Connect with us

ಸಿನಿ ಸುದ್ದಿ

ಹಾಲಿವುಡ್ ನಟಿ ‘ಲುಪಿತಾ’ಅಂತರಂಗದ ಮಾತುಗಳು : ಮಿಸ್ ಮಾಡ್ದೆ ಓದಿ ; ಅಭಿಪ್ರಾಯ ತಿಳಿಸಿ

Published

on

  • ಹಾಲಿವುಡ್ ನಟಿ ಲುಪಿತಾ ನ್ಯೋಂಗೊಗೆ ಮೊನ್ನೆ ಆಸ್ಕರ್ ಪ್ರಶಸ್ತಿ ಲಭಿಸಿದೆ. ಸ್ಟೀವ್ ಮಕೀನ್ ನಿರ್ದೇಶನದ “12 Years a Slave ಚಿತ್ರದಲ್ಲಿ ಪಾಟ್ಸಿ ಪಾತ್ರದಲ್ಲಿ ಅತ್ಯದ್ಭುತವಾಗಿ ನಟಿಸಿದ ಈಕೆಗೆ ’ಅತ್ಯುತ್ತಮ ಪೋಷಕನಟಿ’ ಪ್ರಶಸ್ತಿ ಲಭಿಸಿದೆ. ಈ ಕೀನ್ಯಾ ಮೂಲದ ಪೋಷಕರನ್ನು ಹೊಂದಿರುವ ಮೆಕ್ಸಿಕನ್ ಕಪ್ಪು ವರ್ಣದ ತಾರೆಗೆ ಆಸ್ಕರ್ ಪ್ರಶಸ್ತಿ ಲಭಿಸುವ ಮುನ್ನ ‘ಎಸೆನ್ಸ್ ಮ್ಯಾಗಜೀನ್’ ಎಂಬ ಪ್ರಸಿದ್ಧ ಸಿನಿಮಾ ಪತ್ರಿಕೆ ’ಬ್ಲಾಕ್ ವಿಮೆನ್ ಇನ್ ಹಾಲಿವುಡ್’ ಪ್ರಶಸ್ತಿಯನ್ನು ನೀಡಿ ಗೌರವಿಸಿತು. ಆ ಪ್ರಶಸ್ತಿ ಆಕೆ ಸ್ವೀಕರಿಸುವಾಗ ಮಾಡಿದ ಭಾಷಣದಲ್ಲಿ ತನ್ನ ಅಂತರಂಗದ ಸೌಂದರ್ಯವನ್ನು ಬಿಚ್ಚಿಟ್ಟಳು. ಅವಳಾಡಿದ ಮಾತುಗಳನ್ನು ಅನುವಾದಿಸಿ ಬರಹ ರೂಪದಲ್ಲಿರಿಸಿದ್ದೇನೆ.

-ಅನುವಾದ ಮತ್ತು ಬರಹ ರೂಪ : ಹರ್ಷಕುಮಾರ್ ಕುಗ್ವೆ

“ಹುಡುಗಿಯೊಬ್ಬಳು ನನಗೆ ಬರೆದಿದ್ದ ಪತ್ರದ ಒಂದೆರಡು ಸಾಲುಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತೇನೆ. ‘ಪ್ರಿಯ ಲುಪೀಟಾ, ರಾತ್ರೋ ರಾತ್ತಿ ಹಾಲಿವುಡ್‌ನಲ್ಲಿ ಯಶಸ್ಸು ಕಂಡ ನೀನು ಇಷ್ಟು ಕಪ್ಪಗಿರಲಿಕ್ಕೆ ನಿಜಕ್ಕೂ ಅದೃಷ್ಟ ಮಾಡಿದ್ದೆ ಅನ್ನಿಸುತ್ತ್ತಿದೆ. ನಾನು ನನ್ನ ಚರ್ಮವನ್ನು ಬೆಳ್ಳಗಾಗಿಸಲು ಫೇರ್‌ನೆಸ್ ಕ್ರೀಮ್ ಒಂದನ್ನು ಕೊಳ್ಳುವುದರಲ್ಲಿದ್ದೆ. ಅಷ್ಟರಲ್ಲಿ ನೀನು ಪ್ರಪಂಚದ ಭೂಪಟದಲ್ಲಿ ಕಾಣಿಸಿಕೊಂಡು ನನ್ನನ್ನು ಉಳಿಸಿದೆ”.

ಆ ಹುಡುಗಿ ಬರೆದ ಪತ್ರದ ಈ ಸಾಲುಗಳನ್ನು ಓದಿದ ನನ್ನ ಹೃದಯದಿಂದ ಕೊಂಚ ರಕ್ತ ಒಸರಿದಂತಾಯಿತು. ಶಾಲೆಯಿಂದ ಹೊರಬಿದ್ದೊಡನೆ ನಾನು ಆರಿಸಿಕೊಂಡ ಕೆಲಸ ನನ್ನನ್ನು ಈ ಮಟ್ಟಕ್ಕೆ ಪ್ರಭಾವಿಯನ್ನಾಗಿ ಮಾಡುತ್ತದೆ ಎಂಬ ಕಲ್ಪನೆಯೂ ನನಗಿರಲಿಲ್ಲ. ‘ಕಲರ್ ಪರ್ಪಲ್’ನ ಆ ಮಹಿಳೆಯರು ನನ್ನ ಪಾಲಿಗೆ ಹೇಗೆ ಆಶಾಭಾವನೆ ತುಂಬಿದ್ದರೋ ಅದೇ ರೀತಿಯಲ್ಲಿ ನಾನೂ ಇತರರಿಗೆ ಸ್ಪೂರ್ತಿಯಾಗಿ ನಿಲ್ಲುವ ದೃಶ್ಯವನ್ನು ನಾನು ಕಲ್ಪಸಿಕೊಂಡೂ ಇರಲಿಲ್ಲ. ’ನಾನು ಸುಂದರವಾಗಿಲ್ಲ; ಕಪ್ಪಾಗಿದ್ದೇನೆ ಎಂದು ನನಗೆ ನಾನೇ ಪದೇಪದೇ ಹೇಳಿಕೊಳ್ಳುತ್ತಿದ್ದ ದಿನಗಳು ನನಗೆ ನೆನಪಾಗುತ್ತವೆ. ಟಿ.ವಿ ಆನ್ ಮಾಡಿದರೆ ಸಾಕು ಬರೀ ಬಿಳಿಮುಖಗಳನ್ನು ನೋಡುತ್ತಿದ್ದೆ. ನನ್ನ ನಿಶಾವರ್ಣದ ಬಗ್ಗೆ ಅಪಹಾಸ್ಯಪರಿಹಾಸ್ಯಕ್ಕೊಳಗಾಗುತ್ತಿದ್ದೇನೆನಿಸುತ್ತಿತ್ತು.

ಪವಾಡಗಳನ್ನೇ ಜರುಗಿಸುವ ಆ ದೇವರಿಗೆ ನನ್ನ ಒಂದೇ ಒಂದು ಪ್ರಾರ್ಥನೆ ಏನಾಗಿತ್ತೆಂದರೆ ನಾನು ಬೆಳಿಗ್ಗೆ ಹಾಸಿಗೆ ಬಿಟ್ಟು ಏಳುತ್ತಿದ್ದಂತೆ ನನ್ನ ತ್ವಚೆ ಬೆಳ್ಳಗಾಗಲಿ ಎಂದಾಗಿತ್ತು. ಏಳುವಾಗ ದೇವರೇನಾದರೂ ನನ್ನ ವಿನಂತಿ ಆಲಿಸಿ ಕೃಪೆ ತೋರಿರಬಹುದೇ ಎಂಬ ಆಸೆಯ ಕಣ್ಣುಗಳಿಂದ ಕನ್ನಡಿ ಬಳಿ ಓಡುತ್ತಿದ್ದೆ. ಕತ್ತು ಬಗ್ಗಿಸಿ ಮೈ ನೋಡಿಕೊಳ್ಳುತ್ತಿರಲಿಲ್ಲ. ಯಾಕೆಂದರೆ ನಾನು ಮೊದಲು ನೋಡಿಕೊಳ್ಳಬಯಸುತ್ತಿದ್ದುದು ಬೆಳ್ಳಗಾಗಿ ಬದಲಾದ ಮುಖಾರವಿಂದವನ್ನು. ಆದರೆ ಪ್ರತಿದಿನವೂ ನನಗೆ ಅದೇ ಆಶಾಭಂಗವಾಗುತ್ತಿತ್ತು. ರಾತ್ರಿ ಮಲಗುವಾಗ ಹೇಗಿತ್ತೋ ಬೆಳಗೆದ್ದು ನೊಡಿಕೊಂಡಾಗಲೂ ಹಾಗೇ ಇರುತ್ತಿತ್ತು ನನ್ನ ಮುಖ. ಕೊನೆಗೆ ದೇವರೊಂದಿಗೆ ಒಂದು ಚೌಕಾಸಿ ಕುದುರಿಸಲು ನೋಡಿದೆ.

ಆತನೇನಾದರೂ ನನ್ನ ಬೇಡಿಕೆ ಈಡೇರಿಸಿದರೆ ನಾನು ಸಕ್ಕರೆ ಉಂಡೆಗಳನ್ನು ಕದಿಯುವುದನ್ನು ನಿಲ್ಲಿಸಿಬಿಡುವ ಮಾತುಕೊಟ್ಟೆ. ಮಾತ್ರವಲ್ಲದೇ ದೇವರೇನಾದರೂ ನನ್ನನ್ನು ಸ್ವಲ್ಪವಾದರೂ ಬೆಳ್ಳಗೆ ಮಾಡಿದ್ದೇ ಆದಲ್ಲಿ ಅಮ್ಮ ಹೇಳುವ (ಇಲ್ಲೇ ಕುಳಿತಿದ್ದಾರೆ ಅಮ್ಮ) ಪ್ರತಿ ಮಾತನ್ನೂ ಚಾಚೂ ತಪ್ಪದೆ ಪಾಲಿಸುತ್ತೇನೆ ಮತ್ತು ಸ್ಕೂಲ್ ಸ್ವೆಟರ್‌ನ್ನು ಎಂದೂ ಕಳೆದುಕೊಂಡು ಮನೆಗೆ ಬರಲ್ಲ ಎಂದೂ ಮಾತುಕೊಟ್ಟೆ. ಆದರೆ ಈ ಯಾವ ಭರವಸೆಗಳೂ ದೇವರ ಮೇಲೆ ಪರಿಣಾಮ ಬೀರಲಿಲ್ಲ. ಅವನು ನನ್ನ ಮಾತುಗಳನ್ನು ಕೆಳಿಸಿಕೊಂಡೇ ಇರಲಿಲ್ಲ.
ನಾನು ಹದಿವಯಸ್ಸಿನವಳಾದಾಗ ನನ್ನ ಬಣ್ಣದ ಮೇಲೆ ನನಗಿದ್ದ ದ್ವೇಶ ಇನ್ನೂ ಹೆಚ್ಚಾಯಿತು. ನನ್ನ ಅಮ್ಮನೇನೋ ಆಗಾಗ ನನ್ನನ್ನು ‘ನೀನು ಚೆಂದ ಇದ್ದೀಯ ಕಣೆ’ ಎಂದು ಉಸುರುತ್ತಿದ್ದಳು.

ಆದರೆ ಅದು ನನಗೆನೂ ಸಮಾಧಾನ ತರುತ್ತಿಲಿಲ್ಲ. ಎಷ್ಟೆಂದರೂ ಹೆತ್ತವರಿಗೆ ಹೆಗ್ಗಣ ಮುದ್ದಲ್ಲವೇ. ಅಮ್ಮ ಹೇಳುತ್ತಿದ್ದುದೂ ಹಾಗೇ ಅಂದುಕೊಳ್ಳುತ್ತಿದ್ದೆ. ಆ ಹೊತ್ತಿನಲ್ಲಿ ಅಂತರ ರಾಷ್ರ ಮಟ್ಟದಲ್ಲಿ ಹೆಸರುವಾಸಿಯಾದ ಮಾಡೆಲ್ ತಾರೆ ಅಲೆಕ್ ವೆಕ್ ತೆರೆಯ ಮೇಲೆ ಕಾಣಿಸಿಕೊಂಡರು ನೋಡಿ. ಆಕೆಯೂ ಕತ್ತಲಿನಷ್ಟೇ ಕಡುಗಪ್ಪು ವರ್ಣದವಳು. ಆದರೂ ಪ್ರತಿಯೊಂದು ಮ್ಯಾಗಝೀನ್ ಹಾಗೂ ಪ್ರತಿಯೊಬ್ಬರ ಬಾಯಲ್ಲಿ ಆಕೆಯ ಚೆಲು”ನ ಬಗ್ಗೆ ಪುಂಖಾನುಪುಂಖವಾಗಿ ಮಾತುಗಳು ಕೇಳಿಬರುತ್ತಿದ್ದವು. ಓಪ್ರಾ ಕೂಡಾ ಆಕೆಯನ್ನು ಚೆಲುವೆ ಎಂದು ಹೇಳಿದ ಮೇಲೆ ಅದು ನಿಜಸಂಗತಿಯೇ ಸರಿ.

ನನ್ನದೇ ಬಣ್ಣದ ಮಹಿಳೆಯೊಬ್ಬಳನ್ನು ಜನರು ಸುಂದರಿ ಎಂದು ಸ್ವೀಕರಿಸುತ್ತಿರುವುದು ನನಗೆ ನನ್ನ ಕಣ್ಣುಗಳನ್ನೇ ನಂಬದಂತೆ ಮಾಡಿತ್ತು. ನನ್ನಲ್ಲಿ ನನ್ನ ಮುಖದ ಬಣ್ಣವೇ ನನಗೆ ಒಂದು ದೊಡ್ಡ ತಡೆ ಎಂದುಕೊಂಡಿದ್ದವಳು ನಾನು. ಆದರೆ ಇಲ್ಲಿ ಒಪ್ರಾ ಅದು ಹಾಗಲ್ಲ ಎನ್ನುತ್ತಿದ್ದರು. ನಾನು ನಿಜಕ್ಕೂ ಗೊಂದಲಕ್ಕೆ ಬಿದ್ದೆ. ನನ್ನ ಮನಸ್ಸು ಓಪ್ರಾ ಮಾತನ್ನು ನಿರಾಕರಿಸತೊಡಗಿತ್ತು. ಯಾಕೆಂದರೆ ನನ್ನದೇ ಅಸಮರ್ಪಕತೆಯ ಮೋಹಕ್ಕೆ ನಾನು ಹೊಂದಿಕೊಂಡಿದ್ದೆ.

ಆದರೂ ನನ್ನೊಳಗೇ ಇದ್ದ ಹೂವೊಂದು ಅರಳುತ್ತಿತ್ತು. ಅಲೆಕ್ ಅವರನ್ನು ನೋಡಿದಾಗ ನಾನು ಆಕೆಯಲ್ಲಿ ನನ್ನನ್ನೇ ಕಂಡುಕೊಂಡಿದ್ದೆ ಎನ್ನುವುದನ್ನು ಅಲ್ಲಗಳೆಯಲಾಗುವುದಿಲ್ಲ. ಆದರೂ ನನ್ನ ಸುತ್ತಲಿನ ವಾತಾವರಣದಲ್ಲಿ ಬಿಳಿಚರ್ಮಕ್ಕೆ ಆದ್ಯತೆ ನೀಡುವುದು ಇದ್ದೇ ಇತ್ತು. ಎಲ್ಲರ ದೃಷ್ಟಿಯಲ್ಲಿ ನಾನು ಸುಂದರವಲ್ಲ ಎಂಬ ಭಾವನೆ ಕೊರೆಯುತ್ತಲೇ ಇತ್ತು. ಆ ಕುರಿತು ಯೋಚಿಸಿದಾಗಲೆಲ್ಲ ಮತ್ತೆ ನಾನು ಸುಂದರಳಲ್ಲ ಎನ್ನಿಸತೊಡಗುತ್ತಿತ್ತು. ಆಗ ಅಮ್ಮ ಹೇಳುತ್ತಿದ್ದ ಮಾತು ಇಷ್ಟೆ- “ಸೌಂದರ್ಯವನ್ನು ತಿನ್ನೋಕಾಗಲ್ಲ, ಅದೇನೂ ನಿನಗೆ ಹೊಟ್ಟೆ ತುಂಬಿಸಲ್ಲ”. ಅವಳ ಈ ಮಾತುಗಳು ನನಗೆ ಬಹಳ ತಾಗಿದವು. ಸೌಂದರ್ಯ ಎನ್ನುವುದು ನಾವು ಸ್ವಾದೀನಪಡೆದುಕೊಳ್ಳಬಹುದಾದ ಅಥವಾ ನಾವು ಭೋಗಿಸುವಂತಹದ್ದಲ್ಲ. ಸೌಂದರ್ಯ ಏನಿದ್ದರೂ ನಾನು ಇರಬೇಕಾದ ಸ್ಥಿತಿ, ರೀತಿ ಎಂದು ನನಗೆ ಮನವರಿಕೆಯಾಗುವವರೆಗೂ ಅಮ್ಮ ಹೇಳಿದ್ದ ಆ ಮಾತಿನ ಅರ್ಥ ಏನೆಂದು ನನಗಾಗಿರಲಿಲ್ಲ.

’ನೀನು ನಿನ್ನ ಸೌಂದರ್ಯವನ್ನು ತಿನ್ನೋಕಾಗಲ್ಲ’ ಎಂದು ಅಮ್ಮ ಹೇಳಿದ್ದರ ಅರ್ಥ ನಮ್ಮನ್ನು ನಾವು ಉಳಿಸಿಕೊಳ್ಳುವುದು ನಾವು ಹೇಗೆ ಕಾಣುತ್ತೇವೆ ಎನ್ನುವುದನ್ನು ಅವಲಂಬಿಸಿಲ್ಲ ಎಂದು. ನಿಜದಲ್ಲಿ ನಮ್ಮನ್ನು ಉಳಿಸುವುದು ಮತ್ತು ಮೂಲಭೂತವಾಗಿ ಸುಂದರವಾದದ್ದು ಎಂದರೆ ನಮ್ಮೊಳಗಡೆ ನಮ್ಮ ಬಗೆಗೆ ಮತ್ತು ನಮ್ಮ ಸುತ್ತಲಿರುವವರ ಬಗೆಗೆ ನಾವು ಹೊಂದಿರುವ ದಯೆ; ಕರುಣೆ ಮಾತ್ರ. ಈ ಬಗೆಯ ಸೌಂದರ್ಯ ಹೃದಯವನ್ನು ಬೆಳಗಿಸಬಲ್ಲದು ಮತ್ತು ಆತ್ಮಕ್ಕೆ ಆಹ್ಲಾದವನ್ನುಂಟುಮಾಡಬಲ್ಲದು.

ನಾನು ಅಭಿನಯಿಸಿದ ಪಾತ್ರವಾದ ಪ್ಯಾಟ್ಸಿ ತನ್ನ ಒಡೆಯನೊಂದಿಗೆ ಅಷ್ಟೊಂದು ತೊಂದರೆ ಎದುರಿಸಿದ್ದೂ ಇದಕ್ಕಾಗಿಯೇ. ಅಲ್ಲದೆ ಆಕೆಯ ಈ ಕತೆಯನ್ನು ಇಲ್ಲಿಯವರೆಗೆ ಉಳಿಸಿಕೊಂಡು ಬಂದಿದ್ದೂ ಇದೇ. ಅವಳ ದೇಹದ ಸೌಂದರ್ಯ ಮಸುಕಾದ ಮೇಲೂ ಅವಳಲ್ಲಿನ ಸ್ಪೂರ್ತಿಯ ಸೌಂದರ್ಯವನ್ನು ನಾವು ನೆನಪಿಸಿಕೊಳ್ಳಬಹುದು.ನೀವು ಓದುವ ಮ್ಯಾಗಝೀನ್‌ಗಳಲ್ಲಿ, ಮತ್ತು ನಿಮ್ಮ ಟಿವಿಗಳ ಪರದೆಗಳ ಮೇಲೆ ನನ್ನ ಬರುವಿಕೆ ಯುವತಿಯರನ್ನೆಲ್ಲಾ ನನ್ನದೇ ಬಗೆಯ ಪಯಣದಕ್ಕೆ ಕೊಂಡೊಯ್ಯಲಿ.

ಬಾಹ್ಯ ಸೌಂದರ್ಯವನ್ನು ಗುರುತಿಸಿಕೊಳ್ಳುವುದರ ಜೊತೆಗೆ ಅಂತರಂಗದಲ್ಲಿ ಸುಂದರವಾಗಿ ಕಾಣುವ ಉದ್ದಿಮೆಯಲ್ಲಿ ಇನ್ನೂ ಆಳವಾಗಿ ತೊಡಗಿಸಿಕೊಳ್ಳುವ ಪಯಣ ನಿಮ್ಮದೂ ಆಗಲಿ ಎಂದು ಆಶಿಸುತ್ತೇನೆ. ನಾನು ಹೇಳಿದ ಈ ಅಂತರಂಗದ ಸೌಂದರ್ಯಕ್ಕೆ ಕಪ್ಪುಛಾಯೆ ಇರುವುದಿಲ್ಲ ಎಂದು ನೆನಪಿರಲಿ.
ಧನ್ಯವಾದಗಳು.

12 Years a Slave’ ಸಿನೆಮಾ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ರೇಣುಕಾಸ್ವಾಮಿ ಕೊಲೆ ಮತ್ತು ಗಂಡುಹೆಣ್ಣಿನ ನಡುವಿನ ಸಂಬಂಧ

Published

on

  • ರಾಜೇಂದ್ರ ಬುರಡಿಕಟ್ಟಿ

ರೇಣುಕಾಸ್ವಾಮಿ ಕೊಲೆ ಕೇಸನ್ನು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚಿಸುವ ಅನೇಕ ಸ್ನೇಹಿತರು ಈ ಕೇಸಿನಲ್ಲಿ ಮೊದಲನೆಯ ಮತ್ತು ಎರಡನೆಯ ಆರೋಪಿಗಳೆಂದು ಹೆಸರಿಸಲ್ಪಟ್ಟ ದರ್ಶನ್ ಮತ್ತು ಪವಿತ್ರ ಗೌಡ ಅವರ ನಡುವಿನ ಸಂಬಂಧದ ಬಗ್ಗೆ ಅನಗತ್ಯವಾಗಿ ಚರ್ಚಿಸಿ ಪವಿತ್ರಗೌಡ ಅವರನ್ನು ‘ಇಟ್ಟುಕೊಂಡವಳು’ ಇತ್ಯದಿ ಪದಬಳಸಿ ಹಿಯ್ಯಾಳಿಸಿದ್ದಾರೆ.

ಒಂದು ಟಿವಿ ಚಾನೆಲ್ ನವರು ಅವರನ್ನು ‘ಸೆಕೆಂಡ್ ಹ್ಯಾಂಡ್ ಸುಂದರಿ’ ಎಂದೂ ಕರೆದದ್ದು ವರದಿಯಾಗಿದೆ. ಇದನ್ನು ಮಾಡುವ ಹಕ್ಕು ಯಾರಿಗೂ ಇಲ್ಲ. ನಮ್ಮ ವಿರೋಧ ಇರಬೇಕಾದದ್ದು ಅವರು ರೂಪಿಸಿದ್ದಾರೆ ಎನ್ನಲಾದ ಕೊಲೆಯ ಕೇಸಿನ ಬಗ್ಗೆಯೇ ಹೊರತು ಅವರಿಬ್ಬರ ನಡುವಿನ ವೈಯಕ್ತಿಕ ಸಂಬಂಧದ ಬಗ್ಗೆ ಅಲ್ಲ.

ಗಂಡು ಹೆಣ್ಣಿನ ನಡುವಿನ ಸಂಬಂಧ ಎಂಬುದು ಅತ್ಯಂತ ಸಹಜವಾದದ್ದು. ಯಾರಿಗೆ ಯಾರ ಮೇಲೆ ಯಾವಾಗ ಆಕರ್ಷಣೆ ಉಂಟಾಗಿ ಸಂಬಂಧಗಳು ಬೆಸೆದುಕೊಳ್ಳುತ್ತವೆ ಎಂಬುದನ್ನು ಹೇಳಲಾಗದು. ಇದಕ್ಕೆ ‘ನೈತಿಕ’ ‘ಅನೈತಿಕ’ ಎಂಬ ಹಣೆಪಟ್ಟಿ ಹಚ್ಚಿ ಗೌರವಿಸುವ ಅಥವಾ ಅವಹೇಳನ ಮಾಡುವ ಕ್ರಮ ಸರಿಯಾದದ್ದಲ್ಲ. ಪ್ರತಿಯೊಬ್ಬರಿಗೂ ಆಯ್ಕೆಗಳಿರುತ್ತವೆ. ತಮಗೆ ಬೇಕಾದ ಗಂಡನ್ನು ಅಥವಾ ಹೆಣ್ಣನ್ನು ಆಯ್ದುಕೊಳ್ಳುವ ಅವರೊಡನೆ ಲೈಂಗಿಕ ಸಂಬಂಧವನ್ನು ಇಟ್ಟುಕೊಳ್ಳುವ ಸ್ವಾತಂತ್ರ್ಯವಿದೆ. ಎಲ್ಲರಿಗೂ ಇದೆ. ಅದನ್ನು ಪ್ರಶ್ನಿಸುವ ಹಕ್ಕು ಇತರರಿಗೆ ಇಲ್ಲ. ಪರಸ್ಪರ ಒಪ್ಪಿತ ಲೈಂಗಿಕ ಸಂಬಂಧವು ದೇಶದ ಕಾನೂನಿನ ಪ್ರಕಾರವೂ ಅಪರಾಧವಲ್ಲ.

ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಹಿರಿಯ ಸಾಹಿತಿ ಡಾ. ಶಿವರಾಮ ಕಾರಂತರು ತಮ್ಮ ಅನೇಕ ಕಾದಂಬರಿಗಳ ಮೂಲಕ ಇದಕ್ಕೆ ಸಂಬಂಧಿಸಿದಂತೆ ಒಂದು ತಾತ್ವಿಕತೆಯನ್ನು ನಮಗೆ ರೂಪಿಸಿಕೊಡುತ್ತಾರೆ. ಅದೆಂದರೆ ‘ಲೈಂಗಿಕ ಸುಖ ಎನ್ನುವುದು ಮನುಷ್ಯನ ಬದುಕು ಮನುಷ್ಯನಿಗೆ ನೀಡುವ ಅತ್ಯಂತ ಸುಖದ ಸಂಗತಿಗಳಲ್ಲಿ ಒಂದು. ಅದರಿಂದ ಯಾರೂ ವಂಚಿತರಾಗಬಾರದು. ಪರಸ್ಪರ ಒಪ್ಪಿಕೊಂಡ ಗಂಡು ಹೆಣ್ಣುಗಳ ನಡುವಿನ ಲೈಂಗಿಕ ಸಂಬಂಧದಲ್ಲಿ ಒಂದು ಚೆಲುವು ಇರುತ್ತದೆ. ಇಂತಹ ಒಂದು ಒಳ್ಳೆಯ ಸಂಬಂಧಕ್ಕೆ ಮದುವೆ ಎಂಬುದು ಒಂದು ‘ಪೂರ್ವಾಗತ್ಯ’ವಾಗಬೇಕಿಲ್ಲ. ಗಂಡುಹೆಣ್ಣಿನ ನಡುವಿನ ಒಂದು ಒಳ್ಳೆಯ ಸಂಬಂಧವು ವಿವಾಹದ ಒಳಗೂ ಇರಬಹುದು; ಹೊರಗೂ ಇರಬಹುದು. ಅದೇ ರೀತಿ ಒಂದು ಕೆಟ್ಟ ಸಂಬಂಧವು ವಿವಾಹದ ಒಳಗೂ ಇರಬಹುದು ಹೊರಗೂ ಇರಬಹುದು. ವಿವಾಹದ ಚೌಕಟ್ಟಿನ ಒಳಗಿನ ಒಂದು ಕೆಟ್ಟ ಸಂಬಂಧಕ್ಕಿಂತ ವಿವಾಹದ ಚೌಕಟ್ಟಿನ ಹೊರಗಿನ ಒಳ್ಳೆಯ ಸಂಬಂಧ ಬೆಲೆಯುಳ್ಳದ್ದು.

ಹೀಗಾಗಿ ಯಾರೊಡನೆ ಎಂತಹ ಸಂಬಂಧ ಇಟ್ಟುಕೊಳ್ಳಬೇಕು ಎಂಬುದು ಅವರವರ ವೈಯಕ್ತಿಕ ವಿಚಾರ. ಅದರಲ್ಲಿ ಇತರರು ತಲೆಹಾಕುವುದು ಅವಿವೇಕತನ. ‘ಮದುವೆ ಎಂಬುದು ಏಳೇಳು ಜನ್ಮಗಳ ಸಂಬಂಧ’ ಏನೇ ಆದರೂ ಅದರ ಗೆರೆದಾಟಿ ಬೇರೆಯವರೊಡನೆ ಲೈಂಗಿಕ ಸಂಬಂಧ ಇಟ್ಟುಕೊಳ್ಳಬಾರದು’ ಎನ್ನುವವರು ಹಾಗೆಯೇ ಇರಬಹುದು. ಅದಕ್ಕೂ ಅವರಿಗೆ ಸ್ವಾತಂತ್ರ್ಯವಿದೆ. ಆದರೆ ಮದುವೆಯ ಚೌಕಟ್ಟಿನ ಹೊರಗಿನ ಸಂಬಂಧಗಳನ್ನು ಟೀಕಿಸುವ ಸ್ವಾತಂತ್ರ್ಯ ಹಕ್ಕು ಅವರಿಗಿಲ್ಲ. ಈ ವಿಷಯದಲ್ಲಿ ನಮ್ಮ ಆಲೋಚನಾ ಕ್ರಮ ಸಾಕಷ್ಟು ಬದಲಾಗಬೇಕಿದೆ. ಒಂದು ಗಂಡು ಮತ್ತು ಒಂದು ಹೆಣ್ಣಿನ ನಡುವಿನ ಸಂಬಂಧ ಎಂಥದ್ದೇ ಇರಲಿ ಅದು ಅವರಿಬ್ಬರಿಗೂ ಸಂತೋಷವನ್ನು ಕೊಡುತ್ತಿದ್ದರೆ ಅದನ್ನು ಕಂಡು ನಾವು ಸಂತೋಷ ಪಡಬೇಕೆ ಹೊರತು ಹೊಟ್ಟೆಕಿಚ್ಚು ಪಡಬಾರದು. ಅದನ್ನು ಗೌರವಿಸುವುದನ್ನು ನಾವು ಮೊದಲು ಕಲಿಯಬೇಕು. ಈ ಹಿನ್ನಲೆಯಲ್ಲಿ ನಮ್ಮ ವಿರೋಧವಿರಬೇಕಾದದ್ದು ಅವರಿಬ್ಬರು ಸೇರಿ ವ್ಯಕ್ತಿಯೊಬ್ಬರ ಕೊಲೆಮಾಡಿದ್ದಾರೆ ಎನ್ನಲಾದ ವಿಚಾರಕ್ಕೆ ಹೊರತು ಅವರ ನಡುವಿನ ವೈಯಕ್ತಿಕ ಸಂಬಂಧದ ಬಗ್ಗೆ ಅಲ್ಲ. ಇಂತದ್ದೇ ವಿಚಾರವನ್ನು ಬೇರೆ ರೀತಿಯಲ್ಲಿ ಹೇಳಿರುವ ಸುಹಾಸಿನಿ ಶ್ರೀ Suhasini Shree ಅವರ ಒಂದು ಪೋಸ್ಟನ್ನೂ ಆಸಕ್ತಿ ಇರುವವರು ಗಮನಿಸಬಹುದು.(ರಾಬು (23-06-2024)
(ರಾಜೇಂದ್ರ ಬುರಡಿಕಟ್ಟಿ ಅವರ ಫೇಸ್ ಬುಕ್ ಬರೆಹ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಟ ದರ್ಶನ್ ಪರಪ್ಪನ ಆಗ್ರಹಾರ ಜೈಲು ಪಾಲು

Published

on

ಸುದ್ದಿದಿನಡೆಸ್ಕ್:ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರೆ ಆರೋಪಿಗಳಾದ ವಿನಯ್, ಪ್ರದೋಷ್, ಧನರಾಜ್‌ಗೆ 13 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಿಚಾರಣೆ ನಡೆಸಿದ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಜುಲೈ 4 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಹಿನ್ನೆಲೆಯಲ್ಲಿ 2ನೇ ಆರೋಪಿ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳು ಪರಪ್ಪನ ಆಗ್ರಹಾರ ಜೈಲು ಪಾಲಾಗಿದ್ದಾರೆ. ಇದೇ ಪ್ರಕರಣದಲ್ಲಿ ಆರೋಪಿಗಳಾದ ಪವಿತ್ರಾ ಹಾಗೂ ಇತರರಿಗೆ 2 ದಿನಗಳ ಹಿಂದೆಯೇ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಈ ಕ್ಷಣದ ಪ್ರಮುಖ ಸುದ್ದಿಗಳು

Published

on

ರಾಜ್ಯದಲ್ಲಿ ಜರುಗಿದ ಈ ಕ್ಷಣದ ಕೆಲವು ಸುದ್ದಿಗಳ ಪ್ರಮುಖಾಂಶಗಳು ( ಕನ್ನಡ ನ್ಯೂಸ್; ಕನ್ನಡ ಸುದ್ದಿ)

  1. ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ವಹಿಸದಿದ್ದರೆ ಕುಡಿಯುವ ನೀರು ಕಲುಷಿತಗೊಳ್ಳುವ ಪ್ರಕರಣ ಹೆಚ್ಚಾಗುವ ಸಾಧ್ಯತೆಯಿದೆ. ಹಾಗಾಗಿ ಗ್ರಾಮೀಣ ನೀರು ಸರಬರಾಜು ಇಲಾಖೆಯ ಇಂಜಿನಿಯರ್‌ಗಳು ಕಟ್ಟೆಚ್ಚರ ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ.
  2. ಪೆಟ್ರೋಲ್ ಹಾಗೂ ಡೀಸೆಲ್ ಮಾರಾಟ ತೆರಿಗೆ ಏರಿಕೆ ಹಾಗೂ ಇತರ ಬೆಲೆ ಏರಿಕೆ ನೀತಿ ವಿರೋಧಿಸಿ ಬಿಜೆಪಿ ಬೆಂಗಳೂರಿನಲ್ಲಿಂದು ವಿಧಾನಸೌಧದವರೆಗೆ ಸೈಕಲ್ ಜಾಥಾ ನಡೆಸಿತು. ಪಕ್ಷದ ಕಚೇರಿಯಿಂದ ವಿಧಾನಸೌಧದವರೆಗೆ ಜಾಥಾದಲ್ಲಿ ಹೊರಟ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು.
  3. ಪ್ರತಿಯೊಂದು ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆಯಡಿ ನಮೂದಿಸಿರುವ ಮಾನದಂಡದಂತೆ ಎಲ್‌ಇಡಿ ದೀಪಗಳನ್ನು ಅಳವಡಿಸದಿದ್ದರೆ ವಾಹನಗಳ ಸವಾರರುಗಳ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ತಿಳಿಸಿದ್ದಾರೆ.
  4. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಶುಭ ಕೋರಿದ್ದಾರೆ. ಪ್ರಧಾನಿ ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ದೇಶಕ್ಕಾಗಿ ಅಪ್ರತಿಮ ಸೇವೆಯನ್ನು ಸಲ್ಲಿಸುತ್ತಿದ್ದು, ನಮಗೆಲ್ಲರಿಗೂ ಸ್ಫೂರ್ತಿಯಾಗಿದ್ದಾರೆ ಎಂದು ಹೇಳಿದ್ದಾರೆ.
  5. ತಮಿಳುನಾಡಿನ ಕಲ್ಲಕುರಿಚಿಯಲ್ಲಿ ನಡೆದ ಕಳ್ಳಬಟ್ಟಿ ಸರಾಯಿ ದುರಂತದಲ್ಲಿ 33 ಮಂದಿ ಮೃತಪಟ್ಟಿದ್ದು, 60ಕ್ಕೂ ಅಧಿಕ ಮಂದಿ ನಾನಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳ್ಳಬಟ್ಟಿ ಸರಾಯಿ ಸೇವಿಸಿ ಅಸ್ವಸ್ಥರಾಗಿದ್ದ ಜನರನ್ನು ಕಲ್ಲಕುರಿಚಿ, ಸೆಲಂ ಮತ್ತು ಪುದುಚೇರಿಯ ಜೆಐಪಿಎಂಇಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
  6. ಕೇಂದ್ರ ಸರ್ಕಾರದ ಆದೇಶದಂತೆ 2019ರ ಏಪ್ರಿಲ್‌ಗಿಂತ ಮುಂಚಿತವಾಗಿ ನೋಂದಣಿಯಾಗಿರುವ ವಾಹನಗಳಿಗೆ ಹೈಸೆಕ್ಯೂರಿಟಿ ನೋಂದಣಿ ಫಲಕ ಅಳವಡಿಕೆ ಗಡುವನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 15ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending