ದಿನದ ಸುದ್ದಿ
ಡಾ. ಚಿದಾನಂದ ಮೂರ್ತಿ ಅವರಿಗೆ ಅಂತಿಮ ನಮನಗಳು
- ಡಾ. ಪುರುಷೋತ್ತಮ ಬಿಳಿಮಲೆ
ಸ್ವಾತಂತ್ರ್ಯೋತ್ತರ ಕಾಲದ ಕನ್ನಡ ಸಂಶೋಧನೆಗೆ ಭದ್ರವಾದ ತಳಹದಿ ಹಾಕಿಕೊಟ್ಟವರಲ್ಲಿ ಡಾ. ಚಿದಾನಂದ ಮೂರ್ತಿಯವರು (1931 – 2020) ಕೂಡಾ ಒಬ್ಬರು. ಪಾಶ್ಚಾತ್ಯ ವಿದ್ವಾಂಸರು ಮಾಡಿದ ಕೆಲಸಗಳು ಸಂಶೋಧನೆಯ ಮೂಲ ಆಕರಗಳಾಗಿ ಸಹಕರಿಸುತ್ತಲಿರುವ ಸಂದರ್ಭದಲ್ಲಿ ಅವರು ನಿಘಂಟು ಶಾಸ್ತ್ರ, ಶಾಸನ ಶಾಸ್ತ್ರ, ಹಸ್ತ ಪ್ರತಿ ಸಂಪಾದನೆ, ಗ್ರಂಥ ಸಂಪಾದನೆ, ಸಂಸ್ಕೃತಿ ಸಂಶೋಧನೆ ಮತ್ತು ಜಾನಪದ ಕೆಲಸಗಳ ಮೂಲಕ ಕನ್ನಡ ಸಂಶೋಧನೆಯ ವಸ್ತು ಮತ್ತು ವಿಧಾನಗಳನ್ನು ಪುನಾರೂಪಿಸಿದರು.
ತೀ. ನಂ. ಶೀಕಂಠಯ್ಯನವರ ಮಾರ್ಗದರ್ಶನದಲ್ಲಿ1964 ರಲ್ಲಿ ಅವರು ಪಿಎಚ್.ಡಿ ಪದವಿಗಾಗಿ ಸಿದ್ಧ ಪಡಿಸಿದ್ದ ‘ಕನ್ನಡ ಶಾಸನಗಳ ಸಾಂಸ್ಕೃತಿಕ ಅಧ್ಯಯನ’ ಕೃತಿಯು ನಮಗೆಲ್ಲಾ ಪ್ರೇರಣೆ ನೀಡಿದ ಅತ್ಯುತ್ತಮ ಸಂಶೋಧನಾ ಗ್ರಂಥ. ಉಳಿದಂತೆ, ಅವರು ಬರೆದ ಭಾಷಾ ವಿಜ್ಞಾನದ ಮೂಲತತ್ವಗಳು, ವಾಗಾರ್ಥ, ಸಂಶೋಧನ ತರಂಗ ಒಂದು ಮತ್ತು ಎರಡು, ಮಧ್ಯಕಾಲೀನ ಕನ್ನಡ ಸಾಹಿತ್ಯ ಮತ್ತು ಅಸ್ಪ್ರಶ್ಯತೆ, ಹೊಸತು ಹೊಸತು, ಶೂನ್ಯ ಸಂಪಾದನೆಯನ್ನು ಕುರಿತು, ವಚನ ಸಾಹಿತ್ಯ, ಗ್ರಾಮೀಣ, ಪಗರಣ ಮತ್ತು ಇತರ ಸಂಪ್ರಯದಾಯಗಳು ಕೃತಿಗಳನ್ನು ನಾನು ಇವತ್ತಿಗೂ ಆಗಾಗ ಪರಿಶೀಲಿಸುತ್ತಿರುತ್ತೇನೆ.
1988ರಲ್ಲಿ ಅವರು ‘ಕನ್ನಡ ಶಕ್ತಿಕೇಂದ್ರವನ್ನು’ ಸ್ಥಾಪಿಸಿದ ಮೇಲೆ ಅವರ ಸಂಶೋಧನೆಯ ಪ್ರಖರತೆ ಕಳೆಗುಂದಿತು. ಆದರೆ ಕಾಲ್ನಡಿಗೆಯ ಮೂಲಕ ಬೆಂಗಳೂರಿನಿಂದ ಹಂಪಿಗೆ ಪ್ರಯಾಣ ಮಾಡಿ, ಕನ್ನಡ ವಿಶ್ವವಿದ್ಯಾಲಯದ ಸ್ಥಾಪನೆಗೆ ಕಾರಣರಾದರು. ಟಿಪ್ಪುವಿನ ವಿಷಯದಲ್ಲಂತೂ ಪೂರ್ಣ ಕೋಮುವಾದಿಯಾದರು. ನಾವೆಲ್ಲ ಚಿದಾನಂದಮುರ್ತೀ ಅವರ ಪುಸ್ತಕಗಳನ್ನು ಕೈಯಲ್ಲಿ ಹಿಡಿದುಕೊಂಡೇ ಕಲಬುರ್ಗಿ ಅವರ ಕಡೆಗೆ ವಾಲಿಕೊಂಡೆವು.
ನಾನು ಕನ್ನಡ ವಿವಿಯಲ್ಲಿದ್ದಾಗ ಅವರೊಮ್ಮೆ ಕನ್ನಡದ ಉಳಿವಿಗಾಗಿ ತುಂಗಾಭದ್ರ ನದಿಗೆ ಹಾರಿದ್ದರು. ನದಿಯಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಅವರನ್ನು ಯಾರೋ ಮೇಲೆತ್ತಿ ಹಾಕಿದರು. ನಡು ರಾತ್ರಿ ನಾನು ಮತ್ತು ಕೆ ವಿ ನಾರಾಯಣ ಅವರನ್ನು ಹೊಸಪೇಟೆಗೆ ತಂದು ಆರೈಕೆ ಮಾಡಿದೆವು.
ಈಚಿಗೆ ಅವರಿಗೆ ರಾಷ್ಟ್ರಪತಿಗಳ ಪ್ರಶಸ್ತಿ ಬಂದಿತ್ತು. ‘ ಬಿಳಿಮಲೆ, ನೀವು ಅಲ್ಲಿದ್ದೀರಲ್ವಾ? ಬರ್ತೇನೆ’ ಎಂದಿದ್ದರು. ಎರಡು ದಿನ ಅವರ ಜೊತೆ ಇದ್ದೆ. ಅದಕ್ಕೂ ಹಿಂದೆ ಒಮ್ಮೆ ಬಂದಿದ್ದಾಗ, ಕೆಳದಿ ನೃಪ ವಿಜಯದಲ್ಲಿ ಉಲ್ಲೇಖಿತವಾಗಿದ್ದ ಚಾವಲ್ ಮಂಡಿಯನ್ನು ಅವರು ದೆಹಲಿಯ ಕೆಂಪು ಕೋಟೆಯ ಬಳಿ ಪತ್ತೆ ಹಚ್ಚಿದ್ದರು. ನಾನು ಸಿದ್ಧವೇಶದ ಬಗ್ಗೆ ಮತ್ತು ಕುಮಾರರಾಮನ ಬಗ್ಗೆ ಬರೆದ ಲೇಖನಗಳನ್ನು ಅವರು ಬಹಳ ಮೆಚ್ಚಿಕೊಂಡಿದ್ದರು.
ಡಿ ಎಲ್ ನರಸಿಂಹಾಚಾರ್, ಆರ್ ನರಸಿಂಹಾಚಾರ್, ಕೆ ಬಿ ಪಾಠಕ್, ಪಿ ಬಿ ದೇಸಾಯಿ, ಕೆ ಜಿ ಕುಂದಣಗಾರ, ಟಿ ಎಸ್ ವೆಂಕಣಯ್ಯ, ಮಂಜೇಶ್ವರ ಗೋವಿಂದ ಪೈ, ಮುಳಿಯ ತಿಮ್ಮಪ್ಪಯ್ಯ, ಸೇಡಿಯಾಪು ಕೃಷ್ಣ ಭಟ್, ಎಲ್ ಬಸವರಾಜು, ಶಂಭಾ ಜೋಷಿ, ಫ ಗು ಹಳಕಟ್ಟಿ, ಚನ್ನಪ್ಪ ಉತ್ತಂಗಿ ಮೊದಲಾದವರಿಂದ ಪ್ರೇರಣೆ ಪಡೆದು, ಕನ್ನಡಕ್ಕೆ ಮಹತ್ವದ ಕೊಡುಗೆ ನೀಡಿದ ಚಿದಾನಂದ ಮೂರ್ತಿ ಅವರು ನನ್ನ ಕಾಲದ ಅತ್ಯುತ್ತಮ ಸಂಶೋಧಕರಲ್ಲಿ ಒಬ್ಬರು. ಅವರಿಗೆ ನಮನಗಳು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.
ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ 2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಶ್ರಯ ಯೋಜನೆ – ಆವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್ ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗರಿಕೆ ಹುಲ್ಲಿನ ಜ್ಯೂಸ್ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
ಗಿರೀಶ್ ಮುತ್ತು
ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು
ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.
ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.
ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.
ಗರಿಕೆ ರಸದ ಪ್ರಯೋಜನಗಳು
1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.
2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ
4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.
5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.
6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.
ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?
*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.
* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.
* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.
* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.
* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲ ಎಲ್.ಎಚ್.ಅರುಣಕುಮಾರ್ ಮನವಿ
-
ದಿನದ ಸುದ್ದಿ5 days agoಮೊದಲ ಸಂಪುಟ ಸಭೆಯಲ್ಲೇ ಮಹತ್ವದ 5 ಘೋಷಣೆ ಮಾಡಿದ ಸಿಎಂ ಡಿಕೆಶಿ
-
ಅಂಕಣ4 days agoಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
-
ದಿನದ ಸುದ್ದಿ7 days agoದಾವಣಗೆರೆ ವಿಶ್ವವಿದ್ಯಾಲಯ | ಜೂನ್ 2 ರಿಂದ 4 ರವರೆಗೆ ‘ಭಾಷಾಂತರ ಕೌಶಲ್ಯ ತರಬೇತಿ ಶಿಬಿರ’
-
ದಿನದ ಸುದ್ದಿ4 days agoಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
-
ದಿನದ ಸುದ್ದಿ4 days agoಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
-
ದಿನದ ಸುದ್ದಿ5 days agoಧನ್ಯವಾದಗಳು ಕರ್ನಾಟಕ : ಸಿಎಂ ಡಿಕೆ ಶಿವಕುಮಾರ್
-
ದಿನದ ಸುದ್ದಿ2 days agoಆಶ್ರಯ ಯೋಜನೆ – ಆವಧಿ ವಿಸ್ತರಣೆ

