Connect with us

ದಿನದ ಸುದ್ದಿ

ಶಿಕಾರಿಪುರದಲ್ಲಿ 1100ಕೋಟಿ ರೂ. ಮೊತ್ತದ ಏತ ನೀರಾವರಿ ಯೋಜನೆಗಳಿಗೆ ಮುಖ್ಯಮಂತ್ರಿ ಚಾಲನೆ

Published

on

ಸುದ್ದಿದಿನ,ಶಿಕಾರಿಪುರ : ರಾಜ್ಯದಲ್ಲಿ ಮುಂದಿನ 3 ವರ್ಷಗಳಲ್ಲಿ ಏತ ನೀರಾವರಿ ಮೂಲಕ ರಾಜ್ಯದ ಎಲ್ಲಾ ಕೆರೆಗಳನ್ನು ತುಂಬಿಸುವ ನೀರಾವರಿ ಯೋಜನೆಗಳನ್ನು ಅನುಷ್ಟಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.

ಅವರು ಸೋಮವಾರ ಶಿಕಾರಿಪುರದಲ್ಲಿ 1100ಕೋಟಿ ರೂ. ಮೊತ್ತದ ಏತ ನೀರಾವರಿ ಯೋಜನೆ ಸೇರಿದಂತೆ ಒಟ್ಟು 1277 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.

ನದಿಯ ನೀರನ್ನು ಏತ ನೀರಾವರಿ ಮೂಲಕ ಮೇಲೆತ್ತಿ, ಕೆರೆಗಳ ಮೂಲಕ ರೈತರ ಹೊಲಗಳನ್ನು ತುಂಬಿಸಲಾಗುವುದು. ಆವರ್ತ ನಿಧಿಯನ್ನು ತೆಗೆದಿರಿಸಿ, ರೈತರ ಉತ್ಪನ್ನಗಳಿಗೆ ಉತ್ತಮ ಬೆಂಬಲ ಬೆಲೆ ಒದಗಿಸಲಾಗುವುದು ಎಂದರು.

ಪುರದಕೆರೆ ಸಮೀಪ ತುಂಗಭದ್ರಾ ನದಿಯಿಂದ ಏತ ನೀರಾವರಿ ಮೂಲಕ ಶಿಕಾರಿಪುರ ತಾಲೂಕಿನ ಉಡುಗಣಿ, ತಾಳಗುಂದ , ಹೊಸೂರು ಹೋಬಳಿ ಕೆರೆಗಳನ್ನು ತುಂಬಿಸುವ 850ಕೋಟಿ ರೂ. ಯೋಜನೆಯಿಂದ 110ಗ್ರಾಮಗಳ 186 ಕೆರೆಗಳನ್ನು ತುಂಬಿಸಲಾಗುತ್ತಿದೆ.

ಇದೇ ರೀತಿ ಶಿವಮೊಗ್ಗ ಹೊಸಹಳ್ಳಿ ಸಮೀಪ ತುಂಗಾ ನದಿಯಿಂದ ಏತ ನೀರಾವರಿ ಮೂಲಕ ಶಿವಮೊಗ್ಗ ಗ್ರಾಮಾಂತರ ಕೆರೆಗಳಿಗೆ ಹಾಗೂ ಶಿಕಾರಿಪುರ ಅಂಜನಾಪುರ ಜಲಾಶಯಕ್ಕೆ ನೀರು ಒದಗಿಸುವ 250 ಕೋಟಿ ಮೊತ್ತದ ಏತ ನೀರಾವರಿ ಯೋಜನೆಯಿಂದ 50ಗ್ರಾಮಗಳ 75 ಕೆರೆಗಳನ್ನು ತುಂಬಿಸಲಾಗುತ್ತಿದೆ.ಮುಂದಿನ ಒಂದು ವರ್ಷದಲ್ಲಿ ಉತ್ತಮ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸಬೇಕು.

ಸಮಿತಿ ರಚನೆ

ಬೆಂಗಳೂರಿನಲ್ಲಿ ಒತ್ತುವರಿಯಾಗಿರುವ ಭೂಮಿಯನ್ನು ಗುರುತಿಸಲು ಸಮಿತಿ ರಚಿಸಲಾಗಿದೆ. ಒತ್ತುವರಿ ಜಮೀನು ವಶಪಡಿಸಿ ಹರಾಜು ಹಾಕಿ ಅಭಿವೃದ್ಧಿ ಕಾರ್ಯಗಲಿಗೆ ಅನುದೆನ ಒದಗಿಸಲಾಗುವುದು ಎಂದರು.

ಸೌಲಭ್ಯಗಳ ವಿತರಣೆ

ಈ ಸಂದರ್ಭದಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರಗತಿಪರ ರೈತರನ್ನು ಮುಖ್ಯಮಂತ್ರಿ ಅವರು ಸನ್ಮಾನಿಸಿದರು.

ರೈತರಿಗೆ ಸ್ಪಿಂಕ್ಲರ್, ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್, ಆಯುಷ್ಮಾನ್ ಆರೋಗ್ಯ ಕಾರ್ಡ್ ವಿತರಿಸಿದರು.

ಜಿಲ್ಲೆಯ ಆಯ್ದ ಕೆರೆಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಹೂಳು ತೆಗೆಯುವ ಕರಾರು ಒಪ್ಪಂದಕ್ಕೆ ಈ ಸಂದರ್ಭದಲ್ಲಿ ಸಹಿ ಹಾಕಲಾಯಿತು. ಈ ಹೂಳನ್ನು ರೈತರು ತೆಗೆದುಕೊಂಡು ತಮ್ಮ ಹೊಲಗಳಿಗೆ ಹಾಕುವಂತೆ ಮುಖ್ಯಮಂತ್ರಿ ಅವರು ತಿಳಿಸಿದರು.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಕೃಷಿ ಸಚಿವ ಬಿ.ಸಿ.ಪಾಟೀಲ್, ಸಂಸದ ಬಿ.ವೈ.ರಾಘವೇಂದ್ರ, ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಶಾಸಕ ಅಶೋಕ ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಮಜುನಾಥ, ರುದ್ರೇಗೌಡ್ರು, ಆರ್.ಪ್ರಸನ್ನ ಕುಮಾರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.

ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

Published

on

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.

ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending