Connect with us

ನಿತ್ಯ ಭವಿಷ್ಯ

ಹೋಮ- ಹವನಗಳ ಮಹತ್ವ

Published

on

ಶಿರಡಿ ಸಾಯಿಬಾಬಾ ಜ್ಯೋತಿಷ್ಯಾಲಯ ಗುರೂಜಿ ಗುರುರಾಜ ದೀಕ್ಷಿತ್ : 9036933032

ಹೋಮ- ಹವನಗಳ ಮಹತ್ವ…
ವೇದವೆಂದರೆ ಜ್ಞಾನ. ವೇದಗಳನ್ನು ನಮ್ಮ ಸಂಸ್ಕೃತಿಯ ಆಧಾರವೆಂದು ಪರಿಗಣಿಸಿದವರು ನಾವು.

ನಮ್ಮ ಆಚರಣೆ-ವಿಚಾರದಲ್ಲಿ ಏನಾದರೂ ಅನುಮಾನ ಬಂದರೆ “ವೇದವಾಕ್ಯಂ ಪ್ರಮಾಣಂ”ಎಂದು ಒಪ್ಪಿ ಕೊಳ್ಳುವವರು. ವೇದವಾಕ್ಯವೆಂದರೆ ಅದು ಸರ್ವೋಚ್ಛ ನ್ಯಾಯಾಲಯದ ತೀರ್ಪು. ಅದನ್ನು ಪ್ರಶ್ನಿಸುವ ಅಧಿಕಾರ ಯಾರಿಗೂ ಇಲ್ಲ.

ವೇದಗಳು ಹೋಮ-ಹವನಗಳ ಮಹತ್ವವನ್ನು ಹೀಗೆ ತಿಳಿಸುತ್ತವೆ.

*”ಅಗ್ನಿಮೀಳೆ ಪುರೋಹಿತಂ ಯಜ್ಞಸ್ಯ ದೇವಮೃತ್ವಿಜಂ ಹೋತಾರಂ ರತ್ನಧಾತಮಮ್”* *”ಯಜ್ಞೋ ಹಿ ಶ್ರೇಷ್ಟತಮಂ ಕರ್ಮ”* *”ಅಗ್ನಿಂ ದೂತಂ ಪುರೋ ದಧೇ ಹವ್ಯವಾಹಮುಪ ಬ್ರುಹೇ”* *”ಪ್ರಾತಃ ಪ್ರಾತಃ ಗೃಹಪತಿರ್ನೋ ಅಗ್ನಿಃ, ಸಾಯಂ ಸಾಯಂ ಸೌಮನಸ್ಯ ದಾತಾ,”* *”ತಂ ಯಜ್ಞಂ ಬರ್ಹಿಷಿಃ ಪ್ರೌಕ್ಷನ್ ಪುರುಷಂ ಜಾತಮಗ್ರತಃ”* ನೆನಪಿಡಿ.

ಇವು ಕೇವಲ ಉದಾಹರಣೆಗಳು. ಹುಡುಕುತ್ತಾ ಹೋದರೆ ನಮ್ಮ ವೇದಗಳಲ್ಲಿ ಇಂತಹ ಸಾವಿರಾರು ಯಜ್ಞಕ್ಕೆ ಸಂಬಂಧಿಸಿದ ಉದಾಹರಣೆಗಳು ಸಿಗ ಬಹುದು.

“ಈ ಪ್ರಪಂಚವನ್ನು ಸೃಷ್ಟಿಸಿ ಭಗವಂತ ಯಜ್ಞವನ್ನು ಪ್ರಾರಂಭಿಸಿದನಂತೆ, ಹಾಗೇ ನಾನೂ ಸಹ ಯಜ್ಞ ಮಾಡುತ್ತೇನೆ”. “ಈ ಯಜ್ಞಗಳಿಂದ ಸಂಪತ್ತು ಸಿಗುತ್ತದೆ.

ಹಾಗಾಗಿ ಯಜ್ಞಗಳನ್ನು ತಪ್ಪದೇ ಮಾಡು”. “ನಾನು ಯಜ್ಞಕುಂಡದಲ್ಲಿ ನನ್ನೆಲ್ಲಾ ಪಾಪ-ದುಃಖಗಳನ್ನು ಸಮರ್ಪಿಸುತ್ತಿದ್ದೇನೆ”. “ಈ ಅಗ್ನಿಯ ಜ್ವಾಲೆಯಂತೇ ನನ್ನ ಯಶಸ್ಸು ಉನ್ನತ ಸ್ಥಾನಕ್ಕೇರುತ್ತಿರಲಿ,” “ಹೇ ಅಗ್ನಿ ! ಜಗತ್ತಿನಲ್ಲಿರುವ ಎಲ್ಲಾ ರೋಗಗಳನ್ನು ನಿವಾರಿಸು” ಹೀಗೆ ಯಜ್ಞ-ಅಗ್ನಿಗಳನ್ನು ಪ್ರಾರ್ಥಿಸಿ ಕೊಳ್ಳುವ ಅನೇಕ ಉದಾಹರಣೆಗಳು ವೇದಗಳಲ್ಲಿವೆ.

ಆದ್ದರಿಂದ ಜನ್ಮದಿನ, ವ್ಯವಹಾರ ಪ್ರಾರಂಭೋತ್ಸವ, ಮದುವೆ, ಮುಂಜಿ, ದುಃಖದಲ್ಲಿ, ಖುಷಿಯಲ್ಲಿ ಆಜೀವ ಪರ್ಯಂತ ಹೋಮವನ್ನು ಆಚರಿಸುತ್ತಲೇ ಇರುತ್ತೇವೆ. ಯಜ್ಞವನ್ನು ಮಾಡುವುದರಿಂದ ಭಗವಂತನ ಸನ್ನಿಧಿ ಪ್ರಾಪ್ತಿಯಾಗುತ್ತದೆ. ಪಾಪಕರ್ಮಗಳು ದೂರವಾಗುತ್ತವೆ ಎಂದು ನಂಬಿದ್ದೇವೆ.

ಹೋಮ ಮಾಡುವಾಗಿನ ಭಕ್ತಿ, ಶ್ರದ್ಧೆಗಳಿಂದ ಮನುಷ್ಯನ ಮನಸ್ಸು ಶಾಂತವಾಗುತ್ತದೆ. ಪರಮಾತ್ಮನಲ್ಲಿ ವಿಲೀನಗೊಳ್ಳುತ್ತದೆ. ಈ ಮನಶ್ಶಾಂತಿ ಮನಸ್ಸಿನ ಅನೇಕ ಒತ್ತಡಗಳನ್ನು ಕಡಿಮೆ ಮಾಡುತ್ತದೆ.

ಈ ನಂಬಿಕೆಗಳಿಗೆ ವೇದಗಳು ಪುಷ್ಟೀಕರಣ ನೀಡಿವೆ. ವೇದವಾಕ್ಯವನ್ನು ಪಾಲಿಸುವುದು ನಮ್ಮ ಕರ್ತವ್ಯ. ಕೇವಲ ಹೋಮ ಮಾಡಿಸಿದ ಯಜಮಾನನಿಗಷ್ಟೇ ಹೋಮದ ಫಲ ಸಿಗುವುದಿಲ್ಲ. ಪ್ರಕೃತಿಗೂ ಹೋಮದ ಫಲ ಸಿಗುತ್ತದೆ. ಹೇಗೆಂದು ಕೇಳುತ್ತೀರ?

ಹವನದಲ್ಲಿ ಉಪಯೋಗಿಸುವ ಸಾಮಗ್ರಿಗಳು (ಇವು ಶುದ್ಧವಾಗಿ, ಪ್ರಕೃತಿದತ್ತವಾಗಿರ ಬೇಕು) ಅಗ್ನಿಯಲ್ಲಿ ಆಹುತಿ ಬಿದ್ದು ಅದರಿಂದ ಬರುವ ಧೂಮ (ಹೊಗೆ) ಸರ್ವತ್ರ ವ್ಯಾಪಕವಾಗುತ್ತದೆ. ಈ ಧೂಮದಲ್ಲಿ ಅನೇಕ ಔಷಧೀಯ ಗುಣಗಳಿರುತ್ತವೆ. ಪ್ರಕೃತಿಯಲ್ಲಿರುವ ರೋಗವನ್ನು ಹಬ್ಬಿಸುವ ವಿಷಾಣುಗಳನ್ನು ಇವು ನಾಶ ಪಡಿಸುತ್ತವೆ. ಇದು ವೈಜ್ಞಾನಿಕ ಸಂಶೋಧನೆಗಳಿಂದ ಸಾಬೀತು ಪಟ್ಟಿದೆ.

ವಿಶ್ವ ಸ್ವಾಸ್ಥ್ಯ ಸಂಘಟನೆಯ (WHO) ಪ್ರಕಾರ ಪ್ರತಿವರ್ಷ ವಿಶ್ವದಲ್ಲಿ ಸಂಭವಿಸುವ ೫೭ ಮಿಲಿಯನ್ ಸಾವುಗಳಲ್ಲಿ ಶೇಕಡ ೨೫ ಸಾವುಗಳಿಗೆ ಇಂತಹ ಬ್ಯಾಕ್ಟೀರಿಯಾಗಳೇ ಕಾರಣ. ಒಂದು ವಿಷಯ ನೆನಪಿಡಿ.

ಹೋಮದಲ್ಲಿ ಬಳಸುವ ಪ್ರತಿವಸ್ತುವೂ ಪರಿಶುದ್ಧ ಹಾಗೂ ಪ್ರಾಕೃತಿಕವಾಗಿರ ಬೇಕು. ಯಾವುದೇ ರಾಸಾಯನಿಕ ಪದಾರ್ಥಗಳನ್ನು ಬಳಸಿರ ಬಾರದು. ಆಗಲೇ ಹೋಮದ ಪರಿಣಾಮ ಚೆನ್ನಾಗಿರುತ್ತದೆ. ಹೋಮ-ಹವನಗಳಿಂದ ಅನೇಕ ರೋಗರುಜಿನಗಳೂ ನಿಯಂತ್ರಣಕ್ಕೆ ಬರುತ್ತವೆ ಎಂದು ವೈಜ್ಞಾನಿಕ ಸಂಶೋಧನೆಗಳು ಸಾಬೀತು ಪಡಿಸಿವೆ.

೧. ಶೀತ ಹಾಗೂ ತಲೆನೋವು
೨. ಟಿ.ಬಿ (ಕ್ಷಯರೋಗ)
೩. ಮಾನಸಿಕ ಒತ್ತಡ ಹಾಗೂ ಖಿನ್ನತೆ
೪. ಚರ್ಮ ಸಂಬಂಧಿ ಕಾಯಿಲೆಗಳು
೫. ಮೂತ್ರ ಸಂಬಂಧಿ ರೋಗಗಳು
೬. ಶ್ವಾಸ ಸಂಬಂಧಿ ರೋಗಗಳು, ಅಸ್ತಮಾ ಇತರೆ

೭. ಕೆಲವು ಅಲರ್ಜಿ ಸಮಸ್ಯೆಗಳು ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ಇನ್ನೂ ಒಂದು ಅಚ್ಚರಿಯೇನೆಂದರೆ ಸುಮಾರು ನೂರಕ್ಕೂ ಹೆಚ್ಚಿನ ರೋಗಗಳನ್ನು “ಯಜ್ಞ ಥೆರಪಿ” ಎಂಬ ವೈದ್ಯಕೀಯ ವಿಧಾನದಿಂದ ಗುಣ ಪಡಿಸ ಬಹುದೆಂದು ವೈಜ್ಞಾನಿಕ ಸಂಶೋಧನೆಗಳು ತಿಳಿಸಿವೆ. “ಯಜ್ಞ ಥೆರಪಿ” ಎಂಬ ಹೊಸ ವಿಧಾನ ಪಾಶ್ಚಾತ್ಯ ದೇಶಗಳಲ್ಲಿ ಬೆಳೆಯುತ್ತಿದೆ. ಭಾರತೀಯರಾದ ನಾವು ಹೆಮ್ಮೆ ಪಡುವಂತಹ ವಿಷಯವಿದು. ಇಂತಹ ಚಮತ್ಕಾರಕ, ರೋಗನಾಶಕ, ಬಲವರ್ಧಕ ಅನ್ವೇಷಣೆ ನಮ್ಮ ಪೂರ್ವಜರದ್ದು. ಹೋಮ-ಹವನಗಳನ್ನು ಪ್ರತಿಪಾದಿಸಿದ್ದು ನಮ್ಮ ವೇದಗಳು. ಈ ಸಂಸ್ಕೃತಿಯನ್ನು ಉಳಿಸಿ, ಬೆಳೆಸಿ ಕೊಂಡು ಹೋಗ ಬೇಕಾದದ್ದು ನಮ್ಮ ಪರಮ ಕರ್ತವ್ಯ.

ಯಜ್ಞ-ಹೋಮಗಳು ಪುರೋಹಿತರು ಉದರ ಪೋಷಣೆಗಾಗಿ ಮಾಡಿ ಕೊಂಡಿದ್ದು ಎಂಬ ಮನೋಭಾವ ಬದಲಾಗಲಿ.

ನಮ್ಮ ಸಂಸ್ಕೃತಿ, ಆಚರಣೆಯ ಬಗ್ಗೆ ಅಭಿಮಾನವಿರಲಿ. ನಮ್ಮ ಸನಾತನ ಆಚರಣೆಗಳನ್ನು ಪರಿಪಾಲಿಸುವ, ಪೋಷಿಸುವ ಕಾಯಕ ನಮ್ಮದಾಗಲಿ.

ಹಿಂದೂ ಪುರಾಣಗಳ ಪ್ರಕಾರ ಯಾವ ಹೋಮ-ಹವನಗಳನ್ನು ಮಾಡಿದರೆ ಯಾವ ಫಲಗಳು ಸಿಗುತ್ತವೆ ಅಂತ ತಿಳ್ಕೊಳ್ಳಿ..!!

ಹಿಂದಿನಿಂದಲೂ ವೇದಗಳನ್ನು ನಮ್ಮ ಸಂಸ್ಕೃತಿಯ ಆಧಾರವೆಂದು ಪರಿಗಣಿಸಿದವರು ನಾವು. ವೇದಗಳ ಪ್ರಕಾರ ಹೋಮ ಹವನ ಶುದ್ಧಿಗೊಳಿಸಲಾದ ಅಗ್ನಿಯಲ್ಲಿ ಅರ್ಪಣೆಗಳನ್ನು ಮಾಡುವುದು ಪ್ರಮುಖ ಕ್ರಿಯೆ. ಪ್ರಾಚೀನ ಕಾಲದಲ್ಲಿ ಋಷಿಗಳಿಂದ ಅದರ ಆಚರಣೆ ಮಾಡುತ್ತಾ ಬರಲಾಗುತ್ತಿದೆ. ಈಗ ಹೋಮ-ಹವನ ಶಬ್ದಗಳನ್ನು ಯಜ್ಞ ಮತ್ತು ಅಗ್ನಿಹೋತ್ರ ಶಬ್ದಗಳಿಂದ ಅದಲುಬದಲು ಮಾಡಬಹುದು.

ಹೀಗೆ ಹೋಮ ಹವನವನ್ನು ಮಾಡುವುದರಿಂದ ಭಗವಂತನ ಸನ್ನಿಧಿ ಪ್ರಾಪ್ತಿಯಾಗುತ್ತದೆ. ಪಾಪಕರ್ಮಗಳು ದೂರವಾಗುತ್ತವೆ ಎಂದು ನಂಬಿದ್ದೇವೆ. ಹೋಮ ಮಾಡುವಾಗಿನ ಭಕ್ತಿ, ಶ್ರದ್ಧೆಗಳಿಂದ ಮನುಷ್ಯನ ಮನಸ್ಸು ಶಾಂತವಾಗುತ್ತದೆ. ಪರಮಾತ್ಮನಲ್ಲಿ ವಿಲೀನಗೊಳ್ಳುತ್ತದೆ. ಈ ಮನಶ್ಶಾಂತಿ ಮನಸ್ಸಿನ ಅನೇಕ ಒತ್ತಡಗಳನ್ನು ಕಡಿಮೆ ಮಾಡುತ್ತದೆ. ಅಷ್ಟೇ ಅಲ್ಲದೆ ಹೋಮ ಹವನಗಳನ್ನು ಮಾಡಿಸುವುದರಿಂದ ಕೇವಲ ಹೋಮ ಮಾಡಿಸಿದ ಯಜಮಾನನಿಗಷ್ಟೇ ಅದರ ಫಲ ಸಿಗುವುದಿಲ್ಲ. ಪ್ರಕೃತಿಗೂ ಹೋಮದ ಫಲ ಸಿಗುತ್ತದೆ.

ಹಾಗಾದರೆ ಯಾವ ಫಲಕ್ಕೆ ಯಾವ ಹೋಮವನ್ನು ಮಾಡಿಸಬೇಕು ಅಂತ ತಿಳಿಯೋಣ ಬನ್ನಿ:
ಎಲ್ಲಾ ಕಷ್ಟಗಳನ್ನು ಮತ್ತು ಕಾರ್ಯದಲ್ಲಿ ಬರುತ್ತಿರುವ ವಿಘ್ನಗಳನ್ನು ನಿವಾರಣೆಗೊಳಿಸಲು.
ಗಣಹೋಮ

ಗಣಪತಿ ಅನುಗ್ರಹ ಪ್ರಾಪ್ತಿಗಾಗಿ.
ವಲ್ಲಭ ಗಣಪತಿ ಹೋಮ

ಗಣಪತಿ ಅನುಗ್ರಹ ಪ್ರಾಪ್ತಿಗಾಗಿ.
ಶ್ರೀ ಶಕ್ತಿ ಗಣಪತಿ ಹೋಮ

ಶೀಘ್ರ ವಿವಾಹ ಪ್ರಾಪ್ತಿಗಾಗಿ (ಜಾತಕದಲ್ಲಿ ಸೂಚಿಸಿದಂತೆ, ವಿವಾಹವಾಗುವಲ್ಲಿ ಬರುವ ವಿಘ್ನನಿವಾರಣೆಗೆ ಆಚರಿಸಬೇಕು.)
ಹರಿದ್ರಾ ಗಣಪತಿ ಹೋಮ
ಬಾಲ ಗಣಪತಿ ಹೋಮ
ತ್ರೈಲೋಕ್ಯ ಮೋಹನ ಗಣಪತಿ ಹೋಮ

ಲಕ್ಷ್ಮಿ ಪ್ರಾಪ್ತಿಗಾಗಿ ಆಚರಿಸಬೇಕು.
ಲಕ್ಷ್ಮೀಗಣಪತಿ ಹೋಮ

ಮನಸ್ಸಿನ ಎಲ್ಲಾ ಕಾಮನೆಗಳನ್ನು ಪಡೆಯಲು ಈ ಹೋಮ ಮಾಡಬೇಕು.
ಚಿಂತಾಮಣಿ ಗಣಪತಿ ಹೋಮ

ವಿದ್ಯಾ ಪ್ರಾಪ್ತಿಗಾಗಿ (ಜಾತಕದ ಸೂಚನೆಯಂತೆ ಆಚರಿಸಬೇಕು.)
ಮೇಧಾ ಗಣಪತಿ ಹೋಮ
ಬುದ್ಧಿ ಗಣಪತಿ ಹೋಮ
ಸಿದ್ಧಿ ಗಣಪತಿ ಹೋಮ
ಅಷ್ಟ ದ್ರವ್ಯ ಗಣಹೋಮ

ಸಂತಾನ ಅಪೇಕ್ಷಿತರು
ಸಂತಾನ ಗೋಪಾಲ ಕೃಷ್ಣ ಮಂತ್ರ ಜಪ ಸಹಿತ ಹವನ ಸಹಿತ ಸರ್ಪ ಶಾಂತಿ ಹವನ

ಸಾಲದ ಬಾಧೆ ನಿವಾರಣೆಗೆ (ಗುರುಗಳ ಆದೇಶದಂತೆ ಆಚರಿಸಬೇಕು.)
ಋಣ ಹರಣ ಗಣಪತಿ ಹೋಮ
ಕ್ಷಿಪ್ರ ಗಣಪತಿ ಹೋಮ
ಸ್ವರ್ಣ ಗಣಪತಿ ಹೋಮ
ಸಂಕಟಹರ ಗಣಪತಿ ಹೋಮ

ಮಾಡುತ್ತಿರುವ ಕಾರ್ಯದಲ್ಲಿ ವಿಘ್ನ ಬರದಿರಲೆಂದು ಈ ಹೋಮವನ್ನು ಆಚರಿಸಬೇಕು
ವಿನಾಯಕ ಶಾಂತಿ

ಗ್ರಹ ಬಾಧೆಯಿಂದ ಜೀವನದಲ್ಲಿ ಬರುವ ರೋಗ ಪೀಡಾ ಪರಿಹಾರಕ್ಕಾಗಿ ಮತ್ತು ಅಕಾಲ ಮೃತ್ಯು ನಿವಾರಣೆಗಾಗಿ ಮಾಡಬೇಕಾದ ಹೋಮಗಳು
ಮಹಾ ಮ್ರತ್ಯುಂಜಯ ಹೋಮ
ಅಮೃತ ಮ್ರತ್ಯುಂಜಯ ಹೋಮ
ಅಭಯಾಯುಷ್ಯ ಹೋಮ
ಉಗ್ರ ನರಸಿಂಹ ಹೋಮ
ದೂರ್ವಾ ಮೃತ್ಯುಂಜಯ ಹೋಮ
ಆಯುಷ್ಯ(ಚರು)ಹೋಮ

ಮಹಾಲಕ್ಷ್ಮಿ ಅನುಗ್ರಹ ಪ್ರಾಪ್ತಿ ಮತ್ತು ಉದ್ಯೋಗ, ವ್ಯವಹಾರ ಜಯ ಪ್ರಾಪ್ತಿಗಾಗಿ .
ಶ್ರೀಸೂಕ್ತ ಹೋಮ
ಲಕ್ಷ್ಮೀ ಹೋಮ(ಕಮಲದ ಹೂವಿನಿಂದ)
ಲಕ್ಷ್ಮಿ ನೃಸಿಂಹ ಹೋಮ
ಲಕ್ಷ್ಮಿ ನಾರಾಯಣ ಹೃದಯ ಹೋಮ
ಕುಬೇರ ಲಕ್ಷ್ಮೀ ಹೋಮ
ಚಂಡಿಕಾ ಹೋಮ(ನವ,ಶತ,ಸಹಸ್ರ)

ರೋಗ ನಿವಾರಣೆಗಾಗಿ ಮಾಡಬೇಕಾದ ಹೋಮಗಳು (ಜಾತಕದಲ್ಲಿ ಸೂಚಿಸಿದಂತೆ ರೋಗಕ್ಕೆ ಅನುಸಾರವಾಗಿ ಮಾಡಬೇಕು)
ಧನ್ವಂತರಿ ಹವನ ಸಹಿತ ಮೃತ್ಯು ಸಂಜೀವಿನಿ ಮಹಾ ಮಂತ್ರ ಹವನ
ಅಪಸ್ಮಾರ ದಕ್ಷಿಣಾಮೂರ್ತಿ ಹೋಮ
ನವಗ್ರಹ ಹೋಮ(ಪ್ರತ್ಯೇಕ ಗ್ರಹಶಾಂತಿ)
ಸುಬ್ರಹ್ಮಣ್ಯ ಹೋಮ

ಸ್ತ್ರೀ ಮತ್ತು ಪುರುಷರ ವಿವಾಹಕ್ಕೆ ಬರುತ್ತಿರುವ ಅಡ್ಡಿ, ಆತಂಕಗಳ ನಿವಾರಣೆಯಾಗಿ ಶೀಘ್ರ ವಿವಾಹ ಪ್ರಾಪ್ತಿಯಾಗಲು ಮಾಡಬೇಕಾದ ಹೋಮ
ಉಗ್ರ ನೃಸಿಂಹ ಹೋಮ(೨೮ ಸಾವಿರ ಜಪ ಮಾಡಬೇಕು)
ಸ್ವಯಂವರ ಪಾರ್ವತಿ ಹೋಮ(೧೦ ಸಾವಿರ ಜಪ ಮಾಡಬೇಕು)
ಬಾಣೇಶಿ ಹೋಮ(೧೦ ಸಾವಿರ ಜಪ ಮಾಡಬೇಕು)
ಅಶ್ವಾರೂಢ ಪಾರ್ವತಿ ಹೋಮ(೧೦ ಸಾವಿರ ಜಪ ಮತ್ತು ಹೋಮ ಮಾಡಬೇಕು)

ಜನ್ಮಾಂತರದಲ್ಲಿ ಮಾಡಿದ ಪಾಪಕರ್ಮದ ಫಲವಾಗಿ ಮಕ್ಕಳು ಆಗದೆ ಇದ್ದಾಗ ಮಾಡಬೇಕಾದ ಹೋಮಗಳು
ಸಂತಾನ ಗೋಪಾಲಕೃಷ್ಣ ಹೋಮ
ನಾಗರಾಜ ಮಂತ್ರ ಹೋಮ
ಪುರುಷ ಸೂಕ್ತ ಹೋಮ
ಶ್ರೀ ವಿದ್ಯಾ ಹೋಮ
ಶ್ರೀ ರುದ್ರ ಹೋಮ(ಲಘು ರುದ್ರ,ಶತ ರುದ್ರ,ಮಹಾ ರುದ್ರ,ಅತಿ ರುದ್ರ) ಜಾತಕವನ್ನು ಪರಿಶೀಲಿಸಿ ಯೋಗ್ಯ ಸಲಹೆ ಪಡೆದು ಆಚರಿಸಬೇಕು.

ಕಳೆದು ಹೋದ ವಸ್ತು ಪ್ರಾಪ್ತಿಗಾಗಿ ಈ ಹೋಮವನ್ನು ಮಾಡಬೇಕು.
ಕಾರ್ತವೀರ್ಯಾರ್ಜುನ ಜಪ ಹೋಮ..

ಲೋಕಾಃ ಸಮಸ್ತಾಃ ಸುಖಿನೋ ಭವಂತು..
ಕೃಷ್ಣಾರ್ಪಣಮಸ್ತು

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending