Connect with us

ರಾಜಕೀಯ

‘ಗುಂಡಿಕ್ಕಿ ಕೊಲ್ಲಿ’ ಎನ್ನುವವರ ಮಧ್ಯೆ ಮಾನವೀಯತೆ..!

Published

on

ಕೋವಿಡ್-19 ವೈರಸ್ ಇಡೀ ವಿಶ್ವವನ್ನೇ ವ್ಯಾಪಿಸುತ್ತಿರುವ ಸಂದರ್ಭದಲ್ಲಿ ಏಪ್ರಿಲ್ 7 ರಂದು ದಾವಣಗೆರೆಯಲ್ಲಿ ಕೊರೊನಾ ‘ಚಿಕಿತ್ಸೆಗೆ ಸಹಕರಿಸದ ತಬ್ಲೀಗಿಗಳಿಗೆ ಗುಂಡಿಕ್ಕಿದರೂ ತಪ್ಪಲ್ಲ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಮತ್ತು ಶಾಸಕ ಬಸನಗೌಡಪಾಟೀಲ್ ಯತ್ನಾಳ್ ಹೇಳಿಕೆ ಇಡೀ ಮನುಕುಲವೆಂಬ ಹಾಲಿನ ಪಾತ್ರೆಗೆ ಹುಳಿ ಹಿಂಡುವ ಕಾರ್ಯವೇ ಸರಿ.

ಅವರ ಹೇಳಿಕೆ ನಂತರ ದೇಶದಲ್ಲಿ ಎರಡು ಘಟನೆಗಳು ನಡೆದವು. ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಲೋಯೈತೊಲದಲ್ಲಿ 100ಕ್ಕೂ ಹೆಚ್ಚು ಕುಟುಂಬಗಳ ನಡುವೆ ವಾಸಿಸುತ್ತಿರುವ ಏಕೈಕ ಹಿಂದೂ ಕುಟುಂಬದ ಹಿರಿಯ ಜೀವ ವಿನಯ್ ಸಾಹಾ (90) ವಯೋಸಹಜ ಅನಾರೋಗ್ಯದಿಂದ ಮೃತಪಟ್ಟರು. ಲಾಕ್‍ಡೌನ್ ಇರುವ ಸಂದರ್ಭದಲ್ಲಿ ಅಂತ್ಯ ಸಂಸ್ಕಾರ ಮಾಡುವುದು ಹೇಗೆಂದು ಮಕ್ಕಳು ಚಿಂತಿಸುತ್ತಿರುವ ಸಂದರ್ಭದಲ್ಲಿ ನೆರೆಮನೆಯ ಸದ್ದಾಂ ಶೇಖ್ ಸೇರಿದಂತೆ ಅನೇಕ ಮುಸ್ಲಂ ಸಹೋದರರು ನೆರವಾಗಿ ಹೆಗಲುಕೊಟ್ಟು ‘ರಾಮ್ ನಾಮ್ ಸತ್ಯ ಹೇ’ ಎಂದು ಜಪಿಸಿ ಸೌಹಾರ್ದ ಮೆರೆದರು.

ಇದೇ ರೀತಿ ಮುಂಬೈನಲಿ ಜೈನ ಸಮುದಾಯಕ್ಕೆ ಸೇರಿದ ಪ್ರೇಮಚಂದ್ ಬುದ್ಧಲಾಲ್ ಮಹಾವೀರ್ (68) ಮೃತಪಟ್ಟಾಗ ಲಾಕ್‍ಡೌನ್‍ನಿಂದ ಸಂಬಂಧಿಕರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ಅಕ್ಕಪಕ್ಕದ ಮನೆಯ ಮುಸ್ಲಿಂ ಜನಾಂಗದ ವ್ಯಕ್ತಿಗಳೇ ಅಂತ್ಯಕ್ರ್ರಿಯೆಯಲ್ಲಿ ಭಾಗವಹಿಸಿ ಸಹಾಯ ಮಾಡಿದ್ದರು. ಈ ಎರಡೂ ಘಟನೆಗಳು ‘ಮನುಷ್ಯ ಜಾತಿ ತಾನೊಂದೆ ಒಲಂ’ ಎಂದು ಪಂಪ ಹೇಳಿದ ಮಾತಿಗೆ ಸಾಕ್ಷಿಯಾಯಿತು.

ಈ ಸುದ್ದಿಯನ್ನು ಓದಿದಾಗ ಸುಮಾರು 17 ವರ್ಷಗಳ ಹಿಂದೆ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ನಮ್ಮ ಸ್ನೇಹಿತರೇ ಬಣ್ಣ ಹಚ್ಚಿದ ನಾಟಕ ‘ರಾವಿನದಿಯ ದಂಡೆಯಲ್ಲಿ’ ನೋಡಿದ ಪ್ರಸಂಗಗಳು ನೆನಪಾದವು. ಭಾರತ-ಪಾಕಿಸ್ತಾನದ ವಿಭಜನೆಯ ಸಂದರ್ಭದಲ್ಲಿ ಭಾರತದ ಗಡಿಭಾಗದ ಮುಸ್ಲಿಂ ಸಹೋದರರು ಪಾಕಿಸ್ತಾನಕ್ಕೆ, ಪಾಕಿಸ್ತಾನದಲ್ಲಿದಲ್ಲಿನ ಹಿಂದೂಗಳು ಭಾರತಕ್ಕೆ ವಲಸೆಹೋಗುತ್ತಾರೆ. ಪಾಕಿಸ್ತಾನದಲ್ಲಿದ್ದ ಹಿಂದೂ ವೃದ್ಧೆ ರತನ್ ತಾಯಿ ಅಲ್ಲಿಯೇ ಉಳಿದುಕೊಂಡು ತನ್ನ ಮಾನವೀಯ ಸ್ಪರ್ಶದಿಂದ ಅಲ್ಲಿನ ಇಸ್ಲಾಂ ಜನರ ಹೃದಯವನ್ನು ಗೆಲ್ಲುತ್ತಾಳೆ.

ಆ ವೃದ್ಧೆಗೆ ವಯೋಸಹಜ ಕಾರಣಗಳಿಂದ ಮೃತಪಟ್ಟಾಗ ಮಕ್ಕಳು, ಸಂಬಂಧಿಕರು ಇಲ್ಲದ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಸಿಖಂದರ್ ಮಿರ್ಜಾ ಸೇರಿದಂತೆ ಅನೇಕ ಇಸ್ಲಾಂ ಧರ್ಮದ ಜನರು ಹಿಂದೂ ವಿಧಿ ವಿಧಾನದಂತೆ ‘ರಾಮ್ ನಾಮ್ ಸತ್ಯ ಹೇ’ ಎಂದು ಪಠಿಸಿ ಅಂತ್ಯಕ್ರಿಯೆ ಮಾಡುವ ಪಾತ್ರವು ಪ್ರೀತಿ ಅನುಕಂಪವನ್ನು ತುಂಬಿಕೊಂಡು ಬರುತ್ತದೆ. ಎಲ್ಲಾ ಧರ್ಮಗಳ ಸಾರ ಒಂದೇ ಎಂದು ಈ ನಾಟಕ ಬಿಂಬಿಸುತ್ತದೆ. ಶಾಂತವಾಗಿ ನಮ್ಮೊಳಗೊಂದು ಚಿಂತನೆಯನ್ನು ಬಿತ್ತುವ ಕೆಲಸವನ್ನು ಹಿಂದಿ ಲೇಖಕ ಅಸಗರ್ ವಹಾಜೀತ್ ಅವರು ರಚಿಸಿದ್ದಾರೆ.ಕನ್ನಡದಲ್ಲಿ ಡಾ. ತಿಪ್ಪೇಸ್ವಾಮಿ ತರ್ಜುಮೆ ಮಾಡಿದ್ದಾರೆ. ರಾಜ್ಯದ ಅನೇಕ ಕಡೆಗಳಲ್ಲಿ ಯಶಸ್ವಿ ಪ್ರದರ್ಶನ ಕಂಡ ನಾಟಕ ರಾವಿನದಿಯ ದಂಡೆಯಲ್ಲಿ… ಧರ್ಮ, ಸೀಮೆಗಳನ್ನು ಮೀರಿ ಮಾನವೀಯ ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ.

ಇವನಾರವ, ಇವನಾರ, ಇವನಾರವನೆಂದೆನಿಸದಿರಯ್ಯ,. ಇವ ನಮ್ಮವ, ಇವ ನಮ್ಮವ ಇವನಮ್ಮವನೆಂದೆನಿಸಯ್ಯ ಕೂಡಲಸಂಗಮದೇವಯ್ಯ. ನಿಮ್ಮ ಮನೆಯ ಮಗನೆಂದೆನಿಸಯ್ಯ.’ ಎಂದು 12ನೇ ಶತಮಾನದಲ್ಲೇ ಬಸವಣ್ಣವರು ವಚನದ ಮೂಲಕ ಸಮಾಜದ ಜನರಿಗೆ ಒಳಿತನ್ನು ಹೇಳಿದ್ದರು. ‘ಇಲ್ಲಿ ಯಾರು ಮುಖ್ಯರಲ್ಲ. ಯಾರೂ ಅಮುಖ್ಯರಲ್ಲ. ಎಲ್ಲರೂ ವಿಶ್ವಮಾನವರಾಗಿ ಬಾಳಿ’ ಎಂದು ಕುವೆಂಪು ಕರೆಕೊಟ್ಟರು. ಮಹಾತ್ಮ ಗಾಂಧಿಯವರು, ಮನುಷ್ಯ ಮತ್ತು ಪ್ರಾಣಿಗಳಿಗೆ ಇರುವ ಅಂತರವೆಂದರೆ ವಿಚಾರಶೀಲತೆ. ಆದರೆ ವಿಚಾರ ಶುದ್ಧಿಯನ್ನು ಕಾಪಾಡಿಕೊಳ್ಳಿ ಎಂದು ಜನರಿಗೆ ಮನವರಿಕೆ ಮಾಡಿಕೊಟ್ಟರು.

ಪ್ರವಾದಿ ಮುಹಮ್ಮದ್‍ರು ಹೇಳಿದಂತೆ ‘ಓ ಮಾನವರೇ, ಅರಬರು ಅರಬರೇತರಿಗಿಂತ, ಬಿಳಿಯರು, ಕರಿಯರಿಗಿಂತ ಅಥವಾ ಕರಿಯರು ಬಿಳಿಯರಿಗಿಂತ ಶ್ರೇಷ್ಠರಲ್ಲ. ದೈವ ನಿಷ್ಠೆಯೊಂದೇ ಶ್ರೇಷ್ಠತೆಗೆ ಮಾನದಂಡ’ ಮಾನವೀಯತೆ ಒಂದೇ ಮುಖ್ಯ ಎಂದು ಪ್ರತಿಪಾದಿಸಿದ್ದಾರೆ.

ಹಿಂದೂ, ಇಸ್ಲಾಂ, ಕ್ರಿಶ್ಚಿಯನ್, ಬೌದ್ಧ, ಜೈನ, ಪಾರ್ಸಿ ಧರ್ಮಗಳೆಲ್ಲವೂ ಬೋಧಿಸುವುದೊಂದೇ ಅದೇ ಮಾನವ ಧರ್ಮ. ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಾಣುವಿನ ಉಪಟಳದಿಂದ ದಿನದಿಂದ ದಿನಕ್ಕೆ ವಿಶ್ವವನ್ನೇ ಸ್ತಬ್ಧಗೊಳಿಸುತ್ತಿರುವಾಗ ಇಂತಹ ಸಂದಿಗ್ದ ಸಮಯದಲ್ಲಿ ರಾಜಕಾರಣಿಗಳು ನಿಷ್ಕಾಮ ಕರ್ಮಗಳನ್ನು ಮಾಡುತ್ತಾ ಹೋದಹಾಗೆಲ್ಲ ಮನುಷ್ಯನ ಸಂಕಲ್ಪ ಶಕ್ತಿಯು ಉತ್ತರೋತ್ತರವಾಗಿ ಬೆಳೆಯುತ್ತಾ ಹೋಗಿ ಬಾಹ್ಯ ಕರ್ಮಗಳೆಲ್ಲವೂ ಕಡಿಮೆಯಾಗತೊಡಗುತ್ತವೆ.

ಪ್ರಚಾರ ಗಿಟ್ಟಿಸಿಕೊಳ್ಳಲು ನಾಲಿಗೆ ಹರಿಬಿಟ್ಟು ಕೀಳುಮಟ್ಟದ ಮಾತುಗಳನ್ನಾಡಿ ರಾಜಕೀಯ ಮಾಡುವ ಬದಲು ಕಣ್ಣಿಗೆ ಕಾಣದ ಕೋವಿಡ್-2 ಅನ್ನು ದೂರಮಾಡಲು ಯೋಜನೆಗಳನ್ನು ರೂಪಿಸಿ. ಸಾಮಾಜಿಕವಾಗಿ, ಮಾನಸೀಕವಾಗಿ, ಆರ್ಥಿಕವಾಗಿ ಅಧೀರಾಗಿರುವ ನಿಮ್ಮ ಜನರಿಗೆ ಮನೋಸ್ಥೈರ್ಯ ತುಂಬು ಕಾರ್ಯಮಾಡಿದರೆ ಮನುಕುಲಕ್ಕೆ ಅರ್ಥ ಬಂದೀತು.

ನಿಮಗೆ ವೋಟ್ ಹಾಕಿರುವ ಜನರಿಗೆ ನ್ಯಾಯ ಒದಗಿಸುವ ಕಾರ್ಯ ನಿಮ್ಮಿಂದಾಗಬೇಕು. ಅದು ಬಿಟ್ಟು ಬೇಕಾಬಿಟ್ಟು ಮಾತುಗಳನ್ನು ಹರಿಬಿಟ್ಟು ಮನುಷ್ಯತ್ವದ ವಿರುದ್ಧವಾಗಿ ನಡೆದುಕೊಂಡರೆ ಅದು ಶೋಭೆತರುವಂತದ್ದಲ್ಲ. ಇಂತಹ ಸಂದರ್ಭದಲ್ಲಿ ಜನಾಭಿಪ್ರಾಯವನ್ನು ಧಿಕ್ಕರಿಸುವ ಸರ್ಕಾರವನ್ನು ಮುಂದೊಂದು ದಿನ ಜನರೂ ಧಿಕ್ಕರಿಸುತ್ತಾರೆ ಎನ್ನುವ ಅರಿವು ನಿಮ್ಮಲ್ಲಿದ್ದರೆ ಒಳ್ಳೆಯದು.

ಅನೇಕ ರಾಜಕಾರಣಿಗಳು ಕೋವಿಡ್-19 ಸಂಕಷ್ಟದಲ್ಲಿ ಸಿಲುಕಿರುವ ಜನರಿಗೆ ನೆರವಾಗಲು ಅಕ್ಕಿ, ಬೇಳೆ ಇತರೆ ಅಗತ್ಯ ವಸ್ತುಗಳನ್ನು ಕೊಡವುದು ಸರಿ. ಆದರೆ ಆ ಪ್ಯಾಕೇಟ್‍ಗಳ ಮೇಲೆ ತಮ್ಮ ಫೋಟೋವನ್ನು ಹಾಕಿ ಪ್ರಚಾರಕ್ಕೋಸ್ಕರ ಜನರಿಗೆ ಸಹಾಯ ಮಾಡುವುದು ಜನನಾಯಕನ ಲಕ್ಷಣವೇ? ಕೊರೋನಾ ವೈರಸ್ ಜಗತ್ತನ್ನೇ ಬಾಧಿಸುತ್ತಿರುವ ಹೊತ್ತಿನಲ್ಲಿ ಮನುಷ್ಯ ಕೆಲ ಘಟನೆಗಳು ಮನುಷ್ಯನ ಮಧ್ಯೆ ಮಾನವೀಯ ಸಂಬಂಧಗಳನ್ನು ವೃದ್ಧಿಸುತ್ತಿದೆ. ಒಂದು ಸಮುದಾಯವನ್ನು ಗುರಿಯಾಗಿರಿಸಿ ಸುಳ್ಳು ಸುದ್ದಿ ಹಬ್ಬಿಸುವುದು, ಪ್ರಚೋದನಾಕಾರಿ ಮಾತನಾಡುವುದು ಶೋಭೆತರುವಂತದ್ದಲ್ಲ. ಮನುಷ್ಯ ಎಷ್ಟರಮಟ್ಟಿಗೆ ಇತರರ ಒಳ್ಳೆಯದಕ್ಕೆ ದುಡಿಯುತ್ತಾನೋ ಅಷ್ಟರ ಮಟ್ಟಿಗೆ ಅವನು ದೊಡ್ಡವನಾಗುತ್ತಾನೆ. ನಮ್ಮನ್ನು ಪ್ರೀತಿಸುವವರನ್ನು ನಾವು ಪ್ರೀತಿಸುವುದು ದೊಡ್ಡದಲ್ಲ. ನಮ್ಮನ್ನು ದ್ವೇಷಿಸುವವರನ್ನು ಪ್ರೀತಿಸುವುದು ದೊಡ್ಡತನ. ಪ್ರೇಮದ ಚೂರಿಯಿಂದ ಶಾಂತಿ ಸ್ಥಾಪನೆಯಾಗಬೇಕೇ ವಿನಃ ಗುಂಡಿನ ಬಲದಿಂದಲ್ಲ.

ಲೇಖಕರು : ಸೋಮನಗೌಡ ಎಸ್.ಎಂ ಕಟ್ಟಿಗೆಹಳ್ಳಿ ಜಗಳೂರು ತಾಲ್ಲೂಕು ದಾವಣಗೆರೆ ಜಿಲ್ಲೆ 9945986049

 

 

 

 

 

ದಿನದ ಸುದ್ದಿ

ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.

ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.

ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!

Published

on

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

  • ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ
  • ಇಂಡಿಯಾ ಗೇಟ್‌ನಿಂದ ಪೊಲೀಸ್ ಕೇಂದ್ರ ಕಚೇರಿವರೆಗೆ ಮೆರವಣಿಗೆ
  • NEET ಅಭ್ಯರ್ಥಿಗಳ ಕುಟುಂಬಸ್ಥರು, ಪೊಲೀಸ್ ದೌರ್ಜನ್ಯ ಸಂತ್ರಸ್ತರು ಮುಂಚೂಣಿಯಲ್ಲಿ
  • “ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ” ಎಂದ CJP 

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಸುದ್ದಿದಿನ,ನವದೆಹಲಿ: ದೇಶದ ಯುವಜನರಿಗೆ ನೀಡಿರುವ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಕ್‌ರೋಚ್ ಜನತಾ ಪಾರ್ಟಿ (CJP) ಸೆಪ್ಟೆಂಬರ್ 5ರಂದು ನವದೆಹಲಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಲು ಕರೆ ನೀಡಿದೆ. ಜುಲೈ 25ರಂದು ಸಾರ್ವಜನಿಕವಾಗಿ ನೀಡಲಾಗಿದ್ದ ಭರವಸೆಗಳಿಗೆ ಒಂದು ತಿಂಗಳು ಕಳೆದರೂ ಅವುಗಳ ಅನುಷ್ಠಾನಕ್ಕೆ ಸ್ಪಷ್ಟ ಕ್ರಮಗಳು ಗೋಚರಿಸುತ್ತಿಲ್ಲ ಎಂಬುದು CJPಯ ಪ್ರಮುಖ ಆರೋಪವಾಗಿದೆ.

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಸರ್ಕಾರ ಹಾಗೂ ಬಿಜೆಪಿ-ಎನ್‌ಡಿಎ ಆಡಳಿತದ ರಾಜ್ಯಗಳು ಯುವಜನರಿಗೆ ನೀಡಿದ್ದ ಭರವಸೆಗಳ ಅನುಷ್ಠಾನವನ್ನು ಪರಿಶೀಲಿಸಿದ ಬಳಿಕ ಪ್ರತಿಭಟನೆ ನಡೆಸುವ ನಿರ್ಧಾರವನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಪಕ್ಷ ತಿಳಿಸಿದೆ.

http://Visit : www.suddidina.com

ಇಂಡಿಯಾ ಗೇಟ್‌ನಿಂದ ಮೆರವಣಿಗೆ

ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ನವದೆಹಲಿ ಪೊಲೀಸ್ ಕೇಂದ್ರ ಕಚೇರಿಯತ್ತ ಸಾಗಲಿದೆ. ಮೃತ NEET ಅಭ್ಯರ್ಥಿಗಳ ಕುಟುಂಬಸ್ಥರು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರು ಮೆರವಣಿಗೆಯ ಮುಂಚೂಣಿಯಲ್ಲಿ ಸಾಗಲಿದ್ದಾರೆ ಎಂದು CJP ಹೇಳಿದೆ.

ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಯುವ ಸಂಘಟನೆಗಳ ಪ್ರತಿನಿಧಿಗಳು ಮತ್ತು ಯುವಜನರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸರ್ಕಾರ ನೀಡಿದ್ದ ಭರವಸೆಗಳನ್ನು ಜಾರಿಗೆ ತರಬೇಕು ಎಂಬ ಒಂದೇ ಪ್ರಮುಖ ಬೇಡಿಕೆಯೊಂದಿಗೆ ಯುವಜನರು ಶಾಂತಿಯುತವಾಗಿ ಧ್ವನಿ ಎತ್ತಲಿದ್ದಾರೆ ಎಂದು ಪಕ್ಷ ಹೇಳಿದೆ.

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

‘ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ’

ಜುಲೈ 25ರಂದು ನೀಡಿದ ಭರವಸೆಗಳನ್ನು ನಂಬಿ ದೇಶಾದ್ಯಂತ ನಡೆದಿದ್ದ ಪ್ರತಿಭಟನೆಗಳನ್ನು ಯುವಜನರು ಉತ್ತಮ ನಂಬಿಕೆಯಿಂದ ಹಿಂಪಡೆದಿದ್ದರು. ಆದರೆ, ಭರವಸೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದು ಯುವಜನರಲ್ಲಿ ಮತ್ತೆ ಅಸಮಾಧಾನ ಮೂಡಿಸಿದೆ ಎಂದು CJP ಆರೋಪಿಸಿದೆ.

“ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ. ನಮ್ಮ ಸದುದ್ದೇಶವನ್ನು ಸರ್ಕಾರ ಯುವಜನರಿಗೆ ದ್ರೋಹ ಮಾಡುವ ಅವಕಾಶವಾಗಿ ಬಳಸಿಕೊಳ್ಳಬಾರದು” ಎಂದು CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಎಚ್ಚರಿಕೆ ನೀಡಿದೆ.

“ಭರವಸೆಗಳನ್ನು ಜಾರಿಗೆ ತರುವ ಬದಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ” 

  • CJP ಆರೋಪ

ಮಾತಿನಿಂದ ಹಿಂದೆ ಸರಿಯಲು ಸಾಧ್ಯವಿಲ್ಲ

ಜುಲೈ 25ರಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕವಾಗಿ ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಬೇಕು ಎಂಬುದು CJPಯ ಆಗ್ರಹ. ಮಕ್ಕಳನ್ನು ಕಳೆದುಕೊಂಡ ಕುಟುಂಬಗಳು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರ ನೋವಿನ ನಡುವೆ ನಡೆಯಲಿರುವ ಈ ಮೆರವಣಿಗೆ, ಯುವಜನರ ವಿಶ್ವಾಸ ಮತ್ತು ಸರ್ಕಾರದ ಹೊಣೆಗಾರಿಕೆಯ ಪ್ರಶ್ನೆಯನ್ನು ಮುನ್ನೆಲೆಗೆ ತರುವ ಪ್ರಯತ್ನವಾಗಿದೆ.

ಕೇಂದ್ರ ಸರ್ಕಾರ ಭರವಸೆಗಳನ್ನು ಜಾರಿಗೆ ತರುವ ಬದಲು ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ ಎಂದು CJP ಆರೋಪಿಸಿದೆ.

ಸೆಪ್ಟೆಂಬರ್ 5ರಂದು ಹೆಚ್ಚಿನ ಸಂಖ್ಯೆಯಲ್ಲಿ ಇಂಡಿಯಾ ಗೇಟ್‌ನಲ್ಲಿ ಸೇರಿ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಯುವಜನರು, ವಿದ್ಯಾರ್ಥಿಗಳು ಹಾಗೂ ಯುವ ಸಂಘಟನೆಗಳಿಗೆ CJP ಮನವಿ ಮಾಡಿದೆ. ಪ್ರತಿಭಟನೆ ಸಂಪೂರ್ಣವಾಗಿ ಶಾಂತಿಯುತ ಮತ್ತು ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಯಲಿದೆ ಎಂದು ಅದು ಪುನರುಚ್ಚರಿಸಿದೆ.

Continue Reading

ದಿನದ ಸುದ್ದಿ

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

Published

on

KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ
KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

  • 329 ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ವಿಚಾರಣಾ ನೋಟಿಸ್

  • 658 OMR ಕಾರ್ಬನ್ ಶೀಟ್‌ಗಳು FSLಗೆ

  • IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ED ಗಂಭೀರ ಆರೋಪ

  • ₹70–80 ಲಕ್ಷ ಲಂಚದ ಆರೋಪವೂ ತನಿಖೆಯಲ್ಲಿದೆ

  • ಪ್ರಶ್ನೆಪತ್ರ ಸಿದ್ಧತೆ, ಮುದ್ರಣದ CCTV ದೃಶ್ಯಗಳ ಬಗ್ಗೆಯೂ ಅನುಮಾನ 

ಸುದ್ದಿದಿನ,ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಈಗಾಗಲೇ ಜಾರಿ ನಿರ್ದೇಶನಾಲಯ (ED) ರಾಜ್ಯದ ವಿವಿಧೆಡೆ 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಿದ್ದು, ಅದರ ಬೆನ್ನಲ್ಲೇ ಅಪರಾಧ ತನಿಖಾ ಇಲಾಖೆ (CID) ಎಲ್ಲಾ 329 ಅಭ್ಯರ್ಥಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

http://Visit : www.suddidina.com

329 ಅಭ್ಯರ್ಥಿಗಳಿಗೆ ನೋಟಿಸ್ ಏಕೆ?

ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಂದ ಈಗಾಗಲೇ 658 OMR ಕಾರ್ಬನ್ ಶೀಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಅವುಗಳನ್ನು ಮೂಲ OMR ಉತ್ತರ ಪತ್ರಿಕೆಗಳೊಂದಿಗೆ ಹೋಲಿಕೆ ಮಾಡಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿದೆ. ಅಭ್ಯರ್ಥಿಗಳು ಗುರುತಿಸಿದ್ದ ಉತ್ತರಗಳ ಕಾರ್ಬನ್ ಪ್ರತಿಯಲ್ಲಿ ಮತ್ತು ಮೂಲ OMRನಲ್ಲಿ ವ್ಯತ್ಯಾಸವಿದೆಯೇ ಎಂಬುದನ್ನು ಪರಿಶೀಲಿಸುವುದು ತನಿಖೆಯ ಪ್ರಮುಖ ಭಾಗವಾಗಿದೆ.

ಇದೀಗ 329 ಅಭ್ಯರ್ಥಿಗಳನ್ನೂ ವಿಚಾರಣೆಗೆ ಒಳಪಡಿಸುವ CID ಕ್ರಮ ಪ್ರಕರಣದ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿದೆ. ಈ ವಿಚಾರಣೆಯ ಮೂಲಕ ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿದೆಯೇ, ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ಅಥವಾ ಉತ್ತರಗಳ ಮಾಹಿತಿ ಮುಂಚಿತವಾಗಿ ಸಿಕ್ಕಿತೇ, OMR ಉತ್ತರ ಪತ್ರಿಕೆಗಳಲ್ಲಿ ತಿದ್ದುಪಡಿ ನಡೆದಿದೆಯೇ ಎಂಬುದರ ಬಗ್ಗೆ ತನಿಖಾಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

IAS ಅಧಿಕಾರಿಯತ್ತ ತನಿಖೆಯ ಚಿತ್ತ

ಈ ಪ್ರಕರಣದಲ್ಲಿ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರ ಹೆಸರು ಪ್ರಮುಖವಾಗಿ ಕೇಳಿಬಂದಿದೆ. ಅವರು ಫೆಬ್ರವರಿ 2024ರಿಂದ ಮಾರ್ಚ್ 2026ರವರೆಗೆ KPSCಯ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅವರು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ MSME ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಬೆಂಗಳೂರಿನ ನಿವಾಸ ಸೇರಿದಂತೆ ಉತ್ತರ ಪ್ರದೇಶದ ಬರೇಲಿಯಲ್ಲಿರುವ ನಿವಾಸದ ಮೇಲೂ ED ಶೋಧ ನಡೆಸಿದೆ.

ED ಆರೋಪದ ಪ್ರಕಾರ, ಗಂಗ್ವಾರ್ ಅವರು ತಮ್ಮ ಇಬ್ಬರು ಪುತ್ರರಿಗೆ KPSC ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ದೊರಕಿಸಿಕೊಡಲು ವ್ಯಕ್ತಿಯೊಬ್ಬರಿಂದ ಸುಮಾರು ₹1.1 ಕೋಟಿ ಪಡೆದಿದ್ದಾರೆ ಎನ್ನಲಾಗಿದೆ. ಈ ಆರೋಪ ಇನ್ನೂ ತನಿಖೆಯ ಹಂತದಲ್ಲಿದ್ದು, ಆರೋಪ ಸಾಬೀತಾಗಿಲ್ಲ.

ಪ್ರಶ್ನೆಪತ್ರಿಕೆ ಸಿದ್ಧತೆಯಲ್ಲೂ ಅನುಮಾನ

ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಮತ್ತು ಮುದ್ರಿಸುವ ಪ್ರಕ್ರಿಯೆಗೆ ಸಂಬಂಧಿಸಿದ CCTV ದೃಶ್ಯಾವಳಿಗಳ ಅನುಪಸ್ಥಿತಿಯನ್ನೂ ED ಅಧಿಕಾರಿಗಳು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಇಂತಹ ಪ್ರಕ್ರಿಯೆಯಲ್ಲಿ CCTV ದಾಖಲೆಗಳು ಪ್ರಮುಖ ಭದ್ರತಾ ಕ್ರಮವಾಗಿರುವುದರಿಂದ, ಅವುಗಳ ಲಭ್ಯತೆ ಮತ್ತು ನಿರ್ವಹಣೆಯೂ ತನಿಖೆಯ ಪ್ರಮುಖ ಅಂಶವಾಗಿದೆ.

ಇದರ ಜೊತೆಗೆ, ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಭ್ಯರ್ಥಿಗಳಿಂದ ₹70–80 ಲಕ್ಷದವರೆಗೆ ಲಂಚ ಕೇಳಲಾಗಿದೆ ಎಂಬ ಆರೋಪಗಳೂ ತನಿಖೆಯಲ್ಲಿವೆ. ಪ್ರಶ್ನೆಪತ್ರಿಕೆ ಸೋರಿಕೆ, OMR ತಿದ್ದುಪಡಿ ಮತ್ತು ನೇಮಕಾತಿ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಿದ ಆರೋಪಗಳ ಕುರಿತು ತನಿಖೆ ಮುಂದುವರಿದಿದೆ.

KPSCಯಂತಹ ನೇಮಕಾತಿ ಸಂಸ್ಥೆಯ ಮೇಲಿನ ವಿಶ್ವಾಸಕ್ಕೆ ಧಕ್ಕೆ ತರುವ ಆರೋಪಗಳಾಗಿರುವುದರಿಂದ, CID ಮತ್ತು ED ತನಿಖೆಯ ಮುಂದಿನ ಹಂತಗಳು ಮಹತ್ವ ಪಡೆದುಕೊಂಡಿವೆ. 329 ಅಭ್ಯರ್ಥಿಗಳ ವಿಚಾರಣೆ, OMR ಕಾರ್ಬನ್ ಶೀಟ್‌ಗಳ FSL ವರದಿ ಹಾಗೂ ಹಣಕಾಸು ವ್ಯವಹಾರಗಳ ಪರಿಶೀಲನೆಯ ಬಳಿಕ ಪ್ರಕರಣದ ನಿಜವಾದ ಚಿತ್ರಣ ಇನ್ನಷ್ಟು ಸ್ಪಷ್ಟವಾಗುವ ನಿರೀಕ್ಷೆಯಿದೆ.

ಮೇಲಿನ ಹಣ, ಅಕ್ರಮ ಮತ್ತು ಅಧಿಕಾರಿಯ ವಿರುದ್ಧದ ಆರೋಪಗಳು ತನಿಖಾ ಸಂಸ್ಥೆಗಳು ಮುಂದಿಟ್ಟಿರುವ ಆರೋಪಗಳಾಗಿದ್ದು, ನ್ಯಾಯಾಲಯದಲ್ಲಿ ಸಾಬೀತಾಗುವವರೆಗೆ ಆರೋಪಗಳೆಂದೇ ಪರಿಗಣಿಸಬೇಕೆಂದು ಕೋರ್ಟ್ ತಿಳಿಸಿದೆ.

 

Continue Reading

Trending