Connect with us

ದಿನದ ಸುದ್ದಿ

ಮನಸ್ಸು : ಬುದ್ಧನ ಬೋಧನೆಯ ಪ್ರಮುಖ ತಿರುಳು

Published

on

  • ರಘೋತ್ತಮ ಹೊ.ಬ

ಮ್ಮೆ ಭಗವಾನ್ ಬುದ್ಧರು ಶ್ರಾವಸ್ತಿಯಲ್ಲಿ ಉಳಿದುಕೊಂಡಿದ್ದರು. ಬುದ್ಧರು ಉಳಿದುಕೊಂಡಿದ್ದ ಆ ಸ್ಥಳಕ್ಕೆ ಕೋಸಲ ದೇಶದ ರಾಜ ಪ್ರಸೇನಜಿತ ಆಗಮಿಸಿದ. ರಥ ಇಳಿಯುತ್ತಿದ್ದಂತೆ ರಾಜ ಪ್ರಸೇನಜಿತ ಅತ್ಯುತ್ಕøಷ್ಟ ಗೌರವದಿಂದ ಬುದ್ಧರ ಬಳಿಗೆ ಬಂದ. ಬಂದವನೇ ಮಾರನೇ ದಿನ ತನ್ನ ನಗರಕ್ಕೆ ಬರುವಂತೆ, ತನ್ನ ಆತಿಥ್ಯವನ್ನು ಸ್ವೀಕರಿಸುವಂತೆ, ತಮ್ಮ ಬೋಧನೆ ಮತ್ತು ವ್ಯಕ್ತಿತ್ವದ ಶ್ರೇಷ್ಠತೆಯನ್ನು ತನ್ನ ಜನರ ಮುಂದೆ ಪ್ರದರ್ಶಿಸುವಂತೆ ಆತ ಬುದ್ಧರನ್ನು ಆಹ್ವಾನಿಸಿದ.

ಹಾಗೆಯೇ ಆತನ ಆಹ್ವಾನಕ್ಕೆ ಸಮ್ಮತಿಸಿದ ಬುದ್ಧರು ಮಾರನೆಯ ದಿನ ತನ್ನ ಉಪಾಸಕರೊಡನೆ ಪ್ರಸೇನಜಿತನ ನಗರವನ್ನು ಪ್ರವೇಶಿಸಿದರು. ನಗರದ ನಾಲ್ಕು ಬೀದಿಗಳ ಮೂಲಕ ನಡೆದು ಅವರು ತಮಗೆ ನಿಗಧಿಪಡಿಸಿದ ಸ್ಥಳದಲ್ಲಿ ಕುಳಿತುಕೊಂಡರು ಮತ್ತು ವಿನಯಪೂರ್ವಕವಾಗಿ ಪ್ರಸೇನಜಿತ ನೀಡಿದ ಆತಿಥ್ಯ ಸ್ವೀಕರಿಸಿ ಬುದ್ಧರು ನಗರದ ನಾಲ್ಕು ಹೆದ್ದಾರಿಗಳು ಕೂಡುವ ಸ್ಥಳದಲ್ಲಿ ವಿಶಾಲ ಸಭಿಕರ ಮುಂದೆ ತಮ್ಮ ಬೋಧನೆ ಪ್ರಾರಂಭಿಸಿದರು.

ಬುದ್ದರು ಹೀಗೆ ಬೋಧನೆ ನಡೆಸುತ್ತಿರಬೇಕಾದರೆ ಅಲ್ಲಿ ಇಬ್ಬರು ಶ್ರೀಮಂತರು ಉಪಸ್ಥಿತರಿದ್ದರು. ಅವರಲ್ಲಿ ಮೊದಲನೆಯವನು ಹೇಳಿದ “ಎಂತಹ ಶ್ರೇಷ್ಠ ಜ್ಞಾನ, ಅದರ ಅನ್ವಯದ ವ್ಯಾಪಕತೆ, ನಮ್ಮ ಅಂತರಂಗ ಪರಿಶೋಧಿಸುವ ಅದರ ಗುಣ ಇಂತಹದ್ದನ್ನು ಸಾರ್ವಜನಿಕವಾಗಿ ಬೋಧಿಸಲಾಗುತ್ತದೆಯೆಂದರೆ, ನಿಜಕ್ಕೂ ಇದು ರಾಜನ ಶ್ರೇಷ್ಠ ನಡವಳಿಕೆ”.

ಇನ್ನು ಇದಕ್ಕೆ ವಿರುದ್ಧವಾಗಿ ಎರಡನೆಯ ಶ್ರೀಮಂತ ಹೇಳಿದ್ದು “ಇಂತಹ ಮನುಷ್ಯನನ್ನು (ಬುದ್ಧನನ್ನು) ಕರೆತಂದು ಬೋಧನೆ ನೀಡಿಸುತ್ತಿರುವ ರಾಜನ ಈ ನಡೆ ಎಂಥ ಅವಿವೇಕದ್ದು? ಹಾಗೆಯೇ ಆ ಬುದ್ಧನೂ ಅಷ್ಟೆ ಹಸುವಿನ ಹಿಂದೆ ಕರು ಅಡ್ಡಾಡುವಂತೆ, ಕುರಿಯಂತೆ ಅರಚುತ್ತಾ ರಾಜನ ಹಿಂದೆ ಹೋಗುತ್ತಿದ್ದಾನೆ”. ಹೀಗೆ ಹೇಳುತ್ತಾ ಆ ಶ್ರೀಮಂತರಿಬ್ಬರು ಪರಸ್ಪರ ವಿದಾಯ ಹೇಳಿ ತಾವು ಉಳಿದುಕೊಂಡಿದ್ದ ವಸತಿಗೃಹಕ್ಕೆ ತೆರಳಿದರು. ಅದರಲ್ಲಿ ಮೊದಲನೆಯ ಶ್ರೀಮಂತ ಸ್ವಲ್ಪ ಮದ್ಯಪಾನ ಮಾಡಿ ತನ್ನನ್ನು ತಾನು ನಿಯಂತ್ರಣದಲ್ಲಿಟ್ಟುಕೊಂಡು ತನ್ನ ಸೇವಕರೊಡನೆ ವಸತಿಗೃಹದ ತನ್ನ ಕೋಣೆಯಲ್ಲಿ ಉಳಿದುಕೊಂಡ.

ಆದರೆ ಅದಕ್ಕೆ ತದ್ವಿರುದ್ಧವಾಗಿ ಎರಡನೆಯ ಶ್ರೀಮಂತ ಒಳಗಿನ ಕೆಟ್ಟತನದಿಂದ ಪ್ರೇರೇಪಿಸಲ್ಪಟ್ಟು ಮತಿಮೀರಿ ಮದ್ಯಪಾನ ಮಾಡಿದ. ಹೇಗೆಂದರೆ ಆತನಿಗೇ ಪರಿವೇ ಇಲ್ಲದೆ ತನ್ನ ವಸತಿಗೃಹದ ಮುಂಭಾಗದ ರಸ್ತೆಯಲ್ಲೇ ಆತ ಮಲಗಿದ ಮತ್ತು ಬೆಳಕುಹರಿಯುತ್ತಲೇ ಅವನದೇ ಸೇವಕರು ರಸ್ತೆಯಲ್ಲಿ ಮಲಗಿರುವುದು ಯಾರು ಎಂಬುದನ್ನು ಗುರುತಿಸದೇ ಕುದುರೆ ಗಾಡಿಯನ್ನು ಆತನ ಮೇಲೆ ಹರಿಸಿದರು. ಪರಿಣಾಮ ಆ ಶ್ರೀಮಂತ ಅಸುನೀಗಿದ.

ಆದರೆ ಮೊದಲನೆಯ ಶ್ರೀಮಂತ? ಆತ ದೂರದ ರಾಜ್ಯವೊಂದಕ್ಕೆ ತೆರಳುತ್ತಲೇ ಆತನ ಮುಂದೆ ಕುದುರೆಯೊಂದು ಬಂದು ಮೊಣಕಾಲೂರಿತು. ಆಶ್ಚರ್ಯವೆಂಬಂತೆ ಶ್ರೀಮಂತ ಆ ಕುದುರೆಯನ್ನೇರುತ್ತಲೇ ಅದು ಆತನನ್ನು ಆ ರಾಜ್ಯದ ಆಸ್ಥಾನಕ್ಕೆ ಹೊಯ್ದಿತ್ತು ಮತ್ತು ರಾಜಕುದುರೆ ಆರಿಸಿತರುವ ವ್ಯಕ್ತಿಗಾಗಿ ಕಾಯುತ್ತಿದ್ದ ಅಲ್ಲಿಯ ಜನರು ಕುದುರೆ ಹೀಗೆ ಶ್ರೀಮಂತನನ್ನು ಆರಿಸಿತರುತ್ತಿದ್ದಂತೆ ಆತನನ್ನು ಸಿಂಹಾಸನಕ್ಕೇರಿಸಿದರು. ಪರಿಣಾಮ ಆ ಶ್ರೀಮಂತ ಆ ರಾಜ್ಯದ ರಾಜನಾದ.

ಹೀಗೆ ಇಂತಹ ವಿಚಿತ್ರ ಘಟನೆಗಳು ನಡೆದ ಕೆಲ ದಿನಗಳ ತರುವಾಯ ರಾಜನಾದ ಆ ಶ್ರೀಮಂತ ಒಮ್ಮೆ ಸ್ವತಃ ಬುದ್ಧನನ್ನು ತನ್ನ ರಾಜ್ಯಕ್ಕೆ ಉಪದೇಶನೀಡುವಂತೆ ಆಹ್ವಾನಿಸಿದ. ರಾಜನಾಗಿ ನೇಮಕಗೊಂಡ ಆ ಶ್ರೀಮಂತನ ಆಹ್ವಾನಕ್ಕೆ ಮನ್ನಿಸಿದ ಬುದ್ಧರು ಆತನ ರಾಜ್ಯಕ್ಕೆ ಆಗಮಿಸಿದರು ಮತ್ತು ಆತನ ಆತಿಥ್ಯ ಸ್ವೀಕರಿಸಿ ಆ ಶ್ರೀಮಂತನ ಎದುರೇ “ಹೇಗೆ ಕೆಟ್ಟ ಮನಸ್ಸನ್ನು ಹೊಂದಿದ್ದ ಒಬ್ಬ ಶ್ರೀಮಂತ ಸಾವು ಕಂಡ, ಒಳ್ಳೆಯ ಮನಸ್ಸು ಹೊಂದಿದ್ದ ಮತ್ತೊಬ್ಬ ಹೇಗೆ ಉನ್ನತ ಸ್ಥಾನಕ್ಕೇರಿದ” ಎಂಬುದನ್ನು ವಿವರಿಸುತ್ತಾ “ಮನಸ್ಸೇ ಎಲ್ಲದಕ್ಕೂ ಮೂಲ. ಮನಸ್ಸೇ ಗುರು, ಮನಸ್ಸೇ ಕಾರಣ.ಮನಸ್ಸಿನ ಮಧ್ಯೆ ಕೆಟ್ಟ ಆಲೋಚನೆ ಇದ್ದರೆ ಆಗ ಮೂಡಿ ಬರುವ ಪದಗಳು ಕೆಟ್ಟದ್ದಾಗಿರುತ್ತವೆ, ಕ್ರಿಯೆಗಳೂ ಕೆಟ್ಟದ್ದಾಗಿರುತ್ತವೆ ಮತ್ತು ಅಂತಹ ಪಾಪದ ಫಲವಾಗಿ ಮೂಡಿಬರುವ ದುಃಖ ಆ ಮನುಷ್ಯನನ್ನು ಹೇಗೆ ರಥದ ಚಕ್ರಗಳು ಆತನನ್ನು ಹಿಂಬಾಲಿಸುತ್ತವೋ ಹಾಗೆ ಹಿಂಬಾಲಿಸುತ್ತವೆ” ಎನ್ನುತ್ತಾ…

“ಆದ್ದರಿಂದ ಮನಸ್ಸೇ ಎಲ್ಲದಕ್ಕೂ ಮೂಲ. ಇಂತಹದ್ದನ್ನು ಮಾಡು ಎಂದು ಆದೇಶಿಸುವುದೆಂದರೆ ಅದು ಮನಸ್ಸು.ಇಂತಹದ್ದನ್ನು ಯೋಚಿಸು ಎಂದು ಆದೇಶಿಸುವುದೆಂದರೆ ಅದು ಮನಸ್ಸು. ಮನಸ್ಸಿನಲ್ಲಿ ಒಳ್ಳೆಯ ಆಲೋಚನೆಗಳಿದ್ದರೆ ಆಗ ಮೂಡಿ ಬರುವ ಪದಗಳು, ಮಾಡುವ ಕ್ರಿಯೆ ಎಲ್ಲವೂ ಒಳ್ಳೆಯದ್ದಾಗಿರುತ್ತವೆ ಮತ್ತು ಅಂತಹ ಒಳ್ಳೆಯ ನಡವಳಿಕೆಯ ಫಲವಾಗಿ ಮೂಡಿಬರುವ ಸಂತೋಷ ಆ ಮನುಷ್ಯನನ್ನು ಹೇಗೆ ವಸ್ತುವೊಂದನ್ನು ಆತನ ನೆರಳು ಹಿಂಬಾಲಿಸುತ್ತದೆಯೋ ಹಾಗೆ ಹಿಂಬಾಲಿಸುತ್ತದೆ”. ಬುದ್ಧ ಹೀಗೆ ಹೇಳುತ್ತಲೇ ರಾಜನ ಸ್ಥಾನಕ್ಕೆ ಏರಿದ ಆ ಶ್ರೀಮಂತ, ಆತನ ಮಂತ್ರಿಗಳು, ಆತನ ರಾಣಿ ಎಲ್ಲರೂ ಬುದ್ಧನ ಅನುಯಾಯಿಗಳಾಗುತ್ತಾರೆ. (ಆಧಾರ: ‘ಬುದ್ಧ ಅಂಡ್ ಹಿಸ್ ಧಮ್ಮ’, ಲೇಖಕರು: ಡಾ.ಅಂಬೇಡ್ಕರ್, ಪು.282)

ಒಟ್ಟಾರೆ ಬುದ್ಧನ ಪ್ರಕಾರ ಜಗತ್ತಿನ್ನೆಲ್ಲ ದುಃಖಗಳಿಗೆ, ನೋವುಗಳಿಗೆ ಕಾರಣ ಮನುಷ್ಯನ ಮನಸ್ಸು. ಮನುಷ್ಯನ ಮನಸ್ಸಿನಲ್ಲಿ ಒಳ್ಳೆಯ ಆಲೋಚನೆ ಮೂಡಿಬಂದರೆ ಸಂತಸ ತಾನಾಗೇ ನಮ್ಮತ್ತ ಹರಿದುಬರುತ್ತದೆ. ಕೆಟ್ಟ ಆಲೋಚನೆ ಮೂಡಿಬಂದರೆ ದುಃಖ ತಾನಾಗೇ ಅಂತಹವರನ್ನು ಹಿಂಬಾಲಿಸುತ್ತದೆ. ಈ ನಿಟ್ಟಿನಲ್ಲಿ ಇಲ್ಲಿ ಪ್ರಸ್ತಾಪಿತವಾಗಿರುವ ಆ ಶ್ರೀಮಂತರಿಬ್ಬರ ದೃಷ್ಟಾಂತದಲ್ಲಿ ಬುದ್ಧನ ಬೋಧನೆಯ ಆ ಪ್ರಮುಖ ತಿರುಳು ನಮಗೆ ಸ್ಪಷ್ಟವಾಗುತ್ತದೆ, ಇಡೀ ಜಗತ್ತಿಗೇ ಸುಸ್ಪಷ್ಟವಾಗಿ ತಿಳಿಯುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

Published

on

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು ರಾಯ್ ಅವರು ‘ಟೇಕ್ ಕೇರ್ ಭಾಲೋಬಾಸ’ ಚಿತ್ರದ ಮೂಲಕ ಬಂಗಾಳಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ‘ಜಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ, ಇದು ಸ್ನೇಹ, ಸಂಬಂಧಗಳು ಮತ್ತು ಕಾಲಾನುಕ್ರಮದಲ್ಲಿ ವಿಕಸನಗೊಳ್ಳುವ ಭಾವನೆಗಳ ಸುತ್ತ ಕೇಂದ್ರೀಕೃತವಾಗಿರುವ ಕಥೆಯಲ್ಲಿನ ಒಬ್ಬ ಸ್ನೇಹಿತ.

ನಿರ್ದೇಶಕ ಪಿಜೂಷ್ ಸಾಹಾ ಅವರ ಮಾರ್ಗದರ್ಶನದಲ್ಲಿ ಸುಶೋಭನ್ ಅವರ ಅಭಿನಯ ಪ್ರಯಾಣವು ಪ್ರಾರಂಭವಾಯಿತು, ಅಲ್ಲಿ ಅವರು ಸುಮಾರು ಎರಡು ವರ್ಷಗಳ ಕಾಲ ಅಭಿನಯ ಕಾರ್ಯಾಗಾರಗಳಲ್ಲಿ ಭಾಗವಹಿಸಿದರು. ನಿಯಮಿತ ಆಡಿಷನ್ಗಳ ನಂತರ, 2019 ರಲ್ಲಿ ಅವರು ಆಕಾಶ್ ಆಠ್ ಚಾನೆಲ್ನ ‘ಆನಂದಮಯೀ ಮಾ’ ಧಾರಾವಾಹಿಯ ಮೂಲಕ ತಮ್ಮ ಟೆಲಿವಿಷನ್ ಚೊಚ್ಚಲ ಪ್ರವೇಶವನ್ನು ಮಾಡಿದರು, ಇದನ್ನು ಮರಣೋತ್ತರ ನಿರ್ದೇಶಕ ದೇವಿದಾಸ್ ಭಟ್ಟಾಚಾರ್ಯ ನಿರ್ದೇಶಿಸಿದ್ದರು, ಅದರಲ್ಲಿ ಅವರು ವೈಷ್ಣವ ಭಕ್ತನ ಪಾತ್ರವನ್ನು ನಿರ್ವಹಿಸಿದರು. ನಂತರ ಅವರು ಸ್ಟಾರ್ ಜಲ್ಸಾದ ‘ಮೋಹರ್’, ‘ಕೋರಾಪಾಖಿ’, ‘ತಿತ್ಲಿ’ ಮತ್ತು ‘ಖೇಲಾಘರ್’, ಜೊತೆಗೆ ಜೀ ಬಂಗ್ಲಾದ ‘ಜಮುನಾ ಢಾಕಿ’ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು, ಹೀಗೆ ಬಂಗಾಳಿ ಟೆಲಿವಿಷನ್ನಲ್ಲಿ ತಮ್ಮ ಕೆಲಸವನ್ನು ಮುಂದುವರೆಸಿದರು.

COVID-19 ಸಾಂಕ್ರಾಮಿಕ ಸಮಯದಲ್ಲಿ, ಅಭಿನಯದ ಕೆಲಸಗಳು ಸೀಮಿತವಾದಾಗ, ಸುಶೋಭನ್ ಮಾಡೆಲಿಂಗ್ಗೆ ತಿರುಗಿದರು. 2023 ರಿಂದ ಪ್ರಾರಂಭಿಸಿ, ಅವರು ಹಾಲಿಡೇ ಇನ್ ಹೋಟೆಲ್, ಡಾಬರ್, ಟೈಟಾನ್ ಐ+, ವೆಲಾಸಿಟಿ ಐವೇರ್, ಅಮೆಜಾನ್, ಸ್ಪೆನ್ಸರ್ಸ್, ಕ್ಯಾಂಪಸ್ ಶೂಸ್, ಬಿಗ್ ಬಜಾರ್, ಬಯೋಟಿಕ್ ಮತ್ತು ಫಿಯಾಮಾ ಡಿ ವಿಲ್ಸ್ ಸೇರಿದಂತೆ ಹಲವಾರು ಬ್ರಾಂಡ್ಗಳೊಂದಿಗೆ ಕೆಲಸ ಮಾಡಿದರು. 2025 ರಲ್ಲಿ, ಕೋಲ್ಕತ್ತಾದಲ್ಲಿ ನಡೆದ ‘ಎತ್ನಿಕ್ ಎಲಿಗನ್ಸ್ 2025’ ಸೌಂದರ್ಯ ಸ್ಪರ್ಧೆಯಲ್ಲಿ ಅವರು ಪ್ರಥಮ ರನ್ನರ್-ಅಪ್ ಆಗಿ ಆಯ್ಕೆಯಾದರು.

ಹೌರಾದಲ್ಲಿ ಜನಿಸಿ ಕೋಲ್ಕತ್ತಾದಲ್ಲಿ ಬೆಳೆದ ಸುಶೋಭನ್, ಸುಮಾರು ಮೂರೂವರೆ ವರ್ಷದ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ನಂತರ ತಾಯಿಯಿಂದ ಬೆಳೆಸಲ್ಪಟ್ಟರು. ಅವರು ಕೋಲ್ಕತ್ತಾದಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು 2016 ರಲ್ಲಿ ದಮ್ ದಮ್ ಮೋತಿಜೀಲ್ ರವೀಂದ್ರ ಮಹಾವಿದ್ಯಾಲಯದಿಂದ ವಾಣಿಜ್ಯದಲ್ಲಿ ಬಿ.ಕಾಮ್ ಪದವಿಯನ್ನು ಪಡೆದರು. ಅಭಿನಯವನ್ನು ಮುಂದುವರಿಸುವ ಮೊದಲು, ಅವರು ಸುಮಾರು ಎರಡು ವರ್ಷಗಳ ಕಾಲ ಪಾಶ್ಚಾತ್ಯ ನೃತ್ಯದಲ್ಲಿ ತರಬೇತಿ ಪಡೆದರು ಮತ್ತು ರಂಗ ಪ್ರದರ್ಶನಗಳಲ್ಲಿ ಭಾಗವಹಿಸಿದರು.

‘ಟೇಕ್ ಕೇರ್ ಭಾಲೋಬಾಸ’ ಸುಶೋಭನ್ ಅವರ ಮೊದಲ ಬಂಗಾಳಿ ಫೀಚರ್ ಫಿಲ್ಮ್ನಲ್ಲಿ ಕಾಣಿಸಿಕೊಳ್ಳುವುದನ್ನು ಸೂಚಿಸುತ್ತದೆ. ಈ ಚಿತ್ರದಲ್ಲಿ, ಜಾಯ್ ಅವರು ಕೆಲವೊಮ್ಮೆ ಸಂಯಮದಿಂದಿರುವ, ಆದರೆ ಉಷ್ಣತೆ, ಸ್ನೇಹಪರತೆ ಮತ್ತು ಸಹಜತೆಯನ್ನು ಪ್ರದರ್ಶಿಸುವ ಪಾತ್ರವಾಗಿ ಚಿತ್ರಿಸಲಾಗಿದೆ, ಇದು ಸಂಬಂಧಗಳು ಮತ್ತು ದೈನಂದಿನ ಭಾವನೆಗಳ ಅನ್ವೇಷಣೆಗೆ ಕೊಡುಗೆ ನೀಡುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

Published

on

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.

ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.

ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.

ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;

1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.

ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.

ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ತನಿಖಾ ವರದಿನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷö್ಯ ತೋರಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇಲ್ಲಿನ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿನ ಬುಡಕಟ್ಟು ಸಮುದಾಯಗಳ ಪ್ರಗತಿಗೆ ಸಂಬAಧಿಸಿದAತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಸಲುವಾಗಿ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರೂ. 695 ಲಕ್ಷ ರೂಪಾಯಿಗಳನ್ನು ಸರ್ಕಾರ ಬಿಡುಗಡೆ ಮಾಡಿರುತ್ತದೆ. ಸದರಿ ಅನುದಾನದ ಖರ್ಚು-ವೆಚ್ಚದಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಅಕ್ರಮಗಳು ನಡೆದಿರುವ ಅಧಿಕೃತ ದಾಖಲೆಗಳನ್ನು ಲಗತ್ತಿಸಿ ಇಲಾಖಾ ತನಿಖೆ ನಡೆಸುವಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರಿಗೆ ದಿನಾಂಕ: 27-04-2026 ರಂದು ದೂರು ನೀಡಲಾಗಿತ್ತು.

ಆದರೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಸಾರ್ವಜನಿಕ ಹಿತಾಸಕ್ತಿ ಕೇಂದ್ರಿತ ದೂರು ಅರ್ಜಿಗೆ ಸಂಬಂಧಿಸಿದಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರು ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡಿರುವುದಿಲ್ಲ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending