ದಿನದ ಸುದ್ದಿ
ದಾವಣಗೆರೆ | ಸೀಲ್ಡೌನ್ ಪ್ರದೇಶದ ಜನತೆಯ ಮನೆಗೆ ಪಡಿತರ ವಿತರಣೆ ; ಯಾರೂ ಹೊರಗೆ ಬರೋ ಹಾಗಿಲ್ಲ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/04/Davangere_Commander_suddidina.jpg&description=ದಾವಣಗೆರೆ | ಸೀಲ್ಡೌನ್ ಪ್ರದೇಶದ ಜನತೆಯ ಮನೆಗೆ ಪಡಿತರ ವಿತರಣೆ ; ಯಾರೂ ಹೊರಗೆ ಬರೋ ಹಾಗಿಲ್ಲ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/04/Davangere_Commander_suddidina.jpg&description=ದಾವಣಗೆರೆ | ಸೀಲ್ಡೌನ್ ಪ್ರದೇಶದ ಜನತೆಯ ಮನೆಗೆ ಪಡಿತರ ವಿತರಣೆ ; ಯಾರೂ ಹೊರಗೆ ಬರೋ ಹಾಗಿಲ್ಲ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ದಾವಣಗೆರೆ: ನಿಜಲಿಂಗಪ್ಪ ಲೇಔಟ್ ಕೊವೀಡ್-19 ಸೋಂಕಿತ ವ್ಯಕ್ತಿಯ ಮನೆಯ ಸುತ್ತ ಮುತ್ತಲಿನ 100 ಮೀಟರ್ ಪ್ರದೇಶವನ್ನು ಈಗಾಗಲೇ ಸೀಲ್ಡೌನ್ ಮಾಡಲಾಗಿದ್ದು, ಅದನ್ನು ನಿಯಂತ್ರ್ರಿತ ಪ್ರದೇಶ ಎಂದು ಗುರುತಿಸಿ ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ ಅವರನ್ನು ಘಟಕ ನಿಯಂತ್ರಕರಾಗಿ (ಕಮಾಂಡರ್) ನಿಯೋಜನೆ ಮಾಡಲಾಗಿದೆ.
ಸೋಮವಾರ ದಾವಣಗೆರೆಯ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಘಟನಾ ಕಮಾಂಡರ್ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ನಿಯಂತ್ರಣ ವಲಯಕ್ಕೆ ಸಂಬಂದಿಸಿದಂತೆ ಯಾವರೀತಿ ಸಂಪೂರ್ಣ ಸೀಲ್ಡೌನ್ ನಿಯಮಾವಳಿಗಳನ್ನು ಅನುಸರಿಸಬೇಕು ಎಂಬವುದರ ಕುರಿತು ಅಧಿಕಾರಿಗಳ ಸಭೆ ಕರೆದು ಸೂಚನೆ ನೀಡಿದರು.
ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಾಸಿಟಿವ್ ಪ್ರಕರಣ ಹೊಂದಿರುವ ಜಿಲ್ಲೆಗಳಲ್ಲಿ 28 ದಿನಗಳಲ್ಲಿ ಯಾವುದೇ ಹೊಸ ಪ್ರಕರಣಗಳು ಪತ್ತೆಯಾಗದಿರುವ ಪ್ರದೇಶವನ್ನು ನಿಯಂತ್ರಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ ಈ ನಿಯಂತ್ರಿತ ಪ್ರದೇಶದಲ್ಲಿ ವಿವಿಧ ಇಲಾಖೆಗಳ ಪಾತ್ರ ಕುರಿತು ಯಾವರೀತಿ ಕಟ್ಟುನಿಟಿನ ಕ್ರಮಗಳನ್ನು ಕೈಗೊಳ್ಳಬೇಕು ಹೇಗೆ ನಿಯಂತ್ರಿಸಬೇಕು ಎಂದು ಚರ್ಚಿಸಿ, ಸೂಚನೆಗಳನ್ನು ನೀಡಿದರು.
ಪೊಲೀಸ್ ಇಲಾಖೆ : ನಿಯಂತ್ರಿತ ವಲಯದ ಎಲ್ಲಾ ಪ್ರವೇಶ ದ್ವಾರಗಳನ್ನು ಶಾಶ್ವತವಾಗಿ ತೆಡೆಗೋಡೆ ಹಾಕುವ ಮೂಲಕ ಪೊಲೀಸ್ ನಾಕಾಬಂಧಿ ಮಾಡಬೇಕು. ನಿಯಂತ್ರಿತ ಪ್ರದೇಶದಲ್ಲಿ ಯಾವುದೇ ವ್ಯಕ್ತಿ ಯಾವುದೇ ವಿವಿಧ ಉದ್ದೇಶಗಳಿಂದ ಮನೆಯಿಂದ ಹೊರೆಗೆ ಬರಲು ಅವಕಾಶ ನೀಡಬಾರದು ಪ್ರತಿಯೊಂದು ವಲಯದಲ್ಲಿ ಒಂದೇ ಒಂದು ಪ್ರವೇಶ ಮತ್ತು ನಿರ್ಗಮನ ದ್ವಾರವಿರಬೇಕು. ನಿಯಂತ್ರಿತ ವಲಯದ ಒಳಗೆ ಮತ್ತು ಹೊರಗೆ ಖಾಸಗಿ ವಾಹನ ಸಂಚಾರಕ್ಕೆ ಅವಕಾಶ ನೀಡಬಾರದು ಇಡೀ ಪ್ರದೇಶವನ್ನು ಸಂಪೂರ್ಣವಾಗಿ ಸೀಲ್ ಆಗುವಂತೆ ನೋಡಿಕೊಳ್ಳುವ ಜವಾಬ್ದಾರಿ ಮತ್ತು ಅಗತ್ಯ ಸೇವೆಗಳು, ವೈದ್ಯಕೀಯ ತುರ್ತು ಸಂದರ್ಭಗಳಿಗೆ ಪೊಲೀಸ್ ಎಮರ್ಜೆನ್ಸಿ ಪಾಸ್ಗಳನ್ನು ನೀಡುವುದು. ನಿಯಂತ್ರಿತ ವಲಯದಲ್ಲಿ ಸಂಪೂರ್ಣ ಲಾಕ್ಡೌನ್ ಖಾತರಿ ಪಡಿಸಲು ಡ್ರೋನ್ಗಳನ್ನು ಬಳಸಬೇಕು ಎಂದರು.
ಆರೋಗ್ಯ ಇಲಾಖೆ : ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿಗಳು ಜಂಟಿಯಗಿ ಮತ್ತು ಮುನ್ನೆಚ್ಚರಿಕೆ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ನಿಯಂತ್ರಿತ ವಲಯದಲ್ಲಿ ಆರೋಗ್ಯ ಔಟ್ ಪೋಸ್ಟ್ ಆರಂಭಿಸಿ ಓರ್ವ ವ್ಯೆದ್ಯ ಹಾಗೂ ಸತತ ಐಇಸಿ ಪ್ರಚಾರದ ಜೊತೆಗೆ ದಿನಕ್ಕೆ ಎರಡು ಭಾರಿ ಜನಸಂಪರ್ಕಗಳ ಪತ್ತೆ ಕಾರ್ಯಕ್ಕೆ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಬೇಕು.
ಜನಸಂಪರ್ಕ ನಿಗಾ ಪತ್ತೆ ಕಾರ್ಯವನ್ನು ಶಿಷ್ಠಾಚಾರದ ನಿಯಮಗಳ ಪ್ರಕಾರ ನಡೆಸಬೇಕು ಹೆಚ್ಚಿನ ರಿಸ್ಕ್ ಸಂಪರ್ಕದ ವ್ಯಕ್ತಿಗಳನ್ನು ತಕ್ಷಣವೇ ಸಾಂಸ್ಥಿಕ ದಿಗ್ಬಂದನ ಕೇಂದ್ರಕ್ಕೆ ರವಾನಿಸುವ ಹಾಗೂ ಕಡಿಮೆ ಸಂಪರ್ಕದ ವ್ಯಕ್ತಿಗಳನ್ನು ಗೃಹ ದಿಗ್ಬಂದನಕ್ಕೆ ಒಳಪಡಿಸಬೇಕು ಅಧಿಕ ಅಪಾಯ ಮತ್ತು ಕಡಿಮೆ ಅಪಾಯವಿರುವ ವ್ಯಕ್ತಿಗಳಿಂದ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸುವ ಹೊಣೆಗಾರಿಕೆ ಆರೋಗ್ಯ ಇಲಾಖೆ ತಂಡದ್ದಾಗಿರುತ್ತದೆ. ಈ ನಿಟ್ಟಿನಲ್ಲಿ ಇಲಾಖೆಗಳು ಕ್ರಮ ವಹಿಸಬೇಕು ಎಂದರು.
ಮಹಾನಗರಪಾಲಿಕೆ : ನೈರ್ಮಲಿಕರಣದ ನಿರ್ವಹಣೆ ಮಾಡುವುದು ಪ್ರತಿದಿನವೂ ಘನತ್ಯಾಜ್ಯ ನಿರ್ವಹಣೆ ಮತ್ತು ಸೋಂಕು ನಿವಾರಣೆ ಮಾಡುವ ಕೆಲಸವನ್ನು ನಿರ್ವಹಿಸತಕ್ಕದ್ದು ಮತ್ತು ಕುಡಿಯುವ ನೀರಿನ ಸರಬರಾಜು ಮಾಡುವ ಕೆಲಸವನ್ನು ಮಾಡಬೇಕು ಅಗತ್ಯವಿರುವವರಿಗೆ ಆಹಾರ ಪೊಟ್ಟಣಗಳು ಮತ್ತು ಪಡಿತರವನ್ನು ಒದಗಿಸುವುದು ಮತ್ತು ಕಾರ್ಯನಿರ್ವಹಿಸಲು ಸರ್ಕಾರಿ ಗುರುತಿನ ಪತ್ರಗಳನ್ನು ಸಿಬ್ಬಂದಿಗೆ ನೀಡಬೇಕು. ಇವರನ್ನು ಹೊರತು ಪಡಿಸಿ ಬೇರೆಯವರಿಗೆ ಪ್ರವೇಶವನ್ನು ನಿರ್ಭಂದಿಸಬೇಕು ಎಂದು ಸೂಚಿಸಿದರು.
ಕಂದಾಯ ಇಲಾಖೆ : ನಿಯಂತ್ರಿತ ವಲಯವನ್ನು ಸಂಪೂರ್ಣ ಸೀಲ್ ಮಾಡುವುದರರಿಂದ ಜನ ಮನೆಗಳಿಂದ ಯಾವ ಕಾರಣಕ್ಕೂ ಹೊರಗೆ ಬರುವಂತಿಲ್ಲ ಹಾಗೂ ಜನರಿಗೆ ಅಗತ್ಯ ವಸ್ತು ದಿನಸಿ ಪದಾರ್ಥಗಳು ಮಾಂಸ ಹಾಲು ಎಲ್.ಪಿ.ಜಿ. ಅನಿಲ ಔಷಧಿಗಳನ್ನು ಪೂರೈಸುವವರಿಗೆ ಪಾಸ್ ಕೊಡಬೇಕು ಅಗತ್ಯ ಸೇವೆಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ನಿಗಾವಹಿಸಬೇಕು ಮತ್ತು ಪಡಿತರ ಚೀಟಿ ಹೊಂದಿರುವವರಿಗೆ ನ್ಯಾಯಬೆಲೆ ಅಂಗಡಿಗಳು ಪಡಿತರವನ್ನು ಮನೆ ಬಾಗಿಲಿಗೆ ತಲುಪಿಸುವವಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ನಗರ ಆರೋಗ್ಯ ಕುಟುಂಬ ಕಲ್ಯಾಣ ಕೇಂದ್ರದ ವೈದ್ಯರಾದ ಡಾ.ವೆಂಕಟೇಶ್, ಡಾ.ನಾಗರಾಜ್, ಡಾ. ಸುಧೀಂದ್ರ ಮಹಾನಗರ ಪಾಲಿಕೆ ಆರೋಗ್ಯ ನೀಕ್ಷಕರಾದ ರಾಜಪ್ಪ, ಮದುಶ್ರೀ, ಬಡಾವಣೆ ಪೊಲೀಸ್ ಠಾಣೆ ಎ.ಎಸ್.ಐ ಮಂಜುನಾಥ ಸ್ವಾಮಿ, ಕಂದಾಯ ಇಲಾಖೆ ಸಿಬ್ಬಂದಿ ಮಂಜುನಾಥ ಡಿ, ಅಂಜನಪ್ಪ ಮತ್ತು ಉಪೇಂದ್ರ ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ
ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಿದೆ.
ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಶೃಂಗೇರಿ ಶಾಸಕರಾದ ಟಿ.ಡಿ.ರಾಜೇಗೌಡ, ಕಡೂರು ಶಾಸಕರಾದ ಆನಂದ್, ತರೀಕೆರೆ ಶಾಸಕರಾದ ಶ್ರೀನಿವಾಸ್, ಮಾಗಡಿ ಶಾಸಕ ಬಾಲಕೃಷ್ಣ ಸೇರಿ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ಮುಖಂಡರು ಹಾಗೂ ಸಂಪಾದಕರಾದ ವಿಶ್ವೇಶ್ವರ ಭಟ್, ಕೆಎಸ್ಟಿಡಿಸಿ ಅಧ್ಯಕ್ಷರಾದ ಸರೋವರ್ ಶ್ರೀನಿವಾಸ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ
ಸುದ್ದಿದಿನಡೆಸ್ಕ್:ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಇಂದು ಅವರು ಮಾತನಾಡಿದರು.
ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು. ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ಗಂಡ ಹೆಂಡತಿ ಜಗಳವನ್ನು ಇಡೀ ದಿನ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು ಪ್ರಯೋಜನ? ಎಂದು ಪ್ರಶ್ನಿಸಿದರು.
ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ. ಅದು ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದರು.
ಯಾವ ದೇವರೂ ಯಾರನ್ನೂ ಕೂಡ ಅವಿದ್ಯಾವಂತನಾಗು ಅಂತಾಗಲೀ, ಕೆಳ ಜಾತಿಯಲ್ಲೇ ಹುಟ್ಟು ಎಂದು ಬಯಸುವುದಿಲ್ಲ. ಈ ಅರಿವನ್ನು ಜನರಲ್ಲಿ ಹೆಚ್ಚಿಸುವ ಕೆಲಸ ಪತ್ರಕರ್ತರಿಂದ ಆಗಬೇಕು. ಪತ್ರಕರ್ತರು ಕೇವಲ ಮಾಹಿತಿ ಕೊಡುವವರಾಗದೆ, ಸಮಾಜ ಸುಧಾರಣೆಗೂ ಒತ್ತು ನೀಡಬೇಕು.
ಅಂಬೇಡ್ಕರ್ ಅವರ ಆಶಯದಂತೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ ಶಕ್ತಿ ಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ 2013 ರಲ್ಲೂ ಮಾಡಿತ್ತು. ಈಗಲೂ ಮುಂದುವರೆಸಿದೆ. ನಾವು ಬಡವರ ಪರವಾದ ಯೂನಿವರ್ಸಲ್ ಬೇಸಿಕ್ ಇನ್ ಕಂ ಆರ್ಥಿಕತೆಯನ್ನು ಪಾಲುಸುತ್ತಿದ್ದೇವೆ. ಇದನ್ನು ಪತ್ರಕರ್ತರು ಅರ್ಥ ಮಾಡಿಕೊಳ್ಳಬೇಕು.
ಕೆಲವು ಒಳ್ಳೆ ಪತ್ರಕರ್ತರೂ ಇದ್ದಾರೆ. ಆದರೆ ಬಹಳಷ್ಟು ಮಾಧ್ಯಮ ಸಂಸ್ಥೆಗಳು ಕಾರ್ಪೋರೇಟ್ ಹಿಡಿತಕ್ಕೆ ಒಳಪಟ್ಟಿವೆ. ಪತ್ರಕರ್ತರು ಸತ್ಯ ಬರೆದರೂ ಕೆಲವೊಮ್ಮೆ ಸಂಪಾದಕರುಗಳು ಮಾಲೀಕರ ಒತ್ತಡಕ್ಕೆ ಮಣಿದು ಬದಲಾಯಿಸಿ ಬಿಡುತ್ತಾರೆ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಎಂದು ಇವತ್ತಿನವರೆಗೂ ನಾನು ಯಾರನ್ನೂ ಕೇಳಿಲ್ಲ.
ಜನಸಾಮಾನ್ಯರು ಇನ್ನೂ ಪತ್ರಿಕೆಗಳ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾನೂ ನಂಬಿಕೆ ಇಟ್ಟಿದ್ದೇನೆ.
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಸವಲತ್ತನ್ನು ಜಾರಿ ಮಾಡಿದ್ದೇ ನಾನು. ಇದರಲ್ಲಿನ ನಿಯಮಗಳಲ್ಲಿ ತೊಂದರೆ ಇದ್ದರೆ, ಆ ಬಗ್ಗೆ ಚರ್ಚಿಸಿ ನಿವಾರಣೆಗೊಳಿಸಲಾಗುವುದು ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ6 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ4 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ6 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ5 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
-
ದಿನದ ಸುದ್ದಿ3 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ5 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

