ದಿನದ ಸುದ್ದಿ
2ಜಿ ಇಥನಾಲ್ ಕೇಂದ್ರವನ್ನು ಶೀಘ್ರದಲ್ಲಿ ಆರಂಭಿಸುವಂತೆ ಜಿ.ಎಂ ಸಿದ್ದೇಶ್ ಸೂಚನೆ
ಸುದ್ದಿದಿನ,ದಾವಣಗೆರೆ : ಭಾರತದ ಅತೀ ದೊಡ್ಡ 2ಜಿ ಇಥನಾಲ್ ಕೇಂದ್ರವನ್ನು ಸ್ಥಾಪಿಸಲು ಜಿಲ್ಲೆಯ ಹರಿಹರ ತಾಲ್ಲೂಕಿನ ಹನಗವಾಡಿಯಲ್ಲಿ ಜಾಗ ನೀಡಲಾಗಿದ್ದು, ಆದಷ್ಟು ಬೇಗ ಈ ಕೇಂದ್ರದ ಕಟ್ಟಡ ಕಾಮಗಾರಿ ಕೆಲಸವನ್ನು ಶೀಘ್ರದಲ್ಲಿ ಆರಂಭಿಸಿ ಹಾಗೂ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶ ಒದಗಿಸುವಂತೆ ಸಂಸದರಾದ ಜಿ.ಎಂ. ಸಿದ್ದೇಶ್ವರ ಸಂಸ್ಥೆಯ ಅಧಿಕಾರಿಗಳಿಗೆ ಸೂಚಿಸಿದರು.
ಡಿ.18 ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮೆ|| ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿ., ಇವರು ಹನಗವಾಡಿ ಗ್ರಾಮ, ಹರಿಹರ ತಾಲ್ಲೂಕು ಇಲ್ಲಿ 60 ಕೆಎಲ್ಪಿಡಿ 2ಜಿ ಇಥನಾಲ್ ಉತ್ಪಾದನೆಯ ಘಟಕವನ್ನು ಸ್ಥಾಪಿಸುವ ಸಂಬಂಧ ಚರ್ಚಿಸಲು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದಕ್ಷಿಣ ಭಾರತದ ರಾಜ್ಯಗಳಲ್ಲಿ ಕರ್ನಾಟಕದ ದಾವಣಗೆರೆ ಜಿಲ್ಲೆಯಲ್ಲಿ 2ಜಿ ಇಥನಾಲ್ ಕೇಂದ್ರ ಸ್ಥಾಪಸಿಲು ಅವಕಾಶ ದೊರೆತಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು, ಅವಶ್ಯವಾದ ತಯಾರಿಗಳನ್ನು ಆದಷ್ಟು ಬೇಗ ಮಾಡಿಕೊಂಡು 2 ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಕಾರ್ಯ ಆರಂಭಿಸುವಂತೆ ತಿಳಿಸಿದರು.
ಸಭೆಯಲ್ಲಿ ಎಂಆರ್ಪಿಎಲ್ ಜನರಲ್ ಮ್ಯಾನೇಜರ್ ಗಿರೀಶ್ ಮಾತನಾಡಿ, ಸಂಸ್ಥೆಯ ಬೆಳವಣಿಗೆ ಮತ್ತು 2ಜಿ ತಂತ್ರಜ್ಞಾನದಲ್ಲಿ ಯಾವ ರೀತಿ ಕಾರ್ಯ ನಿರ್ವಹಿಸಲಿದೆ ಎಂದು ವಿವರಿಸಿದರು. ಈ ಹಿಂದೆ 60 ಕೆಡಿಎಲ್ಪಿ ತಂತ್ರಜ್ಞಾನವನ್ನು ಈಗ 2ಜಿ ಇಥನಾಲ್ ತಂತ್ರಜ್ಞಾನಕ್ಕೆ ಅಭಿವೃದ್ದಿ ಪಡಿಸಲಾಗುತ್ತಿದೆ. ಭಾರತ ದೇಶವು ಪೆಟ್ರೋಲ್ಗೆ ಬೇರೆ ದೇಶಗಳ ಮೇಲೆ ಅವಲಂಬನೆಯಾಗುವುದನ್ನು ಕಡಿಮೆ ಮಾಡಲು ಈ ತಂತ್ರಜ್ಞಾನವನ್ನು ಅಭಿವೃದ್ದಿ ಪಡಿಸಲಾಗುತ್ತಿದೆ. ತಮ್ಮ ಸಂಸ್ಥೆಯಿಂದ ಎಲ್.ಪಿ.ಜಿ. ಡಿಸೇಲ್, ಪೆಟ್ರೋಲ್, ನೆಪ್ತಾ, ಬಿಲಿಯಮ್ ಆಯಿಲ್ಗಳನ್ನು ತಯಾರಿಸುತ್ತಿದ್ದು, ಕರ್ನಾಟ ಸರ್ಕಾರಕ್ಕೆ ರೂ.1000 ಕೋಟಿ ತೆರಿಗೆ ನೀಡುತ್ತಿದೆ ಹಾಗೂ ಭಾರತಕ್ಕೆ ರೂ.11,000 ಕೋಟಿ ತೆರಿಗೆ ನೀಡುತ್ತಿದೆ ಎಂದರು.
2ಜಿ ತಂತ್ರಜ್ಞಾನದಲ್ಲಿ ಆಯಿಲ್ಗಳ ತಯಾರಿಕೆಗಾಗಿ ರೈತರು ಬೆಳೆದ ಬೆಳೆಗಳ ತ್ಯಾಜ್ಯ ವಸ್ತುಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ. ಮೆಕ್ಕೆಜೋಳದ ದಂಟು, ಬೆಂಡು, ಭತ್ತದ ಹುಲ್ಲು, ಹತ್ತಿಯ ಕಡ್ಡಿಗಳನ್ನು ಬಳಸಿಕೊಳ್ಳಲಾಗುತ್ತದೆ ಎಂದರು.
ಸಂಸದರು ಬೆಳೆಯ ತ್ಯಾಜ್ಯಗಳನ್ನು ನೇರವಾಗಿ ರೈತರಿಂದ ಖರೀದಿಸುತ್ತೀರಾ ? ಎಂದು ಕೇಳಿದಾಗ ಅವರು ಕೆಲವು ಏಜೆನ್ಸಿಗಳನ್ನು ಗುರುತಿಸಿದ್ದು, ಅವರು ರೈತರಿಂದ ಖರೀದಿಸಿ ತಮಗೆ ನೀಡುತ್ತಾರೆ ಎಂದು ಮಾಹಿತಿ ನೀಡಿದರು.
ಈ ಸಂಸ್ಥೆಯು ಒಂದು ದಿನಕ್ಕೆ 60000 ಲೀಟರ್ ಆಯಿಲ್ ಸಂಗ್ರಹಿಸುವ ಸಾಮಥ್ರ್ಯ ಹೊಂದಿದ್ದು, ಇದರ ತಯಾರಿಕೆಗೆ 200 ರಿಂದ 300 ಟನ್ ತ್ಯಾಜ್ಯ ಪದಾರ್ಥಗಳು ಬೇಕಾಗುತ್ತವೆ. ಈ ಪ್ರಮಾಣದ ಕಚ್ಚಾ ಪದಾರ್ಥಗಳನ್ನು ರೈತರಿಂದ ಸಂಗ್ರಹಿಸಲಾಗುವುದು. ಹಾಗೂ ನೀರಿಗಾಗಿ ಶಾಂತಿಸಾಗರದ ಕೆರೆಯನ್ನು ಗುರುತಿಸಿದ್ದು, ಸರ್ಕಾರದಿಂದ ಅಧಿಕೃತ ಆದೇಶ ಬಂದ ನಂತರ ತುಂಗಭದ್ರ ನದಿ ನೀರನ್ನು ಬಳಸುತ್ತೇವೆ ಎಂದರು.
ಸಂಸದರು ಶಾಂತಿಸಾಗರದ ನೀರು ಕುಡಿಯಲು ಬಳಸಲಾಗುತ್ತದೆ. ನೀವು ಆ ನೀರನ್ನು ಬಳಸಬೇಡಿ, ಬದಲಾಗಿ ತುಂಗಭದ್ರ ನದಿ ನೀರನ್ನು ಬಳಸುವಂತೆ ಸಲಹೆ ನೀಡಿದರು.
2ಜಿ ಇಥನಾಲ್ ಕಟ್ಟಡ ಕಾಮಗಾರಿಗೆ ಕೇಂದ್ರ ಸರ್ಕಾರದ ‘ಪ್ರಧಾನ್ ಮಂತ್ರಿ ಜೀವನ್’ ಯೋಜನೆಯಲ್ಲಿ ಶೇ.20 ರಷ್ಟು ಅನುದಾನ ನೀಡುತ್ತಾರೆ. ರಾಜ್ಯ ಸರ್ಕಾರದಿಂದ ಯಾವುದೇ ಅನುದಾನ ಇಲ್ಲ, ರಾಜ್ಯ ಸರ್ಕಾರದ ಅನುದಾನಕ್ಕೆ ಅರ್ಜಿ ಸಲ್ಲಿಸುತ್ತೇವೆ ಎಂದಾಗ ಸಂಸದರು ರಾಜ್ಯದಿಂದ ಭೂಮಿ, ನೀರು, ವಿದ್ಯುತ್ ನೀಡುತ್ತಿದ್ದೇವೆ ಅನುದಾನ ನೀಡಲು ಕಷ್ಟ ಆಗುತ್ತದೆ ಎಂದರು.
ಸರ್ಕಾರ 2 ವರ್ಷಗಳ ಹಿಂದೆಯೇ ನಿಮಗೆ ಭೂಮಿ ನೀಡಲಾಗಿದೆ. ಆದರೆ ನೀವು ಇನ್ನು ಕಟ್ಟಡ ಕಾಮಗಾರಿ ಏಕೆ ಆರಂಭಿಸಿಲ್ಲ ಎಂದು ಪ್ರಶ್ನಿಸಿದಾಗ ಸಂಸ್ಥೆಯ ಮ್ಯಾನೇಜರ್ ಅಔS ಇಅ (ಪರಿಸರ ಮಾಲಿನ್ಯ ನಿವಾರಣೆ) ಸರ್ಟಿಫಿಕೇಟ್ ಬಂದ ಕೂಡಲೇ ಕಾಮಗಾರಿ ಆರಂಭಿಸುವುದಾಗಿ ತಿಳಿಸಿದರು.
ಸಂಸದರು 2020ರ ಫೆಬ್ರವರಿಯೊಳಗೆ ಸಂಬಂಧಿಸಿದ ಎಲ್ಲಾ ಸರ್ಟಿಫಿಕೇಟ್ಗಳನ್ನು ಪಡೆದುಕೊಂಡು ಕಾಮಗಾರಿ ಆರಂಭಿಸಬೇಕು. 2023 ಏಪ್ರಿಲ್ ಅಂತ್ಯದ ವೇಳೆಗೆ ಕಟ್ಟಡ ಉದ್ಘಾಟನೆಗೆ ಸಿದ್ದವಾಗಬೇಕೆಂದು ಸೂಚನೆ ನೀಡಿದರು. ಹಾಗೂ ಕಟ್ಟಡ ಕಾಮಗಾರಿಗೆ ಈ ವ್ಯಾಪ್ತಿಯಲ್ಲಿನ ಕುಟುಂಬಗಳನ್ನು ಗುರುತಿಸಲಾಗಿದ್ದು, ಅವರನ್ನು ತೆಗೆದುಕೊಳ್ಳಿ ಎಂದರು.
ಸಂಸ್ಥೆ ಕೆಲಸ ಆರಂಭಿಸಿದ ನಂತರ ಉದ್ಯೋಗದಲ್ಲಿ ದಾವಣಗೆರೆಯ ಸ್ಥಳೀಯ ಜನರಿಗೆ ಆದ್ಯತೆ ನೀಡಬೇಕು. ಅರ್ಹತೆ ಅನುಗುಣವಾಗಿ ಕೆಲಸ ನೀಡಿ. ವಾಚಮ್ಯಾನ್ ಕೆಲಸದಿಂದ ತಂತ್ರಜ್ಞಾನದ ಕೆಲಸ ಮಾಡುವ ಅರ್ಹತೆ ಇದ್ದವರು ಕಂಡು ಬಂದರೆ ಸ್ಥಳೀಯ ನಿವಾಸಿಗಳಿಗೆ ಹೆಚ್ಚಿನ ಆದ್ಯತೆ ನೀಡಿ. ಸಾಧ್ಯವಾದಷ್ಟು ಸ್ಥಳೀಯರಿಗೆ ಉದ್ಯೋಗಾವಕಾಶ ಒದಗಿಸಿಕೊಡುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಪ್ರಭಾರ ಅಪರ ಜಿಲ್ಲಾಧಿಕಾರಿ ನಜ್ಮಾ.ಜಿ, ಉಪವಿಭಾಗಧಿಕಾರಿ ಮಮತಾ ಹೊಸಗೌಡರ್, ಎಂ.ಆರ್.ಪಿ.ಎಲ್ ಸಂಸ್ಥೆಯ ಇಂಡಿಪೆಂಡೆಂಟ್ ಡೈರೆಕ್ಟರ್ ಮಂಜುಳಾ, ಹರಿಹರ ತಹಶೀಲ್ದಾರರಾದ ರಾಮಚಂದ್ರಪ್ಪ, ಪರಿಸರ ಮಾಲಿನ್ಯ ನಿಯಂತ್ರಣಾ ಧಿಕಾರಿಗಳು, ಎಂಆರ್ಪಿಎಲ್ ಸಂಸ್ಥೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.
2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.
3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.
5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.
6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.
7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.
8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.
9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್ಗಳ ಸಮತೋಲನಕ್ಕೆ ಬಹಳ ಮುಖ್ಯ.
10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.
ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಆಶ್ರಯ ಯೋಜನೆ – ಆವಧಿ ವಿಸ್ತರಣೆ
-
ದಿನದ ಸುದ್ದಿ7 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ7 days agoಕವಿತೆ | ದೇವರ ಹೂವು
-
ದಿನದ ಸುದ್ದಿ5 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ5 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoವಸತಿ ಯೋಜನೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

