರಿಗೆ ಅವಕಾಶ ನೀಡಿದ್ದೆ. ಮಂತ್ರಿಯಾದವರು ಸಂಪುಟ ಸಭೆಗೆ ಹಾಜರಾಗಬೇಕಲ್ವೇ? ಆದರೆ ಈ ಆಸಾಮಿ ಹತ್ತು ಸಚಿವ ಸಂಪುಟ ಸಭೆಗಳಿಗೇ ಹೋಗಲಿಲ್ಲ. ಇಂಥವರು ಯಾವ ಪುರುಷಾರ್ಥಕ್ಕೆ ಮಂತ್ರಿಯಾಗಿರಬೇಕು? ಎಂದು ಕಿಡಿಕಾರಿದರು.
ಬಳ್ಳಾರಿ ರೀತಿಯಲ್ಲಿಯೇ ಗೋಕಾಕ್ ಅನ್ನು ಸಹ ‘ರಿಪಬ್ಲಿಕ್ ಆಫ್ ಗೋಕಾಕ್’ ಮಾಡಿದ್ದಾರೆ. ಇಲ್ಲಿ ರಮೇಶ್ ಜಾರಕಿಹೊಳಿಯದ್ದೇ ದರ್ಬಾರ್ ಆಗಿದೆ. ಕ್ಷೇತ್ರದ ಜನರಿಗೆ ಸ್ವಾತಂತ್ರ್ಯ ಬೇಕು, ಇಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಮರು ಸ್ಥಾಪನೆಯಾಗಬೇಕು ಎಂದಾದರೆ ನಮ್ಮ ಪಕ್ಷದ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸಿಕೊಡಬೇಕು. ಪ್ರವಾಹ ಬಂದಾಗ ನಾನು ಗೋಕಾಕ್ಗೆ ಬಂದಿದ್ದೆ. ಹಳೆ ಗೋಕಾಕ್ ಪಟ್ಟಣ ಸಂಪೂರ್ಣ ಕೊಚ್ಚಿ ಹೋಗಿತ್ತು. ಜನ ಬೀದಿಗಳಲ್ಲಿ ವಾಸಿಸುತ್ತಿದ್ದರು. ಜನರ ಕಷ್ಟ ಕಾಲದಲ್ಲಿ ಜೊತೆಗೆ ನಿಂತು ಅವರಿಗೆ ಧೈರ್ಯ ತುಂಬಬೇಕಿದ್ದ ಶಾಸಕ ಮುಂಬೈ, ದೆಹಲಿ ಅಂತ ಊರೂರು ಅಲೆಯುತ್ತಿದ್ದರು. ಆಗ ಸತೀಶ್ ಜಾರಕಿಹೊಳಿ ಮತ್ತು ಲಖನ್ ಜಾರಕಿಹೊಳಿ ಜನರ ಜೊತೆ ಇದ್ದರು ಎಂದರು.
ಗೋಕಾಕ್ ಪಟ್ಟಣ ನೀರಿನಲ್ಲಿ ಮುಳುಗಿ ಹೋಗಿತ್ತು, ಜನ ಬದುಕಿಗಾಗಿ ನೆಲೆ ಹುಡುಕುತ್ತಿದ್ದರೆ ರಮೇಶ್ ಜಾರಕಿಹೊಳಿ ಮುಂಬೈನ ಪಂಚತಾರಾ ಹೋಟೆಲ್ನ ಎಸಿ ರೂಮ್ನಲ್ಲಿ ಮೋಜು ಮಸ್ತಿ ಮಾಡುತ್ತಾ ಕಾಲ ಕಳೆಯುತ್ತಿದ್ದರು. ಇಂಥ ಶಾಸಕ ಮತ್ತೆ ನಮಗೆ ಬೇಕಾ ಎಂದು ಜನತೆ ಯೋಚನೆ ಮಾಡಿ ಮತ ಚಲಾಯಿಸಬೇಕು. ಸತೀಶ್ ಜಾರಕಿಹೊಳಿ ನನ್ನ ಧೀರ್ಘ ಕಾಲದ ಗೆಳೆಯ, ನಿಷ್ಠಾವಂತ ನಾಯಕ ಕೂಡ. ಇನ್ನು ಲಖನ್ ಜಾರಕಿಹೊಳಿ ಯುವ ಉತ್ಸಾಹಿ ರಾಜಕಾರಣಿ. ಜನಸೇವೆ ಮಾಡುವ ಹಂಬಲ, ಕಾಳಜಿ ಅವರಲ್ಲಿದೆ. ಡಿಸೆಂಬರ್ 5ರಂದು ನಡೆಯುವ ಉಪಚುನಾವಣೆಯಲ್ಲಿ ಲಖನ್ಗೆ ಮತ ನೀಡಿ ಗೆಲ್ಲಿಸಿಕೊಡಿ, ಅವರೊಂದಿಗೆ ನಾವಿರುತ್ತೇವೆ, ಕ್ಷೇತ್ರದ ಅಭಿವೃದ್ಧಿಯನ್ನು ನಾವು ಬೆಂಬಲಿಸುತ್ತೇವೆ ಎಂದು ಮತದಾರರಲ್ಲಿ ಮನವಿಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮುಂದಿನ ನಾಯಕರಾಗಿ ತಯಾರಾಗಿ : ಪ್ರೊ ಇಗ್ನಿಸಿಯಸ್

ಸುದ್ದಿದಿನ,ದಾವಣಗೆರೆ:ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿರ್ವಹಣಾ ಶಾಸ್ತ್ರ ವಿಭಾಗದ ವತಿಯಿಂದ “ಫ್ರೆಷರ್ಸ್ ಫಿಯೆಸ್ಟಾ – 2K25” ಕಾರ್ಯಕ್ರಮವು ಮಹಾ ಸಡಗರದಿಂದ ನಡೆಯಿತು. ಈ ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಬಸವರಾಜ ಸಿ. ತಹಸಿಲ್ದಾರ್ ಅವರು ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮವನ್ನು ಪ್ರೊ. ಬಸವರಾಜ ಸಿ. ತಹಸಿಲ್ದಾರ್ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯ ಕಟ್ಟುವಲ್ಲಿ ಪ್ರಾರಂಭಿಕ ದಿನಗಳ ಮಹತ್ವ ಕುರಿತು ವಿವರಿಸಿದರು. ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಅವರು, ಶಿಕ್ಷಣವು ಜೀವನ ರೂಪಿಸುವ ಪ್ರಮುಖ ಅಂಶವಾಗಿದ್ದು, ಅವರ ಶೈಕ್ಷಣಿಕ ಪಯಣ ಸದೃಢವಾಗಿರಬೇಕೆಂದು ಆಶಿಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಡಾ. ಇಗ್ನೇಷಿಯಸ್. ಬಿ., ಪ್ರಾಂಶುಪಾಲರು, RVD ಕಾಲೇಜು, ಬೆಂಗಳೂರು, ಅವರು “ವಿದ್ಯಾರ್ಥಿಗಳು ಮುಂದಿನ ನಾಯಕರು” ಎಂಬ ವಿಷಯದ ಮೇಲೆ ಪ್ರೇರಣಾತ್ಮಕ ಭಾಷಣವನ್ನು ನೀಡಿದರು. ವಿದ್ಯಾರ್ಥಿಗಳು ಕೇವಲ ಅಧ್ಯಯನದಲ್ಲಿ ಮಾತ್ರವಲ್ಲ, ನೈತಿಕ ಮತ್ತು ವ್ಯಕ್ತಿತ್ವ ಅಭಿವೃದ್ಧಿಯಲ್ಲಿಯೂ ಮುಂದೆ ಬರಬೇಕು ಎಂದು ಅವರು ಸಲಹೆ ನೀಡಿದರು. ತಾಂತ್ರಿಕ ಜ್ಞಾನ, ನಿರ್ಧಾರಕ್ಷಮತೆ ಮತ್ತು ತಂಡದ ಮನೋಭಾವ ಇಂದಿನ ಜಗತ್ತಿನಲ್ಲಿ ಯಶಸ್ವಿಯಾಗಲು ಅಗತ್ಯವೆಂದು ಅವರು ಒತ್ತಿಹೇಳಿದರು.
ಪ್ರಪಂಚದ ಮುಂದಿನ 40 ವರ್ಷಗಳು ನಿರ್ವಹಣಶಾಸ್ತ್ರ ವಿಭಾಗದ ವಿದ್ಯಾರ್ಥಿಗಳ ವರ್ಷಗಳು ಯಾವುದೇ ವಿಷಯಕ್ಕೆ ಬೇಡಿಕೆ ಕಡಿಮೆಯಾದರೂ ನಿರ್ವಹಣ ಶಾಸ್ತ್ರಕ್ಕೆ ತೊಂದರೆ ಆಗದು ಇತ್ತೀಚಿನ. ಎ ಐ ತಂತ್ರಜ್ಞಾನ ಕಲಿತರೆ ವಿದ್ಯಾರ್ಥಿಗಳು ವಾಣಿಜ್ಯ ಪ್ರಪಂಚವನ್ನು ಆಳಬಹುದು ಎಂದು ಒತ್ತಿ ಹೇಳಿದರು.
ಈ ಸಂದರ್ಭದಲ್ಲಿ ಡಾ. ವೆಂಕಟೇಶ್ ಬಾಬು. ಎಸ್., ನಿರ್ವಹಣಾ ವಿಭಾಗದ ಮುಖ್ಯಸ್ಥರು, ಕಾರ್ಯಕ್ರಮದ ಪ್ರಸ್ತಾವಿಕ ಭಾಷಣ ಮಾಡಿದರು. ಅವರು ವಿಭಾಗದ ಶೈಕ್ಷಣಿಕ ಕಾರ್ಯಕ್ರಮಗಳು, ಶಿಷ್ಯತ್ವ ಮತ್ತು ಕೈಗಾರಿಕಾ ಸಂಪರ್ಕದ ಮಹತ್ವ ಕುರಿತು ವಿವರಿಸಿದರು. ವಿದ್ಯಾರ್ಥಿಗಳು ತಮ್ಮ ಕೋರ್ಸ್ಗಳನ್ನು ಸಂಪೂರ್ಣವಾಗಿ ಬಳಸಿಕೊಂಡು, ವ್ಯಕ್ತಿತ್ವ ವೃದ್ಧಿಸಲು ಮತ್ತು ಉದ್ಯೋಗ ಅವಕಾಶಗಳನ್ನು ಪಡೆದುಕೊಳ್ಳಲು ಮುನ್ನಡೆಯಬೇಕು ಎಂದು ಹೇಳಿದರು. ಬಾಯ್ ಶಾಸ್ತ್ರ ಮತ್ತು ವಿದ್ಯಾರ್ಥಿಗಳಿಗೆ ಯಾವತ್ತಿಗೂ ಭವಿಷ್ಯವಿದೆ ಪ್ರಪಂಚದಲ್ಲಿ ವಾಣಿಜ್ಯ ವ್ಯವಹಾರ ಇರುವರೆಗೂ ನಿಮಗೆ ಅವಕಾಶಗಳು ಕಡಿಮೆ ಆಗುತ್ತಿಲ್ಲ ಆದರೆ ಒಂದಿಷ್ಟು ಮೌಲ್ಯ ಆಧಾರಿತ ಶಿಕ್ಷಣವನ್ನು ಪಡೆದುಕೊಂಡರೆ ನೀವು ಜೀವನದಲ್ಲಿ ಯಶಸ್ವಿಯಾಗಬಹುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಡಾ. ಸುರೇಶ್ ಅವರು ಮಾತನಾಡುತ್ತಾ ಕಾಲೇಜಿನಲ್ಲಿ ಇತರದ ಕಾರ್ಯಕ್ರಮಗಳು ಸದಾ ನಡಿಯುತ್ತಿರುತ್ತವೆ. ಅವುಗಳ ಉಪಯೋಗವನ್ನು ಪಡೆದುಕೊಂಡರೆ ನಿಮ್ಮ ಭವಿಷ್ಯ ಉತ್ತಮವಾಗಿರುತ್ತದೆ ಎಂದು ಹೇಳಿದರು.
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಕಾಲೇಜಿನ ಅಧೀಕ್ಷಕರಾದ ಆತ್ಮಹತ್ಯೆ ಪ್ರತಿಭಾ ಹಾಗೂ ಶ್ರೀ ಕುಮಾರ ಜಮುನಾ ಮತ್ತು ನಿರ್ಣಯಶಾಸ್ತ್ರ ಭಾಗದ ಉಪನ್ಯಾಸಕರಾದ ಶ್ರೀಮತಿ ಪ್ರತಿಭಾ ಶ್ರೀಮತಿ ರಾಧಾ ಹಾಗೂ ಶ್ರೀಮತಿ ಡಾ ಸೌಜನ್ಯವರಿಗೆ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯದ ರಾಂಕ್ ವಿಜೇತರಿಗೆ ಸನ್ಮಾನಿಸಲಾಯಿತು. ನಿರ್ವಹಣ ಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ ವಿನಾಯಕ್ ದಾ ಪ್ರಭಾಕರ್ ಪ್ರೊ ವೀರೇಶ್ ಪ್ರೊ ಶಂಕರಯ್ಯ ಮತ್ತು ಪ್ರೊ ನಾಗರಾಜ ಹಾಗೂ ಹಲವಾರು ಪ್ರಾಧ್ಯಾಪಕರು ಹಾಜರಿದ್ದು, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದರು. ಕಾರ್ಯಕ್ರಮವನ್ನು ದ್ವಿತೀಯ ವರ್ಷದ ಎಂಬಿಎ ವಿದ್ಯಾರ್ಥಿಗಳು ಅಚ್ಚುಕಟ್ಟಾಗಿ ನಡೆಸಿಕೊಟ್ಟರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ; ಇಲ್ಲಿವೆ ಪ್ರಮುಖಾಂಶಗಳು

ಸುದ್ದಿದಿನಡೆಸ್ಕ್:ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೇ ಸಾಲಿನ 4 ಲಕ್ಷದ 9 ಸಾವಿರದ 549 ಕೋಟಿ ರೂ ಬಜೆಟ್ ಗಾತ್ರದ ಕರ್ನಾಟಕ ರಾಜ್ಯ ಆಯವ್ಯಯವನ್ನು ಇಂದು ಮಂಡಿಸಿದ್ದಾರೆ.
ಕೃಷಿ ಮತ್ತು ಇನ್ನಿತರ ದಾಖಲೀಕರಣ, ಮೂಲಸೌಕರ್ಯ ಒದಗಿಸುವಿಕೆ, ಸಮರ್ಪಕ ವಿದ್ಯುತ್ ಪೂರೈಕೆ, ಗೋದಾಮುಗಳ ಒದಗಿಸುವಿಕೆ ಮುಂತಾದ ಚಟುವಟಿಕೆಗಳ ಮೂಲಕ ಗ್ರಾಮಗಳ ಅಭಿವೃದ್ದಿಗೆ ಮತ್ತು ಗ್ರಾಮೀಣ ಜನರ ಆದಾಯ ಹೆಚ್ಚಿಸಲು ಶ್ರಮಿಸಲಾಗುವುದು ಎಂದು ಮುಖ್ಯಮಂತ್ರಿ ಬಜೆಟ್ ಭಾಣದಲ್ಲಿ ತಿಳಿಸಿದ್ದಾರೆ.
2024-25ರಲ್ಲಿ ಶೇಕಡ 4ರಷ್ಟು ಬೆಳವಣಿಗೆ ಸಾಧಿಸುವ ಮೂಲಕ ಚೇತರಿಕೆ ಕಂಡಿದ್ದು, ದೇಶದ ಕೃಷಿ ವಲಯದ ಬೆಳವಣಿಗೆ ಶೇಕಡ 3.8ಕ್ಕಿಂತ ಹೆಚ್ಚಾಗಿದೆ. ರಾಜ್ಯ ಸರ್ಕಾರವು ರೈತರ ಕಲ್ಯಾಣ ಉದ್ದೇಶಿತ ಯೋಜನೆಗಳಿಗೆ ಪ್ರಸಕ್ತ ವರ್ಷದಲ್ಲಿ ಒಟ್ಟು 51 ಸಾವಿದ 339 ಕೋಟಿ ರೂಪಾಯಿ ಅನುದಾನವನ್ನು ನೀಡಲಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ 51 ಸಾವಿರದ 34 ಕೋಟಿ ರೂಪಾಯಿ ಒದಗಿಸಲಾಗಿದೆ. 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯಧನ ಒದಗಿಸಲು 428 ಕೋಟಿ ರೂಪಾಯಿ ಅನುದಾನ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ತಲಾ 2 ಸಾವಿರ ರೂಪಾಯಿಗೆ ಹೆಚ್ಚಿಸಲಾಗುವುದು.
ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ತಲಾ 1 ಸಾವಿರ ರೂಪಾಯಿಗೆ ಏರಿಸಲಾಗುವುದು. ರಾಜ್ಯದಲ್ಲಿ ತಡೆಗಟ್ಟಬಹುದಾದ ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಅಭಿಯಾನ ರೂಪದಲ್ಲಿ ಕ್ರಮ ಕೈಗೊಳ್ಳಲು 320 ಕೋಟಿ ರೂಪಾಯಿ ಒದಗಿಸಲಾಗಿದೆ.
ಬೆಂಗಳೂರು ಉತ್ತರ ತಾಲ್ಲೂಕಿನ ವ್ಯಾಪ್ತಿಯಲ್ಲಿ 200 ಹಾಸಿಗೆಯ ಅತ್ಯಾಧುನಿಕ ಮತ್ತು ಸುಸಜ್ಜಿತ ಆಸ್ಪತ್ರೆಯನ್ನು 150 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುವುದು. ರಾಜ್ಯದ ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗಾಗಿ 8 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ ಜಾರಿಗೊಳಿಸಲಾಗುವುದು.
ಎತ್ತಿನಹೊಳೆಯ ಯೋಜನೆಯಿಂದ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ 45 ಕೆರೆಗಳನ್ನು ಹಾಗೂ ಕೊರಟಗೆರೆ ತಾಲ್ಲೂಕಿನ 62 ಕೆರೆಗಳನ್ನು ತುಂಬಿಸಿ ಅಂತರ್ಜಲ ಹೆಚ್ಚಿಸುವ ಯೋಜನೆಯನ್ನು 553 ಕೋಟಿ ರೂಪಾಯಿ ಮೊತ್ತದಲ್ಲಿ ಅನುಷ್ಠಾನಗೊಳಿಸಲು ಕ್ರಮವಹಿಸಲಾಗುವುದು.
ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸೂಕ್ತ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಲು ಮಾರ್ಗದರ್ಶನವನ್ನು ಒದಗಿಸಲು ’ನನ್ನ ವೃತ್ತಿ, ನನ್ನ ಆಯ್ಕೆ’ ಕಾರ್ಯಕ್ರಮದಡಿ ಸರ್ಕಾರಿ ಶಾಲಾ/ಕಾಲೇಜುಗಳಲ್ಲಿನ 2.30 ಲಕ್ಷ ವಿದ್ಯಾರ್ಥಿಗಳಿಗೆ ವೃತ್ತಿಮಾರ್ಗದರ್ಶನ ನೀಡಲಾಗುವುದು. ಸೌರಶಕ್ತಿಯನ್ನು ಬಳಸಿ ಗ್ರಾಮ ಪಂಚಾಯಿತಿಗಳ ವಿದ್ಯುತ್ ಬಿಲ್ಲಿನ ಹೊರೆಯನ್ನು ತಗ್ಗಿಸಲು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸೋಲಾರ್ ಮೈಕ್ರೋ-ಗ್ರಿಡ್ಗಳನ್ನು ಸ್ಥಾಪಿಸಲಾಗುವುದು.
ಬೆಂಗಳೂರನ್ನು ಅಂತಾರಾಷ್ಟ್ರೀಯ ಆರೋಗ್ಯ ಮಾನದಂಡಗಳ ನಗರವನ್ನಾಗಿ ಮಾಡಲು, ಬ್ರ್ಯಾಂಡ್ ಬೆಂಗಳೂರು ಅಭಿಯಾನದ ಅಡಿಯಲ್ಲಿ ಮುಂದಿನ ಮೂರು ವರ್ಷಗಳಲ್ಲಿ 413 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರ ಆರೋಗ್ಯ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಮುಗಡಪತ್ರ ಭಾಷಣದಲ್ಲಿ ಘೋಷಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಮಹಿಳಾ ದಿನಾಚರಣೆ | ಸಾಧನೆಯ ಸುಗಂಧ, ಪ್ರೇರಣೆಯ ಬೆಳಕು

- ಡಾ. ವೆಂಕಟೇಶ ಬಾಬು ಎಸ್, ಸಹ ಪ್ರಾಧ್ಯಾಪಕರು, ದಾವಣಗೆರೆ
ಇಂದು ಮಹಿಳಾ ದಿನಾಚರಣೆ ಪ್ರಯುಕ್ತ ಎಲ್ಲಾ ಮಹಿಳೆಯರಿಗೆ ಶುಭಾಷಯಗಳು
ಪ್ರತಿಯೊಂದು ಮಹಿಳೆ ತನ್ನ ಜೀವನದಲ್ಲಿ ವಿವಿಧ ಹಂತಗಳನ್ನು ದಾಟುತ್ತಾ, ಆತ್ಮವಿಶ್ವಾಸ, ಪ್ರೇರಣೆ ಹಾಗೂ ಶಕ್ತಿ ಹೊಂದುವ ಪ್ರತಿರೂಪವಾಗಿರುತ್ತಾರೆ. ವಿಶ್ವ ಮಹಿಳಾ ದಿನವನ್ನು ಪ್ರತಿ ವರ್ಷ ಮಾರ್ಚ್ 8 ರಂದು ಆಚರಿಸಲಾಗುತ್ತದೆ, ಇದು ಮಹಿಳೆಯರ ಹಕ್ಕುಗಳು, ಸಾಧನೆಗಳು ಮತ್ತು ಅವರ ಜಗತ್ತಿನ ಮೇಲೆ ಬೀರಿದ ಪ್ರಭಾವವನ್ನು ಗೌರವಿಸುವ ಒಂದು ಅದ್ಭುತ ಅವಕಾಶ.
ಮಹಿಳೆಯರ ಬದುಕು ಕೇವಲ ಕುಟುಂಬದ ಕೇಂದ್ರದಲ್ಲಿಯೇ ಸೀಮಿತವಾಗಿಲ್ಲ; ಅವರು ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕ ಮತ್ತು ವೈಜ್ಞಾನಿಕ ಕ್ಷೇತ್ರಗಳಲ್ಲೂ ಮಹತ್ತರ ಪಾತ್ರ ವಹಿಸುತ್ತಿದ್ದಾರೆ. ಅಮ್ಮನಾಗಿ, ಪತ್ನಿಯಾಗಿ, ಮಗುವಾಗಿ, ಸಂಸ್ಥಾಪಕಿಯಾಗಿ, ನಾಯಕಿಯಾಗಿ, ವೈಜ್ಞಾನಿಕರಾಗಿ, ಕ್ರೀಡಾಪಟುವಾಗಿ – ಎಲ್ಲಾ ಪಾತ್ರಗಳಲ್ಲೂ ಮಹಿಳೆಯರು ತಮ್ಮ ಅದ್ಭುತ ಸಾಮರ್ಥ್ಯವನ್ನು ತೋರಿಸುತ್ತಿದ್ದಾರೆ.
ಈಗ ಮಹಿಳೆಯರು ತಮ್ಮ ಇಚ್ಛಾಶಕ್ತಿಯೊಂದಿಗೆ ಮತ್ತು ಶಿಕ್ಷಣದ ಹಾದಿಯ ಮೂಲಕ ಜೀವನವನ್ನು ರೂಪಿಸಿಕೊಳ್ಳುತ್ತಿದ್ದಾರೆ. ಇಂದು ಕಲ್ಪನಾ ಚಾವ್ಲಾ, ಮೇರೀ ಕೋಮ್, ಸುಧಾ ಮುರ್ತಿ, ಕಿರಣ್ ಮಜುಂದಾರ್ ಶಾ, ಫಾಲ್ಗುಣಿ ನಾಯರ್ ಮುಂತಾದ ಅನೇಕ ಮಹಿಳೆಯರು ತಮ್ಮ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡುತ್ತಿದ್ದಾರೆ.
ಮಹಿಳಾ ದಿನಾಚರಣೆ – ಇತಿಹಾಸ ಮತ್ತು ಹಿನ್ನೆಲೆ
ಮಹಿಳಾ ದಿನಾಚರಣೆ (International Women’s Day – IWD) ಪ್ರತಿ ವರ್ಷ ಮಾರ್ಚ್ 8 ರಂದು ಆಚರಿಸಲಾಗುತ್ತದೆ. ಇದು ಮಹಿಳೆಯರ ಹಕ್ಕುಗಳು, ಸಶಕ್ತೀಕರಣ, ಸಾಧನೆಗಳು ಮತ್ತು ಲಿಂಗ ಸಮಾನತೆಯ ಪ್ರಗತಿ ಕುರಿತು ಜಾಗೃತಿಯನ್ನು ಮೂಡಿಸುವ ಮಹತ್ವದ ದಿನ.
ಮಹಿಳಾ ದಿನಾಚರಣೆಯ ಇತಿಹಾಸ
ಮಹಿಳಾ ದಿನಾಚರಣೆಯ ಮೂಲವು 1900ರ ದಶಕದ ಪ್ರಾರಂಭದಲ್ಲಿ ಕೈಗೆತ್ತಿಕೊಳ್ಳಲಾದ ಮಹಿಳಾ ಹಕ್ಕುಗಳ ಹೋರಾಟಕ್ಕೆ ಸರಿಹೊಂದಿದೆ. ಈ ದಿನವನ್ನು ಆಚರಿಸಲು ಪ್ರೇರಣೆ ನೀಡಿದ ಪ್ರಮುಖ ಘಟನೆಗಳು ಹೀಗಿವೆ:
1. 1908 – ಮಹಿಳಾ ಹಕ್ಕುಗಳ ಹೋರಾಟ:
ಅಮೇರಿಕಾದ ನ್ಯೂಯಾರ್ಕ್ ನಗರದಲ್ಲಿ ಸಾವಿರಾರು ಮಹಿಳಾ ಕಾರ್ಮಿಕರು ಕಡಿಮೆ ಕೆಲಸದ ಘಂಟೆಗಳು, ಉತ್ತಮ ಸಂಬಳ ಮತ್ತು ಮತದಾನದ ಹಕ್ಕುಕ್ಕಾಗಿ ಪ್ರತಿಭಟನೆ ನಡೆಸಿದರು.
2. 1909 – ಮೊದಲ ಮಹಿಳಾ ದಿನಾಚರಣೆ:
ಫೆಬ್ರವರಿ 28, 1909 ರಂದು ಅಮೆರಿಕಾದ ಸೋಶಲಿಸ್ಟ್ ಪಾರ್ಟಿ ದೇಶದಾದ್ಯಂತ ಮಹಿಳಾ ದಿನವನ್ನು ಆಚರಿಸಿತು.
3. 1910 – ಅಂತಾರಾಷ್ಟ್ರೀಯ ಹೋರಾಟ:
ಡೆನ್ಮಾರ್ಕ್ನ ಕೊಪನ್ಹೇಗನ್ ನಲ್ಲಿ ನಡೆದ ಸೋಶಲಿಸ್ಟ್ ವುಮೆನ್ಸ್ ಕಾನ್ಫರೆನ್ಸ್ ನಲ್ಲಿ ಜರ್ಮನಿಯ ಕ್ಲಾರಾ ಜೆಟ್ಕಿನ್ ಅವರು ಪ್ರಪಂಚದಾದ್ಯಂತ ಮಹಿಳಾ ದಿನ ಆಚರಿಸುವ ಸಲಹೆ ನೀಡಿದರು.
4. 1911 – ಪ್ರಥಮ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ:
ಮೊದಲ ಬಾರಿ ಆಸ್ಟ್ರಿಯಾ, ಡೆನ್ಮಾರ್ಕ್, ಜರ್ಮನಿ ಮತ್ತು ಸ್ವಿಟ್ಜರ್ಲೆಂಡ್ ದೇಶಗಳಲ್ಲಿ ಮಹಿಳಾ ದಿನವನ್ನು ಮಾರ್ಚ್ 19ರಂದು ಆಚರಿಸಲಾಯಿತು.
5. 1913 – ಮಾರ್ಚ್ 8ಕ್ಕೆ ದಿನಾಂಕ ಬದಲಾವಣೆ:
1913ರಿಂದ ಮಾರ್ಚ್ 8ನೇ ತಾರೀಖನ್ನು ಅಧಿಕೃತವಾಗಿ ಮಹಿಳಾ ದಿನಾಚರಣೆಗೆ ಮೀಸಲಾಗಿಸಲಾಯಿತು.
6. 1975 – ವಿಶ್ವ ಮಹಿಳಾ ವರ್ಷ:
UNO1975ನೇ ವರ್ಷವನ್ನು “ಅಂತರಾಷ್ಟ್ರೀಯ ಮಹಿಳಾ ವರ್ಷ” ಎಂದು ಘೋಷಿಸಿ, ಮಹಿಳಾ ದಿನವನ್ನು ಅಧಿಕೃತವಾಗಿ ಅಂಗೀಕರಿಸಿತು
7. 2011 – 100ನೇ ವಾರ್ಷಿಕೋತ್ಸವ:
2011ರಲ್ಲಿ ಮಹಿಳಾ ದಿನಾಚರಣೆ ಶತಮಾನೋತ್ಸವವನ್ನು ಪೂರೈಸಿತು.
ಮಹಿಳಾ ದಿನಾಚರಣೆಯ ಉದ್ದೇಶ
ಮಹಿಳಾ ದಿನವನ್ನು ಆಚರಿಸುವ ಪ್ರಮುಖ ಉದ್ದೇಶಗಳು:
✔ ಮಹಿಳಾ ಸಮಾನತೆ ಮತ್ತು ಹಕ್ಕುಗಳನ್ನು ಬಲಪಡಿಸುವುದು.
✔ ಮಹಿಳೆಯರ ಸಾಧನೆಗಳನ್ನು ಗುರುತಿಸಿ, ಗೌರವ ನೀಡುವುದು.
✔ ಅವರ ಸಮಸ್ಯೆಗಳನ್ನು ಅರಿತು, ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದು.
✔ ಮಹಿಳಾ ಶಕ್ತಿ ಮತ್ತು ಸ್ವಾವಲಂಬನೆಯ ಕುರಿತು ಜಾಗೃತಿಯನ್ನು ಹರಡುವುದು.
ಮಹಿಳಾ ದಿನಾಚರಣೆ – ಇಂದಿನ ಪ್ರಸ್ತುತತೆ
ಇಂದಿನ ಹೊತ್ತಿನಲ್ಲಿ, ಮಹಿಳೆಯರು ಶಿಕ್ಷಣ, ಉದ್ಯಮ, ರಾಜಕೀಯ, ಕ್ರೀಡೆ, ವಿಜ್ಞಾನ, ತಂತ್ರಜ್ಞಾನ, ಸೇವಾ ಕ್ಷೇತ್ರ ಮತ್ತು ಉದ್ಯಮಶೀಲತೆ ಎಲ್ಲೆಲ್ಲಿಯೂ ತಮ್ಮ ಸಾಮರ್ಥ್ಯವನ್ನು ತೋರಿಸುತ್ತಿದ್ದಾರೆ. ಮಹಿಳಾ ದಿನವು “Gender Equality – ಲಿಂಗ ಸಮಾನತೆ”, “Break the Bias – ಲಿಂಗತಾತ್ವಿಕ ಭೇದಭಾವವನ್ನು ಕಳಚುವುದು”, “DigitALL: Innovation and technology for gender equality” ಮುಂತಾದ ವಿಶೇಷ ಥೀಮ್ಗಳೊಂದಿಗೆ ಪ್ರತಿವರ್ಷ ಜಾಗೃತಿಯನ್ನು ಮೂಡಿಸುತ್ತದೆ.
ಮಹಿಳೆಯರು ಬದುಕಿನ ಉತ್ಸಾಹ
ಮಹಿಳೆಯರು ತಮ್ಮ ಕುಟುಂಬ, ಸಮಾಜ ಮತ್ತು ದೇಶದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಅವರಲ್ಲಿರುವ ಹೃದಯಸ್ಪರ್ಶಿ ಭಾವನೆ, ತ್ಯಾಗ, ಶ್ರಮ ಹಾಗೂ ಪ್ರೀತಿ ಅವರ ಬದುಕಿನ ಹಾದಿಯನ್ನು ಮಾದರಿಯಾಗಿ ಮಾಡುತ್ತದೆ. ಶಿಕ್ಷಣ, ಉದ್ಯೋಗ, ರಾಜಕೀಯ, ಕಲೆ, ಕ್ರೀಡೆ, ವಿಜ್ಞಾನ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ತಮ್ಮ ಪ್ರತಿಭೆಯನ್ನು ತೋರಿಸುತ್ತಿದ್ದಾರೆ.
ಅನೇಕ ಮಹಿಳೆಯರು ಸಂಕಷ್ಟಗಳನ್ನು ಎದುರಿಸುತ್ತಾ, ಸಾಧನೆಗೆ ಹೊಸ ಪರಿಮಾಣ ನೀಡಿದ ಉದಾಹರಣೆಗಳಿವೆ. ಐದು ದಶಕಗಳ ಹಿಂದೆಯೂ ಮಹಿಳೆಯರು ಮನೆಯಲ್ಲಿ ಸೀಮಿತವಾಗಿದ್ದರೆ, ಇಂದು ಅವರು ಅಂತರಿಕ್ಷ ಯಾತ್ರೆ, ವ್ಯವಹಾರ ನಿರ್ವಹಣೆ, ಕಾನೂನು, ತಂತ್ರಜ್ಞಾನ, ಆಡಳಿತ ಮತ್ತು ರಾಜಕೀಯದಲ್ಲಿ ಮುಂಚೂಣಿಯಲ್ಲಿದ್ದಾರೆ.
ಸಾಧನೆಗಳ ಬೆಳಕು
1. ಶಿಕ್ಷಣ ಮತ್ತು ಸಶಕ್ತೀಕರಣ:
ಜಗತ್ತಿನ ಅನೇಕ ದೇಶಗಳಲ್ಲಿ ಈಗ ಮಹಿಳಿಯರಿಗೆ ಶಿಕ್ಷಣ ಹಕ್ಕುಗಳನ್ನು ಒದಗಿಸಲಾಗುತ್ತಿದೆ, ಇದರಿಂದ ಮಹಿಳೆಯರು ಸಮಾಜದ ಮುಖ್ಯಧಾರೆಯಲ್ಲಿರಲು ಸಾಧ್ಯವಾಗಿದೆ. ಭಾರತದಲ್ಲಿ ಸವಿತ್ರಿಬಾಯಿ ಫುಲೆ, ಇಂದಿರಾ ಗಾಂಧಿ, ಕಲ್ಪನಾ ಚಾವ್ಲಾ, ಮೇರೀ ಕೋಮ್ ಮುಂತಾದವರು ಮಹಿಳಾ ಶಿಕ್ಷಣ ಮತ್ತು ಸಶಕ್ತೀಕರಣದಲ್ಲಿ ಶ್ರೇಷ್ಠ ಸಾಧನೆ ಮಾಡಿದ್ದಾರೆ.
2. ಉದ್ಯೋಗ ಹಾಗೂ ಉದ್ಯಮಶೀಲತೆ:
ಈಗ ಮಹಿಳೆಯರು ಉದ್ಯೋಗ ಮಾತ್ರವಲ್ಲದೆ, ಸ್ವಂತ ಉದ್ಯಮಗಳನ್ನು ನಿರ್ಮಿಸಿ ಉದ್ಯಮಶೀಲತೆ ತೋರಿಸುತ್ತಿದ್ದಾರೆ. ಫಾಲ್ಗುಣಿ ನಾಯರ್ (ನೈಕಾ), ಕಿರಣ್ ಮಜುಂದಾರ್ ಶಾ (ಬಯೋಕಾನ್), ವಂದನಾ ಲೂತರ (ಪೇಪರ್ ಶೈರಿ) ಮುಂತಾದವರು ಉದ್ಯಮ ವಲಯದಲ್ಲಿ ತಮ್ಮ ಅಚ್ಚಳಿಯದ ಗುರುತು ಮೂಡಿಸಿದ್ದಾರೆ.
3. ಕ್ರೀಡೆ ಮತ್ತು ಸಾಹಸ:
ಕ್ರೀಡಾ ಕ್ಷೇತ್ರದಲ್ಲಿ ಮಹಿಳೆಯರು ಹೊಸ ದಾಖಲೆಗಳನ್ನು ನಿರ್ಮಿಸಿದ್ದಾರೆ. ಸೈನಾ ನೆಹ್ವಾಲ್, ಮೇರೀ ಕೋಮ್, ಪಿ.ವಿ. ಸಿಂಧು, ಮಿಥಾಲಿ ರಾಜ್ ಮುಂತಾದವರು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಹೆಮ್ಮೆ ಹೆಚ್ಚಿಸಿದ್ದಾರೆ.
4. ಸಮಾಜಸೇವೆ ಮತ್ತು ಪ್ರಭಾವ:
ಮಹಿಳೆಯರು ಕೇವಲ ತಮ್ಮ ವ್ಯಕ್ತಿಗತ ಜೀವನದಲ್ಲಷ್ಟೇ ಅಲ್ಲದೆ, ಸಮಾಜಸೇವೆಯಲ್ಲಿ ಕೂಡ ದೊಡ್ಡ ಕೊಡುಗೆ ನೀಡುತ್ತಿದ್ದಾರೆ. ಮದರ್ ತೆರೆಸಾ, ಸುಧಾ ಮುರ್ತಿ ಮುಂತಾದವರು ತಮ್ಮ ಸಮಾಜಮುಖಿ ಕಾರ್ಯಗಳಿಂದ ಲಕ್ಷಾಂತರ ಜನರಿಗೆ ಪ್ರೇರಣೆ ನೀಡಿದ್ದಾರೆ.
ಸಮಾಜದ ಹೊಣೆಗಾರಿಕೆ – ಮಹಿಳಾ ಸಮಾನತೆ ಮತ್ತು ಗೌರವ
ಮಹಿಳೆಯರನ್ನು ಗೌರವಿಸುವ, ಅವರ ಆತ್ಮವಿಶ್ವಾಸ ಹೆಚ್ಚಿಸುವ, ಅವರಿಗೆ ಸಮಾನ ಅವಕಾಶ ಒದಗಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಮಹಿಳಾ ಸುರಕ್ಷತೆ, ಸಂವೇದನಾಶೀಲತೆ ಮತ್ತು ಗೌರವ ಹೊಂದಿದ ಸಮಾಜವನ್ನು ನಿರ್ಮಿಸುವುದು ಅನಿವಾರ್ಯ.
ನಮ್ಮ ಕರ್ತವ್ಯ – ಮಹಿಳಾ ಶಕ್ತಿಗೆ ಸಾಥ್
ಈ ಮಹಿಳಾ ದಿನಾಚರಣೆ ದಿನದಂದು ನಾವು ನಮ್ಮ ಜೀವನದಲ್ಲಿ ಶಕ್ತಿ, ಪ್ರೇರಣೆ, ಪ್ರೀತಿಯ ಬೆಳಕು ತುಂಬುವ ಮಹಿಳೆಯರಿಗೆ ಕೃತಜ್ಞತೆ ಸಲ್ಲಿಸೋಣ. ಅವರ ಸಾಧನೆಗಳನ್ನು ಗೌರವಿಸೋಣ ಮತ್ತು ಹೊಸ ತಲೆಮಾರಿನ ಮಹಿಳೆಯರಿಗೆ ಇನ್ನಷ್ಟು ಉತ್ಸಾಹ, ಶಿಕ್ಷಣ ಮತ್ತು ಅವಕಾಶಗಳನ್ನು ಒದಗಿಸುವ ಮೂಲಕ ಅವರನ್ನು ಸಶಕ್ತಗೊಳಿಸೋಣ.
“ಮಹಿಳೆಯರ ಪ್ರಗತಿ – ರಾಷ್ಟ್ರದ ಪ್ರಗತಿ!”(ಲೇಖನ-ಡಾ. ವೆಂಕಟೇಶ ಬಾಬು ಎಸ್,ಸಹ ಪ್ರಾಧ್ಯಾಪಕರು, ದಾವಣಗೆರೆ)
ಸುದ್ದಿದಿನ.ಕಾಂ|ವಾಟ್ಸಾಪ್|9980346243
