Connect with us

ಬಹಿರಂಗ

CAA, NRC, NPR ಭಾರತದ ಎದೆ ಸೀಳುವ ತ್ರಿಶೂಲ : ಮೋದಿ-ಶಾ ಕಾರ್ಖಾನೆಯ ಹತ್ತು ಮಹಾ ಸುಳ್ಳುಗಳು

Published

on

ಮೋದಿ ಸರಕಾರದ ಭಾರತದ ಎದೆ ಸೀಳುವ ಕ್ರಮಗಳಾದ CAA, NRC, NPR ಕುರಿತುಸಿಪಿಐ(ಎಂ) ಸದ್ಯದಲ್ಲೇ ಪ್ರಕಟಿಸಲಿರುವ ಪುಸ್ತಿಕೆಯ ಸಾರಾಂಶಇಲ್ಲಿದೆ. ಇವುಗಳ ವಿರುದ್ಧತೀವ್ರ ಪ್ರತಿಭಟನೆಯ ನಂತರ ಈ ಕುರಿತು ಮೋದಿ ಸರಕಾರ ಹರಿಯಬಿಟ್ಟಿರುವ ಹತ್ತು ಮಹಾ ಸುಳ್ಳುಗಳನ್ನು ಬಯಲು ಮಾಡಿ ಸತ್ಯ ಸಂಗತಿಯನ್ನುಈ ಪುಸ್ತಿಕೆಯಲ್ಲಿ ವಿವರಿಸಲಾಗಿದೆ. ಇಲ್ಲಿ ಹತ್ತು ಮಹಾ ಸುಳ್ಳುಗಳು ಮತ್ತುಚುಟುಕಾದ ಉತ್ತರವಿದೆ.

ಮೋದಿ ಸರಕಾರವು ಭಾರತದ ಎದೆಯನ್ನೇ ಸೀಳಲು ಇರಿದಿರುವ ತ್ರಿಶೂಲದ ಮೂರು ಅಲಗುಗಳೆಂದರೆ : ಪೌರತ್ವತಿದ್ದುಪಡಿ ಕಾಯಿದೆ(CAA), ನಾಗರಿಕರ ರಾಷ್ಟ್ರೀಯ ರಿಜಿಸ್ಟರ್(NRC) ಮತ್ತುರಾಷ್ಟ್ರೀಯ ಜನಸಂಖ್ಯಾ ರಿಜಿಸ್ಟರ್(NRC). ರಾಷ್ಟ್ರೀಯ ಜನ ಸಂಖ್ಯಾ ರಿಜಿಸ್ಟರ್ (ಎನ್.ಪಿ.ಆರ್) ನ್ನು ಸಮಕಾಲೀನಗೊಳಿಸಲು ತಕ್ಷಣತಯಾರಿ ನಡೆಸಲುಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಸಿಪಿಐ(ಎಂ) ಬಲವಾಗಿ ವಿರೋಧಿಸಿದ ಪೌರತ್ವ ತಿದ್ದುಪಡಿಕಾಯಿದೆ (ಸಿಎಎ) ಮಂಜೂರಾದ ನಂತರ, ಪೌರತ್ವ ಹಕ್ಕುಗಳಿಗೆ ಕೋಮುವಾದಿ ಬಣ್ಣಕೊಡುವ ಚೌಕಟ್ಟು ಸಾಧಿಸುವತ್ತ ಇದು ಎರಡನೇ ಅಪಾಯಕಾರಿ ಹೆಜ್ಜೆ.

ಆಸ್ಸಾಂಒಪ್ಪಂದದಚಾರಿತ್ರಿಕ ಸನ್ನಿವೇಶದಿಂದಾಗಿ ಸಿಎಎ ಮತ್ತುಅದಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳಿಂದ ಈಶಾನ್ಯ ಭಾರತದ ಪ್ರದೇಶಗಳನ್ನು ಹೊರಗಿಡಬೇಕೆಂಬುದು ಸಿಪಿಐ(ಎಂ) ನಿಲುವು. ಪೌರತ್ವತಿದ್ದುಪಡಿ ಮಸೂದೆ (ಸಿಎಬಿ) ಗೆ ಇದನ್ನುತಿದ್ದುಪಡಿಯಾಗಿ ಸಿಪಿಐ(ಎಂ) ಸೂಚಿಸಿತ್ತು. ಆದರೆಅದನ್ನು ಸರಕಾರ ತಿರಸ್ಕರಿಸಿದೆ. ಆಸ್ಸಾಂಒಪ್ಪಂದದದಲ್ಲಿ ಪೌರತ್ವಕ್ಕೆ 1971ರ ಗಡುವನ್ನು ನಿಗದಿ ಪಡಿಸಲಾಗಿದೆ. ಅದರ ನಂತರ ಬಂದವರ ನಡುವೆ ಮತಧರ್ಮದಆಧಾರದ ಮೇಲೆ ಯಾವುದೇತಾರತಮ್ಯ ಮಾಡಲಾಗಿಲ್ಲಎಂಬುದು ಗಮನಿಸಬೇಕಾದಅರ್ಥಪೂರ್ಣ ಅಂಶ. ಸಿಎಎ ಆಸ್ಸಾಂಒಪ್ಪಂದದ ನೇರ ಹಲ್ಲೆ ನಡೆಸುತ್ತದೆ ಮತ್ತು “ವಿದೇಶೀಯರ” ಪ್ರಶ್ನೆಗೆ ಕೋಮುವಾದಿ ಆಯಾಮವನ್ನು ಸೇರಿಸುತ್ತದೆ.

ಈಗ ದೇಶದಾದ್ಯಂತ ಭಾರೀ ಪ್ರತಿಭಟನೆಗಳು ವ್ಯಕ್ತವಾಗಿರುವುದರಿಂದ ಮೊದಿ-ಶಾ ಜೋಡಿತಮ್ಮ ಸುಳ್ಳಿನ ಸಾಮೂಹಿಕ ಉತ್ಪಾದನೆಯ ಫ್ಯಾಕ್ಟರಿಗಳನ್ನು ಕೆಲಸಕ್ಕೆ ಹಚ್ಚಿದ್ದಾರೆ. ಹಿಟ್ಲರನಜರ್ಮನಿಯಲ್ಲಿ ನಾಜೀ ಪ್ರಚಾರದ ನೀತಿಯೊಂದನ್ನುಇಲ್ಲಿ ನೆನಪಿಸಿಕೊಳ್ಳಬಹುದು : “ಒಂದು ಸುಳ್ಳನ್ನು ಸಾವಿರ ಬಾರಿ ಹೇಳುತ್ತಾ ಹೋದರೆಅದು ಸತ್ಯವಾಗುತ್ತದೆ”. ಅದೇ ಮೋದಿ ಸರಕಾರದ ನೀತಿ ಸಹ ಆಗಿದೆ. ಆದ್ದರಿಂದ ಈ ಮೋದಿ ಸರಕಾರದ ಪ್ರತಿಯೊಂದು ಸುಳ್ಳನ್ನು ಬಯಲುಪಡಿಸಬೇಕಾಗಿದೆ.ಅವರ ಸುಳ್ಳಿನ ಪಟ್ಟಿ ದಿನೇ ಹೆಚ್ಚುತ್ತಲೇಇದೆ.

ಇಲ್ಲಿಯವರೆಗಿನ ಹತ್ತು ಮಹಾ ಸುಳ್ಳುಗಳು ಹೀಗಿವೆ 

ಮಹಾಸುಳ್ಳು 1 : ಸಿಎಎ ಕಾಯಿದೆಯಲ್ಲಿ ತಾರತಮ್ಯವಿಲ್ಲ. ಕಿರುಕುಳಕ್ಕೊಳಗಾದವರ ನೆರವಿಗೆ ಧಾವಿಸುವುದು ಭಾರತದ ಸಂಸ್ಕøತಿ. ಯಾವ ಭಾರತೀಯ ನಾಗರಿಕನಿಗೂ ಇದರಿಂದ ತೊಂದರೆಯಾಗುವುದಿಲ್ಲ.

ಸತ್ಯ ಸಂಗತಿ : ಭಾರತೀಯ ಪೌರತ್ವಕಾಯಿದೆ 1955ರ ಪ್ರಕಾರ ಭಾರತೀಯ ನಾಗರಿಕನಾಗುವಐದು ವಿಧಾನಗಳಲ್ಲಿ (ಹುಟ್ಟಿನಿಂದ, ತಂದೆ-ತಾಯಿ ನಾಗರಿಕತ್ವದಿಂದ, ನೆಲೆಸುವಿಕೆಯಿಂದ, ರಿಜಿಸ್ಟರ್ ಮಾಡುವ ಮೂಲಕ, ಪ್ರದೇಶದ ಸೇರಿಸುವಿಕೆಯಿಂದ) ಮತಧರ್ಮದ ಅಥವಾ ಇನ್ಯಾವುದೇ ಆಧಾರದ ಮೇಲೆ ಯಾವುದೇತಾರತಮ್ಯವಿರಲಿಲ್ಲ. ಇದು ಪೌರತ್ವಕ್ಕೆ ಮತಧರ್ಮ ಸೇರಿದಂತೆಯಾವುದೇ ನೆಲೆಯಲ್ಲಿ ತಾರತಮ್ಯ ಮಾಡದಿರುವ ನಮ್ಮ ಸಂವಿಧಾನದ ಆಶಯಕ್ಕೆ ಅನುಗುಣವಾಗಿದೆ. ಸಿಎಎ ಮೂರು ವಿಧದ ತಾರತಮ್ಯವನ್ನು ಸೇರಿಸಿ ಸಂವಿಧಾನದ ಆಶಯಗಳನ್ನು ಉಲ್ಲಂಘಿಸಿದೆ. ನೆರೆಯ ದೇಶಗಳಲ್ಲಿ ಮೂರು ದೇಶಗಳ – ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನದ– ವಲಸೆಗಾರರಿಗೆ ಬೇರೆ ನಿಯಮಗಳನ್ನು ರೂಪಿಸಿದೆ.

ಈ ಮೂರು ದೇಶಗಳ ವಲಸೆಗಾರರಲ್ಲೂ ಮುಸ್ಲಿಮರನ್ನು ಹೊರಗಿಡಲಾಗಿದೆ. ಈ ಮೂರು ದೇಶಗಳ ಮುಸ್ಲಿಮೇತರ ವಲಸೆಗಾರರಿಗೆ ಪೌರತ್ವಕ್ಕೆ ಅರ್ಹತೆಯ ಅವಧಿಯನ್ನು ಇತರರಿಗೆ ಇರುವ 11 ವರ್ಷಗಳಿಂದ 5 ವರ್ಷಕ್ಕೆ ಕಡಿತಗೊಳಿಸಲಾಗಿದೆ. ಕಿರುಕುಳಕ್ಕೊಳಗಾದವರ ಮತ್ತು ನಿರಾಶ್ರಿತರ ನೆರವಿಗೆಧಾವಿಸುವುದು ಸರಿಯಾದ್ದೇ. ಆದರೆಅಲ್ಲೂ ಮತಧರ್ಮ, ದೇಶ, ಭಾಷೆಗಳ ಆಧಾರದಲ್ಲಿ ತಾರತಮ್ಯ ತೋರಲಾಗಿದೆ.

ಶ್ರೀಲಂಕಾದಲ್ಲಿ ಧಾರ್ಮಿಕ, ಭಾಷೆಎರಡೂ ನೆಲೆಗಳಲ್ಲಿ ತಾರತಮ್ಯ ಕಿರುಕುಳ ತಾಳಲಾರದೆ ಭಾರತದಲ್ಲಿ ದಶಕಗಳಿಂದ ನೆಲೆಸಿರುವ ಹತ್ತಾರು ಲಕ್ಷ ತಮಿಳರನ್ನು ಹೊರಗಿಡಲಾಗಿದೆ. ಪಾಕಿಸ್ತಾನದಲ್ಲಿಧಾರ್ಮಿಕ ತಾರತಮ್ಯಕ್ಕೊಳಗಾಗಿರುವ ಶಿಯಾ, ಅಹಮದೀಯ ಮುಂತಾದ ಅಲ್ಪಸಂಖ್ಯಾತರನ್ನೂ, ಮ್ಯಾನ್ಮಾರಿನರೋಹಿಂಗ್ಯ ಮುಸ್ಲಿಮರ ನೆರವಿಗೆಧಾವಿಸದಿರುವುದು ಭಾರತೀಯ ಸಂಸೃತಿಯ ಘನತೆ ಮತ್ತು ಸಂವಿಧಾನದ ಆಶಯ ಎರಡಕ್ಕೂತಕ್ಕುದಲ್ಲ.

ಮಹಾಸುಳ್ಳು 2 : ವಲಸಿಗ ಸಮುದಾಯಗಳನ್ನು ಹಿಂದೆಬೆಂಬಲಿಸಿದ ಕಾಂಗ್ರೆಸ್ ಮತ್ತು ಸಿಪಿಐ(ಎಂ) (20ನೇ ಮಹಾಧಿವೇಶನದ ನಿರ್ಣಯ ಮತ್ತು ಆಗಿನ ಪ್ರಧಾನ ಕಾರ್ಯದರ್ಶಿಯ ಪತ್ರದಲ್ಲಿ ದಾಖಲಿಸಿದಂತೆ) ಪಕ್ಷಗಳು ಈಗ ಮತಬ್ಯಾಂಕ್ ರಾಜಕೀಯದಿಂದಾಗಿ ಈ ತಿದ್ದುಪಡಿಯನ್ನು ವಿರೋಧಿಸುತ್ತಿವೆ.

ಸತ್ಯ ಸಂಗತಿ : ಕಿರುಕುಳಕ್ಕೊಳಗಾದವರಿಗೆ ನಿರಾಶ್ರಿತರಾದವರಿಗೆ ಆಶ್ರಯಕೊಡಬೇಕೆಂಬುದು ಯಾವತ್ತೂ ಕಮ್ಯುನಿಸ್ಟ್, ಎಡ ಚಳುವಳಿಗಳ, ಸಿಪಿಐ(ಎಂ) ಪಕ್ಷದ ನಿಲುವಾಗಿತ್ತು.1947ರ ದೇಶ ವಿಭಜನೆ ಮತ್ತು 1971ರ ಪಾಕಿಸ್ತಾನಿ ಮಿಲಿಟರಿ ಸರಕಾರದ ದೌರ್ಜನ್ಯಗಳ ಬಲಿಪಶುಗಳಾದ ಈಗಿನ ಬಾಂಗಾದೇಶದ ನಿರಾಶ್ರಿತರಿಗೆ ನೆಲೆ ಒದಗಿಸಲು ಪೌರತ್ವ ಕೊಡಲು ಸಿಪಿಐ(ಎಂ)ಹೋರಾಡಿತ್ತು. ಮಾತ್ರವಲ್ಲ ನಿರಾಶ್ರಿತರಾಗಿ ಬಂದು ನೆಲೆಸಿದ ನಾಮಶೂದ್ರರಿಗೆದಲಿತ ಸ್ಥಾನಮಾನವನ್ನೂ ಪಶ್ಚಿಮ ಬಂಗಾಳದಲ್ಲಿ ಒದಗಿಸಿತ್ತು. ಅವರು ನೆಲೆಸಿದ ಇತರ ರಾಜ್ಯಗಳಲ್ಲೂ ಈ ಸ್ಥಾನಮಾನ ಸಿಗುವಂತೆ ಹೋರಾಟ ನಡೆಸಿತ್ತು.

ಆದರೆಯಾವತ್ತೂ ಮತಧರ್ಮದ ಅಥವಾ ಇನ್ಯಾವುದೇ ಆಧಾರದ ಮೇಲೆ ತಾರತಮ್ಯದ ನೀತಿಯನ್ನು ಬೆಂಬಲಿಸಿರಲಿಲ್ಲ. ಸಿಎಬಿ ಗೆ ಸಿಪಿಐ(ಎಂ) ಮಂಡಿಸಿದ ತಿದ್ದುಪಡಿಯಲ್ಲಿ ನಿರಾಶ್ರಿತರಿಗೆ ವಲಸಿಗರಿಗೆ ಆಶ್ರಯಕೊಡುವಲ್ಲಿ ತಾರತಮ್ಯವನ್ನು ತೆಗೆದು ಹಾಕುವ ತಿದ್ದುಪಡಿಗಳನ್ನು ಮಂಡಿಸಿತ್ತು. ಈಗ ಮೊಸಳೆ ಕಣ್ಣೀರು ಹಾಕುವ ಆರೆಸ್ಸೆಸ್ ಆಗ ಬಂಗಾಳದ ನಿರಾಶ್ತಿತರ ಬಗ್ಗೆ ಮೌನವಾಗಿತ್ತು.ಬಿಜೆಪಿ ಆಡಳಿತದ ಯು.ಪಿ, ಉತ್ತರಾಖಂಡ, ಮಧ್ಯಪ್ರದೇಶದ ಬಿಜೆಪಿ ಸರಕಾರಗಳು ನಾಮಶೂದ್ರರಿಗೆ ದಲಿತ ಸ್ಥಾನಮಾನಕೊಡುವುದಕ್ಕೆ ನಿರಾಕರಿಸಿದ್ದವು.

ಮಹಾಸುಳ್ಳು 3 :ಸಿಎಎ (ಪೌರತ್ವತಿದ್ದುಪಡಿಕಾಯಿದೆ) ಗೂ ಎನ್.ಆರ್.ಸಿ.(ನಾಗರಿಕರರಾಷ್ಟ್ರೀಯರಿಜಿಸ್ಟರ್)ಗೂ ಯಾವುದೇ ಸಂಬಂಧವಿಲ್ಲ. ಅವುಗಳು ಪ್ರತ್ಯೇಕವಾದುವುಗಳು. ವಿರೋಧ ಪಕ್ಷಗಳು ಇವೆರಡರ ನಡುವೆತಪ್ಪಾಗಿ ಸಂಬಂಧಕಲ್ಪಿಸುತ್ತಿವೆ.

ಸತ್ಯ ಸಂಗತಿ :ಸಿಎಎ ಗೂ ಎನ್.ಆರ್.ಸಿ. ಗೂ ಸಂಬಂಧ ಕಲ್ಪಿಸಿರುವುದು ಗೃಹಮಂತ್ರಿಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷಜೆ ಪಿ ನಡ್ಡಾಅವರು, ವಿರೋಧ ಪಕ್ಷಗಳಲ್ಲ. ಈ ವರ್ಷವೇಏಪ್ರಿಲ್ ನಲ್ಲಿ ಬಂಗಾಳದಲ್ಲಿ ಮತ್ತುಡಿಸೆಂಬರ್ 9 ರಂದು ಪಾರ್ಲಿಮೆಂಟಿನಲ್ಲಿ ಮಾಡಿದ ಹೇಳಿಕೆಗಳಲ್ಲಿ ಅಮಿತ್ ಶಾ ಮತ್ತುಡಿಸೆಂಬರ್ 19 ರಂದುಜೆ ಪಿ ನಡ್ಡಾ ಹೇಳಿಕೆಗಳಿಂದ ಬಿಜೆಪಿಯ ಈ ಹುನ್ನಾರ ಸ್ಪಷ್ಟ. ಸಿಎಎ ಮುಸ್ಲಿಮೇತರ ‘ನಿರಾಶ್ರಿತ’ರಿಗೆ ನಾಗರಿಕತ್ವಕೊಡುತ್ತದೆ. ಎನ್. ಆರ್.ಸಿ. “ನುಸುಳುಕೋರರ”ನ್ನು ಗುರುತಿಸುತ್ತದೆ. ಸಿಎಎ ನಲ್ಲಿ ಹೊರಗಿಟ್ಟ ಮುಸ್ಲಿಮರನ್ನು “ನುಸುಳುಕೋರರ”ನ್ನಾಗಿ ಮಾಡಿ ಹೊರಗಟ್ಟುವುದು ಬಿಜೆಪಿಯ ಹುನ್ನಾರ

ಮಹಾಸುಳ್ಳು 4 : ಡಿಸೆಂಬರ್ 22ರ ದೆಹಲಿ ರ್ಯಾಲಿಯಲ್ಲಿ “ತಮ್ಮ ಸರಕಾರ 2014ರಲ್ಲಿ ನನ್ನ ಸರಕಾರಕ್ಕೆಅಧಿಕಾರಕ್ಕೆ ಬಂದಾಗಿನಿಂದ ಎನ್.ಆರ್.ಸಿ ಬಗ್ಗೆ ಎಲ್ಲೂಯಾವುದೇಚರ್ಚೆ ನಡೆದಿಲ್ಲ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಸತ್ಯ ಸಂಗತಿ : ಜೂನ್20, 2019 ರ ಸದನಗಳ ಜಂಟಿಅಧಿವೇಶನಕ್ಕೆಅಧ್ಯಕ್ಷರು ಮಾಡಿದ ಭಾಷಣದಲ್ಲಿ, ನವೆಂಬರ್ 21, 2019ರಂದು ಅಮಿತ್ ಶಾ ರಾಜ್ಯಸಭೆಯಲ್ಲಿ ಮಾಡಿದ ಭಾಷಣದಲ್ಲಿಎನ್.ಆರ್.ಸಿ ಬಗ್ಗೆ ಸ್ಪಷ್ಟಉಲ್ಲೇಖವಿದೆ. ಮಾತ್ರವಲ್ಲ, ಎನ್.ಆರ್.ಸಿಜಾರಿಯ ಬಗ್ಗೆ ಕೇಂದ್ರ ಸರಕಾರದ ಮಂತ್ರಿಗಳ 9 ಅಧಿಕೃತ ಹೇಳಿಕೆಗಳಿವೆ. ಇವೆಲ್ಲ ಹೇಳಿಕೆಗಳನ್ನು ಕೇಂದ್ರ ಸಂಪುಟದಲ್ಲಿ ಯಾವುದೇ ಚರ್ಚೆಯಿಲ್ಲದೆ ಮಾಡಲಾಗಿದೆಯೇ?

ಮಹಾಸುಳ್ಳು 5 :ಎನ್.ಆರ್.ಸಿ. ಪ್ರಕ್ರಿಯೆ ಕಾನೂನು ಪ್ರಕಾರಈವರೆಗೆ ಸ್ಥಾಪಿತವಾಗಿಲ್ಲ ಮತ್ತು ವಿರೋಧ ಪಕ್ಷಗಳು ಸುಳ್ಳುಗಳನ್ನು ಹರಡುತ್ತಿವೆ ಎಂದು ಪ್ರಧಾನಿ ಮೋದಿ, ಅವರ ಸಂಪುಟ ಸಚಿವರುಗಳು, ಪಕ್ಷದವಕ್ತಾರರು ಹಾಗೂ ಬಾಲಡುಕ ಮಾಧ್ಯಮ ಮಿತ್ರರು ವಿರೋಧ ಪಕ್ಷಗಳನ್ನು ದೂರುತ್ತಿದ್ದಾರೆ. “ದೇಶದಾದ್ಯಂತ ಎನ್.ಆರ್.ಸಿ ಪ್ರಕ್ರಿಯೆಯನ್ನು ಈ ವರೆಗೆ ಅಧಿಸೂಚಿತಗೊಳಿಸಿಲ್ಲ ಮತ್ತುಯಾರೂ ಈ ಕುರಿತು ಹೆದರಬೇಕಾಗಿಲ್ಲ.” ಎಂದು ಗೃಹ ಖಾತೆಯರಾಜ್ಯ ಮಂತ್ರಿ ಜಿ. ಕಿಶನ್ರೆಡ್ಡಿ ಹೇಳಿಕೆ ನೀಡಿದ್ದಾರೆ.

ಸತ್ಯ ಸಂಗತಿ : ಎನ್.ಆರ್.ಸಿ. ಪ್ರಕ್ರಿಯೆಯನ್ನು ಕಾನೂನು ಪ್ರಕಾರ ಸ್ಥಾಪಿಸಲು ವಾಜಪೇಯಿ ಸರಕಾರದ ಅವಧಿಯಲ್ಲಿ ಗೃಹ ಮಂತ್ರಿ ಎಲ್.ಕೆ.ಅಡ್ವಾಣಿ ಅವರಿಂದ ಮಂಡಿತವಾಗಿ 2003ರಲ್ಲಿ ಅಂಗೀಕೃತವಾಯಿತು. ಇದಕ್ಕಾಗಿ ಪ್ರತ್ಯೇಕ ಕಾನೂನು ರಚನೆಯಾಗಿಲ್ಲ. ಬದಲಿಗೆ, ಭಾರತ ಪೌರತ್ವಕಾಯಿದೆ 1955ಗೆ ತಿದ್ದುಪಡಿಮಾಡಲಾಗಿದೆ. ಎನ್.ಆರ್.ಸಿ.ಜಾರಿಗೆ ನಿಯಮಾವಳಿಯನ್ನು ಸಹ ರಚಿಸಿ 2003ರಲ್ಲೇ ಅಂಗೀಕರಿಸಲಾಗಿದೆ.

ಮಹಾಸುಳ್ಳು 6 : ಎನ್.ಆರ್.ಸಿ. ಪ್ರಕ್ರಿಯೆ ಇ್ಲನ್ನೂ ಆರಂಭವಾಗಿಲ್ಲ ಮತ್ತು ಆ ಕುರಿತು ಯಾವುದೇ ಅಧಿಸೂಚನೆಯೂ ಇಲ್ಲ.

ಎನ್.ಆರ್.ಸಿ.ಜಾರಿಗೆ ನಿಯಮಾವಳಿ ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ರಾಷ್ಟ್ರೀಯ ಜನಸಂಖ್ಯಾರಿಜಿಸ್ಟರ್ (ಎನ್.ಪಿಆರ್.) ಪ್ರಕ್ರಿಯೆಯೊಂದಿಗೆ ಆರಂಭವಾಗುತ್ತದೆಎಂದು ಸ್ಪಷ್ಟವಾಗಿ ಹೇಳಲಾಗಿದೆ. ಎನ್.ಪಿ.ಆರ್. ಪ್ರಕ್ರಿಯೆ ಮುಗಿದ ನಂತರ ಅದರ ಆಧಾರದ ಮೇಲೆ ಎನ್.ಆರ್.ಸಿ.ರಚಿಸಲಾಗುವುದು. ಎನ್.ಪಿ.ಆರ್. ಮತ್ತುಎನ್.ಆರ್.ಸಿ ನಡುವಿನ ಸಂಬಂಧದ ಬಗ್ಗೆ ಕೇಂದ್ರ ಗೃಹ ರಾಜ್ಯ ಮಂತ್ರಿಜುಲೈ 23, 2014ರಲ್ಲಿ ಸ್ಪಷ್ಟ ಹೇಳಿಕೆ ನೀಡಿದ್ದಾರೆ. ಎನ್.ಪಿ.ಆರ್. ಪ್ರಕ್ರಿಯೆ ಆರಂಭಿಸಲುಜುಲೈ 31, 2019ರಂದು ಅಧಿಸೂಚನೆ ಹೊರಡಿಸಲಾಗಿದೆ.

ಮಹಾಸುಳ್ಳು 7 : ಎನ್.ಆರ್.ಸಿ. (ಪೌರತ್ವರಿಜಿಸ್ಟರ್)ಗೂ ಎನ್.ಪಿ.ಆರ್. (ಜನಸಂಖ್ಯಾರಿಜಿಸ್ಟರ್)ಗೂ ಏನೂ ಸಂಬಂಧವಿಲ್ಲ ಎಂದು ಗೃಹ ಮಂತ್ರಿ ಅಮಿತ್ ಶಾ ಹೇಳಿಕೆ ನೀಡಿದ್ದಾರೆ. ಎನ್.ಪಿ.ಆರ್ ಹೆಚ್ಚಿನ ಪ್ರಶ್ನೆಗಳೊಂದಿಗೆ ಸಮಕಾಲೀನಗೊಳಿಸುವ ಕೇಂದ್ರ ಸಂಪುಟದ ನಿರ್ಧಾರದ ಸಂದರ್ಭದಲ್ಲಿ ಈ ಹೇಳಿಕೆ ಕೊಟ್ಟಿದ್ದಾರೆ. ಎನ್.ಪಿ.ಆರ್. ಜನಗಣತಿಯ ಉದ್ದೇಶಕ್ಕೆ ಮಾತ್ರವಿದೆ. ಎನ್.ಆರ್.ಸಿ. ಅಥವಾ ಪೌರತ್ವಕ್ಕೂ ಅದಕ್ಕೂಯಾವುದೇ ಸಂಬಂಧವಿಲ್ಲ. ಆದ್ದರಿಂದ ಭಾರತೀಯ ನಾಗರಿಕರಿಗೆ ತೊಂದರೆಯಾಗುತ್ತಿದೆ ಎಂದು ವಿರೋಧ ಪಕ್ಷಗಳು ಯಾಕೆ ಹೇಳುತ್ತಿವೆ ಎಂದುಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ ಜಾವಡೇಕರ್ ಹೇಳಿದ್ದಾರೆ.

ಸತ್ಯ ಸಂಗತಿ :ಗೃಹ ಸಚಿವಾಲಯದ2018-19 ವಾರ್ಷಿಕ ವರದಿಯಅಧ್ಯಾಯ 15 ಪಾರಾ 15.40 ಎನ್.ಪಿ.ಆರ್ ಮತ್ತು ಎನ್.ಆರ್.ಸಿ. (ಅಂದರೆ ಪೌರತ್ವದ) ಗಳ ಸಂಬಂಧದ ಬಗೆಗ ಸ್ಪಷ್ಟವಿದೆ. ಎನ್.ಪಿ.ಆರ್ ಮತ್ತು ಜನಗಣತಿಯನ್ನು ಜನಗಣತಿ ಅಧಿಕಾರಿಗಳು ನಡೆಸುತ್ತಾರೆಎಂದು ಬಿಟ್ಟರೆ ಅವೆರಡಕ್ಕೆ ಸಂಬಂಧವಿಲ್ಲ. ಎನ್.ಪಿ.ಆರ್. ಪ್ರಶ್ನಾವಳಿಯಲ್ಲಿ ಹಿಂದಿನ 15 ಪ್ರಶ್ನೆಗಳಿಗೆ ಆರು ಹೊಸ ಪ್ರಶ್ನೆಗಳÀನ್ನು ಸೇರಿಸಲಾಗಿದೆ. ತಂದೆ, ತಾಯಿ ಹುಟ್ಟಿದತಾರೀಕು, ಸ್ಥಳಗಳ ಮತ್ತುಆಧಾರ್ ಬಗ್ಗೆ ಬಗ್ಗೆ ಕೇಳಲಾಗಿದ್ದು, ಇವನ್ನುಎನ್.ಆರ್.ಸಿ. ಮತ್ತು ಪೌರತ್ವಕ್ಕೆ ಸಂಬಂಧಿಸಿ ಕೇಳಲಾಗುತ್ತಿದೆ.

ಮಹಾಸುಳ್ಳು 8 :ಯಾವುದೇ ಭಾರತೀಯ ಭಯಪಡುವಂಥದ್ದೇನಿಲ್ಲ.

ಸತ್ಯ ಸಂಗತಿ :ಎಲ್ಲಾ ಸಮುದಾಯಗಳ ಬಡವರು ಮತ್ತು ಅಂಚಿಗೆ ತಳ್ಳಲ್ಲಪಟ್ಟವರು ಭಯ ಪಡುವಂಥದ್ದು ಖಂಡಿತ ಇದೆ. ತಂದೆ, ತಾಯಿ ಹುಟ್ಟಿದತಾರೀಕು, ಸ್ಥಳಗಳ ಮಾಹಿತಿ ಒದಗಿಸುವುದು ಹೆಚ್ಚಿನ ಶಾಶ್ವತ ಸೂರುಇಲ್ಲದ, ನೆರೆ ಬರ ಮುಂತಾದ ಪ್ರಾಕೃತಿಕ ವಿಕೋಪಗಳಿಗೆ ತುತ್ತಾಗುವ, ಆಗಾಗ ವಲಸೆ ಹೋಗುವ ಅನಕ್ಷರಸ್ಥ ಬಡವರಿಗೆ ಕಷ್ಟಕರ ವಿಷಯ. ಇದು ಆಸ್ಸಾಂನಲ್ಲಿ ನಡೆದಎನ್.ಆರ್.ಸಿ. ಪ್ರಕ್ರಿಯೆಯ ಅನುಭವ ಕೂಡಾ. ಸಾಲದ್ದಕ್ಕೆ ಬಯೋಮೆಟ್ರಿಕ್ ಕೊಡಬೇಕಾಗಿದೆ.

ಬಯೋಮೆಟ್ರಿಕ್ ಮತ್ತು ಆಧಾರ್ ಮ್ಯಾಚಿಂಗ್ ಹಲವು ಕಾರಣಗಳಿಗೆ ವಿಫಲವಾಗುವುದು ಸಹ ವ್ಯಾಪಕವಾದ ಬಡವರ ಅನುಭವ. ಇದರಿಂದಾಗಿ ರೇಶನ್, ರೇಗಾ ಕೂಲಿ ಕಳೆದುಕೊಂಡ ಲಕ್ಷಾಂತರ ಬಡವರ ದೃಷ್ಟಾಂತಗಳಿವೆ. ಮುಂದಿನ ಹಂತದಲ್ಲಿ ಅಧಿಕಾರಿಗಳು ಕೇಳಿದರೆ ತಂದೆ-ತಾಯಿಗಳ ಸೇರಿದಂತೆ ಹಲವು ದಾಖಲೆಗಳನ್ನು ಒದಗಿಸಬೇಕು.

ಆಸ್ಸಾಂ ಎನ್.ಆರ್.ಸಿ ಪ್ರಕ್ರಿಯೆ ಸ್ಪಷ್ಟ ಪಡಿಸಿದಂತೆ ಸಾಮಾನ್ಯಗುರುತಿನ ದಾಖಲೆ (ಜನ್ಮಪತ್ರ, ಆಧಾರ್, ವೋಟರ್ಐಡಿ, ಪಾನ್ಕಾರ್ಡ್, ಪಾಸ್ ಪೋರ್ಟ್) ಸಾಕಾಗುವುದಿಲ್ಲ. ತಂದೆತಾಯಿ ಇಬ್ಬರದಾಖಲೆ ಬೇಕಾಗುತ್ತದೆ. ಆದ್ದರಿಂದಲೇಎನ್.ಪಿ.ಆರ್-ಎನ್.ಆರ್.ಸಿ. ಪ್ರಕ್ರಿಯೆ ಬಗ್ಗೆ ವ್ಯಾಪಕ ಭಯ ಉಂಟಾಗಿದೆ. ಇದು ಬಿಜೆಪಿ ಸರಕಾರದ ನೋಟು ನಿಷೇಧ ಮುಂತಾದಕ್ರೂರ ಕ್ರಮಗಳ ಹಿಂದಿನ ರೆಕಾರ್ಡಿನಿಂದ ಬಂದಸಹಜ ವಾಸ್ತವಿಕ ಭಯ.

ಇನ್ನೊಂದು ಕಾರಣಕ್ಕಾಗಿ ಮೋದಿ ಸರಕಾರ ಝಳಪಿಸುತ್ತಿರುವ ಸಿಎಎ-ಎನ್.ಪಿ.ಆರ್-ಎನ್.ಸಿ.ಆರ್ ಎಂಬ ಮೂರು ಅಲಗುಗಳ ತ್ರಿಶೂಲದ ಬಗ್ಗೆ ಚರಿತ್ತೆಯಿಂದ ಪಾಠಕಲಿತಎಲ್ಲಾ ಪ್ರಜ್ಞಾವಂತ ನಾಗರಿಕರು ಭಯ ಪಡಬೇಕಾಗಿದೆ. ನಾಜಿವಾದಿ ಮಾದರಿಯನ್ನು ಹಂತ ಹಂತವಾಗಿ ಕಾಪಿ ಹೊಡೆದು ಸಾಗಿರುವ ಸಂಘ ಪರಿವಾರದ ‘ಹಿಂದೂರಾಷ್ಟ್ರ’ದ ಯೋಜನೆಯಲ್ಲಿ ಈ ಕಾನೂನುಗಳ ತ್ರಿಶೂಲ ವಹಿಸಬಹುದಾದ ಪಾತ್ರದ ಬಗ್ಗೆ ಭಯ ಪಡಬೇಕಾಗಿದೆ. 1935ರಲ್ಲಿ ನಾಜಿಗಳು ತಂದ ಕುಪ್ರಸಿದ್ಧ ‘ನ್ಯುರೆಂಬರ್ಗ್ ಕಾನೂನುಗಳು’ ಒಂದೇ ಏಟಿಗೆಯೆಹೂದಿಯರ ಪೌರತ್ವ ಕಸಿದುಕೊಂಡು ಅವರನ್ನು ಯಾವುದೇ ಹಕ್ಕುಗಳಿಲ್ಲದ ಎರಡನೇದರ್ಜೆಯ ನಾಗರಿಕರನ್ನಾಗಿ ಮಾಡಿದ್ದವು.

ಕೊನೆಗೆ ಇದು 60 ಲಕ್ಷಯೆಹೂದಿಯರ ಸಾಮೂಹಿಕ ಬಂಧನ, ಯಾತನಾ ಶಿಬಿರಗಳಲ್ಲಿ ದೌರ್ಜನ್ಯ ಮತ್ತುಅವರ ನರಮೇಧದಲ್ಲಿ ಕೊನೆಗೊಂಡಿತ್ತು. ಇದು ಇಡೀ ಜರ್ಮನ್ ದೇಶದಲ್ಲಿ ಫ್ಯಾಸಿಸ್ಟ್ ಆಡಳಿತ ಸ್ಥಾಪಿಸುವಲ್ಲಿ, ಜನತೆಯನ್ನು ಫ್ಯಾಸಿಸ್ಟ್ ಕ್ರೌರ್ಯದ ಮತ್ತು ಯುದ್ಧದ ಉನ್ಮಾದದಲ್ಲಿ ಮುಳುಗಿಸಿ, ಎರಡನೇ ಮಹಾಯುದ್ಧಕ್ಕೆ ಮತ್ತುಜರ್ಮನರು ಸೇರಿದಂತೆ ಜಗತ್ತಿನಾದ್ಯಂತ ವ್ಯಾಪಕ ವಿನಾಶ ನರಮೇಧಗಳಿಗೆ ಕಾರಣವಾಗುವುದರಲ್ಲಿ ತನ್ನದೇ ಪಾತ್ರ ವಹಿಸಿತ್ತು.

ನಾಜಿಗಳು ಒಂದೇ ಏಟಿಗೆ ತಂದ ಕುಪ್ರಸಿದ್ಧ ‘ನ್ಯುರೆಂಬರ್ಗ್ ಕಾನೂನುಗಳು’ ಮಾಡಿದ ಪರಿಣಾಮವನ್ನು ಮೋದಿ ಸರಕಾರ ಹಂತ ಹಂತವಾಗಿ ಈ ಕಾನೂನುಗಳ ತ್ರಿಶೂಲದಿಂದ ಸಾಧಿಸುವ ಹಠತೊಟ್ಟಿರುವಂತೆ ಕಾಣುತ್ತದೆ ಎನ್ನುವ ಭಯ ಸಹಜವಾಗಿಯೇ ಉಂಟಾಗುತ್ತಿದೆ.

ಮಹಾಸುಳ್ಳು 9 :ದೇಶದಎಲ್ಲೂ ಬಂಧನ ಕೇಂದ್ರಗಳು ಇಲ್ಲಎಂದು ಪ್ರಧಾನಿ ಮೋದಿ ಅವರು ಹೇಳಿದ್ದಾರೆ.

ಸತ್ಯ ಸಂಗತಿ : ಕಾನೂನುಬಾಹಿರ ವಲಸೆಗಾರರು ಮತ್ತು ವಿದೇಶಿ ಅಪರಾಧಿಗಳನ್ನು ಇಡಲು ಬಂಧನ ಕೇಂದ್ರಗಳನ್ನು ಕಟ್ಟುವಂತೆ
ಜನವರಿ 9, 2019ರಂದು ಕೇಂದ್ರ ಸರಕಾರ ಸರಕಾರ ನಿರ್ದೇಶನ ನೀಡಿದೆ(ಮಾಹಿತಿ ಮೂಲ : ಡಿಸೆಂಬರ್ 11, 2019 ರಾಜ್ಯ ಸಭೆಯಲ್ಲಿ ಗೃಹ ರಾಜ್ಯ ಸಚಿವರಉತ್ತರ). ಆಸ್ಸಾಂ ನಲ್ಲಿ 6 ಬಂದನ ಕೇಂದ್ರಗಳಿವೆ. ಅದರಲ್ಲಿ 988 “ವಿಧೇಶಿಯರು” ಇದ್ದು 28 ಬಂಧಿತರು ಸತ್ತಿದ್ದಾರೆ ಎಂದು ನವೆಂಬರ್ 2019ರಲ್ಲಿ ಪ್ರಶ್ನೋತ್ತರದಲ್ಲಿ ಗೃಹ ರಾಜ್ಯ ಸಚಿವರ ಹೇಳಿದ್ದಾರೆ. ಮಹಾರಾಷ್ಟ್ರ, ಕರ್ನಾಟಕ ಮುಂತಾದ ರಾಜ್ಯಗಳಲ್ಲಿ ಬಂಧನಕೇಂದ್ರಕಟ್ಟುವ ಕೆಲಸ ಆರಂಭವಾಗಿದೆ.

ಮಹಾಸುಳ್ಳು 10 : ಪ್ರತಿಭಟನಾಕಾರರ ಮೇಲೆ ಬಲಪ್ರಯೋಗ ಮಾಡಲಾಗಿಲ್ಲ. ವ್ಯಾಪಕ ಪ್ರತಿಭಟನೆ ನಡೆದಿರುವದೆಹಲಿ, ಯುಪಿ ಮತ್ತುಇತರ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಪೋಲಿಸರು ಗೋಲಿಬಾರು ಮಾಡಿಲ್ಲ.

ಸತ್ಯ ಸಂಗತಿ :ಬಹುಪಾಲು ಭಾರೀ ಪ್ರತಿಭಟನಾ ಪ್ರದರ್ಶನಗಳು ಶಾಂತಿಯುತವಾಗಿ ನಡೆದಿವೆ. ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಮಾತ್ರ ಪೋಲಿಸರದಮನ ಕ್ರಮಗಳಿಂದ ಕೆಲವು ಹಿಂಸಾಕೃತ್ಯಗಳು ಜರುಗಿವೆ.ಜಾಮಿಯಾ ಮಿಲಿಯ, ಅಲಿಘರ್, ದೆಹಲಿ ವಿವಿ ಗಳಲ್ಲಿ ಪೋಲಿಸರ ದೌರ್ಜನ್ಯಗಳು ಮುಗಿಲು ಮುಟ್ಟಿವೆ. ಯು.ಪಿ. ಒಂದೇ 21 ಜನ ಗೋಲಿಬಾರಿನಲ್ಲಿ ಸತ್ತಿದ್ದಾರೆ. ದಿನೇ ಈ ಸಂಖ್ಯೆ ಹೆಚ್ಚುತ್ತಿದೆ. ಆದರೆ ಪೋಲಿಸ್ ಗೋಲಿಬಾರು ಮಾಡಿರುವುದನ್ನೇ ನಿರಾಕರಿಸಿದ್ದಾರೆ.

ಪೋಲಿಸರು ಪ್ರತಿಭನಾಕಾರರು ಮತ್ತು ಮಾಯಕ ನಾಗರಿಕರ ಮೇಲೆ ಗೋಲಿಬಾರು ಮಾಡಿರುವುದು, ಬೇಕಾಬಿಟ್ಟಿ ದೌರ್ಜನ್ಯಗಳನ್ನು ಎಸಗಿರುವುದು, ತಾವೇ ವಿಧ್ವಂಸಕ ಕೃತ್ಯಗಳಲಿ ತೊಡಗಿರುವುದು – ದಿನೇ ಈ ಬಗ್ಗೆ ವಿಡಿಯೋ ಪುರಾವೆಗಳು ಹೊರ ಬರುತ್ತಿವೆ. ಆಸ್ಸಾಂನಲ್ಲಿ 5, ಕರ್ನಾಟಕದಲ್ಲಿ ಇಬ್ಬರು ಗೋಲಿಬಾರಿನಲ್ಲಿ ಸತ್ತಿದ್ದಾರೆ. ಯುಪಿ, ಕರ್ನಾಟಕ ಮುಂತಾದ ರಾಜ್ಯಗಳಲ್ಲಿ ರಾಜ್ಯದಾದ್ಯಂತ ಪ್ರತಿಭಟನೆಗಳನ್ನು ಕಲಮು 144 ಹೇರುವ ಮೂಲಕ ನಿಷೇಧಿಸಿದ್ದು ಮತ್ತು ಪ್ರತಿಭಟನಾಕಾರರನ್ನು ಉದ್ರೇಕಿಸಿದ್ದು ಈಗ ನಡೆದಿರುವ ಸೀಮಿತ ಹಿಂಸಾಚಾರಕ್ಕೆಕಾರಣ.

ಕೃಪೆ : ಜನಶಕ್ತಿ ಮೀಡಿಯ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ

Published

on

ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.

ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್‌ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್‌ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.

ಆರಂಭಿಕ ಜೀವನ ಮತ್ತು ಶಿಕ್ಷಣ

ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.

ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ

ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.

ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್‌ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.

ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.

ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್‌ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.

1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್‌ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.

ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.

ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’

ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.

ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.

ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ

2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.

ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್‌ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.

ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.

ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.

ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.

ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.

ಭವಿಷ್ಯದ ರಾಜಕೀಯ ಪಾತ್ರ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್‌ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.

ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್‌ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.

ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending