ದಿನದ ಸುದ್ದಿ
ಕೊರೋನಾ ಭೀತಿ ಹಿನ್ನೆಲೆ ; ಕೊಪ್ಪಳ ಉದ್ಯೋಗ ಮೇಳ ‘ಮುಂದೂಡಿಕೆ’
ಸುದ್ದಿದಿನ.ಬೆಂಗಳೂರು : ಕೊರೋನಾ ಭೀತಿ ಹಿನ್ನೆಲೆಯಲ್ಲಿ, ನಾಳೆಯಿಂದ ಒಂದು ವಾರಗಳ ಕಾಲ ಸಿನೆಮಾ ಥಿಯೇಟರ್, ಪಬ್, ಕ್ರೀಡಾಕೂಡಗಳು,ಮದುವೆ ಹಾಗೂ ಇತರೆ ಸಮಾರಂಭ ಕಾರ್ಯಕ್ರಮಗಳನ್ನು ರದ್ದು ಗೊಳಿಸ ಬೇಕು ಎಂದು ಮುಖ್ಯ ಮಂತ್ರಿ ಯಡಿಯೂರಪ್ಪ ಸುದ್ದಿಗೋಷ್ಟಿಯಲ್ಲಿಂದು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಕೊಪ್ಪಳ ದಲ್ಲಿ ಮಾರ್ಚ್ 14-15 ರಂದು ನಡೆಯ ಬೇಕಿದ್ದ ‘ಉದ್ಯೊಗ ಮೇಳ’ ವನ್ನು ತಾತ್ಕಾಲಿಕ ವಾಗಿ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ಸುನೀಲ್ ಕುಮಾರ್ ಪ್ರಕಟಣೆ ಹೊರಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ 2 ದಿನಗಳ ಕಾಲ ಕನ್ನಡ ಜ್ಯೋತಿ ರಥಯಾತ್ರೆ ಸಂಚಾರ
ಸುದ್ದಿದಿನ,ದಾವಣಗೆರೆ:87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ರಾಜ್ಯದ್ಯಂತ ಕನ್ನಡ ರಥ ಸಂಚರಿಸಲಿದ್ದು. ದಾವಣಗೆರೆ ಜಿಲ್ಲೆಗೆ ಅಕ್ಟೋಬರ್ 24 ರಿಂದ 25 ರವರೆಗೆ 2 ದಿನಗಳ ಕಾಲ ಜಗಳೂರು, ದಾವಣಗೆರೆ, ಚನ್ನಗಿರಿ, ಹರಿಹರ, ಹೊನ್ನಾಳಿ, ನ್ಯಾಮತಿವರೆಗೂ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ ಸಾಗಲಿದೆ.
ಈ ರಥಯಾತ್ರೆ ಸಂದರ್ಭದಲ್ಲಿ ಜನಪ್ರತಿನಿಧಿಗಳು, ಕನ್ನಡಪರ ಸಂಘಟನೆಗಳು, ರೈತ ಕಾರ್ಮಿಕ ಸಂಘಟನೆಗಳು, ಎನ್.ಎಸ್.ಎಸ್ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್, ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಇತರೆ ಸಂಘ-ಸAಸ್ಥೆಗಳು ಹಾಗೂ ಸಾರ್ವಜನಿಕರು ಗೌರವಯುತವಾಗಿ ಸ್ವಾಗತಿಸಿ ಬೀಳ್ಕೊಡಬೇಕು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ |ಅ.23ರಂದು ಜಿಲ್ಲಾ ಮಾದಿಗ ಛಲವಾದಿ ಸಮುದಾಯಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ
ಸುದ್ದಿದಿನ,ದಾವಣಗೆರೆ: ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಆದೇಶದಂತೆ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಅ. 23 ರಂದು ಬೃಹತ್ ಪ್ರತಿಭಟನೆಯನ್ನು ನಗರದಲ್ಲಿ ಹಮ್ಮಿಕೊಳ್ಳ ಲಾಗಿದೆ ಎಂದು ಜಿಲ್ಲಾ ಮಾದಿಗ ಛಲವಾದಿ ಸಮುದಾಯಗಳ ಒಕ್ಕೂಟದ ರವಿನಾರಾಯಣ್ ತಿಳಿಸಿದ್ದಾರೆ.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಅಂದು ಬೆಳಗ್ಗೆ 10ಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಲಾಗುವುದು ಎಂದಿದ್ದಾರೆ.
ಜಯದೇವ ವೃತ್ತ, ಅಶೋಕ ರಸ್ತೆ, ಉಪ ವಿಭಾಗಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.
ಮಾದಿಗ ಸಮುದಾಯದ ಜನಸಂಖ್ಯೆ ಆಧಾರದಲ್ಲಿ ಒಳ ಮೀಸಲಾತಿ ವರ್ಗೀಕರಣ ಮಾಡಲು ಒತ್ತಾಯಿಸಿ ಕಳೆದ ಮೂರು ದಶಕದಿಂದ ನಡೆಸಿದ ನಿರಂತರ ಹೋರಾಟದ ಫಲವಾಗಿ ಈಗ ಒಳ ಮೀಸಲಾತಿ ದೊರಕುವ ಸಮಯ ಬಂದಿದೆ. ಸರ್ವೋಚ್ಚ ನ್ಯಾಯಾಲಯ ಅ. 1 ರಂದು ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ಮತ್ತು ಹೊಣೆಗಾರಿಕೆ ಆಯಾಯ ರಾಜ್ಯ ಸರ್ಕಾರಗಳಿಗೆ ಇದೆ ಎಂಬುದನ್ನು ಸ್ಪಷ್ಟವಾಗಿ ತಿಳಿಸಿದೆ. ಅದರ ಅನ್ವಯ ರಾಜ್ಯ ಸರ್ಕಾರ ಕೂಡಲೇ ಒಳ ಮೀಸಲಾತಿ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.
ನಿವೃತ್ತ ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ರುದ್ರಮುನಿ ಮಾತನಾಡಿ, ಒಳ ಮೀಸಲಾತಿ ನೀಡದೇ ಇರುವುದರಿಂದ ಅನೇಕ ಸಮುದಾಯಗಳಿಗೆ ಅನ್ಯಾಯ ಆಗುತ್ತಿದೆ. ತುಟಿ ಮೇಲಿನ ಅನುಕಂಪ ಬೇಕಾಗಿಲ್ಲ. ಸುಪ್ರೀಂ ಕೋರ್ಟ್ ನ ಸಾಂವಿಧಾನಿಕ ಪೀಠ ನೀಡಿರುವ ತೀರ್ಪು ನಂತೆ ಕೂಡಲೇ ಒಳ ಮೀಸಲಾತಿ ಜಾರಿ ಮಾಡಬೇಕು. ಅಲ್ಲಿಯವರೆಗೆ ರಾಜ್ಯದಲ್ಲಿ ನಡೆಯುವ ಎಲ್ಲ ಸರ್ಕಾರಿ ಮತ್ತು ಅರೆ ಸರ್ಕಾರಿ ನೇಮಕಾತಿ ಸ್ಥಗಿತಗೊಳಿಸಬೇಕು. ಹಣಕಾಸಿನ ಮತ್ತು ಇತರೆ ಸೌಲಭ್ಯಗಳನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಈಗಾಗಲೇ ಸರ್ಕಾರದಲ್ಲಿ ಇರುವ ಲಭ್ಯವಿರುವ ದತ್ತಾಂಶಗಳ ಆಧಾರದಲ್ಲಿ ಒಳ ಮೀಸಲಾತಿ ನೀಡುವುದಕ್ಕೆ ಯಾವುದೇ ಅಡ್ಡಿ ಆತಂಕ ಇಲ್ಲ. ಆದರೂ, ಸರ್ಕಾರ ಮೀನಾಮೇಷ ಎಣಿಸುತ್ತಿರುವುದನ್ನು ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ. ಸರ್ಕಾರ ಈಗ ನಡೆಸುತ್ತಿರುವ ಹೋರಾಟಕ್ಕೆ ಸ್ಪಂದಿಸದಿ ದ್ದಲ್ಲಿ ಮುಂದಿನ ದಿನಗಳಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ಒಳಗೊಂಡಂತೆ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಒಳ ಮೀಸಲಾತಿ ಜಾರಿಗೆ ಬರುವವರೆಗೂ ಹೋರಾಟ ನಿಲ್ಲಿಸುವ ಮಾತೇ ಇಲ್ಲ. ಒಳ ಮೀಸಲಾತಿ ಜಾರಿಗೊಳಿಸಲೇಬೇಕು ಎಂದು ಒತ್ತಾಯಿಸಿದರು.
ನಿವೃತ್ತ ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ರುದ್ರಮುನಿ, ಬಿ.ಎಸ್. ಪುರುಷೋತ್ತಮ್, ಎಚ್. ಮಲ್ಲೇಶ್, ಬಿ.ಎಚ್. ಉದಯ್ ಕುಮಾರ್, ಎಂ. ಹಾಲೇಶ್, ಎಲ್.ಎಚ್. ಸಾಗರ್, ಆಲೂರು ನಿಂಗರಾಜ್, ಬಿ.ಎಂ. ನಿರಂಜನ್, ಹೆಗ್ಗೆರೆ ರಂಗಪ್ಪ, ಕೆ.ಎಸ್. ಗೋವಿಂದರಾಜ್, ಎಸ್. ಮಲ್ಲಿಕಾರ್ಜುನ್, ಎಚ್.ಕೆ. ಬಸವರಾಜ್, ಕೆ. ಏಕಾಂತಪ್ಪ, ಕುಂದುವಾಡ ಮಂಜುನಾಥ್, ನಾಗಭೂಷಣ್, ಓಂಕಾರಪ್ಪ, ಸೋಮಲಾಪುರ ಹನುಮಂತಪ್ಪ ಇತರರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನ ನೀಡಲು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತರಿಂದ ಆರ್ಜಿ ಆಹ್ವಾನಿಸಲಾಗಿದೆ.
ನೀರಿನಲ್ಲಿ ಕರಗುವ ರಸಗೊಬ್ಬರ ಘಟಕದ ಪ್ರತಿ ಹೆಕ್ಟೇರ್ಗೆ ವೆಚ್ಚ ರೂ.50000 ಇದ್ದು. ಸಾಮಾನ್ಯ ವರ್ಗದ ರೈತರಿಗೆ ಶೇ.40 ರಂತೆ ರೂ.20000 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ.50ರಂತೆ ರೂ.25000 ಸಹಾಯಧನವನ್ನು ನೀಡಲಾಗುವುದು.
ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ರೈತರು ಅನುಮೋದಿತ ಕಂಪನಿಯಿಂದ ರಸಗೊಬ್ಬರ ಖರೀದಿಸಿದ ಮೊತ್ತದ ಬಿಲ್ಲುಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಜಗಳೂರು ಇಲ್ಲಿಗೆ ಅ.30 ರೊಳಗೆ ಸಲ್ಲಿಸಿದ್ದಲ್ಲಿ ನೇರವಾಗಿ ರೈತರ ಖಾತೆಗೆ ಜಮಾ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಪ್ರಸನ್ನ ಕುಮಾರ್.ಜಿ.ಹೆಚ್ ರೈ.ಸಂ.ಕೇಂದ್ರ ಕಸಬಾ ಮತ್ತು ಬಿಳಿಚೋಡು ಮೊ.ಸಂ. 9108338179, ಸುನೀಲ್ ಕುಮಾರ್. ಹೆಚ್.ಟಿ ರೈ.ಸಂ. ಕೇಂದ್ರ ಸೂಕ್ತ ಮೊ.ಸಂ. 7899942287 ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಜಗಳೂರು ಇಲ್ಲಿ ಸಂಪರ್ಕಿಸಲು ತಿಳಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಜಾತಿ ಪ್ರಮಾಣಪತ್ರ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
-
ದಿನದ ಸುದ್ದಿ5 days ago
ಕರ್ನಾಟಕದಲ್ಲಿ ವಿವಿಧ ಕ್ಷೇತ್ರಗಳ ಐವರು ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ
-
ದಿನದ ಸುದ್ದಿ5 days ago
ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ4 days ago
ಚಿತ್ರದುರ್ಗ ಜಿಲ್ಲೆಯಲ್ಲಿ 6ಮತಗಟ್ಟೆಗಳ ಸ್ಥಳಾಂತರ ಹಾಗೂ ಮತಗಟ್ಟೆಗಳ ಹೆಸರು ಪರಿಷ್ಕರಣೆ
-
ದಿನದ ಸುದ್ದಿ4 days ago
ಸಾಲ ಸೌಲಭ್ಯ ಯೋಜನೆ ; ಅ.23 ರಂದು ಆಯ್ಕೆ ಸಮಿತಿ ಸಭೆ
-
ದಿನದ ಸುದ್ದಿ4 days ago
ಮೈಸೂರಿನಲ್ಲಿ ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳ ದಾಳಿ
-
ದಿನದ ಸುದ್ದಿ4 days ago
ಪೊಕ್ಸೋ ಕಾಯ್ದೆಯ ಬೆಂಬಲ ವ್ಯಕ್ತಿಗಳಿಗಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಎಸ್ ಬಿ ಐ ಬ್ಯಾಂಕ್ ನಿರ್ಲಕ್ಷ್ಯ; ಗ್ರಾಹಕರಿಗೆ ಬಡ್ಡಿ ಸಮೇತ ಪರಿಹಾರ ನೀಡಲು ನ್ಯಾಯಾಲಯ ಆದೇಶ