ಲೈಫ್ ಸ್ಟೈಲ್
ಯೋಗದ ಅನ್ವೇಷಣೆ | ಮಿಸ್ ಮಾಡ್ದೆ ಈ ಲೇಖನ ಓದಿ..!
- ನಿತ್ಯತೃಪ್ತ
ಪುರಾತನರು, ನಾನು ಯರು? ಏಕೆ ಹುಟ್ಟಿದ್ದೇನೆ? ಯಾಕೆ ಸಾಯುತ್ತೇನೆ? ಯಾಕೆ ಬದುಕಿದ್ದೇನೆ? ನನ್ನ ಮುಂದಿರುವ ವೈವಿಧ್ಯಮಯ ಸೃಷ್ಟಿಗೆ ಕರ್ತ ಯಾರು? ಇದರ ಉದ್ದೇಶ ಏನು? ಈ ಪ್ರಶ್ನೆಗಳನ್ನ ಮುಂದಿಟ್ಟುಕೊಂಡು ಮಾಡಿದ 6ಸಾವಿರ ವರ್ಷಗಳ ಪ್ರಯೋಗವೇ ನಾಲ್ಕು ವೇದಗಳು. ಋಗ್ವೇದ, ಯಜುರ್ವೇದ, ಸಾಮವೇದ, ಅಥರ್ವಣವೇದ.
ಋಗ್ವೇದದ ಪ್ರಾಯೋಗಿಕ ಅಂತ್ಯ -ಪ್ರಙ್ಞನಂ ಬ್ರಹ್ಮ
ಯಜುರ್ವೇದದ ಪ್ರಾಯೋಗಿಕ ಅಂತ್ಯ – ಅಹಂ ಬ್ರಹ್ಮಾಸ್ಮಿ
ಸಾಮವೇದದ ಪ್ರಾಯೋಗಿಕ ಅಂತ್ಯ- ತತ್ವ ಮಸಿ
ಅಥರ್ವಣ ವೇದದ ಪ್ರಾಯೋಗಿಕ ಅಂತ್ಯ- ಅಯಂ ಆತ್ಮ ಬ್ರಹ್ಮ
ವೇದಾಂಗಗಳ ಅರಣ್ಯಕಗಳು ಸಂಹಿತೆಗಳು ಬ್ರಾಹ್ಮಣಕಗಳು ಕೊನೆಯದಾಗಿ ಉಪನಿಷತ್ತುಗಳಲ್ಲಿ ಹೇರಳವಾಗಿ ಯೋಗದ ಬಗೆ ವಿವರಿಸಲದಪಟ್ಟಿದೆ.
ನಾಲ್ಕು ವೇದಗಳಿಗೆ ಸೇರಿದ 108 ಉಪನಿಷತ್ತುಗಳಲ್ಲಿ ಕೆಳಕಂಡಂತೆ ಇವೆ.
- ಮುಖ್ಯವಾದ ಉಪನಿಷತ್ತುಗಳು (ಬೃಹತ್)-10
- ವೇದಾಂತಕ್ಕೆ ಸಂಬಂಧಪಟ್ಟ ಉಪಿಷತ್ತುಗಳು- 25
- ಶಾಕ್ತರಿಗೆ ಸಂಬಂಧಪಟ್ಟ ಉಪನಿಷತ್ತುಗಳು-08
- ವೈಷ್ಣವರಿಗೆ ಸಂಬಂಧಪಟ್ಟ ಉಪನಿಷತ್ತುಗಳು-14
- ಶೈವರಿಗೆ ಸಂಬಂಧಪಟ್ಟ ಉಪನಿಷತ್ತುಗಳು- 14
- ಸನ್ಯಾಸಕ್ಕೆ ಸಂಬಂಧಪಟ್ಟ ಉಪನಿಷತ್ತುಗಳು- 17
- ಯೋಗಕ್ಕೆ ಸಂಬಂಧಪಟ್ಟ ಉಪನಿಷತ್ತುಗಳು-20
ಈ ಮೇಲಿನ 108 ಉಪನಿಷತ್ತುಗಳು ಅರ್ಥವಾಗದಿದ್ದಕ್ಕೆ 6 ಶಾಸ್ತ್ರಗಳನ್ನು ಬರೆದರು. ಅವು ಸಾಂಖ್ಯ ಶಾಸ್ತ್ರ, ವೈಷೇಶಿಕ ಶಾಸ್ತ್ರ, ಯೋಗ ಶಾಸ್ತ್ರ, ನ್ಯಾಯ ಶಾಸ್ತ್ರ, ಉತ್ತರ ಮೀಮಾಂಸೆ ಮತ್ತು ಪೂರ್ವ ಮೀಮಾಂಸೆ.
ಇವುಗಳೂ ಕೂಡ ಅರ್ಥವಾಗದಿದ್ದಕ್ಕೆ 18 ಪುರಾಣಗಳನ್ನು ಬರೆದರು. ಅವು ಭಾಗವತ ಪುರಾಣ, ವಿಷ್ಣುಪುರಾಣ, ಮತ್ಸಯ ಪುರಾಣ, ಶಿವ ಪುರಾಣ, ಗರುಡ ಪುರಾಣ, ಬ್ರಹ್ಮ ಪುರಾಣ, ನಾರದೇಯ ಪುರಾಣ, ವಾಮನ ಪುರಾಣ, ಭವಿಷ್ಯ ಪುರಾಣ, ಬ್ರಹ್ಮ ಪುರಾಣ, ಲಿಂಗ ಪುರಾಣ, ವಿರಹ ಪುರಾಣ, ಅಗ್ನಿ ಪುರಾಣ, ಮಾರಖಂಡಯ್ಯ ಪುರಾಣ, ಕೂರ್ಮ ಪುರಾಣ, ಪದ್ಮ ಪುರಾಣ, ಸ್ಕಂದ ಪುರಾಣ.
ಇವುಗಳ ಜೊತೆಗೆ ಎರಡು ಮಹಾ ಕಾವ್ಯಗಳನ್ನು ವ್ಯಾಸರು ಮತ್ತು ವಾಲ್ಮೀಕಿ ಬರೆದಿದ್ದಾರೆ. ಈ ಮಹಾನ್ ಕೃತಿಗಳೇ ರಾಮಾಯಣ ಮತ್ತು ಮಹಾಭಾರತ. ಇವುಗಳಲ್ಲಿ ರಾಜಯೋಗ, ಹಠಯೋಗ, ಙ್ನನಯೋ, ಭಕ್ತಿಯೋಗ, ಕರ್ಮಯೋಗ, ಕುಂಡಲಿನಿಯೋಗ, ಮಂತ್ರಯೋಗ, ಲಯ ಯೋಗ ಈ ರೀತಿ ಯೋಗದ ಬಗ್ಗೆ ಬರೆದ ಸವಿಸ್ತಾರವಾದ ಕೃತಿಗಳು.
ರಾಮಾಯಣದಲ್ಲಿ ವಾಲ್ಮೀಕಿಯು 32ಸಾವಿರ ಶ್ಲೋಕಗಳು ಬೃಹತ್ ಯೋಗ ವಾಷಿಷ್ಠ ಕೃತಿಯನ್ನು ರಚಿಸಿದ್ದಾರೆ. ಮಹ ಬಾರತದಲ್ಲಿ ವ್ಯಾರು 700 ಶ್ಲೋಕಗಳು ಭಗವದ್ಗೀತೆಯನ್ನು ಬರೆದು, 18 ರೀತಿ ಯೋಗಗಳನ್ನು ವಿವರಿಸಿದ್ದಾರೆ. ಕಾಲಗತಿಯಲ್ಲಿ ಇವುಗಳೆಲ್ಲ ಮಠ ಮತ್ತು ಗುಹೆಗಳಲ್ಲಿ ಸೇರಿಕೊಂಡು ಸಾಮಾನ್ಯ ಜನರಿಗರ ದೊರೆಯದೆ ಬರಿ ಕಂದಾಚರಗಳ ವೇದಾಂತವಾಗಿ ಮನೆ ಮನೆ ಹೊಕ್ಕಿವೆ.
ಪಾಶ್ಚಿಮಾತ್ಯ ವಿದ್ವಾಂಸರಾದ ಮ್ಯಾಕ್ಸ್ಮುಲ್ಲರ್ ಭಾರತಕ್ಕೆ ಬಂದು ಸಂಸ್ಕøತ ಕಲಿತು 4 ವೇದಗಳನ್ನು ಇಂಗ್ಲಿಷ್ ಭಾಷೆಗೆ ಭಾಷಾಂತರಿಸಿದ್ದಾರೆ. ಮ್ಯಾಕ್ಸ್ಮುಲ್ಲರ್ ವಿಶ್ವವಿದ್ಯಾಲಯದಲ್ಲಿ ವೇದಗಳ ಅಧ್ಯಯನ ನಡೆಯುತ್ತಿದೆ. ಇದೇ ತರಹ Sarpent power ಎಂಬ ತತ್ವ ಙ್ಞನಿ ಭಾರತಕ್ಕೆ ಬಂದು ಇಲ್ಲಿ ನೆಲೆಸಿ ಸಂಸ್ಕøತ ಕಲಿತು ಯೋಗದ 20 ಉಪನಿಷತ್ತುಗಳನ್ನು ಹಗೂ ಯಂತ್ರ, ತಂತ್ರ, ಮಂತ್ರ ಸ್ವರ ಮುಂತದ ಶಾಸ್ತ್ರಗಳನ್ನು ಇಂಗ್ಲಿಷ್ಗೆ ಭಾಷಾಂತರಿಸಿ Sarpent power ಎಂಬಕೃತಿ ಬರೆದರು. ಈ ಕೃತಿಯ ಮೂಲಕ ಯೋಗವನ್ನು ಪಾಶ್ಚಿಮಾತ್ಯರಿಗೆ ಪರಿಚಯಿಸಿದ ಮಹತ್ಮ.
ಹಾಗೆಯೇ ಸ್ವಾಮಿ ವಿವೇಕಾನಂದರು, ಯೋಗನಂದರು, ಋಷಿಕೇಷದ ಸ್ವಾಮಿ ಶಿವಾನಂದರ ಶಿಷ್ಯರಾದ ಸ್ವಾಮಿ ಸತ್ಯಾನಂದರು ಪ್ರಪಂಚದಾದ್ಯಂತ ಉಪದೇಶಿಸಿದ್ದಾರೆ. ಪ್ರಪಂಚದಾದ್ಯಂತ ಯೋಗದ ಬಗೆಗಿನ ಸಾಹಿತ್ಯ ಹೇರಳವಾಗಿ ದೊರೆಯುವಂತೆ ಮಾಡಿದ್ದಾರೆ. ಬುದ್ದ ಹುಟ್ಟಿದ್ದು, ಬೌದ್ಧಧರ್ಮ ಹುಟ್ಟಿದ್ದು ಭಾರತವಾದರೆ ಬೆಳೆದದ್ದು ಮಾತ್ರ ಪರರಾಷ್ಟ್ರಗಳಲ್ಲಿ, ಯೋಗವೂ ಸಹ ಹಾಗೆಯೇ.
ಯೋಗ ಒಂದು ಅಮೂಲ್ಯವಾದ ಸಂಸ್ಕøತಿ. ಮನುಷ್ಯನಿಂದ ಹುಟ್ಟಿ ಮನುಷ್ಯನಿಗೋಸ್ಕರ ಮನುಷ್ಯ ಇರುವ ತನಕ ಇರುವುದೋ ಅದೇ ಸಂಸ್ಕøತಿ. ಯೋಗವು ಒಂದು ವಿಙ್ಞನವೂ ಹೌದು, ಅಂದರೆ ಐಕ್ಯತೆ ಅಥವಾ ವೃತ್ತಿ ನಿರೋಧವೇ ಯೋಗ. ಮಾತು ಮತ್ತು ಆಲೋಚನೆ ಮಾಡುವ ಕ್ರಿಯೆಯನ್ನು ಸಮನ್ವಯಗೊಳಿಸುವುದೇ ಯೋಗ. ಅಲ್ಲದೆ ಜನ್ಮ ಜನ್ಮಾಂತರ ಗಳಿಂದ ಬಂದ ಅಭ್ಯಸಗಳ ವವೃತ್ತಿಗಳನ್ನು ನಿಯಂತ್ರಿಸಿ, ನಿರೋಧಿಸಿ ಜೀವನದ ಉತ್ತುಂಗ ಕಲೆಯನ್ನು ಬೋಧಿಸುತ್ತದೆ. ಆತ್ಮ ಸಾಕ್ಷಾತ್ಕಾರಕ್ಕೆ ಇರುವ ಅಡಚಣೆತಳನ್ನು ತೆಗೆದು ಹಾಕುತ್ತದೆ. ಇದು ಪಶುತ್ವದಿಂದ ಪರಮಾತ್ಮನ ಕಡೆಗೆ ಕೊಂಡೊಯ್ಯುತ್ತದೆ.
ಯೋಗದ ಚರ್ಚೆ ಮಾಡುವುದರಿಂದ ವೇಷ ಭೂಷಣಗಳಿಂದ ಶಾಸ್ತ್ರ ಅಧ್ಯಯನದಿಂದ ದೊರೆಯುವುದಿಲ್ಲ. ಯೋಗಿ ಯಾಗಬೇಕಾದರೆ ಸಾಧನೆ ಮಾಡಬೇಕು. ಸಾಧನೆಯಿಂದ ಮಾತ್ರ ಸಿದ್ಧಿ ದೊರೆಯುತ್ತದೆ. ಯೋಗವನ್ನು ಹುಡುಗರು, ಮುದುಕರು, ತೀರಾ ಮುದುಕರು, ರೋಗಿಗಳು, ನಿತ್ರಾಣ ಹೊಂದಿರುವವರು ಅಭ್ಯಾಸ ಮಾಡಿ ಸಿದ್ಧಿ ಪಡೆಯಬಹುದು(ಹ.ಠ ಪ್ರದೀಪಿಕೆ 64.65.66 ಪ್ರಥಮ ಉಪದೇಶ).
ತಪಸ್ಸು ಸ್ಥಳೀಯ ಅದ್ಯಯನ, ಈಶ್ವರಿ ಪ್ರಣಿಧ್ಯಾನ ಇವೆ ಯೋಗ ಕ್ರಿಯೆಗಳು. ಇದೇ ಅಷ್ಟಾಂಗ ಯೋಗ, ಯಮ, ನಿಯಮ, ಆಸನ, ಪ್ರಾಣಯಾಮ ಪ್ರತ್ಯಾಹಾರ ಇವು ಹ.ಠ ಕ್ರಿಯೆಗಳು ಧರಣ ಧ್ಯಾನ ಸಮಾಧಿ ಇವು ರಾಜ ಯೋಗ(king of yoga).
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ | ಭದ್ರಾ ನಾಲೆ ನೀರು ನಿರ್ವಹಣೆ
ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.
ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ನಾಲೆಯ ಕೊನೆಯ ಭಾಗದ ರೈತರಿಗೆ ನೀರು ತಲುಪಿಸಲು ನಾಲೆಯುದ್ದಕ್ಕೂ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಅನಧಿಕೃತವಾಗಿ ನೀರು ಎತ್ತುವವರ ಮೋಟಾರ್ಗಳನ್ನು ವಶಪಡಿಸಿಕೊಳ್ಳಲಾಗುವುದು.
ಪ್ರಿಪೇಯ್ಡ್ ಆಟೋಗಳನ್ನು ಚಾಲ್ತಿಗೊಳಿಸಿದ್ದು, ಇದಕ್ಕೆ ರೂ.38/-ಶುಲ್ಕ ನಿಗದಿಪಡಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಶೇಖರ್ ಹೆಚ್.ಟಿ, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಅಂಕಣ
Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?
‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.
ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.
ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:
ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.
ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ
‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?
ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.
‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?
ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.
ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.
ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.




