Connect with us

ದಿನದ ಸುದ್ದಿ

ಲಾಕ್ ಡೌನ್ ತೀರದ ಸಂಕಷ್ಟ ; ಮಂಗಳಮುಖಿಯರ ಸಮಸ್ಯೆಗೆ ಜಿ.ಪಂ ಸದಸ್ಯ ಬಸವಂತಪ್ಪ ಸ್ಪಂದನೆ

Published

on

ಶುಗರ್ ಮಾತ್ರೆ ವಿತರಣೆ ಮಾಡಿದ ಜಿಲ್ಲಾ ಪಂಚಾಯತ್‌ ಸದಸ್ಯ ಬಸವಂತಪ್ಪ.

ಸುದ್ದಿದಿನ,ದಾವಣಗೆರೆ : “ನನಗೆ ವಯಸ್ಸಾಗಿದೆ, ಶುಗರ್‌ ಇದೆ, ಕೈ,ಕಾಲು ನೋವು ಹೊರಹೋಗಲು ಆಗುತ್ತಿಲ್ಲ, ಅಂಗಡಿಗಳು ಲಾಕ್‌ಡೌನ್‌ ಆಗಿರುವುದರಿಂದ ಕಲೆಕ್ಷನ್‌ ಕೂಡ ಇಲ್ಲ. ಶುಭ ಕಾರ್ಯಗಳಲ್ಲಿ ಚೂರು-ಪಾರು ಹಣ ಸಿಗುತ್ತಿತ್ತು. ಆ ದುಡಿಮೆಯೋ ಇಲ್ಲ. ಹೇಗೋ ಹಸಿವು ನೀಗಿಸಿಕೊಳ್ಳುತ್ತೇವೆ. ಆದರೆ ಮಾತ್ರೆ ತೆಗೆದುಕೊಳ್ಳಲು ಹಣವೂ ನಮ್ಮಲ್ಲಿ ಇಲ್ಲದ ಕಾರಣ ಪರದಾಡಬೇಕಾದ ಸ್ಥಿತಿ ಇದೆ“. ಹೌದು, ಇಂತಹ ಮಾತುಗಳನ್ನು ನಗರದಿಂದ ಆರೇಳು-ಕಿಲೋ ಮೀಟರ್‌ ದೂರದಲ್ಲಿನ ಮಲ್ಲಶೆಟ್ಟಿಹಳ್ಳಿ ಹೋಗುವ ದಾರಿಯಲ್ಲಿರುವ ಮನೆಯೊಂದರಲ್ಲಿ ವಾಸವಾಗಿರುವ ಮಂಗಳಮುಖಿ ನಂದನಮ್ಮ ನೋವಿನಿಂದ ನುಡಿಯುತ್ತಾರೆ.

ಲಾಕ್‌ ಡೌನ್‌ ಒಂದು ಕಡೆ ಕೂಲಿ ಕಾರ್ಮಿಕರು, ಅಸಂಘಟಿತರ ವಲಯದ ಆರ್ಥಿಕತೆಯನ್ನು ಮಕಾಡೆ ಮಲಗಿಸಿದೆ. ಆದರೆ ಈ ವಲಯವನ್ನೇ ನಂಬಿಕೊಂಡು ಬದುಕುತ್ತಿದ್ದ ಮಂಗಳಮುಖಿಯರ ಪಾಡು ಹೇಳತೀರದ್ದಾಗಿದೆ. ಕೆಲವರಿಗೆ ಬಿಪಿ ಇದ್ದರೆ, ಇನ್ನೂ ಕೆಲವರಿಗೆ ಶುಗರ್‌ ಸೇರಿದಂತೆ ದೇಹಕ್ಕೆ ಸಂಬಂಧಿಸಿದ ಕಾಯಿಲೆಗಳು ಇದೆ. ಆದರೆ ಅವುಗಳನ್ನು ಗುಣಪಡಿಸಿಕೊಳ್ಳಲು ಅವರ ಬಳಿ ಹಣ ಇಲ್ಲ.
ನಮಗೆ ಅಂಗಡಿ ಮಾಲೀಕರೇ ಧಣಿಗಳು. ಆ ಧಣಿಗಳೇ ಈಗ ಅಂಗಡಿ ಬಾಗಿಲು ಹಾಕಿದ್ದಾರೆ.ಅವರೇ ಈಗ ಕಷ್ಟದಲ್ಲಿದ್ದಾರೆ. ಇಂತದ್ದರಲ್ಲಿ ನಮ್ಮ ಕಷ್ಟ ಯಾವ ಲೆಕ್ಕ. ಅವರು ಚೆನ್ನಾಗಿ ಇದ್ದರೇ, ನಾವು ಚೆನ್ನಾಗಿ ಇರುತ್ತೇವೆ.

ಆದರೀಗ ಅವರೂ ಚೆನ್ನಾಗಿಲ್ಲ, ನಾವೂ ಚೆನ್ನಾಗಿಲ್ಲ. ನಾವು ಕೂಡ ಮನುಷ್ಯರು, ಹೊಟ್ಟೆಪಾಡಿಗಾಗಿ ಜನರ ಬಳಿ ಭಿಕ್ಷೆ ಬೇಡುತ್ತೇವೆ. ಆದರೀಗ ಅದು ಇಲ್ಲ. ನ್ಯಾಯದ ಮೂಲಕ ದುಡಿಯುತ್ತಿದ್ದೇವೆ. ಕೆಲವರು ನಮ್ಮನ್ನು ಕೆಟ್ಟದಾಗಿ ನೋಡುತ್ತಾರೆ. ಆದ್ದರಿಂದ ಸರಕಾರ ನಮ್ಮ ಧ್ವನಿ ಕೇಳಿಸಿಕೊಂಡು ನಮಗೆ ಸೂರು, ಪಡಿತರ, ಆರೋಗ್ಯ ಕಾರ್ಡ್‌ ನೀಡಬೇಕು ಎಂದು ಮಂಗಳಮುಖಿಯರು ಒತ್ತಾಯಿಸುತ್ತಾರೆ.

ಜಿಲ್ಲೆಯಲ್ಲಿ ಅಂದಾಜು 200ಕ್ಕೂ ಹೆಚ್ಚು ಮಂಗಳಮುಖಿಯರು ಇದ್ದು, ಹಲವರು ಉಚ್ಚಂಗಿ ದುರ್ಗ, ಬಾಡಾಕ್ರಾಸ್‌, ಮಂಡಿಪೇಟೆ,ಹಳೆಪೇಟೆ, ಜಯದೇವಸರ್ಕಲ್‌, ಜನದಟ್ಟಣೆ ಪ್ರದೇಶದಲ್ಲಿ ಹೋಗಿ ಜನರು ಕೊಟ್ಟ ಹಣವನ್ನು ತೆಗೆದುಕೊಳ್ಳುತ್ತಿದ್ದರು. ಆದರೀಗ ಕೊರೊನಾ ಸೊಂಕು ಹಿನ್ನೆಲೆಯಲ್ಲಿ ಯಾರು ಕೂಡ ಹೊರಗೆ ಬರುತ್ತಿಲ್ಲದ ಕಾರಣ ಅವರ ಬಳಿ ಹಣವೇ ಇಲ್ಲವಾಗಿದೆ.

ಅಂಗಡಿಗಳು ಬಾಗಿಲು ತೆಗೆದಿದ್ದ ವೇಳೆ ಪ್ರತಿ ದಿನ 200 ರೂ. ನಿಂದ 300 ರೂ. ಸಂಪಾದಿಸುತ್ತಿದ್ದರು. ಅಲ್ಲದೇ ಶುಭಸಮಾರಂಭಗಳಲ್ಲಿಯೂ ಅವರಿಗೆ ಹೆಚ್ಚು ಹಣ ಬರುತ್ತಿತ್ತು. ಎಲ್ಲರೂ ಒಟ್ಟುಗೂಡಿ ಜೀವನ ನಡೆಸುತ್ತಿದ್ದರು. ಆದರೀಗ ಕೈಯಲ್ಲಿ ಹಣವಿಲ್ಲ. ತುರ್ತು ಪರಿಸ್ಥಿತಿಯಲ್ಲಿ ಅವರ ರೋಧನೆ ಹೇಳತೀರದ್ದಾಗಿದೆ.

ಗೋಡೌನ್‌ ರೀತಿಯಲ್ಲಿ ಇರುವ ಮನೆಯಲ್ಲಿ ಏಳರಿಂದ-ಎಂಟು ಜನ ಒಟ್ಟಿಗೆ ಇದ್ದಾರೆ. ಶೌಚಾಲಯ ಒಂದೇ ಇದೆ. ಓಡಾಡುವುದಕ್ಕೆ ಸಾರಿಗೆ ಸೌಲಭ್ಯವೂ ಇಲ್ಲ. ಬಿಪಿಎಲ್‌ ಕಾರ್ಡ್‌ ಸೌಲಭ್ಯವು ಇಲ್ಲದ ಕಾರಣ ಪಡಿತರ ಸಿಗುವುದು ಕಷ್ಟವಾಗಿದೆ. ಜಿಲ್ಲಾಡಳಿತ, ಸಂಘ ಸಂಸ್ಥೆಗಳು ಕೊಡುವ ಆಹಾರವನ್ನೇ ಸದ್ಯ ಉಪಯೋಗಿಸುತ್ತಿದ್ದಾರೆ. ಇದು ಕೂಡ ಕೆಲವೇ ದಿನಗಳಲ್ಲಿ ಖಾಲಿಯಾಗಲಿದ್ದು, ಮುಂದೇನೂ ಎಂಬ ಪ್ರಶ್ನೆ ಸದ್ಯ ಉಳಿದಿದೆ.

  • ನಾವು ಮಂಗಳಮುಖಿಯರು, ಭಿಕ್ಷೆ ಬೇಡುತ್ತಿದ್ದ ನಮಗೆ ಈಗ ಕೆಲಸವಿಲ್ಲ. ನನಗೆ ಶುಗರ್‌ ಇದೆ. ಶುಗರ್‌ ಮಾತ್ರೆ ತರೋದಕ್ಕೆ ಸಾರಿಗೆ ಸೌಲಭ್ಯವೂ ಇಲ್ಲ, ಹಣವೂ ಇಲ್ಲ. ಜಿಲ್ಲಾ ಪಂಚಾಯಿತಿ ಸದಸ್ಯ ಬಸವಂತಪ್ಪ ತಂದುಕೊಟ್ಟಿದ್ದಾರೆ. ಆದರೆ ನನ್ನಂತೆಯೇ ಅನೇಕರು ಕಾಯಿಲೆಯಿಂದ ಬಳಲುತ್ತಿದ್ದು, ಅವರ ನೆರವಿಗೆ ಸರಕಾರ ಬರಲಿ.

| ನಂದನಮ್ಮ, ಮಂಗಳಮುಖಿ

  • ಮಂಗಳಮುಖಿಯರು ಹಸಿವಿನಿಂದ ಬಳಲುತ್ತಿದ್ದ ಕಾರಣ ಅವರಿಗೆ ಆಹಾರದ ಕಿಟ್‌ ನೀಡಲಾಗಿದೆ. ಮಂಗಳಮುಖಿಯೊಬ್ಬರು ಶುಗರ್‌ದಿಂದ ಬಳಲುತ್ತಿದ್ದು , ಅವರಿಗೆ ಸಿಟಿಯಿಂದ ತಂದು ಕೊಡಲಾಗಿದೆ.

| ಬಸವಂತಪ್ಪ, ಜಿಲ್ಲಾ ಪಂಚಾಯತ್‌ ಸದಸ್ಯ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

Published

on

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.

ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ  2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆಶ್ರಯ ಯೋಜನೆ – ಆವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್‌ ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

Published

on

ಗಿರೀಶ್ ಮುತ್ತು

ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು

ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.

ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.

ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್‌ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.

ಗರಿಕೆ ರಸದ ಪ್ರಯೋಜನಗಳು

1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.

2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ

4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.

5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್‌ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.

6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.

ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?

*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.

* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.

* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.

* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.

* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending