Connect with us

ರಾಜಕೀಯ

ಹಾರು ತಿಹುದು ಏರು ತಿಹುದು ನೋಡು ಬಂಡಾಯದ ಬಾವುಟ

Published

on

ಸುದ್ದಿದಿನವಿಶೇಷ: ರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ದಾವಣಗೆರೆ ಜಿಲ್ಲೆ ಪ್ರಮುಖವಾದ ಜಿಲ್ಲೆ. ಇಲ್ಲಿನ ಜಿದ್ದಾ ಜಿದ್ದಿನ ಚುನಾವಣೆ ಈ ಬಾರಿ ಪ್ರಮುಖ ಪಾತ್ರ ವಹಿಸುತ್ತದೆ. ಇಲ್ಲಿಯವರೆಗು ಜಿಲ್ಲೆಯ 8ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 116 ಮಂದಿ ನಾಮಪತ್ರ ಸಲ್ಲಿಸಿದಂತಾಗಿದೆ.

ದಾವಣಗೆರೆ ಜಿಲ್ಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಮಲ ಪಾಳೆಯಕ್ಕೆ ತೆಂಗಿನಕಾಯಿ ಸೆಡ್ಡು ಹೊಡೆದು ನಿಂತಿತ್ತು. ಆದರೆ ಈ ಬಾರಿಯು ಕೂಡ ಬಿಜೆಪಿ ಟಿಕೇಟ್ ವಂಚಿತ ಅಭ್ಯರ್ಥಿಗಳು ಪತ್ಯೇಕವಾಗಿ ಬಿಜೆಪಿಯ ಬಂಡಾಯ ಅಭ್ಯರ್ಥಿ ಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.ಕಳೆದ ಬಾರಿ ಕೆಜೆಪಿಯ ಹೊಡೆತ ದಿಂದ ತನ್ನ ಅಸ್ತಿತ್ವವನ್ನು ಕಳೆದಕೊಂಡ ಬಿಜೆಪಿ ಈ ಬಾರಿ ಜಿಲ್ಲೆಯಲ್ಲಿ ಕಮಲ ಅರಳಿಸಲು ಸಜ್ಜಾಗಿತ್ತು, ಆದರೆ, ಒಂದೆ ಕ್ಷೇತ್ರದಲ್ಲಿ ಆಕಾಂಕ್ಷಿಗಳ ಪಟ್ಟಿ ಜೋರಾಗಿದ್ದ ಹಿನ್ನಲೆಯಲ್ಲಿ, ಟಿಕೇಟ್ ಕೈ ತಪ್ಪಿದವರು, ಬಂಡಾಯದ ಬಾವುಟವನ್ನು ಹಾರಿಸಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರ ಪ್ರಮುಖ ಕ್ಷೇತ್ರವಾಗಿದೆ. ಆದರೆ ಮಾಯಕೊಂಡ ಕ್ಷೇತ್ರದಲ್ಲಿ ಈ ಬಾರಿ ಮಾಯದಾಟ ಶುರುವಾಗಿದೆ.ಕಮಲದ ಮಾಜಿ ಶಾಸಕ ಬಸವರಾಜ್ ನಾಯ್ಕ ಕೂಡ ಶತಾಯಗತಾಯ ಬಿಜೆಪಿಯಿಂದ ನಿಲ್ಲಲು ಯತ್ನಿಸಿದರು ಆದರೆ ಕೊನೆ ಗಳಿಗೆಯಲ್ಲಿ ಪ್ರೊ.ಲಿಂಗಪ್ಪನವರ ಹೆಸರು ಅಂತಿಮವಾದ ಬಳಿಕ, ಜೆಡಿಯು ಸೇರಿ ಕಮಲಕ್ಕೆ ಬಾಣ ಬಿಟ್ಟಿದ್ದಾರೆ. ಈ ನಡೆಯು ಕೂಡ ಒಂದು ಕಡೆ ಕಮಲಕ್ಕೆ ಮುಳ್ಳಾಗುವುದರಲ್ಲಿ ಸಂಶಯವಿಲ್ಲ .‌ಇನ್ನು ಇದೇ ಕ್ಷೇತ್ರದ ಮತ್ತೊಬ್ಬ ಪ್ರಮುಖರಲ್ಲಿ ಎಚ್.ಆನಂದಪ್ಪ ಕೂಡ ಟಿಕೇಟ್ ಪಡೆಯಲು ಪ್ರಯತ್ನ ಮಾಡಿದರು. ಆದರೆ ಅಧಿಕೃತವಾಗಿ ಲಿಂಗಪ್ಪನವರಿಗೆ ಘೋಷಣೆ ಯಾದ ಬಳಿಕ ಆನಂದಪ್ಪ ನವರು ಬಂಡಾಯದ ಕಹಳೆ ಮೊಳಗಿಸಿದ್ದಾರೆ.‌ಇನ್ನು ಒಂದೇ‌ ಕ್ಷೇತ್ರದಲ್ಲಿ , ಒಂದೇ ಪಕ್ಷದ ವಿರುದ್ಧ ಇಬ್ಬರು ಅಭ್ಯರ್ಥಿಗಳು ಬಂಡಾಯ ಸಿಡಿಸಿದ್ದಾರೆ.‌ಇದರಿಂದಾಗಿ ಈ ಬಾರಿ ಬಿಜೆಪಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಇಬ್ಬರ ಜಗಳದಿಂದ ಮೂರನೆ ಅವರಿಗೆ ಲಾಭವಾಗುಬಂತೆ ಇಲ್ಲಿನ‌ ಜೆಡಿಎಸ್ ಅಭ್ಯರ್ಥಿ ಗೆ ವರ ವಾಗುವುದೆ ಕಾದು ನೋಡಬೇಕಿದೆ.

ಇನ್ನು ಜಿಲ್ಲೆಯ ಪ್ರಮುಖ ಕ್ಷೇತ್ರವಾದ ಹರಪನಹಳ್ಳಿ ಯಲ್ಲು ಬಿಜೆಪಿಯ ಬಂಡಾಯದ ಹಾರಟ ಕಡಿಮೆಯಿಲ್ಲ. ಯಡಿಯೂರಪ್ಪ ಮತ್ತು ಶ್ರೀರಾಮುಲು ಆಪ್ತರಾಗಿದ್ದ ಎನ್ .ಕೊಟ್ರೇಶ್ ಬಿಜೆಪಿಯ ಅಭ್ಯರ್ಥಿ ಯಾಗುವುದು ಕಚಿತವೆಂದಿತ್ತು ಆದರೆ ಕೊನೆ ಕ್ಷಣದಲ್ಲಿ ಕರುಣಾಕರ ರೆಡ್ಡಿಗೆ ಟಿಕೇಟ್ ಘೋಷಣೆ ಮಾಡಿದರು. ಇದರಿಂದಾಗಿ ನನಗೆ ಯಡಿಯೂರಪ್ಪ, ರಾಮುಲು ಮೋಸ ಮಾಡಿದರು ಎಂದು ಕಮಲ ಬಿಟ್ಟು ತೆನೆ ಹೊತ್ತುಕೊಂಡಿದ್ದಾರೆ. ಕಡೆಯ ಕ್ಷಣದಲ್ಲಿ ಜೆಡಿಎಸ್ ಸೇರಿದ ಕೊಟ್ರೇಶ್ ಬಿಜೆಪಿಯ ವಿರುದ್ದ ನೇರವಾಗಿ ಬಂಡಾಯದ ಬಿಸಿ ಅಲೆಯನ್ನು ನಿರ್ಮಿಸಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲೂ ಕೂಡ ಬಂಡಾಯದ ಹೊಗೆ ಕಾಣಿಸುತ್ತಿದೆ.
ಬಿ ಫಾರಂ ಸಿಗುವುದಕ್ಕೂ ಮುಂಚೆಯೇ ಬಿಜೆಪಿಯ ಅಭ್ಯರ್ಥಿ ಎಂದು ಯಶವಂತರಾವ್ ಜಾಧವ್ ನಾಮಪತ್ರ ಸಲ್ಲಿಸಿದ್ದರು. ಕೊನೆ ಗಳಿಗೆಯಲ್ಲಿ ಕಮಲದ ಅಧಿಕೃತ ಅಭ್ಯರ್ಥಿ ಯಾಗಿಯೇ ಘೊಷಿತಗೊಂಡರು. ಇನ್ನು ಇದೆ ಕ್ಷೇತ್ರದಿಂದಲೆ ಎಚ್. ಎಸ್. ನಾಗರಾಜು ಕೂಡ ಕಮಲ ಪಾಳಯದಲ್ಲಿ ಟಿಕೇಟ್ ಆಕಾಂಕ್ಷಿಯಾಗಿದ್ದರು ಆದರೆ ಯಶವಂತರಾವ್ ಜಾದವ್ ಗೆ ಟಿಕೇಟ್ ನೀಡಿದ ಪರಿಣಾಮ ಪ್ರತ್ಯೇಕವಾಗಿ ಕಮಲಕ್ಕೆ ಬಂಡಾಯದ ಅಭ್ಯರ್ಥಿ ಯಾಗಿ ಕಣಕ್ಕಿಳಿದ್ದಿದ್ದಾರೆ. ಒಟ್ಟಾರೆಯಾಗಿ ಜಾತಿ ಸಮೀಕರಣ ಸೇರಿದಂತೆ ನಾನಾ ಕಾರಣಗಳಿಂದಾಗಿ ಬಿಜೆಪಿಗೆ ಬಂಡಾಯದ ಕಾವು ಜೋರಾಗಿಯೆ ತಟ್ಟಲಿದೆ‌ . ಕಳೆದ ಬಾರಿ ತನ್ನ ಗರ್ಭದಲ್ಲಿಯೇ ಹುಟ್ಟಿದ ಕೆಜೆಪಿಯಿಂದ ಗಟ್ಟಿ ತೆಂಗಿನಕಾಯಿಯಿಂದ ತನ್ನ ನೆಲೆಯನ್ನೆ ಕಳೆದುಕೊಂಡಿತು. ಈ ಬಾರಿಯ ಬಂಡಾಯದ ಅಲೆಯಿಂದ ಬಿಜೆಪಿ ಚೇತರಿಸಿಕೊಳ್ಳುವುದು ಕಷ್ಟದಂತೆ ಕಾಣಿಸುತ್ತಿದೆ…

ಇನ್ನು ಬಂಡಾಯದ ಬಾವುಟ ಕೇವಲ ಕಮಲ ಪಾಳಯದಲ್ಲು ಅಲ್ಲದೆ ಕೈ ಪಾಳಯದಲ್ಲೂ ಸದ್ದು ಮಾಡುತ್ತಿದೆ. ದಾವಣಗೆರೆ ಜಿಲ್ಲೆಯ ಜಗಳೂರು ಕ್ಷೇತ್ರದಲ್ಲಿ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಬಂದ ವರದಿಯನ್ನು ಅನುಸರಿಸಿ ಹಾಲಿ ಶಾಸಕ ರಾಜೇಶ್ ಗೆ ಟಿಕೇಟ್ ಮಿಸ್ಸಾಗಿತ್ತು. ಅಧಿಕೃತ ವಾಗಿ ಪುಷ್ಪಾ ಲಕ್ಷಣಸ್ವಾಮಿ ಎಂಬುವರಿಗೆ ಟಿಕೇಟ್ ಘೋಷಣೆ ಯಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಲಾಭಿ ನಡೆಸಿದ ಎಚ್. ಪಿ. ರಾಜೇಶ್ ರವರು ಕೈ ನಾಯಕರ ಜೊತೆ ಕಸರತ್ತು ನಡೆಸಿ ಕೊನೆಗೂ ಬಿ ಫಾರಂ ತರುವಲ್ಲಿ ಯಶಸ್ವಿಯಾದರು. ಆದರೆ ಕಾಂಗ್ರೆಸ್ ನ ಜಗಳೂರು ಅಭ್ಯರ್ಥಿ ಯೆಂದೇ ಪಕ್ಷದಿಂದ‌ ಘೋಷಣೆ ಯಾದರು ಕೂಡ ಟಿಕೇಟ್ ನೀಡಲಿಲ್ಲವೆಂಬುದಾಗಿ ನೊಂದ ಪುಷ್ಪಾ ಲಕ್ಷ್ಮಣಸ್ವಾಮಿ ಕಾಂಗ್ರೆಸ್ ವಿರುದ್ಧ ಬಂಡಾಯದ ಕೈ ಬೀಸಿದ್ದಾರೆ. ಶತಾಯಗತಾಯ ಕಾಂಗ್ರೆಸ್ ನನ್ನು ಸೋಲಿಸಲೇ ಬೇಕೆಂದು ಪಣ ತೊಟ್ಟಿದ್ದಾರೆ.

ಜಿಲ್ಲೆಯಲ್ಲಿ ಎಂದೂ ಇಲ್ಲದ ಇಂತಹ ಬಂಡಾಯದ ಅಲೆಗಳ ಮಧ್ಯೆ ಯಾರು ತಮ್ಮ ಪಟ ಹಾರಿಸುವರೋ , ಜಿಲ್ಲೆಯಲ್ಲಿ ಬದಲಾವಣೆ ತರುವರೋ ಕಾದು ನೋಡಬೇಕಿದೆ‌‌.

ವಿದ್ಯಾರ್ಥಿಮಿತ್ರಕಿರಣ್    ಪತ್ರಕರ್ತ,ಮಾಗಡಿ

 

 

 

 

 

ಸುದ್ದಿಗಾಗಿ ಸುದ್ದಿದಿನ.ಕಾಂ ವಾಟ್ಸಾಪ್ ನಂಬರ್ | 9986715401

ದಿನದ ಸುದ್ದಿ

ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ

Published

on

ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ ತೆಗೆದುಕೊಳ್ಳಲು ಸೆಪ್ಟೆಂಬರ್ 17ಕ್ಕೆ ಸಂಪುಟ ಸಭೆ ನಡೆಯಲಿದೆ.

ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಬಗ್ಗೆ ವಿಶೇಷ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ಈ ಹಿಂದೆ 2014ರ ನವೆಂಬರ್ 28ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪೌತಿ ಖಾತೆ ಆಂದೋಲನ ; ಸಚಿವ ಕೃಷ್ಣ ಬೈರೇಗೌಡ

Published

on

ಸುದ್ದಿದಿನಡೆಸ್ಕ್:ಬಹು ಮಾಲೀಕತ್ವ ಹೊಂದಿರುವ ಖಾಸಗಿ ಜಮೀನುಗಳ ಪೋಡಿ ಕಾರ್ಯ, ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿನ ದರಾಖಾಸ್ತು ಪೋಡಿ ಕಾರ್ಯ ಹಾಗೂ ಜಮೀನು ಮಾಲೀಕತ್ವವನ್ನು ವಾರಸುದಾರರಿಗೆ ಮಾಡಿಕೊಡುವ ಪೋತಿ ಖಾತೆ ಆಂದೋಲನವನ್ನು ರಾಜ್ಯದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಕಂದಾಯ ಖಾತೆ ಸಚಿವ ಕೃಷ್ಣ ಬೈರೇಗೌಡ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮುಡಾ ಪ್ರಕರಣ ; ಅರ್ಜಿ ವಿಚಾರಣೆ ಮುಂದೂಡಿಕೆ

Published

on

ಸುದ್ದಿದಿನಡೆಸ್ಕ್:ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ವಿಚಾರಣೆಗೆ ಅನುಮತಿ ನೀಡಿರುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಉಚ್ಛ ನ್ಯಾಯಾಲಯ ಮುಂದೂಡಿದೆ.

ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮನವಿ ಪುರಸ್ಕರಿಸಿದ ನ್ಯಾಯಾಲಯ ವಿಚಾರಣೆಯನ್ನು ಇದೇ ತಿಂಗಳ 9 ಕ್ಕೆ ಮುಂದೂಡಿದೆ.

ಇದೇ ವೇಳೆ ಮಧ್ಯಂತರ ಆದೇಶವನ್ನು ನ್ಯಾಯಾಲಯ ವಿಸ್ತರಿಸಿದೆ. ಇದೇ 9 ರಂದು ಎ.ಜೆ.ಶಶಿಕಿರಣ್ ಶೆಟ್ಟಿ ವಾದ ಮಂಡಿಸಲಿದ್ದು, ಇದೇ 12 ರಂದು ಮುಖ್ಯಮಂತ್ರಿ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡನೆ ಮಾಡುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ನಾಗಪ್ರಸನ್ನ, ಸೆಪ್ಟೆಂಬರ್ 12ರಂದು ಸಂಪೂರ್ಣ ವಿಚಾರಣೆ ಮುಗಿಸೋಣ ಎಂದು ಹೇಳಿ ನ್ಯಾಯಾಲಯದ ಕಲಾಪ ಮುಂದೂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ10 hours ago

ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ

ಸುದ್ದಿದಿನಡೆಸ್ಕ್:ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ನಾಳೆ ಮತ್ತು ಇದೇ 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳು ತೆರೆದಿರಲಿವೆ...

ದಿನದ ಸುದ್ದಿ10 hours ago

ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ

ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ...

ದಿನದ ಸುದ್ದಿ19 hours ago

ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ

ಸುದ್ದಿದಿನಡೆಸ್ಕ್:ಇಂದು ಗಣೇಶ ಚತುರ್ಥಿ, ದೇಶ ಸೇರಿ ನಾಡಿನದ್ಯಂತ ಹಿಂದೂ ಸಂಪ್ರದಾಯದಲ್ಲಿ ನಾಡಿನ ಜನತೆ ತಮ್ಮ ಒಳಿತಿಗಾಗಿ, ಜ್ಞಾನ ಸಮೃದ್ಧಿಗಾಗಿ ಶಿವನ ಪುತ್ರ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ...

ದಿನದ ಸುದ್ದಿ1 day ago

ಸರ್ಕಾರಿ ಐಟಿಐ ಪ್ರವೇಶಕ್ಕೆ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಂ.ಎಂ.ಟಿ.ಎಂ 1, ಡಿಎಂಎಂ 20, ಸಿಒಪಿಎ 20, ವೆಲ್ಡರ್ 34 ಹಾಗೂ ರೋಬೊಟಿಕ್ಸ 12 ಖಾಲಿ ಇರುವ...

ದಿನದ ಸುದ್ದಿ1 day ago

ಪರಿಶಿಷ್ಟ ಜಾತಿ ಯುವಕ , ಯುವತಿಯರಿಗೆ ಜಿಮ್ ಫಿಟ್ನೆಸ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪರಿಶಿಷ್ಟ ಜಾತಿ ಯುವಕ , ಯುವತಿಯರಿಗೆ ಯುವಜನರನ್ನು ಸ್ವಾವಲಂಭಿಯಾಗಿ ಉತ್ತೇಜಿಸುವ ದೃಷ್ಠಿಯಿಂದ ಜಿಮ್ ಫಿಟ್ನೆಸ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕೆ ತರಬೇತಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿ ಇರುವ ಪರಿಶಿಷ್ಟ...

ದಿನದ ಸುದ್ದಿ2 days ago

ರಾಯಚೂರು | ಶಾಲಾ ಬಸ್ ಅಪಘಾತ ; ಇಬ್ಬರು ವಿದ್ಯಾರ್ಥಿಗಳು ಸಾವು

ಸುದ್ದಿದಿನಡೆಸ್ಕ್:ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ಶಾಲಾ ಬಸ್ ಮತ್ತು ಸರ್ಕಾರಿ ಬಸ್ ನಡುವೆ ಗುರುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟು, ಹಲವು...

ದಿನದ ಸುದ್ದಿ4 days ago

ಪೌತಿ ಖಾತೆ ಆಂದೋಲನ ; ಸಚಿವ ಕೃಷ್ಣ ಬೈರೇಗೌಡ

ಸುದ್ದಿದಿನಡೆಸ್ಕ್:ಬಹು ಮಾಲೀಕತ್ವ ಹೊಂದಿರುವ ಖಾಸಗಿ ಜಮೀನುಗಳ ಪೋಡಿ ಕಾರ್ಯ, ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿನ ದರಾಖಾಸ್ತು ಪೋಡಿ ಕಾರ್ಯ ಹಾಗೂ ಜಮೀನು ಮಾಲೀಕತ್ವವನ್ನು ವಾರಸುದಾರರಿಗೆ ಮಾಡಿಕೊಡುವ ಪೋತಿ...

ದಿನದ ಸುದ್ದಿ5 days ago

ಮುಡಾ ಪ್ರಕರಣ ; ಅರ್ಜಿ ವಿಚಾರಣೆ ಮುಂದೂಡಿಕೆ

ಸುದ್ದಿದಿನಡೆಸ್ಕ್:ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ವಿಚಾರಣೆಗೆ ಅನುಮತಿ ನೀಡಿರುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಉಚ್ಛ ನ್ಯಾಯಾಲಯ ಮುಂದೂಡಿದೆ. ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ...

ದಿನದ ಸುದ್ದಿ5 days ago

KPSC | 2 ತಿಂಗಳೊಳಗೆ ಮರು ಪರೀಕ್ಷೆ

ಸುದ್ದಿದಿನಡೆಸ್ಕ್:ಇತ್ತೀಚಿನ ಕೆ.ಪಿ.ಎಸ್.ಸಿ. ಗಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ, ಅಸಮರ್ಪಕ ಕನ್ನಡಾನುವಾದ ಹಿನ್ನೆಲೆ, ಎಲ್ಲ ಅಭ್ಯರ್ಥಿಗಳಿಗೆ ನ್ಯಾಯ ಸಿಗುವಂತೆ, 2 ತಿಂಗಳೊಳಗೆ ಮರು ಪರೀಕ್ಷೆ ನಡೆಸುವಂತೆ, ಕರ್ನಾಟಕ ಲೋಕ...

ದಿನದ ಸುದ್ದಿ5 days ago

ADITYA-L1 | ಇಸ್ರೋ ಆದಿತ್ಯ ಎಲ್-1 ನೌಕೆ ಉಡಾವಣೆಗೆ ಒಂದು ವರ್ಷ; ಸೂರ್ಯನ ಅಧ್ಯಯನದಲ್ಲಿ ಮಹತ್ವದ ಪ್ರಗತಿ

ಸುದ್ದಿದಿನಡೆಸ್ಕ್:ಇಸ್ರೋದಿಂದ ಆದಿತ್ಯ ಎಲ್-1 ನೌಕೆ ಯಶಸ್ವಿ ಉಡಾವಣೆಗೊಂಡು ಇಂದಿಗೆ ಒಂದು ವರ್ಷ ಪೂರೈಸಿದೆ. 2023ರ ಸೆಪ್ಟೆಂಬರ್ 2 ರಂದು ಉಡಾವಣೆಗೊಂಡಿರುವ ಎಲ್-1ನೌಕೆ ಕಕ್ಷೆ ತಲುಪಿದ್ದು, ಭೂಮಿಯಿಂದ ಸುಮಾರು...

Trending