Connect with us

ದಿನದ ಸುದ್ದಿ

ಶಿವಮೊಗ್ಗದ‌ ‘ಸೆಂಟ್ರಲ್ ಜೈಲ್’ ಬಗ್ಗೆ ನಿಮಗಿಷ್ಟು ತಿಳಿದಿರಲಿ..!

Published

on

ಶಿವಮೊಗ್ಗ ಜಿಲ್ಲಾ ಕೇಂದ್ರ ಕಾರಾಗೃಹ

 

  • ಸಂಧ್ಯಾ ಸಿಹಿಮೊಗೆ

ಒಂದೂವರೆ ಶತಮಾನಗಳ ಕಾಲ ಮಲೆನಾಡಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಮತ್ತು ರೈತರನ್ನು ಕೊಡಿಟ್ಟು ಗೆಲ್ಲಿಗೇರಿಸಿದ ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾಗಿದ್ದು ಶಿವಮೊಗ್ಗ ನಗರ ಜಿಲ್ಲಾ ಕೇಂದ್ರ ಕಾರಾಗೃಹವು ಈಗ ಶಾಶ್ವತವಾಗಿ ಇತಿಹಾಸ ಪುಟ ಸೇರಿದೆ.

ಜಿಲ್ಲಾ ಕೇಂದ್ರ ಕಾರಾಗೃಹ ಕಟ್ಟಡವು ಈಗಾಗಲೇ ನೂತನ ಕಟ್ಟಡಕ್ಕೆ ಸ್ಥಳಾಂತರಕೊಂಡಿದೆ. ಜಿಲ್ಲಾ ಕಾರಾಗೃಹವು ಕೇಂದ್ರ ಕಾರಾಗೃಹವಾಗಿ ಮೇಲ್ದರ್ಜೆಗೇರಿದ್ದು ರಾಜ್ಯದಲ್ಲಿ ಅತ್ಯುತ್ತಮ ವ್ಯವಸ್ಥೆಯನ್ನು ಒಳಗೊಂಡ ಕಾರಾಗೃಹ ಎನಿಸಿಕೊಂಡಿದೆ.

ನಗರದಿಂದ ಸುಮಾರು 15 ಕಿ.ಮೀ ದೂರದಲ್ಲಿ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದ ಹಿಂಬದಿಯಲ್ಲಿ ಓತಿಘಟ್ಟದ ಬಳಿ 62.02 ಎಕರೆ ಪ್ರದೇಶದಲ್ಲಿ 83 ಕೋಟಿ ರೂ ವೆಚ್ಚದಲ್ಲಿ ದಕ್ಷಿಣ ಕೊರಿಯಾ ಮಾದರಿಯಲ್ಲಿ ಅತ್ಯಂತ ವಿಶಿಷ್ಟವಾಗಿ ಕಾರಾಗೃಹವನ್ನು ನಿರ್ಮಿಸಲಾಗಿದೆ. ಕಾರಾಗೃಹದಲ್ಲಿ ಸುಮಾರು 460 ಕೈದಿಗಳಿದ್ದಾರೆ.

ಕಣ್ಗಾವಲಿಗೆ ಎಂದೇ ಸಿ.ಸಿ. ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಹಾಗೂ ಕಟ್ಟಡದ ಮೇಲ್ಭಾಗದಲ್ಲಿ ವಿದ್ಯುತ್ ತಂತಿಗಳ ಅಳವಡಿಕೆ ಜೊತೆಗೆ ಬಂಧಿಖಾನೆಯಿಂದ ತಪ್ಪಿಸಿಕೊಳ್ಳುವುದಕ್ಕೆ ಪ್ರಯತ್ನಿಸಿದರೆ ಆಟೋಮ್ಯಾಟಿಕ್ ಸೈರನ್ ಹೊಡೆಯಲು ಆರಂಭಿಸುತ್ತದೆ.

ಕಾರಾಗೃಹದಲ್ಲಿ ಇರುವಂತಹ ಕೈದಿಗಳಿಗೆ ಗ್ರಂಥಾಲಯ ವ್ಯವಸ್ಥೆ ಹಾಗೂ ಊದುಬತ್ತಿ ತಯಾರಿಸುವ ಉದ್ಯೋಗ ಕಲ್ಪಿಸುವುದರ ಜೊತೆಗೆ ಅವರು ಮಾಡಿದ ಕೆಲಸಕ್ಕೆ ಇಂತಿಷ್ಟು ವೇತನವೆಂದು ನಿಗಧಿಪಡಿಸಿದೆ. ಬಂಧಿಖಾನೆಯಲ್ಲಿ ಇರುವ ಕೈದಿಗಳಿಗೆ ದಿನಕ್ಕೆ ಮೂರು ಹೊತ್ತು ಊಟದ ಜೊತೆಗೆ ವಾರದಲ್ಲಿ ಒಂದು ದಿನ ಮಾಂಸದೂಟವೂ ನೀಡಲಾಗುತ್ತದೆ. ಹಾಗೂ ಕೈದಿಗಳು 2,000 ರೂ. ನೀಡಿದರೆ ಟಿವಿ ಮತ್ತು 500 ರೂ. ನೀಡಿದರೆ ಕೇರಂ ಬೋರ್ಡ್ ಸೇರಿದಂತೆ ಅವರಿಗೆ ಇತರೆ ಮನರಂಜನಾ ಕಾರ್ಯಕ್ರಮಗಳನ್ನು ಒದಗಿಸಲಾಗುವುದು.

ಸಮಾಜದ ನಡುವೆ ಇರುವ ಕಂದಕ ಕಡಿಮೆ ಮಾಡುವ ಉದ್ದೇಶದಿಂದ ಇವರಿಗೆ ಶಿಕ್ಷೆ ನೀಡುವ ಬದಲು ಮನಃಪರಿವರ್ತನೆಗೆ ಹೆಚ್ಚು ಒತ್ತು ನೀಡಲಾಗಿದೆ. ಹೀಗಾಗಿ ಪ್ರತಿವಾರವೂ ಒಂದೊಂದು ಕಾರ್ಯಕ್ರಮ ಆಯೋಜಿಸಲಾಗಿದೆ. ಇಲ್ಲಿರುವ ಸಜಾಬಂದಿಗಳಲ್ಲಿ ಸಾಕಷ್ಟು ಜನ ಪ್ರತಿಭಾವಂತರಿದ್ದಾರೆ. ಎಸ್‍ಎಸ್‍ಎಲ್‍ಸಿಯಿಂದ ಪದವಿ ಓದಿದವರೂ ಇದ್ದಾರೆ. ಅವರಲ್ಲಿರುವ ಪ್ರತಿಭೆಯನ್ನು ಹೊರತರುವ ಉದ್ದೇಶದಿಂದ ನಾಟಕ, ಹಾಡುಗಾರಿಕೆ ಸೇರಿದಂತೆ ಶಿಕ್ಷಣ, ಕಲೆ, ಸಾಂಸ್ಕøತಿಕ ಕಾರ್ಯಕ್ರಗಳನ್ನು ನಡೆಸಲಾಗುತ್ತಿದೆ.

ಕಲರ್ಸ್ ಕನ್ನಡ ವಾಹಿನಿಯಲ್ಲಿ ನಟ ಪುನೀತ್ ರಾಜ್‍ಕುಮಾರ್ ನಡೆಸಿಕೊಡುವ ಕನ್ನಡದ ಕೋಟ್ಯಧಿಪತಿ ಮಾದರಿಯೆಲ್ಲೇ ಕಾರಾಗೃಹದ ಸಜಾಬಂದಿಗಳಿಗೆ “ಸಾವಿರ ರೂಪಾಯಿ ಸರದಾರ” ಎಂಬ ವಿನೂತನ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಈ ಕಾರ್ಯಕ್ರಮದ ಹಿನ್ನಲೆಯಲ್ಲಿ ಕಾರಾಗೃಹದ ಗ್ರಂಥಾಲಯಕ್ಕೆ ಭೇಟಿ ನೀಡುವ ಸಜಾಬಂದಿಗಳ ಸಂಖ್ಯೆ ಹೆಚ್ಚಾಗಿದೆ. ವಾರದಲ್ಲಿ ಸುಮಾರು ನಾಲಕೈದು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಸಾಮಾನ್ಯವಾಗಿ ಜೈಲು ಎಂದರೆ ಸಜಾಬಂದಿಗಳು ಪಾಲಿನ ಸೆರಮನೆ. ಹೀಗಾಗಿ ತಪ್ಪು ಮಾಡಿ ಜೈಲು ಸೇರಿದವರಿಗೆ ಅಲ್ಲಿ ಶಿಕ್ಷೆ ತಪ್ಪಿದಲ್ಲ ಅನ್ನೋ ಮಾತುಗಳಿವೆ. ಆದರಿಂದ ಶಿವಮೊಗ್ಗದ ವಾರ್ತಾ ಮತ್ತು ಸಾವರ್ಜನಿಕ ಸಂಪರ್ಕ ಇಲಾಖೆಯು ಸಜಾಬಂದಿಗಳ ಮನಃಪರಿರ್ವತನೆ ಮಾಡುವ ನಿಟ್ಟಿನಲ್ಲಿ ಕಾರ್ಯಗಳನ್ನು ನಡೆಸುತ್ತಿದೆ.

ಶಿವಮೊಗ್ಗದ “ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ”ಯು ಕೇಂದ್ರ ಕಾರಾಗೃಹದ ಜೈಲು ನಿವಾಸಿಗಳಲ್ಲಿ ಜಾಗೃತಿಗಳ ಅರಿವು ಮೂಡಿಸುವ ನಿಟ್ಟಿನಲ್ಲಿ “ಬದಲಾದ ಬದುಕು”ಎಂಬ ಶೀರ್ಷಿಕೆಯಡಿಯಲ್ಲಿ ಬೀದಿನಾಟಕ ಹಾಗೂ ಜನಪದ ಗೀತೆಗಳ ವಿಶೇಷ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಅವರಲ್ಲಿ ಇರುವ ದ್ಷೇಷದ ಮನೋಭಾವನೆಯು ದೂರವಾಗುವಂತೆ ಮಾಡುವ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು ಹೆಮ್ಮೆಯ ವಿಷಯವಾಗಿದೆ. ಈ ರೀತಿ ಕೈದಿಗಳ ಮನಃಪರಿವರ್ತನೆ ಮಾಡುವ ಕಾರ್ಯ ನಡೆಯಬೇಕಿದೆ.

ಹೀಗೆ ಪ್ರತಿಯೊಬ್ಬರ ಜೀವನದಲ್ಲಿಯೂ ಇಂತಹದೊಂದು ಅನುಭವದ ಪಾಠ ಎಲ್ಲರಿಗೂ ಆಗಿರುತ್ತದೆ. ಆ ಅನುಭವದಿಂದ ಕಲಿತ ಪಾಠ ಬಹಳಷ್ಟು ಇರುತ್ತದೆ. “ಅಪರಾಧಗಳ ವೈಭವೀಕರಣ ಬೇಡ, ಕಾನೂನಿನ ದುರುಪಯೋಗಕ್ಕೆ ಅವರಣ ಕೂಡದೇ ಕಾನೂನನ್ನು ಗೌರವಿಸುವ ಕೆಲಸ ಮಾಡಬೇಕು. ಇದೆಲ್ಲಕ್ಕೂ ಸಾರ್ವಜನಿಕ ಜಾಗ್ರತಿಯೂ ಬೇಕು. ಮಾನವ ಹಕ್ಕು ತಿಳಿಯಿರಿ, ಕರ್ತವ್ಯವನ್ನು ಪಾಲಿಸಿರಿ”. ಆಗ ಮಾತ್ರ ಸಮಾಜದಲ್ಲಿ ಒಬ್ಬ ಉತ್ತಮ ಮಾನುಷ್ಯನಾಗಿ ಬದುಕುವುದಕ್ಕೆ ಸ್ಯಾಧ್ಯವಾಗುವುದು.

ಪ್ರತಿಯೊಬ್ಬ ಮನುಷ್ಯ ಜೀವನದಲ್ಲಿ ಒಂದಲ್ಲ ಒಂದು ತಪ್ಪು ಮಾಡಿಯೇ ಇರುತ್ತಾನೆ. ಅವನು ಹುಟ್ಟುತ್ತ ಎಷ್ಟೇ ಒಳ್ಳೆಯವನಾದರೂ ಬೆಳೆಯುತ್ತಾ ಹೋದಂತೆ ಸುತ್ತ ಮುತ್ತಲ ಪರಿಸರ, ಸ್ನೇಹಿತರ ಬಳಗ ಬೀರುವ ಪರಿಣಾಮ ತಪ್ಪು ಮಾಡುವಂತೆ ಪ್ರೇರೆಪಿಸುತ್ತದೆ. ಆತ/ಆಕೆ ತನ್ನ ನಿಯಂತ್ರಣಕ್ಕೂ ಮೀರಿದ ಮನಸ್ಥಿತಿ ಹೊಂದುತ್ತಾರೆ. ಅದು ಒಳ್ಳೆಯದೋ ಅಥವಾ ಕೆಟ್ಟದೋ ಅರಿಯದಷ್ಟೂ ಕೆಲವೂಮ್ಮೆ ಮುಂದುವರೆಯುತ್ತಾರೆ. ಒಮ್ಮೆ ಅದು ತಪ್ಪೆಂದು ತಿಳಿದರೆ ತಿದ್ದಿಕೊಳ್ಳುವ ಜಾಣರು ಹಲವರಾದರೆ ಆ ತಪ್ಪು ದಾರಿಯೇ ಒಳ್ಳೆಯದೆಂದು ಆರಿಸಿಕೊಳ್ಳುವವರು ಕೆಲವರು ಆದರಿಂದಲೇ ಬುದ್ಧಿ ಕಲಿಯುವವರು ಹಲವರು.

ಸ್ವಾರ್ಥಕ್ಕಾಗಿ ಸಮಾಜವನ್ನು ಬಲಿಕೊಡುವ ಕೆಲಸ ಬೇಡ…! ಯುವಕರು ಸಮಾಜದಲ್ಲಿ ತೆಲೆ ಎತ್ತಿ ನಡೆಯುವ ಸತ್ಕಾರ್ಯಗಳ ಮೂಲಕ ಮಾರ್ಗದರ್ಶಿ ಜೀವನ ವಿಧಾನಗಳನ್ನು ಅಳವಡಿಸಿಕೊಂಡು ಬದುಕುವ ಮಾರ್ಗವನ್ನು ರೂಪಿಸಿಕೊಳ್ಳಬೇಕು. ಆಗ ಮಾತ್ರ ಸಮಾಜದಲ್ಲಿ ಒಳ್ಳೆ ಹೆಸರು ಪಡೆದುಕೊಳ್ಳುವುಕ್ಕೆ ಹಾಗೂ ಬದುಕನ್ನು ನಡೆಸುವುದಕ್ಕೆ ಸಾಧ್ಯವಾಗುತ್ತದೆ. ಇಲ್ಲವಾದರೆ ಸಮಾಜ ನಮ್ಮನ್ನು ನೋಡುವ ದೃಷ್ಠಿಕೋನವೇ ಬದಲಾಗುತ್ತದೆ.

ಅಪರಾಧಿಗಳ ಮನಪರಿವರ್ತನೆ: ದ್ವೇಷ-ಉದ್ರೇಕ ಭಾವನೆಗಳನ್ನು ನಾಶಪಡಿಸಿ ಅಪರಾಧಿಗಳ ಮನಪರಿವರ್ತನೆ ಮಾಡುವುದರ ಮೂಲಕ ಸಮಾಜದಲ್ಲಿ ಮೊದಲಿನ ಸ್ಥಿತಿಯನ್ನು ಏರ್ಪಡಿಸುವುದಕೋಸ್ಕರ ಕ್ಷಮಾದಾನವನ್ನು ನೀಡುವ ಸಂಪ್ರದಾಯ ಎಲ್ಲಾ ಕಡೆಗಳಲ್ಲೂ ಆಚರಣೆಯಲ್ಲಿವೆ.

ಕೃಪೆ : ಶಿವಮೊಗ್ಗ ವಾರ್ತಾಭವನ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending