ದಿನದ ಸುದ್ದಿ
ಅಸಲಿಗೆ ಭಾರತಕ್ಕೆ ಕೊರೋನಾ ಎಂಟ್ರಿ ಆಗಿದ್ದು ಹೇಗೆ..!?
- ಬಿಂದು ಶ್ರೀ ಗೌಡ
COVID ಅನ್ನುವ ಮಾರಿ December ತಿಂಗಳಲ್ಲಿ ಚೈನಾ ದೇಶದಲ್ಲಿ ಕಾಣಿಸಿಕೊಂಡಾಗ ಎಚ್ಚೆತ್ತುಕೊಳ್ಳದ ನಮ್ಮ ಭಾರತ ಹಲವಾರು ಸಾವಿರಾರು ಜನ ಸೇರುವ ಕಾರ್ಯಕ್ರಮಗಳನ್ನು ಮಾಡಿದೆ ಮಾಡ್ತಾ ಇತ್ತು ಅದರ ಸಂಪೂರ್ಣ ಮಾಹಿತಿ ಮತ್ತು ಪಟ್ಟಿ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು ಕೂಡ. covid ಅನ್ನು ಗಂಭೀರವಾಗಿ ಪರಿಗಣಿಸದೆ ಟ್ರಂಪ್ ಕಾರ್ಯಕ್ರಮದ ಜೊತೆ ಜೊತೆಗೆ ಫ್ಲೈಟ್ ನಲ್ಲಿ ಬಂದಂತ ವಿದೇಶಿಗರು ಸೇರಿದಂತೆ ನಮ್ಮದೇ ದೇಶದ ಪ್ರಜೆಗಳು ಅಲ್ಲಿಂದ ಇಲ್ಲಿಗೆ ಬರುವಾಗ ಸರಿಯಾದ ತಪಾಸಣೆ ಮಾಡದೇ ಅವರನ್ನು ಸರ್ಕಾರಿ ಕ್ವಾರಂಟೇನ್ ಮಾಡದೇ ಮನೆಗೆ ಕಳುಹಿಸಿ ಮತ್ತೊಂದು ತಪ್ಪು ಮಾಡಿಬಿಟ್ಟರು.
ಇಷ್ಟೆಲ್ಲಾ ಆಗುವ ಹೊತ್ತಿಗೆ ಮಾರ್ಚ್ ತಿಂಗಳು ಬಂದೆ ಬಿಟ್ಟಿತ್ತು December ಇಂದ ಫೆಬ್ರವರಿ ತನಕ ಯಾವುದೇ ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರ ವಿರೋಧ ಪಕ್ಷದ ನಾಯಕ ಶ್ರಿ ರಾಹುಲ್ ಗಾಂಧಿ ಅವರು ಈ ಬಗ್ಗೆ ಎಚ್ಚರಿಸಿದರು ಕ್ಯಾರೇ ಅನ್ನದ ಕೇಂದ್ರ ಸರ್ಕಾರ ಯುದ್ದ ಕಾಲದಲ್ಲಿ ಶಸ್ತ್ರಾಭ್ಯಾಸ ಎಂಬಂತೆ ಕುತ್ತಿಗೆಗೆ ಬಂದಾಗ ತತ್ ಕ್ಷಣಕ್ಕೆ ಅಂದರೆ ನಾಲಕ್ಕೆ ನಾಲ್ಕು ಘಂಟೆಗೆ ದೇಶ ಲಾಕ್ ಡೌನ್ ಆಗುತ್ತದೆ ಎಂಬ ಬಾಂಬ್ ಸಿಡಿಸಿದ್ದು ನಿಜವಾಗಿಯೂ ಒಂದು ದೇಶದ ಪರಿಸ್ಥಿತಿ ಅರಿಯದೆ ಆರ್ಥಿಕ ಪರಿಸ್ಥಿತಿ ಅರಿಯದೆ ತೆಗೆದುಕೊಂಡ ಮೂರ್ಖ ನಿರ್ಧಾವಾಗಿದ್ದು ಸುಳ್ಳಲ್ಲ.
ಇನ್ನುಳಿದ ಹಾಗೆ ವಾರಕ್ಕೊಂದು ಟಾಸ್ಕ್ ಕೊಟ್ಟು ಹೋದ ದೇಶದ ಪ್ರಧಾನಿಯವರು ಇದರ ಮುಂದಿನ ಭಾಗ ಏನಾಗುತ್ತದೆ ಎಂಬ ಊಹೆಯೂ ಇಲ್ಲದೆ ಚಪ್ಪಾಳೆ ತಟ್ಟಿ ಅಂದರು ಅದನ್ನು ತಪ್ಪಾಗಿ ಅರ್ಥೈಸಿಕೊಂಡ ನಮ್ಮ ದೇಶದ ಕೆಲವು ಪ್ರಜ್ಜೆಗಳು ಮಹಾ ಯುದ್ದ ಗೆದ್ದವರಂತೆ ತಟ್ಟೆ ಲೋಟ ಜೊತೆ ಜಾಗಟೆ ಬಾರಿಸಿಕೊಂಡು ನೂರು ನೂರು ಜನ ಗುಂಪು ಕಟ್ಟಿ ಬೀದಿಗೆ ಬಂದದ್ದು ಇಡಿ ಪ್ರಪಂಚವೇ ಕೇಕೆ ಹಾಕುವಂತೆ ಇತ್ತು.
ಇಷ್ಟೆಲ್ಲಾ ಆಗುವುದರೊಳಗೆ covid ಅದಾಗಲೇ ದೇಶವ್ಯಾಪಿ ಹರಡಿತ್ತು ಅನ್ನುವ ಸತ್ಯ ಎಲ್ಲರಿಗೂ ತಿಳಿದಿದ್ದರೂ ಕೇಂದ್ರ ಸರ್ಕಾರ ಬೇಜವಾಬ್ದಾರಿ ತನವನ್ನ ಜನರು ವಿರೋಧಿಸಲು ಟೀಕಿಸಲು ಆರಂಭಿಸುತ್ತಿದ್ದಂತೆ ಕೆಲವೊಂದಷ್ಟು ಮಾಧ್ಯಮಗಳು (ಅರ್ಥ ಮಾಡಿಕೊಳ್ಳಿ ) ಪೇಯ್ಡ್ ಮೀಡಿಯಾಗಳು ಜನರ ಗಮನವನ್ನು ಬೇರೆಡೆ ಸೆಳೆಯಲು ಉಪಯೋಗಿಸಿದ ಅಸ್ತ್ರವೆ ತಬ್ಲಿಗ್ ಜಮಾತ್ ನ ಕಾರ್ಯಕ್ರಮ ಮಾಧ್ಯಮಗಳು ಹೇಗೆ ಬಿಂಬಿಸಿದವು ಎಂದರೆ covid ಚೈನಾ ಇಂದ ಬಂದದ್ದು ಎನ್ನುವುದನ್ನೇ ಭಾರತದ ಜನ ಮರೆಯುವಂತೆ ಮಾಡಿಬಿಟ್ಟರು.
ಈ ಸುದ್ದಿಯನ್ನು ಕೇಳಿದಂತೆ ಜನರು ಧರ್ಮವನ್ನು ಧರ್ಮದ ಜನರನ್ನು ದ್ವೇಷಿಸುವ ರೀತಿ ಮಾಡಿಬಿಟ್ಟಿತು. ಈ ರೀತಿ ಕೇಂದ್ರದ ಬೇಜವಾಬ್ದಾರಿ ತನ. ವೈಫಲ್ಯವನ್ನು ಪ್ರಶ್ನಿಸುವ ಧೈರ್ಯ ತೋರದ ಮಾಧ್ಯಮಗಳು ಒಂದು ಸಮುದಾಯವನ್ನು ಇದಕ್ಕೆ ಬಲಿ ಕೊಡಲು ಎತ್ನಿಸಿದ್ದು ಇಡಿ ಪತ್ರಿಕೋದ್ಯಮ ಮತ್ತು ಮಾಧ್ಯಮ ತಲೆ ತಗ್ಗಿಸುವಂತದ್ದು ಎಂದು ಹೇಳಲು ಯಾವುದೇ ಅಂಜಿಕೆಯೂ ಇಲ್ಲ.ಹಾಗೊಂದು ವೇಳೆ ಈ ಕಾರ್ಯಕ್ರಮದಿಂದ covid ಬಂದಿದ್ದೆ ಆದಲ್ಲಿ ಇದಕ್ಕೆ ಮುಂಚೆ ಆದಂತ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದವರು ಹೊಣೆಯಾಗುವುದಿಲ್ಲವೆ ಎಂಬುದನ್ನು ಪ್ರಜ್ಞಾವಂತರು ಪ್ರಶ್ನಿಸಬೇಕಾಗುತ್ತದೆ.
December ನಲ್ಲಿ ಕಾಣಿಸಿಕೊಂಡ covid ಹೀಗಿದ್ದೂ ತಬ್ಲಿಗ್ ಜಮಾತ್ ಕಾರ್ಯಕ್ರಮ ನಡೆಸಲು ಅನುಮತಿ ಕೊಟ್ಟವರು ಯಾರು..? ಕೊಟ್ಟ ನಂತರ ತಪಾಸಣೆ ಮಾಡದೇ ಅವರನ್ನು ಒಳಗಡೆ ಬಿಟ್ಟುಕೊಂಡದ್ದು ಯಾರು ಮತ್ತು ಯಾಕೆ ಅನ್ನುವ ಹಲವಾರು ಪ್ರಶ್ನೆಗಳು ಇಂದಿಗೂ ಉತ್ತರಕ್ಕಾಗಿ ಕಾಯುತ್ತಿದೆ ಇಂತಹ ಪ್ರಶ್ನೆಗಳನ್ನು ಮಾಡಬೇಕಾದ ಮಾಧ್ಯಮದವರು ಒಂದು ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಅವರ ಮೇಲೆ ದ್ವೇಷ ಹುಟ್ಟುವಂತ ಸುದ್ದಿ ಪ್ರಸಾರ ಮಾಡಿದ್ದು ಅಕ್ಷಮ್ಯ ಅಪರಾಧ.
ಇದೇ ರೀತಿ ಮಧ್ಯಪ್ರದೇಶದ IAS ಅಧಿಕಾರಿಣಿ ಪಲ್ಲವಿ ಜೈನ್ ಅವರು, ವಿದೇಶದಿಂದ ಮರಳಿದ್ದ ತಮ್ಮ ಮಗನಿಗೆ ಕೊರೋನಾ ಸೋಂಕು ಇರುವ ನಿಜವನ್ನು ಮುಚ್ಚಿಟ್ಟು ಆತ ಕ್ವಾರಂಟೈನ್ ಅನುಭವಿಸುವುದನ್ನು ತಪ್ಪಿಸಲು ಸುಳ್ಳು ಹೇಳಿ ಆತನನ್ನು ಮನೆಗೆ ಕರೆದುಕೊಂಡು ಹೋಗಿದ್ದರು. ಆತನಿಂದ ಇವರಿಗೂ ಸೋಂಕು ತಗುಲಿದರೂ ಸೆಲ್ಫ್ ಕ್ವಾರಂಟೈನ್ ಗೆ ಒಳಪಡದೆ ಒಂದು ಸಭೆ ನಡೆಸಿ ಆ ಸಭೆಯಲ್ಲಿ ನೆರೆದಿದ್ದ ಸುಮಾರು 100 ಜನ ಅಧಿಕಾರಿಗಳಿಗೆ ಸೋಂಕು ಹರಡಲು ಕಾರಣರಾಗಿದ್ದಾರೆ.ಈಗ ಅವರೆಲ್ಲರೂ ಕ್ವಾರಂಟೈನ್ ನಲ್ಲಿ ಇದ್ದಾರೆ. ಈ ವಿಷಯವನ್ನು ಯಾಕೆ ಮಾಧ್ಯಮ ಸುದ್ದಿ ಮಾಡಲಿಲ್ಲ , ಸುದ್ದಿ ಮಾಡಿದ್ರೂ ಇದಕ್ಕೆ ಯಾಕೆ ಧರ್ಮದ ಬಣ್ಣ ಬಳಿಯಲಿಲ್ಲ ಅನ್ನೋದನ್ನ ಯೋಚನೆ ಮಾಡಬೇಕಾಗುತ್ತದೆ.
- ನೆನಪಿರಲಿ ತಬ್ಲಿಗ್ ಜಮಾತ್ ವಿರುದ್ಧ ಸುಳ್ಳು ಸುದ್ದಿ ಮಾಡಿದ ಝೀ ನ್ಯೂಸ್ ಕ್ಷಮೆ ಯಾಚಿಸಿದೆ.
- ನೆನಪಿರಲಿ ತಬ್ಲಿಗ್ ಜಮಾತ್ ಕಾರ್ಯಕ್ರಮ ಹಾಜರಾಗಿದ್ದ 100 ಜನ ಕಾಶ್ಮೀರ್ ಪ್ರಜೆಗಳಲ್ಲಿ 100 ಕೂಡ ನೆಗಟಿವ್ report ಬಂದಿದೆ.
- ನೆನಪಿರಲಿ covid ಭಾರತಕ್ಕೆ ಬರಲು ಅನುವು ಮಾಡಿಕೊಟ್ಟಿದ್ದು ಕೇಂದ್ರ ಸರ್ಕಾರದ ಬೇಜಾವಾಬ್ದಾರಿ, ಅಸಡ್ಡೆ , ವಿಶೇಷ ವಿಮಾನಗಳ ಪ್ರಜೆಗಳು, ಏರ್ಪೋರ್ಟ್ ನಲ್ಲಿ ಸರಿಯಾದ ತಪಾಸಣೆ ಮಾಡದಿರುವುದು ಮತ್ತು ಕ್ವಾರಂಟೈನ್ ನಲ್ಲಿ ಇರಿಸಿಕೊಳ್ಳಬೇಕಾದವರನ್ನು ಕೇವಲ ಸೀಲ್ ಹೊಡೆದು ಮನೆಗೆ ಕಳುಹಿಸಿದ್ದು , ಸೀಲ್ ಹೊಡೆಸಿಕೊಂಡವರು ಮನೆಯಲ್ಲಿ ಕೂರದೆ ಬೀದಿ ಬೀದಿ ಸುತ್ತಿದ್ದು ಇದರಲ್ಲಿ ಹಿಂದೂ , ಮುಸ್ಲಿಂ , ಕ್ರೈಸ್ತ ಎಲ್ಲರೂ ಇದ್ದಾರೆ ಅನ್ನೋದನ್ನ ಮಾಧ್ಯಮ ಅರಿತುಕೊಳ್ಳಬೇಕು.
ಮತ್ತು ತಪ್ಪು ಯಾರೇ ಮಾಡಿದ್ರೂ ತಪ್ಪೇ ಅದನ್ನ ಕೇವಲ ಧರ್ಮಾಧಾರಿತವಾಗಿ ಬಿಂಬಿಸುವುದು , ಅಥವಾ ಒಬ್ಬರು ಇಬ್ಬರು ಮಾಡಿದ ತಪ್ಪಿಗೆ ಐಡಿ ಸಮುದಾಯವನ್ನು ದೂಷಿಸುವುದು ತಪ್ಪು.
ಕೊನೆಯದಾಗಿ covid ದೇಶಕ್ಕೆ ಕಾಲಿಡಲು ಮೊದಲ ಕಾರಣ ಕೇಂದ್ರ ಸರ್ಕಾರದ ಬೇಜವಾಬ್ದಾರಿ ಅನ್ನೋದಂತು ಸುಳ್ಳಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪ್ರಮುಖ 8 ಕ್ಲಬ್ಗಳ ಮೇಲೆ ದಿಢೀರ್ ದಾಳಿ; ನಿಯಮ ಉಲ್ಲಂಘನೆಗೆ ನೋಟಿಸ್
ಸುದ್ದಿದಿನ,ಬೆಂಗಳೂರು: ನಗರದ ಪ್ರತಿಷ್ಠಿತ ಕ್ಲಬ್ಗಳಲ್ಲಿಯೂ ಆಹಾರ ಸುರಕ್ಷತೆ ಮತ್ತು ನೈರ್ಮಲ್ಯ ನಿಯಮಗಳ ಉಲ್ಲಂಘನೆ ಕಂಡುಬಂದಿರುವುದು ಆತಂಕ ಮೂಡಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅಧಿಕಾರಿಗಳು ನಗರದ ಪ್ರಮುಖ 8 ಕ್ಲಬ್ಗಳ ಮೇಲೆ ಮಂಗಳವಾರ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ ವೇಳೆ ಹಲವು ಗಂಭೀರ ಲೋಪಗಳು ಬೆಳಕಿಗೆ ಬಂದಿವೆ. ಆಹಾರ ಸಂಗ್ರಹಣಾ ಸ್ಥಳದಲ್ಲಿ ಅಶುಚಿತ್ವ, ಜಿರಳೆ ಹಾಗೂ ಇತರೆ ಕೀಟಗಳ ಹಾವಳಿ, ಅಸಮರ್ಪಕ ಆಹಾರ ಸಂಗ್ರಹಣೆ ಮತ್ತು ಅವಧಿ ಮೀರಿದ ಪದಾರ್ಥಗಳು ಪತ್ತೆಯಾಗಿವೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ಹಾಗೂ ನಿಯಮಗಳು-2011ರ ಅನ್ವಯ ಅಧಿಕಾರಿಗಳ ತಂಡಗಳನ್ನು ರಚಿಸಲಾಗಿತ್ತು. ಬೌರಿಂಗ್ ಕ್ಲಬ್, ಸೆಂಚುರಿ ಕ್ಲಬ್, ಕೆಎಸ್ಸಿಎ ಕ್ಲಬ್, ಕ್ಯಾಥೋಲಿಕ್ ಕ್ಲಬ್, ಟೆನ್ನಿಸ್ ಕ್ಲಬ್, ವಿಜಯನಗರ ಕ್ಲಬ್, ಮಹಾಲಕ್ಷ್ಮಿ ಲೇಔಟ್ ಕ್ಲಬ್ ಮತ್ತು ಮಲ್ಲೇಶ್ವರ ಕ್ಲಬ್ಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದರು.
http://Visit : www.suddidina.com
ಬೇಳೆಕಾಳಿನಲ್ಲಿ ಹುಳು, ದಾಸ್ತಾನು ಕೇಂದ್ರದಲ್ಲಿ ಜಿರಳೆ
ಬೌರಿಂಗ್ ಕ್ಲಬ್ನಲ್ಲಿ ಬೇಳೆಕಾಳುಗಳಲ್ಲಿ ಹುಳುಗಳು ಕಂಡುಬಂದಿದ್ದು, ದಾಸ್ತಾನು ಕೇಂದ್ರದಲ್ಲಿ ಅಶುಚಿತ್ವ ಹಾಗೂ ಜಿರಳೆಗಳಿರುವುದು ಪತ್ತೆಯಾಗಿದೆ. ಸೆಂಚುರಿ ಕ್ಲಬ್ನಲ್ಲಿಯೂ ಕೀಟಗಳ ಹಾವಳಿ ಮತ್ತು ನೈರ್ಮಲ್ಯದ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ಎರಡೂ ಕ್ಲಬ್ಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ.
ಕೆಎಸ್ಸಿಎ ಕ್ಲಬ್ನಲ್ಲೂ ಹಲವು ಲೋಪ
ಕೆಎಸ್ಸಿಎ ಕ್ಲಬ್ನಲ್ಲಿ ಸಿಬ್ಬಂದಿಯ ವೈಯಕ್ತಿಕ ಸ್ವಚ್ಛತೆ, ಆಹಾರ ಪೊಟ್ಟಣಗಳ ಲೇಬಲಿಂಗ್ ಸೇರಿದಂತೆ ಹಲವು ನಿಯಮ ಉಲ್ಲಂಘನೆಗಳು ಕಂಡುಬಂದಿವೆ. ಅಸಮರ್ಪಕ ಒಳಚರಂಡಿ ವ್ಯವಸ್ಥೆ, ಶೀತಲೀಕರಣ ಘಟಕದಲ್ಲಿನ ಅನೈರ್ಮಲ್ಯ ಹಾಗೂ ಸಸ್ಯಾಹಾರಿ ಮತ್ತು ಮಾಂಸಾಹಾರಿ ಆಹಾರವನ್ನು ಪ್ರತ್ಯೇಕವಾಗಿ ಸಂಗ್ರಹಿಸದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಪಾತ್ರೆ ತೊಳೆಯಲು ಬಿಸಿನೀರಿನ ವ್ಯವಸ್ಥೆಯ ಕೊರತೆಯೂ ಕಂಡುಬಂದಿದೆ.
ಅವಧಿ ಮೀರಿದ ಅಣಬೆ ಪತ್ತೆ
ಕ್ಯಾಥೋಲಿಕ್ ಕ್ಲಬ್ನಲ್ಲಿ ಅವಧಿ ಮೀರಿದ 10 ಪ್ಯಾಕೇಟ್ ಅಣಬೆಗಳು ಪತ್ತೆಯಾಗಿವೆ. ಆಹಾರ ಪದಾರ್ಥಗಳ ಮೇಲೆ ಅಗತ್ಯ ಲೇಬಲ್ಗಳಿಲ್ಲದಿರುವುದು ಹಾಗೂ ಸ್ವಚ್ಛತೆಯ ಕೊರತೆಯ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. ಟೆನ್ನಿಸ್ ಕ್ಲಬ್ನಲ್ಲಿ ಆಹಾರ ನಿರ್ವಹಣಾ ಸಿಬ್ಬಂದಿ ವೈದ್ಯಕೀಯ ಪ್ರಮಾಣಪತ್ರ ಹೊಂದಿರದಿರುವುದು ಕಂಡುಬಂದಿದೆ.
ವಿಜಯನಗರ, ಮಹಾಲಕ್ಷ್ಮಿ ಲೇಔಟ್ ಮತ್ತು ಮಲ್ಲೇಶ್ವರ ಕ್ಲಬ್ಗಳಲ್ಲಿಯೂ ಆಹಾರ ಪದಾರ್ಥಗಳ ಅವಧಿ ಕುರಿತ ಲೇಬಲಿಂಗ್ ಕೊರತೆ ಹಾಗೂ ಸ್ವಚ್ಛತೆ-ನೈರ್ಮಲ್ಯದ ಸಮಸ್ಯೆಗಳು ಪತ್ತೆಯಾಗಿವೆ.
ಹೋಟೆಲ್ಗಳಿಗೂ ಕಟ್ಟುನಿಟ್ಟಿನ ಸೂಚನೆ
ಕ್ಲಬ್ಗಳ ಜೊತೆಗೆ ಹೋಟೆಲ್ಗಳು ಹಾಗೂ ಇತರೆ ಆಹಾರ ಉದ್ಯಮಗಳಲ್ಲಿನ ಲೋಪಗಳ ಬಗ್ಗೆಯೂ ಇಲಾಖೆ ಗಮನಹರಿಸಿದೆ. ಮುಂದಿನ 15 ದಿನಗಳಲ್ಲಿ ಹೋಟೆಲ್ ಅಸೋಸಿಯೇಷನ್, ರೆಸ್ಟೋರೆಂಟ್ ಅಸೋಸಿಯೇಷನ್ ಮತ್ತು ಇಂದಿರಾ ಕ್ಯಾಂಟೀನ್ ಗುತ್ತಿಗೆದಾರರೊಂದಿಗೆ ಸಭೆ ನಡೆಸಲು ನಿರ್ಧರಿಸಲಾಗಿದೆ. ಅಡುಗೆಮನೆ ನಿರ್ವಹಣೆ, ಆಹಾರ ತಯಾರಿ ಮತ್ತು ನೈರ್ಮಲ್ಯ ಕುರಿತು ಮಾರ್ಗಸೂಚಿ ಹಾಗೂ ತರಬೇತಿ ನೀಡುವ ಚಿಂತನೆಯೂ ಇದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ದಿನದ ಸುದ್ದಿ
ಸೆ.2ರ ಹುಟ್ಟುಹಬ್ಬ ಆಚರಿಸದಿರಲು ಕಿಚ್ಚನ ನಿರ್ಧಾರ: “ನಿಮ್ಮ ಪ್ರೀತಿಯೇ ನನಗೆ ದೊಡ್ಡ ಮೈಲಿಗಲ್ಲು
ಸುದ್ದಿದಿನ,ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬ ಎಂದರೆ ಅಭಿಮಾನಿಗಳಿಗೆ ಹಬ್ಬದ ವಾತಾವರಣ. ಆದರೆ ಈ ಬಾರಿ ಸೆಪ್ಟೆಂಬರ್ 2ರಂದು ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಳ್ಳದಿರಲು ಸುದೀಪ್ ನಿರ್ಧರಿಸಿದ್ದಾರೆ. ವೈಯಕ್ತಿಕ ಹಾಗೂ ಬಲವಾದ ಕೆಲವು ಕಾರಣಗಳಿಂದ ಈ ವರ್ಷದ ಜನ್ಮದಿನದ ಸಂಭ್ರಮದಿಂದ ದೂರ ಉಳಿಯುತ್ತಿರುವುದಾಗಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಭಾವನಾತ್ಮಕ ಪತ್ರದ ಮೂಲಕ ತಿಳಿಸಿದ್ದಾರೆ.
ಹುಟ್ಟುಹಬ್ಬದಂದು ಮನೆಯ ಬಳಿ ಅಭಿಮಾನಿಗಳನ್ನು ಭೇಟಿಯಾಗಲು ತಾವು ಲಭ್ಯವಿರುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಕಿಚ್ಚ, ಯಾವುದೇ ರೀತಿಯ ಗದ್ದಲ ಅಥವಾ ಸತ್ಕಾರಕ್ಕೆ ಮುಂದಾಗದಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಸಾಮಾನ್ಯವಾಗಿ ಸಾವಿರಾರು ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಮನೆ ಮುಂದೆ ಸೇರುವ ಸಂದರ್ಭದಲ್ಲೇ, ಈ ಬಾರಿ ಸುದೀಪ್ ಅವರ ಮನವಿ ವಿಶೇಷ ಗಮನ ಸೆಳೆದಿದೆ.
ಉಡುಗೊರೆ ಬೇಡ, ಸಮಾಜಕ್ಕೆ ಸಹಾಯ ಮಾಡಿ
ತಮ್ಮ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ನೀಡಲು ಉದ್ದೇಶಿಸಿರುವ ಉಡುಗೊರೆಗಳ ಬದಲಾಗಿ ಆ ಹಣವನ್ನು ಸಮಾಜಮುಖಿ ಕಾರ್ಯಗಳಿಗೆ ಬಳಸುವಂತೆ ಸುದೀಪ್ ಕರೆ ನೀಡಿದ್ದಾರೆ. ತಮ್ಮ ಹೆಸರಿನಲ್ಲಿ ನಡೆಯುವ ಸಂಭ್ರಮಕ್ಕಿಂತ ಸಮಾಜಕ್ಕೆ ನೆರವಾಗುವ ಕೆಲಸವೇ ತಮಗೆ ನಿಜವಾದ ಸಂತೋಷ ನೀಡುತ್ತದೆ ಎಂಬ ಸಂದೇಶವನ್ನು ಅವರು ನೀಡಿದ್ದಾರೆ.
ಅಭಿಮಾನಿಗಳು ತಮ್ಮ ತಮ್ಮ ಊರು, ಪ್ರದೇಶಗಳಲ್ಲಿ ಸಮಾಜಪರ ಕಾರ್ಯಕ್ರಮಗಳನ್ನು ಆಯೋಜಿಸುವುದೇ ತಮಗೆ ದೊರೆಯುವ ಅತ್ಯುತ್ತಮ ಆಶೀರ್ವಾದ ಎಂದು ಕಿಚ್ಚ ಹೇಳಿದ್ದಾರೆ. ಈ ಮೂಲಕ ಅಭಿಮಾನಿಗಳ ಪ್ರೀತಿಗೆ ಹೊಸ ಅರ್ಥ ನೀಡುವ ಪ್ರಯತ್ನ ಮಾಡಿದ್ದಾರೆ.
30 ವರ್ಷಗಳ ಸಿನಿ ಪಯಣದ ನೆನಪು
ಕನ್ನಡ ಚಿತ್ರರಂಗಕ್ಕೆ ಸುದೀಪ್ ಬರೋಬ್ಬರಿ ಮೂರು ದಶಕಗಳನ್ನು ಅರ್ಪಿಸಿದ್ದಾರೆ. ಸಿನಿಮಾ ತಮ್ಮ ಪರಮ ಕಾಯಕವಾಗಿದ್ದು, ಕೆಲವೊಮ್ಮೆ ಸಿನಿಮಾಗಳು ತಡವಾಗಬಹುದು; ಅದಕ್ಕೂ ಕಾರಣಗಳಿರುತ್ತವೆ ಎಂದು ಅವರು ಹೇಳಿದ್ದಾರೆ. ಈ ಮಾತುಗಳ ಮೂಲಕ ತಮ್ಮ ವೃತ್ತಿಜೀವನದ ಮುಂದಿನ ಹೆಜ್ಜೆಗಳ ಬಗ್ಗೆ ಕುತೂಹಲ ಮೂಡಿಸಿದ್ದಾರೆ.
“ಸಿಂಹ ಸುಮ್ಮನೆ ಕುಳಿತಿದೆ ಎಂದರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ” ಎಂಬ ಖಡಕ್ ಡೈಲಾಗ್ ಮೂಲಕ ಮುಂದಿನ ಸಿನಿಮಾ ಅಥವಾ ಹೊಸ ಯೋಜನೆಗೆ ಸುದೀಪ್ ಸುಳಿವು ನೀಡಿದ್ದಾರೆ. ಹೀಗಾಗಿ ಅವರ ಪತ್ರ ಕೇವಲ ಹುಟ್ಟುಹಬ್ಬದ ಮನವಿಯಾಗದೆ, ಅಭಿಮಾನಿಗಳಲ್ಲಿ ಹೊಸ ನಿರೀಕ್ಷೆಯನ್ನೂ ಹುಟ್ಟುಹಾಕಿದೆ.
https://x.com/KicchaSudeep/status/2092857077706506638
“ಕನ್ನಡ ನನ್ನ ಸತ್ಯ.. ಕನ್ನಡದಿಂದ ನಾನು ನಿತ್ಯ”
ತಮ್ಮ ಮಾತೃಭಾಷೆ ಕನ್ನಡದ ಮೇಲಿನ ಪ್ರೀತಿಯನ್ನೂ ಸುದೀಪ್ ಮತ್ತೊಮ್ಮೆ ವ್ಯಕ್ತಪಡಿಸಿದ್ದಾರೆ. ಎಲ್ಲೇ ಹೋದರೂ ಕನ್ನಡಿಗರನ್ನು ರಂಜಿಸುವ ವಿಷಯದಲ್ಲಿ ಎಂದಿಗೂ ರಾಜಿಯಾಗುವುದಿಲ್ಲ ಎಂದು ಹೇಳಿರುವ ಅವರು, ಕಳೆದ 30 ವರ್ಷಗಳಿಂದ ಅಭಿಮಾನಿಗಳಿಂದ ದೊರೆತ ಪ್ರೀತಿ, ಹಾರೈಕೆ, ಚಪ್ಪಾಳೆ ಮತ್ತು ಶಿಳ್ಳೆಗಳೇ ತಮ್ಮ ದೊಡ್ಡ ಬಲ ಎಂದು ಸ್ಮರಿಸಿದ್ದಾರೆ.
“ನಮ್ಮನ್ನು ಮತ್ತು ನಿಮ್ಮನ್ನು ಎಂದಾದರೂ ಬೇರ್ಪಡಿಸಲು ಸಾಧ್ಯವೇ?” ಎಂದು ಪ್ರಶ್ನಿಸುವ ಮೂಲಕ ಅಭಿಮಾನಿಗಳೊಂದಿಗಿನ ತಮ್ಮ ಭಾವನಾತ್ಮಕ ಬಂಧವನ್ನು ತೆರೆದಿಟ್ಟಿದ್ದಾರೆ. ಕೊನೆಯಲ್ಲಿ “Luv u all always…” ಎಂದು ಹೇಳುವ ಮೂಲಕ ಕಿಚ್ಚ ತಮ್ಮ ಅಭಿಮಾನಿಗಳ ಮೇಲಿನ ಅಪಾರ ಪ್ರೀತಿಯನ್ನು ಮತ್ತೊಮ್ಮೆ ಸಾರಿದ್ದಾರೆ.

ದಿನದ ಸುದ್ದಿ
ಬಿಡುಗಡೆ ಬೆನ್ನಲ್ಲೇ ನಿರ್ದೇಶಕಿಯ ಹಳೆಯ ಮಾತಿಗೆ ಹೊಸ ವಿವಾದ: ‘ಟಾಕ್ಸಿಕ್’ ಸುತ್ತ ಟ್ರೋಲ್ಗಳ ಸದ್ದು
ಸುದ್ದಿದಿನ,ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ನಿರ್ದೇಶಕಿ ಗೀತು ಮೋಹನ್ದಾಸ್ ಅವರ ಹಳೆಯ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗಿದೆ. ಚಿತ್ರದ ಕುರಿತು ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ನಿರ್ದೇಶಕಿಯ ಸಿನಿಮಾ ಮಾಡುವ ವಿಧಾನಕ್ಕೆ ಸಂಬಂಧಿಸಿದ ವಿಡಿಯೋ ಇದೀಗ ಚರ್ಚೆಯ ಕೇಂದ್ರಬಿಂದುವಾಗಿದೆ.
ವೈರಲ್ ವಿಡಿಯೋದಲ್ಲಿ ಗೀತು ಮೋಹನ್ದಾಸ್ ಅವರು, ತಾವು ಬರೆಯುವುದು, ಚಿತ್ರೀಕರಿಸುವುದು ಹಾಗೂ ಎಡಿಟ್ ಮಾಡುವ ಪ್ರಕ್ರಿಯೆಯಲ್ಲಿ ಸಿನಿಮಾ ನಿಧಾನವಾಗಿ ರೂಪುಗೊಳ್ಳುತ್ತದೆ ಎಂಬ ಅರ್ಥದಲ್ಲಿ ಮಾತನಾಡಿದ್ದಾರೆ. ತಾವು ಸ್ಕ್ರಿಪ್ಟ್ಗೆ ಕಟ್ಟುನಿಟ್ಟಾಗಿ ಅಂಟಿಕೊಂಡು ಕೆಲಸ ಮಾಡುವುದಿಲ್ಲ ಎಂಬ ಅವರ ಹೇಳಿಕೆಯೇ ಇದೀಗ ನೆಟ್ಟಿಗರ ಗಮನ ಸೆಳೆದಿದೆ.
http://Visit : www.suddidina.com
‘ಸ್ಕ್ರಿಪ್ಟ್ನಂತೆ ಸಿನಿಮಾ ಸಿಗುವುದಿಲ್ಲ’ ಎಂದಿದ್ದ ನಿರ್ದೇಶಕಿ
ನಿರ್ಮಾಪಕರನ್ನು ಭೇಟಿಯಾಗುವಾಗಲೇ ತಮ್ಮ ಕೆಲಸದ ಶೈಲಿಯನ್ನು ಸ್ಪಷ್ಟಪಡಿಸುವುದಾಗಿ ಗೀತು ಹೇಳಿರುವುದು ವಿಡಿಯೋದಲ್ಲಿ ಕಾಣಿಸುತ್ತದೆ. ಸ್ಕ್ರಿಪ್ಟ್ನಲ್ಲಿ ಓದುವ ಕಥೆಯಂತೆಯೇ ಅಂತಿಮ ಸಿನಿಮಾ ಇರಬೇಕೆಂದಿಲ್ಲ ಎಂಬ ಸಂದೇಶವನ್ನು ಅವರು ನೀಡಿದ್ದರು.
ಸಾಮಾನ್ಯವಾಗಿ ದೊಡ್ಡ ಬಜೆಟ್ನ ಸಿನಿಮಾಗಳಲ್ಲಿ ಕಥೆ, ಚಿತ್ರಕಥೆ ಮತ್ತು ಚಿತ್ರೀಕರಣದ ಯೋಜನೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ. ಹೀಗಾಗಿ ಗೀತು ಅವರ ಈ ಹಳೆಯ ಹೇಳಿಕೆಯನ್ನು ಕೆಲವರು ಪ್ರಶ್ನಿಸುತ್ತಿದ್ದರೆ, ಮತ್ತೊಂದೆಡೆ ನಿರ್ದೇಶಕರ ಸೃಜನಶೀಲ ಪ್ರಕ್ರಿಯೆ ಒಂದೇ ರೀತಿಯಾಗಿರಬೇಕೆಂದಿಲ್ಲ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ.
https://x.com/alpasankhyata/status/2092620787698094334
‘ಟಾಕ್ಸಿಕ್’ ಮೇಲೆ ಪರಿಣಾಮ ಬೀರಿದ ಹಳೆಯ ಹೇಳಿಕೆ?
‘ಟಾಕ್ಸಿಕ್’ ಬಿಡುಗಡೆ ಬಳಿಕ ಸಿನಿಮಾದ ಕಥೆ, ನಿರೂಪಣೆ, ಆಕ್ಷನ್ ಹಾಗೂ ಪಾತ್ರಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆ ನಡೆಯುತ್ತಿದೆ. ಇದೇ ಸಮಯದಲ್ಲಿ ಹಳೆಯ ವಿಡಿಯೋ ವೈರಲ್ ಆಗಿರುವುದರಿಂದ, ಸಿನಿಮಾದಲ್ಲಿನ ಕೆಲವು ಅಂಶಗಳನ್ನು ಈ ಹೇಳಿಕೆಯೊಂದಿಗೆ ಹೋಲಿಸಿ ನೆಟ್ಟಿಗರು ಚರ್ಚಿಸುತ್ತಿದ್ದಾರೆ.
ಚಿತ್ರವು ಸ್ವಾತಂತ್ರ್ಯಪೂರ್ವದ ಗೋವಾ ಹಿನ್ನೆಲೆಯಲ್ಲಿನ ಅಪರಾಧ ಜಗತ್ತು ಮತ್ತು ಅಂಡರ್ವರ್ಲ್ಡ್ ಕಥೆಯನ್ನು ಒಳಗೊಂಡಿದೆ. ಯಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ತಾರಾ ಸುತಾರಿಯಾ ಹಾಗೂ ರುಕ್ಮಿಣಿ ವಸಂತ್ ಸೇರಿದಂತೆ ದೊಡ್ಡ ತಾರಾಬಳಗವಿದೆ.
ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಆರಂಭ
ಭಾರೀ ನಿರೀಕ್ಷೆಯೊಂದಿಗೆ ಬಿಡುಗಡೆಯಾದ ‘ಟಾಕ್ಸಿಕ್’ ಮೊದಲ ದಿನವೇ ₹100 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ ಎಂಬ ವರದಿಗಳು ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ದೊಡ್ಡ ಆರಂಭ ಪಡೆದಿರುವುದನ್ನು ಸೂಚಿಸುತ್ತವೆ. ಆದರೆ ಪ್ರೇಕ್ಷಕರ ಪ್ರತಿಕ್ರಿಯೆ ಮಾತ್ರ ಮಿಶ್ರವಾಗಿದೆ.
ಸದ್ಯ ಗೀತು ಮೋಹನ್ದಾಸ್ ಅವರ ಹಳೆಯ ಹೇಳಿಕೆ ಮತ್ತು ‘ಟಾಕ್ಸಿಕ್’ ಚಿತ್ರದ ಕುರಿತು ನಡೆಯುತ್ತಿರುವ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಮುಂದುವರಿದಿದೆ. ವೈರಲ್ ವಿಡಿಯೋ ಚಿತ್ರದ ಸೃಜನಶೀಲ ವಿಧಾನಕ್ಕೆ ಸಂಬಂಧಿಸಿದ ಹಳೆಯ ಅಭಿಪ್ರಾಯವಾಗಿದ್ದು, ಅದನ್ನು ಇಂದಿನ ಚಿತ್ರದ ಫಲಿತಾಂಶದೊಂದಿಗೆ ಹೇಗೆ ಸಂಪರ್ಕಿಸಬೇಕು ಎಂಬುದರ ಬಗ್ಗೆ ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

-
ಅಂತರಂಗ5 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ6 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ದಿನದ ಸುದ್ದಿ2 days agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ2 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ3 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ3 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ2 days agoಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
-
ದಿನದ ಸುದ್ದಿ3 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ


