Connect with us

ರಾಜಕೀಯ

ಆ ಮಹಾತ್ಯಾಗಿ ನುಡಿದ ಭವಿಷ್ಯ ಸುಳ್ಳಾಗಲಿಲ್ಲ

Published

on

ಕಾನ್ಷೀರಾಂ ಮತ್ತು ಮಾಯಾವತಿ

ಇಂದು ಅಕ್ಕ ಮಾಯಾವತಿಯವರ 64 ನೇ ಹುಟ್ಟು ಹಬ್ಬ. ಅವರಿಗೆ ಭೀಮ ಶುಭಾಶಯಗಳನ್ನು ಕೋರುತ್ತಾ..

  • ಮಹೇಶ್ ಸರಗೂರು

ಅದು 1977 ರ ಚಳಿಗಾಲದ ಸಮಯ. ದೆಹಲಿಯ ಚಳಿ ಎಂದರೆ ಕೇಳಬೇಕೆ? ಚಳಿ ಎಂದರೆ ಅಂತಿಂಥ ಚಳಿಯಲ್ಲ. ಅತ್ಯಂತ ಭೀಕರವಾದ ಚಳಿ. ನರನಾಡಿಗಳಲ್ಲಿ ನಡುಕ ಹುಟ್ಟಿಸುವ ಚಳಿ.ಇಂತಹ ವಿಪರೀತ ಚಳಿಯ ಅವಧಿಯಲ್ಲೂ ಕಾನ್ಷೀರಾಮ್ ಸಾಹೇಬರು ಬಾಂಸೆಫ್ ಸಂಘಟನೆಯನ್ನು ಹುಟ್ಟುಹಾಕಲು ಹಗಲಿರುಳು ಹೆಣಗುತ್ತಿದ್ದರು.

ಇಂತಹ ಸಮಯದಲ್ಲಿ ಒಂದು ದಿನ ಕಾನ್ಷೀರಾಮ್ ಸಾಹೇಬರು ಮನದಲ್ಲಿ ಅದೇನೋ ಒಂದು ಗಟ್ಟಿ ನಿರ್ಧಾರ ಮಾಡಿಕೊಂಡು ಮೇಲಕ್ಕೆದ್ದರು. ಕಿವಿಗೆ ಮತ್ತು ಕುತ್ತಿಗೆಗೆ ಉಲ್ಲನ್ ಸ್ಕಾರ್ಫ್ ಸುತ್ತಿಕೊಂಡು ಸಹೊದ್ಯೋಗಿಯೊಬ್ಬನನ್ನು ಜೊತೆಗೆ ಕರೆದುಕೊಂಡು ಹೊರನಡೆದರು. ಆಗ ಸಮಯ ರಾತ್ರಿ ಒಂಭತ್ತು ಗಂಟೆ.

ದೆಹಲಿಯ ಬಹುತೇಕ ಜನರು ಆ ಕೊರೆಯುವ ಚಳಿಗೆ ಹೆದರಿಕೊಂಡು, ಬೆಚ್ಚನೆಯ ಹಾಸಿಗೆಯಲ್ಲಿ ಮೈ ತುಂಬಾ ಹೊದ್ದುಕೊಂಡು ಮಲಗಿದ್ದರು. ಇಂತಹ ಸಮಯದಲ್ಲಿ ದೆಹಲಿಯ ಇಂದ್ರಪುರಿ ಪ್ರದೇಶವನ್ನು ಪ್ರವೇಶಿಸಿದ ಕಾನ್ಷೀರಾಮ್ ಸಾಹೇಬರು ಮತ್ತು ಅವರ ಸಹೋದ್ಯೋಗಿ ಇಕ್ಕಟ್ಟಾದ ಓಣಿಯಲ್ಲಿ ನಡೆದು ಮನೆಯೊಂದರ ಬಾಗಿಲು ಬಡಿದರು.

ಅದೇ ತಾನೇ ಊಟ ಮುಗಿಸಿ ಓದುತ್ತಿದ್ದ ಹೆಣ್ಣುಮಗಳೊಬ್ಬಳು ಇಂತಹ ಅಪರಾತ್ರಿಯಲ್ಲಿ ಅದ್ಯಾರು ಬಾಗಿಲು ಬಡಿಯುತ್ತಿರಬಹುದೆಂದು ಯೋಚಿಸುತ್ತಲೇ ಬಾಗಿಲು ತೆರೆದು ನೋಡಿದರೆ ಎದುರಿಗೆ ಕಾನ್ಷೀರಾಮ್ ಸಾಹೇಬರು ನಿಂತಿದ್ದರು.

ಬಾಗಿಲು ತೆರೆದ ಆ ಹೆಣ್ಣು ಮಗಳು ಬೇರಾರೂ ಆಗಿರಲಿಲ್ಲ. ಅವರೇ ಮಾಯಾವತಿ.
ಆಧುನಿಕ ಭಾರತದ ರಾಜಕೀಯ ಇತಿಹಾಸದಲ್ಲಿಯೇ ಅಚ್ಚರಿಯ ಪವಾಡ ಸೃಷ್ಟಿಸಿದ ಆ ಇಬ್ಬರು ಮಹಾಮಹಿಮರು ಒಬ್ಬರಿಗೊಬ್ಬರು ಎದುರುಗೊಂಡ ಮೊದಲ ಕ್ಷಣ ಅದಾಗಿತ್ತು.

ಅಕ್ಕ ಮಾಯಾವತಿಯವರಿಗೆ ಒಂದು ಕ್ಷಣ ಉಸಿರು ನಿಂತಂತಾಯಿತು. ಕಾರಣ ಅಲ್ಲಿ ನಿಂತವರು ವಾಸ್ತವವಾಗಿ ಕಾನ್ಷೀರಾಮ್ ಸಾಹೇಬರಾಗಿದ್ದರೂ ಅವರ ರೂಪ, ಪ್ರತಿರೂಪ ಸಾಕ್ಷಾತ್ ಭಗವಾನ್ ಬುದ್ದನಂತಿತ್ತು. ಭೋಧಿಸತ್ವ ಬಾಬಾಸಾಹೇಬ್ ಅಂಬೇಡ್ಕರ್ ರವರನ್ನು ಹೋಲುತ್ತಿತ್ತು.

ತನ್ನ ಕಣ್ಣನ್ನು ತಾನೇ ನಂಬದಾದ ಮಾಯಾವತಿಯವರು ಸಾವರಿಸಿಕೊಂಡು ಕಾನ್ಷೀರಾಮ್ ಸಾಹೇಬರನ್ನು ಮನೆಯೊಳಗೆ ಬರಮಾಡಿಕೊಂಡರು. ಕಾನ್ಷೀರಾಮ್ ಸಾಹೇಬರ ಆಕಸ್ಮಿಕ ಆಗಮನ ಮಾಯಾವತಿಯವರ ಮನೆಯಲ್ಲಿ ಮಿಂಚಿನ ಸಂಚಾರವನ್ನುಂಟುಮಾಡಿತ್ತು.

ಮಾಯಾವತಿಯವರ ತಂದೆತಾಯಿಗಳು ಗಡಬಡಿಸಿ ಬಂದು, ಆದರದಿಂದ ಸ್ವಾಗತಿಸಿ, ಪರಸ್ಪರ ಕ್ಷೇಮ ಸಮಾಚಾರ ವಿನಿಮಯ ಮಾಡಿಕೊಂಡರು. ಬಾಂಸೆಫ್ ಕೆಲಸದ ಮೂಲಕ ಅದಾಗಲೇ ಉತ್ತರ ಭಾರತದಾದ್ಯಂತ ಮನೆಮಾತಾಗಿದ್ದ ಕಾನ್ಷೀರಾಮ್ ಸಾಹೇಬರು ಇಂತಹ ಅಪರಾತ್ರಿ ಹೊತ್ತಲ್ಲಿ ಮನೆಗೆ ಬಂದಿದ್ದು ಪ್ರಭುದಾಸ್ ದಯಾಳ್ ಮತ್ತು ರಾಮರತಿಯವರಿಗೆ ಬಿಡಿಸಲಾಗದ ಒಗಟಿನಂತಾಗಿತ್ತು. ಏತಕ್ಕೆ ಬಂದಿದ್ದಾರೋ, ಏನು ಸುದ್ದಿ ತಂದಿದ್ದಾರೋ ಎಂಬ ಅಳುಕು ಅವರದಾಗಿತ್ತು.

ಅಂಬೇಡ್ಕರ್ ಆಶಯಗಳಿಗೆ ದ್ರೋಹವೆಸಗಿದ್ದೀರಿ

ಕಾನ್ಷೀರಾಮ್ ಸಾಹೇಬರು ಆ ಅಪರಾತ್ರಿಯಲ್ಲಿ ಮಾಯಾವತಿಯವರನ್ನು ಹುಡುಕಿಕೊಂಡು ಬರಲು ಕಾರಣವೊಂದಿತ್ತು. ಆ ಕಾರಣವೇನೆಂದರೆ, 1977 ರ ಸೆಪ್ಟೆಂಬರ್ ನಲ್ಲಿ ಸರ್ಕಾರದ ವತಿಯಿಂದ ದೆಹಲಿಯ Constitution club ನಲ್ಲಿ ಮೂರು ದಿನಗಳ ಕಾಲ ‘ಜಾತಿ ವಿನಾಶ’ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಆ ಕಾರ್ಯಕ್ರಮದಲ್ಲಿ ಅಂದಿನ ಕೇಂದ್ರ ಆರೋಗ್ಯ ಸಚಿವರಾಗಿದ್ದ ಮತ್ತು ಹೆಸರಾಂತ ಸಮಾಜವಾದಿ ನಾಯಕರಾಗಿದ್ದ ರಾಜ್ ನಾರಾಯಣ್ ರವರು ತಮ್ಮ ಭಾಷಣದಲ್ಲಿ ಅವಹೇಳನಕಾರಿಯಾದ ‘ಹರಿಜನ’ ಪದವನ್ನು ಪದೇ ಪದೇ ಬಳಸಿ ಮಾತನಾಡುತ್ತಿದ್ದರು.

ಅಲ್ಲೇ ಹಾಜರಿದ್ದ ಸರ್ಕಾರಿ ಶಿಕ್ಷಕಿ ಮಾಯಾವತಿಯವರು ಎದ್ದು ನಿಂತು ರಾಜ್ ನಾರಾಯಣ್ ರವರನ್ನು ತರಾಟೆಗೆ ತೆಗೆದುಕೊಂಡರು. ಪರಿಶಿಷ್ಟ ಜಾತಿಯವರಿಗೆ ಹರಿಜನರೆಂದು ಕರೆದು ಅಂಬೇಡ್ಕರ್ ಆಶಯಗಳಿಗೆ ದ್ರೋಹವೆಸಗಿದ್ದೀರಿ. ನಿಮ್ಮ ಘನತೆ ಮತ್ತು ಗೌರವಗಳನ್ನು ಮರೆತು ಬೇಜವಾಬ್ದಾರಿಯಿಂದ ಮಾತನಾಡಿದ್ದೀರಿ. ನೀವು ಈ ಕೂಡಲೇ ಬಹಿರಂಗ ಕ್ಷಮೆ ಕೇಳಬೇಕು ಎಂದು ಸಭೆಯಲ್ಲಿ ಕ್ಷಮೆ ಕೇಳಿಸಿ ಎಲ್ಲರ ಗಮನ ಸೆಳೆದಿದ್ದರು. ಈ ಘಟನೆಯಿಂದ ಮಾಯಾವತಿಯವರು ಎಲ್ಲರ ಕೇಂದ್ರ ಬಿಂದುವಾದರು.

ಇದೇ ಸಭೆಯಲ್ಲಿದ್ದ ಕೆಲವು ಬಾಂಸೆಫ್ ಕಾರ್ಯಕರ್ತರು ಮಾಯಾವತಿಯವರ ವಿಷಯವನ್ನು ಕಾನ್ಷೀರಾಮ್ ಸಾಹೇಬರಿಗೆ ವಿವರಿಸಿ, ಮಾಯಾವತಿಯವರು ನಮ್ಮ ಸಂಘಟನೆಯಲ್ಲಿದ್ದರೆ ಬಾಂಸೆಫ್ ಗೆ ಹೆಚ್ಚು ಬಲ ಬರುತ್ತದೆ ಎಂದು ತಿಳಿಸಿದರು. ಬಾಂಸೆಫ್ ಕಾರ್ಯಕರ್ತರ ಮಾತಿನಿಂದ ಉತ್ತೇಜಿತರಾದ ಕಾನ್ಷೀರಾಮ್ ಸಾಹೇಬರು ಮಾಯಾವತಿಯವರ ಅರಿವಿಗೆ ಬಾರದಂತೆ ಅವರ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಮಾಯಾವತಿಯವರ ಚಿಂತನೆಗಳನ್ನು ಗಮನವಿಟ್ಟು ಆಲಿಸಿದರು. ಅದಕ್ಕಾಗಿ ಮಾಯಾವತಿಯವರನ್ನು ಹುಡುಕಿಕೊಂಡು ಬಂದಿದ್ದರು.

ಐಎಎಸ್ ಅಧಿಕಾರಿಯಾಗಿ ಶೋಷಿತ ಜನಾಂಗಗಳ ಸೇವೆ ಮಾಡಬೇಕು

ಕಾನ್ಷೀರಾಮ್ ಸಾಹೇಬರು ಮಾಯಾವತಿಯವರ ಜೊತೆ ಸುಮಾರು ಒಂದು ಗಂಟೆಗಳ ಕಾಲ ಭಾರತದ ಸಾಮಾಜಿಕ ಮತ್ತು ರಾಜಕೀಯ ಸ್ಥಿತಿಗತಿಗಳ ಬಗ್ಗೆ ಸುದೀರ್ಘವಾಗಿ ಮಾತನಾಡಿದರು. ಮಹಾತ್ಮ ಜ್ಯೋತಿಭಾಫುಲೆಯವರಿಂದಿಡಿದು ಬಾಬಾಸಾಹೇಬ್ ಅಂಬೇಡ್ಕರ್ ವರೆಗಿನ ಎಲ್ಲಾ ಮಹಾಪುರುಷರ ಹೋರಾಟವನ್ನು ಮತ್ತು ಅದರ ಮುಂದುವರಿಕೆಯ ಮಹತ್ವವನ್ನು ಮನಮುಟ್ಟುವಂತೆ ವಿವರಿಸಿ ಹೇಳಿದರು.

ಇದಾದ ಬಳಿಕ ಮಾಯಾವತಿಯವರ ಜೀವನದ ಆಸೆ ಆಕಾಂಕ್ಷೆಗಳನ್ನು, ದ್ಯೇಯೋದ್ದೇಶಗಳನ್ನು ಕೇಳಿ ತಿಳಿದುಕೊಂಡರು. ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ತಾನು ಐಎಎಸ್ ಅಧಿಕಾರಿಯಾಗಿ ಶೋಷಿತ ಜನಾಂಗಗಳ ಸೇವೆ ಮಾಡಬೇಕು ಎನ್ನುವುದು ನನ್ನ ಗುರಿ ಎಂದು ಮಾಯಾವತಿಯವರು ತಿಳಿಸಿದರು.

ನಂತರ ಹೊರಡುವ ಸಮಯದಲ್ಲಿ ಅಂತಿಮವಾಗಿ ಒಂದು ನಿರ್ಧಾರಕ್ಕೆ ಬಂದ ಕಾನ್ಷೀರಾಮ್ ಸಾಹೇಬರು ” ನೀನು ಅಂದುಕೊಂಡಂತೆ ಖಂಡಿತವಾಗಿ ನೀನು ಐಎಎಸ್ ಅಧಿಕಾರಿ ಆಗಬಹುದು. ಆ ಅರ್ಹತೆ ನಿನಗಿದೆ. ಅದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ ನೀನು ಅಂದುಕೊಂಡಂತೆ ನಿನ್ನ ಜನರ ಸೇವೆ ಮಾಡುವುದು ಮಾತ್ರ ನಿಮ್ಮಿಂದ ಸಾಧ್ಯವಾಗುವುದಿಲ್ಲ.

ಕಾರಣ, ಒಬ್ಬ ಸರ್ಕಾರಿ ಅಧಿಕಾರಿಯಾಗಿ ನೀನು ಸರಕಾರ ನಡೆಸುವ ರಾಜಕಾರಿಣಿಗಳ ಇಚ್ಚೆಯಂತೆ ನಡೆಯಬೇಕಾಗುತ್ತದೆ. ಶ್ರೀಮಂತರ ನೋಟುಗಳಿಂದ ಬಡವರ ಓಟುಗಳನ್ನು ಖರೀದಿಸುವುದನ್ನೇ ಪ್ರಜಾಪ್ರಭುತ್ವ ಎಂದು ಪರಿಗಣಿಸಿರುವ ಭಾರತದಲ್ಲಿ ರಾಜಕೀಯ ನಾಯಕರ ಯೋಜನೆಗಳು ಮತ್ತು ಯೋಚನೆಗಳು ಜಾರಿಯಾಗುತ್ತವೆಯೇ ಹೊರತು ಐಎಎಸ್ ಅಧಿಕಾರಿಗಳ ಯೋಜನೆಗಳು ಮತ್ತು ಯೋಚನೆಗಳಲ್ಲ.

ಈಗ ನಮ್ಮ ಸಮಾಜದಲ್ಲಿ ಬೇಕಾದಷ್ಟು ಮಂದಿ ಐಎಎಸ್ ಅಧಿಕಾರಿಗಳಿದ್ದಾರೆ. ಆದರೆ ಅವರೆಲ್ಲ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿದ್ದಾರೆ. ಅವರಿಂದ ಏನನ್ನೂ ನಿರೀಕ್ಷಿಸುವಂತಿಲ್ಲ. ಇದು ಎಲ್ಲರಿಗೂ ತಿಳಿದಿರುವ ಸಂಗತಿ. ಹೀಗಾಗಿ ನಮಗೆ ಬೇಕಾಗಿರುವುದು ಐಎಎಸ್ ಅಧಿಕಾರಿಗಳಲ್ಲ. ರಾಜಕೀಯ ನಾಯಕರು. ಐಎಎಸ್ ಅಧಿಕಾರಿಗಳಿಂದ ಸರಿಯಾಗಿ ಕೆಲಸ ಮಾಡಿಸಬಲ್ಲ, ವಿಧಾನಸಭೆ ಮತ್ತು ಲೋಕಸಭೆಗಳಲ್ಲಿ ಕುಳಿತು ಜನಪರ ಶಾಸನಗಳನ್ನು ರೂಪಿಸಬಲ್ಲ , ಅವುಗಳನ್ನು ಜಾರಿಗೊಳಿಸಬಲ್ಲ ಸಮರ್ಥ ರಾಜಕೀಯ ನಾಯಕರು.

ನಮ್ಮ ಸಮಾಜದಲ್ಲಿ ಇಂಥ ನಾಯಕರ ಕೊರತೆ ಇದೆ. ‌ನೀನು ಆ ಕೊರತೆಯನ್ನು ನೀಗಿಸಬೇಕು. ನಿನ್ನಲ್ಲಿ ಆ ಶಕ್ತಿಯಿದೆ. ನನ್ನ ಮಾತನ್ನು ನೀನು ನಂಬುವುದಾದರೆ, ನಿನ್ನಲ್ಲಿ ಇಂತದ್ದೊಂದು ಬಯಕೆ ಇದ್ದುದಾದರೆ ನಾನು ನಿನ್ನನ್ನು ಅಂಥ ಒಬ್ಬ ಸಮರ್ಥ ನಾಯಕಿಯನ್ನಾಗಿ ತಯಾರು ಮಾಡುತ್ತೇನೆ. ಆಗ ನೂರಾರು ಜನ ಐಎಎಸ್ ಅಧಿಕಾರಿಗಳು ತಮ್ಮ ಫೈಲುಗಳನ್ನು ಹಿಡಿದುಕೊಂಡು ಬಂದು ನಿನ್ನ ಆದೇಶಕ್ಕಾಗಿ ಕಾಯುತ್ತಾರೆ.

ಒಳ್ಳೆಯ ಮತ್ತು ಕೆಟ್ಟ ಕೆಲಸ ಎರಡನ್ನೂ ಮಾಡುವ ಶಕ್ತಿ ಹೊಂದಿರುವ ಐಎಎಸ್ ಅಧಿಕಾರಿಗಳಿಂದ ನೀನು ನಿನ್ನೆಲ್ಲ ಒಳ್ಳೆಯ ಕೆಲಸಗಳನ್ನೇ ಮಾಡಿಸಬಹುದು. ಅದಕ್ಕಾಗಿ ನೀನು ಒಬ್ಬ ಐಎಎಸ್ ಅಧಿಕಾರಿಯಾಗುವ ಬದಲು ಒಬ್ಬ ಸಮರ್ಥ ರಾಜಕೀಯ ನಾಯಕಿಯಾಗುವುದು ಒಳ್ಳೆಯದು. ಯಾವುದಕ್ಕೂ ಯೋಚಿಸಿ ಒಂದು ಸರಿಯಾದ ನಿರ್ಧಾರಕ್ಕೆ ಬಾ… ನೀನು ತೆಗೆದುಕೊಳ್ಳುವ ನಿರ್ಧಾರದಲ್ಲಿ ಬಹುಜನರ ಭವಿಷ್ಯ ಅಡಗಿದೆ ಎಂದು ಹೇಳಿ ಅಲ್ಲಿಂದ ಹೊರಟು ಹೋದರು.

ಮುಂದೆ ನಡೆದಿದ್ದೆಲ್ಲವೂ ನಮ್ಮ ಕಣ್ಣ ಮುಂದಿರುವ ಇತಿಹಾಸ. ನುಡಿದಂತೆ ನಡೆದು, ಯಕಶ್ಚಿತ್ ಶಾಲಾ ಶಿಕ್ಷಕಿಯೊಬ್ಬಳನ್ನು ಉತ್ತರಪ್ರದೇಶದಂತಹ ಅತಿದೊಡ್ಡ ರಾಜ್ಯದಲ್ಲಿ ನಾಲ್ಕು ಬಾರಿ ಮುಖ್ಯಮಂತ್ರಿಯನ್ನಾಗಿ ಮಾಡಿ, ದೇಶವೇ ಕೊಂಡಾಡುವಂತೆ ಅದ್ಬುತ ಕಾರ್ಯಗಳನ್ನು ಸಾಧಿಸಿ ತೋರಿಸಿದ ಪವಾಡ ಪುರುಷ ಕಾನ್ಷೀರಾಮ್. ಅಂದು ಆ ಮಹಾತ್ಯಾಗಿ ನುಡಿದ ಭವಿಷ್ಯ ಸುಳ್ಳಾಗಲಿಲ್ಲ. ಕಾರಣ, ಮಹಾಜ್ಞಾನಿಗಳ ಮಾತುಗಳು ಸುಳ್ಳಾಗಲು ಸಾದ್ಯವೇ ಇಲ್ಲ..!

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನಡೆಸ್ಕ್:ರಾಜ್ಯದ ಎಲ್ಲ ಪರಿಶ್ಟಿಷ್ಟ ವರ್ಗದ ವಸತಿ ಶಾಲೆಗಳಿಗೆ ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ವಿಧಾನಸೌಧ ಮುಂಭಾಗದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಐವರು ಮಹನೀಯರಿಗೆ ವಾಲ್ಮೀಕಿ ಪ್ರಶಸ್ತಿ ವಿತರಿಸಿ, ಅವರು ಮಾತನಾಡಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಅವರ ಕಲ್ಯಾಣಕ್ಕೆ ತಮ್ಮ ಸರ್ಕಾರ ಬಜೆಟ್‌ನಲ್ಲಿ ಮೊಟ್ಟ ಮೊದಲ ಬಾರಿಗೆ ಹಣ ನಿಗದಿಮಾಡಿತ್ತು ಎಂದರು.

ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ನಿವಾರಣೆಯಾಗದ ಹೊರತು, ಸಮಾನತೆ ಬರುವುದಿಲ್ಲ ಎಂದರು. ಕಾರ್ಯಕ್ರಮದಲ್ಲಿ ರಾಜಾನಹಳ್ಳಿ ವಾಲ್ಮೀಕಿ ಸಮುದಾಯ ಮಠದ ಜಗದ್ಗುರು ಪ್ರಸನ್ನಾನಂದಪುರಿ, ಸಚಿವರಾದ ಸತೀಶ್ ಜಾರಕಿಹೊಳ್ಳಿ, ಕೆ.ಎನ್. ರಾಜಣ್ಣ, ಸತೀಶ್ ಜಾರಕಿಹೊಳಿ, ಎಚ್.ಕೆ. ಪಾಟೀಲ್ ಮೊದಲಾದವರು ಹಾಜರಿದ್ದರು.

ವಾಲ್ಮೀಕಿ ಪ್ರಶಸ್ತಿ

ಜಾನುವಾರು ರಕ್ಷಣೆ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಗ್ರಾಮೀಣ ಸೊಗಡನ್ನು ಉಳಿಸಿ, ಬೆಳೆಸುವಲ್ಲಿ ಮಹತ್ತರ ಪಾತ್ರವಹಿಸಿದ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕಿಲಾರಿ ಜೋಗಯ್ಯ ಬಿನ್ ಕಿಲಾರಿ ಬೋರಯ್ಯ, ಬುಡಕಟ್ಟು ಮಕ್ಕಳ ಶಿಕ್ಷಣಕ್ಕಾಗಿ ಅವಿರತ ಹೋರಾಟ ಮಾಡಿದ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಡಾ. ಎಸ್. ರತ್ನಮ್ಮ, ಬೆಳಗಾವಿಯ ರಾಜಶೇಖರ ತಳವಾರ, ಬೆಂಗಳೂರು ಮೂಲದ ಕೆ.ಎಸ್. ಮೃತ್ಯುಂಜಯ,ವಿಜಯನಗರ ಜಿಲ್ಲೆಯ ರತ್ಮಮ್ಮ ಬಿ. ಸೋಗಿ ಅವರಿಗೆ ಪ್ರಶಸ್ತಿ ನೀಡಿ, ಗೌರವಿಸಲಾಯಿತು. ಪ್ರಶಸ್ತಿ, 20 ಗ್ರಾಂ ಬಂಗಾರದ ಪದಕ ಹಾಗೂ 5 ಲಕ್ಷ ರೂಪಾಯಿ ನಗದು ಒಳಗೊಂಡಿದೆ.

ರಾಜ್ಯದಲ್ಲಿ ವಾಲ್ಮೀಕಿ ಜಯಂತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧೆಡೆಗಳಲ್ಲಿ ಇಂದು ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್. ಅನುರಾಧ ಮಾತನಾಡಿ, ಬದುಕಿನ ಮೌಲ್ಯಗಳನ್ನು ಬಿಂಬಿಸುವ ರಾಮಾಯಣ ಕಾವ್ಯ ರಚಿಸಿದ ವಾಲ್ಮೀಕಿ ಮಹರ್ಷಿ ಸದಾ ಸ್ಮರಣೀಯರಾಗಿದ್ದಾರೆ ಎಂದರು.

ದೊಡ್ಡಬಳ್ಳಾಪುರದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜು ಮಾತನಾಡಿ, ಮಹರ್ಷಿಗಳ ಸಾಧನೆ ಮತ್ತು ಸಮಾಜಕ್ಕೆ ನೀಡಿದ ಸಂದೇಶವನ್ನು ಅರಿಯಬೇಕಿದೆ ಎಂದರು.

ಹಾಸನದಲ್ಲಿಂದು ಆಯೋಜಿಸಲಾಗಿದ್ದ ಆಕರ್ಷಕ ಮೆರವಣಿಗೆಗೆ ಶಾಸಕ ಸ್ವರೂಪ ಪ್ರಕಾಶ್ ಚಾಲನೆ ನೀಡಿದರು. ಬಳಿಕ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ಸಾಗಿತು.
ಕೋಲಾರದಲ್ಲಿ ಶಾಸಕ ಕೊತ್ತೂರು ಜಿ. ಮಂಜುನಾಥ್ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿ, ನಂತರ ಡೊಳ್ಳು ಹೊಡೆಯುವ ಮೂಲಕ ಬೃಹತ್ ಪಲ್ಲಕ್ಕಿಗಳ ಮೆರವಣಿಗೆಗೆ ಚಾಲನೆ ನೀಡಿದರು.

ಚಿತ್ರದುರ್ಗದಲ್ಲಿ ವಾಲ್ಮೀಕಿ ಭಾವಚಿತ್ರ ಹಾಗೂ ಪುತ್ಥಳಿ ಮೆರವಣಿಗೆ ವಿವಿಧ ಜಾನಪದ ಕಲಾತಂಡಗಳ ಸಮ್ಮುಖದಲ್ಲಿ ನಡೆಯಿತು. ಹಾವೇರಿಯಲ್ಲಿಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಕ್ಷಯ ಶ್ರೀಧರ್ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಪ್ಪು ನಮನ ಸಲ್ಲಿಸಿದರು.

ಗದಗ ಜಿಲ್ಲೆಯ ನಾಗಾವಿ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಸಚಿವ ಪ್ರೋಫೆಸರ್ ಸುರೇಶ್ ನಾಡಗೌಡ ಮಾತನಾಡಿ, ವಾಲ್ಮೀಕಿ ಅವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಕಾರವಾರದಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಮಾತನಾಡಿ, ರಾಮಾಯಣದಲ್ಲಿ ಪರಿಸರಕ್ಕೆ ಮಹತ್ವ ನೀಡಿದ್ದು, ಅದರಂತೆಯೇ ಉತ್ತರಕನ್ನಡ ಜಿಲ್ಲೆಯಲ್ಲಿನ ವನ್ಯ ಸಂಪತನ್ನು ಕಾಪಾಡಲು ಜನತೆ ಕಾಳಜಿ ತೋರಬೇಕು ಎಂದು ಹೇಳಿದರು.
ಬೆಳಗಾವಿಯಲ್ಲೂ ವಿವಿಧ ಜಾನಪದ ಕಲಾತಂಡಗಳ ಮೆರವಣಿಗೆಯೊಂದಿಗೆ ಜಯಂತಿ ಆಚರಿಸಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕರ್ನಾಟಕದಲ್ಲಿ ವಿವಿಧ ಕ್ಷೇತ್ರಗಳ ಐವರು ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ

Published

on

ಸುದ್ದಿದಿನಡೆಸ್ಕ್:ರಾಮಾಯಣದ ಕರ್ತೃ ಮಹರ್ಷಿ ವಾಲ್ಮೀಕಿ ಜಯಂತಿ ಇಂದು. ಈ ಹಿನ್ನೆಲೆಯಲ್ಲಿ ವಿವಿಧೆಡೆ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದೆ.

ಮಹರ್ಷಿ ವಾಲ್ಮೀಕಿಯನ್ನು ’ಆದಿ ಕವಿ’ ಅಥವಾ ಸಂಸ್ಕೃತ ಭಾಷೆಯ ಮೊದಲ ಕವಿ ಎಂದು ಹೇಳಲಾಗುತ್ತದೆ. ಹಲವೆಡೆ ಜಯಂತಿಯ ಅಂಗವಾಗಿ ಶೋಭಾ ಯಾತ್ರೆ ಮೆರವಣಿಗೆಗಳನ್ನು ಹಮ್ಮಿಕೊಳ್ಳಲಾಗಿದೆ.

ಮಹರ್ಷಿ ವಾಲ್ಮೀಕಿ ಅವರ ಸ್ಮರಣಾರ್ಥ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಕರ್ನಾಟಕ ಸರ್ಕಾರ 2024 ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಘೋಷಿಸಿದೆ.

ಜಾನುವಾರುಗಳ ಸಂತತಿಯ ಸಂರಕ್ಷಣೆಯಲ್ಲಿ ತೊಡಗಿರುವ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಕಿಲಾರಿ ಜೋಗಯ್ಯ, ಬುಡಕಟ್ಟು ಮಕ್ಕಳ ಶಿಕ್ಷಣದ ಹೋರಾಟಗಾರ್ತಿ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಡಾ.ರತ್ನಮ್ಮ.ಎಸ್, ಗುಡ್ಡಗಾಡು ಪ್ರದೇಶದಲ್ಲಿರುವ ಬುಡಕಟ್ಟು ಸಮುದಾಯದ ಜನರಿಗೆ ಶಿಕ್ಷಣ, ನೈರ್ಮಲ್ಯ ಕುರಿತು ಜಾಗೃತಿ ಮೂಡಿಸುತ್ತಿರುವ ಬೆಳಗಾವಿಯ ಗಾಂಧಿನಗರದ ರಾಜಶೇಖರ ತಳವಾರ, ಪರಿಶಿಷ್ಟ ಪಂಗಡ ಸಮುದಾಯದ ಶೈಕ್ಷಣಿಕ, ಆರ್ಥಿಕ ಅಭಿವೃದ್ಧಿ ಕುರಿತು ಸರ್ಕಾರಿ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಬೆಂಗಳೂರು ನಿವಾಸಿಯಾದ ಕೆ.ಎಸ್.ಮೃತ್ಯುಂಜಯ, ರಂಗಭೂಮಿ ಕಲಾವಿದೆಯಾದ ವಿಜಯನಗರ ಜಿಲ್ಲೆ ಹರಪ್ಪನಹಳ್ಳಿಯವರಾದ ರತ್ನಮ್ಮ ಬಿ ಸೋಗಿ ಅವರಿಗೆ ಈ ಸಾಲಿನ ಪ್ರಶಸ್ತಿಗಳನ್ನು ಇಂದು ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜಾತಿ ಪ್ರಮಾಣಪತ್ರ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Published

on

ಸುದ್ದಿದಿನಡೆಸ್ಕ್:ಜಾತಿ ಪ್ರಮಾಣ ಪತ್ರದ ಬಗೆಗಿನ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಇಂದು ಪರಿಶಿಷ್ಟ ಪಂಗಡದ ಸಮುದಾಯಗಳ ಸಭೆ ನಡೆಸಲಾಗಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅವ್ಯವಹಾರದ ಹಿನ್ನಲೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಅನುದಾನದ ಕೊರತೆಯಾಗಬಾರದೆಂದು ಸೂಚಿಸಿದ್ದಾರೆ.

ಈ ವರ್ಷದಲ್ಲಿ ನಿಗದಿಪಡಿಸಲಾಗಿರುವ ಅನುದಾನವನ್ನು ಸಂಪೂರ್ಣವಾಗಿ ಒದಗಿಸಲಾಗುವುದು. ನಿಗಮದಲ್ಲಿ ಸುಮಾರು 89 ಕೋಟಿ 63 ಲಕ್ಷ ರೂಪಾಯಿಗಳ ಮೊತ್ತ ಅವ್ಯವಹಾರವಾಗಿದ್ದು, ಇದರಲ್ಲಿ 5 ಕೋಟಿ ರೂಪಾಯಿಗಳನ್ನು ವಾಪಸ್ಸು ಪಡೆಯಲಾಗಿದೆ. ಉಳಿದ 84 ಕೋಟಿ 63 ಲಕ್ಷ ರೂಪಾಯಿಗಳಲ್ಲಿ 71 ಕೋಟಿ 54 ಲಕ್ಷ ರೂಪಾಯಿಗಳನ್ನು ವಸೂಲು ಮಾಡಲಾಗಿದೆ ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending