Connect with us

ದಿನದ ಸುದ್ದಿ

ಉಳ್ಳವರ ಭಾರತದಲ್ಲಿ ನರಳುತ್ತಿರುವ ಬಡ ಭಾರತ

Published

on

  • ಜಗದೀಶ್ ಕೊಪ್ಪ

ಮ್ಮ ನಡುವಿನ ಪ್ರಸಿದ್ಧ ಅರ್ಥಶಾಸ್ತ್ರಜ್ಞ ಹಾಗೂ ಮಾನವೀಯ ಮುಖದ ಹೃದಯವಂತ ಅಮಾರ್ತ್ಯ ಸೇನ್ ದಶಕದ ಹಿಂದೆ ಭಾರತದ ಅಭಿವೃದ್ಧಿಯನ್ನು ವ್ಯಾಖ್ಯಾನಿಸುತ್ತಾ, “ ಭಾರತದಲ್ಲಿ ಎರಡು ಭಾರತಗಳಿವೆ, ಒಂದು ಉಳ್ಳವರ ಭಾರತ, ಇನ್ನೊಂದು ನರಳುವವರ ಭಾರತ” ಎಂದು ಹೇಳಿದ್ದರು. ಅವರ ಮಾತು ಇಂದಿನ ಭಾರತಕ್ಕೆ ಯಾವುದೇ ಅನುಮಾನವಿಲ್ಲದೆ ಅನ್ವಯಿಸಬಹುದಾಗಿದೆ.

ಜಗತ್ತಿನಾದ್ಯಂತ ಸುನಾಮಿಯಂತೆ ಅಪ್ಪಳಿಸಿರುವ ಕೋವಿಡ್-19 ಅಥವಾ ಕೊರನಾ ವೈರಸ್ ಹಾವಳಿಗೆ ಇದೀಗ ಭಾರತದಲ್ಲಿ ಶ್ರೀಮಂತರು ಅಥವಾ ಮಧ್ಯಮ ವರ್ಗದವರಿಗಿಂತ ಬಡವರನ್ನು ಬಲಿಕೊಡಲಾಗುತ್ತದೆ. ಒಂದು ದೇಶದ ಪ್ರಧಾನಿಯಾದ ವ್ಯಕ್ತಿಗೆ ಈ ದೇಶದ ಆರ್ಥಿಕ ಚಟುವಟಿಕೆಗಳ ಬಗ್ಗೆಯಾಗಲಿ, ದೇಶದ ಬಹುದೊಡ್ಡ ಅಸಂಘಟಿತ ವಲಯವಾದ ಕಾರ್ಮಿಕರ ಕುರಿತಂತೆ ಕಿಂಚಿತ್ತೂ ಕಾಳಜಿಯಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಮಧ್ಯ ಚೀನಾದ ವುಹಾನ್ ನಗರದಲ್ಲಿ ಅತಿ ದೊಡ್ಡ ಕಸಾಯಿಖಾನೆ ಕೇಂದ್ರಗಳಿದ್ದು ಈ ನಗರದಿಂದ ಪ್ರಥಮ ಬಾರಿಗೆ ಕಳೆದ ವರ್ಷದ ಕೊನೆಯಲ್ಲಿ ವುಹಾನ್ ನಗರದಲ್ಲಿ ಕೊರನಾ ವೈರಸ್ ಹಾವಳಿ ಕಾಣಿಸಿಕೊಂಡಿತು. ಅದನ್ನು ಅಲ್ಲಿಯ ಸರ್ಕಾರ ಸಮರ್ಥವಾಗಿ ಹಿಮ್ಮೆಟ್ಟಿಸಿತು. ಜೊತೆಗೆ ಅಲ್ಲಿದ್ದ ವಿದೇಶಿ ಪ್ರಜೆಗಳ ಮೂಲಕ ಜಗತ್ತಿನ ಇತರೆ ರಾಷ್ಟ್ರಗಳಿಗೂ ಹರಡಿ ಈಗ ಚೀನಾ ಕಣ್ಮುಚ್ಚಿ ಕುಳಿತಿದೆ.

ಈ ವೈರಸ್ ನ ಬಗ್ಗೆ ಹಾಗೂ ಅವರ ಗುಣ ಲಕ್ಷಣಗಳ ಕುರಿತಂತೆ ವಿಶ್ವ ಆರೋಗ್ಯ ಸಂಸ್ಥೆ ತಮ್ಮ ವೆಬ್ ಸೈಟ್ ನಲ್ಲಿ ವಿವರವಾಗಿ ಪ್ರಕಟಿಸಿದ್ದರೂ ಕೂಡ ಇಲ್ಲಿನ ಆಳುವ ವರ್ಗ ಪುಂಖಾನುಪುಂಖವಾಗಿ ಕಟ್ಟು ಕಥೆಯನ್ನು ಹುಟ್ಟು ಹಾಕಿ ಜನತೆಯಲ್ಲಿ ಭಯ ಮತ್ತು ಭೀತಿಯನ್ನು ಹುಟ್ಟು ಹಾಕಿತು.

ಬ್ಯಾಕ್ಟಿರಿಯಾಗಿಂತ ಅತಿ ಸಣ್ಣ ಹಾಗೂ ಸೂಕ್ಮವಾಗಿರುವ ಈ ವೈರಾಣಣು ಜೀವಕೋಶಗಳ ನೆರವಿಲ್ಲದೆ ವಾತಾವರಣದಲ್ಲಿ ಹೆಚ್ಚು ಕಾಲ ಬದುಕಿರುವುದಿಲ್ಲ. ಯಾವುದೇ ವಸ್ತುವಿನ ಮೇಲೆ ಇದ್ದರೂ ಸಹ ಕೇವಲ ನಾಲ್ಕು ಗಂಟೆಯ ಅವಧಿಯಲ್ಲಿ ಇದು ಸಾಯುತ್ತದೆ ಎಂದು ವಿಶ್ಸಸಂಸ್ಥೆಯ ವರದಿಯನ್ನು ಉಲ್ಲೇಖಿಸಿ ಬೆಂಗಳೂರಿನ ಮಾನಸಿಕ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ. ಗಿರೀಶ್ ಉಪಾಧ್ಯಾಯ ವಿವರಿಸಿದ್ದಾರೆ. ಈ ವೈರಾಣು ಬಾಯಿ ಅಥವಾ ಮೂಗಿನ ಉಸಿರಾಟದ ಮೂಲಕ ಮನುಷ್ಯನೊಳಗೆ ಪ್ರವೇಶ ಪಡೆಯುವ ಸಾಧ್ಯತೆ ಇದ್ದು, ನಿರ್ಧಿಷ್ಟ ಅಂತರ ಕಾಪಾಡಿಕೊಳ್ಳಬೇಕು ಮತ್ತು ಕೈಗಳನ್ನು ಶುಚಿಯಾಗಿಟ್ಟುಕೊಳ್ಳಬೇಕು ಎಂದು ಮುನ್ನಚ್ಚೆರಿಕೆಯ ಕ್ರಮಗಳನ್ನು ವಿವರಿಸಿದ್ದಾರೆ.

ಭಾರತಕ್ಕೆ ಈ ವೈರಾಣು ಪ್ರವೇಶ ಪಡೆದದ್ದು ವಿದೇಶಗಳಲ್ಲಿದ್ದು ಭಾರತಕ್ಕೆ ಹಿಂತಿರುಗಿದ ಭಾರತೀಯರಿಂದ, ಈ ಕುರಿತಂತೆ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ತಪಾಸಣೆಯನ್ನು ಕಳೆದ ಜನವರಿಯಲ್ಲಿ ಜಾರಿಗೆ ತರಬಹುದಿತ್ತು. ಆದರೆ, ಹೆದರಿದವರ ಮೇಲೆ ಸತ್ತ ಹಾವನ್ನು ಎಸೆದರು ಎಂಬ ಗಾದೆಯಂತೆ ಸಿರಿವಂತರನ್ನು ನಿಯಂತ್ರಿಸಲಾರದ ಪ್ರಧಾನಿಯೆಂಬ ಮಹಾನ್ ನಟರು ದೇಶದ ಎಲ್ಲಾ ಪ್ರಜೆಗಳ ಮೇಲೆ ಬರೆ ಎಳೆದರು.

ಶ್ರೀಮಂತರು ಮತ್ತು ಅವರ ಮಕ್ಕಳನ್ನು ವಿದೇಶದಿಂದ ಕರೆತರಲು ವಿಮಾನ ಯಾನ, ವಿಶೇಷ ವಿಮಾನ ವ್ಯವಸ್ಥೆ ಮಾಡಿದ ಪ್ರಧಾನಿಗೆ ದೇಶಾದ್ಯಂತ ಜಾರಿಗೆ ತಂದ ಲಾಕ್ ಡೌನ್ ವ್ಯವಸ್ಥೆಗೆ ಮುನ್ನ ದೇಶದ ಮಹಾನ್ ನಗರಗಳಲ್ಲಿ ಕಟ್ಟಡ, ರಸ್ತೆ, ಹೋಟೆಲ್ ಇತ್ಯಾದಿ ವಲಯಗಳಲ್ಲಿ ದುಡಿಯುತ್ತಿರುವ ಸೂರಿಲ್ಲದ ಬಡ ಕಾರ್ಮಿಕರಿಗೆ ಕನಿಷ್ಠ ರೈಲುಗಳ ಮೂಲಕ ಅವರನ್ನು ಊರಿಗೆ ತಲುಪಿಸುವ ಯೋಚನೆ ಹೊಳೆಯಲಿಲ್ಲ.

ಎಂತಹ ಅಯೋಗ್ಯರು ಮತ್ತು ಮುಠಾಳರು ಕೇಂದ್ರ ಸಚಿವ ಸಂಪುಟದಲ್ಲಿ ಇದ್ದಾರೆ ಎಂದರೆ, ಹಳೆಯ ರಾಮಾಯಣ, ಮಹಾಭಾರತ ಧಾರವಾಹಿಗಳನ್ನು ದೂರದರ್ಶನದಲ್ಲಿ ಮರು ಪ್ರಸಾರ ಮಾಡುತ್ತಿದ್ದೇವೆ ನೋಡಿ ಎಂದು ಪ್ರಕಾಶ್ ಜಾವೇದ್ಡ್ಕರ್ ಎಂಬ ಸಚಿವ ಹೇಳಿಕೆ ನೀಡುತ್ತಾನೆ. ಈ ಅವಿವೇಕಿಗೆ ವಲಸೆ ಕಾರ್ಮಿಕರು ಬದುಕುವ ಸೂರಿನಡಿ, ವಿದ್ಯುತ್ ಅಥವಾ ಟಿ.ವಿ. ಇಲ್ಲ ಎಂಬ ಕನಿಷ್ಠ ವಿವೇಕವೂ ಇಲ್ಲ.

ದೇಹಲಿಯಲ್ಲೇ ಇರುವ ಪ್ರಧಾನಿ ಮತ್ತು ಅವರ ನಲವತ್ತು ಮಂದಿ ಸಚಿವ ಸಂಪುಟದ ಮೂರ್ಖ ಸಚಿವರು ದೆಹಲಿಯ ಕಾಶ್ಮೀರಿ ಗೇಟ್, ಜಾಮೀಯ ಮಸೀದಿ ಪ್ರದೇಶ, ಕರೋಲ್ ಬಾಗ್ ಹಾಗೂ ಕನಾಟ್ ಸರ್ಕಲ್ ಪ್ರದೇಶಗಳಲ್ಲಿ ರಾತ್ರಿ ವೇಳೆ ಸಂಚರಿಸಿದ್ದರೆ, ವಲಸೆ ಕಾರ್ಮಿಕರು ಭೂಮಿಯನ್ನು ಹಾಸಿಗೆ ಮಾಡಿಕೊಂಡು, ಆಕಾಶವನ್ನು ಹೊದಿಕೆಯನ್ನಾಗಿಸಿಕೊಂಡು ಮಲಗಿರುವ ದೃಶ್ಯ ಕಾಣುತ್ತಿತ್ತು. ಬಡವರ ಕಷ್ಟ ಅರಿವಾಗುತ್ತಿತ್ತು. ದೇಶದ ಬಹುತೇಕ ಮಹಾನಗರಗಳಲ್ಲಿ ಲಕ್ಷಾಂತರ ಮಂದಿ ಇಂತಹ ದುಸ್ಥಿತಿಯಲ್ಲಿ ಬದುಕು ಕಟ್ಟಿಕೊಂಡಿದ್ದಾರೆ.ಇಂತಹವರು, ಹಣ್ಣು, ತರಕಾರಿ, ಸೊಪ್ಪು ಮಾರುವವರು ಮತ್ತು ರೈತರ ಬವಣೆಗಳನ್ನು ಗಣನೆಗೆ ತೆಗೆದುಕೊಳ್ಳದೆ, ಪೊಲೀಸರಿಗೆ ಅಧಿಕಾರ ನೀಡಲಾಯಿತು.

ಕೈಯಲ್ಲಿ ಸುತ್ತಿಗೆ ಹಿಡಿದವನಿಗೆ ಜಗತ್ತಿನಲ್ಲಿರುವ ವಸ್ತುಗಳು ಮೊಳೆಯಂತೆ ಕಾಣುತ್ತವೆ ಎಂಬ ಮಾತಿನಂತೆ ಪೊಲೀಸರು ಕೈಯಲ್ಲಿ ಲಾಠಿ ಹಿಡಿದು ಎಲ್ಲರ ಮೇಲೆ ಬೀಸುತ್ತಾ, ತಮ್ಮ ರಾಕ್ಷಸತನವನ್ನು ಮೆರೆಯುತ್ತಿದ್ದಾರೆ. ಮೈಸೂರಿನ ಚೆಲುವಾಂಬ ಎಂಬ ಮಕ್ಕಳ ಹಾಗೂ ಹೆರಿಗೆ ಆಸ್ಪತ್ರೆ ಹಾಗೂ ಕೆ.ಆರ್. ಆಸ್ಪತ್ರೆ ಬಳಿ ರೋಗಿಗಳಿಗೆ ತಿನ್ನಲು ಹಣ್ಣುಗಳು ದೊರೆಯುತ್ತಿಲ್ಲ. ಕುಡಿಯಲು ಒಂದು ಲೋಟ ಬಿಸಿ ಹಾಲು ಅಥವಾ ಬಿಸಿ ಬ್ರೆಡ್ ಸಿಗುತ್ತಿಲ್ಲ. ಮೈಸೂರಿನಲ್ಲಿ ಒಂದೂವರೆ ಸಾವಿರ ವಿದೇಶಿ ಪ್ರವಾಸಿಗಳು ಉಳಿದುಕೊಂಡಿದ್ದು ಅವರು ಉಪಯೋಗಿಸುವ ಲಘು ಆಹಾರವಾದ ಹಣ್ಣು, ಬ್ರೆಡ್, ಕೇಕ್, ಬಿಸ್ಕೆಟ್, ಇತ್ಯಾದಿ ವಸ್ತುಗಳಿಗಾಗಿ ಬೀದಿ ಬೀದಿಯಲ್ಲಿ ಅಲೆದಾಡುತ್ತಿದ್ದಾರೆ.. ಇದು ವ್ಯಸ್ಥೆಯ ಕ್ರೌರ್ಯವಲ್ಲದೆ ಇನ್ನೇನು?

ರೋಗ ನಿಯಂತ್ರಣಕ್ಕೆ ಸಭೆ, ಸಮಾರಂಭ, ಸಿನಿಮಾ ಹಾಲ್, ಬೃಹತ್ ಮಾಲ್ ಗಳನ್ನು ಮುಚ್ಚಿಸಿ, ನಿಗದಿತ ಮಾರ್ಗದಲ್ಲಿ ತಪಾಸಣೆ ಮಾಡಿ ಸ್ಥಳಿಯರ ಓಡಾಟಕ್ಕೆ ಅನುವು ಮಾಡಿಕೊಡಬಹುದಿತ್ತು. ಅದೇ ರೀತಿ ದಿನಸಿ ಅಂಗಡಿ ವಸ್ತುಗಳನ್ನು ಸರಬರಾಜು ಮಾಡುವ ಮಂಡಿಗಳಿಗೆ ನಿಗದಿತ ಅವಧಿಗೆ ಅವಕಾಶ ನೀಡಬಹುದಿತ್ತು., ಇವೆಲ್ಲವನ್ನೂ ಬದಿಗೆ ಸರಿಸಿ ತರಕಾರಿ, ಮತ್ತು ಹಣ್ಣಿನ ಮಾರುಕಟ್ಟೆಗಳನ್ನು ಮುಚ್ಚಿಸಿ, ಕಾರ್ಮಿಕರ ಜೊತೆಗೆ ರೈತರಿಗೂ ಈ ಸರ್ಕಾರ ಬರೆ ಎಳಿಯಿತು.

ಕೇವಲ ಅವದೂತನಂತೆ ಅವತರಿಸಿ ರೇಡಿಯೊ ಮತ್ತು ಟಿ.ವಿಗಳಲ್ಲಿ ಭಾಷಣ ಮಾಡುವ ಪ್ರಧಾನಿಗೆ ರಾಜ್ಯ ಸರ್ಕಾರಗಳಿಗೆ ಯಾವುದೇ ಆರ್ಥಿಕ ನೆರವು ನೀಡುವ ಮನಸ್ಸಿಲ್ಲ, ಕಳೆದ ಆಗಸ್ಟ್ ನಲ್ಲಿ ಕರ್ನಾಟಕದಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ 50 ಸಾವಿರ ಕೋಟಿ ಪರಿಹಾರಕ್ಕೆ ಮನವಿ ಸಲ್ಲಿಸಿದರೆ, ಕೇಂದ್ರದಿಂದ ದೊರೆತ ಪರಿಹಾರ ಎರಡು ಕಂತುಗಳಲ್ಲಿ ( 600+1200) ಬರ ಪರಿಹಾರವೂ ಸೇರಿ ಕೇವಲ 1800 ಕೋಟಿ ರೂಪಾಯಿಗಳು ಮಾತ್ರ. ಕರ್ನಾಟಕದಿಂದ ಆಯ್ಕೆಯಾಗಿ ಹೋಗಿರುವ ಇಪ್ಪತ್ತೈದು ಬಿ.ಜೆ.ಪಿ. ಸಂಸದರು ಬಾಯಿಗೆ ಬಗನಿ ಗೂಟ ಜಡಿದುಕೊಂಡು ಮೌನವಾಗಿದ್ದಾರೆ.

ಇಡೀ ದೇಶದಲ್ಲಿ ಕೊರನಾ ಸೊಂಕಿನಲ್ಲಿ ಮೂರನೇ ಸ್ಥಾನದಲ್ಲಿರುವ ಕರ್ನಾಟಕಕ್ಕೆ ಪರಿಹಾರ ಸಿಕ್ಕಿಲ್ಲಿ. ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕೇಂದ್ರ ಸರ್ಕಾರ ಏನೂ ಕೊಡದಿದ್ದರೂ ಚಿಂತೆ ಇಲ್ಲ, ಅವರನ್ನು ಅಧಿಕಾರದ ಕುರ್ಚಿಯಿಂದ ಕದಲಿಸದಿದ್ದರೆ ಸಾಕು ಎಂಬ ಮನಸ್ಥಿತಿಯಲ್ಲಿದ್ದಾರೆ. ಇಂತಹವರನ್ನ ಆಯ್ಕೆ ಮಾಡಿಕಳಿಸಿದ ಗೋಮೂತ್ರ, ಸಗಣಿ, ಶಂಖ ಮತ್ತು ಜಾಗಟೆಯ ಗಿರಾಕಿಗಳು ಒಮ್ಮೆ ಎದೆಮುಟ್ಟಿಕೊಂಡು ತಮ್ಮ ಆತ್ಮಸಾಕ್ಷಿಯನ್ನು ಪರೀಕ್ಷಿಸಿಕೊಳ್ಳಬೇಕು.

ಬಿ.ಎಲ್. ಸಂತೋಷ್ ಎಂಬ ಅವಿವೇಕಿಯೊಬ್ಬನನ್ನು ಬಿ.ಜೆ.ಪಿ. ಪಕ್ಷದ ರಾಷ್ಟ್ರಮಟ್ಟದ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಈತ ಎಂತಹ ವಿಕೃತ ಮನಸ್ಥಿತಿಯವನು ಎಂದರೆ, ಬೆಂಗಳೂರು ಬಳಿಯ ಅತ್ತಿಬೆಲೆಯ ಗಡಿಯಿಂದ ತಮಿಳುನಾಡಿನ ಚೆನ್ನೈ ನಗರ ಕೇವಲ ನೂರು ಕಿಲೊಮೀಟರ್ ಗಿಂತಲೂ ಕಡಿಮೆಯಿದೆ, ಕಾರ್ಮಿಕರು ನಡೆದುಕೊಂಡು ಹೋಗಲಿ ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾನೆ.

ಈ ದುರಂಕಾರಿಗೆ ಬೆಂಗಳೂರು-ಚೆನ್ನೈ ನಡುವಿನ ಅಂತರ 347 ಕಿ.ಮಿ. ಎಂಬ ಕನಿಷ್ಠ ಜ್ಞಾನವೂ ಇಲ್ಲ. ಭೌಗೂಳಿಕ ಜ್ಞಾನವಿಲ್ಲದ ಇಂತಹ ಜಾತಿಯ ಕ್ರಿಮಿಗಳು ಈಗ ರಾಷ್ಟ್ರ ಮಟ್ಟದಲ್ಲಿ ನಾಯಕರಾಗಿ ಬೆಳೆಯುತ್ತಿದ್ದಾರೆ. ಇವುಗಳನ್ನು ಪ್ರಶ್ನಿಸಬೇಕಾದ ಮಾಧ್ಯಮಗಳು ಈಗ ಆರ್.ಎಸ್.ಎಸ್, ನ ಶಾಖಾಮಠಗಳಾಗಿರುವ ಕಾರಣ ದಿವ್ಯ ಮೌನಕ್ಕೆ ಶರಣಾಗಿವೆ.

ಕಾಲ್ನಡಿಗೆಯಲ್ಲಿ ಹುಟ್ಟಿದ ಊರಿನತ್ತ ಪ್ರಯಾಣ ಹೊರಟ ನತದೃಷ್ಟರು, ಆಹಾರ, ನೀರು ಇಲ್ಲದೆ, ನಡುರಸ್ತೆಯಲ್ಲಿ ಬಸವಳಿಯುತ್ತಾ ಸಾಗುತ್ತಿದ್ದಾರೆ. ನಾವು ಮೌನ ಸಾಕ್ಷಿಗಳಾಗಿದ್ದೇವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

Published

on

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು ರಾಯ್ ಅವರು ‘ಟೇಕ್ ಕೇರ್ ಭಾಲೋಬಾಸ’ ಚಿತ್ರದ ಮೂಲಕ ಬಂಗಾಳಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ‘ಜಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ, ಇದು ಸ್ನೇಹ, ಸಂಬಂಧಗಳು ಮತ್ತು ಕಾಲಾನುಕ್ರಮದಲ್ಲಿ ವಿಕಸನಗೊಳ್ಳುವ ಭಾವನೆಗಳ ಸುತ್ತ ಕೇಂದ್ರೀಕೃತವಾಗಿರುವ ಕಥೆಯಲ್ಲಿನ ಒಬ್ಬ ಸ್ನೇಹಿತ.

ನಿರ್ದೇಶಕ ಪಿಜೂಷ್ ಸಾಹಾ ಅವರ ಮಾರ್ಗದರ್ಶನದಲ್ಲಿ ಸುಶೋಭನ್ ಅವರ ಅಭಿನಯ ಪ್ರಯಾಣವು ಪ್ರಾರಂಭವಾಯಿತು, ಅಲ್ಲಿ ಅವರು ಸುಮಾರು ಎರಡು ವರ್ಷಗಳ ಕಾಲ ಅಭಿನಯ ಕಾರ್ಯಾಗಾರಗಳಲ್ಲಿ ಭಾಗವಹಿಸಿದರು. ನಿಯಮಿತ ಆಡಿಷನ್ಗಳ ನಂತರ, 2019 ರಲ್ಲಿ ಅವರು ಆಕಾಶ್ ಆಠ್ ಚಾನೆಲ್ನ ‘ಆನಂದಮಯೀ ಮಾ’ ಧಾರಾವಾಹಿಯ ಮೂಲಕ ತಮ್ಮ ಟೆಲಿವಿಷನ್ ಚೊಚ್ಚಲ ಪ್ರವೇಶವನ್ನು ಮಾಡಿದರು, ಇದನ್ನು ಮರಣೋತ್ತರ ನಿರ್ದೇಶಕ ದೇವಿದಾಸ್ ಭಟ್ಟಾಚಾರ್ಯ ನಿರ್ದೇಶಿಸಿದ್ದರು, ಅದರಲ್ಲಿ ಅವರು ವೈಷ್ಣವ ಭಕ್ತನ ಪಾತ್ರವನ್ನು ನಿರ್ವಹಿಸಿದರು. ನಂತರ ಅವರು ಸ್ಟಾರ್ ಜಲ್ಸಾದ ‘ಮೋಹರ್’, ‘ಕೋರಾಪಾಖಿ’, ‘ತಿತ್ಲಿ’ ಮತ್ತು ‘ಖೇಲಾಘರ್’, ಜೊತೆಗೆ ಜೀ ಬಂಗ್ಲಾದ ‘ಜಮುನಾ ಢಾಕಿ’ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು, ಹೀಗೆ ಬಂಗಾಳಿ ಟೆಲಿವಿಷನ್ನಲ್ಲಿ ತಮ್ಮ ಕೆಲಸವನ್ನು ಮುಂದುವರೆಸಿದರು.

COVID-19 ಸಾಂಕ್ರಾಮಿಕ ಸಮಯದಲ್ಲಿ, ಅಭಿನಯದ ಕೆಲಸಗಳು ಸೀಮಿತವಾದಾಗ, ಸುಶೋಭನ್ ಮಾಡೆಲಿಂಗ್ಗೆ ತಿರುಗಿದರು. 2023 ರಿಂದ ಪ್ರಾರಂಭಿಸಿ, ಅವರು ಹಾಲಿಡೇ ಇನ್ ಹೋಟೆಲ್, ಡಾಬರ್, ಟೈಟಾನ್ ಐ+, ವೆಲಾಸಿಟಿ ಐವೇರ್, ಅಮೆಜಾನ್, ಸ್ಪೆನ್ಸರ್ಸ್, ಕ್ಯಾಂಪಸ್ ಶೂಸ್, ಬಿಗ್ ಬಜಾರ್, ಬಯೋಟಿಕ್ ಮತ್ತು ಫಿಯಾಮಾ ಡಿ ವಿಲ್ಸ್ ಸೇರಿದಂತೆ ಹಲವಾರು ಬ್ರಾಂಡ್ಗಳೊಂದಿಗೆ ಕೆಲಸ ಮಾಡಿದರು. 2025 ರಲ್ಲಿ, ಕೋಲ್ಕತ್ತಾದಲ್ಲಿ ನಡೆದ ‘ಎತ್ನಿಕ್ ಎಲಿಗನ್ಸ್ 2025’ ಸೌಂದರ್ಯ ಸ್ಪರ್ಧೆಯಲ್ಲಿ ಅವರು ಪ್ರಥಮ ರನ್ನರ್-ಅಪ್ ಆಗಿ ಆಯ್ಕೆಯಾದರು.

ಹೌರಾದಲ್ಲಿ ಜನಿಸಿ ಕೋಲ್ಕತ್ತಾದಲ್ಲಿ ಬೆಳೆದ ಸುಶೋಭನ್, ಸುಮಾರು ಮೂರೂವರೆ ವರ್ಷದ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ನಂತರ ತಾಯಿಯಿಂದ ಬೆಳೆಸಲ್ಪಟ್ಟರು. ಅವರು ಕೋಲ್ಕತ್ತಾದಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು 2016 ರಲ್ಲಿ ದಮ್ ದಮ್ ಮೋತಿಜೀಲ್ ರವೀಂದ್ರ ಮಹಾವಿದ್ಯಾಲಯದಿಂದ ವಾಣಿಜ್ಯದಲ್ಲಿ ಬಿ.ಕಾಮ್ ಪದವಿಯನ್ನು ಪಡೆದರು. ಅಭಿನಯವನ್ನು ಮುಂದುವರಿಸುವ ಮೊದಲು, ಅವರು ಸುಮಾರು ಎರಡು ವರ್ಷಗಳ ಕಾಲ ಪಾಶ್ಚಾತ್ಯ ನೃತ್ಯದಲ್ಲಿ ತರಬೇತಿ ಪಡೆದರು ಮತ್ತು ರಂಗ ಪ್ರದರ್ಶನಗಳಲ್ಲಿ ಭಾಗವಹಿಸಿದರು.

‘ಟೇಕ್ ಕೇರ್ ಭಾಲೋಬಾಸ’ ಸುಶೋಭನ್ ಅವರ ಮೊದಲ ಬಂಗಾಳಿ ಫೀಚರ್ ಫಿಲ್ಮ್ನಲ್ಲಿ ಕಾಣಿಸಿಕೊಳ್ಳುವುದನ್ನು ಸೂಚಿಸುತ್ತದೆ. ಈ ಚಿತ್ರದಲ್ಲಿ, ಜಾಯ್ ಅವರು ಕೆಲವೊಮ್ಮೆ ಸಂಯಮದಿಂದಿರುವ, ಆದರೆ ಉಷ್ಣತೆ, ಸ್ನೇಹಪರತೆ ಮತ್ತು ಸಹಜತೆಯನ್ನು ಪ್ರದರ್ಶಿಸುವ ಪಾತ್ರವಾಗಿ ಚಿತ್ರಿಸಲಾಗಿದೆ, ಇದು ಸಂಬಂಧಗಳು ಮತ್ತು ದೈನಂದಿನ ಭಾವನೆಗಳ ಅನ್ವೇಷಣೆಗೆ ಕೊಡುಗೆ ನೀಡುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

Published

on

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.

ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.

ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.

ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;

1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.

ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.

ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ತನಿಖಾ ವರದಿನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷö್ಯ ತೋರಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇಲ್ಲಿನ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿನ ಬುಡಕಟ್ಟು ಸಮುದಾಯಗಳ ಪ್ರಗತಿಗೆ ಸಂಬAಧಿಸಿದAತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಸಲುವಾಗಿ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರೂ. 695 ಲಕ್ಷ ರೂಪಾಯಿಗಳನ್ನು ಸರ್ಕಾರ ಬಿಡುಗಡೆ ಮಾಡಿರುತ್ತದೆ. ಸದರಿ ಅನುದಾನದ ಖರ್ಚು-ವೆಚ್ಚದಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಅಕ್ರಮಗಳು ನಡೆದಿರುವ ಅಧಿಕೃತ ದಾಖಲೆಗಳನ್ನು ಲಗತ್ತಿಸಿ ಇಲಾಖಾ ತನಿಖೆ ನಡೆಸುವಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರಿಗೆ ದಿನಾಂಕ: 27-04-2026 ರಂದು ದೂರು ನೀಡಲಾಗಿತ್ತು.

ಆದರೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಸಾರ್ವಜನಿಕ ಹಿತಾಸಕ್ತಿ ಕೇಂದ್ರಿತ ದೂರು ಅರ್ಜಿಗೆ ಸಂಬಂಧಿಸಿದಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರು ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡಿರುವುದಿಲ್ಲ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending