Connect with us

ಲೈಫ್ ಸ್ಟೈಲ್

EyeballTattoo, ScrelalTattoo ಎಲ್ಲಾ ಓಕೆ,  ಕಣ್ಣು ಗುಡ್ಡೆಗೂ ಟಾಟೂ ಬೇಕೇ..!?

Published

on

  • ಚಿತ್ರಶ್ರೀ ಹರ್ಷ

ದಿನೇ ದಿನೇ ಯುವಪೀಳಿಗೆ ಯಲ್ಲಿ ಟಾಟು ಕ್ರೆಜ್ ಹೆಚ್ಚುತಿರುವುದು ಹೊಸದೆನಲ್ಲ. ಈಗಂತೂ ಯುವಕರ ಮೈಮೇಲೆ ಒಂದೆರಡಾದರೂ ಟಾಟು ಇರುವುದು ಮಾಮೂಲಾಗಿ ಬಿಟ್ಟಿದೆ. 24ರ ಹರೆಯದ  ಆಸ್ಟ್ರೇಲಿಯಾ ದ ಅಂಬುರ್ ಲುಕ್ #AmburLuke , ಎಂಬ ಈಕೆ ,  ಸದ್ಯ ಸೋಶಿಯಲ್ ಮೀದಿಯದಲ್ಲಿ ಸಿಕ್ಕಾಪಟ್ಟೆ ಚರ್ಚೆಗೆ ಗ್ರಾಸವಗುಥಿದ್ದಾರೆ. ವಿಶಿಷ್ಟತೆ ಇರುವುದು ಈಕೆಯ ಟಾಟೂ ಕ್ರೆಜ್ ನಲ್ಲೇ.  ತನ್ನ 14 ನೇ ವಯಸ್ಸಿಗೇ,ಟಾಟೂ ಗೀಳು  ಮೈ ಗಂಟಿಸಿಕೊಂಡಿದ ಈಕೆ ಮಾಡಿದ್ದು ಮಾತ್ರ ಯಾರೂ ಊಹಿಸಲಾಗದ ಕೆಲಸ.

https://www.instagram.com/p/B7s8cV-IVOx/?utm_source=ig_web_copy_link

ಕಳೆದ ಒಂದು ದಶಕದಲ್ಲಿ ತನ್ನ ಇಡೀ ದೇಹವನ್ನ ಟಾಟೂವಿನಿಂದ ಮುಚ್ಚಿರುವ ಈಕೆ , ನವೊಂಬರ್ 2019 ರಲ್ಲಿ ಮಥೊಂದು (ದುಸ್ಸಾಹಸಕ್ಕೆ ! )ದೊಡ್ಡ ಸಾಹಸಕ್ಕೆ ಕೈ ಹಾಕಿಯೇಬಿಟ್ಟಳು. ಇದನ್ನ ಸಾಹಸ ಅನ್ನಬೆಕೊ , ಹುಚ್ಛುತನ ಅನ್ನಬೇಕೋ ತಿಳಿಯುತ್ತಿಲ್ಲ. ಕೈ,ಕಾಲು, ಸೊಂಟ, ಕತ್ತು,ಬೆನ್ನು, ಒಕ್ಕಳು , ಬೆರಳುಗಳ ಮೇಲೆ ಟಾಟೂ ಹಾಕಿಸಿಕೊಳ್ಳುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಮೈ ತುಂಬಾ ಬಣ್ಣದ ಟಾಟೂ ಗೀಚಿಸಿಕೊಳ್ಳುವ ಖಯಾಲಿಯನ್ನ ಬೇಕಾದರೂ ಫ್ಯಾಷನ್ ಎಂದು ಒಪ್ಪಬಹುದು. ಆದರೆ, “ಅತಿರೇಕಕ್ಕೆ ಮತಿ ಕೇಡು ” ಎಂಬ ನಾನ್ನುಡಿ ನೆನಪಿಸುವ ಹಾಗಿದೆ ಈಕೆಯ ಇತ್ತೀಚಿನ ಟಾಟೂ ಕ್ರೇಜ್!

https://www.instagram.com/p/B7e1MD_D0Jk/?utm_source=ig_web_copy_link

ನವೆಂಬರ್ 2019ರಲ್ಲಿ ಅಂಬರ್ ತನ್ನ ಕಣ್ಣು ಗುಡ್ಡೆಯ ಕಲರ್ ಟಾಟೂ ರಚಿಸುವ (ದು) ಸಾಹಸ ಮಾಡಿಯೇ ಬಿಟ್ಟಳು. ಕಣ್ಣು ಗುಡ್ಡೆ ಗೆ ನೀಲಿ ( turquoise) ಬಣ್ಣ ತುಂಬಿಸಿದ್ದು ತನ್ನನ್ನು ತಾನು #BlueEyeWhiteDragon “ಬ್ಲೂ ಐ ವೈಟ್ ಡ್ರಾಗನ್” ಎಂದು ತನ್ನ ಇಂಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾಳೆ ! ತನ್ನ ಇಡೀ ದೇಹವನ್ನು  200 ಟಾಟೂ ವಿನಿಂದ ಮುಚ್ಚಿ ಕೊಂಡಿರುವ ಈ ಹುಡುಗಿ,  #bodymodification ಹುಚ್ಚಿಗೆ ಬಿದ್ದಿದ್ದು, ಸೀಳು ನಾಲಿಗೆ,  ಕಿವಿ ತಿರುವಿಕೆ , ಮುಖದ ಟಾಟೂ, ಡರ್ಮಲ್ ಜಿವೆಲರಿ ಟ್ರೆಂಡ್ ಗಳನ್ನು ಮಾಡಿಸಿಕೊಂಡಿದ್ದಾಳೆ. ಇದ್ದೆಲ್ಲಕ್ಕೂ ಬರೋಬರ್ರಿ $26000 ಖರ್ಚು ಮಾಡಿದ್ಲಾಳೆ ಏ ಹುಡುಗಿ!

https://www.instagram.com/p/B6m7e2EDJfH/?utm_source=ig_web_copy_link

ಕಣ್ಣು ಗುಡ್ಡೆಯ ಬಿಳಿಯ ಭಾಗವನ್ನು ಟಾಟೂ ಇಂಕ್ ನಿಂದ ಕಲರ್ ಮಾಡುವ ಈ ಟ್ರೆಂಡ್ ಅಷ್ಟೇ ಅಪಾರಕಾರಿಯೂ ಹೌದು ! 40 ನಿಮಿಷಗಳ ಕಾಲ ನಡೆದ ಈ ಟಾಟೂ ಕಾಲರಿಂಗ್ ಸರಿ ಹೋಗದ ಕಾರಣ ಈಕೆ ಮೂರು ತಿಂಗಳು ಗಳ ಕಾಲ ಕಣ್ಣು ಕಳೆದು ಕೊಂಡು ಕುರುಡತ್ವಕ್ಕೆ ಕಾಲಿಡಬೇಕಾಯಿತು ! ಈಕೆ ಹೇಳಿದ್ದೇನೆಂದರೆ

” ನನಗೆ ಟಾಟೂ ರಚಿಸಿದಾತ ನಾಲ್ಕು ಬಾರಿ ನನ್ನ ಕಣ್ಣು ಗುಡ್ಡೆಯ ಪದರಕ್ಕೆ ಇಂಕ್ ಇಂಜೆಕ್ಟ್ ಮಾಡಿದ, ಇದರ ನೋವು ಒಂದೇ ಬಾರಿಗೆ ಒಡೆದ ಗಾಜನ್ನು ನನ್ನ ಕಣ್ಣಿಗೆ ತರುಕಿದಾಗ ಆಗುವಷ್ಟು ಉರಿ, ನೋವು ಉಂಟಾಯಿತು.  ಆತ ತುಂಬಾ ಜೋರಾಗಿ ನನ್ನ ಗುಡ್ಡೆಗೆ ಇಂಜೆಕ್ಟ್ ಮಾಡಿದ್ದರಿಂದ ನಾನು ಮೂರು ತಿಂಗಳು ಕುರುಡತ್ವಕ್ಕೆ ಕಾಲಿಡಬೇಕಾಯಿತು . ಆದರೂ ನಾನು ಟಾಟೂ ರಚಿಸಿಕೊಂಡಿದ್ದಕ್ಕೆ ಯಾವುದೇ ಪಶ್ಚಾತ್ತಾಪ ಇಲ್ಲ. ಇದು ನನ್ನ ಜೀವನದ ದೊಡ್ಡ ಅನುಭವ. ನಾನು ಇದನ್ನು ಸಂಭ್ರಮಿಸುತ್ತಿದ್ದೇನೆ ” ಎಂದು ನುಡಿದಿದ್ದಾರೆ 24 ರ ಹರೆಯದ  ಟಾಟೂ ಪ್ರಿಯೆ  ಅಂಬೂರ್ .

|BlueEyeWhiteDragon ಅಂಬೂರ್ ಲೂಕ್

ScrelalTattoo ಕಣ್ಣು ಗುಡ್ಡೆಯ ಟಾಟೂ!

ಕಣ್ಣಲ್ಲಿ,  ಕಣ್ಣು ಗುಡ್ಡೆಯ ಬಿಳಿಯ ಭಾಗವನ್ನು ಟಾಟೂ ಕಲರ್ ಮೂಲಕ ಬದಲಾಯಿಸುವ ಪರಿ ಹುಟ್ಟಿಕೊಂಡಿದ್ದು , ಸಿರಿಂಜ್ ನಲ್ಲಿ ಬಣ್ಣ ತುಂಬಿ,  ಕಣ್ಣು ಗುಡ್ಡೆಯ ಮ್ಲ್ಪದರಕ್ಕೆ ಇಂಜೆಕ್ಟ್ ಮಾಡಲಾಗುತ್ತದೆ ! ಇದರಿಂದ ಬಿಳಿಯ ಕಣ್ಣು ಗುಡ್ಡೆಯ ಭಾಗಕ್ಕೆ ನಿಮಗಿಷ್ಟವಾದ ಬಣ್ಣ ತುಂಬ ಬಹುದಾಗಿದೆ. ಪಾಶ್ಚಾತ್ಯ ರಾಷ್ಟ್ರ ಗಳಲ್ಲಿ ಈ ರೀತಿಯ ಪ್ರಯೋಗಗಳಿಗೇನೂ ಕಡಿಮೆ ಇಲ್ಲ.  ಕೆಂಪು,  ನೀಲಿ,ಕಪ್ಪು, ಹಸಿರು, ನೇರಳೇ ಬಣ್ಣದ ಕಣ್ಣು ಗುಡ್ಡೆಯ ಟಾಟೂ ಮಾಡಿಸಿಕೊಂಡವರು ಬಹಳಷ್ಟು ಮಂದಿ ಇದ್ದಾರೆ.

https://www.instagram.com/p/B6QxNhLBFsi/?utm_source=ig_web_copy_link

#EyeballTattoo ಕಣ್ಣು ಗುಡ್ಡೆಯ  ಒಳಗೆ ಟಾಟೂ ಡಿಸೈನಿಂಗ್ ಕ್ರೇಜ್ !

ಇತ್ತೀಚಿನ ಆಧುನಿಕ ಫ್ಯಾಷನ್ ಜಗತ್ತಿನಲ್ಲಿ ಚಿತ್ರ ವಿಚಿತ್ರ ಫ್ಯಾಷನ್ ನದ್ದೇ ಪರ್ವ ಕಾಲ.ಕಣ್ಣು ಗುಡ್ಡೆಯ ಬಿಳಿಯ ಭಾಗದಲ್ಲಿ ಸ್ಟಾರ್,  ಹಾರ್ಟ್,  ಲವ್ , ಹೆಸರು, ಕರೆಸಿಕೊಳ್ಳುವ ಟ್ರೆಂಡ್ ಒಂದು ಶುರುವಾಗಿದೆ.  ಬಹಳ ಭಯಾನಕ ಹಾಗೂ ವೈದ್ಯಕೀಯ ಲೋಕದಲ್ಲಿ ದೊಡ್ಡ ಪ್ರಮಾಣದಲ್ಲಿ ಚರ್ಚೆ ಗೆ ಸಾಕ್ಷಿ ಯಾಗಿದೆ.

ಕಣ್ಣು ದೇಹದಲ್ಲಿ ಬಹಳ ಸೂಕ್ಷ್ಮವಾದ ಭಾಗ. ಹೊರ ಜಗತ್ತಿನ ಬಣ್ಣ ವನ್ನು ನಾವು ನೋಡುವುದೇ ಕಣ್ಣುಗಳಿಂದ . ಕಣ್ಣು ಗುಡ್ಡೆಯ ಒಳಗೆ ಟಾಟೂ ಮಾಡಿಸುವುದು , ಟಾಟೂ ಇಂಕ್  ಇಂಜೆಕ್ಟ್ ಮಾಡುವುದು ಅದೆಷ್ಟರಮಟ್ಟಿಗೆ  ವೈದ್ಯಕೀಯ ವಾಗಿ
ಸರಿ ಎಂಬ ಚರ್ಚೆ ಗಳು ನಡೆಯುತ್ತದೆ ಇದೆ. ಇದರ ನಡುವೆಯೇ #EyeballTattoo ಕ್ರೇಜ್ ಜನರಲ್ಲಿ ಹೆಚ್ಚುತ್ತಲೇ ಇದೆ!

https://www.instagram.com/p/Bz-lopNAqUh/?utm_source=ig_web_copy_link

ಭಾರತಕ್ಕೂ ಕಾಲಿಟ್ಟ ScrelalTattoo

https://www.instagram.com/p/BZpWPgQHmwY/?utm_source=ig_web_copy_link

ದಿಲ್ಲಿ ಯ ಟಾಟೂ ಆರ್ಟಿಸ್ಟ್ ,  ಕರಣ್ ಕಿಂಗ್ ,ತನ್ನ ಕಣ್ಣು ಗುಡ್ಡೆಗೆ ಕಪ್ಪು ಇಂಕ್ ಇಂಜೆಕ್ಟ್ ಮಾಡಿಸಿಕೊಂಡು 2017 ರಲ್ಲಿ ಭಾರೀ ಚರ್ಚೆ ಗೆ ಗ್ರಾಸವಾಗಿದ್ದರು .

ScrelalTattooFailures ವೈಫಲ್ಯಗಳನ್ನು ಕಂಡುಕೊಳ್ಳುವ ಕಣ್ಣು ಗುಡ್ಡೆಯ ಟಾಟೂ ಕ್ರೇಜ್!

https://www.instagram.com/p/BO2xlPlF_d1/?utm_source=ig_web_copy_link

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಹೆಸರಲ್ಲೇ ಕಲೆ ಬೆರತಿರುವವಳು ನಾನು ಚಿತ್ರಶ್ರೀ ಹರ್ಷ. ವೃತ್ತಿಯಲ್ಲಿ ಉಪನ್ಯಾಸಕಿ. ಹುಟ್ಟಿದ್ದು ಬೆಳೆದದ್ದು ಬೆಂಗಳೂರಿನಲ್ಲಿ. ಬೆಂಗಳೂರು ವಿಶ್ವವಿದ್ಯಾಲಯದ ದ M.A Economics ಪದವೀಧರೆ. M.phil ಕೂಡ ಮುಗಿದಿದ್ದು ಬಿ.ಬಿ.ಎಂ.ಪಿ ಕಾಲೇಜಿನಲ್ಲಿ ಕಳೆದ ಹತ್ತು ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಫ್ಯಾಷನ್ ಸೆಳೆತ ಚಿಕ್ಕಂದಿನಿಂದಲೂ ಇದ್ದೇ ಇತ್ತು. ಅದಕ್ಕೆ ತಕ್ಕಂತೆ ಫ್ಯಾಷನ್ ಲೋಕವೂ ಕೈ ಬೀಸಿ ಕರೆಯುತ್ತಿತ್ತು. ಬಾಲ್ಯದ ಆಸೆ ಈಗ ಈಡೇರಿದೆ. ಫ್ಯಾಷನ್ ಲೋಕದಲ್ಲಿ "ನೈಲ್ ಆರ್ಟ್ ಸ್ಪೆಷಲಿಸ್ಟ" ಎಂಬ ಬಿರದು ನನ್ನದಾಗಿದೆ. ಹಲವಾರು ಖಾಸಗಿ ವಾಹಿನಿಗಳಲ್ಲಿ ಕಾರ್ಯಕ್ರಮ ನಡೆಸಿಕೊಟ್ಟಿದ್ದು, ಸಂಯುಕ್ತ ಕರ್ನಾಟಕ ಹಾಗೂ ಕರ್ಮವೀರ ಪತ್ರಿಕೆ ಗಳಿಗೆ ಫ್ಯಾಷನ್ ಲೇಖನ ಬರೆಯುತ್ತಿದ್ದೇನೆ. ಬ್ಯೂಟಿ ಟ್ರೆಂಡ್ ಹಾಗೂ ನೈಲ್ ಆರ್ಟ್ ನಲ್ಲಿ ವಿನೂತನ ಹಾಗೂ ಟ್ರೆಂಡೀ ಲುಕ್ ಸೃಷ್ಟಿಸುವುದು ನನ್ನ ಹವ್ಯಾಸ. ಹಲವಾರು ಕವನಗಳನ್ನು ಬರೆದಿದ್ದು, ಪ್ರತಿಷ್ಠಿತ ದಿನಪತ್ರಿಕೆ ಗಳಲ್ಲಿ ಪ್ರಕಟವಾಗಿದೆ.

ದಿನದ ಸುದ್ದಿ

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.

23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.

ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

Published

on

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್‍ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.

ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್‍, ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಒಂದು ಮೊಬೈಲ್‍ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್‍ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್

Published

on

ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.

ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.

ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.

ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending