Connect with us

ದಿನದ ಸುದ್ದಿ

ದಾವಣಗೆರೆ | ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಹೋಟೆಲ್ ತೆರೆಯಲು ಅನುಮತಿ

Published

on

ಸುದ್ದಿದಿನ,ದಾವಣಗೆರೆ : ಕೋವಿಡ್-19 ಸಾಂಕ್ರಾಮಿಕ ರೋಗವು ತ್ರೀವ್ರತರವಾಗಿ ಹರಡುತ್ತಿರುವುದನ್ನು ತಡೆಗಟ್ಟಲು ಸರ್ಕಾರವು ಹಲವು ರೀತಿಯ ಪ್ರಯತ್ನಗಳಲ್ಲಿ ನಿರತವಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅವಶ್ಯಕ ಸಾಮಗ್ರಿಗಳನ್ನು ತಲುಪಿಸಲು ಅನುಕೂಲವಾಗುವಂತೆ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ವಾಹನಗಳ ಚಾಲನೆಗೆ ಅವಕಾಶ ನೀಡಲಾಗಿರುತ್ತದೆ.

ವಾಹನ ಚಾಲಕರಿಗೆ ಮತ್ತು ಅವರ ಸಹಾಯಕರಿಗೆ ಊಟೋಪಚಾರಕ್ಕಾಗಿ ದಾವಣಗೆರೆ ಜಿಲ್ಲೆಯಲ್ಲಿನ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಈ ಕೆಳಕಂಡ ಹೋಟೆಲ್ ಮತ್ತು ಡಾಬಾಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.

ಹೋಟೆಲ್ ಮತ್ತು ಡಾಬಾಗಳ ವಿವರ

  1. ಗ್ರೀನ್ ಪಾಯಿಂಟ್ ಪಂಜಾಬಿ ಡಾಬಾ, ಕುಂದುವಾಡ ಹತ್ತಿರ ದಾವಣಗೆರೆ ಮಾಲೀಕರು ಅಬ್ದುಲ್ ರಜಾಕ್ ದೂ.ಸಂ. 9844027001.
  2. ಶಾಂತಿಸಾಗರ ಡಾಬಾ ಪಂಚಮಸಾಲಿ ಮಠದ ಹತ್ತಿರ ದಾವಣಗೆರೆ ಮಾಲೀಕರು ರುದ್ರೇಶ್. ಹೆಚ್.ವಿ ದೂ.ಸಂ. 9945134846.
  3. ಬಸವೇಶ್ವರ ಹೋಟೆಲ್ ಅಣ್ಣಾಪುರ ಗ್ರಾಮ ದಾವಣಗೆರೆ ಮಾಲೀಕರು ರೇವಣ್ಣಸಿದ್ದಪ್ಪ ದೂ.ಸಂ. 886110388.
  4. ಪೃಥ್ವಿ ಡಾಬಾ ಬಾಡಾ ಗ್ರಾಮ ದಾವಣಗೆರೆ ಮಾಲೀಕರು ರೇವಣ್ಣಸಿದ್ದಪ್ಪ ಜೆ.ಜೆ ದೂ.ಸಂ 7619258791.
  5. ಸಂಜನ ಹೋಟೆಲ್ ಗರಗ ಕ್ರಾಸ್, ಚನ್ನಗಿರಿ ಮಾಲೀಕರು ಹೆಚ್.ವಿ ಮಂಜುನಾಥ ದೂ.ಸಂ. 9632457981.
  6. ಮಲ್ನಾಡುಸಿರಿ ಫ್ಯಾಮಿಲಿ ರೆಸ್ಟೋರೆಂಟ್ ದುದುರಕಟ್ಟೆ, ಚನ್ನಗಿರಿ ಮಾಲೀಕರು ರಾಹುಲ್.ಜೆ ದೂ.ಸಂ. 9380100677.
  7. ಬಿಂದಾಸ್ ಡಾಬಾ ಆನಗೋಡು ಹತ್ತಿರ. ದಾವಣಗೆರೆ ಮಾಲೀಕರು ಮಹಮ್ಮದ್ ರಫೀಕ್ ದೂ.ಸಂ. 8431664377.
  8. ಕಿರಣ್ ರೆಡ್ಡಿ ಫ್ಯಾಮಿಲಿ ರೆಸ್ಟೋರೆಂಟ್ ದೊಣ್ಣೇಹಳ್ಳಿ ಹತ್ತಿರ ಜಗಳೂರು ಮಾಲೀಕರು ಕಿರಣ್ ರೆಡ್ಡಿ ದೂ.ಸಂ. 9686780638.
  9. ಸಾಗರ ಸಕಾರ ಡಾಬಾ ಹನಗವಾಡಿ ಕ್ರಾಸ್ ಹತ್ತಿರ ಹರಿಹರ ಮಾಲೀಕರು ಸೈಯದ್ ಅಲ್ತಾಫ್ ದೂ.ಸಂ. 8618653670.
  10. ಅಮೃತ ಹೋಟೆಲ್ ಹದಡಿ ಗ್ರಾಮ, ದಾವಣಗೆರೆ ಮಾಲೀಕರು ಸಿ.ಹೆಚ್ ನಾಗರಾಜ್, ಮರಿಯಮ್ಮನದೇವಿ ಖಾನವಳಿ ಹಿರೇಮಳಲಿ ರಸ್ತೆ ನಲ್ಲೂರುಮಾಲೀಕರುಎನ್.ಪರಮೇಶ್ವರಪ್ಪ ದೂ.ಸಂ. 9481508631.
  11. ಬಸವೇಶ್ವರ ಹೋಟೆಲ್ ತ್ಯಾವಣಿಗೆ, ಚನ್ನಗಿರಿ ಮಾಲೀಕರು ಜಿ.ಶಿವಕುಮಾರ್ ದೂ.ಸಂ.9972036741.
  12. ಸಂತೋಷ್ ಫ್ಯಾಮಿಲಿ ರೆಸ್ಟೋರೆಂಟ್ ದೇವನಾಯಕನಹಳ್ಳಿ, ಹೊನ್ನಾಳಿ ಮಾಲೀಕರು ಎ.ಎನ್.ಸಂತೋಷ್ ದೂ.ಸಂ.9481781717.
  13. ಹೊಯ್ಸಳ ಡಾಬಾ ಸುರಹೊನ್ನೆ ನ್ಯಾಮತಿ ಮಾಲೀಕರು ಸಂಗಮೇಶ್ ದೂ.ಸಂ. 9591814339.
  14. ಈಟರ್ಸ್ ಫ್ಯಾಮಿಲಿ ರೆಸ್ಟೋರೆಂಟ್ ಗೊಲ್ಲರಹಳ್ಳಿ ದಾವಣಗೆರೆ ಮಾಲೀಕರು ಅವಿನಾಶ್ ದೂ.ಸಂ.9986935295.

ಈ ಹೋಟೆಲ್‍ಗಳಿಗೆ ಮಾತ್ರ ಅನುಮತಿಯನ್ನು ನೀಡಲಾಗಿದೆ. ಹೋಟೆಲ್ ಮಾಲೀಕರಿಗೆ ಕೆಲ ಷರತ್ತುಗಳು ಮತ್ತು ನಿಯಮಗಳನ್ನು ಸೂಚಿಸಲಾಗಿದೆ.ಗ್ರಾಹಕರೊಂದಿಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳತಕ್ಕದು, ಪರಿಶುದ್ದತೆ, ನೈರ್ಮಲ್ಯ, ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಮತ್ತು ಸ್ತಾನಿಟೈಜರ್ ಬಳಕೆ ಕಡ್ಡಾಯವಾಗಿರುತ್ತದೆ ಮತ್ತು ಕೆಲಸ ನಿರ್ವಹಿಸುವವರೆಲ್ಲರು ಕಡ್ಡಾಯವಾಗಿ ಮಾಸ್ಕ್‍ಗಳನ್ನು ಧರಿಸಕ್ಕದು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳತಕ್ಕದ್ದು.

ಮಾಲೀಕರುಗಳು ಸೇರಿದಂತೆ ಕೆಲಸಗಾರರಿಗೆ ಕೆಮ್ಮು, ಶೀತ, ಜ್ವರದ ಲಕ್ಷಣ ಕಂಡುಬಂದಲ್ಲಿ ಕೂಡಲೇ ಆರೋಗ್ಯ ಇಲಾಖೆಗೆ ತಿಳಿಸಬೇಕು. ಕುಡಿಯಲು ಬಿಸಿ ನೀರಿನ ವ್ಯವಸ್ಥೆ ಮಾಡಬೇಕು. ಶೌಚಾಲಯಗಳಲ್ಲಿ ಸ್ಯಾನಿಟೈಸರ್/ಸೋಪ್ ವ್ಯವಸ್ಯೆ ಮಾಡಬೇಕು. ಊಟ/ಉಪಾಹಾರಗಳನ್ನು ಗ್ರಾಹಕರಿಗೆ ಪಾರ್ಸಲ್ ಮೂಲಕ ಮಾತ್ರ ಮಾರಾಟ ಮಾಡುವುದು ಕಡ್ಡಾಯವಾಗಿರುತ್ತದೆ. ಕುಳಿತು ತಿನ್ನುವುದಕ್ಕೆ ಅವಕಾಶವಿರುವುದಿಲ್ಲ.

ಈ ಷರತ್ತುಗಳನ್ನು ಉಲ್ಲಂಘಿಸುವವರ ಮೇಲೆ ಭಾರತೀಯ ದಂಡ ಸಂಹಿತೆಯ ಕಲಂ 188 ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಸೆಕ್ಷನ್ 51 ರಿಂದ 60 ರವರೆಗೆ ಕಾನೂನುಗಳನ್ವಯ ಕ್ರಮ ಜರುಗಿಸಲಾಗುವುದೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending