ದಿನದ ಸುದ್ದಿ
NRC ಬೇಡ ಅನ್ನುವುದಕ್ಕೊಂದು ತಾಜಾ ಉದಾಹರಣೆ, ಮಿಸ್ ಮಾಡ್ದೆ ಓದಿ..!
- ಉದಯ್ ಗಾವ್ಕರ್
ಪಾರ್ಬತಿದೇವಿ.ಆಸ್ಸಾಂನ ಚಿರಾಂಗ್ ಜಿಲ್ಲೆಯ ಹಂಚರಾ ಪೋಲಿಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈಕೆಯ ಮನೆಯಿದೆ. ಕಳೆದ ಎರಡು ವರ್ಷ ಎಂಟು ತಿಂಗಳಿಂದ detention camp ಎಂದು ಕರೆದುಕೊಳ್ಳುವ ಜೈಲಿನಲ್ಲಿ ಇದ್ದಾಳೆ. ಈಕೆಯ ಹತ್ತಿರ ಆಧಾರ್ ಇದೆ. ವೋಟರ್ ಕಾರ್ಡ್ ಇದೆ. ರೇಷನ್ ಕಾರ್ಡ್ ಇದೆ.
ಆದರೆ, ಈ ದಾಖಲೆಗಳು ಆಕೆಯನ್ನು ಇದೇ ದೇಶದವಳು ಎಂದು ಸಾಬೀತುಮಾಡಲು ಸಾಧ್ಯವಾಗಲಿಲ್ಲ. ಆಕೆಯ ಮಗ ಬಿಶ್ವನಾಥ ಸದ್ಯ ಎಲ್ಲ ಪ್ರಯತ್ನಗಳನ್ನು ಕೈಬಿಟ್ಟು ಜೈಲಿನಲ್ಲಿ ಮೂರು ವರ್ಷಗಳ ಅವಧಿ ಮುಗಿದ ನಂತರ ಆಕೆ ಬಿಡುಗಡೆಯಾಗುವುದನ್ನು ಕಾಯುತ್ತಿದ್ದಾನೆ. ತನ್ನಮ್ಮ ತನ್ನ ಕೊನೆಯ ದಿನಗಳನ್ನು ಜೈಲಿನಲ್ಲಿ ಕಳೆಯಬಾರದು ಎಂಬುದು ಅವನಾಸೆ.
ಆತ ಮಾಡಬಹುದಾದ ಪ್ರಯತ್ನಗಳನ್ನೆಲ್ಲ ಮಾಡಿದ್ದಾನೆ. ಅಮ್ಮ ಹುಷಾರಿಲ್ಲದಾಗ ಬೇಲ್ ಸಿಗಬಹುದೆಂದು ವಕೀಲರನ್ನು ಗೊತ್ತುಮಾಡಿಕೊಂಡು ಹೈಕೋರ್ಟ್ ವರೆಗೆ ಅಲೆದಿದ್ದಾನೆ. ಫೊರೆನರ್ಸ್ ಟ್ರಿಬ್ಯುನಲ್ಲಿನಲ್ಲಿಗೂ ಸೆಣಿಸಿದ್ದಾನೆ. ರಿಕ್ಷಾ ಚಲಾಯಿಸಿ ಜೀವನ ನಿರ್ವಹಣೆ ಮಾಡುವ ಬಿಶ್ವನಾಥ ವಕೀಲರಿಗೆ ಕೊಟ್ಟಿದ್ದೇ ಹತ್ತಿರ ಹತ್ತಿರ ಎರಡು ಲಕ್ಷ ರೂಪಾಯಿಗಳಾಗಿವೆ.
ಫಾರಿನರ್ಸ್ ಟ್ರಿಬ್ಯುನಲ್ ನ ಮೊದಲ ಕೆಲವು ಕಲಾಪಗಳನ್ನು ಪಾರ್ಬತಿ ತಪ್ಪಿಸಿಕೊಂಡಿದ್ದರು. ಆ ನಂತರ ತನ್ನ ತಂದೆಯ 1949 ರ ರೇಷನ್ ಕಾರ್ಡ್ ಮತ್ತು ಅವರ ಹೆಸರಿರುವ 1970 ರ ಮತದಾರರ ಪಟ್ಟಿಯನ್ನು ಸಂಪಾದಿಸಿ ಟ್ರಿಬ್ಯುನಲ್ ಗೆ ಕೊಟ್ಟರೂ ಪ್ರಯೋಜನವಾಗಲಿಲ್ಲ.
ತಾನು ಕೊಟ್ಟ ದಾಖಲಾತಿಯಲ್ಲಿರುವ ವ್ಯಕ್ತಿ ತನ್ನ ತಂದೆ ಎಂಬುದನ್ನು ಆಕೆಯಿಂದ ಸಾಬೀತುಪಡಿಸಲಾಗಲಿಲ್ಲ. ಪಂಚಾಯತ್ ಕಾರ್ಯದರ್ಶಿ ತನ್ನಿಂದ ನೀಡಬಹುದಾದ ಪ್ರಮಾಣ ಪತ್ರಗಳನ್ನೆಲ್ಲ ನೀಡಿ ತಮ್ಮೂರಿನ ವೃದ್ಧ ತಾಯಿಯನ್ನು ಊರಲ್ಲಿ ಉಳಿಸಿಕೊಳ್ಳಲು ಪ್ರಯತ್ನಿಸಿದ್ದು ಫಲ ನೀಡಲಿಲ್ಲ.
ಇದು ಪಾರ್ಬತಿಯ ಕತೆ ಮಾತ್ರವಲ್ಲ. ಕಡಿಮೆ ಆದಾಯವಿರುವ ಮತ್ತು ಸಾಮಾಜಿಕ ಶ್ರೇಣಿಯಲ್ಲಿ ಕೆಳಸ್ತರದಲ್ಲಿರುವ ಬಹುತೇಕ ವಿವಾಹಿತ ಹೆಂಗಸರಿಗೆ ತಮ್ಮ ತಂದೆಯ ಕುಟುಂಬದೊಂದಿಗೆ ಸಂಬಂಧ ಖಾತರಿಪಡಿಸಲು ಸಾಧ್ಯವಾಗುತ್ತಿಲ್ಲ.
ಇತ್ತೀಚಿನ ಸುಪ್ರೀಂ ಕೋರ್ಟ್ ತೀರ್ಪು ಆಕೆಯ ಜೈಲಿನ ಅವಧಿಯನ್ನು ಮುಂದಿನ ನಾಲ್ಕು ತಿಂಗಳಿಗೆ ಮೊಟಕುಗೊಳಿಸಿದೆ. ಅಲ್ಲಿಯವರೆಗೂ ಆಕೆ ಬದುಕಿರಲಿ, ಜೀವಂತ ಮನೆ ತಲುಪಲಿ ಮತ್ತು ತನ್ನ ಮನೆಯಲ್ಲೇ ಕೊನೆಯ ದಿನಗಳನ್ನು ಆಕೆ ಕಳೆಯಲಿ ಎಂದು ಹಾರೈಸೋಣ!
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


