ದಿನದ ಸುದ್ದಿ
ಉಳ್ಳವರ ಭಾರತದಲ್ಲಿ ನರಳುತ್ತಿರುವ ಬಡ ಭಾರತ
- ಜಗದೀಶ್ ಕೊಪ್ಪ
ನಮ್ಮ ನಡುವಿನ ಪ್ರಸಿದ್ಧ ಅರ್ಥಶಾಸ್ತ್ರಜ್ಞ ಹಾಗೂ ಮಾನವೀಯ ಮುಖದ ಹೃದಯವಂತ ಅಮಾರ್ತ್ಯ ಸೇನ್ ದಶಕದ ಹಿಂದೆ ಭಾರತದ ಅಭಿವೃದ್ಧಿಯನ್ನು ವ್ಯಾಖ್ಯಾನಿಸುತ್ತಾ, “ ಭಾರತದಲ್ಲಿ ಎರಡು ಭಾರತಗಳಿವೆ, ಒಂದು ಉಳ್ಳವರ ಭಾರತ, ಇನ್ನೊಂದು ನರಳುವವರ ಭಾರತ” ಎಂದು ಹೇಳಿದ್ದರು. ಅವರ ಮಾತು ಇಂದಿನ ಭಾರತಕ್ಕೆ ಯಾವುದೇ ಅನುಮಾನವಿಲ್ಲದೆ ಅನ್ವಯಿಸಬಹುದಾಗಿದೆ.
ಜಗತ್ತಿನಾದ್ಯಂತ ಸುನಾಮಿಯಂತೆ ಅಪ್ಪಳಿಸಿರುವ ಕೋವಿಡ್-19 ಅಥವಾ ಕೊರನಾ ವೈರಸ್ ಹಾವಳಿಗೆ ಇದೀಗ ಭಾರತದಲ್ಲಿ ಶ್ರೀಮಂತರು ಅಥವಾ ಮಧ್ಯಮ ವರ್ಗದವರಿಗಿಂತ ಬಡವರನ್ನು ಬಲಿಕೊಡಲಾಗುತ್ತದೆ. ಒಂದು ದೇಶದ ಪ್ರಧಾನಿಯಾದ ವ್ಯಕ್ತಿಗೆ ಈ ದೇಶದ ಆರ್ಥಿಕ ಚಟುವಟಿಕೆಗಳ ಬಗ್ಗೆಯಾಗಲಿ, ದೇಶದ ಬಹುದೊಡ್ಡ ಅಸಂಘಟಿತ ವಲಯವಾದ ಕಾರ್ಮಿಕರ ಕುರಿತಂತೆ ಕಿಂಚಿತ್ತೂ ಕಾಳಜಿಯಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.
ಮಧ್ಯ ಚೀನಾದ ವುಹಾನ್ ನಗರದಲ್ಲಿ ಅತಿ ದೊಡ್ಡ ಕಸಾಯಿಖಾನೆ ಕೇಂದ್ರಗಳಿದ್ದು ಈ ನಗರದಿಂದ ಪ್ರಥಮ ಬಾರಿಗೆ ಕಳೆದ ವರ್ಷದ ಕೊನೆಯಲ್ಲಿ ವುಹಾನ್ ನಗರದಲ್ಲಿ ಕೊರನಾ ವೈರಸ್ ಹಾವಳಿ ಕಾಣಿಸಿಕೊಂಡಿತು. ಅದನ್ನು ಅಲ್ಲಿಯ ಸರ್ಕಾರ ಸಮರ್ಥವಾಗಿ ಹಿಮ್ಮೆಟ್ಟಿಸಿತು. ಜೊತೆಗೆ ಅಲ್ಲಿದ್ದ ವಿದೇಶಿ ಪ್ರಜೆಗಳ ಮೂಲಕ ಜಗತ್ತಿನ ಇತರೆ ರಾಷ್ಟ್ರಗಳಿಗೂ ಹರಡಿ ಈಗ ಚೀನಾ ಕಣ್ಮುಚ್ಚಿ ಕುಳಿತಿದೆ.
ಈ ವೈರಸ್ ನ ಬಗ್ಗೆ ಹಾಗೂ ಅವರ ಗುಣ ಲಕ್ಷಣಗಳ ಕುರಿತಂತೆ ವಿಶ್ವ ಆರೋಗ್ಯ ಸಂಸ್ಥೆ ತಮ್ಮ ವೆಬ್ ಸೈಟ್ ನಲ್ಲಿ ವಿವರವಾಗಿ ಪ್ರಕಟಿಸಿದ್ದರೂ ಕೂಡ ಇಲ್ಲಿನ ಆಳುವ ವರ್ಗ ಪುಂಖಾನುಪುಂಖವಾಗಿ ಕಟ್ಟು ಕಥೆಯನ್ನು ಹುಟ್ಟು ಹಾಕಿ ಜನತೆಯಲ್ಲಿ ಭಯ ಮತ್ತು ಭೀತಿಯನ್ನು ಹುಟ್ಟು ಹಾಕಿತು.
ಬ್ಯಾಕ್ಟಿರಿಯಾಗಿಂತ ಅತಿ ಸಣ್ಣ ಹಾಗೂ ಸೂಕ್ಮವಾಗಿರುವ ಈ ವೈರಾಣಣು ಜೀವಕೋಶಗಳ ನೆರವಿಲ್ಲದೆ ವಾತಾವರಣದಲ್ಲಿ ಹೆಚ್ಚು ಕಾಲ ಬದುಕಿರುವುದಿಲ್ಲ. ಯಾವುದೇ ವಸ್ತುವಿನ ಮೇಲೆ ಇದ್ದರೂ ಸಹ ಕೇವಲ ನಾಲ್ಕು ಗಂಟೆಯ ಅವಧಿಯಲ್ಲಿ ಇದು ಸಾಯುತ್ತದೆ ಎಂದು ವಿಶ್ಸಸಂಸ್ಥೆಯ ವರದಿಯನ್ನು ಉಲ್ಲೇಖಿಸಿ ಬೆಂಗಳೂರಿನ ಮಾನಸಿಕ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ. ಗಿರೀಶ್ ಉಪಾಧ್ಯಾಯ ವಿವರಿಸಿದ್ದಾರೆ. ಈ ವೈರಾಣು ಬಾಯಿ ಅಥವಾ ಮೂಗಿನ ಉಸಿರಾಟದ ಮೂಲಕ ಮನುಷ್ಯನೊಳಗೆ ಪ್ರವೇಶ ಪಡೆಯುವ ಸಾಧ್ಯತೆ ಇದ್ದು, ನಿರ್ಧಿಷ್ಟ ಅಂತರ ಕಾಪಾಡಿಕೊಳ್ಳಬೇಕು ಮತ್ತು ಕೈಗಳನ್ನು ಶುಚಿಯಾಗಿಟ್ಟುಕೊಳ್ಳಬೇಕು ಎಂದು ಮುನ್ನಚ್ಚೆರಿಕೆಯ ಕ್ರಮಗಳನ್ನು ವಿವರಿಸಿದ್ದಾರೆ.
ಭಾರತಕ್ಕೆ ಈ ವೈರಾಣು ಪ್ರವೇಶ ಪಡೆದದ್ದು ವಿದೇಶಗಳಲ್ಲಿದ್ದು ಭಾರತಕ್ಕೆ ಹಿಂತಿರುಗಿದ ಭಾರತೀಯರಿಂದ, ಈ ಕುರಿತಂತೆ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ತಪಾಸಣೆಯನ್ನು ಕಳೆದ ಜನವರಿಯಲ್ಲಿ ಜಾರಿಗೆ ತರಬಹುದಿತ್ತು. ಆದರೆ, ಹೆದರಿದವರ ಮೇಲೆ ಸತ್ತ ಹಾವನ್ನು ಎಸೆದರು ಎಂಬ ಗಾದೆಯಂತೆ ಸಿರಿವಂತರನ್ನು ನಿಯಂತ್ರಿಸಲಾರದ ಪ್ರಧಾನಿಯೆಂಬ ಮಹಾನ್ ನಟರು ದೇಶದ ಎಲ್ಲಾ ಪ್ರಜೆಗಳ ಮೇಲೆ ಬರೆ ಎಳೆದರು.
ಶ್ರೀಮಂತರು ಮತ್ತು ಅವರ ಮಕ್ಕಳನ್ನು ವಿದೇಶದಿಂದ ಕರೆತರಲು ವಿಮಾನ ಯಾನ, ವಿಶೇಷ ವಿಮಾನ ವ್ಯವಸ್ಥೆ ಮಾಡಿದ ಪ್ರಧಾನಿಗೆ ದೇಶಾದ್ಯಂತ ಜಾರಿಗೆ ತಂದ ಲಾಕ್ ಡೌನ್ ವ್ಯವಸ್ಥೆಗೆ ಮುನ್ನ ದೇಶದ ಮಹಾನ್ ನಗರಗಳಲ್ಲಿ ಕಟ್ಟಡ, ರಸ್ತೆ, ಹೋಟೆಲ್ ಇತ್ಯಾದಿ ವಲಯಗಳಲ್ಲಿ ದುಡಿಯುತ್ತಿರುವ ಸೂರಿಲ್ಲದ ಬಡ ಕಾರ್ಮಿಕರಿಗೆ ಕನಿಷ್ಠ ರೈಲುಗಳ ಮೂಲಕ ಅವರನ್ನು ಊರಿಗೆ ತಲುಪಿಸುವ ಯೋಚನೆ ಹೊಳೆಯಲಿಲ್ಲ.
ಎಂತಹ ಅಯೋಗ್ಯರು ಮತ್ತು ಮುಠಾಳರು ಕೇಂದ್ರ ಸಚಿವ ಸಂಪುಟದಲ್ಲಿ ಇದ್ದಾರೆ ಎಂದರೆ, ಹಳೆಯ ರಾಮಾಯಣ, ಮಹಾಭಾರತ ಧಾರವಾಹಿಗಳನ್ನು ದೂರದರ್ಶನದಲ್ಲಿ ಮರು ಪ್ರಸಾರ ಮಾಡುತ್ತಿದ್ದೇವೆ ನೋಡಿ ಎಂದು ಪ್ರಕಾಶ್ ಜಾವೇದ್ಡ್ಕರ್ ಎಂಬ ಸಚಿವ ಹೇಳಿಕೆ ನೀಡುತ್ತಾನೆ. ಈ ಅವಿವೇಕಿಗೆ ವಲಸೆ ಕಾರ್ಮಿಕರು ಬದುಕುವ ಸೂರಿನಡಿ, ವಿದ್ಯುತ್ ಅಥವಾ ಟಿ.ವಿ. ಇಲ್ಲ ಎಂಬ ಕನಿಷ್ಠ ವಿವೇಕವೂ ಇಲ್ಲ.
ದೇಹಲಿಯಲ್ಲೇ ಇರುವ ಪ್ರಧಾನಿ ಮತ್ತು ಅವರ ನಲವತ್ತು ಮಂದಿ ಸಚಿವ ಸಂಪುಟದ ಮೂರ್ಖ ಸಚಿವರು ದೆಹಲಿಯ ಕಾಶ್ಮೀರಿ ಗೇಟ್, ಜಾಮೀಯ ಮಸೀದಿ ಪ್ರದೇಶ, ಕರೋಲ್ ಬಾಗ್ ಹಾಗೂ ಕನಾಟ್ ಸರ್ಕಲ್ ಪ್ರದೇಶಗಳಲ್ಲಿ ರಾತ್ರಿ ವೇಳೆ ಸಂಚರಿಸಿದ್ದರೆ, ವಲಸೆ ಕಾರ್ಮಿಕರು ಭೂಮಿಯನ್ನು ಹಾಸಿಗೆ ಮಾಡಿಕೊಂಡು, ಆಕಾಶವನ್ನು ಹೊದಿಕೆಯನ್ನಾಗಿಸಿಕೊಂಡು ಮಲಗಿರುವ ದೃಶ್ಯ ಕಾಣುತ್ತಿತ್ತು. ಬಡವರ ಕಷ್ಟ ಅರಿವಾಗುತ್ತಿತ್ತು. ದೇಶದ ಬಹುತೇಕ ಮಹಾನಗರಗಳಲ್ಲಿ ಲಕ್ಷಾಂತರ ಮಂದಿ ಇಂತಹ ದುಸ್ಥಿತಿಯಲ್ಲಿ ಬದುಕು ಕಟ್ಟಿಕೊಂಡಿದ್ದಾರೆ.ಇಂತಹವರು, ಹಣ್ಣು, ತರಕಾರಿ, ಸೊಪ್ಪು ಮಾರುವವರು ಮತ್ತು ರೈತರ ಬವಣೆಗಳನ್ನು ಗಣನೆಗೆ ತೆಗೆದುಕೊಳ್ಳದೆ, ಪೊಲೀಸರಿಗೆ ಅಧಿಕಾರ ನೀಡಲಾಯಿತು.
ಕೈಯಲ್ಲಿ ಸುತ್ತಿಗೆ ಹಿಡಿದವನಿಗೆ ಜಗತ್ತಿನಲ್ಲಿರುವ ವಸ್ತುಗಳು ಮೊಳೆಯಂತೆ ಕಾಣುತ್ತವೆ ಎಂಬ ಮಾತಿನಂತೆ ಪೊಲೀಸರು ಕೈಯಲ್ಲಿ ಲಾಠಿ ಹಿಡಿದು ಎಲ್ಲರ ಮೇಲೆ ಬೀಸುತ್ತಾ, ತಮ್ಮ ರಾಕ್ಷಸತನವನ್ನು ಮೆರೆಯುತ್ತಿದ್ದಾರೆ. ಮೈಸೂರಿನ ಚೆಲುವಾಂಬ ಎಂಬ ಮಕ್ಕಳ ಹಾಗೂ ಹೆರಿಗೆ ಆಸ್ಪತ್ರೆ ಹಾಗೂ ಕೆ.ಆರ್. ಆಸ್ಪತ್ರೆ ಬಳಿ ರೋಗಿಗಳಿಗೆ ತಿನ್ನಲು ಹಣ್ಣುಗಳು ದೊರೆಯುತ್ತಿಲ್ಲ. ಕುಡಿಯಲು ಒಂದು ಲೋಟ ಬಿಸಿ ಹಾಲು ಅಥವಾ ಬಿಸಿ ಬ್ರೆಡ್ ಸಿಗುತ್ತಿಲ್ಲ. ಮೈಸೂರಿನಲ್ಲಿ ಒಂದೂವರೆ ಸಾವಿರ ವಿದೇಶಿ ಪ್ರವಾಸಿಗಳು ಉಳಿದುಕೊಂಡಿದ್ದು ಅವರು ಉಪಯೋಗಿಸುವ ಲಘು ಆಹಾರವಾದ ಹಣ್ಣು, ಬ್ರೆಡ್, ಕೇಕ್, ಬಿಸ್ಕೆಟ್, ಇತ್ಯಾದಿ ವಸ್ತುಗಳಿಗಾಗಿ ಬೀದಿ ಬೀದಿಯಲ್ಲಿ ಅಲೆದಾಡುತ್ತಿದ್ದಾರೆ.. ಇದು ವ್ಯಸ್ಥೆಯ ಕ್ರೌರ್ಯವಲ್ಲದೆ ಇನ್ನೇನು?
ರೋಗ ನಿಯಂತ್ರಣಕ್ಕೆ ಸಭೆ, ಸಮಾರಂಭ, ಸಿನಿಮಾ ಹಾಲ್, ಬೃಹತ್ ಮಾಲ್ ಗಳನ್ನು ಮುಚ್ಚಿಸಿ, ನಿಗದಿತ ಮಾರ್ಗದಲ್ಲಿ ತಪಾಸಣೆ ಮಾಡಿ ಸ್ಥಳಿಯರ ಓಡಾಟಕ್ಕೆ ಅನುವು ಮಾಡಿಕೊಡಬಹುದಿತ್ತು. ಅದೇ ರೀತಿ ದಿನಸಿ ಅಂಗಡಿ ವಸ್ತುಗಳನ್ನು ಸರಬರಾಜು ಮಾಡುವ ಮಂಡಿಗಳಿಗೆ ನಿಗದಿತ ಅವಧಿಗೆ ಅವಕಾಶ ನೀಡಬಹುದಿತ್ತು., ಇವೆಲ್ಲವನ್ನೂ ಬದಿಗೆ ಸರಿಸಿ ತರಕಾರಿ, ಮತ್ತು ಹಣ್ಣಿನ ಮಾರುಕಟ್ಟೆಗಳನ್ನು ಮುಚ್ಚಿಸಿ, ಕಾರ್ಮಿಕರ ಜೊತೆಗೆ ರೈತರಿಗೂ ಈ ಸರ್ಕಾರ ಬರೆ ಎಳಿಯಿತು.
ಕೇವಲ ಅವದೂತನಂತೆ ಅವತರಿಸಿ ರೇಡಿಯೊ ಮತ್ತು ಟಿ.ವಿಗಳಲ್ಲಿ ಭಾಷಣ ಮಾಡುವ ಪ್ರಧಾನಿಗೆ ರಾಜ್ಯ ಸರ್ಕಾರಗಳಿಗೆ ಯಾವುದೇ ಆರ್ಥಿಕ ನೆರವು ನೀಡುವ ಮನಸ್ಸಿಲ್ಲ, ಕಳೆದ ಆಗಸ್ಟ್ ನಲ್ಲಿ ಕರ್ನಾಟಕದಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ 50 ಸಾವಿರ ಕೋಟಿ ಪರಿಹಾರಕ್ಕೆ ಮನವಿ ಸಲ್ಲಿಸಿದರೆ, ಕೇಂದ್ರದಿಂದ ದೊರೆತ ಪರಿಹಾರ ಎರಡು ಕಂತುಗಳಲ್ಲಿ ( 600+1200) ಬರ ಪರಿಹಾರವೂ ಸೇರಿ ಕೇವಲ 1800 ಕೋಟಿ ರೂಪಾಯಿಗಳು ಮಾತ್ರ. ಕರ್ನಾಟಕದಿಂದ ಆಯ್ಕೆಯಾಗಿ ಹೋಗಿರುವ ಇಪ್ಪತ್ತೈದು ಬಿ.ಜೆ.ಪಿ. ಸಂಸದರು ಬಾಯಿಗೆ ಬಗನಿ ಗೂಟ ಜಡಿದುಕೊಂಡು ಮೌನವಾಗಿದ್ದಾರೆ.
ಇಡೀ ದೇಶದಲ್ಲಿ ಕೊರನಾ ಸೊಂಕಿನಲ್ಲಿ ಮೂರನೇ ಸ್ಥಾನದಲ್ಲಿರುವ ಕರ್ನಾಟಕಕ್ಕೆ ಪರಿಹಾರ ಸಿಕ್ಕಿಲ್ಲಿ. ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕೇಂದ್ರ ಸರ್ಕಾರ ಏನೂ ಕೊಡದಿದ್ದರೂ ಚಿಂತೆ ಇಲ್ಲ, ಅವರನ್ನು ಅಧಿಕಾರದ ಕುರ್ಚಿಯಿಂದ ಕದಲಿಸದಿದ್ದರೆ ಸಾಕು ಎಂಬ ಮನಸ್ಥಿತಿಯಲ್ಲಿದ್ದಾರೆ. ಇಂತಹವರನ್ನ ಆಯ್ಕೆ ಮಾಡಿಕಳಿಸಿದ ಗೋಮೂತ್ರ, ಸಗಣಿ, ಶಂಖ ಮತ್ತು ಜಾಗಟೆಯ ಗಿರಾಕಿಗಳು ಒಮ್ಮೆ ಎದೆಮುಟ್ಟಿಕೊಂಡು ತಮ್ಮ ಆತ್ಮಸಾಕ್ಷಿಯನ್ನು ಪರೀಕ್ಷಿಸಿಕೊಳ್ಳಬೇಕು.
ಬಿ.ಎಲ್. ಸಂತೋಷ್ ಎಂಬ ಅವಿವೇಕಿಯೊಬ್ಬನನ್ನು ಬಿ.ಜೆ.ಪಿ. ಪಕ್ಷದ ರಾಷ್ಟ್ರಮಟ್ಟದ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಈತ ಎಂತಹ ವಿಕೃತ ಮನಸ್ಥಿತಿಯವನು ಎಂದರೆ, ಬೆಂಗಳೂರು ಬಳಿಯ ಅತ್ತಿಬೆಲೆಯ ಗಡಿಯಿಂದ ತಮಿಳುನಾಡಿನ ಚೆನ್ನೈ ನಗರ ಕೇವಲ ನೂರು ಕಿಲೊಮೀಟರ್ ಗಿಂತಲೂ ಕಡಿಮೆಯಿದೆ, ಕಾರ್ಮಿಕರು ನಡೆದುಕೊಂಡು ಹೋಗಲಿ ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾನೆ.
ಈ ದುರಂಕಾರಿಗೆ ಬೆಂಗಳೂರು-ಚೆನ್ನೈ ನಡುವಿನ ಅಂತರ 347 ಕಿ.ಮಿ. ಎಂಬ ಕನಿಷ್ಠ ಜ್ಞಾನವೂ ಇಲ್ಲ. ಭೌಗೂಳಿಕ ಜ್ಞಾನವಿಲ್ಲದ ಇಂತಹ ಜಾತಿಯ ಕ್ರಿಮಿಗಳು ಈಗ ರಾಷ್ಟ್ರ ಮಟ್ಟದಲ್ಲಿ ನಾಯಕರಾಗಿ ಬೆಳೆಯುತ್ತಿದ್ದಾರೆ. ಇವುಗಳನ್ನು ಪ್ರಶ್ನಿಸಬೇಕಾದ ಮಾಧ್ಯಮಗಳು ಈಗ ಆರ್.ಎಸ್.ಎಸ್, ನ ಶಾಖಾಮಠಗಳಾಗಿರುವ ಕಾರಣ ದಿವ್ಯ ಮೌನಕ್ಕೆ ಶರಣಾಗಿವೆ.
ಕಾಲ್ನಡಿಗೆಯಲ್ಲಿ ಹುಟ್ಟಿದ ಊರಿನತ್ತ ಪ್ರಯಾಣ ಹೊರಟ ನತದೃಷ್ಟರು, ಆಹಾರ, ನೀರು ಇಲ್ಲದೆ, ನಡುರಸ್ತೆಯಲ್ಲಿ ಬಸವಳಿಯುತ್ತಾ ಸಾಗುತ್ತಿದ್ದಾರೆ. ನಾವು ಮೌನ ಸಾಕ್ಷಿಗಳಾಗಿದ್ದೇವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್ಕಿಟ್ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.
ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.
ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.
ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್ನಾಥ್ ಜೈನ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಇಲಾಖಾ ತನಿಖೆ ನಡೆಸದೆ ಕಾಲ ವಿಳಂಬ ಮಾಡುತ್ತಿರುವ ಚಿತ್ರದುರ್ಗ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ 06 ಅರ್ಜಿ ಸಲ್ಲಿಸಿ, ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಉಪವಿಭಾಗಗಳಿಗೆ ಬಿಡುಗಡೆಯಾದ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿದ್ದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ಸದರಿ ಪ್ರಕರಣವನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿದ್ದರು.
ನಿಯಮಾನುಸಾರ ಇಲಾಖೆ ತನಿಖೆ ನಡೆಸದೆ ಕಾಲ ವಿಳಂಬ ಮಾಡುವ ಉದ್ದೇಶದಿಂದ 6 ತಾಲ್ಲೂಕು ಉಪ ವಿಭಾಗಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಆದೇಶ ಹೊರಡಿದ್ದು, ಇದರಂತೆ ವಕೀಲ ಡಾ.ಕೆ.ಎ.ಓಬಳಪ್ಪ ಇವರು ಎಲ್ಲಾ ಉಪವಿಭಾಗಗಳಿಗೆ ಭೇಟಿ ನೀಡಿ ದಾಖಲೆ ಪರಿಶೀಲನೆ ಮಾಡಿದಾಗ ದಾಖಲೆಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ.
ಈ ಬಗ್ಗೆ ಕಾರ್ಯಪಾಲಕ ಅಭಿಯಂತರರಿಗೆ ದೂರು ನೀಡಿದರೂ ನಿರ್ಲಕ್ಷö್ಯ ತೋರಿದ ಕಾರಣ, ಕರ್ತವ್ಯ ಲೋಪದ ಅಡಿಯಲ್ಲಿ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್ ಪಠ್ಯಕ್ರಮ” ಕುರಿತ ಒಂದು ದಿನದ ಕಾರ್ಯಗಾರವನ್ನು ದಿನಾಂಕ 02-03-2026 ರಂದು ಉದ್ಘಾಟಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಬಸಪ್ಪ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾವಣಗೆರೆ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಡಾ. ಲೋಕೇಶ್ ಎಂ.ಯು. ಭಾಗವಹಿಸಿ, ಎಸ್.ಇ.ಪಿ ಪಠ್ಯಕ್ರಮದ ಉದ್ದೇಶ, ವಿನ್ಯಾಸ ಮತ್ತು ಪರಿಣಾಮಕಾರಿತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಗ್ಲೀಷ್ ವಿಭಾಗದ ಸಂಯೋಜಕರಾದ ಡಾ. ಫಕ್ಕೀರೇಶ ಹಳ್ಳಳ್ಳಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.
ಈ ಕಾರ್ಯಗಾರದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪದವಿ ಕಾಲೇಜುಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಸಾಹಿತ್ಯ ಬೋಧಿಸುವ ಪ್ರಾಧ್ಯಾಪಕರು ಭಾಗವಹಿಸಿ, ಪಠ್ಯಕ್ರಮದ ಅನುಷ್ಠಾನ, ಬೋಧನಾ ವಿಧಾನಗಳು ಹಾಗೂ ಮೌಲ್ಯಮಾಪನ ಕ್ರಮಗಳ ಕುರಿತು ವಿಚಾರ ವಿನಿಮಯ ನಡೆಸಿದರು.ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಇಂಗ್ಲೀಷ್ ಪಠ್ಯಕ್ರಮ ಕುರಿತ ಮಹತ್ವದ ಕಾರ್ಯಗಾರ ಯಶಸ್ವಿ.
ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಡಾ. ಜಯಪ್ಪ, ಡಾ. ಭೀಮಪ್ಪ, ಡಾ. ಮಹೇಶ್ ನಾಯ್ಕ್, ಡಾ.ಮಧುಸೂದನ್, ಡಾ. ವಿಜಯಕುಮಾರ್, ಡಾ. ನಾಗನಗೌಡ ಹಾಗೂ ಡಾ. ಶಿವರಾಜ್, ಡಾ. ತ್ರಿವೇಣಿ, ಡಾ. ಶಶಿಕಲಾ ಉಪಸ್ಥಿತರಿದ್ದರು.
ಐ ಕ್ಯೂ ಏ ಸಿ ಸಂಯೋಜಕರು ಮತ್ತು ಆಂಗ್ಲ ವಿಭಾಗದ ಮುಖ್ಯಸ್ಥರಾದ ಡಾ. ಭೀಮಪ್ಪ ಎಂ ಪಿ ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿ ಮತ್ತು ಸ್ವಾಗತಿಸಿದರು, ಇತಿಹಾಸ ವಿಭಾಗದ ಮುಖ್ಯಸ್ಥರು ವಂದಿಸಿದರು ಮತ್ತು ಪ್ರೂ. ಮಂಜುನಾಥ ಜಿ ಕಾರ್ಯಕ್ರಮವನ್ನು ನಿರೂಪಿಸಿದರು.
ಇಂಗ್ಲೀಷ್ ಮೇಜರ್ ನಲ್ಲಿ ರ್ಯಾಂಕ್ ಪಡೆದವಿದ್ಯಾರ್ಥಿನಿಯರನ್ನು ಇಂಗ್ಲಿಷ್ ವಿಭಾಗದಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


