Connect with us

ದಿನದ ಸುದ್ದಿ

CAA ಗೆ ಮುಸ್ಲಿಂ ಬಣ್ಣ ಯಾಕೆ..?

Published

on

 

CAA : Citizenship Amendment Act
Provided that any person belonging to Hindu , Sikh , Buddhist , Jain , Parsi and Christian community from Afghanistan , Bangladesh or Pakistan who entered into India on or before 31at December 2014 and who has been exempted by the central govt by or under clause (c) of sub section (2) of section 3 of the Passport (entry into India) Act 1920 or from the application of the provisions of the Foriegners Act 1946 or any rule or order made thereunder , shall not be treated as illegal migrants for the purpose of this Act.

ಸಿಎಎ: ಪೌರತ್ವ ತಿದ್ದುಪಡಿ ಕಾಯ್ದೆ

ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಥವಾ ಪಾಕಿಸ್ತಾನದ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ ಯಾವುದೇ ವ್ಯಕ್ತಿ 2014 ರ ಡಿಸೆಂಬರ್ 31 ರಂದು ಅಥವಾ ಅದಕ್ಕೂ ಮೊದಲು ಭಾರತಕ್ಕೆ ಪ್ರವೇಶಿಸಿದ ಮತ್ತು ಷರತ್ತು (ಸಿ) ಯ ಮೂಲಕ ಅಥವಾ ಕೇಂದ್ರ ಸರ್ಕಾರದಿಂದ ವಿನಾಯಿತಿ ಪಡೆದವರು. ಪಾಸ್‌ಪೋರ್ಟ್ ಕಾಯ್ದೆ 1920ರ ನಿಯಮ (c) ಉಪ ನಿಯಮ(2) ರ ಪ್ರಕಾರ ಕೇಂದ್ರ ಸರ್ಕಾರದ ವಿನಾಯಿತಿ ಪಡೆದವರು ಅಥವಾ ವಿದೇಶಿಗರ ಕಾಯ್ದೆ 1946 ಅಥವಾ ಇತರೆ ಯಾವುದೇ ಕಾನೂನು ಅಥವಾ ನಿಯಮಾವಳಿಗಳ ಪ್ರಕಾರ ಅಕ್ರಮ ವಲಸಿಗರು ಎಂದು ಪರಿಣಗಣಿಸಲಾಗುವುದಿಲ್ಲ ಎಂಬುದು ಈ ಕಾಯ್ದೆ.

ಸರಳವಾಗಿ

ಅಕ್ರಮವನ್ನು ಸಕ್ರಮ ಮಾಡುವ ಖಾಯ್ದೆ, ಇವರುಗಳು ಅಂದ್ರೆ ಅಕ್ರಮ ವಲಸಿಗರು ದೇಶದ ಒಳಗೆ ಹೇಗೆ ಬಂದ್ರು ಅಂತ ಪ್ರಶ್ನೆ ಮಾಡದೇ ಬಂದವರಿಗೆಲ್ಲ (ಮುಸ್ಲಿಮರನ್ನು ಹೊರತು ಪಡಿಸಿ) ಪೌರತ್ವ ಕೊಟ್ಟು ಇಲ್ಲಿನ ಪ್ರಜೆಗಳು ಅಂತ ಅಧಿಕೃತವಾಗಿ ಸೀಲ್ ಹೊಡೆಯೋದು.

ಪ್ರಶ್ನೆಗಳು

  1. ಎಲ್ಲಿಂದಲೋ ಬಂದ ಅಕ್ರಮ ವಲಸಿಗರಿಗೆ ಯಾವ ಆಧಾರದ ಮೇಲೆ ಪೌರತ್ವ ಕೊಡ್ತೀರಿ?
  2. ಅವರು ದೇಶದ ಗಡಿ ದಾಟಿ ಒಳಗೆ ಪ್ರವೇಶಿಸಲು ಸಾಧ್ಯವಾಗಿದ್ದು ಹೇಗೆ? ಇದರ ವಿಚಾರಣೆ ಕೈಬಿಟ್ಟರೆ ನುಸುಳುಕೋರರಿಗೆ ನೆರವಾದವರು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಅವಕಾಶ ನೀಡಿದಂತಾಗುತ್ತದೆ.
  3. ಅವರಿಗೆ ಇರೋದಕ್ಕೆ ಜಾಗ ಎಲ್ಲಿ ಮಾಡಿ ಕೊಡ್ತೀರಿ?
  4. ಉದ್ಯೋಗ , ಆಹಾರ , ಮೀಸಲಾತಿ , ಸರ್ಕಾರಿ ಸೌಲಭ್ಯಗಳು ಎಲ್ಲವನ್ನೂ ನಾವುಗಳು ಅವರುಗಳ ಜೊತೆ ಹಂಚಿಕೊಳ್ಳಬೇಕು (ಮೂಲ ನಿವಾಸಿಗಳಿಗೆ ಸರಿಯಾಗಿ ತಲುಪದ ಇವುಗಳನ್ನ ಎಲ್ಲಿಂದಲೋ ಬಂದ ವಲಸಿಗರ ಜೊತೆ ಹೇಗೆ ಹಂಚಿಕೊಳ್ಳೋದು?
  5. ಎಲ್ಲ ವಲಸಿಗರನ್ನು ಸರಿಯಾದ ಆಧಾರವಿಲ್ಲದೆ ಅವರಿಗೆ ಪೌರತ್ವ ಕೊಟ್ಟು ಒಳಗೆ ಬಿಟ್ಟುಕೊಂಡರೆ ಆಂತರಿಕ ಭದ್ರತೆಗೆ ಚ್ಯುತಿ ಬರುವುದಿಲ್ಲವೇ?
  6. ರಾಜ್ಯಗಳ ಲೆಕ್ಕಾಚಾರದಲ್ಲಿ ನನ್ನ ರಾಜ್ಯ ಅಂದರೆ ಕರ್ನಾಟಕದಲ್ಲಿ ಈಗಾಗಲೇ ಪರ ಭಾಷಿಕರ ನೆರೆ ರಾಜ್ಯದವರ ವಲಸೆಯಿಂದ ಇಲ್ಲಿನ ಕನ್ನಡಿಗರು ಉದ್ಯೋಗದ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ , ನೆರೆ ರಾಜ್ಯದ ವಲಸೆಯನ್ನು ಸಹಿಸದ ನಾವು ನೆರೆ ದೇಶದ ವಲಸಿಗರನ್ನು ಸಹಿಸುವುದಾದರು ಹೇಗೆ ?
  7. ಇದಿಷ್ಟು ನಮ್ಮ CAA ಹೋರಾಟಕ್ಕೆ ನಾವು ಬಳಸಬೇಕಿರುವ ನಿಜವಾದ ಕಾರಣಗಳು ಆದರೆ ವಾಸ್ತವದಲ್ಲಿ ಸದ್ಯಕ್ಕೆ ನಡೆಯುತ್ತಿರುವ ಹೋರಾಟ ಮುಸ್ಲಿಂ ಸಮುದಾಯವನ್ನು ಮುಂದಿಟ್ಟುಕೊಂಡು. ಅಕ್ರಮ ವಲಸಿಗರನ್ನು ಸಕ್ರಮ ಮಾಡೋದು ದೇಶದ ಇಂದಿನ ಆರ್ಥಿಕ ಪರಿಸ್ಥಿತಿಯಲ್ಲಿ ಸರಿ ಅಲ್ಲ , ದೇಶದ ಎಲ್ಲ ಸಮುದಾಯ ಧರ್ಮ ಒಟ್ಟಾರೆಯಾಗಿ ಭಾರತೀಯ ಮೂಲನಿವಾಸಿ ಪ್ರಜೆಗಳು ಹೋರಾಡಬೇಕಿದೆ, ಆದರೆ ಈ ಹೋರಾಟಕ್ಕೆ “ಮುಸ್ಲಿಂ” ಅಂತ ನೇಮ್ ಬೋರ್ಡ್ ಹಾಕಿ ದಾರಿ ತಪ್ಪಿಸಿದ್ದು ಯಾರು ??
  8. ಕೇವಲ ಮುಸ್ಲಿಂ ಸಮುದಾಯವನ್ನು ಮುಂದಿಟ್ಟುಕೊಂಡು ಮಾಡುತ್ತಿರುವ ಹೋರಾಟದ ಹಿಂದಿನ ಉದ್ದೇಶ ಏನು ಹಾಗಾದ್ರೆ ?

ಬಿಂದು ಗೌಡ
ಕೆಪಿಸಿಸಿ ಸಾಮಾಜಿಕ ಜಾಲತಾಣ
ರಾಜ್ಯ ಕಾರ್ಯದರ್ಶಿ

ಸುದ್ದಿದಿನ‌.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ

Published

on

ಸುದ್ದಿದಿನಡೆಸ್ಕ್:ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ನಾಳೆ ಮತ್ತು ಇದೇ 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳು ತೆರೆದಿರಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗಬಾರದು ಹಾಗೂ ಆನ್‌ಲೈನ್ ಪೇಮೆಂಟ್ ಬಳಸದವರ ಅನಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಸೆಪ್ಟೆಂಬರ್ 1ರಿಂದಲೇ ಈ ನಿಯಮ ಜಾರಿಯಾಗಿದೆ ಎಂದು ಹೇಳಿದೆ.

ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂಪಾಯಿ ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ಗೃಹ ಜ್ಯೋತಿಯೋಜನೆ ಅಡಿ ಶೂನ್ಯ ಬಿಲ್ ಪಡೆಯುತ್ತಿರುವ ಗ್ರಾಹಕರ ಹಿಂಬಾಕಿ ಶೂನ್ಯವಿದ್ದಲ್ಲಿ ಈ ಬಗ್ಗೆ ಚಿಂತಿಸಬೇಕಿಲ್ಲ ಎಂದು ಪ್ರಕಟಣೆ ಸ್ಪಷ್ಟಪಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ

Published

on

ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ ತೆಗೆದುಕೊಳ್ಳಲು ಸೆಪ್ಟೆಂಬರ್ 17ಕ್ಕೆ ಸಂಪುಟ ಸಭೆ ನಡೆಯಲಿದೆ.

ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಬಗ್ಗೆ ವಿಶೇಷ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ಈ ಹಿಂದೆ 2014ರ ನವೆಂಬರ್ 28ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ

Published

on

ಸುದ್ದಿದಿನಡೆಸ್ಕ್:ಇಂದು ಗಣೇಶ ಚತುರ್ಥಿ, ದೇಶ ಸೇರಿ ನಾಡಿನದ್ಯಂತ ಹಿಂದೂ ಸಂಪ್ರದಾಯದಲ್ಲಿ ನಾಡಿನ ಜನತೆ ತಮ್ಮ ಒಳಿತಿಗಾಗಿ, ಜ್ಞಾನ ಸಮೃದ್ಧಿಗಾಗಿ ಶಿವನ ಪುತ್ರ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ ಅತ್ಯಂತ ಶ್ರದ್ದಾ ಭಕ್ತಿಯಿಂದ ಈ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ ಅದರಂತೆ ಬೆಂಗಳೂರು ಜನತೆ ಮನೆ ಮನೆಗಳಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶನ ಮೂರ್ತಿಗಳನ್ನು ಜಲ ಮೂಲಗಳಲ್ಲಿ ವಿಸರ್ಜಿಸಲು ಬೆಂಗಳೂರು ಮಹಾ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಇನ್ನೂ ಗಣೇಶ ಚತುರ್ಥಿ ವಿಶೇಷವಾಗಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತ್ತೆ ಅನೇಕ ಸಚಿವರು ಹಾಗೂ ಗಣ್ಯರು ಶುಭ ಹಾರೈಸಿದ್ದಾರೆ.

ಗಣೇಶ ಹಬ್ಬದ ಆಚರಣೆಯ ಸಂದರ್ಭದಲ್ಲಿ ಮದ್ಯಪಾನಾಸಕ್ತರು ಗಲಭೆಮಾಡುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ನಿಯಮಗಳಡಿ ಇಂದಿನಿಂದ ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಇದೇ 9 ಮತ್ತು ಸೆಪ್ಟೆಂಬರ್ 11 ರಂದು ಮಧ್ಯಾಹ್ನ 2 ರಿಂದ ಮದ್ಯರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ನೈಸರ್ಗಿಕವಾಗಿ ತಯಾರಿಸಿದ ಮಣ್ಣಿನ ಗಣೇಶನ ವಿಗ್ರಹಗಳನ್ನು ಮಾತ್ರ ಬಳಸುವ ಮೂಲಕ ಕೆರೆ, ನದಿ ಮೂಲಗಳು ಕಲುಷಿತಗೊಳಿಸದಂತೆ ಕಾಪಾಡುವುದು ನಮ್ಮ ಕರ್ತವ್ಯ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending