Connect with us

ದಿನದ ಸುದ್ದಿ

ಈ ಹತ್ತು ಸಂಶೋಧನೆಗಳ ಇತಿಹಾಸ ತಿಳಿದರೆ ಅಚ್ಚರಿ ಪಡುತ್ತೀರಿ ?

Published

on

ನಾವು ನಮ್ಮ ದಿನ ನಿತ್ಯದ ಜೀವನದಲ್ಲಿ ಬಳಸುವ ಈ 10 ಸಾಧನಗಳನ್ನು ಸಂಶೋಧಿಸಿದವರು ಮುಸ್ಲಿಮರು.
ಇಂದು ನಾವು ಜೀವಿಸುತ್ತಿರುವ ಪ್ರಪಂಚದಲ್ಲಿ ಅನೇಕ ಅನೇಕ ತಂತ್ರಜ್ಞಾನಗಳು ಬೆಳೆದು ನಿಂತಿದೆ. ತಂತ್ರಜ್ಞಾನ ಬೆಳೆದ ಹಾಗೆ ಮನುಷ್ಯನ ಜೀವನ ಕ್ರಮ ಬದಲಾಗ ತೊಡಗಿದೆ. ಈ ರೀತಿ ಬೆಳೆದು ನಿಂತ ತಂತ್ರಜ್ಞಾನದ ಹಿಂದೆ ಮುಸ್ಲಿಮರ ಕೊಡುಗೆ ಇದೆ ಎಂದ್ರೆ ನಂಬ್ತೀರಾ..? ಯಾಕೆ ನಂಬಲ್ವ…? ಹಾ… ನಂಬ್ಲೇ ಬೇಕು. ಯಾಕಂದ್ರೆ ಮುಸ್ಲಿಮರ ಸಂಶೋಧನೆ 1000 ವರ್ಷಗಳ ಇತಿಹಾಸವಿದೆ. ಮುಸ್ಲಿಮರು ಸಂಶೋಧಿಸಿದ ವಸ್ತುಗಳು ಇಂದು ಡೆವಲಪ್ ಆಗಿ ಕೆಲವೊಂದು ವಸ್ತುಗಳು ಇನ್ಯಾರೋ ಯುರೋಪಿಯನ್ ಸಂಶೋಧಕನ ಹೆಸರಿನೊಂದಿಗೆ ತಳಕು ಹಾಕಿಕೊಂಡಿದೆ. ಇವತ್ತು ನಾವು ನಿಮಗೆ ಮುಸ್ಲಿಮರು ಈ ಜಗತ್ತಿಗೆ ನೀಡಿದ ಇಂದು ನಾವು ನಮ್ಮ ದಿನನಿತ್ಯದ ಜೀವನದಲ್ಲಿ ಉಪಯೋಗಿಸುವ 10 ವಸ್ತುಗಳನ್ನು ಪರಿಚಯ ಮಾಡಿಕೊಡಲಿದ್ದೇವೆ.

1.ಕಾಫಿ:

ಈ ಸಂಶೋಧನೆಗೆ 1200 ವರ್ಷಗಳ ಇತಿಹಾಸವಿದೆ. ಖಾಲಿದ್ ಎನ್ನುವ ಅರಬ್ ಹುಡುಗನೊಬ್ಬ ಇಥಿಯೋಪಿಯನ್ ಇಳಿಜಾರು ಪ್ರದೇಶಗಳಲ್ಲಿ ಆಡು ಮೇಯಿಸುತ್ತಿರುವಾಗ ಬೆಟ್ಟದ ತಪ್ಪಲಿನಲ್ಲಿ ಒಂದು ಬೀಜವು ದೊರೆಯಿತು. ಅದನ್ನು ಜಗಿದು ನೋಡಿದ ಆತನಿಗೆ ರುಚಿಸಿತು. ಬೀಜವನ್ನು ಮನೆಗೆ ಕೊಂಡು ಹೋಗಿ ನೀರಿನಲ್ಲಿ ಬೇಯಿಸಿ ಪ್ರಯೋಗ ನಡೆಸಿದಾಗ ಅದರ ಬೇಯಿಸಿದ ನೀರಿನ ರುಚಿ ಬಹಳ ಸ್ವಾದಿಷ್ಟವಾಗಿತ್ತು. ಕೊನೆಗೆ ಬೀಜವನ್ನು ಒಣಗಿಸಿ ಪುಡಿ ಮಾಡಿ ಪ್ರಯೋಗ ಮಾಡಿದ ಹೀಗೆ ಸಂಶೋಧಿಸಲ್ಪಟ್ಟ ಬೀಜವು “ಅಲ್-ಖವಾಹ್” ಎಂದು ಹೆಸರಾಯಿತು. ಇದುವೇ ಯುರೋಪ್ಗೆ ಕಾಲಿಟ್ಟಾಗ “ಕಾಫಿ” ಎಂದು ಪ್ರಸಿದ್ಧಿ ಪಡೆಯಿತು.

2. ಗಡಿಯಾರ

ನಮ್ಮ ಜೀವನವನ್ನು ಸ್ವಸ್ಥವಾಗಿ ಮುನ್ನಡೆಸಲು ನಮಗೆ ಇಂದು ಸಮಯ ಅತ್ಯಗತ್ಯವಾಗಿದೆ. ಇದನ್ನೂ ಕೂಡ ಎಂಟು ನೂರು ನೂರು ವರ್ಷಗಳ ಹಿಂದೆ ಮುಸ್ಲಿಮರು ಮಾಡಿದ್ದರು. ಆಗ್ನೇಯದ ಟರ್ಕಿಯ ಡಯಾರ್‌ಬಕೀರ್ ಎಂಬಲ್ಲಿ ಅಲ್-ಜಝಾರಿ ಎಂಬ ವ್ಯಕ್ತಿಯೊಬ್ಬರು ತುಂಬಾ ಧಾರ್ಮಿಕ ವ್ಯಕ್ತಿಯಾಗಿದ್ದರು. ಮತ್ತು ಅತ್ಯಂತ ಪರಿಣತ ಎಂಜಿನಿಯರ್ ಕೂಡ ಆಗಿದ್ದು, ಇವರು ಗಡಿಯಾರ ಎಂಬ ಸ್ವಯಂಚಾಲಿತ ಯಂತ್ರದ ಪರಿಕಲ್ಪನೆಗೆ ಜನ್ಮ ನೀಡಿದರು. 1206 ರ ಹೊತ್ತಿಗೆ ಅಲ್-ಜಝಾರಿ ಎಲ್ಲಾ ಆಕಾರಗಳ ಮತ್ತು ಗಾತ್ರಗಳ ಹಲವಾರು ಗಡಿಯಾರಗಳನ್ನು ಮಾಡಿದ್ದರು.

ಅಲ್ ಜಝಾರಿಯವರ ಗಡಿಯಾರ ಸಂಶೋಧನೆಗೆ ಪ್ರೇರಣೆಯಾದದ್ದು ಪ್ರತಿದಿನ ಮುಸ್ಲಿಮರು ಕಡ್ಡಾಯವಾಗಿ ನಿರ್ವಹಿಸುವ ಐದು ಹೊತ್ತಿನ ಪ್ರಾರ್ಥನೆಯ ಸಮಯವನ್ನು ಅರಿಯುವುದಾಗಿತ್ತು. ಸುದೀರ್ಘ ಸಂಶೋಧನೆಯ ನಂತರ ಒಂದು ಉತ್ತಮ ಗಡಿಯಾರವನ್ನು ನಿರ್ಮಿಸುವಲ್ಲಿ ಜಝಾರಿ ಯಶಸ್ವಿಯಾಗಿದ್ದರು.

3.ಕ್ಯಾಮರಾ

ಇಬ್ನ್ ಅಲ್-ಹೈಥಮ್ ದೃಗ್ವಿಜ್ಞಾನವನ್ನು ಸಂಶೋಧಿಸಿದರು. ಕಣ್ಣಿನಿಂದ ಹೊರಸೂಸುವ ಅದೃಶ್ಯವಾದ ಬೆಳಕು ದೃಷ್ಟಿಗೆ ಕಾರಣವಾಗಿದೆಯೆಂಬ ಗ್ರೀಕ್ ಕಲ್ಪನೆಯನ್ನು ಅವರು ತಿರಸ್ಕರಿಸಿದರು. ಇದರ ಬದಲಾಗಿ ಬೆಳಕಿನಿಂದ ದೃಷ್ಟಿಯು ಉಂಟಾಗುತ್ತದೆ. ಬೆಳಕು ಒಂದು ವಸ್ತುವನ್ನು ಪ್ರತಿಫಲಿಸುತ್ತದೆ ಮತ್ತು ಕಣ್ಣಿನ ಅಕ್ಷಿ ಪಟಲವನ್ನು ಪ್ರವೇಶಿಸುತ್ತದೆ. ಅಕ್ಷಿ ಪಟಲದ ತೆರೆಯಲ್ಲಿ ವಸ್ತುವಿನ ಆಕಾರವು ಮೂಡುತ್ತದೆ ಎಂದು ದೃಷ್ಟಿಯನ್ನು ಸರಿಯಾಗಿ ವಿಶ್ಲೇಷಿಸಿದರು.ಒಂದು ಬದಿಯಲ್ಲಿ ಡಾರ್ಕ್ ರೂಮ್ ನಿಂದ ಒಂದು ಪಿನ್ ಹೋಲ್(ರಂಧ್ರ) ನ ಮೂಲಕ ಬೆಳಕನ್ನು ಇನ್ನೊಂದು ಬದಿಯಲ್ಲಿ ಬಿಳಿ ಹಾಳೆಯ ಮೇಲೆ ಹಾಯಿಸಿ ಅವರು ತನ್ನ ಸಿದ್ಧಾಂತಕ್ಕೆ ಪುರಾವೆಯನ್ನು ನೀಡಿದರು.
ಈ ಪ್ರಯೋಗದಲ್ಲಿ ಬೆಳಕು ರಂಧ್ರದ ಮೂಲಕ ಬಂದಿತು ಮತ್ತು ಬಿಳಿ ಹಾಳೆಯಲ್ಲಿ ಕೋಣೆಯ ಹೊರಗಡೆ ಇರುವ ವಸ್ತುಗಳ ವಿಲೋಮ ಚಿತ್ರವೊಂದನ್ನು ಯೋಜಿಸಿತು. ಅವರು ಇದನ್ನು “ಕಮರಾ” ಎಂದು ಕರೆದರು. ಇದು ವಿಶ್ವದ ಮೊದಲ ಬಿಂಬಗ್ರಾಹಿ ಕ್ಯಾಮರಾ ಆಗಿತ್ತು.

4.ಶುಚಿತ್ವ ಸಾಧನಗಳು

ಶುಚಿತ್ವವು ಮುಸ್ಲಿಮರ ವಿಶ್ವಾಸದ ಭಾಗವಾಗಿದೆ. 10 ನೆಯ ಶತಮಾನದ ಇಸ್ಲಾಮಿಕ್ ಜಗತ್ತಿನಲ್ಲಿ ಟಾಯ್ಲೆಟ್ ಬಾತ್ರೂಮ್ ಮತ್ತು ನೈರ್ಮಲ್ಯ ಅಭ್ಯಾಸಗಳು ಕಂಡುಬರುವ ಉತ್ಪನ್ನಗಳ ಸಂಶೋಧನೆ ನಡೆಯಿತು. 13 ನೇ ಶತಮಾನದಲ್ಲಿ, ಗಡಿಯಾರ ಸಂಶೋಧಿಸಿದ ಅದೇ ಇಂಜಿನಿಯರ್ ಅಲ್-ಜಝಾರಿ, “ವುದು”(ಅಂಗಶುದ್ಧಿ) ಯಂತ್ರಗಳನ್ನು ಒಳಗೊಂಡಂತೆ ಯಾಂತ್ರಿಕ ಸಾಧನಗಳನ್ನು ವಿವರಿಸುವ ಒಂದು ಎಂಜಿನಿಯರಿಂಗ್ ಸಂಸೋಧನೆಯ ಪುಸ್ತಕವನ್ನು ಬರೆದರು.
ಈ ವುದೂ ಯಂತ್ರವು ಒಂದು ಮೊಬೈಲ್ ಡಿವೈಸ್(ಸ್ಥಳಾಂತರಿಸ ಬಹುದಾದ ವಸ್ತು) ಆಗಿತ್ತು. ಅದನ್ನು ಯಾರಾದರೂ ಅತಿಥಿ ಇದ್ದರೆ ಅವರಿಗಾಗಿ ತೆಗೆದು ಕೊಂಡು ಹೋಗಲಾಗುತ್ತಿತ್ತು. ಅತಿಥಿ ಯಂತ್ರದ ತಲೆಯನ್ನು ಸ್ಪರ್ಶಿಸಿದಾಗ ಎಂಟು ಸಣ್ಣ ರಂಧ್ರಗಳಲ್ಲಿ ನೀರು ಬರುತ್ತಿತ್ತು. ಶುದ್ಧೀಕರಣಕ್ಕಾಗಿ ಸಾಕಷ್ಟು ನೀರು ನೀಡುವುದು. ಮತ್ತು ನೀರನ್ನು ಮಿತ ಬಳಕೆ ಮಾಡಿ ಸಂರಕ್ಷಿಸುವುದು ಇದರ ಉದ್ದೇಶವಾಗಿತ್ತು. ಮುಸ್ಲಿಮರು ನಿಜವಾಗಿಯೂ ಸ್ವಚ್ಛವಾಗಿರಲು ಬಯಸುತ್ತಾರೆ ಮತ್ತು ನೀರಿನಿಂದ ಮಾತ್ರ ತೊಳೆದರೆ ಶುದ್ಧಿಯಾಗಲಾರದು ಎಂಬುದನ್ನು ಅರಿತು, ಅವರು ಸಾಬೂನು ಕಂಡು ಹಿಡಿದರು. ಇದಕ್ಕಾಗಿ ಆಲಿವ್ ಎಣ್ಣೆಯನ್ನು “ಅಲ್-ಖಲಿ” ಎಂಬ ಉಪ್ಪು-ತರಹದ ಪದಾರ್ಥದೊಂದಿಗೆ ಮಿಶ್ರ ಮಾಡಿದರು. ನಂತರ ಅದನ್ನು ಸರಿಯಾದ ಮಿಶ್ರಣವನ್ನು ಸಾಧಿಸಲು ಬೇಯಿಸಿದರು. ಅದು ಗಟ್ಟಿಯಾದ ನಂತರ ಸ್ನಾನಗೃಹಗಳಲ್ಲಿ ಬಳಸಿದರು.

5.ಸುಗಂಧ ದ್ರವ್ಯ

ಅಲ್-ಕಿಂಡಿ ಅವರು ಸುಗಂಧ ದ್ಯವ್ಯದ ಬಗ್ಗೆ ಒಂದು ಪುಸ್ತವಕವನ್ನು ಬರೆದರು. ಇದು ಇಂಗ್ಲೀಷ್ ನಲ್ಲಿ, “ಕೆಮಿಸ್ಟ್ರಿ ಆಫ್ ಪರ್ಫ್ಯೂಮ್ ಅಂಡ್ ಡಿಸ್ಟೈಲೇಶನ್ಸ್” ಎಂಬ ಹೆಸರಿನಲ್ಲಿ ಲಭ್ಯವಿದೆ. ಸುಗಂಧ ತಯಾರಿಕೆಯ ಶತಮಾನಗಳ-ಹಳೆಯ ಸಂಪ್ರದಾಯವು ಮುಸ್ಲಿಂ ವಿಜ್ಞಾನಿಗಳು ಮತ್ತು ಅವರ ಶುದ್ಧೀಕರಣದ ವಿಧಾನಗಳಿಂದ ಸಾಧ್ಯವಾಯಿ. ಕಿಂಡಿಯವರ ಪುಸ್ತಕದಲ್ಲಿ ಸಸ್ಯಗಳು ಮತ್ತು ಹೂವುಗಳನ್ನು ಬಟ್ಟಿ ಇಳಿಸಿ ಸುಗಂಧದ್ರವ್ಯ ಮತ್ತು ಔಷಧಿಗಳನ್ನು ತಯಾರಿಸುವ ವಿಧಾನಗಳನ್ನು ವಿವರಿಸಲಾಗಿತ್ತು.

6.ವಿಶ್ವ ವಿದ್ಯಾನಿಲಯಗಳು

ಜ್ಞಾನದ ಅನ್ವೇಷಣೆ ಮುಸ್ಲಿಮರ ಹೃದಯಕ್ಕೆ ಹತ್ತಿರದಲ್ಲಿದೆ. ಕುರ್‌ಆನ್‍ನ ಜ್ಞಾನವನ್ನು ಸಂಪಾದಿಸುವುದು ಅತೀ ಅವಶ್ಯಕವೆಂದು ಮುಸ್ಲಿಮರಿಗೆ ಆಜ್ಞಾಪಿಸಲಾಗಿದೆ. ಆದ್ದರಿಂದ ಫಾತಿಮಾ ಅಲ್ ಫಿಹ್ರಿ ಎಂಬ ಮಹಿಳೆಯು ಮೊರಕ್ಕೋದ ಫೆಜ್ ಎಂಬಲ್ಲಿ ಮದರಸಾ ರೂಪದ ಒಂದು ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿದರು. ಈ ಸ್ಥಾಪನೆಯು ಅತೀ ಶೀಘ್ರದಲ್ಲೇ ಅತೀ ದೊಡ್ಡ ಧಾರ್ಮಿಕ ಶಿಕ್ಷಣ ಮತ್ತು ರಾಜಕೀಯ ಚರ್ಚೆಗಾಗಿ ಒಂದು ಸ್ಥಳವಾಗಿ ಅಭಿವೃದ್ಧಿ ಹೊಂದಿತು. ಕ್ರಮೇಣ ತನ್ನ ಶಿಕ್ಷಣವನ್ನು ಎಲ್ಲಾ ವಿಷಯಗಳಲ್ಲೂ, ವಿಶೇಷವಾಗಿ ನೈಸರ್ಗಿಕ ವಿಜ್ಞಾನಗಳಿಗೆ ವಿಸ್ತರಿಸಿತು. ಆದ್ದರಿಂದ ಇದು ಇತಿಹಾಸದಲ್ಲಿನ ಮೊದಲ ವಿಶ್ವವಿದ್ಯಾನಿಲಯ ಎಂದು ಪ್ರಸಿದ್ಧಿ ಪಡೆಯಿತು. ಫೆಜ್ನಲ್ಲಿನ “ಅಲ್-ಖರವಾಯಿನ್” ವಿಶ್ವ ವಿದ್ಯಾನಿಲಯ ಇವತ್ತಿಗೂ ಕಾರ್ಯಾಚರಿಸುತ್ತಿದೆ.

7.ಹಾರುವ ಯಂತ್ರ (ವಿಮಾನ)

ಸ್ಪೇನ್ ನ ಅಬ್ಬಾಸ್ ಇಬ್ನ್ ಫಿರ್ನಾಸ್ ಹಾರುವ ಯಂತ್ರವನ್ನು ನಿರ್ಮಿಸಲು ಮತ್ತು ವಾಸ್ತವವಾಗಿ ಹಾರಲು ನಿಜವಾದ ಪ್ರಯತ್ನವನ್ನು ಮಾಡಿದ ಮೊದಲ ವ್ಯಕ್ತಿ. 9 ನೆಯ ಶತಮಾನದಲ್ಲಿ ಅವರು ಪಕ್ಷಿ ವೇಷಭೂಷಣವನ್ನು ಹೋಲುವ ರೆಕ್ಕೆಯ ಉಪಕರಣವನ್ನು ವಿನ್ಯಾಸಗೊಳಿಸಿದರು. ಸ್ಪೇನ್ನ ಕಾರ್ಡೊಬ ಬಳಿ ತನ್ನ ಅತ್ಯಂತ ಪ್ರಸಿದ್ಧವಾದ ಪ್ರಯೋಗದಲ್ಲಿ, ಫಿರ್ನಾಸ್ ಕೆಲವು ಕ್ಷಣಗಳಿಗಾಗಿ ಮೇಲ್ಮುಖವಾಗಿ ಹಾರಿಹೋದರು. ಆದರೆ ಪಕ್ಷಿಗಳು ತಮ್ಮ ಕೊಕ್ಕಿನ ಸಹಾಯದಿಂದ ಇಳಿಯುತ್ತದೆ ಎಂಬುದನ್ನು ಅಬ್ಬಾಸ್ ಇಬ್ನ್ ಫಿರ್ನಾಸ್ ಗೆ ತಿಳಿದಿರಲಿಲ್ಲ. ಇದರಿಂದಾಗಿ ಅವರು ಅವೈಜ್ಞಾನಿಕವಾಗಿ ಕೆಳಗಿಳಿದು ಬೆನ್ನು ಮೂಳೆ ಮುರಿದು ಕೊಂಡರು.

8.ಶಸ್ತ್ರಚಿಕಿತ್ಸಾ ಉಪಕರಣಗಳು

ನಾವು 10 ನೆಯ ಶತಮಾನದಲ್ಲಿ ಪ್ರಯಾಣಿಸಿದರೆ, ಪಾಶ್ಚಾತ್ಯರಿಂದ “ಅಬುಲ್ಕಾಸಿಸ್” ಎಂದು ಕರೆಯಲ್ಪಡುವ ವ್ಯಕ್ತಿ ಶಸ್ತ್ರಚಿಕಿತ್ಸಾ ಉಪಕರಣಗಳ ಪಿತಾಮಹ. ಇವರ ಪೂರ್ಣ ಹೆಸರು “ಅಬುಲ್ ಖಾಸಿಮ್ ಖಲಾಫ್ ಇಬ್ನ್ ಅಲ್-ಅಬಾದ್ ಅಲ್-ಝಹ್ರಾವಿ”. ಇವರು ಬರೆದ “ಅಲ್-ತದ್ರಿಫ್” ಗ್ರಂಥವನ್ನು ಆ ಕಾಲದಲ್ಲಿ ಯುರೋಪಿಯನ್ನರು “ಮೆಡಿಕಲ್ ಎನ್ಸೈಕ್ಲೋಪೀಡಿಯ” ಎಂದು ಕರೆದರು. ಇದು ಸುಮಾರು ಇನ್ನೂರಕ್ಕೂ ಹೆಚ್ಚಿನ ಶಸ್ತ್ರಚಿಕಿತ್ಸಾ ಉಪಕರಣಗಳನ್ನು ಪರಿಚಯಿಸಿದ ಒಂದು ದಿಗ್ಭ್ರಮೆಗೊಳಿಸುವ ಮಾಹಿತಿಗಳನ್ನು ಹೊಂದಿತ್ತು. ಆ ಕಾಲದಲ್ಲಿ ಶಸ್ತ್ರ ಚಿಕಿತ್ಸಾ ಪದ್ಧತಿ ಇತ್ತಾದರೂ ಅದಕ್ಕಾಗಿ ಉಪರಕರಣಗಳನ್ನು ಬಳಸುವ ಇವರ ಸಂಶೋಧನೆ ಪ್ರಸಿದ್ದಿಯಾಯಿತು.

9.ಭೂಪಟ ಮತ್ತು ದಿಕ್ಸೂಚಿ

ಇವತ್ತು ಗೂಗಲ್ ಮ್ಯಾಪ್ ಮುಂತಾದ ಟೆಕ್ನಾಲಜಿಗಳು ಅಭಿವೃದ್ಧಿ ಹೊಂದಿದೆಯಾದರೂ, ಹಿಂದಿನ ಕಾಲದಲ್ಲಿ ಮಣ್ಣಿನ ಫಲಕಗಳ ಮೇಲೆ ಭೂಪಟದ ಚಿತ್ರವನ್ನು ಬರೆದು ಅದನ್ನು ಮಾರ್ಗ ಸೂಚಿಯಾಗಿ ಬಳಸುತ್ತಿದ್ದರು. 3,500 ವರ್ಷಗಳ ಹಿಂದಿನಿಂದಲೂ ಇದನ್ನು ಬಳಸಲಾಗುತ್ತಿತ್ತು. ತದನಂತರ ಪೇಪರ್ ಟೆಕ್ನಾಲಜಿ ಅಭಿವೃದ್ಧಿಯಾದ ನಂತರ ಪೇಪರ್ ಹಾಳೆಗಳಲ್ಲಿ ಇದನ್ನು ಬಳಸಲಾಗುತ್ತಿತ್ತು. ಆದರೆ ಎಲ್ಲಾ ಕಾಲದಲ್ಲೂ ಭೂಪಟ ಅಭಿವೃದ್ಧಿಯಲ್ಲಿ ಮುಖ್ಯ ಪಾತ್ರ ನಿರ್ವಹಿಸಿದವರು ಮುಸ್ಲಿಮರು ಎಂಬುದು ಗಮನಾರ್ಹ.
ಮುಸ್ಲಿಮರು ವ್ಯಾಪಾರಕ್ಕಾಗಿ ಮತ್ತು ಅವರ ಧಾರ್ಮಿಕ ಕಾರಣಗಳಿಗಾಗಿ ತಮ್ಮ ಮನೆಗಳನ್ನು ಬಿಡಲು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಅವರಿಗೆ ಜಗತ್ತಿನ ವಿವಿಧ ಪ್ರದೇಶಗಳ ಮಾರ್ಗವನ್ನು ಕಂಡುಹಿಡಿಯಲು ಪ್ರಾರಂಭಿಸಿದರು. ಇದಕ್ಕಾಗಿ ಭೂಪಟಗಳ ಬಳಕೆ ಮಾಡಿದರು ನಂತರ ಜಲಮಾರ್ಗಗಳ ಅನ್ವೇಷಣೆಗೆ ದಿಕ್ಸೂಚಿಯನ್ನು ಅಭಿವೃದ್ಧಿ ಪಡಿಸಿದರು.

10.ಅಲ್ಜೀಬ್ರಾ (ಬೀಜ ಗಣಿತ)

“ಅಲ್ಜೀಬ್ರಾ” ಎಂಬ ಪದವು ಪರ್ಷಿಯನ್ ಗಣಿತ ಶಾಸ್ತ್ರಜ್ಞ 9 ನೇ ಶತಮಾನದ ಪ್ರಸಿದ್ಧವಾದ “ಕಿಟಾಬ್ ಅಲ್-ಜಬ್ ವಾ ಲಾ-ಮುಗಾಬಲಾ” ಎಂಬ ಶೀರ್ಷಿಕೆಯಿಂದ ಬಂದಿದೆ, ಇದು ಸ್ಥೂಲವಾಗಿ “ದಿ ಬುಕ್ ಆಫ್ ರೀಸನಿಂಗ್ ಅಂಡ್ ಬ್ಯಾಲೆನ್ಸಿಂಗ್” ಎಂದು ಭಾಷಾಂತರಿಸುತ್ತದೆ. ಆಲ್-ಖ್ವಾರಿಜ್ಮಿ ಬೀಜಗಣಿತದ ಪ್ರಾರಂಭವನ್ನು ಪರಿಚಯಿಸುತ್ತಾನೆ. ಈ ಹೊಸ ಕಲ್ಪನೆಯು ಎಷ್ಟು ಮಹತ್ವದ್ದಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಮುಖ್ಯವಾಗಿದೆ. ವಾಸ್ತವವಾಗಿ, ಇದು ಗಣಿತಶಾಸ್ತ್ರದ ಗ್ರೀಕ್ ಪರಿಕಲ್ಪನೆಯಿಂದ ಒಂದು ಕ್ರಾಂತಿಕಾರಿ ಚಲನೆಯಾಗಿತ್ತು, ಇದು ಮೂಲಭೂತವಾಗಿ ಜ್ಯಾಮಿತಿಯನ್ನು ಆಧರಿಸಿದೆ. ಗಣಿತಜ್ಞ ಅಲ್-ಖ್ವಾರಿಜ್ಮಿಯು ಒಂದು ಸಂಖ್ಯೆಯನ್ನು ಅಧಿಕಾರಕ್ಕೆ ಏರಿಸುವ ಪರಿಕಲ್ಪನೆಯನ್ನು ಪರಿಚಯಿಸಿದ ಮೊದಲ ವ್ಯಕ್ತಿ.

ಸಂಗ್ರಹ

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading
Advertisement

Title

ದಿನದ ಸುದ್ದಿ2 days ago

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ...

ದಿನದ ಸುದ್ದಿ3 days ago

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು...

ದಿನದ ಸುದ್ದಿ3 days ago

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ....

ದಿನದ ಸುದ್ದಿ3 days ago

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ. http://Visit : www.suddidina.com ಮೇಷ:...

ದಿನದ ಸುದ್ದಿ3 days ago

ದೇಶದಲ್ಲಿ ಏಕರೂಪ ರಾಷ್ಟ್ರೀಕೃತ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು: ಡಾ.ಮೂಡ್ನಾಕೂಡು ಚಿನ್ನಸ್ವಾಮಿ

ಕೆಪಿಸಿಎಲ್ ಹಾಗೂ ಕೆಪಿಸಿಎಲ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನೌಕರರ ಸಂಘದಿಂದ ಅಂಬೇಡ್ಕರ್ ಜಯಂತಿ ಆಚರಣೆ ಎಸ್ಎಸ್ಎಲ್ ಸಿ, ಪಿಯುಸಿಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ...

ದಿನದ ಸುದ್ದಿ3 days ago

5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!

ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ...

ದಿನದ ಸುದ್ದಿ3 days ago

ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್‌ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!

ಸುದ್ದಿದಿನ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಬಿಎಂಟಿಸಿ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಬಸ್‌ಗಾಗಿ ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ...

ದಿನದ ಸುದ್ದಿ3 days ago

ಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ

ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಎದುರಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಮತ್ತು ಪರಿಹಾರ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಕುರಿತು ವಿಧಾನಸೌಧದಲ್ಲಿ ಇಂದು ಸಚಿವ ಸಂಪುಟ ಉಪಸಮಿತಿ...

ನಿವೃತ್ತ ನೌಕರರ ಸಂಘದಿಂದ ತೀಕ್ಷ್ಣ ಅಂಧ ಮಕ್ಕಳ ಶಾಲೆಗೆ ಸಂಗೀತ ವಾದ್ಯಗಳ ಕೊಡುಗೆ; ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವುದು ಸಮಾಜದ ಕರ್ತವ್ಯ ನಿವೃತ್ತ ನೌಕರರ ಸಂಘದಿಂದ ತೀಕ್ಷ್ಣ ಅಂಧ ಮಕ್ಕಳ ಶಾಲೆಗೆ ಸಂಗೀತ ವಾದ್ಯಗಳ ಕೊಡುಗೆ; ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವುದು ಸಮಾಜದ ಕರ್ತವ್ಯ
ದಿನದ ಸುದ್ದಿ3 days ago

ವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್

ಸುದ್ದಿದಿನ,ಚಿತ್ರದುರ್ಗ: ದೈವಿಕ ಕೊರತೆ ಹಾಗೂ ವಿಕಲಚೇತನ ಹೊಂದಿರುವ ಮಕ್ಕಳು ದೇವರ ಮಕ್ಕಳೆಂದೇ ಪರಿಗಣಿಸಲ್ಪಡುತ್ತಾರೆ. ಅಂತಹ ಮಕ್ಕಳಿಗೆ ಪ್ರೀತಿ, ವಾತ್ಸಲ್ಯ ನೀಡುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ತುಂಬಿ, ಸ್ವಾವಲಂಬಿ...

ದಿನದ ಸುದ್ದಿ3 days ago

ಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ

ಸುದ್ದಿದಿನ,ಚಿತ್ರದುರ್ಗ: ಜಿಲ್ಲೆಯ ಬಹುದಿನಗಳ ನೀರಾವರಿ ಕನಸಾಗಿರುವ ಭದ್ರಾ ಮೇಲ್ದಂಡೆ ಯೋಜನೆಯ ನೀರು ಚಿತ್ರದುರ್ಗ ಜಿಲ್ಲೆಗೆ ಹರಿದುಬಂದಿರುವುದು ರೈತರಲ್ಲಿ ಹೊಸ ಭರವಸೆ ಮೂಡಿಸಿದೆ. ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ನೀರಾವರಿ...

Trending