Connect with us

ದಿನದ ಸುದ್ದಿ

ಕೊರೊನಾ ಮತ್ತು ನಮ್ಮ IASಗಳು..!

Published

on

ಇಲ್ಲಿರುವ ಚಿತ್ರ ನಿನ್ನೆ ದಿಲ್ಲಿಯ ಕಶ್ಮೀರ್ ಗೇಟ್ ಪ್ರದೇಶದಲ್ಲಿ ಪತ್ರಕರ್ತರೊಬ್ಬರಿಗೆ ಸಿಕ್ಕಿದ್ದು, ವ್ಯಕ್ತಿಯನ್ನು ಈಗ ಕ್ಷಯ ಆಸ್ಪತ್ರೆಗೆ ದಾಖಲಿಸಲಾಗಿದೆಯಂತೆ.

 

  • ರಾಜಾರಾಮ್ ತಲ್ಲೂರ್

ತ್ರುದಾಳಿ ನಡೆದಾಗ ಕೋಟೆಯ ಬಾಗಿಲು ಭದ್ರಪಡಿಸಿಕೊಳ್ಳುವುದೇ ಯುದ್ಧ ಅಲ್ಲ. ಅದು ಯುದ್ಧದ ತಯಾರಿಗೆ ಮೊದಲ ಹಂತ. ಶತ್ರು ಹಠಾತ್ ಎರಗದಂತೆ ಬಾಗಿಲು ಭದ್ರಪಡಿಸಿ, ಹತ್ಯಾರುಗಳು, ಸೈನಿಕರು ತಯಾರಾಗಬೇಕು.

ನಮ್ಮಲ್ಲೀಗ ಕೋಟೆಬಾಗಿಲು ಭದ್ರಪಡಿಸಿ 23 ದಿನಗಳು ಕಳೆದಿವೆ. ಮತ್ತೆ ಮೇ 3ರ ತನಕ ಕೋಟೆಬಾಗಿಲು ಮುಚ್ಚಿಯೇ ಇರಲಿದೆ ಎಂಬ ಸೂಚನೆ ನಿನ್ನೆ ಹೊರಬಿದ್ದಿದೆ. ತಯಾರಿ ಏನಾಗಿದೆ ಎಂದರೆ ಚಿತ್ರಣ ಆಶಾದಾಯಕ ಇಲ್ಲ.

ಕೊರೊನಾ ಬರಿಯ ಬಾಗಿಲು ಭದ್ರಪಡಿಸಿದರೆ ಹೊರಟು ಹೋಗುವ ಆತಂಕ ಅಲ್ಲ. ಹಾಗಿದ್ದಿದ್ದರೆ ಈ ಜಗತ್ತಿನಲ್ಲಿ ಫ್ಲೂ ವೈರಸ್ ಗಳೇ ಇರುತ್ತಿರಲಿಲ್ಲ. ಪ್ರತೀ ಸೀಸನ್ನಿನಲ್ಲಿ ಮೂರು-ನಾಲ್ಕು ಸುತ್ತು ಬರುವ ಎಲ್ಲ ವೈರಸ್ ಗಳ ರೀತಿಯೇ ತಾನೂ ಕೂಡ ಎಂದು ಕೊರೊನಾ ಈಗಾಗಲೇ ಚೀನಾದ ವುಹಾನ್, ದಕ್ಷಿಣ ಕೊರಿಯಾ ಮೊದಲಾದೆಡೆ ಸಾಬೀತುಪಡಿಸುತ್ತಿದೆ. ಅಲ್ಲಿ ಸೋಂಕಿನ ಎರಡನೇ ಅಲೆ ಹರಡುತ್ತಿದೆ.

ಅಂದರೆ, ಬರಿಯ ಲಾಕ್ ಡೌನ್ ಮಾಡಿಕೊಂಡು ಕುಳಿತರೆ ಇನ್ನು ಐದಾರು ವರ್ಷ ಹೋದರೂ ಜಗತ್ತು ಇದೇ ಸ್ಥಿತಿಯಲ್ಲಿ ಇರಬೇಕಾಗುತ್ತದೆ ಎಂಬುದು ವಾಸ್ತವ. ಕೊರೊನಾ ಜೊತೆ ಬದುಕುವುದು ನಮಗೆ ಅಭ್ಯಾಸ ಆಗದೆ ಬೇರೆ ದಾರಿ ಇಲ್ಲ.

ನಾನು ಇಲ್ಲಿ ಹೇಳಹೊರಟಿರುವುದು, ನಮ್ಮ ದೇಶದ ನಿಯಮಗಳನ್ನು ರೂಪಿಸುವ IAS ಕೆಡೇರ್ ಬಗ್ಗೆ. ಕಳೆದ 20 ದಿನಗಳಲ್ಲಿ ಅವರು ಮುಂದಿನ ದಿನಗಳಿಗೆ ಒಂದು ಸ್ಪಷ್ಟ-ನಿಖರ-ಕಾರ್ಯರೂಪಕ್ಕೆ ತರಬಲ್ಲ ಒಂದಿಷ್ಟು ನಿಯಮಗಳನ್ನು ರೂಪಿಸಬಲ್ಲರು ಎಂಬ ನಿರೀಕ್ಷೆ ಇತ್ತು.

ಆದರೆ ನಿನ್ನೆ ಲಾಕ್ ಡೌನ್ 2.0 ಗೆ ಮಾರ್ಗದರ್ಶಿಯನ್ನು ವಿವರವಾಗಿ ನೋಡಿದ ಬಳಿಕ ತುಂಬಾ ನಿರಾಸೆ ಆಯ್ತು. ಅಲ್ಲಿ ಹೇಳಲಾಗಿರುವ ಎಲ್ಲ ನಿಯಮಗಳೂ ಎಷ್ಟು ಆಂಬಿಗ್ಯುಯಿಟಿಯಿಂದ ತುಂಬಿವೆ ಎಂದರೆ ಕಳೆದ ಸಾರಿಯಂತೆ ಕ್ಲಾರಿಫಿಕೇಷನ್ ಗಳಿಗೆ ಕ್ಲಾರಿಫಿಕೇಷನ್ ಗಳ ಮತ್ತೊಂದು ಸರಣಿಯನ್ನು ಮುಂದಿನ ದಿನಗಳಲ್ಲಿ ನಿರೀಕ್ಷಿಸಬಹುದು. ಇದೆಲ್ಲ ಬೊಟ್ಟುಮಾಡುವುದು ಹಠಾತ್ ವಿಪತ್ತು ಸನ್ನಿವೇಶಗಳನ್ನು ಎದುರಿಸುವುದಕ್ಕೆ ನಮ್ಮ ತಯಾರಿಯ ಕೊರತೆಯನ್ನೇ.

ಇನ್ನಾದರೂ ಕೊರೊನೋತ್ತರ ಬದುಕಿಗೆ ಸ್ಪಷ್ಟ ಚಿತ್ರಣವೊಂದನ್ನು ತಯಾರಿ ಮಾಡದಿದ್ದರೆ, ದೇಶದ ಆರ್ಥಿಕ – ಸಾಮಾಜಿಕ ಸಂಕಟಗಳು ಎಲ್ಲರನ್ನೂ ಒಟ್ಟಾಗಿ ಮುಳುಗಿಸಲಿವೆ. ಈವತ್ತಲ್ಲ ನಾಳೆ ದೇಶದ ಎಲ್ಲ ಚಟುವಟಿಕೆಗಳಿಗೆ ಅವಕಾಶ ಕೊಡಲೇಬೇಕಾಗುತ್ತದೆ. ಕೊರೊನಾ ನಾಲ್ಕನೇ ಹಂತಕ್ಕೆ ಹರಡದಂತೆ ನಿಗಾ ಇರಿಸಿಕೊಂಡೇ ದೇಶ ಸಹಜ ಚಟುವಟಿಕೆಗಳೊಂದಿಗೆ ಮುನ್ನಡೆಯುವುದು ಹೇಗೆ ಎಂಬ ನಿಖರ ಯೋಜನೆಗಳನ್ನು ಇಂದೇ ಮಾಡದಿದ್ದರೆ, ಈಗ ಆಗುತ್ತಿರುವ ಮುಕ್ಕುಗಳು ಶಾಶ್ವತವಾಗಿ ಉಳಿಯಲಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.

23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.

ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

Published

on

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್‍ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.

ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್‍, ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಒಂದು ಮೊಬೈಲ್‍ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್‍ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

Published

on

ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.

ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.

ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್‌ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.

ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending