Connect with us

ದಿನದ ಸುದ್ದಿ

ಮನಸ್ಸು : ಬುದ್ಧನ ಬೋಧನೆಯ ಪ್ರಮುಖ ತಿರುಳು

Published

on

  • ರಘೋತ್ತಮ ಹೊ.ಬ

ಮ್ಮೆ ಭಗವಾನ್ ಬುದ್ಧರು ಶ್ರಾವಸ್ತಿಯಲ್ಲಿ ಉಳಿದುಕೊಂಡಿದ್ದರು. ಬುದ್ಧರು ಉಳಿದುಕೊಂಡಿದ್ದ ಆ ಸ್ಥಳಕ್ಕೆ ಕೋಸಲ ದೇಶದ ರಾಜ ಪ್ರಸೇನಜಿತ ಆಗಮಿಸಿದ. ರಥ ಇಳಿಯುತ್ತಿದ್ದಂತೆ ರಾಜ ಪ್ರಸೇನಜಿತ ಅತ್ಯುತ್ಕøಷ್ಟ ಗೌರವದಿಂದ ಬುದ್ಧರ ಬಳಿಗೆ ಬಂದ. ಬಂದವನೇ ಮಾರನೇ ದಿನ ತನ್ನ ನಗರಕ್ಕೆ ಬರುವಂತೆ, ತನ್ನ ಆತಿಥ್ಯವನ್ನು ಸ್ವೀಕರಿಸುವಂತೆ, ತಮ್ಮ ಬೋಧನೆ ಮತ್ತು ವ್ಯಕ್ತಿತ್ವದ ಶ್ರೇಷ್ಠತೆಯನ್ನು ತನ್ನ ಜನರ ಮುಂದೆ ಪ್ರದರ್ಶಿಸುವಂತೆ ಆತ ಬುದ್ಧರನ್ನು ಆಹ್ವಾನಿಸಿದ.

ಹಾಗೆಯೇ ಆತನ ಆಹ್ವಾನಕ್ಕೆ ಸಮ್ಮತಿಸಿದ ಬುದ್ಧರು ಮಾರನೆಯ ದಿನ ತನ್ನ ಉಪಾಸಕರೊಡನೆ ಪ್ರಸೇನಜಿತನ ನಗರವನ್ನು ಪ್ರವೇಶಿಸಿದರು. ನಗರದ ನಾಲ್ಕು ಬೀದಿಗಳ ಮೂಲಕ ನಡೆದು ಅವರು ತಮಗೆ ನಿಗಧಿಪಡಿಸಿದ ಸ್ಥಳದಲ್ಲಿ ಕುಳಿತುಕೊಂಡರು ಮತ್ತು ವಿನಯಪೂರ್ವಕವಾಗಿ ಪ್ರಸೇನಜಿತ ನೀಡಿದ ಆತಿಥ್ಯ ಸ್ವೀಕರಿಸಿ ಬುದ್ಧರು ನಗರದ ನಾಲ್ಕು ಹೆದ್ದಾರಿಗಳು ಕೂಡುವ ಸ್ಥಳದಲ್ಲಿ ವಿಶಾಲ ಸಭಿಕರ ಮುಂದೆ ತಮ್ಮ ಬೋಧನೆ ಪ್ರಾರಂಭಿಸಿದರು.

ಬುದ್ದರು ಹೀಗೆ ಬೋಧನೆ ನಡೆಸುತ್ತಿರಬೇಕಾದರೆ ಅಲ್ಲಿ ಇಬ್ಬರು ಶ್ರೀಮಂತರು ಉಪಸ್ಥಿತರಿದ್ದರು. ಅವರಲ್ಲಿ ಮೊದಲನೆಯವನು ಹೇಳಿದ “ಎಂತಹ ಶ್ರೇಷ್ಠ ಜ್ಞಾನ, ಅದರ ಅನ್ವಯದ ವ್ಯಾಪಕತೆ, ನಮ್ಮ ಅಂತರಂಗ ಪರಿಶೋಧಿಸುವ ಅದರ ಗುಣ ಇಂತಹದ್ದನ್ನು ಸಾರ್ವಜನಿಕವಾಗಿ ಬೋಧಿಸಲಾಗುತ್ತದೆಯೆಂದರೆ, ನಿಜಕ್ಕೂ ಇದು ರಾಜನ ಶ್ರೇಷ್ಠ ನಡವಳಿಕೆ”.

ಇನ್ನು ಇದಕ್ಕೆ ವಿರುದ್ಧವಾಗಿ ಎರಡನೆಯ ಶ್ರೀಮಂತ ಹೇಳಿದ್ದು “ಇಂತಹ ಮನುಷ್ಯನನ್ನು (ಬುದ್ಧನನ್ನು) ಕರೆತಂದು ಬೋಧನೆ ನೀಡಿಸುತ್ತಿರುವ ರಾಜನ ಈ ನಡೆ ಎಂಥ ಅವಿವೇಕದ್ದು? ಹಾಗೆಯೇ ಆ ಬುದ್ಧನೂ ಅಷ್ಟೆ ಹಸುವಿನ ಹಿಂದೆ ಕರು ಅಡ್ಡಾಡುವಂತೆ, ಕುರಿಯಂತೆ ಅರಚುತ್ತಾ ರಾಜನ ಹಿಂದೆ ಹೋಗುತ್ತಿದ್ದಾನೆ”. ಹೀಗೆ ಹೇಳುತ್ತಾ ಆ ಶ್ರೀಮಂತರಿಬ್ಬರು ಪರಸ್ಪರ ವಿದಾಯ ಹೇಳಿ ತಾವು ಉಳಿದುಕೊಂಡಿದ್ದ ವಸತಿಗೃಹಕ್ಕೆ ತೆರಳಿದರು. ಅದರಲ್ಲಿ ಮೊದಲನೆಯ ಶ್ರೀಮಂತ ಸ್ವಲ್ಪ ಮದ್ಯಪಾನ ಮಾಡಿ ತನ್ನನ್ನು ತಾನು ನಿಯಂತ್ರಣದಲ್ಲಿಟ್ಟುಕೊಂಡು ತನ್ನ ಸೇವಕರೊಡನೆ ವಸತಿಗೃಹದ ತನ್ನ ಕೋಣೆಯಲ್ಲಿ ಉಳಿದುಕೊಂಡ.

ಆದರೆ ಅದಕ್ಕೆ ತದ್ವಿರುದ್ಧವಾಗಿ ಎರಡನೆಯ ಶ್ರೀಮಂತ ಒಳಗಿನ ಕೆಟ್ಟತನದಿಂದ ಪ್ರೇರೇಪಿಸಲ್ಪಟ್ಟು ಮತಿಮೀರಿ ಮದ್ಯಪಾನ ಮಾಡಿದ. ಹೇಗೆಂದರೆ ಆತನಿಗೇ ಪರಿವೇ ಇಲ್ಲದೆ ತನ್ನ ವಸತಿಗೃಹದ ಮುಂಭಾಗದ ರಸ್ತೆಯಲ್ಲೇ ಆತ ಮಲಗಿದ ಮತ್ತು ಬೆಳಕುಹರಿಯುತ್ತಲೇ ಅವನದೇ ಸೇವಕರು ರಸ್ತೆಯಲ್ಲಿ ಮಲಗಿರುವುದು ಯಾರು ಎಂಬುದನ್ನು ಗುರುತಿಸದೇ ಕುದುರೆ ಗಾಡಿಯನ್ನು ಆತನ ಮೇಲೆ ಹರಿಸಿದರು. ಪರಿಣಾಮ ಆ ಶ್ರೀಮಂತ ಅಸುನೀಗಿದ.

ಆದರೆ ಮೊದಲನೆಯ ಶ್ರೀಮಂತ? ಆತ ದೂರದ ರಾಜ್ಯವೊಂದಕ್ಕೆ ತೆರಳುತ್ತಲೇ ಆತನ ಮುಂದೆ ಕುದುರೆಯೊಂದು ಬಂದು ಮೊಣಕಾಲೂರಿತು. ಆಶ್ಚರ್ಯವೆಂಬಂತೆ ಶ್ರೀಮಂತ ಆ ಕುದುರೆಯನ್ನೇರುತ್ತಲೇ ಅದು ಆತನನ್ನು ಆ ರಾಜ್ಯದ ಆಸ್ಥಾನಕ್ಕೆ ಹೊಯ್ದಿತ್ತು ಮತ್ತು ರಾಜಕುದುರೆ ಆರಿಸಿತರುವ ವ್ಯಕ್ತಿಗಾಗಿ ಕಾಯುತ್ತಿದ್ದ ಅಲ್ಲಿಯ ಜನರು ಕುದುರೆ ಹೀಗೆ ಶ್ರೀಮಂತನನ್ನು ಆರಿಸಿತರುತ್ತಿದ್ದಂತೆ ಆತನನ್ನು ಸಿಂಹಾಸನಕ್ಕೇರಿಸಿದರು. ಪರಿಣಾಮ ಆ ಶ್ರೀಮಂತ ಆ ರಾಜ್ಯದ ರಾಜನಾದ.

ಹೀಗೆ ಇಂತಹ ವಿಚಿತ್ರ ಘಟನೆಗಳು ನಡೆದ ಕೆಲ ದಿನಗಳ ತರುವಾಯ ರಾಜನಾದ ಆ ಶ್ರೀಮಂತ ಒಮ್ಮೆ ಸ್ವತಃ ಬುದ್ಧನನ್ನು ತನ್ನ ರಾಜ್ಯಕ್ಕೆ ಉಪದೇಶನೀಡುವಂತೆ ಆಹ್ವಾನಿಸಿದ. ರಾಜನಾಗಿ ನೇಮಕಗೊಂಡ ಆ ಶ್ರೀಮಂತನ ಆಹ್ವಾನಕ್ಕೆ ಮನ್ನಿಸಿದ ಬುದ್ಧರು ಆತನ ರಾಜ್ಯಕ್ಕೆ ಆಗಮಿಸಿದರು ಮತ್ತು ಆತನ ಆತಿಥ್ಯ ಸ್ವೀಕರಿಸಿ ಆ ಶ್ರೀಮಂತನ ಎದುರೇ “ಹೇಗೆ ಕೆಟ್ಟ ಮನಸ್ಸನ್ನು ಹೊಂದಿದ್ದ ಒಬ್ಬ ಶ್ರೀಮಂತ ಸಾವು ಕಂಡ, ಒಳ್ಳೆಯ ಮನಸ್ಸು ಹೊಂದಿದ್ದ ಮತ್ತೊಬ್ಬ ಹೇಗೆ ಉನ್ನತ ಸ್ಥಾನಕ್ಕೇರಿದ” ಎಂಬುದನ್ನು ವಿವರಿಸುತ್ತಾ “ಮನಸ್ಸೇ ಎಲ್ಲದಕ್ಕೂ ಮೂಲ. ಮನಸ್ಸೇ ಗುರು, ಮನಸ್ಸೇ ಕಾರಣ.ಮನಸ್ಸಿನ ಮಧ್ಯೆ ಕೆಟ್ಟ ಆಲೋಚನೆ ಇದ್ದರೆ ಆಗ ಮೂಡಿ ಬರುವ ಪದಗಳು ಕೆಟ್ಟದ್ದಾಗಿರುತ್ತವೆ, ಕ್ರಿಯೆಗಳೂ ಕೆಟ್ಟದ್ದಾಗಿರುತ್ತವೆ ಮತ್ತು ಅಂತಹ ಪಾಪದ ಫಲವಾಗಿ ಮೂಡಿಬರುವ ದುಃಖ ಆ ಮನುಷ್ಯನನ್ನು ಹೇಗೆ ರಥದ ಚಕ್ರಗಳು ಆತನನ್ನು ಹಿಂಬಾಲಿಸುತ್ತವೋ ಹಾಗೆ ಹಿಂಬಾಲಿಸುತ್ತವೆ” ಎನ್ನುತ್ತಾ…

“ಆದ್ದರಿಂದ ಮನಸ್ಸೇ ಎಲ್ಲದಕ್ಕೂ ಮೂಲ. ಇಂತಹದ್ದನ್ನು ಮಾಡು ಎಂದು ಆದೇಶಿಸುವುದೆಂದರೆ ಅದು ಮನಸ್ಸು.ಇಂತಹದ್ದನ್ನು ಯೋಚಿಸು ಎಂದು ಆದೇಶಿಸುವುದೆಂದರೆ ಅದು ಮನಸ್ಸು. ಮನಸ್ಸಿನಲ್ಲಿ ಒಳ್ಳೆಯ ಆಲೋಚನೆಗಳಿದ್ದರೆ ಆಗ ಮೂಡಿ ಬರುವ ಪದಗಳು, ಮಾಡುವ ಕ್ರಿಯೆ ಎಲ್ಲವೂ ಒಳ್ಳೆಯದ್ದಾಗಿರುತ್ತವೆ ಮತ್ತು ಅಂತಹ ಒಳ್ಳೆಯ ನಡವಳಿಕೆಯ ಫಲವಾಗಿ ಮೂಡಿಬರುವ ಸಂತೋಷ ಆ ಮನುಷ್ಯನನ್ನು ಹೇಗೆ ವಸ್ತುವೊಂದನ್ನು ಆತನ ನೆರಳು ಹಿಂಬಾಲಿಸುತ್ತದೆಯೋ ಹಾಗೆ ಹಿಂಬಾಲಿಸುತ್ತದೆ”. ಬುದ್ಧ ಹೀಗೆ ಹೇಳುತ್ತಲೇ ರಾಜನ ಸ್ಥಾನಕ್ಕೆ ಏರಿದ ಆ ಶ್ರೀಮಂತ, ಆತನ ಮಂತ್ರಿಗಳು, ಆತನ ರಾಣಿ ಎಲ್ಲರೂ ಬುದ್ಧನ ಅನುಯಾಯಿಗಳಾಗುತ್ತಾರೆ. (ಆಧಾರ: ‘ಬುದ್ಧ ಅಂಡ್ ಹಿಸ್ ಧಮ್ಮ’, ಲೇಖಕರು: ಡಾ.ಅಂಬೇಡ್ಕರ್, ಪು.282)

ಒಟ್ಟಾರೆ ಬುದ್ಧನ ಪ್ರಕಾರ ಜಗತ್ತಿನ್ನೆಲ್ಲ ದುಃಖಗಳಿಗೆ, ನೋವುಗಳಿಗೆ ಕಾರಣ ಮನುಷ್ಯನ ಮನಸ್ಸು. ಮನುಷ್ಯನ ಮನಸ್ಸಿನಲ್ಲಿ ಒಳ್ಳೆಯ ಆಲೋಚನೆ ಮೂಡಿಬಂದರೆ ಸಂತಸ ತಾನಾಗೇ ನಮ್ಮತ್ತ ಹರಿದುಬರುತ್ತದೆ. ಕೆಟ್ಟ ಆಲೋಚನೆ ಮೂಡಿಬಂದರೆ ದುಃಖ ತಾನಾಗೇ ಅಂತಹವರನ್ನು ಹಿಂಬಾಲಿಸುತ್ತದೆ. ಈ ನಿಟ್ಟಿನಲ್ಲಿ ಇಲ್ಲಿ ಪ್ರಸ್ತಾಪಿತವಾಗಿರುವ ಆ ಶ್ರೀಮಂತರಿಬ್ಬರ ದೃಷ್ಟಾಂತದಲ್ಲಿ ಬುದ್ಧನ ಬೋಧನೆಯ ಆ ಪ್ರಮುಖ ತಿರುಳು ನಮಗೆ ಸ್ಪಷ್ಟವಾಗುತ್ತದೆ, ಇಡೀ ಜಗತ್ತಿಗೇ ಸುಸ್ಪಷ್ಟವಾಗಿ ತಿಳಿಯುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending