ರಾಜಕೀಯ
‘ಗುಂಡಿಕ್ಕಿ ಕೊಲ್ಲಿ’ ಎನ್ನುವವರ ಮಧ್ಯೆ ಮಾನವೀಯತೆ..!
ಕೋವಿಡ್-19 ವೈರಸ್ ಇಡೀ ವಿಶ್ವವನ್ನೇ ವ್ಯಾಪಿಸುತ್ತಿರುವ ಸಂದರ್ಭದಲ್ಲಿ ಏಪ್ರಿಲ್ 7 ರಂದು ದಾವಣಗೆರೆಯಲ್ಲಿ ಕೊರೊನಾ ‘ಚಿಕಿತ್ಸೆಗೆ ಸಹಕರಿಸದ ತಬ್ಲೀಗಿಗಳಿಗೆ ಗುಂಡಿಕ್ಕಿದರೂ ತಪ್ಪಲ್ಲ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಮತ್ತು ಶಾಸಕ ಬಸನಗೌಡಪಾಟೀಲ್ ಯತ್ನಾಳ್ ಹೇಳಿಕೆ ಇಡೀ ಮನುಕುಲವೆಂಬ ಹಾಲಿನ ಪಾತ್ರೆಗೆ ಹುಳಿ ಹಿಂಡುವ ಕಾರ್ಯವೇ ಸರಿ.
ಅವರ ಹೇಳಿಕೆ ನಂತರ ದೇಶದಲ್ಲಿ ಎರಡು ಘಟನೆಗಳು ನಡೆದವು. ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಲೋಯೈತೊಲದಲ್ಲಿ 100ಕ್ಕೂ ಹೆಚ್ಚು ಕುಟುಂಬಗಳ ನಡುವೆ ವಾಸಿಸುತ್ತಿರುವ ಏಕೈಕ ಹಿಂದೂ ಕುಟುಂಬದ ಹಿರಿಯ ಜೀವ ವಿನಯ್ ಸಾಹಾ (90) ವಯೋಸಹಜ ಅನಾರೋಗ್ಯದಿಂದ ಮೃತಪಟ್ಟರು. ಲಾಕ್ಡೌನ್ ಇರುವ ಸಂದರ್ಭದಲ್ಲಿ ಅಂತ್ಯ ಸಂಸ್ಕಾರ ಮಾಡುವುದು ಹೇಗೆಂದು ಮಕ್ಕಳು ಚಿಂತಿಸುತ್ತಿರುವ ಸಂದರ್ಭದಲ್ಲಿ ನೆರೆಮನೆಯ ಸದ್ದಾಂ ಶೇಖ್ ಸೇರಿದಂತೆ ಅನೇಕ ಮುಸ್ಲಂ ಸಹೋದರರು ನೆರವಾಗಿ ಹೆಗಲುಕೊಟ್ಟು ‘ರಾಮ್ ನಾಮ್ ಸತ್ಯ ಹೇ’ ಎಂದು ಜಪಿಸಿ ಸೌಹಾರ್ದ ಮೆರೆದರು.
ಇದೇ ರೀತಿ ಮುಂಬೈನಲಿ ಜೈನ ಸಮುದಾಯಕ್ಕೆ ಸೇರಿದ ಪ್ರೇಮಚಂದ್ ಬುದ್ಧಲಾಲ್ ಮಹಾವೀರ್ (68) ಮೃತಪಟ್ಟಾಗ ಲಾಕ್ಡೌನ್ನಿಂದ ಸಂಬಂಧಿಕರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ಅಕ್ಕಪಕ್ಕದ ಮನೆಯ ಮುಸ್ಲಿಂ ಜನಾಂಗದ ವ್ಯಕ್ತಿಗಳೇ ಅಂತ್ಯಕ್ರ್ರಿಯೆಯಲ್ಲಿ ಭಾಗವಹಿಸಿ ಸಹಾಯ ಮಾಡಿದ್ದರು. ಈ ಎರಡೂ ಘಟನೆಗಳು ‘ಮನುಷ್ಯ ಜಾತಿ ತಾನೊಂದೆ ಒಲಂ’ ಎಂದು ಪಂಪ ಹೇಳಿದ ಮಾತಿಗೆ ಸಾಕ್ಷಿಯಾಯಿತು.
ಈ ಸುದ್ದಿಯನ್ನು ಓದಿದಾಗ ಸುಮಾರು 17 ವರ್ಷಗಳ ಹಿಂದೆ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ನಮ್ಮ ಸ್ನೇಹಿತರೇ ಬಣ್ಣ ಹಚ್ಚಿದ ನಾಟಕ ‘ರಾವಿನದಿಯ ದಂಡೆಯಲ್ಲಿ’ ನೋಡಿದ ಪ್ರಸಂಗಗಳು ನೆನಪಾದವು. ಭಾರತ-ಪಾಕಿಸ್ತಾನದ ವಿಭಜನೆಯ ಸಂದರ್ಭದಲ್ಲಿ ಭಾರತದ ಗಡಿಭಾಗದ ಮುಸ್ಲಿಂ ಸಹೋದರರು ಪಾಕಿಸ್ತಾನಕ್ಕೆ, ಪಾಕಿಸ್ತಾನದಲ್ಲಿದಲ್ಲಿನ ಹಿಂದೂಗಳು ಭಾರತಕ್ಕೆ ವಲಸೆಹೋಗುತ್ತಾರೆ. ಪಾಕಿಸ್ತಾನದಲ್ಲಿದ್ದ ಹಿಂದೂ ವೃದ್ಧೆ ರತನ್ ತಾಯಿ ಅಲ್ಲಿಯೇ ಉಳಿದುಕೊಂಡು ತನ್ನ ಮಾನವೀಯ ಸ್ಪರ್ಶದಿಂದ ಅಲ್ಲಿನ ಇಸ್ಲಾಂ ಜನರ ಹೃದಯವನ್ನು ಗೆಲ್ಲುತ್ತಾಳೆ.
ಆ ವೃದ್ಧೆಗೆ ವಯೋಸಹಜ ಕಾರಣಗಳಿಂದ ಮೃತಪಟ್ಟಾಗ ಮಕ್ಕಳು, ಸಂಬಂಧಿಕರು ಇಲ್ಲದ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಸಿಖಂದರ್ ಮಿರ್ಜಾ ಸೇರಿದಂತೆ ಅನೇಕ ಇಸ್ಲಾಂ ಧರ್ಮದ ಜನರು ಹಿಂದೂ ವಿಧಿ ವಿಧಾನದಂತೆ ‘ರಾಮ್ ನಾಮ್ ಸತ್ಯ ಹೇ’ ಎಂದು ಪಠಿಸಿ ಅಂತ್ಯಕ್ರಿಯೆ ಮಾಡುವ ಪಾತ್ರವು ಪ್ರೀತಿ ಅನುಕಂಪವನ್ನು ತುಂಬಿಕೊಂಡು ಬರುತ್ತದೆ. ಎಲ್ಲಾ ಧರ್ಮಗಳ ಸಾರ ಒಂದೇ ಎಂದು ಈ ನಾಟಕ ಬಿಂಬಿಸುತ್ತದೆ. ಶಾಂತವಾಗಿ ನಮ್ಮೊಳಗೊಂದು ಚಿಂತನೆಯನ್ನು ಬಿತ್ತುವ ಕೆಲಸವನ್ನು ಹಿಂದಿ ಲೇಖಕ ಅಸಗರ್ ವಹಾಜೀತ್ ಅವರು ರಚಿಸಿದ್ದಾರೆ.ಕನ್ನಡದಲ್ಲಿ ಡಾ. ತಿಪ್ಪೇಸ್ವಾಮಿ ತರ್ಜುಮೆ ಮಾಡಿದ್ದಾರೆ. ರಾಜ್ಯದ ಅನೇಕ ಕಡೆಗಳಲ್ಲಿ ಯಶಸ್ವಿ ಪ್ರದರ್ಶನ ಕಂಡ ನಾಟಕ ರಾವಿನದಿಯ ದಂಡೆಯಲ್ಲಿ… ಧರ್ಮ, ಸೀಮೆಗಳನ್ನು ಮೀರಿ ಮಾನವೀಯ ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ.
‘ಇವನಾರವ, ಇವನಾರ, ಇವನಾರವನೆಂದೆನಿಸದಿರಯ್ಯ,. ಇವ ನಮ್ಮವ, ಇವ ನಮ್ಮವ ಇವನಮ್ಮವನೆಂದೆನಿಸಯ್ಯ ಕೂಡಲಸಂಗಮದೇವಯ್ಯ. ನಿಮ್ಮ ಮನೆಯ ಮಗನೆಂದೆನಿಸಯ್ಯ.’ ಎಂದು 12ನೇ ಶತಮಾನದಲ್ಲೇ ಬಸವಣ್ಣವರು ವಚನದ ಮೂಲಕ ಸಮಾಜದ ಜನರಿಗೆ ಒಳಿತನ್ನು ಹೇಳಿದ್ದರು. ‘ಇಲ್ಲಿ ಯಾರು ಮುಖ್ಯರಲ್ಲ. ಯಾರೂ ಅಮುಖ್ಯರಲ್ಲ. ಎಲ್ಲರೂ ವಿಶ್ವಮಾನವರಾಗಿ ಬಾಳಿ’ ಎಂದು ಕುವೆಂಪು ಕರೆಕೊಟ್ಟರು. ಮಹಾತ್ಮ ಗಾಂಧಿಯವರು, ಮನುಷ್ಯ ಮತ್ತು ಪ್ರಾಣಿಗಳಿಗೆ ಇರುವ ಅಂತರವೆಂದರೆ ವಿಚಾರಶೀಲತೆ. ಆದರೆ ವಿಚಾರ ಶುದ್ಧಿಯನ್ನು ಕಾಪಾಡಿಕೊಳ್ಳಿ ಎಂದು ಜನರಿಗೆ ಮನವರಿಕೆ ಮಾಡಿಕೊಟ್ಟರು.
ಪ್ರವಾದಿ ಮುಹಮ್ಮದ್ರು ಹೇಳಿದಂತೆ ‘ಓ ಮಾನವರೇ, ಅರಬರು ಅರಬರೇತರಿಗಿಂತ, ಬಿಳಿಯರು, ಕರಿಯರಿಗಿಂತ ಅಥವಾ ಕರಿಯರು ಬಿಳಿಯರಿಗಿಂತ ಶ್ರೇಷ್ಠರಲ್ಲ. ದೈವ ನಿಷ್ಠೆಯೊಂದೇ ಶ್ರೇಷ್ಠತೆಗೆ ಮಾನದಂಡ’ ಮಾನವೀಯತೆ ಒಂದೇ ಮುಖ್ಯ ಎಂದು ಪ್ರತಿಪಾದಿಸಿದ್ದಾರೆ.
ಹಿಂದೂ, ಇಸ್ಲಾಂ, ಕ್ರಿಶ್ಚಿಯನ್, ಬೌದ್ಧ, ಜೈನ, ಪಾರ್ಸಿ ಧರ್ಮಗಳೆಲ್ಲವೂ ಬೋಧಿಸುವುದೊಂದೇ ಅದೇ ಮಾನವ ಧರ್ಮ. ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಾಣುವಿನ ಉಪಟಳದಿಂದ ದಿನದಿಂದ ದಿನಕ್ಕೆ ವಿಶ್ವವನ್ನೇ ಸ್ತಬ್ಧಗೊಳಿಸುತ್ತಿರುವಾಗ ಇಂತಹ ಸಂದಿಗ್ದ ಸಮಯದಲ್ಲಿ ರಾಜಕಾರಣಿಗಳು ನಿಷ್ಕಾಮ ಕರ್ಮಗಳನ್ನು ಮಾಡುತ್ತಾ ಹೋದಹಾಗೆಲ್ಲ ಮನುಷ್ಯನ ಸಂಕಲ್ಪ ಶಕ್ತಿಯು ಉತ್ತರೋತ್ತರವಾಗಿ ಬೆಳೆಯುತ್ತಾ ಹೋಗಿ ಬಾಹ್ಯ ಕರ್ಮಗಳೆಲ್ಲವೂ ಕಡಿಮೆಯಾಗತೊಡಗುತ್ತವೆ.
ಪ್ರಚಾರ ಗಿಟ್ಟಿಸಿಕೊಳ್ಳಲು ನಾಲಿಗೆ ಹರಿಬಿಟ್ಟು ಕೀಳುಮಟ್ಟದ ಮಾತುಗಳನ್ನಾಡಿ ರಾಜಕೀಯ ಮಾಡುವ ಬದಲು ಕಣ್ಣಿಗೆ ಕಾಣದ ಕೋವಿಡ್-2 ಅನ್ನು ದೂರಮಾಡಲು ಯೋಜನೆಗಳನ್ನು ರೂಪಿಸಿ. ಸಾಮಾಜಿಕವಾಗಿ, ಮಾನಸೀಕವಾಗಿ, ಆರ್ಥಿಕವಾಗಿ ಅಧೀರಾಗಿರುವ ನಿಮ್ಮ ಜನರಿಗೆ ಮನೋಸ್ಥೈರ್ಯ ತುಂಬು ಕಾರ್ಯಮಾಡಿದರೆ ಮನುಕುಲಕ್ಕೆ ಅರ್ಥ ಬಂದೀತು.
ನಿಮಗೆ ವೋಟ್ ಹಾಕಿರುವ ಜನರಿಗೆ ನ್ಯಾಯ ಒದಗಿಸುವ ಕಾರ್ಯ ನಿಮ್ಮಿಂದಾಗಬೇಕು. ಅದು ಬಿಟ್ಟು ಬೇಕಾಬಿಟ್ಟು ಮಾತುಗಳನ್ನು ಹರಿಬಿಟ್ಟು ಮನುಷ್ಯತ್ವದ ವಿರುದ್ಧವಾಗಿ ನಡೆದುಕೊಂಡರೆ ಅದು ಶೋಭೆತರುವಂತದ್ದಲ್ಲ. ಇಂತಹ ಸಂದರ್ಭದಲ್ಲಿ ಜನಾಭಿಪ್ರಾಯವನ್ನು ಧಿಕ್ಕರಿಸುವ ಸರ್ಕಾರವನ್ನು ಮುಂದೊಂದು ದಿನ ಜನರೂ ಧಿಕ್ಕರಿಸುತ್ತಾರೆ ಎನ್ನುವ ಅರಿವು ನಿಮ್ಮಲ್ಲಿದ್ದರೆ ಒಳ್ಳೆಯದು.
ಅನೇಕ ರಾಜಕಾರಣಿಗಳು ಕೋವಿಡ್-19 ಸಂಕಷ್ಟದಲ್ಲಿ ಸಿಲುಕಿರುವ ಜನರಿಗೆ ನೆರವಾಗಲು ಅಕ್ಕಿ, ಬೇಳೆ ಇತರೆ ಅಗತ್ಯ ವಸ್ತುಗಳನ್ನು ಕೊಡವುದು ಸರಿ. ಆದರೆ ಆ ಪ್ಯಾಕೇಟ್ಗಳ ಮೇಲೆ ತಮ್ಮ ಫೋಟೋವನ್ನು ಹಾಕಿ ಪ್ರಚಾರಕ್ಕೋಸ್ಕರ ಜನರಿಗೆ ಸಹಾಯ ಮಾಡುವುದು ಜನನಾಯಕನ ಲಕ್ಷಣವೇ? ಕೊರೋನಾ ವೈರಸ್ ಜಗತ್ತನ್ನೇ ಬಾಧಿಸುತ್ತಿರುವ ಹೊತ್ತಿನಲ್ಲಿ ಮನುಷ್ಯ ಕೆಲ ಘಟನೆಗಳು ಮನುಷ್ಯನ ಮಧ್ಯೆ ಮಾನವೀಯ ಸಂಬಂಧಗಳನ್ನು ವೃದ್ಧಿಸುತ್ತಿದೆ. ಒಂದು ಸಮುದಾಯವನ್ನು ಗುರಿಯಾಗಿರಿಸಿ ಸುಳ್ಳು ಸುದ್ದಿ ಹಬ್ಬಿಸುವುದು, ಪ್ರಚೋದನಾಕಾರಿ ಮಾತನಾಡುವುದು ಶೋಭೆತರುವಂತದ್ದಲ್ಲ. ಮನುಷ್ಯ ಎಷ್ಟರಮಟ್ಟಿಗೆ ಇತರರ ಒಳ್ಳೆಯದಕ್ಕೆ ದುಡಿಯುತ್ತಾನೋ ಅಷ್ಟರ ಮಟ್ಟಿಗೆ ಅವನು ದೊಡ್ಡವನಾಗುತ್ತಾನೆ. ನಮ್ಮನ್ನು ಪ್ರೀತಿಸುವವರನ್ನು ನಾವು ಪ್ರೀತಿಸುವುದು ದೊಡ್ಡದಲ್ಲ. ನಮ್ಮನ್ನು ದ್ವೇಷಿಸುವವರನ್ನು ಪ್ರೀತಿಸುವುದು ದೊಡ್ಡತನ. ಪ್ರೇಮದ ಚೂರಿಯಿಂದ ಶಾಂತಿ ಸ್ಥಾಪನೆಯಾಗಬೇಕೇ ವಿನಃ ಗುಂಡಿನ ಬಲದಿಂದಲ್ಲ.

ದಿನದ ಸುದ್ದಿ
ದಾವಣಗೆರೆ | ಇಂದು ಕರೆಂಟ್ ಇರಲ್ಲ
ಸುದ್ದಿದಿನ,ದಾವಣಗೆರೆ:ಬೆಸ್ಕಾಂ ಜಗಳೂರು ಉಪವಿಭಾಗದ ವ್ಯಾಪ್ತಿಯಲ್ಲಿ ತುರ್ತು ಜಂಗಲ್ ಕಟಿಂಗ್ ಮತ್ತು ಫೀಡರ್ಗಳ ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಮೇ 26 ರಂದು ಬೆಳಿಗ್ಗೆ 09-00 ರಿಂದ ಸಂಜೆ 05-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಕೊರಚರ ಹಟ್ಟಿ ಸರ್ಕಲ್, ಅಂಜನೆಯ ಬಡಾವಣೆ, ಶಕ್ತಿ ನಗರ, ಭಗೀರಥ ಲೇಔಟ್ ಸರ್ಕಲ್, ಕೊಟ್ಟುರೇಶ್ವರ ಬಡಾವಣೆ, , ಡಿ.ಸಿ.ಎಂ ಎಬಿಸಿ ಬ್ಲಾಕ್, ರಾಜೇಂದ್ರ ಬಡಾವಣೆ, ಭೂಮಿಕಾ ನಗರ, ಎಸ್.ಎಸ್ ಹೈ-ಟೆಕ್ ಮೇನ್ ರೋಡ್, ಶೇಶಾಂ ಲೇಔಟ್, ಹೊಂ ಟೈಲಾರ್ ರೋಡ್, ಬನಶಂಕರಿ ದೇವಸ್ಥಾನ, ಶ್ರೀರಾಮ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ. ಎ ಬ್ಲಾಕ್, ನಿಜಲಿಂಗಪ್ಪ ಲೇಔಟ್, ಅಶ್ವಿನಿ ಆರ್ಯುವೇಧಿಕ್ ಆಸ್ಪತ್ರೆ, ಜೊಲ್ಲಿಗುರು ಕಾಂಪೌಡ್, ಮುದ್ದೊಳ್ಳಿ ತೋಟ, ನರಹರಿಶೇಟ ಕಲ್ಯಾಣ ಮಂದಿರ, ಪೊಲೀಸ್ ಹಳೆಯ ವಸತಿ ಗೃಹಗಳು, ವಿನೋಬ ನಗರ 1ನೇ ಮತ್ತು 2ನೇಯ ಮುಖ್ಯ ರಸ್ತೆ ಚರ್ಚ್ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಹಾಗೂ ಬೆಳಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಬಿದರಕೆರೆ ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಎಫ್- ಕಟ್ಟಿಗೆಹಳ್ಳಿ, ಎನ್ಜೆವೈ (NJY) ಜಗಳೂರು ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಅರಿಶಿನಗುಂಡಿ ಹಾಗೂ ಜ್ಯೋತಿಪುರ ಎನ್ಜೆವೈ (NJY) 11ಕೆವಿ ಮಾರ್ಗಗಳು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರತಿದಿನದ ಹಾಜರಾತಿಯನ್ನು ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯ ಮೂಲಕ ಕಡ್ಡಾಯವಾಗಿ ನಿರ್ವಹಿಸಲು ದಿನಾಂಕ: 12-07-2022 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರು ಸುತ್ತೋಲೆ ಹೊರಡಿಸಿದ್ದಾರೆ.
ಸದರಿ ಸುತ್ತೋಲೆಯಲ್ಲಿ ‘ಎಲ್ಲಾ ನಿಲಯಪಾಲಕರು/ ಮೇಲ್ವಿಚಾರಕರು ಬೆಲಗ್ಗೆ ತಿಂಡಿ ಸಮಯದಲ್ಲಿ ಹಾಗೂ ರಾತ್ರಿ ಊಟದ ಸಮಯದಲ್ಲಿ ವಸತಿ ಶಾಲೆ/ಕಾಲೇಜು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಕಡ್ಡಾಯವಾಗಿ ಹಾಜರಿದ್ದು, ವಿದ್ಯಾರ್ಥಿಗಳ ಬಯೋಮೆಟ್ರಿಕ್ ಹಾಜರಾತಿಯನ್ನು ಪಡೆಯತಕ್ಕದ್ದು’ ಎಂಬುದಾಗಿ ಸೂಚಿಸಲಾಗಿದೆ.
‘ಬಯೋಮೆಟ್ರಿಕ್ ಹಾಜರಾತಿ ಪಡೆಯದೆ ಆಹಾರ ವೆಚ್ಚ ಭರಿಸಿದ್ದಲ್ಲಿ ಸಂಬAಧಪಟ್ಟ ನಿಲಯಪಾಲಕರು, ಅಲ್ಪಸಂಖ್ಯಾತರ ತಾಲ್ಲೂಕು ವಿಸ್ತರಣಾಧಿಕಾರಿಗಳು/ ಪ್ರಾಂಶುಪಾಲರು, ಜಿಲ್ಲಾ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಿ ಅವರ ಮೇಲೆ ಶಿಸ್ತಿನ ಕ್ರಮ ಜರುಗಿಸಲಾಗುವುದು’ ಎಂಬುದಾಗಿ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿರುತ್ತದೆ.
ಆದರೆ ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳದೆ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿರುವ ಮಾಹಿತಿ ಆಧಾರದಲ್ಲಿ ದಿನಾಂಕ: 28-11-2025 ರಂದು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರಿಗೆ ದಿನಾಂಕ: 28-11-2025 ರಂದು ದೂರು ನೀಡಿ ‘ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಅಳವಡಿಸಿರುವ ಬಯೋಮೆಟ್ರಿಕ್ ಹಾಜರಾತಿ ನಿರ್ವಹಣೆಯನ್ನು ತನಿಖೆಗೆ ಒಳಪಡಿಸುವಂತೆ’ ಕೋರಲಾಗಿತ್ತು.
ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರು ನೀಡಿದ ಹಿಂಬರಹದಲ್ಲಿ ‘ಈ ಸಂಬAಧ ಜಿಲ್ಲೆಯ ಕೆಲವು ವಸತಿ ನಿಲಯಗಳಲ್ಲಿ ಬಯೋಮೆಟ್ರಿಕ್ ಯಂತ್ರದಲ್ಲಿನ ತಾಂತ್ರಿಕ ದೋಷದಿಂದ ವಿದ್ಯಾರ್ಥಿಗಳ ಹಾಜರಾತಿಯನ್ನು ದಾಖಲಿಸಲು ಸಾಧ್ಯವಾಗಿರುವುದಿಲ್ಲವೆಂದು ಹಾಗೂ ಮತ್ತೆ ಕೆಲವು ವಸತಿ ಶಾಲೆ ಮತ್ತು ವಸತಿ ನಿಲಯಗಳಿಗೆ ಹೊಸ ಬಯೋಮೆಟ್ರಿಕ್ ಯಂತ್ರವನ್ನು ಪೂರೈಕೆ ಮಾಡುವಂತೆ ಪ್ರಾಂಶುಪಾಲರುಗಳು ಮತ್ತು ತಾಲ್ಲೂಕು ವಿಸ್ತರಣಾಧಿಕಾರಿಗಳು ಕೋರಿರುವ ಪತ್ರವನ್ನು ಲಗತ್ತಿಸಿ’ ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶಕರು, ಬೆಂಗಳೂರು ಇವರಿಗೆ ಪತ್ರ ಬರೆಯಲಾಗಿದೆ ಎಂಬುದಾಗಿ ತಿಳಿಸಿರುತ್ತಾರೆ.
ಆದ ಕಾರಣ ದಿನಾಂಕ: 17-02-2026 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರಿಗೆ ದೂರು ನೀಡಿ ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ಒಂದು ತಿಂಗಳ ಒಳಗಾಗಿ ನೀಡುವಂತೆ ಸಾರ್ವಜನಿಕ ಹಿತಾಸಕ್ತಿ ಅಡಿಯಲ್ಲಿ ಕೋರಲಾಗಿತ್ತು. ಆದರೆ ದೂರು ನೀಡಿ 3 ತಿಂಗಳು ಕಳೆದರೂ ಅಲ್ಪಸಂಖ್ಯಾತರ ನಿರ್ದೇಶನಾಲಯ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.
ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.
4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಪಂಚಪಾಡಿ ಪದ್ಧತಿಯಲ್ಲಿ ವಿದ್ಯಾಭ್ಯಾಸ | ತ್ಯಾವಣಿಗೆಯ ಮಂದಾರ ಶಾಲೆಯಲ್ಲಿ ಪ್ರವೇಶ ಪ್ರಾರಂಭ
-
ದಿನದ ಸುದ್ದಿ7 days agoಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
-
ದಿನದ ಸುದ್ದಿ4 days agoಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?
-
ಅಂಕಣ4 days agoಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ
-
ದಿನದ ಸುದ್ದಿ3 days agoಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದಾವಣಗೆರೆ | ಇದೇ 22 ರಂದು ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026 ಕಾರ್ಯಕ್ರಮ
-
ದಿನದ ಸುದ್ದಿ5 days agoಕೀಲು ಮತ್ತು ಮೂಳೆ ಚಿಕಿತ್ಸೆ ; ರೋಬೋಟಿಕ್ ಮತ್ತು ಮಿನಿಮಲಿ ಇನ್ನೇಸಿವ್ ಸರ್ಜರಿಗಳಲ್ಲಿ ಮಹತ್ವದ ಬದಲಾವಣೆ : ಡಾ.ಲೋಕೇಶ್ ಎ. ವೀರಪ್ಪ
-
ದಿನದ ಸುದ್ದಿ7 hours agoದಾವಣಗೆರೆ | ಇಂದು ಕರೆಂಟ್ ಇರಲ್ಲ


