Connect with us

ದಿನದ ಸುದ್ದಿ

ದಾವಣಗೆರೆ | ಕೊರೊನಾ ವೈರಸ್ ಸೋಂಕು ನಿಯಂತ್ರಣ ಹಿನ್ನೆಲೆ, ನಾಳೆಯಿಂದ 144 ಸೆಕ್ಷನ್ ಜಾರಿ : ಏನಿರತ್ತೆ,ಏನಿರಲ್ಲ ಓದಿ ಈ ಸುದ್ದಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಕೊರೊನಾ ವೈರಸ್‍ನಿಂದಾಗಿ ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಲು ಒಂದು ವಾರ ಮಾ.18 ರಿಂದ 24 ರವರೆಗೆ ಹಲವು ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಲು ಜಿಲ್ಲೆಯಾದ್ಯಮತೆ 144 ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶಿಸಿದ್ದಾರೆ.

ಸಾರ್ವಜನಿಕರು ಹೆಚ್ಚಾಗಿ ಸೇರುವಂತಹ ಸಂತೆ, ಜಾತ್ರೆ, ಸಮಾವೇಶ, ಸಮ್ಮೇಳನ, ಮದುವೆ, ಕ್ರೀಡಾ ಕೂಟ ಹಾಗೂ ಧಾರ್ಮಿಕ ಸಮಾರಂಭಗಳಲ್ಲಿ ಕೊರೊನಾ ವೈರಸ್ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುವಂತಹ ಸಾಧ್ಯತೆಗಳಿದ್ದು, ಇಂತಹ ಸಂದರ್ಭಗಳಲ್ಲಿ ಕೊರೊನಾ ವೈರಸ್ ಸೋಂಕು ಹರಡದಂತೆ ಸಾರ್ವಜನಿಕ ಹಿತದೃಷ್ಟಿಯಿಂದ ಪರಿಣಾಮಕಾರಿಯಾಗಿ ಸೂಕ್ತ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಮಾ.18 ರಿಂದ 24 ರವರೆಗೆ ದಾವಣಗೆರೆ ಜಿಲ್ಲೆಯಾಯಂತ ನಡೆಯಲಿರುವ ಜಾತ್ರೆ, ಸಂತೆ, ಸಮಾವೇಶ, ಮೆರವಣಿಗೆ, ಸಮ್ಮೇಳನ, ಕ್ರೀಡಾ ಕೂಟ ಹಾಗೂ ಯಾವುದೇ ಧಾರ್ಮಿಕ ಸಮಾರಂಭ ನಡೆಸುವುದನ್ನು ನಿಷೇಧಿಸಲಾಗಿದೆ.

ಅಥವಾ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರದಂತೆ ನಿರ್ಬಂಧಿಸುವುದು ಅವಶ್ಯವೆಂದು ಕಂಡು ಬಂದಿರುವುದರಿಂದ ಸಿಆರ್‍ಪಿಸಿ 1973 ರ ಕಲಂ 144 ರನ್ವಯ ಮಾ.18 ರಿಂದ 24 ರವರೆಗೆ ಜಿಲ್ಲೆಯಾದ್ಯಮತ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೆಧಿಸಿ, ನೀಷೇಧಾಜ್ಞೆಯನ್ನು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಈ ಆದೇಶವು ಅಂತ್ಯಕ್ರಿಯೆ, ಮೆರವಣಿಗೆ ಮತ್ತು ಪರೀಕ್ಷೆಯಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲವೆಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಆಯುರ್ವೇದ ಆರೋಗ್ಯಕರ ಜೀವನ ಶೈಲಿ

Published

on

ಸುದ್ದಿದಿನ,ದಾವಣಗೆರೆ:ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ ಎಂದು ಘನವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.

ಅವರು ಶನಿವಾರ ತಪೋವನ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಸಂಸ್ಥೆಯು ಏರ್ಪಡಿಸಿದ್ದ ದ್ವಿತೀಯ ಘಟಿಕೋತ್ಸವ ಸಮಾರಂಭವನ್ನು ಉದ್ಪಾಟಿಸಿ ಮಾತನಾಡಿದರು.

ಈಗಿನ ದಿನಮಾನಗಳಲ್ಲಿ ಇಡೀ ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ, ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ತಿಳಿಸಿದರು.

ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ. ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ ಎಂದು ತಿಳಿಸಿದರು.

ಆಧುನಿಕ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (AI) ಮತ್ತು ಡಿಜಿಟಲ್ ಆರೋಗ್ಯ ಸೇವೆಗಳು ಇಂದಿನ ವೈದ್ಯಕೀಯ ಕ್ಷೇತ್ರದ ಚಿತ್ರಣವನ್ನೇ ಸಂಪೂರ್ಣವಾಗಿ ಬದಲಾಯಿಸುತ್ತಿವೆ. ಇಂತಹ ತಾಂತ್ರಿಕ ಕ್ರಾಂತಿಯ ಯುಗದಲ್ಲಿ ಪದವಿ ಪಡೆದು ಹೊರಬರುತ್ತಿರುವ ನೂತನ ವೈದ್ಯರು ಕೇವಲ ಸಾಂಪ್ರದಾಯಿಕ ವೈದ್ಯಕೀಯ ಜ್ಞಾನಕ್ಕೆ ಸೀಮಿತವಾಗದೆ, ಆಧುನಿಕ ವಿಜ್ಞಾನದ ನೂತನ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವ ಮೂಲಕ ಉಭಯ ಕ್ಷೇತ್ರಗಳ ನಡುವೆ ಬಲವಾದ ಸೇತುವೆಯಾಗಿ ಕೆಲಸ ಮಾಡಬೇಕಾದ ತುರ್ತು ಅಗತ್ಯವಿದೆ ಎಂದರು.

ಕೃತಕ ಬುದ್ಧಿಮತ್ತೆಯು ರೋಗನಿರ್ಣಯವನ್ನು ಹೆಚ್ಚು ನಿಖರ ಹಾಗೂ ವೇಗವಾಗಿಸಲು ನೆರವಾದರೆ, ಡಿಜಿಟಲ್ ಆರೋಗ್ಯ ಸೇವೆಗಳು ದೂರದ ಊರುಗಳಿಗೂ ಚಿಕಿತ್ಸೆಯನ್ನು ತಲುಪಿಸಲು ಸಹಕಾರಿಯಾಗಿವೆ. ಆದ್ದರಿಂದ, ಹೊಸ ತಲೆಮಾರಿನ ವೈದ್ಯರು ಕೇವಲ ದಿನನಿತ್ಯದ ಕ್ಲಿನಿಕ್ ಅಥವಾ ಆಸ್ಪತ್ರೆಯ ಚಿಕಿತ್ಸೆಗೆ ಸೀಮಿತವಾಗದೆ, ತಂತ್ರಜ್ಞಾನದ ದತ್ತಾಂಶಗಳನ್ನು ಬಳಸಿಕೊಂಡು ಹೊಸ ರೋಗಗಳಿಗೆ ಪರಿಹಾರ ಕಂಡುಕೊಳ್ಳುವ ಉತ್ತಮ ಸಂಶೋಧಕರಾಗಬೇಕು. ಇದರೊಂದಿಗೆ, ಸಮಾಜದಲ್ಲಿ ತಂತ್ರಜ್ಞಾನ ಮತ್ತು ಆರೋಗ್ಯದ ಕುರಿತು ಇರುವ ತಪ್ಪು ಕಲ್ಪನೆಗಳನ್ನು ದೂರಾಗಿಸಿ, ಮಾನವೀಯ ಕಾಳಜಿಯೊಂದಿಗೆ ಜನರನ್ನು ಸನ್ಮಾರ್ಗದಲ್ಲಿ ಮುನ್ನಡೆಸುವ ನೈಜ ಮಾರ್ಗದರ್ಶಕರಾಗಿ ಹೊರಹೊಮ್ಮಬೇಕಿದೆ ಎಂದು ತಿಳಿಸಿದರು.

ವೈದ್ಯಕೀಯ ಸೇವೆಯು ಅತ್ಯಂತ ಪವಿತ್ರವಾದ ಮಾನವೀಯ ಸೇವೆಯಾಗಿದೆ. ರೋಗಿಗಳಿಗೆ ಔಷಧಿಗಿಂತ ಮುಂಚಿತವಾಗಿ ವೈದ್ಯರ ಪ್ರೀತಿಯ ನುಡಿಗಳು ಹಾಗೂ ಸಕಾರಾತ್ಮಕ ನಡವಳಿಕೆಯ ಅಗತ್ಯವಿರುತ್ತದೆ. ಆದ್ದರಿಂದ ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು. ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯವು ಸಾಂಪ್ರದಾಯಿಕ ಚಿಕಿತ್ಸಾ ಪದ್ಧತಿಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಗುಜರಾತ್‌ನ ಜಾಮ್‌ನಗರದಲ್ಲಿ ವಿಶ್ವ ಆರೋಗ್ಯ ಸಂಸ್ಥೆ, ಗ್ಲೋಬಲ್ ಟ್ರೆಡಿಷನಲ್ ಮೆಡಿಸಿನ್ ಸೆಂಟರ್’ ಸ್ಥಾಪಿಸುತ್ತಿದೆ ಎಂದು ತಿಳಿಸಿದರು.

ರಾಜ್ಯಸಭಾ ಸದಸ್ಯರಾದ ಶ್ರೀ ನಾರಾಯಣಸಾ ಭಾಂಡಗೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಾಜಿ ಡೀನ್ ಡಾ: ಶ್ರೀನಿವಾಸ್ ಬನ್ನಿಗೊಳ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಪ್ರೊ. ಎಸ್.ವಿ.ಹಲಸೆ, ತಪೋವನ ಸಂಸ್ಥೆಯ ಅಧ್ಯಕ್ಷ ಡಾ. ಶಶಿಕುಮಾರ್ ವಿ.ಎಂ, ಆಯುರ್ವೇದ ಕಾಲೇಜಿನ ಪ್ರಾಚಾರ್ಯರಾದ ಡಾ. ಅಶ್ವಿನಿ ಕೆ.ಆರ್., ಡಾ.ಸುಮನ ಭಟ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending