ದಿನದ ಸುದ್ದಿ
ಸಾಮಾಜಿಕ ಜಾಲತಾಣದಲ್ಲಿ ಬೆತ್ತಲಾದ ಖಾವಿದಾರಿ ‘ಕಾಳಿ ಸ್ವಾಮಿ’
ಹೌದು ಅರಸೀಕೆರೆಯಲ್ಲಿ ಡ್ಯಾನ್ಸ್ ಮಾಸ್ಟರ್ ಆಗಿದ್ದ ಒಬ್ಬ ವ್ಯಕ್ತಿ ಈಗ ಸ್ವಾಮೀಜಿ ಅಂದಿನಿಂದ ಇಂದಿನವರೆಗೆ ಅವನ ಜೀವನ ಪಯಣ ಅಬ್ಬಬ್ಬಾ .. ಅಂದಿಗು ಮತ್ತು ಇಂದಿಗೂ ನಡುವೆ ಇದ್ಯಲ್ಲ ಅದು ಅದ್ಭುತ ಪ್ರತಿಯೊಂದರಲ್ಲೂ ತನ್ನ ಬೇಳೆ ಬೇಯಿಸಿಕೊಳ್ಳಲು ಹೋಗಿ ಕೈ ಸುಟ್ಟುಕೊಳ್ಳುವ ಖತರ್ನಾಕ್ ಕಳ್ಳ ಸ್ವಾಮೀಜಿ. ಕಾಳಿ ಕಾಳಿ ಅಂದುಕೊಂಡು ಜನರನ್ನ ಬೋಳಿ ಮಾಡುವ ಐನಾತಿ.
ಜಾತಿಯಲ್ಲಿ ಸುಳ್ಳು ಹೇಳಿದ್ದ ಮಹಾನುಭಾವ ತನ್ನ ತಂದೆ ತಾಯಿಯ ಐಡೆಂಟಿಟಿಯನ್ನೇ ಬದಲಿಸಿದ್ದವ , ನಿಂತ್ಯಾನಂದನ ಕರ್ಮಕಾಂಡ ಬಯಲು ಮಾಡುತ್ತಿನಂತ ಹೇಳಿ ಅವನ ಬಳಿ 10 ಕೋಟಿ ರೂಪಾಯಿ ಒಂದು ಫಾರ್ಚೂನರ್ ಕಾರ್ ನ ಬೇಡಿಕೆ ಇಟ್ಟಿದ್ದ , ಇದರಲ್ಲಿ ಸಿಕ್ಕಿ ಹಾಕಿಕೊಂಡ ಮಹಾನುಭಾವ ಮಾಧ್ಯಮವೊಂದರಲ್ಲಿ ತನ್ನ ಪೇಟವನ್ನ ತೆಗೆದಿಟ್ಟು ಕ್ಷಮಾಪಣೆ ಪತ್ರ ಬೇರೆ ಬರೆದು ಕೊಟ್ಟಿದ್ದನ್ನ ಜನ ಇನ್ನೂ ಮರೆತಿಲ್ಲ ಈಗ ಗೊತ್ತಾಗಿರಬೇಕು ಅವನು ಯಾರು ಅಂತ ಅವನೇ ರೀ ಶ್ರಿ ರಿಷಿಕುಮಾರ.(ಸ್ವಾಮೀಜಿ ಅನ್ನಲು ಮನಸೊಪ್ಪದು)
ಈತ ಸಾಮಾಜಿಕವಾಗಿ ಜನರಿಗೆ ಏನು ಉಪಯೋಗ ಮಾಡಿದ್ದಾನೋ ಅದು ಭಗವಂತನಿಗೆ ಗೊತ್ತು ಆದರೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹೆಂಡ ಕುಡಿದ ಕೋತಿ ತರ ಆಡುತ್ತಿದ್ದಾನೆ , ಅಡಲಿ ಬೇಡ ಅನ್ನಲ್ಲ ಅದು ಅವನ ಅಭಿವ್ಯಕ್ತಿ ಸ್ವಾತಂತ್ರ್ಯ ಅಂದುಕೊಂಡರೂ ಖಾವಿ ತೊಟ್ಟು ತನ್ನನ್ನ ತಾನು ಸ್ವಾಮೀಜಿ ಅಂತ ಕರೆಸಿಕೊಳ್ಳುವವರು ಮಾಡುವಂತ ಕೆಲಸವಂತೂ ಅಲ್ಲವೇ ಅಲ್ಲ.
ಒಂದು ಬಾಯಿಗೆ ಬಟ್ಟೆ ಕಟ್ಟಿಕೊಳ್ಳಬೇಕು ಇಲ್ಲವೇ ತೊಟ್ಟಿರುವ ಖಾವಿ ಬಟ್ಟೆ ಬಿಚ್ಚಬೇಕು ಯಾಕಂದ್ರೆ ನಮ್ಮ ದೇಶದಲ್ಲಿ ಇಂದಿಗೂ ಜನ ನಂಬಿಕೆ ಇಟ್ಟಿರುವುದು ಖಾವಿ ಮೇಲೆ , ಖಾವಿ ತೊಟ್ಟವರು ಸಮಾಜಕ್ಕೆ ಶಾಂತಿ ಮಂತ್ರ ಹೇಳಿಕೊಡಬೇಕು, ಸಮಾಜದಲ್ಲಿ ಸಾಮರಸ್ಯ ಬೆಳೆಯುವಂತಹ ಕೆಲಸಗಳನ್ನ ಮಾಡಬೇಕು ಆದರೆ ಈತ ಬಾಯಿ ತೆರೆದರೆ ಕೋಮು ಸೃಷ್ಟಿಸುವಂತಹ ಅನ್ಯಧರ್ಮದ ಬಗ್ಗೆ ಕೇವಲವಾಗಿ ಮಾತನಾಡೋದು, ಹೆಣ್ಣು ಮಕ್ಕಳ ಬಗ್ಗೆ ಅಸಹ್ಯ ಹುಟ್ಟಿಸುವಂತಹ ಮಾತುಗಳು ಅಲ್ಲದೆ ಅದನ್ನ ಪ್ರಶ್ನೆ ಮಾಡೋರಿಗೆ ಬೋಳಿ ಮಗನೆ, ಶಾಟ ಎಂಬಿತ್ಯಾದಿ ಸೆನ್ಸಾರ್ ಪದ ಬಳಕೆ ಮಾಡುತ್ತಾ ಖಾವಿ ಬಟ್ಟೆಗೆ ಇರುವ ಗೌರವವನ್ನು ಹಾಳು ಮಾಡುತ್ತಿದ್ದಾನೆ.
ಇಂತವರಿಗೆ ಖಾವಿ ಒಂದು ರಕ್ಷಾ ಕವಚ ಅಷ್ಟೇ , ಧರ್ಮವನ್ನ ರಕ್ಷಿಸುತ್ತಿನಿ ಅಂತ ಹೇಳುವ ಇವರುಗಳು ಇಂತಹ ಕೃತ್ಯಗಳಿಂದ ಧರ್ಮವನ್ನ ಹಾಳು ಮಾಡುತ್ತಿದ್ದಾರೆ ವಿನಃ ಇವರುಗಳಿಂದ ಧರ್ಮಕ್ಕೆ ಒಂದಿಷ್ಟು ಉಪಯೋಗ ಇಲ್ಲ , ಧರ್ಮದ ಹೆಸರಿನಲ್ಲಿ ಇವರನ್ನ ಇವರು ರಕ್ಷಿಸಿಕೊಳ್ಳುತ್ತಿದ್ದಾರೆ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದಾರೆ.
ಇಂತಹವರು ಸಮಾಜಕ್ಕೆ ಕಂಟಕ ಮತ್ತು ಇದೆ ರೀತಿ ಮುಂದುವರಿದಲ್ಲಿ ಖಾವಿ ತೊಟ್ಟ ನಿಜವಾದ ಸ್ವಾಮೀಜಿಗಳಿಗೆ ಕೂಡ ಮರ್ಯಾದೆ ಗೌರವ ಸಿಗದ ರೀತಿ ಆಗುವುದರಲ್ಲಿ ಸಂಶಯವೇ ಇಲ್ಲ ಈ ಹಿಂದೆ ಒಮ್ಮೆ ಒಂದಷ್ಟು ಜನ ಮಹಿಳೆಯರು ಸೇರಿ ಈತನನ್ನು ಥಳಿಸಿದ್ದು ಕೂಡ ಯಾರು ಮರೆತಿಲ್ಲ ಆದರೆ ಪಾಪ ಆತ ಮರೆತಿರಬೇಕು.
ಇಂತಹವರಿಂದ ಧರ್ಮಕ್ಕೆ ಸಮಾಜಕ್ಕೆ ನಾಲ್ಕು ಪೈಸದ ಪ್ರಯೋಜನ ಇಲ್ಲ ಜನ ಇಂತವರನ್ನು ನಂಬಿ ಮೋಸ ಹೋಗುವುದು ಬೇಡ ಮತ್ತು ಖಾವಿಗೆ ಅದರದ್ದೇ ಆದ ಮಹತ್ವ ಇದೆ ಅದು ಇಂತಹವರಿಂದ ಹಾಳಾಗುವುದು ಬೇಡ ಎಂಬ ಸಣ್ಣ ಕಳಕಳಿ ಅಷ್ಟೇ … ಆತನ ಸಾಮಾಜಿಕ ಜಾಲತಾಣದ ಪೋಸ್ಟ್ಗಳು ಕಾಮೆಂಟ್ಗಳು ನೋಡಿದರೆ ಈತ ಸ್ವಾಮೀಜಿ ನ ಅಂತ ಎಲ್ಲರೂ ಒಂದು ಸಲ ತಮ್ಮನ್ನ ತಾವು ಪ್ರಶ್ನಿಸಿಕೊಳ್ಳದೆ ಇರಲಾರರು !!
ನಿಜವಾದ ಹಿಂದೂಗಳು , ಧರ್ಮ ಮತ್ತು ಖಾವಿ ಮೇಲೆ ನಂಬಿಕೆ ಗೌರವ ಇರುವವರು ಖಂಡಿತವಾಗಿಯೂ ಆತನ ಉದ್ದಟತನವನ್ನ ಖಂಡಿಸಿದೆ ಇರಲಾರರು. ಒಟ್ಟಾರೆ ಖಾವಿಯಿಂದ ಸಮಾಜದಲ್ಲಿ ತನ್ನನ್ನು ತಾನು ಮುಚ್ಚಿಟ್ಟುಕೊಂಡಿದ್ದ ಶ್ರಿ ರಿಷಿಕುಮಾರ ಸಾಮಾಜಿಕ ಜಾಲತಾಣದಲ್ಲಿ ಬೆತ್ತಲಾದ !!!
—ಬಿಂದು ಗೌಡ ಕೆಪಿಸಿಸಿ
ಸಾಮಾಜಿಕ ಜಾಲತಾಣ ರಾಜ್ಯ ಕಾರ್ಯದರ್ಶಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ2 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ1 hour agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

