ಸಿನಿ ಸುದ್ದಿ
ಹಾಲಿವುಡ್ ನಟಿ ‘ಲುಪಿತಾ’ಅಂತರಂಗದ ಮಾತುಗಳು : ಮಿಸ್ ಮಾಡ್ದೆ ಓದಿ ; ಅಭಿಪ್ರಾಯ ತಿಳಿಸಿ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2019/12/lupita-nyongo-Suddidina-544.jpg&description=ಹಾಲಿವುಡ್ ನಟಿ ‘ಲುಪಿತಾ’ಅಂತರಂಗದ ಮಾತುಗಳು : ಮಿಸ್ ಮಾಡ್ದೆ ಓದಿ ; ಅಭಿಪ್ರಾಯ ತಿಳಿಸಿ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2019/12/lupita-nyongo-Suddidina-544.jpg&description=ಹಾಲಿವುಡ್ ನಟಿ ‘ಲುಪಿತಾ’ಅಂತರಂಗದ ಮಾತುಗಳು : ಮಿಸ್ ಮಾಡ್ದೆ ಓದಿ ; ಅಭಿಪ್ರಾಯ ತಿಳಿಸಿ', 'pinterestShare', 'width=750,height=350'); return false;" title="Pin This Post">
- ಹಾಲಿವುಡ್ ನಟಿ ಲುಪಿತಾ ನ್ಯೋಂಗೊಗೆ ಮೊನ್ನೆ ಆಸ್ಕರ್ ಪ್ರಶಸ್ತಿ ಲಭಿಸಿದೆ. ಸ್ಟೀವ್ ಮಕೀನ್ ನಿರ್ದೇಶನದ “12 Years a Slave ಚಿತ್ರದಲ್ಲಿ ಪಾಟ್ಸಿ ಪಾತ್ರದಲ್ಲಿ ಅತ್ಯದ್ಭುತವಾಗಿ ನಟಿಸಿದ ಈಕೆಗೆ ’ಅತ್ಯುತ್ತಮ ಪೋಷಕನಟಿ’ ಪ್ರಶಸ್ತಿ ಲಭಿಸಿದೆ. ಈ ಕೀನ್ಯಾ ಮೂಲದ ಪೋಷಕರನ್ನು ಹೊಂದಿರುವ ಮೆಕ್ಸಿಕನ್ ಕಪ್ಪು ವರ್ಣದ ತಾರೆಗೆ ಆಸ್ಕರ್ ಪ್ರಶಸ್ತಿ ಲಭಿಸುವ ಮುನ್ನ ‘ಎಸೆನ್ಸ್ ಮ್ಯಾಗಜೀನ್’ ಎಂಬ ಪ್ರಸಿದ್ಧ ಸಿನಿಮಾ ಪತ್ರಿಕೆ ’ಬ್ಲಾಕ್ ವಿಮೆನ್ ಇನ್ ಹಾಲಿವುಡ್’ ಪ್ರಶಸ್ತಿಯನ್ನು ನೀಡಿ ಗೌರವಿಸಿತು. ಆ ಪ್ರಶಸ್ತಿ ಆಕೆ ಸ್ವೀಕರಿಸುವಾಗ ಮಾಡಿದ ಭಾಷಣದಲ್ಲಿ ತನ್ನ ಅಂತರಂಗದ ಸೌಂದರ್ಯವನ್ನು ಬಿಚ್ಚಿಟ್ಟಳು. ಅವಳಾಡಿದ ಮಾತುಗಳನ್ನು ಅನುವಾದಿಸಿ ಬರಹ ರೂಪದಲ್ಲಿರಿಸಿದ್ದೇನೆ.
-ಅನುವಾದ ಮತ್ತು ಬರಹ ರೂಪ : ಹರ್ಷಕುಮಾರ್ ಕುಗ್ವೆ
“ಹುಡುಗಿಯೊಬ್ಬಳು ನನಗೆ ಬರೆದಿದ್ದ ಪತ್ರದ ಒಂದೆರಡು ಸಾಲುಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತೇನೆ. ‘ಪ್ರಿಯ ಲುಪೀಟಾ, ರಾತ್ರೋ ರಾತ್ತಿ ಹಾಲಿವುಡ್ನಲ್ಲಿ ಯಶಸ್ಸು ಕಂಡ ನೀನು ಇಷ್ಟು ಕಪ್ಪಗಿರಲಿಕ್ಕೆ ನಿಜಕ್ಕೂ ಅದೃಷ್ಟ ಮಾಡಿದ್ದೆ ಅನ್ನಿಸುತ್ತ್ತಿದೆ. ನಾನು ನನ್ನ ಚರ್ಮವನ್ನು ಬೆಳ್ಳಗಾಗಿಸಲು ಫೇರ್ನೆಸ್ ಕ್ರೀಮ್ ಒಂದನ್ನು ಕೊಳ್ಳುವುದರಲ್ಲಿದ್ದೆ. ಅಷ್ಟರಲ್ಲಿ ನೀನು ಪ್ರಪಂಚದ ಭೂಪಟದಲ್ಲಿ ಕಾಣಿಸಿಕೊಂಡು ನನ್ನನ್ನು ಉಳಿಸಿದೆ”.
ಆ ಹುಡುಗಿ ಬರೆದ ಪತ್ರದ ಈ ಸಾಲುಗಳನ್ನು ಓದಿದ ನನ್ನ ಹೃದಯದಿಂದ ಕೊಂಚ ರಕ್ತ ಒಸರಿದಂತಾಯಿತು. ಶಾಲೆಯಿಂದ ಹೊರಬಿದ್ದೊಡನೆ ನಾನು ಆರಿಸಿಕೊಂಡ ಕೆಲಸ ನನ್ನನ್ನು ಈ ಮಟ್ಟಕ್ಕೆ ಪ್ರಭಾವಿಯನ್ನಾಗಿ ಮಾಡುತ್ತದೆ ಎಂಬ ಕಲ್ಪನೆಯೂ ನನಗಿರಲಿಲ್ಲ. ‘ಕಲರ್ ಪರ್ಪಲ್’ನ ಆ ಮಹಿಳೆಯರು ನನ್ನ ಪಾಲಿಗೆ ಹೇಗೆ ಆಶಾಭಾವನೆ ತುಂಬಿದ್ದರೋ ಅದೇ ರೀತಿಯಲ್ಲಿ ನಾನೂ ಇತರರಿಗೆ ಸ್ಪೂರ್ತಿಯಾಗಿ ನಿಲ್ಲುವ ದೃಶ್ಯವನ್ನು ನಾನು ಕಲ್ಪಸಿಕೊಂಡೂ ಇರಲಿಲ್ಲ. ’ನಾನು ಸುಂದರವಾಗಿಲ್ಲ; ಕಪ್ಪಾಗಿದ್ದೇನೆ ಎಂದು ನನಗೆ ನಾನೇ ಪದೇಪದೇ ಹೇಳಿಕೊಳ್ಳುತ್ತಿದ್ದ ದಿನಗಳು ನನಗೆ ನೆನಪಾಗುತ್ತವೆ. ಟಿ.ವಿ ಆನ್ ಮಾಡಿದರೆ ಸಾಕು ಬರೀ ಬಿಳಿಮುಖಗಳನ್ನು ನೋಡುತ್ತಿದ್ದೆ. ನನ್ನ ನಿಶಾವರ್ಣದ ಬಗ್ಗೆ ಅಪಹಾಸ್ಯಪರಿಹಾಸ್ಯಕ್ಕೊಳಗಾಗುತ್ತಿದ್ದೇನೆನಿಸುತ್ತಿತ್ತು.
ಪವಾಡಗಳನ್ನೇ ಜರುಗಿಸುವ ಆ ದೇವರಿಗೆ ನನ್ನ ಒಂದೇ ಒಂದು ಪ್ರಾರ್ಥನೆ ಏನಾಗಿತ್ತೆಂದರೆ ನಾನು ಬೆಳಿಗ್ಗೆ ಹಾಸಿಗೆ ಬಿಟ್ಟು ಏಳುತ್ತಿದ್ದಂತೆ ನನ್ನ ತ್ವಚೆ ಬೆಳ್ಳಗಾಗಲಿ ಎಂದಾಗಿತ್ತು. ಏಳುವಾಗ ದೇವರೇನಾದರೂ ನನ್ನ ವಿನಂತಿ ಆಲಿಸಿ ಕೃಪೆ ತೋರಿರಬಹುದೇ ಎಂಬ ಆಸೆಯ ಕಣ್ಣುಗಳಿಂದ ಕನ್ನಡಿ ಬಳಿ ಓಡುತ್ತಿದ್ದೆ. ಕತ್ತು ಬಗ್ಗಿಸಿ ಮೈ ನೋಡಿಕೊಳ್ಳುತ್ತಿರಲಿಲ್ಲ. ಯಾಕೆಂದರೆ ನಾನು ಮೊದಲು ನೋಡಿಕೊಳ್ಳಬಯಸುತ್ತಿದ್ದುದು ಬೆಳ್ಳಗಾಗಿ ಬದಲಾದ ಮುಖಾರವಿಂದವನ್ನು. ಆದರೆ ಪ್ರತಿದಿನವೂ ನನಗೆ ಅದೇ ಆಶಾಭಂಗವಾಗುತ್ತಿತ್ತು. ರಾತ್ರಿ ಮಲಗುವಾಗ ಹೇಗಿತ್ತೋ ಬೆಳಗೆದ್ದು ನೊಡಿಕೊಂಡಾಗಲೂ ಹಾಗೇ ಇರುತ್ತಿತ್ತು ನನ್ನ ಮುಖ. ಕೊನೆಗೆ ದೇವರೊಂದಿಗೆ ಒಂದು ಚೌಕಾಸಿ ಕುದುರಿಸಲು ನೋಡಿದೆ.
ಆತನೇನಾದರೂ ನನ್ನ ಬೇಡಿಕೆ ಈಡೇರಿಸಿದರೆ ನಾನು ಸಕ್ಕರೆ ಉಂಡೆಗಳನ್ನು ಕದಿಯುವುದನ್ನು ನಿಲ್ಲಿಸಿಬಿಡುವ ಮಾತುಕೊಟ್ಟೆ. ಮಾತ್ರವಲ್ಲದೇ ದೇವರೇನಾದರೂ ನನ್ನನ್ನು ಸ್ವಲ್ಪವಾದರೂ ಬೆಳ್ಳಗೆ ಮಾಡಿದ್ದೇ ಆದಲ್ಲಿ ಅಮ್ಮ ಹೇಳುವ (ಇಲ್ಲೇ ಕುಳಿತಿದ್ದಾರೆ ಅಮ್ಮ) ಪ್ರತಿ ಮಾತನ್ನೂ ಚಾಚೂ ತಪ್ಪದೆ ಪಾಲಿಸುತ್ತೇನೆ ಮತ್ತು ಸ್ಕೂಲ್ ಸ್ವೆಟರ್ನ್ನು ಎಂದೂ ಕಳೆದುಕೊಂಡು ಮನೆಗೆ ಬರಲ್ಲ ಎಂದೂ ಮಾತುಕೊಟ್ಟೆ. ಆದರೆ ಈ ಯಾವ ಭರವಸೆಗಳೂ ದೇವರ ಮೇಲೆ ಪರಿಣಾಮ ಬೀರಲಿಲ್ಲ. ಅವನು ನನ್ನ ಮಾತುಗಳನ್ನು ಕೆಳಿಸಿಕೊಂಡೇ ಇರಲಿಲ್ಲ.
ನಾನು ಹದಿವಯಸ್ಸಿನವಳಾದಾಗ ನನ್ನ ಬಣ್ಣದ ಮೇಲೆ ನನಗಿದ್ದ ದ್ವೇಶ ಇನ್ನೂ ಹೆಚ್ಚಾಯಿತು. ನನ್ನ ಅಮ್ಮನೇನೋ ಆಗಾಗ ನನ್ನನ್ನು ‘ನೀನು ಚೆಂದ ಇದ್ದೀಯ ಕಣೆ’ ಎಂದು ಉಸುರುತ್ತಿದ್ದಳು.
ಆದರೆ ಅದು ನನಗೆನೂ ಸಮಾಧಾನ ತರುತ್ತಿಲಿಲ್ಲ. ಎಷ್ಟೆಂದರೂ ಹೆತ್ತವರಿಗೆ ಹೆಗ್ಗಣ ಮುದ್ದಲ್ಲವೇ. ಅಮ್ಮ ಹೇಳುತ್ತಿದ್ದುದೂ ಹಾಗೇ ಅಂದುಕೊಳ್ಳುತ್ತಿದ್ದೆ. ಆ ಹೊತ್ತಿನಲ್ಲಿ ಅಂತರ ರಾಷ್ರ ಮಟ್ಟದಲ್ಲಿ ಹೆಸರುವಾಸಿಯಾದ ಮಾಡೆಲ್ ತಾರೆ ಅಲೆಕ್ ವೆಕ್ ತೆರೆಯ ಮೇಲೆ ಕಾಣಿಸಿಕೊಂಡರು ನೋಡಿ. ಆಕೆಯೂ ಕತ್ತಲಿನಷ್ಟೇ ಕಡುಗಪ್ಪು ವರ್ಣದವಳು. ಆದರೂ ಪ್ರತಿಯೊಂದು ಮ್ಯಾಗಝೀನ್ ಹಾಗೂ ಪ್ರತಿಯೊಬ್ಬರ ಬಾಯಲ್ಲಿ ಆಕೆಯ ಚೆಲು”ನ ಬಗ್ಗೆ ಪುಂಖಾನುಪುಂಖವಾಗಿ ಮಾತುಗಳು ಕೇಳಿಬರುತ್ತಿದ್ದವು. ಓಪ್ರಾ ಕೂಡಾ ಆಕೆಯನ್ನು ಚೆಲುವೆ ಎಂದು ಹೇಳಿದ ಮೇಲೆ ಅದು ನಿಜಸಂಗತಿಯೇ ಸರಿ.
ನನ್ನದೇ ಬಣ್ಣದ ಮಹಿಳೆಯೊಬ್ಬಳನ್ನು ಜನರು ಸುಂದರಿ ಎಂದು ಸ್ವೀಕರಿಸುತ್ತಿರುವುದು ನನಗೆ ನನ್ನ ಕಣ್ಣುಗಳನ್ನೇ ನಂಬದಂತೆ ಮಾಡಿತ್ತು. ನನ್ನಲ್ಲಿ ನನ್ನ ಮುಖದ ಬಣ್ಣವೇ ನನಗೆ ಒಂದು ದೊಡ್ಡ ತಡೆ ಎಂದುಕೊಂಡಿದ್ದವಳು ನಾನು. ಆದರೆ ಇಲ್ಲಿ ಒಪ್ರಾ ಅದು ಹಾಗಲ್ಲ ಎನ್ನುತ್ತಿದ್ದರು. ನಾನು ನಿಜಕ್ಕೂ ಗೊಂದಲಕ್ಕೆ ಬಿದ್ದೆ. ನನ್ನ ಮನಸ್ಸು ಓಪ್ರಾ ಮಾತನ್ನು ನಿರಾಕರಿಸತೊಡಗಿತ್ತು. ಯಾಕೆಂದರೆ ನನ್ನದೇ ಅಸಮರ್ಪಕತೆಯ ಮೋಹಕ್ಕೆ ನಾನು ಹೊಂದಿಕೊಂಡಿದ್ದೆ.
ಆದರೂ ನನ್ನೊಳಗೇ ಇದ್ದ ಹೂವೊಂದು ಅರಳುತ್ತಿತ್ತು. ಅಲೆಕ್ ಅವರನ್ನು ನೋಡಿದಾಗ ನಾನು ಆಕೆಯಲ್ಲಿ ನನ್ನನ್ನೇ ಕಂಡುಕೊಂಡಿದ್ದೆ ಎನ್ನುವುದನ್ನು ಅಲ್ಲಗಳೆಯಲಾಗುವುದಿಲ್ಲ. ಆದರೂ ನನ್ನ ಸುತ್ತಲಿನ ವಾತಾವರಣದಲ್ಲಿ ಬಿಳಿಚರ್ಮಕ್ಕೆ ಆದ್ಯತೆ ನೀಡುವುದು ಇದ್ದೇ ಇತ್ತು. ಎಲ್ಲರ ದೃಷ್ಟಿಯಲ್ಲಿ ನಾನು ಸುಂದರವಲ್ಲ ಎಂಬ ಭಾವನೆ ಕೊರೆಯುತ್ತಲೇ ಇತ್ತು. ಆ ಕುರಿತು ಯೋಚಿಸಿದಾಗಲೆಲ್ಲ ಮತ್ತೆ ನಾನು ಸುಂದರಳಲ್ಲ ಎನ್ನಿಸತೊಡಗುತ್ತಿತ್ತು. ಆಗ ಅಮ್ಮ ಹೇಳುತ್ತಿದ್ದ ಮಾತು ಇಷ್ಟೆ- “ಸೌಂದರ್ಯವನ್ನು ತಿನ್ನೋಕಾಗಲ್ಲ, ಅದೇನೂ ನಿನಗೆ ಹೊಟ್ಟೆ ತುಂಬಿಸಲ್ಲ”. ಅವಳ ಈ ಮಾತುಗಳು ನನಗೆ ಬಹಳ ತಾಗಿದವು. ಸೌಂದರ್ಯ ಎನ್ನುವುದು ನಾವು ಸ್ವಾದೀನಪಡೆದುಕೊಳ್ಳಬಹುದಾದ ಅಥವಾ ನಾವು ಭೋಗಿಸುವಂತಹದ್ದಲ್ಲ. ಸೌಂದರ್ಯ ಏನಿದ್ದರೂ ನಾನು ಇರಬೇಕಾದ ಸ್ಥಿತಿ, ರೀತಿ ಎಂದು ನನಗೆ ಮನವರಿಕೆಯಾಗುವವರೆಗೂ ಅಮ್ಮ ಹೇಳಿದ್ದ ಆ ಮಾತಿನ ಅರ್ಥ ಏನೆಂದು ನನಗಾಗಿರಲಿಲ್ಲ.
’ನೀನು ನಿನ್ನ ಸೌಂದರ್ಯವನ್ನು ತಿನ್ನೋಕಾಗಲ್ಲ’ ಎಂದು ಅಮ್ಮ ಹೇಳಿದ್ದರ ಅರ್ಥ ನಮ್ಮನ್ನು ನಾವು ಉಳಿಸಿಕೊಳ್ಳುವುದು ನಾವು ಹೇಗೆ ಕಾಣುತ್ತೇವೆ ಎನ್ನುವುದನ್ನು ಅವಲಂಬಿಸಿಲ್ಲ ಎಂದು. ನಿಜದಲ್ಲಿ ನಮ್ಮನ್ನು ಉಳಿಸುವುದು ಮತ್ತು ಮೂಲಭೂತವಾಗಿ ಸುಂದರವಾದದ್ದು ಎಂದರೆ ನಮ್ಮೊಳಗಡೆ ನಮ್ಮ ಬಗೆಗೆ ಮತ್ತು ನಮ್ಮ ಸುತ್ತಲಿರುವವರ ಬಗೆಗೆ ನಾವು ಹೊಂದಿರುವ ದಯೆ; ಕರುಣೆ ಮಾತ್ರ. ಈ ಬಗೆಯ ಸೌಂದರ್ಯ ಹೃದಯವನ್ನು ಬೆಳಗಿಸಬಲ್ಲದು ಮತ್ತು ಆತ್ಮಕ್ಕೆ ಆಹ್ಲಾದವನ್ನುಂಟುಮಾಡಬಲ್ಲದು.
ನಾನು ಅಭಿನಯಿಸಿದ ಪಾತ್ರವಾದ ಪ್ಯಾಟ್ಸಿ ತನ್ನ ಒಡೆಯನೊಂದಿಗೆ ಅಷ್ಟೊಂದು ತೊಂದರೆ ಎದುರಿಸಿದ್ದೂ ಇದಕ್ಕಾಗಿಯೇ. ಅಲ್ಲದೆ ಆಕೆಯ ಈ ಕತೆಯನ್ನು ಇಲ್ಲಿಯವರೆಗೆ ಉಳಿಸಿಕೊಂಡು ಬಂದಿದ್ದೂ ಇದೇ. ಅವಳ ದೇಹದ ಸೌಂದರ್ಯ ಮಸುಕಾದ ಮೇಲೂ ಅವಳಲ್ಲಿನ ಸ್ಪೂರ್ತಿಯ ಸೌಂದರ್ಯವನ್ನು ನಾವು ನೆನಪಿಸಿಕೊಳ್ಳಬಹುದು.ನೀವು ಓದುವ ಮ್ಯಾಗಝೀನ್ಗಳಲ್ಲಿ, ಮತ್ತು ನಿಮ್ಮ ಟಿವಿಗಳ ಪರದೆಗಳ ಮೇಲೆ ನನ್ನ ಬರುವಿಕೆ ಯುವತಿಯರನ್ನೆಲ್ಲಾ ನನ್ನದೇ ಬಗೆಯ ಪಯಣದಕ್ಕೆ ಕೊಂಡೊಯ್ಯಲಿ.
ಬಾಹ್ಯ ಸೌಂದರ್ಯವನ್ನು ಗುರುತಿಸಿಕೊಳ್ಳುವುದರ ಜೊತೆಗೆ ಅಂತರಂಗದಲ್ಲಿ ಸುಂದರವಾಗಿ ಕಾಣುವ ಉದ್ದಿಮೆಯಲ್ಲಿ ಇನ್ನೂ ಆಳವಾಗಿ ತೊಡಗಿಸಿಕೊಳ್ಳುವ ಪಯಣ ನಿಮ್ಮದೂ ಆಗಲಿ ಎಂದು ಆಶಿಸುತ್ತೇನೆ. ನಾನು ಹೇಳಿದ ಈ ಅಂತರಂಗದ ಸೌಂದರ್ಯಕ್ಕೆ ಕಪ್ಪುಛಾಯೆ ಇರುವುದಿಲ್ಲ ಎಂದು ನೆನಪಿರಲಿ.
ಧನ್ಯವಾದಗಳು.
‘12 Years a Slave’ ಸಿನೆಮಾ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಚಿತ್ರ ವಿಮರ್ಶೆ | ಸೂಲಗಿತ್ತಿ ತಾಯವ್ವ
~ಡಾ. ಪುಷ್ಪಲತ ಸಿ ಭದ್ರಾವತಿ
ಚಿತ್ರ – ತಾಯವ್ವ ,ನಿರ್ಮಾಣ – ಅಮರ ಫಿಲಂಸ್, ನಿರ್ದೇಶನ- ಸಾತ್ವಿಕ ಪವನ ಕುಮಾರ್,ತಾರಾಗಣ – ಗೀತಪ್ರಿಯ. ಬೇಬಿ ಯಶಿಕಾ, ಮತ್ತಿತರರು
ನಾವು ಎಷ್ಟೇ ಆಧುನಿಕತೆ, ಸಮಾನತೆ, ಸ್ವಾತಂತ್ರ್ಯ ಎಂದು ಹೆಣ್ಣು ಮಾತನಾಡಿದರೂ, ಈ ಸಮಾಜದ ಸಂಕೋಲೆಯಲ್ಲಿ ಇವತ್ತಿಗೂ ನಾವು ಕಂಡು ಕಾಣದಂತೆ ಬಂಧಿಯಾಗಿದ್ದೇವೆ. ಈ ಪುರುಷ ನಿರ್ಮಿತ ಸಮಾಜದಲ್ಲಿ ಹೆಣ್ಣನ್ನು ತನ್ನ ಸಂಕೂಲೆಯಲ್ಲಿಯೇ ಬಂಧಿಸಿಟ್ಟಿರುವನು. ಅದೊಂದು ಸ್ವೇಚ್ಛಾಚಾರದ, ಸಮಾನತೆಯ, ಹೆಸರಿನ ಮುಖವಾಡ ತೊಟ್ಟಿದೆ ಅಷ್ಟೇ. ಈ ಮುಖವಾಡಗಳ ನಡುವಿನ ಪುರುಷ ನಿಯಂತ್ರಿತ ಬದುಕಿನಲ್ಲಿ ಹೋರಾಟವೆಂಬುದು ಹೆಣ್ಣಿಗೆ ನಿತ್ಯವಾಗಿದೆ.
ಸ್ತ್ರೀ ಅವಳು ಪ್ರಕೃತಿ, ಪ್ರಕೃತಿ ಇಲ್ಲವಾದರೆ ಇನ್ನೂ ನಾವೆಲ್ಲ ತೃಣಮೂಲ. ಇಂತಹ ಸತ್ಯ ಅರಿವಿದ್ದರೂ ನಾವು ಪದೇ ಪದೇ ಈ ಪ್ರಕೃತಿಯನ್ನು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಹಾಗೆಯೇ ಪ್ರಕೃತಿಯ ಇನ್ನೊಂದು ರೂಪವಾದ ‘ಹೆಣ್ಣನ್ನು’ ನಾವು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಇದರ ಪರಿಣಾಮವಾಗಿಯೇ ಹೆಣ್ಣಿನ ಸರಾಸರಿ ಗಂಡಿಗಿಂತ ಗಣನೀಯವಾಗಿ ಕಡಿಮೆಯಾಗುತ್ತಿರುವುದು. ” ಹೆಣ್ಣು ಭ್ರೂಣಹತ್ಯೆ” ಎಂಬುದು ಸಮಾಜದ ಅದು ಹಾಗೂ ವಿಶ್ವಕ್ಕೂ ಮಾರಕ. ಇಂತಹ ಒಂದು ವಿಷಯ ವಸ್ತುವನ್ನು ಕೇಂದ್ರಿಕರಿಸಿಕೊಂಡು ಸಮಾಜಕ್ಕೆ ಜಾಗೃತಿ ಮೂಡಿಸುವ ಸಲುವಾಗಿ, ಎಚ್ಚರಿಕೆಯ ಕರೆಘಂಟೆಯೆಂಬಂತೆ “ತಾಯವ್ವ” ಸಿನಿಮಾ ಕರ್ನಾಟಕದಾದ್ಯಂತ ಬಿಡುಗಡೆಗೊಂಡಿದೆ.
ಕಳೆದ ವರ್ಷಗಳಲ್ಲಿಯೇ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ಹಿಂದೆ ಸುಮಾರು 500ಕ್ಕೂ ಹೆಚ್ಚಿನ ಭ್ರೂಣಗಳು ಸಿಕ್ಕವು. ವಿಚಾರ ಪ್ರಚಾರವೂ ಆಯಿತು. ಆದರೆ ಕೇವಲ ಸುದ್ದಿಯಾಗಿ ಕಣ್ಮರೆಯಾಗುತ್ತವೆ. ಇಂದಿನ ಸಮಾಜಕ್ಕೆ ಇಂತಹ ಸೂಕ್ಷ್ಮ ವಿಷಯಗಳನ್ನು ಮುನ್ನೆಲೆಗೆ ತಂದು ಯುವಕರಿಗೆ ಹಾಗೂ ಸಮಾಜಕ್ಕೆ ಜಾಗೃತಿಮೂಡಿಸಬೇಕಾಗಿದೆ. ಇಂತಹ ಕಾರ್ಯದಲ್ಲಿ
” ತಾಯವ್ವ” ಸಿನಿಮಾ ಗೆದ್ದಿದೆ ಎಂದರೆ ಅತಿಶಯೋಕ್ತಿಯೆನಲ್ಲಾ. ಈ ಗೆಲುವು ಚಿತ್ರದ ನಾಯಕಿ ” ಗೀತ ಪ್ರಿಯಾ” ಅವರ ಶ್ರಮ, ಹಾಗೂ ಅವರ ಪೂರ್ಣ ಪ್ರಮಾಣದ ಪಾತ್ರದ ತಲ್ಲೀನತೆಯು ಸಿನಿಮಾದುದ್ದಕ್ಕೂ ಕಾಣುತ್ತದೆ.
ಮೂಲತಃ ” ಗೀತ ಪ್ರಿಯಾ” ಅವರು ಕಳೆದ 35 ವರ್ಷಗಳ ಅಧಿಕವಾಗಿ ತಮ್ಮನ್ನು ತಾವು ಶೈಕ್ಷಣಿಕ ರಂಗದಲ್ಲಿ ತೊಡಗಿಸಿಕೊಂಡು ವಿಧ್ಯಾಸಂಸ್ಥೆಯೊಂದನ್ನು ಕಟ್ಟಿ ಬೆಳೆಸಿದ್ದಾರೆ. ಇವರ ತಾಯಿ ನೆರಳಲ್ಲಿ ಹುಟ್ಟಿದ ಮಗುವೇ ” ಕೃಪಾನಿಧಿ ಗ್ರೂಪ್ ಸಂಸ್ಥೆ”. ಸದಾ ಮಿಡಿವ ತಾಯಿ ಹೃದಯ ಇವರದ್ದಾಗಿದ್ದರಿಂದಲೇ ತಮ್ಮ ಪ್ರಥಮ ಚಿತ್ರದಲ್ಲಿಯೇ ಗಂಭೀರ ವಿಷಯ ವಸ್ತುವಿನ ಆಯ್ಕೆ, ಗಂಭೀರವಾದ ಅಭಿನಯ, ಸಮಾಜಮುಖಿ ಕಾಳಜಿಯಿರುವುದರಿಂದಲೇ ಇದರೆಲ್ಲರ ಫಲಿತಗಳೆಂಬಂತೆೇ “ತಾಯವ್ವ” ರೂಪುಗೊಂಡಿದೆ.
ಸಿನಿಮಾ ಕಲಾಪ್ರಿಯರಿಗೆ ಒಂದೊಳ್ಳೆ ಸುಗ್ಗಿ, ಕುಟುಂಬದ ಸಮೇತ ಸಿನಿಮಾ ವೀಕ್ಷಿಸಬಹುದು. ಗೀತ ಪ್ರಿಯಾ ಅವರು ಈ ಸಿನಿಮಾದಲ್ಲಿ ಅಭಿನಯಿಸಿ, ಹಾಗೂ ಸಂಗೀತಕ್ಕೆ ತಮ್ಮ ಧ್ವನಿಯನ್ನು ನೀಡಿರುವುದು ಇನ್ನೂ ವಿಶೇಷ. ಬೇಬಿ ಯಶೀಕಾ ಮುಂದಿನ ಭವಿಷ್ಯ ಇನ್ನಷ್ಟು ಸಿನಿಮಾರಂಗದಲ್ಲಿ ಉಜ್ವಲವಾಗಿರಲಿ. ನಿರ್ದೇಶಕರ ಪ್ರಯತ್ನ. ಚಿತ್ರಕಥೆಯ ಹಿಡಿತ ಹಾಗೂ ಎಲ್ಲೂ ಸಡಿಲವಿರದೇ ಸಾಗಿರುವುದು ನಮ್ಮ ಕನ್ನಡ ಚಿತ್ರರಂಗಕ್ಕೆ ಪ್ರಸ್ತುತ ಕೊಡುಗೆಯಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮತ್ತೆ ತಾಯಿಯಾಗಬೇಕು : ನಟಿ ಸಮಂತಾ
ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.
ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.
ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.
ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.
ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ6 days agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
-
ದಿನದ ಸುದ್ದಿ5 days agoಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ
-
ಅಂಕಣ2 days agoಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
-
ದಿನದ ಸುದ್ದಿ3 days agoಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ
-
ದಿನದ ಸುದ್ದಿ3 days agoನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ
-
ದಿನದ ಸುದ್ದಿ5 hours agoವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
-
ದಿನದ ಸುದ್ದಿ3 days agoಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ

