Connect with us

ದಿನದ ಸುದ್ದಿ

ಕೋವಿಡ್ 19 : ಕೇರಳಕ್ಕೆ ಮತ್ತು ಕೇರಳದಿಂದ ಪಾಠಗಳು

Published

on

  • ಭಾರತದ ಸಾರ್ವಜನಿಕ ಆರೋಗ್ಯದ ದಾಖಲೆಯ ಹಿನ್ನೆಲೆಯಲ್ಲಿ, ಕೊವಿದ್-19ರ ಈ ತುರ್ತು ಪರಿಸ್ಥಿತಿಯನ್ನು ನಿಭಾಯಿಸಿರುವ ರೀತಿಯ ಬಗ್ಗೆ ಕೇರಳವನ್ನು ಶ್ಲಾಘಿಸಲಾಗುತ್ತಿದೆ. ಇದಕ್ಕೆ ಬೇಕಾದ ಪೂರ್ವಭಾವಿ ಮೂಲ ಸೌಕರ್ಯಗಳನ್ನು ಹಿಂದೆಯೇ ಒದಗಿಸಿದ್ದರಿಂದಾಗಿ ಮತ್ತು ನಿಫಾ ವೈರಸ್ನ ಸವಾಲನ್ನು ನಿಭಾಯಿಸಿದ ಅನುಭವದಿಂದಾಗಿ, ಕೇರಳ ಸರ್ಕಾರ ಉಳಿದ ರಾಜ್ಯ ಸರ್ಕಾರಗಳಿಗಿಂತ ಕೊವಿದ್-19ರ ಸವಾಲು ಎದುರಿಸುವ ಪೂರ್ವತಯಾರಿಯಲ್ಲಿ ಸಾಪೇಕ್ಷವಾಗಿ ಮುಂದಿತ್ತು.

ಕೆ.ಕೆ.ಶೈಲಜ (ಕೇರಳ ಆರೋಗ್ಯ ಮಂತ್ರಿ)
ಅನು: ಎಂ.ಜಿ.ವೆಂಕಟೇಶ

ಪ್ರತಿವರ್ಷ ಕೇಂದ್ರ ಸರ್ಕಾರ ಬಜೆಟ್ ಮಂಡಿಸಿದಾಗ ಪತ್ರಿಕೆಗಳು ಆರೋಗ್ಯ ಕ್ಷೇತ್ರಕ್ಕೆ ಮೀಸಲಾಗಿಡುವ ಅತ್ಯಲ್ಪ ಹಣದ ಕುರಿತು ಟೀಕೆ ಮಾಡುವ ಲೇಖನಗಳನ್ನು ಪ್ರಕಟ್ರಿಸುತ್ತವೆ. ಕೋವಿಡ್ – 19 ರ ಬೆದರಿಕೆ ವ್ಯಾಪಕವಾಗಿ ಆವರಿಸುತ್ತಿರುವಾಗ, ವೈದ್ಯರು, ಆರೋಗ್ಯ ಕ್ಷೇತ್ರದ ಕಾರ್ಯಕರ್ತರು, ರಾಜ್ಯ ಸರ್ಕಾರದ ಸಂಸ್ಥೆಗಳು ಅನುಸರಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ನಿರ್ದೇಶನಗಳನ್ನು ಕೊಡಲಾರಂಭಿಸಿದ್ದರು. ಆದರೆ ನಾವು ಎಲ್ಲ ಕಡೆಗಳಲ್ಲೂ ಈ ಪಿಡುಗನ್ನು ಎದುರಿಸಲಾರಂಭಿಸಿದಾಗ ನಮ್ಮ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯಲ್ಲಿನ ನ್ಯೂನತೆಗಳು ಢಾಳಾಗಿ ಗೋಚರಿಸಲಾರಂಭಿಸಿದವು.

ಪಿ.ಸಾಯಿನಾಥ್ ತಮ್ಮ `ಎಲ್ಲರಿಗೂ ಬರ ಅಂದರೆ ಇಷ್ಟ’ ಪುಸ್ತಕದಲ್ಲಿ ಸರ್ಕಾರಿ ಆಸ್ಪತ್ರೆಗಳನ್ನು ನಂಬಿರುವ ಬಡವರ ಸ್ಥಿತಿಯನ್ನು ಮನಮುಟ್ಟುವ ವಿವರಗಳೊಂದಿಗೆ ಹೇಳುತ್ತಾರೆ. ಅವರು 1994 ರಲ್ಲಿ ಕಾಣಿಸಿಕೊಂಡಿದ್ದ ಪ್ಲೇಗ್ ಪಿಡುಗಿಗೆ ಹಿಂದೆಂದು ಕಾಣದ ರೀತಿಯಲ್ಲಿ ಮಾಧ್ಯಮದ ಗಮನ ಸೆಳೆದಿದ್ದಕ್ಕೆ ಕಾರಣವನ್ನು ವಿವರಿಸುತ್ತಾರೆ. ಏಕೆಂದರೆ ಬೇರೆ ಕೆಲವು ರೋಗಗಳಂತೆ ಅದು ಗ್ರಾಮೀಣ ಪ್ರದೇಶ ಅಥವ ನಗರದ ಕೊಳಚೆ ಪ್ರದೇಶಕ್ಕೆ ಸೀಮಿತವಾಗಿರಲಿಲ್ಲ. ಪ್ಲೇಗಿನ ಬ್ಯಾಕ್ಟಿರೀಯಾ ನಗರದ ಪ್ರತಿಷ್ಠಿತರ ಜಾಗಗಳಿಗೂ ನುಗ್ಗುವ ಗಾಂಚಾಲಿತನ ತೋರಿತ್ತು. ಸಾಯಿನಾಥ್ರ ಮಾತುಗಳಲ್ಲಿ ಹೇಳುವುದಾದರೆ “ಅವು (ಬ್ಯಾಕ್ಟೀರಿಯಾ) ಕ್ಲಬ್ ಕ್ಲಾಸ್ನಲ್ಲಿ ಸಂಚರಿಸಿ ನ್ಯೂಯಾರ್ಕ್ ತಲುಪಬಹುದಿತ್ತು. ಆದ್ದರಿಂದ ಬಹಳಷ್ಟು ಸುಂದರ ವ್ಯಕ್ತಿಗಳು ಆತಂಕಕ್ಕೆ ಒಳಗಾಗಿದ್ದರು.” ಕೋವಿಡ್-19 ಪ್ಲೇಗ್ಗಿಂತ ಕಡಿಮೆ ಅಪಾಯಕಾರಿಯಾದರೂ, ಅದು ಭಾರತಕ್ಕೆ ಬಂದಿದ್ದು ಸೋಂಕು ಪೀಡಿತ ದೇಶಗಳಿಂದ ಆಗಮಿಸಿದ ಪ್ರಯಾಣಿಕರಿಂದಾಗಿತ್ತು.

ಈ ವಾದ ಒಡ್ಡುತ್ತಿರುವುದು ಈ ಎರಡೂ ಪಿಡುಗುಗಳನ್ನು ಹಗುರವಾಗಿ ತೆಗೆದುಕೊಳ್ಳುವ ಉದ್ದೇಶದಿಂದಲ್ಲ. ಬದಲಿಗೆ, ಆರೋಗ್ಯದ ವಿಷಯದಲ್ಲಿ ಭಾರತದ ಪ್ರತಿಸ್ಪಂದನೆ, ಅದರಿಂದ ಪೀಡಿತರಾದವರ ಸಾಮಾಜಿಕ ಮತ್ತು ವರ್ಗ ವಾಸಸ್ಥಾನಗಳ ಮೇಲೆ ಅವಲಂಬಿತವಾಗಿರುತ್ತದೆ ಎಂಬುದರ ಕುರಿತು ಬೆಳಕು ಚೆಲ್ಲುವುದು ಮಾತ್ರ ಇದರ ಉದ್ದೇಶ.

ಕೋವಿಡ್-19ರ ಆಗಮನದಿಂದ ಖಾಸಗಿ ವೈದ್ಯಕೀಯ ಸೌಲಭ್ಯಗಳನ್ನು ಪಡೆಯಲು ಸಾಧ್ಯವಿದ್ದ ವರ್ಗಗಳು ಸರ್ಕಾರಿ ಆರೋಗ್ಯ ವ್ಯವಸ್ಥೆಗಳ ಮೇಲೆ ತಪಾಸಣೆ ಮತ್ತು ಪ್ರತ್ಯೇಕೀಕರಣಕ್ಕಾಗಿ (ಕ್ವಾರಂಟೈನ್ಗಾಗಿ) ಅವಲಂಬಿತರಾಗುತ್ತಿರುವ ವಿಚಿತ್ರ ಪರಿಸ್ಥಿತಿ ಉಂಟಾಗಿದೆ. ದಶಕಗಳಿಂದ ಭಾರತದ ಬಹುಸಂಖ್ಯಾತರು ಇಂತಹ ಸರಕಾರಿ ಆರೋಗ್ಯ ವ್ಯವಸ್ಥೆಯ ಮೇಲೆ ಅವಲಂಬಿಸಿದ್ದರು ಎಂದು ಕೆಲವು ಅನುಕೂಲಸ್ತರಿಗೆ ಗೋಚರವಾಗುವುದಕ್ಕೆ ಕೋವಿಡ್-19 ರಂತಹ ಪಿಡುಗೇ ಬರಬೇಕಾಯಿತು. ಆಗ್ರಾ ಮಹಿಳೆಯೊಬ್ಬರು ಕ್ವಾರಂಟೈನ್ನಿಂದ ತಪ್ಪಿಸಿಕೊಂಡ ವಿಷಯ ತಪ್ಪಾಗಿ ವರದಿಯಾಗಿದೆ.

ವಾಸ್ತವವಾಗಿ “ಅನಾರೋಗ್ಯಕರ ಶೌಚಾಲಯ ವ್ಯವಸ್ಥೆ ಆಕೆಗೆ ವಾಕರಿಕೆ” ತರುವಂತೆ ಇದ್ದಿದ್ದರಿಂದ ಆಕೆ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯಲ್ಲಿ ಕ್ವಾರಂಟೈನ್ ಗೆ ಪ್ರತಿರೋಧ ತೋರಿದ್ದಳು. ಇದು ಸಾರ್ವಜನಿಕ ಆರೋಗ್ಯ ರಕ್ಷಣೆಗಾಗಿ ಮತ್ತು ಮೂಲ ಸೌಕರ್ಯಗಳಿಗಾಗಿ ಮೀಸಲಿಡುವ ಅತ್ಯಲ್ಪ ಅನುದಾನದ ಫಲ. ಸಾರ್ವಜನಿಕ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯಕರ ಶೌಚಾಲಯಗಳನ್ನು ನಿರ್ವಹಿಸಲಾಗದ ಸಾರ್ವಜನಿಕ ಆರೋಗ್ಯ ಆಡಳಿತಕ್ಕೆ, ಕೋವಿಡ್-19 ನಿಜವಾಗಿಯೂ ಎದುರಿಸಲಾಗದ ಸವಾಲಾಗಿದೆ.

ಸಾಂಕ್ರಾಮಿಕ ಎದುರಿಸಲು ತಯಾರಿ

ಭಾರತದ ಸಾರ್ವಜನಿಕ ಆರೋಗ್ಯದ ದಾಖಲೆಯ ಹಿನ್ನೆಲೆಯಲ್ಲಿ, ಕೊವಿದ್-19ರ ಈ ತುರ್ತು ಪರಿಸ್ಥಿತಿಯನ್ನು ನಿಭಾಯಿಸಿರುವ ರೀತಿಯ ಬಗ್ಗೆ ಕೇರಳವನ್ನು ಶ್ಲಾಘಿಸಲಾಗುತ್ತಿದೆ. ಇದಕ್ಕೆ ಬೇಕಾದ ಪೂರ್ವಭಾವಿ ಮೂಲಭೂತ ಸೌಕರ್ಯಗಳನ್ನು ಹಿಂದೆಯೇ ಒದಗಿಸಿದ್ದರಿಂದಾಗಿ ಮತ್ತು ನಿಫಾ ವೈರಸ್ನ ಸವಾಲನ್ನು ನಿಭಾಯಿಸಿದ ಅನುಭವದಿಂದಾಗಿ, ಕೇರಳ ಸರ್ಕಾರ ಉಳಿದ ರಾಜ್ಯ ಸರ್ಕಾರಗಳಿಗಿಂತ ಕೊವಿದ್-19ರ ಸವಾಲು ಎದುರಿಸುವ ಪೂರ್ವತಯಾರಿಯಲ್ಲಿ ಸಾಪೇಕ್ಷವಾಗಿ ಮುಂದಿತ್ತು. ಜನವರಿ ಮಧ್ಯ ಭಾಗದಿಂದಲೇ ಇದನ್ನು ಎದುರಿಸಲು ಕೈಗೊಳ್ಳುವ ಕ್ರಮಗಳ ಬಗ್ಗೆ ಚರ್ಚೆಯನ್ನು ಕೇರಳ ಸರ್ಕಾರ ಪ್ರಾರಂಭಿಸಿತ್ತು. ನಮ್ಮ ರಾಜ್ಯ ಕೊವಿದ್-19 ಪಿಡುಗು ಹರಡದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಪಟ್ಟಿ ತಯಾರಿಸಿದ ಮೊದಲ ರಾಜ್ಯವಾಗಿತ್ತು.

ಜನವರಿ 30 ರಂದು ಕೊವಿದ್-19 ಪಾಸಿಟಿವ್ ಆದ ಮೊದಲ ಪ್ರಕರಣ ಗಮನಕ್ಕೆ ಬಂದ ನಂತರ ಕ್ರಮಗಳನ್ನು ಇನ್ನಷ್ಟು ಕಟ್ಟುನಿಟ್ಟಾಗಿಸಿ ಪಾಲಿಸಲಾಯಿತು. ಆ ನಂತರ ಸರಕಾರ ಇನ್ನಷ್ಟು ನಿಗಾ ವಹಿಸಿ ಸೋಂಕು ಖಚಿತವಾದವರ ಜತೆ ಪ್ರಾಥಮಿಕ ಮತ್ತು ಸ್ವಲ್ಪ ದೂರದ ಸಂಪರ್ಕ ಇರುವ ಎಲ್ಲರನ್ನು ಗುರುತಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿತು. ಇಟಲಿಯಿಂದ ಹಿಂತಿರುಗಿದ ಒಂದು ಕುಟುಂಬ ತಪಾಸಣೆಗೆ ಒಳಗಾದಾಗ ಪಾಸಿಟಿವ್ ಫಲಿತಾಂಶ ಬಂದಿದ್ದರಿಂದ ಗಂಭೀರ ಸ್ಥಿತಿ ನಿರ್ಮಾಣವಾಯಿತು. ತೀವ್ರವಾದ ಹುಡುಕುವಿಕೆಯ ನಂತರ ಈ ಕುಟುಂಬದ ಸಂಪರ್ಕಕ್ಕೆ 719 ಜನ ಒಳಗಾಗಿದ್ದರು ಎಂಬುದು ಪತ್ತೆಯಾಯಿತು.

ಆ ನಂತರ ವಿದೇಶಗಳಿಂದ ಹಿಂತಿರುಗುವ ಪ್ರಯಾಣಿಕರ ಬಗ್ಗೆ ಕ್ರಮಗಳನ್ನು ಸರ್ಕಾರ ತೀವ್ರಗೊಳಿಸಿತು. ಈ ಪ್ರಯಾಣಿಕರು ತಮ್ಮ ಪ್ರಯಾಣದ ಪೂರ್ಣ ವಿವರಗಳನ್ನು ನೀಡದಿದ್ದರೆ ತೀವ್ರ ಕ್ರಮಗಳಿಗೆ ಒಳಗಾಗಬೇಕಾಯಿತು. ಅವರ ಪ್ರಾಥಮಿಕ ಮತ್ತು ಸ್ವಲ್ಪ ದೂರದ ಸಂಪರ್ಕಕ್ಕೆ ಬಂದವರನ್ನು ಪ್ರತ್ಯೇಕಿಸಲಾಯಿತು ಅಥವಾ ಗೃಹದಲ್ಲಿ ಒಂಟಿಯಾಗಿ ಇರಿಸಲಾಯಿತು.

ಮುಂದಿನ ಹಂತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಧಾರ್ಮಿಕ ಆಚರಣೆಗಳನ್ನು ನಿಷೇಧಿಸಲಾಯಿತು. ನಿಗಾ ವಹಿಸಲಾದವರ ಪಟ್ಟಿಯನ್ನು ಸರ್ಕಾರ ನೀಡಿತು. ಇತ್ತೀಚಿಗೆ ರಾಜ್ಯವನ್ನು ವಿವಿಧ ಕಡೆಯಿಂದ ವಿವಿಧ ರೀತಿಯಲ್ಲಿ ಪ್ರವೇಶಿಸುವ ಕಡೆಯಲ್ಲಿ ಜನರನ್ನು ತಪಾಸಣೆಗೆ ಒಳಪಡಿಸಲಾಯಿತು. ಆರೋಗ್ಯ ರಕ್ಷಣಾ ಕಾರ್ಯಕರ್ತರು ನಗರ ಪ್ರವೇಶದ ಚೆಕ್ ಪೋಸ್ಟ್ಗಳಲ್ಲಿ ನಿಂತು ತಪಾಸಣೆ ನಡೆಸಿದರು. ಹಾಗೆ ರೈಲ್ವೆ ನಿಲ್ದಾಣಗಳಲ್ಲಿ ಈ ಕ್ರಮ ಕೈಗೊಳ್ಳಲಾಯಿತು.

ಈ ಪರಿಸ್ಥಿತಿಯನ್ನು ಅತ್ಯಂತ ಸೂಕ್ತವಾಗಿ ನಿಭಾಯಿಸುವುದರ ಕುರಿತು ನಾವು ಚೀನಾ ಮತ್ತು ದಕ್ಷಿಣ ಕೊರಿಯಾದಿಂದ ಕಲಿಯಬೇಕಿರುವುದು ಎಂದರೆ, ವ್ಯಾಪಕವಾಗಿ ಸಂಪರ್ಕಕ್ಕೆ ಬಂದವರನ್ನು ಪತ್ತೆ ಹಚ್ಚುವುದು ಮತ್ತು ತಪಾಸಣೆ ಮಾಡುವುದು. ದ. ಕೋರಿಯಾದಲ್ಲಿ ವ್ಯಾಪಕ ತಪಾಸಣೆಯಿಂದಾಗಿ ಮಾತ್ರ ಲಾಕ್ಡೌನ್ ಮಾಡದೇ ಬಿಕ್ಕಟ್ಟನ್ನು ನಿಭಾಯಿಸುವುದು ಸಾಧ್ಯವಾಯಿತು. ಆದರೆ ಕೇರಳದಲ್ಲಿ ಆರೋಗ್ಯಸೇವೆಯ ಉತ್ತಮ ಸೌಲಭ್ಯಗಳಿದ್ದರೂ ಇಂತಹ ಉತ್ತಮ ಆದರ್ಶ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಾಗದಿರುವುದಕ್ಕೆ ಕಾರಣ ಸೀಮಿತ ಸಂಪನ್ಮೂಲ ಮತ್ತು ತಪಾಸಣಾ ಪ್ರಯೋಗಶಾಲೆಗಳು.

ಆದ್ದರಿಂದ ಇಂತಹ ಪರಿಸ್ಥಿತಿಯಲ್ಲಿ ನಾವು ಬಹಳ ಜಾಣತನದಿಂದ ನಮ್ಮ ಸೌಲಭ್ಯವನ್ನು ಉಪಯೋಗಿಸಬೇಕಾಗಿದೆ ಮತ್ತು ಸ್ಥಳೀಯ ಪ್ಯಯತ್ನಗಳನ್ನು ಹೆಚ್ಚಿಸಬೇಕಾಗಿದೆ. ಇದನ್ನು ಸಾಧಿಸಬೇಕಾದರೆ ಬಲವಾದ ರಾಜಕೀಯ ಬದ್ಧತೆ, ಬಲವಾದ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಮತ್ತು ಜನರ ಬದ್ಧತೆ ಬೇಕಾಗಿರುತ್ತದೆ. ಸರ್ಕಾರ ಸೂಚಿಸುವ ಕ್ರಮಗಳನ್ನು ಪ್ರಜೆಗಳು ಅನುಸರಿಸುವುದು ಮುಖ್ಯ. ಇದರಲ್ಲಿ ಮುಖ್ಯವಾದ ವಿಷಯವೆಂದರೆ ಸಾರ್ವಜನಿಕರು ಕಾರಣವಿಲ್ಲದೇ ತಪಾಸಣಾ ಕೇಂದ್ರಗಳಿಗೆ ಹೊಗದಿರುವುದು, ಹೀಗೆ ಹೋಗುವುದರಿಂದ ಪ್ರಯೋಗಾಲಯಗಳ ಮೇಲೆ ಒತ್ತಡ ಹೆಚ್ಚಾಗುತ್ತದೆ.

ಸ್ವಯಂ-ಪ್ರತ್ಯೇಕತೆ ಅನುಸರಿಸುವಾಗ ಕೈಗೊಳ್ಳುವ ಕ್ರಮಗಳ ಬಗ್ಗೆ, ರೋಗಲಕ್ಷಣಗಳನ್ನು ಗುರುತಿಸಲು ಮತ್ತು ವರದಿ ಮಾಡುವುದಕ್ಕೆ ಕೇರಳ ಸರ್ಕಾರ ‘ಜಿಓಕೆ ಡೈರೆಕ್ಟ್’ ಎಂಬ ಮೊಬೈಲ್ ಆ್ಯಪ್ ಸಿದ್ಧಪಡಿಸಿದೆ. `ದಿಶಾ’ ಹೆಲ್ಪಲೈನ್ ಜನಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಅದರ ಮುಖಾಂತರ ಕೊವಿದ್ 19 ಪಿಡುಗಿನ ಹರಡುವಿಕೆಯ `ಸರಣಿ ಕತ್ತರಿಸುವ’ (ಬ್ರೇಕ್ ದಿ ಚೈನ್) ಪ್ರಚಾರದಲ್ಲಿ ಶುಚಿ ಮತ್ತು ನೈರ್ಮಲ್ಯದ ಬಗ್ಗೆ ತಿಳಿಸಲಾಗುತ್ತಿದೆ. ಈ ಕ್ರಮಗಳಿಂದ ಸ್ವಭಾವದ ಬದಲಾವಣೆ ತರುತ್ತಿರುವುದು ರಾಜ್ಯದ ಮತ್ತು ರಾಷ್ಟ್ರದ ಮಾಧ್ಯಮದಲ್ಲೂ ಪ್ರಕಟವಾಗುತ್ತಿದೆ.

ಈ ರೀತಿಯ ಮುಂಜಾಗರೂಕತಾ ಕ್ರಮ ಮತ್ತು ಸಾಮಾಜಿಕ ಅಂತರ ಕಾಪಿಟ್ಟುಕೊಂಡರೆ ಸಾರ್ವಜನಿಕ ಮತ್ತು ಸರಕಾರದ ಸಂಪನ್ಮೂಲಗಳ ಮೇಲೆ ಉಂಟಾಗುವ ಒತ್ತಡವನ್ನು ಮುಂದೂಡಬಹುದು. ಹೀಗೆ ಗಳಿಸಿದ ಅವಧಿಯಲ್ಲಿ ಮುಂದೆ ಸೋಂಕು ಹರಡಿ ಅಗತ್ಯ ಬಿದ್ದರೆ ಹೆಚ್ಚು ಹೆಚ್ಚು ಜನರನ್ನು ತಲುಪಲು ಸಾಧ್ಯವಾಗುವಂತೆ ತಪಾಸಣಾ ಸೌಲಭ್ಯಗಳನ್ನು ನಿರ್ಮಿಸಬಹುದು. ಸರ್ಕಾರದ ವಿನಂತಿಯ ಮೇರೆಗೆ ಐ.ಸಿ.ಎಂ.ಆರ್ (ಇಂಡಿಯನ್ ಕೌನ್ಸಿಲ್ ಫಾರ್ ಮೆಡಿಕಲ್ ರೀಸರ್ಚ್) ಕೇರಳಕ್ಕೆ 10 ಪರೀಕ್ಷಾ ಕೇಂದ್ರಗಳನ್ನು ಮಂಜೂರು ಮಾಡಿದೆ. ಸರ್ಕಾರಕ್ಕೆ ಖಾಸಗಿ ಭಾಗಿತ್ವದೊಡನೆ ಇನ್ನು ಹೆಚ್ಚಿನ ಪ್ರಯೋಗಾಲಯಗಳನ್ನು ಸ್ಥಾಪಿಸುವ ಯೋಜನೆಯಿದೆ.

ಕೇರಳಕ್ಕೆ ಮತ್ತು ಕೇರಳದಿಂದ ಪಾಠಗಳು

ಕೇರಳದಲ್ಲಿ ಚಾರಿತ್ರಿಕವಾಗಿ ಸಶಕ್ತ ಸಾರ್ವಜನಿಕ ಆರೋಗ್ಯ ವ್ಯವಸ್ಥೆಗೆ ಸರ್ಕಾರ ನೀಡಿರುವ ಧೃಡವಾದ ಬೆಂಬಲದಿಂದಾಗಿ, ಕೊವಿಡ್ 19 ಹರಡುವ ಮೊದಲು ಕ್ರಮಗಳ ಬಗ್ಗೆ ನಿರ್ಣಯಿಸುವುದಕ್ಕೆ ಸಾಧ್ಯವಾಯಿತು. ಆಡಳಿತ ಒಳ್ಳೆಯ ಆರೋಗ್ಯ ವ್ಯವಸ್ಥೆ ಕಾಪಾಡಿ ಬೆಳೆಸಲು ವೇಗವರ್ಧಕವಾಗಿ ಕೆಲಸ ಮಾಡಿದೆ. ಇದು ಆರೋಗ್ಯ ಮೂಲ ಸೌಲಭ್ಯದ ವಿಸ್ತರಣೆಯಲ್ಲಿ ಕಂಡು ಬರುತ್ತದೆ. ಉದಾಹರಣೆಗೆ ನ್ಯಾಷನಲ್ ಇನ್ಸಿ÷್ಟಟ್ಯೂಟ್ ಆಫ್ ವೈರೋಲಜಿ ಘಟಕವನ್ನು ಅಲೆಪ್ಟಿಯಲ್ಲಿ ನಿಫಾ ವೈರಸ್ ಕಂಡು ಬಂದ ನಂತರ ಸ್ಥಾಪಿಸಿರುವುದು.

ಇತ್ತೀಚಿನ ದಿನಗಳಲ್ಲಿ ಉಂಟಾಗಿರುವ ಸಾಂಕ್ರಾಮಿಕ ಮತ್ತು ಅಸಾಂಕ್ರಮಿಕ ರೋಗಗಳಿಂದ ಉಂಟಾದ ಒತ್ತಡವನ್ನು ನಿರ್ವಹಿಸಿರುವ ರೀತಿಯಿಂದ ರಾಜ್ಯದ ಸೋಂಕಿನ ಪರಿಸ್ಥಿತಿಯನ್ನು ಗುರುತಿಸಲಾಗುತ್ತಿದೆ. ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೇಲೆ ನಿಗಾ ಇಡಲು ಸರಕಾರ ಸ್ಥಾಪಿಸಿರುವ ಉಸ್ತುವಾರಿ ವ್ಯವಸ್ಥೆ ಅತ್ಯಂತ ಯಶಸ್ವಿಯಾಗಿದೆ. ಇದರಿಂದ ಆರೋಗ್ಯ ಅಧಿಕಾರಿಗಳು ವೇಗವಾಗಿ ರೋಗ ಗುರುತಿಸುವುದಕ್ಕೂ ತಡೆಯುವುದಕ್ಕೂ ಸಾಧ್ಯವಾಗಿದೆ. ಸೇವೆಯನ್ನು ಕ್ಷಿಪ್ರವಾಗಿ ಮತ್ತು ವ್ಯಾಪಕವಾಗಿ ಹೆಚ್ಚಿನ ಜನರನ್ನು ತಲುಪುವ ಗುರಿ ಸಾಧಿಸಲು ಆರೋಗ್ಯಸೇವಾ ವ್ಯವಸ್ಥೆಯನ್ನು ವಿಕೇಂದ್ರಿಕರಿಸಲಾಗಿದೆ. ಇದರ ಫಲಿತವಾಗಿಯೇ ಕೋವಿಡ್-19 ರ ಸಂದರ್ಭದಲ್ಲಿ ವೈಯುಕ್ತಿಕ ಪ್ರಕರಣಗಳನ್ನು ಪತ್ತೆ ಹಚ್ಚಿ ಅದರ ಜಾಡು ಹಿಡಿಯುವುದರಲ್ಲಿ ಮತ್ತು ‘ಸರಣಿ ತುಂಡರಿಸುವ’ ಪ್ರಚಾರ ಕಾರ್ಯಕ್ರಮಗಳಲ್ಲಿ ಯಶಸ್ವಿಯಾಗಿವೆ.

ಆರೋಗ್ಯ ಸೇವೆಯ ಗುಣಮಟ್ಟ ಮತ್ತು ಮೂಲಭೂತ ಸೌಕರ್ಯ ಹೆಚ್ಚಿಸಲು ‘ಆರ್ದ್ರ ಮಿಶನ್’ ಮುಖಾಂತರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಕುಟುಂಬ ಆರೋಗ್ಯ ಕೇಂದ್ರಗಳಾಗಿ ಅಭಿವೃದ್ಧಿ ಪಡಿಸುವತ್ತ ಹೆಜ್ಜೆ ಹಾಕುತ್ತಿದ್ದೇವೆ. ಸರ್ಕಾರ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಮತ್ತೆ ಇನ್ನಷ್ಟು ಉತ್ತಮ ಹಾದಿಯಲ್ಲಿ ಒಯ್ಯಲು ಯಶಸ್ವಿಯಾಗಿದೆ.

  • ಮೂಲ ಲೇಖನ ಕೃಪೆ : ದಿ ಹಿಂದು ಪತ್ರಿಕೆ, ಮಾ.23, 2020

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

Published

on

ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.

ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.

ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು

ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.

ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.

ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.

ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ

ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.

ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.

ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.

“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”

ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂತರಂಗ

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Published

on

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ

ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.

ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.

 

ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.

ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

Continue Reading

ದಿನದ ಸುದ್ದಿ

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

Published

on

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.

ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್‌ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.

ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.

ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.

“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.

ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.

ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.

ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending