Connect with us

ದಿನದ ಸುದ್ದಿ

ಅರಿಮೆಯ ಅರಿವಿರಲಿ-40 : ವಿದ್ಯಾವಂತರ ಮತಿಘಾತ

Published

on

  • ಯೋಗೇಶ್ ಮಾಸ್ಟರ್

ವರ್ಗದವರಿಗೆ ವಿದ್ಯಾಭ್ಯಾಸವಾಗಿರುತ್ತದೆ, ಆರ್ಥಿಕವಾಗಿ ಸಬಲರಾಗಿರುತ್ತಾರೆ. ಮನೆಯ ಜವಾಬ್ದಾರಿಗಳಿರುತ್ತವೆ. ಉನ್ನತ ಹುದ್ದೆಯೂ ಇರುತ್ತದೆ. ಸರ್ಕಾರದ ಅಥವಾ ಇನ್ನಾವುದಾದರೂ ಸಾಮಾಜಿಕ ಸಂಸ್ಥೆಯ ಭಾಗವೂ ಆಗಿರುತ್ತಾರೆ. ತೆರಿಗೆದಾರರಾಗಿರುತ್ತಾರೆ. ಅವರೂ ಕೂಡಾ ದೊಂಬಿ ಗಲಭೆ ಮಾಡುವವರ ಹಿಂಸಾತ್ಮಕ ಮನಸ್ಥಿತಿ ಮತ್ತು ಅಸಹನೀಯ ಧೋರಣೆಗಳನ್ನು ಹೊಂದಿರುತ್ತಾರೆ.

ಆದರೆ ಅವರು ನೇರವಾಗಿ ರಸ್ತೆಗೆ ಇಳಿಯುವುದಿಲ್ಲ. ಆದರೆ ಅಂತವು ಆಗಬೇಕೆಂದು ಬಯಸುತ್ತಾರೆ.
ಅವರಲ್ಲಿ ಕೆಲವರಿಗಂತೂ ನಾಗರಿಕ ದಂಗೆ, ದೊಂಬಿ, ದಾಳಿಗಳೂ ಕ್ರೀಡೆಗಳೇ, ಮನರಂಜನೆಗಳೇ. ಏಕೆಂದರೆ ಈ ಗಲಾಟೆ, ದೊಂಬಿ ಅವರಿಗೆ ಸೋಕದು. ಅವರು ಯಾವಾಗಲೂ ಸುರಕ್ಷಿತ. ಹಿಂದೆ ಕತ್ತಿಕಾಳಗವೇ ಮೊದಲಾಗಿ ಹೊಡೆದಾಟದ ರಕ್ತಸಿಕ್ತ ಕ್ರೀಡೆಗಳನ್ನು ಕ್ರೀಡಾಂಗಣದಲ್ಲಿಯೇ “ಭಲೇ ಭಲೇ” ಎಂದು ಗ್ಲ್ಯಾಡಿಯೇಟರ್‍ಗಳನ್ನು ಹುರಿದುಂಬಿಸುತ್ತಿದ್ದ ಪೂರ್ವಜರ ರಕ್ತದ ವಾಸನೆ ಇನ್ನೂ ಇವರಲ್ಲಿ ಜೀವಂತವಾಗಿದೆ.

ಮಕ್ಕಳು ಚಿಟ್ಟೆಯ ರೆಕ್ಕೆ ಕೀಳುವುದನ್ನು, ನಾಯಿಯ ಬಾಲಕ್ಕೆ ಸರ ಪಟಾಕಿಯನ್ನು ಕಟ್ಟುವುದನ್ನು, ಕತ್ತೆಯ ಬಾಲಕ್ಕೆ ಡಬ್ಬ ಕಟ್ಟಿ ಓಡಿಸುವುದನ್ನು, ಓತಿಕ್ಯಾತನ ಹಿಡಿದು ರಸ್ತೆಗೆಸೆದು ಅದರ ಮೇಲೆ ವಾಹನ ಹರಿಯುವುದ ನೋಡುವುದನ್ನು, ಇರುವೆಗಳನ್ನು ಹೊಸಕುವುದನ್ನು ಅಲ್ಲಲ್ಲಿ ನೋಡುತ್ತಿರುತ್ತೇವೆ. ಈ ಮಕ್ಕಳದು ಕ್ರೌರ್ಯಾಮೋದ ಅಥವಾ ಸ್ಯಾಡಿಸ್ಟ್ ಕುಶಿ ಎಂದು ಅನಿಸಲಿಲ್ಲವೇ? ಮಕ್ಕಳಿಗೆ ಗೊತ್ತಾಗುವುದಿಲ್ಲ, ಈಗ ಹಾಗೆ ಮಾಡುವುದು ಸಹಜ, ದೊಡ್ಡವರಾದ ಮೇಲೆ ಸರಿಹೋಗುತ್ತಾರೆ ಎಂದು ಎಂದೂ ಅಂದುಕೊಳ್ಳಬೇಡಿ.

ಈ ಮಕ್ಕಳು ದೊಡ್ಡವರಾದ ಮೇಲೆ ವಿದ್ಯಾವಂತರೂ, ಬುದ್ಧಿವಂತರೂ, ಅಧಿಕಾರಿಗಳೂ, ಜವಾಬ್ದಾರಿಯುತ ಸ್ಥಾನ, ಸಾಮಾಜಿಕ ಮಾನ್ಯತೆಗಳನ್ನು ಹೊಂದಿದ್ದರೂ ಸಾಮಾಜಿಕ ಅಸ್ವಾಸ್ಥ್ಯಕ್ಕೆ, ಕ್ರೌರ್ಯಕ್ಕೆ ತಮ್ಮ ಕಾಣ್ಕೆಗಳನ್ನು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ನೀಡುತ್ತಿರುತ್ತಾರೆ. ಏಕೆಂದರೆ ಅವರ ಮನಸ್ಸಿನ ಆಳದಲ್ಲಿ ಅಜ್ಞಾತವಾಗಿ ಕೆಲಸ ಮಾಡುತ್ತಿರುವ ಅನೇಕ ವಿಷಯಗಳಿರುತ್ತವೆ. ಅಡಗಿರುವ ಕಾರಣಗಳ ಮೂಲಗಳನ್ನು ಹೀಗೇ ಎಂದು ನಿರ್ಧಿಷ್ಟವಾಗಿ ಬೊಟ್ಟು ಮಾಡಿ ಹೇಳಲಾಗದಿದ್ದರೂ ಒಂದಷ್ಟು ಮೂಲಗಳನ್ನು ಗುರುತಿಸಬಹುದು.

ಸಾಮಾನ್ಯವಾಗಿ ಇರಬಹುದಾದ ಮನೋಜ್ಞಾತ ಕಾರಣಗಳೆಂದರೆ;

1. ಸಾಂಪ್ರದಾಯಕವಾದಂತಹ (ಜಾತಿ/ಧರ್ಮದ) ವೈಷಮ್ಯದಿಂದ ಸೇಡಿನ ಭಾವವನ್ನು ಹೊಂದಿರುತ್ತಾರೆ.

2. ತಮಗಿರುವ ಆರ್ಥಿಕ ಸಬಲತೆಯಿಂದಾಗಿ, ಸಾಮಾಜಿಕ ಸ್ಥಾನಮಾನದ ಭದ್ರತೆಯಿಂದಾಗಿ, ರಾಜಕೀಯ ಮತ್ತು ವ್ಯವಸ್ಥೆಯಲ್ಲಿರುವವರ ಕೃಪೆ ಅಥವಾ ಸ್ಥಾನದಿಂದಾಗಿ
ಭಯವಿರದವರಾಗಿರುತ್ತಾರೆ.

3. ಅಹಂಕಾರ, ಢಂಬಾಚಾರಗಳೂ ಕೂಡಾ ಕಂದಾಚಾರಗಳಂತೆ ಕುಟುಂಬಗಳಲ್ಲಿ ತಲೆಮಾರುಗಳಿಂದಲೇ ಬಂದಿರುತ್ತವೆ. ನಾವು, ನಮ್ಮ ಮನೆತನದವರು ಯಾರಿಗೂ ತಲೆ ಬಾಗಲ್ಲ. ನಾವಿರುವುದೇ ಆಳುವುದಕ್ಕೆ. ನಮ್ಮ ತಾತ ಮುತ್ತಾತಂದಿರು ಇಷ್ಟು ದರ್ಪದಿಂದ ಆಳುತ್ತಿದ್ದರು ಅಥವಾ ವರ್ತಿಸುತ್ತಿದ್ದರು; ಇಂತಹ ಧೋರಣೆಗಳು ಪ್ರತಿಷ್ಟೆಯ ಸಂಕೇತಗಳಾಗಿರುತ್ತವೆ. ಹಾಗಾಗಿ ಅವರಲ್ಲಿ ಇತರರನ್ನು ಸಮಾನವಾಗಿ ನೋಡುವುದು, ಸೌಹಾರ್ದದಿಂದ ಇರುವುದು, ಇತರರ ಅಭಿಪ್ರಾಯಗಳಿಗೆ ಬೆಲೆ ನೀಡುವುದು ಇರುವುದೇ ಇಲ್ಲ. ಹಾಗೆ ಇತರರದನ್ನು ಒಪ್ಪಿಕೊಳ್ಳುವುದು ತಮ್ಮ ಘನತೆಗೆ ಚ್ಯುತಿ ಎಂಬಂತಹ ಮನೋಭಾವ ಇರುತ್ತದೆ.

ಇನ್ನು ಔದಾರ್ಯವೆಂಬುದು ಅಥವಾ ಅಂತಃಕರುಣವೆಂಬುದು ಕೂಡಾ ಇರುವುದಿಲ್ಲ.
ಇವರು ಸಮಾಜಮುಖಿಯಾಗಿ ಚಿಂತನೆ ಮಾಡುವುದಿರಲಿ, ಹಾಗೆ ಮಾಡುವುದರಿಂದ ನಮಗೇನು ಲಾಭ ಎಂದು ಕೇಳುತ್ತಾರೆ. ನಮ್ಮದನ್ನು ನಾವು ನೋಡಿಕೊಂಡರಾಗದೇ ಎಂದು ಭಾವಿಸುತ್ತಾರೆ. (ಯಾರನ್ನಾದರೂ ಬೊಟ್ಟು ಮಾಡಿ ಅವರು ಹಾಗಿಲ್ಲ ಎನ್ನಬೇಡಿ. ಸಾಮಾನ್ಯವಾಗಿರುವುದಕ್ಕೆ ಅಪರೂಪವಾಗಿ ಅಪವಾದವಾಗಿರುವ ಉದಾಹರಣೆಗಳು ಇದ್ದೇ ಇರುತ್ತವೆ.)

4. ಬಾಲ್ಯದಲ್ಲಿಯೇ ಮೊಳಕೆಯೊಡೆದಿದ್ದ ಕ್ರೌರ್ಯಾಮೋದ (ಸ್ಯಾಡಿಸಂ) ಮನಸ್ಥಿತಿಯು ಗಮನಕ್ಕೆ ಮತ್ತು ಚಿಕಿತ್ಸೆಗೆ ಒಳಪಡದೇ ವಯಸ್ಕರಾದಾಗ ಸದೃಢವಾಗಿ ಬೆಳೆದಿರುತ್ತದೆ. ತಾವು ರಣಕ್ಕಿಳಿಯದೇ, ಇತರರನ್ನು ಗ್ಲ್ಯಾಡಿಯೇಟರ್‍ಗಳನ್ನಾಗಿ ಮಾಡಿ ಕಣಕ್ಕಿಳಿಸುತ್ತಾರೆ. ಇಲ್ಲಿ ಸಮಾಜ ಘಾತುಕತನದಲ್ಲಿ ಎರಡು ವರ್ಗಗಳಿವೆ. ಒಂದು ಭೌತಿಕವಾಗಿ ನೇರ ಸಮಾಜದ ಮೇಲೆ ಬೆಂಕಿಯಂತೆ ಉರಿದಾಳಿ ಮಾಡುವುದು.

ಮತ್ತೊಂದು ತಣ್ಣನೆ ತಮ್ಮ ಸ್ವಾರ್ಥದ ಹೊದಿಕೆಯಲ್ಲಿ ಬೆಚ್ಚಗಿದ್ದು ಮೊದಲನೆಯ ವರ್ಗದ ಸೃಷ್ಟಿಗೆ ಕಾರಣವಾಗುವುದು. ಇವರಲ್ಲಿ ಬಹುಪಾಲು ಅಪರಾಧಿಗಳಾಗಿ ಗುರುತಿಸಲ್ಪಡುವುದಿಲ್ಲ. ಆದರೆ, ಅಪರಾಧಿಗಳನ್ನು ರೂಪಿಸುವುದರಲ್ಲಿ ಬಹಳ ಗಂಭೀರವಾದ ಪ್ರೇರಣೆಗಳಾಗಿರುತ್ತಾರೆ. ಪ್ರಮುಖ ಪಾತ್ರವನ್ನು ವಹಿಸುತ್ತಾರೆ.

ಬಾಲ ಬಾಸ್

ಕೊಂಚ ಸ್ಥಿತಿವಂತರ ಅಥವಾ ಅಧಿಕಾರಸ್ಥರ ಮಕ್ಕಳು ಬಾಸ್‍ಗಳಾಗಿದ್ದು ತಮಗೆ ಒಂದಷ್ಟು ಬಾಲಗಳನ್ನು ಇಟ್ಟುಕೊಂಡಿರುತ್ತಾರೆ. ಕೆಲವು ಸಲ ಕುಟುಂಬದ ಹಿನ್ನೆಲೆ ಏನೂ ಇಲ್ಲದಿದ್ದರೂ ಶಕ್ತಿವಂತ ಹುಡುಗರು ಬಾಸ್‍ಗಳಾಗಿ ವರ್ತಿಸುವುದುಂಟು. ಆದರೆ ಸಾಮಾನ್ಯವಾಗಿ ಕುಟುಂಬದ ಆರ್ಥಿಕ ಮತ್ತು ಅಧಿಕಾರದ ಹಿನ್ನೆಲೆ ಮಕ್ಕಳಲ್ಲಿ ಸಾಕಷ್ಟು ಕೆಲಸ ಮಾಡುತ್ತದೆ.

ಶಾಲೆಗಳಲ್ಲಿ ಮತ್ತು ಮನೆಯ ಬಳಿಯ ಆಟದ ಮೈದಾನಗಳಲ್ಲಿ ಸ್ಥಿತಿವಂತ ಮಕ್ಕಳು ಸ್ಥಿತಿವಂತರಲ್ಲದ ಮಕ್ಕಳನ್ನು ಅಥವಾ ದೈಹಿಕವಾಗಿ ಅಥವಾ ಮಾನಸಿಕವಾಗಿ ಅಷ್ಟೇನೂ ಸಬಲರಲ್ಲದ ಗೆಳೆಯರನ್ನು ಬಾಲಗಳನ್ನಾಗಿ ನಡೆಸಿಕೊಳ್ಳುವ ರೀತಿಗಳನ್ನು ಪಾಲಕರೂ ಮತ್ತು ಶಿಕ್ಷಕರೂ ಗಮನಿಸಬೇಕು.

ಆ ಮಕ್ಕಳೋ ತಮಗಿರುವ ಮೇಲರಿಮೆಯ ಕಾರಣದಿಂದ, ಮನೆಯಲ್ಲಿ ಅನುಸರಿಸಿರುವ ಮಾದರಿಯ ದೆಸೆಯಿಂದ ತಮ್ಮ ಬಾಲಗಳಿಗೆ ಕೆಲಸಗಳನ್ನು ಹೇಳುತ್ತಿರುತ್ತಾರೆ. ಅವರು ಗೆಳೆಯರೇ ಆಗಿದ್ದರೂ ಒಬ್ಬ ಇನ್ನೊಬ್ಬನ ಮೇಲೆ ಮೇಲಧಿಕಾರವನ್ನು ಪಡೆದಿರುತ್ತಾರೆ. ಕೆಲವು ಸಲ ತಿನಿಸು ಅಥವಾ ಬೇರೆ ವಸ್ತುಗಳನ್ನು ಕೊಡುವ ಕಾರಣವಿರಬಹುದು. ಕೆಲವು ಸಲ ಏನೂ ಇಲ್ಲದೆಯೇ ಅಧಿಕಾರ ಚಲಾಯಿಸುತ್ತಾರೆ.

ಆಡುವಾಗ ಚೆಂಡು ದೂರದಲ್ಲಿ ಬಿದ್ದರೆ ಬಾಲವನ್ನೇ ಕಳುಹಿಸುವುದು, ಕಾಂಪೋಂಡಿನ ಒಳಗೆ ಅಥವಾ ಸಜ್ಜೆ ಮೇಲೆ ಬಿದ್ದರೆ ಬಾಲವನ್ನೇ ಹತ್ತಿಸುವುದು. ಚೇಷ್ಟೆ ಅಥವಾ ತರಲೆ ಮಾಡುವಾಗ ಬಾಲವನ್ನು ಸಿಕ್ಕಿಸಿ ತಾನು ಮೆಲ್ಲನೆ ಜಾರಿಕೊಳ್ಳುವುದು. ಅಂಗಡಿಯಿಂದ ಅಥವಾ ಇನ್ನೆಲ್ಲಿಂದಾದರೂ ಏನಾದರೂ ತರಿಸಿಕೊಳ್ಳುವುದಿದ್ದರೆ ಬಾಲವನ್ನೇ ಓಡಿಸುವುದು. ಬಾಲಬಾಸ್‍ಗಳು ಎಷ್ಟೋ ವಿಷಯಗಳಲ್ಲಿ ತಾವು ಅಪರಾಧಿಗಳಾಗದೆಯೇ ತಮ್ಮ ಬಾಲಗಳನ್ನು ಅಪರಾಧಿಗಳನ್ನಾಗಿ ರೂಪಿಸುತ್ತಾರೆ.

ಹೀಗೆ ಯಾವುದಾದರೂ ಪ್ರಕರಣದಲ್ಲಿ ಸಿಕ್ಕಿಕೊಂಡಾಗ ಬಾಲವನ್ನು ಕೇಳಿ, “ನೀನ್ಯಾಕೆ ಅವನು ಹೇಳಿದ ಹಾಗೆ ಕೇಳ್ತೀಯಾ?” ಎಂದು. ಪಾಪ ಬಾಲಗಳಲ್ಲಿ ಉತ್ತರವಿರುವುದಿಲ್ಲ. ಸುಮ್ಮನೆ ತಲೆ ತಗ್ಗಿಸಿ ನಿಂತುಕೊಳ್ಳುತ್ತವೆ. ಮತ್ತೆ ಬಾಸ್ ಹಿಂದೆ ಬಾಲಗಳಾಗಿ ಹೋಗುತ್ತವೆ. ಏಕೆಂದರೆ ಹಾಗೆ ಹೋಗುವುದು ಅವರಿಗೂ ರೂಢಿಯಾಗಿರುತ್ತದೆ. ಹಾಗೆ ಬಾಲಗಳನ್ನು ತಮ್ಮ ಹಿಂಬಾಲಕರನ್ನಾಗಿಸಿಕೊಳ್ಳುವುದು ಬಾಸ್‍ಗಳಿಗೂ ರೂಢಿಯಾಗಿಬಿಟ್ಟಿರುತ್ತವೆ.

ಯಾವುದೇ ಮಗುವು ತಾನೇ ಎದ್ದು ಹೋಗಿ ತನ್ನ ವಸ್ತುವನ್ನು ತರಬಹುದಾಗಿದ್ದರೂ ಮತ್ತೊಂದು ಮಗುವಿಗೆ ಆ ಕೆಲಸವನ್ನು ಮಾಡಲು ಹೇಳುತ್ತದೆ ಎಂದರೆ ತಕ್ಷಣವೇ ಎಚ್ಚೆತ್ತುಕೊಳ್ಳಿ. ಇದು ಬರಿಯ ಸೋಮಾರಿತನದ ವಿಷಯ ಮಾತ್ರವೇ ಅಲ್ಲ. ತನ್ನ ಮೇಲರಿಮೆಯ ಅಹಂಕಾರದ ತೃಪ್ತಿಗೆ ಮನುಷ್ಯರನ್ನು ಬಳಕೆ ಮಾಡಿಕೊಳ್ಳುವುದು. ಇದು ಕ್ರಮೇಣ ತನ್ನ ಇತರ ಸಹಜೀವಿಗಳನ್ನು ದಾಸ್ಯಕ್ಕೆ ಒಳಪಡಿಸಿಕೊಳ್ಳುವ ಮುನ್ಸೂಚನೆ. ಬಾಲಬಾಸ್‍ಗಳು ಗ್ಲ್ಯಾಡಿಯೇಟರ್‍ಗಳನ್ನು ರೂಪಿಸಿ ಭಲೇ ಭಲೇ ಎಂದು ರಕ್ತಸಿಕ್ತ ಕ್ರೀಡೆಗಳನ್ನು ಆನಂದಿಸುವವರು.

(ಮುಂದುವರಿಯುವುದು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಾದಕ ವಸ್ತುಗಳಿಗೆ ಕಡಿವಾಣ ; ಸ್ವಾಸ್ಥ್ಯ ಬದುಕಿಗೆ ಸೋಪಾನ

Published

on

  • ಡಾ.ಗೀತಾ ಬಸವರಾಜು, ಉಪನ್ಯಾಸಕರು, ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ

ಗತ್ತಿನಲ್ಲಿರುವ 84 ಕೋಟಿ ಜೀವರಾಶಿಗಳಲ್ಲಿ ಮಾನವ ಶ್ರೇಷ್ಟ ಪ್ರಾಣಿ. ಏಕೆಂದರೆ ಮಾತನಾಡುವ, ಆಲೋಚಿಸುವ, ಭಾವನೆಗಳನ್ನು ಅಭಿವ್ಯಕ್ತಿಸುವ ವಿಶೇಷವಾದ ಸಾಮರ್ಥ್ಯ ಅವನಿಗಿದೆ.

ಈ ಶಕ್ತಿಯ ಮೂಲಕ ತುಂಬಾ ಶ್ರೇಷ್ಟನಾಗಬೇಕಾದ ಮಾನವ ನಗರೀಕರಣ, ಕೈಗಾರಿಕೀಕರಣ, ಪಾಶ್ಚಾತ್ಯೀಕರಣದ ಪ್ರಭಾವದಿಂದ ಪ್ರೇರಿತನಾಗಿ ಮೂಲ ಸಂಸ್ಕೃತಿಯನ್ನು ಮರೆತು ಮೃಗೀಯ ವರ್ತನೆಗೆ ದಾಸನಾಗಿದ್ದಾನೆ. ಪ್ರಸ್ತುತ ವೈಜ್ಞಾನಿಕವಾಗಿ, ತಾಂತ್ರಿಕವಾಗಿ ಎಷ್ಟೇ ಮುಂದುವರೆದಿದ್ದರೂ, 20ನೇ ಶತಮಾನದಿಂದೀಚೆಗೆ ಜಗತ್ತನ್ನೇ ತಲ್ಲಣಗೊಳಿಸುವ ಸಾಮಾಜಿಕ ಪಿಡುಗುಗಳಾದ ಬಡತನ, ಭಿಕ್ಷಾಟನೆ, ನಿರುದ್ಯೋಗ, ವರದಕ್ಷಿಣೆ, ಅಪರಾಧ ಮಾದಕ ವಸ್ತು ವ್ಯಸನವು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿವೆ.

ಈ ಸಮಸ್ಯೆಗಳನ್ನು ಪರಿಹರಿಸಬೇಕಾಧ ಯುವಜನತೆ ಇಂತಹ ದುಶ್ಚಟಗಳ ಸೆಲೆಯಲ್ಲಿ ಸಿಕ್ಕು ತಮ್ಮ ಅಮೂಲ್ಯ ಬದುಕನ್ನು ಹಾಳು ಮಾಡಿಕೊಳ್ಳುತ್ತಿರುವುದು ಆತಂಕಕಾರಿ.
ಯುವಶಕ್ತಿಯೇ ದೇಶದ ಶಕ್ತಿಯಾಗಿದ್ದು ಭವ್ಯಭಾರತ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಬೇಕಾದ ಯುವಜನತೆ ಮಾದಕ ವಸ್ತುಗಳ ದುಶ್ಚಟಕ್ಕೆ ಒಳಗಾಗಿ ಮಾನವೀಯ ಮೌಲ್ಯಗಳನ್ನು ಕಳೆದುಕೊಂಡು ಅಂಧಕಾರದಲ್ಲಿ ಜೀವನ ನಡೆಸುತ್ತ ಚಿಕ್ಕ ವಯಸ್ಸಿನಲ್ಲಿಯೇ ಮರಣ ಹೊಂದುತ್ತಿರುವುದು ಆಘಾತದ ವಿಷಯ.

ಜೋಸೆಫ್ ಜ್ಯೂಲಿಯನ್ ರವರ ಪ್ರಕಾರ ಮಾದಕ ವಸ್ತುಗಳೆಂದರೆ ಯಾವುದೇ ರಾಸಾಯನಿಕ ವಸ್ತುವಾಗಿದ್ದು ಅದರ ಸೇವನೆಯಿಂದ ದೈಹಿಕ ಕಾರ್ಯ, ಮನಸ್ಥಿತಿ, ಗ್ರಹಣ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಪದೇ ಪದೇ ಬಳಸುವುದರಿಂದ ವ್ಯಕ್ತಿ ಮಾದಕ ವಸ್ತು ವ್ಯಸನಿಯಾಗುತ್ತಾನೆ. ಮಾದಕ ವಸ್ತುವು ಮನಸ್ಸಿಗೆ ಗೊಂದಲವನ್ನು ತರುವ ಪದಾರ್ಥವಾಗಿದ್ದು ಅಮಲು ರೋಗವಾಗಿದೆ. ಭಾರತದ ನಗರ ಪ್ರದೇಶಗಳಲ್ಲಷ್ಟೇ ಅಲ್ಲದೆ ಹಳ್ಳಿ ಹಳ್ಳಿಗಳಲ್ಲಿಯೂ ಇದರ ಬಳಕೆ ಕಂಡುಬರುತ್ತದೆ. ಶ್ರೀಮಂತರು, ಮಧ್ಯಮ ವರ್ಗದವರು, ವಿದ್ಯಾವಂತರು, ಯುವಕರು, ಮಹಿಳೆಯರು ಎಂಬ ಭೇದವಿಲ್ಲದೆ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಆರೋಗ್ಯವನ್ನು ಕಳೆದುಕೊಳ್ಳುತ್ತಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯವರು ನಡೆಸಿದ ಸಮೀಕ್ಷೆಯ ಪ್ರಕಾರ ಭಾರತದ ವಿದ್ಯಾರ್ಥಿಗಳಲ್ಲಿ ಶೇ 10 ರಷ್ಟು ಒಂದಿಲ್ಲೊAದು ದುಶ್ಚಟಕ್ಕೆ ಒಳಗಾಗಿದ್ದು ಅದರಲ್ಲಿ 14 ರಿಂದ 22 ರ ವಯೋಮಾನದವರು ಹೆಚ್ಚಿದ್ದಾರೆ. ಸ್ವಾತಂತ್ಯç ಪೂರ್ವದಲ್ಲಿ ಶೇ 2 ರಷ್ಟಿದ್ದ ವ್ಯಸನಿಗಳು ಪ್ರಸ್ತುತ ಶೇ 30 ಕ್ಕಿಂತ ಹೆಚ್ಚಿದ್ದಾರೆ. ಜಗತ್ತಿನ ಸುಮಾರು 20 ಕೋಟಿಯಷ್ಟು ಇರುವ ಮಾದಕ ವ್ಯಸನಿಗಳಲ್ಲಿ ಭಾರತದಲ್ಲಿ ಶೇ 7.5 ಕೋಟಿ ವ್ಯಸನಿಗಳಿದ್ದಾರೆಂದು ಅಂದಾಜಿಸಲಾಗಿದೆ.

ನಶೆಯ ಅಲೆ ಸಾವಿನ ಬಲೆಯಾಗುತ್ತಿದ್ದರೂ ಕೂಡ ಈ ದೇಶದಲ್ಲಿ ಊಟವಿಲ್ಲದೆ ಸಾಯುವವರ ಸಂಖ್ಯೆಗಿAತಲೂ ಚಟವನ್ನು ಬೆಳೆಸಿಕೊಂಡು ಸಾಯುವವರು ಹೆಚ್ಚಾಗಿದ್ದಾರೆ.
ಮಾದಕ ವಸ್ತು ಬಳಸುವ ಆತಂಕದ ರಾಷ್ಟçಗಳಲ್ಲಿ ಭಾರತ ಪ್ರಥಮ ಸ್ಥಾನದಲ್ಲಿದೆ. ಅಮಲು ಪದಾರ್ಥಗಳಿಗೆ ಬಲಿಯಾಗುತ್ತಿರುವವರಲ್ಲಿ ವಿದ್ಯಾರ್ಥಿಗಳನ್ನೂ ಒಳಗೊಂಡAತೆ ಯುವಜನತೆ ಹೆಚ್ಚಾಗಿದ್ದು ಇದು ದೇಶದ ಭವಿಷ್ಯಕ್ಕೆ ಮಾರಕವಾಗಿದೆ.

ಡಾ.ಗೀತಾ ಬಸವರಾಜು, ಉಪನ್ಯಾಸಕರು,
ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ

ದುಶ್ಚಟಗಳ ಆರಂಭಕ್ಕೆ ಕಾರಣಗಳು

• ಕ್ಷಣಕಾಲ ಸುಖ ಅನಂತಕಾಲ ದು:ಖಕ್ಕೆ ಕಾರಣ ಎನ್ನುವುದು ಗೊತ್ತಿದ್ದೂ ಅಫೀಮು, ಹೆರಾಯಿನ್, ಬೀಡಿ, ಸಿಗರೇಟು, ಮದ್ಯಪಾನ ಮುಂತಾದ ದುಶ್ಚಟಗಳಿಗೆ ವಿದ್ಯಾವಂತ ಯುವಕರೇ ಬಲಿಯಾಗುತ್ತಿದ್ದಾರೆ.
• ಉಲ್ಲಾಸಕ್ಕಾಗಿ, ಫ್ಯಾಷನ್‌ಗಾಗಿ, ದುರ್ಬಲ ಮನಸ್ಸು, ಏಕಾಂಗಿತನ, ಒತ್ತಡ ನಿವಾರಣೆ ಮಾಡಿಕೊಳ್ಳಲು
• ನೋವು, ದು:ಖಕ್ಕೆ ಪರಿಹಾರವೆಂಬ ಭ್ರಮೆಗೆ ಒಳಗಾಗಿ ತನಗೆ ಅರಿವಿಲ್ಲದಂತೆ ದೊಡ್ಡ ಕಂದಕಕ್ಕೆ ಬಿದ್ದು ನರಳಾಡುವಂತ ಸಂದರ್ಭ ತಂದುಕೊಂಡು ಮಾದಕ ವಸ್ತುಗಳ ಮಾಯಾಜಾಲಕ್ಕೆ ಒಳಗಾಗುತ್ತಿದ್ದಾರೆ. ತೆರಣಿಯ ಹುಳು ತಾನು ಸುತ್ತಿದ ಬಲೆಯಲ್ಲಿ ತಾನೇ ಬಿದ್ದು ಹೊರಳಾಡುವಂತೆ ಅವರ ಪರಿಸ್ಥಿತಿಯಾಗಿದೆ.

ದುಶ್ಚಟಗಳಿಂದಾಗುವ ಪರಿಣಾಮಗಳು

• ದೇಹ ಮತ್ತು ಮನಸ್ಸಿನ ಸಮತೋಲನ ಕಳೆದುಕೊಳ್ಳುವುದು.
• ವ್ಯಕ್ತಿ ತನ್ನನ್ನು ದಹಿಸಿಕೊಳ್ಳುವುದರ ಜೊತೆಗೆ ಕುಟುಂಬದ ನೆಮ್ಮದಿಗಿ ಭಂಗ ತರುತ್ತಾನೆ.
• ಕುಟುಂಬ, ಸಮಾಜದಿಂದ ನಿಂದನೆಗೆ ಒಳಗಾಗುವನು.
• ಜ್ಞಾನೇಂದ್ರಿಯಗಳ ಮೇಲೆ ಹತೋಟಿ ಕಳೆದುಕೊಳ್ಳುವನು
• ಸಮಾಜಬಾಹಿರ ಚಟುವಟಿಕೆಗಳಾದ ಕಳ್ಳತನ, ಅತ್ಯಾಚಾರ, ಕೊಲೆ ಇಂತಹ ದುಷ್ಕೃತ್ಯಗಳನ್ನು ಮಾಡುವನು.
• ದಾಂಪತ್ಯದಲ್ಲಿ ವಿರಸವುಂಟಾಗಿ ವಿಚ್ಚೇದನಗಳಾಗುವ ಸಾಧ್ಯತೆ.
• ರಸ್ತೆ ಅಪಘಾತಗಳಲ್ಲಿ ಶೇ 1/3 ರಷ್ಟು ಮದ್ಯಪಾನ ಮತ್ತು ಮಾದಕ ವಸ್ತು ಸೇವನೆಯಿಂದಾಗುತ್ತದೆ. ಈ ಹಿನ್ನೆಲೆಯಲ್ಲಿ ಮಹಾತ್ಮ ಗಾಂಧೀಜಿಯವರು ಬೆಂಕಿ ದೇಹವನ್ನು ನಾಶ ಮಾಡಿದರೆ ಕುಡಿತ ದೇಹ ಮತ್ತು ಆತ್ಮಗಳೆರಡನ್ನೂ ನಾಶ ಮಾಡುತ್ತದೆ ಎಂದಿದ್ದಾರೆ.

ಪರಿಹಾರ ಕ್ರಮಗಳು

• ಮಾದಕ ವಸ್ತುಗಳ ಹಿಡಿತಕ್ಕೆ ಸಿಲುಕದೆ ಅದರಿಂದ ದೂರವಿರುವುದು.
• ಮಾದಕ ವಸ್ತು ಸೇವಿಸುವುದಿಲ್ಲವೆಂದು ಪ್ರತಿಜ್ಞೆ ಮಾಡುವುದು.
• ಸಹೋದ್ಯೋಗಿ, ಸ್ನೇಹಿತರಿಗೆ ತಿಳುವಳಿಕೆ ನೀಡುವುದು.
• 18 ವರ್ಷ ವಯಸ್ಸಿನವರೆಗೂ ಪೋಷಕರು ಮಕ್ಕಳ ಬಗ್ಗೆ ಗಮನ ನೀಡಿ ಮಾರ್ಗದರ್ಶನ ಮಾಡುವುದು.
• ಶಾಲೆ ಕಾಲೇಜುಗಳಲ್ಲಿ ಶಿಕ್ಷಕರು ಮಕ್ಳಳಲ್ಲಿ ಜೀವನ ಕೌಶಲಗಳನ್ನು ಬೆಳೆಸುವ ರಾಯಭಾರಿಗಳಾಗಿ ಕಾರ್ಯನಿರ್ವಹಿಸುವುದು.
• ವಿದ್ಯಾರ್ಥಿಗಳನ್ನು ಸಹಪಠ್ಯ ಚಟುವಟಿಕೆಗಳಲ್ಲಿ ತೊಡಗಿಸಿ ಆರೋಗ್ಯಕರವಾದ ಹವ್ಯಾಸಗಳನ್ನು ಬೆಳೆಸುವುದು.

ಭಾರತ ಸರ್ಕಾರವು 1951ರಲ್ಲಿ ಅಪಾಯಕಾರಿ ವಸ್ತುಗಳ ಕಾಯ್ದೆಯನ್ನು ಜಾರಿಗೆ ತಂದಿತು. ಈ ಕಾಯ್ದೆ ಮಾದಕ ವಸ್ತು ತಯಾರಿಕೆ, ಸಾಗಾಣಿಕೆ, ಮಾರಾಟ ಮತ್ತು ಬಳಕೆಯ ಮೇಲೆ ನಿರ್ಬಂಧ ಹೇರಿದೆ. 1985 ರಲ್ಲಿ ಡ್ರಗ್ಸ್ ಆಕ್ಟ್ ಜಾರಿಗೊಳಿಸಿದೆ. ಈ ಕಾಯ್ದೆ ಮಾದಕ ವಸ್ತುಗಳ ಕಳ್ಳ ವ್ಯಾಪಾರದಲ್ಲಿ ತೊಡಗಿದ ಅಪರಾಧಿಗಳಿಗೆ ಕನಿಷ್ಠ 10 ರಿಂದ 20 ವರ್ಷ ಕಠಿಣ ಶಿಕ್ಷೆ, 1 ರಿಂದ 2 ಲಕ್ಷದವರೆಗೆ ದಂಡ ಘೋಷಿಸಿದೆ.

ಡಿಸೆಂಬರ್-7 1987 ರ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾದಕ ವಸ್ತುಗಳ ದುರ್ಬಳಕೆಯನ್ನು ತಡೆಗಟ್ಟುವ ನಿಯಮಾವಳಿಗಳ ಅಂಗೀಕಾರವನ್ನು ಹಲವಾರು ರಾಷ್ಟçಗಳು ಒಪ್ಪಿಕೊಂಡು ವಿಶ್ವದಾದ್ಯಂತ ಮಾದಕ ವಸ್ತುಗಳ ದುರ್ಬಳಕೆ ನಿಯಂತ್ರಿಸುವ ತೀರ್ಮಾನವನ್ನು ಮಾಡಿದವು.

ಜೂನ್-26 ವಿಶ್ವಸಂಸ್ಥೆಯು ಮಾದಕ ವಸ್ತು ದುರ್ಬಳಕೆ ಮತ್ತು ಕಳ್ಳಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನವನ್ನು ಆಚರಿಸಿ ಈ ಸಮಸ್ಯೆಯ ನಿಯಂತ್ರಣ ಮತ್ತು ಪರಿಹಾರದ ಕುರಿತು ನಿವಾರಣೆಯಲ್ಲಿ ಸಮುದಾಯ, ಸಮವಯಸ್ಕರು, ಕುಟುಂಬ, ಸಂಘ ಸಂಸ್ಥೆಗಳವರು ಪ್ರಮುಖ ಪಾತ್ರ ವಹಿಸಬೇಕಾಗಿದೆಎಂದು ಮನವರಿಕೆ ಮಾಡಿತು. ಮಾದಕ ವಸ್ತು ದುರ್ಬಳಕೆ ಒಂದು ಮಾನಸಿಕ, ಸಾಮಾಜಿಕ ಸಮಸ್ಯೆಯಾಗಿದ್ದು ಇಡೀ ಸಮುದಾಯವೇ ಇದರ ನಿವಾರಣೋಪಾಯದಲ್ಲಿ ಪಾಲ್ಗೊಳ್ಳಬೇಕೆಂದು ಸೂಚಿಸಿತು.

ವ್ಯಕ್ತಿ ಒಮ್ಮೆ ಈ ಚಕ್ರವ್ಯೂಹದಲ್ಲಿ ಸಿಲುಕಿಕೊಂಡರೆ ಹೊರಬರುವುದು ಕಷ್ಟಸಾಧ್ಯ. ಆರೋಗ್ಯ ಜೀವನ ನಡೆಸಲು ಮಾದಕ ವಸ್ತುಗಳನ್ನು ತ್ಯಜಿಸಿ ಸುಂದರ ಜೀವನ ನಡೆಸಿ ಎಂಬ ಸಂದೇಶ ಸಾರುತ್ತ ನಾವೆಲ್ಲರೂ ಸಂಘಟಿತರಾಗಿ ಸಮಾಜದಲ್ಲಿ ಜಾಗೃತಿ ಮೂಡಿಸಿದಾಗ ದುಶ್ಚಟಮುಕ್ತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. (ಜೂನ್-26 ರಂದು ಅಂತರರಾಷ್ಟೀಯ ಮಾದಕ ವಸ್ತುಗಳ ದುರ್ಬಳಕೆ ವಿರೋಧಿ ದಿನ ತನ್ನಿಮಿತ್ತ ಈ ಲೇಖನ – ಡಾ. ಗೀತಾ ಬಸವರಾಜು,ಉಪನ್ಯಾಸಕರು,ಎ.ವಿ.ಕೆ ಮಹಿಳಾ ಕಾಲೇಜು,ದಾವಣಗೆರೆ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿರುದ್ಯೋಗಿಗಳಿಗೆ ಸಿಹಿ ಸುದ್ದಿ

Published

on

ಸುದ್ದಿದಿನ,ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂ. 29 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ :08182-255293/ 9108235132/8151093747/ 9482023412 ಗಳ ಮೂಲಕ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಟಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ

Published

on

ಸುದ್ದಿದಿನ,ದಾವಣಗೆರೆ:ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಟಿಇಟಿ ಜೂನ್ 30 ರಂದು ರಾಜ್ಯಾದ್ಯಂತ ನಡೆಯಲಿದ್ದು ದಾವಣಗೆರೆ ನಗರದ 19 ಕೇಂದ್ರಗಳಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಟಿಇಟಿ ಪರೀಕ್ಷಾ ಪೂರ್ವ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಟಿಇಟಿ ಪರೀಕ್ಷೆಯನ್ನು ಯಾವುದೇ ಲೋಪ ದೋಷಗಳಿಗೆ ಅವಕಾಶ ಇಲ್ಲದಂತೆ ಪಾರದರ್ಶಕವಾಗಿ ನಡೆಸಬೇಕು. ಪರೀಕ್ಷಾ ಪಾವಿತ್ರ್ಯತೆ ಗೆ ಯಾವುದೇ ಧಕ್ಕೆಯಾಗದಂತೆ ನಡೆಸಲು ಕೇಂದ್ರದ ಅಧೀಕ್ಷಕರು ಗಳಿಗೆ ಸೂಚನೆ ನೀಡಿ ಕೇಂದ್ರದಲ್ಲಿ ಎಲ್ಲಾ ಮೂಲಭೂತ ಸೌಕರ್ಯ ಕಲ್ಪಿಸಲು ತಿಳಿಸಿದರು.

ಜೂನ್ 30 ಭಾನುವಾರ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ 11 ಕೇಂದ್ರಗಳಲ್ಲಿ 3805 ಮತ್ತು ಮಧ್ಯಾಹ್ನ 2 ರಿಂದ ಸಂಜೆ 4.30 ವರೆಗೆ 19 ಕೇಂದ್ರಗಳಲ್ಲಿ 6150 ಅಭ್ಯರ್ಥಿಗಳು ಪರೀಕ್ಷೆ ಬರೆಯುವರು.

144 ಸೆಕ್ಷನ್ ಜಾರಿ. ಪರೀಕ್ಷಾ ಅವ್ಯವಹಾರ ಹಾಗೂ ಸುಗಮ ಪರೀಕ್ಷೆಗಾಗಿ ಕೇಂದ್ರದ ಸುತ್ತಮುತ್ತ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಇರುತ್ತದೆ. ಕೇಂದ್ರದ ಸುತ್ತಮುತ್ತ ಜೆರಾಕ್ಸ್ ಅಂಗಡಿ, ಇಂಟರ್ ನೆಟ್ ಸೆಂಟರ್ ಮುಚ್ಚಲು ಆದೇಶಿಸಲಾಗುತ್ತದೆ. ಮತ್ತು ಪರೀಕ್ಷಾ ಕೇಂದ್ರದೊಳಗೆ ಯಾವುದೇ ಮೊಬೈಲ್, ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ತರುವಂತಿಲ್ಲ. ಕೇಂದ್ರದ ಪ್ರವೇಶಕ್ಕೂ ಮೊದಲು ತಪಾಸಣೆ ಮಾಡಿ ಪ್ರವೇಶ ನೀಡಬೇಕೆಂದು ಸೂಚಿಸಿದರು.

ಸಭೆಯಲ್ಲಿ ಜಿ.ಪಂ. ಉಪಕಾರ್ಯದರ್ಶಿ ಕೃಷ್ಣನಾಯ್ಕ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೊಟ್ರೇಶ್, ಡಯಟ್ ಪ್ರಾಂಶುಪಾಲರಾದ ಗೀತಾ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending