Connect with us

ದಿನದ ಸುದ್ದಿ

ಏ.14ರ ನಂತರ ಮಂಡ್ಯ ಜಿಲ್ಲೆ ಸೀಲ್ ಡೌನ್ ಆಗುತ್ತಂತೆ..? : ಶಾಸಕ ಸುರೇಶ್ ಗೌಡ

Published

on

ಸುದ್ದಿದಿನ,ಮಂಡ್ಯ : ಮಂಡ್ಯ ಜಿಲ್ಲೆಯನ್ನು ಏಪ್ರಿಲ್ 14 ರ ನಂತರ ಲಾಕ್ ಡೌನ್ ಅಲ್ಲ ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗುತ್ತದೆ ಎಂದು ನಾಗಮಂಗಲ ಶಾಸಕ ಸುರೇಶ್ ಗೌಡ ಮುನ್ಸೂಚನೆಯನ್ನು ನೀಡಿದ್ದಾರೆ.

ತಾಲ್ಲೂಕಿನ ನಿರ್ಗತಿಕರಿಗೆ , ಬಡವರಿಗೆ ಮತ್ತು ಆಹಾರ ಸಾಮಾಗ್ರಿ ಕಿಟ್ ಮತ್ತು ಮಾಸ್ಕ್ ಗಳನ್ನು ಸಾರ್ವಜನಿಕರಿಗೆ ವಿತರಣೆ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಲಾಕ್ ಡೌನ್ ಸರಿಯಾಗಿ ಪಾಲನೆಯಾಗುತ್ತಿಲ್ಲ ಆಗಾಗಿ ನನಗೆ ತಿಳಿದಿರುವ ಮಟ್ಟಿಗೆ ಏಪ್ರಿಲ್ 14 ರ ನಂತರ ಜಿಲ್ಲೆಯನ್ನು ಸೀಲ್ ಡೌನ್ ಮಾಡಲಾಗುತ್ತದೆ ಎಂಬ ಮಾಹಿತಿ ಬಂದಿದೆ ಎಂದು ಹೇಳಿಕೆಯನ್ನು ನೀಡಿದರು.

ಮನುಷ್ಯನ ಜೀವ ಉಳಿದುಕೊಳ್ಳ ಬೇಕಾದರೆ ಸೀಲ್ ಡೌನ್ ಅವಶ್ಯಕತೆ ಇದೆ ಅದಕ್ಕೆ ಕ್ಷೇತ್ರದ ಎಲ್ಲರ ಸಹಕಾರ ಬೇಕು ಮತ್ತು ಬೇರೆ ದಾರಿ ಯಾವುದು ಇಲ್ಲ ಎಂದು ಅಭಿಪ್ರಾಯಪಟ್ಟರು. ಮತ್ತು ನಮ್ಮ ತಾಲ್ಲೂಕಿನಲ್ಲಿ ಯಾವುದೇ ಕೊರೊನಾ ಸೋಂಕಿತ ವ್ಯಕ್ತಿಗಳು ಇಲ್ಲ ಅನ್ನೋ ನೆಮ್ಮದಿ ಇದ್ದರೂ ಸಹ ಮುಂದೆ ಬರೋದಿಲ್ಲ ಅನ್ನೋದು ಏನು ಗ್ಯಾರಂಟಿ ಅದಕ್ಕೋಸ್ಕರ ಪ್ರತಿಯೊಬ್ಬ ನಾಗರೀಕರು ಸಹ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಹಾಗೂ ನನ್ನ ತಾಲ್ಲೂಕಿನಲ್ಲಿ ಆ ಖಾಯಿಲೆ ಬರದೆ ಇರೋದಕ್ಕೆ ಜನರು ಸಹಕಾರ ಕೊಟ್ಟಿದ್ದಾರೆ ಅನ್ನೋದನ್ನ ಭಾವಿಸುತ್ತೇನೆ ಹಾಗೂ ಮುಂದೆಯೂ ಇದೇರೀತಿ ಪಾಲನೆ ಮಾಡಬೇಕು ಮತ್ತು ಅವರಿಗೆ ಏನೇ ತೊಂದರೆಯಾದರೂ ಅದಕ್ಕೆ ತಾಲ್ಲೂಕಿನಲ್ಲಿ ಜನಪ್ರತಿನಿಧಿಗಳು ಇದ್ದೇವೆ ಮತ್ತು ಮಿನಿ ವಿಧಾನಸೌಧದಲ್ಲಿ ವಾರ್ ರೂಂ ನ್ನು ಸಹ ತೆರೆಯಲಾಗಿದೆ ಆದ್ದರಿಂದ ಸಾರ್ವಜನಿಕರು ಪೋನ್ ಮೂಲಕ ತಮ್ಮ ಸಮಸ್ಯೆ ತಿಳಿಸಿದರೆ ತಕ್ಷಣವೇ ತಾಲ್ಲೂಕು ಆಡಳಿತ ಸ್ಪಂದಿಸುತ್ತದೆ ಎಂದು ತಿಳಿಸಿದರು.

ಹಾಗೂ ತಾಲೂಕಿನ ಅಧಿಕಾರಿಗಳು ರೋಗ ಹರಡದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ ಮತ್ತು ಹೋಂ ಕ್ಟಾರೆಂಟೈನ್ ನಲ್ಲಿ ಇರುವ ವ್ಯಕ್ತಿಗಳ ಜೊತೆ ಸಂಪರ್ಕ ಮಾಡುತ್ತಿರುವ ಫ್ರಂಟ್ ಲೈನ್ ಅಧಿಕಾರಿಗಳಿಗೆ 6000 ಮಾಸ್ಕ್ ಗಳನ್ನು ನೀಡಲಾಗುತ್ತಿದೆ ಎಂದರು.

ರೈತರು ಬೆಳೆದಿರುವ ತರಕಾರಿ, ಹಣ್ಣುಗಳನ್ನು ಜನಪ್ರತಿನಿಧಿಗಳು ತಮ್ಮ ಸ್ವಂತ ಹಣದಲ್ಲಿ ಖರೀದಿ ಮಾಡಿ ಸಾರ್ವಜನಿಕರಿಗೆ ಉಚಿತವಾಗಿ ನೀಡಲಾಗುತ್ತದೆ ಎಂದರು.

ಇದೇ ವೇಳೆ ವಿಧಾನ ಪರಿಷತ್ ಸದಸ್ಯ ಅಪ್ಪಾಜಿಗೌಡ , ತಹಶೀಲ್ದಾರ್ ಕುಂಞ ಅಹಮದ್ , ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಧನಂಜಯ , ಮುಖ್ಯಾಧಿಕಾರಿ ಕೃಷ್ಣ ಪ್ರಸಾದ್ , ಪಿಎಸ್ಐ ರವಿ ಕಿರಣ್ ಇತರರು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending