Connect with us

ದಿನದ ಸುದ್ದಿ

ಆಸೆಯೇ ದುಃಖಕ್ಕೆ ಕಾರಣ ಇದು ಎಷ್ಟು ಸರಿ..?

Published

on

  • ಶಿವಸ್ವಾಮಿ,ಬೌದ್ಧ ಉಪಾಸಕರು

ಸೆಯೇ ದುಃಖ್ಖಕ್ಕೆ ಕಾರಣ ಎಂದೂ ಯಾರಾದ್ರೂ ಥಟ್!ಅಂತಾ ! ಹೇಳಿದರೆ ಮನಸ್ಸಿಗೆ ಮೊದಲು ಬರುವವರೇ ಬುದ್ಧ. ಹಾಗಾದರೆ ಮನುಷ್ಯನಾದವನು ಆಸೆಗಳನ್ನು ಹೊಂದಾಬಾರದೆ? ಆಸೆಗಳಿಲ್ಲಾದಿದ್ದರೆ ಮನುಷ್ಯ ಜೀವಿಸುವುದಾದರೂ ಏತಕ್ಕೆ? ಎಂಬ ಪ್ರಶ್ನೆಗಳು ಉದ್ಭವಿಸುತ್ತವೆ, ಪ್ರತಿಯೊಬ್ಬರೂ ಬದುಕಬೇಕಾದ ರೇ ತಮ್ಮದೇ ಆದ ಆಸೆಗಳನ್ನು ಹೊಂದುತ್ತಾರೆ.

ಆದರೆ ತಮ್ಮ ಅತಿಯಾದ ಆಸೆಗಳಿಗೆ ಮಿತಿ ಇರಬೇಕಷ್ಟೇ !ಅತಿಯಾದರೆ ಅಮೃತವು ವಿಷವಾಗುತ್ತದೆ ಎಂಬಂತೆ ಜೀವನದಲ್ಲಿ ಸಮಸ್ಥಿತಿಯಿಂದ ಇರಬೇಕಾಗುತ್ತದೆ, ಆಸೆಯೇ ದುಃಖ್ಖಕ್ಕೆ ಕಾರಣವೆಂದು ಭಗವಾನ್ ಬುದ್ಧ ಹೇಳಿದರೆಂದು ಹಲವರು ಹೇಳುತ್ತಲೇ ಬಂದಿದ್ದಾರೆ, ಆದರೆ ಯಾವುದೇ ತ್ರಿಪಿಟಕಗಳಲ್ಲಿ ಕಂಡು ಬರುವುದಿಲ್ಲ, ಆದ್ದರಿಂದ “ಆಸೆಯೇ ದುಃಖ್ಖಕ್ಕೆ ಕಾರಣ” ಇದು ಸಮರ್ಪಕವಾದ ಹೇಳಿಕೆಯಲ್ಲ, ಪಾಳಿ ಭಾಷೆಯಲ್ಲಿ ತನ್ಹಾ ಎಂಬ ಪದವನ್ನು ಬಳಸುತ್ತಾರೆ.

ಇದು ಆಸೆಗೆ ಪರ್ಯಾಯ ಪದವಲ್ಲ ಇದಕ್ಕೆ ಇಂಗ್ಲಿಷ್ನಲ್ಲಿ ಆಸೆಗೆ ಹತ್ತಿರವಾದ Craving ಎಂಬ ಪದವನ್ನು ಬಳಸುತ್ತಾರೆ Craving ಎಂದರೆ ದುರಾಸೆ ಅಥವಾ ತೃಶ್ನೆ ಎಂದಾಗುತ್ತದೆ “ಆದ್ದರಿಂದ ದುರಾಸೆಯೇ ದುಃಖ್ಖಕ್ಕೆ ಕಾರಣವೆನ್ನಬಹುದು” . ಲೋಕದಲ್ಲಿ ದುಃಖ್ಖವಿದೆ, ದುಃಖ್ಖಕ್ಕೆ ಕಾರಣವು ಇದೆ, ದುಃಖ್ಖ ನಿರೋಧ, ದುಃಖ್ಖ ನಿರೋಧ ಮಾರ್ಗ ಎಂಬ ನಾಲ್ಕು ಆರ್ಯ ಸತ್ಯಗಳ ಮೂಲಕ, ನೈತಿಕತೆಯ ಆಧಾರದ ಮೇಲೆ ತನ್ನ ಅನುಭವದ ಮೂಲಕ ಮಾನವ ಪರವಾದ ಸತ್ಯವನ್ನು ಕಂಡು ಹಿಡಿದ ಅದೇ ನಿಜವಾದ ಬುದ್ಧನ ಧಮ್ಮ

4 ಆರ್ಯ ಸತ್ಯಗಳು

1.ದುಃಖ್ಖ

ಲೋಕದಲ್ಲಿ ದುಃಖ್ಖವಿದೆ ಹುಟ್ಟು ದುಃಖ್ಖ, ರೋಗ ದುಃಖ್ಖ, ವಯಸ್ಸಾಗುವುದು ದುಃಖ್ಖ, ಸಾವು ದುಃಖ್ಖ, ಬಯಸಿದ್ದು ಸಿಗದಿದ್ದರೆ ದುಃಖ್ಖ, ನೋವು, ಯಾತನೆ, ಕೊರಗು, ದೈಹಿಕವಾಗಿರಲಿ ಮಾನಸಿಕವಾಗಿರಲಿ ಅದೆಲ್ಲಾ ದುಃಖ್ಖ,.

2.ದುಃಖ್ಖಕ್ಕೆ ಕಾರಣ

ದುರಾಸೆ ಅಥವಾ ತೃಶ್ನೆ ಮೂರು ವಿಧವಾದ ದುರಾಸೆ ಅಥವಾ ತೃಶ್ನೆಗಳಿವೆ.

ಅ. ಕಾಮ ತೃಶ್ನೆ : ಪಂಚ ಇಂದ್ರಿಯಗಳ ವಿಷಯಗಳನ್ನು ಅನುಭವಿಸಬೇಕೆನ್ನುವ ಇಚ್ಛೆಯೇ ಕಾಮ ತೃಶ್ನೆ.

ಬ. ಭವ ತೃಶ್ನೆ : ನಾನು ಶಾಶ್ವತವಾಗಿ ಜೀವಿಸಬೇಕೆಂಬುದೇ ಭವ ತೃಶ್ನೆ, ನಾನು ದೊಡ್ಡ ಶ್ರೀಮಂತನಾಗಬೇಕು, ಸದಾ ಭೋಗಜೀವನದಲ್ಲಿರ ಬೇಕೇಂಬುದೇ ಆಗಿದೆ.

ಕ.‌ ವಿಭವ ತೃಶ್ನೆ : ನಾನು ಈ ಪ್ರಪಂಚದಲ್ಲಿ ಇರಲೇಭಾರದು ಎಂಬ ಹತಾಶೆಯ ಸ್ಥಿತಿ.

3. ದುಃಖ್ಖ ನಿರೋಧ

ಲೋಕದಲ್ಲಿ ದುಃಖ್ಖವಿದೆ, ದುಃಖ್ಖ ಕ್ಕೆ ಕಾರಣವು ಇದೆ, ಎಂದ ಮೇಲೆ ದುಃಖ್ಖ ನಿರೋಧವು ಸಾಧ್ಯವಿದೆ ದುಃಖ್ಖ ನಿರೋಧದ ಮೂಲಗಳಾದ ಅಜ್ಞಾನ ಮತ್ತು ದುರಾಸೆಗಳಿಂದ ಹೊರ ಬಂದರೆ ದುಃಖ್ಖವು ದೂರವಾಗುತ್ತದೆ.

4.ದುಃಖ್ಖ ನಿರೋಧ ಮಾರ್ಗ

ನಾಲ್ಕನೇ ಆರ್ಯ ಸತ್ಯವೇ ದುಃಖ್ಖ ನಿರೋಧ ಮಾರ್ಗ ಅಥವಾ ಅಷ್ಠ ಮಾರ್ಗ ಅಥವಾ ಮದ್ಯಮ ಮಾರ್ಗ, ಪಂಚ ಇಂದ್ರಿಯಗಳ ಸುಖಕ್ಕಾಗಿ ಭೋಗಜೀವನದಲ್ಲಿ ತೊಡಗುವುದು ಮತ್ತು ನೋವಿನಿಂದ ಕೂಡಿದ ಕಠಿಣ ತಪಸ್ಸು ದೇಹ ದಂಡನೆ ಎಂಬ ಎರಡು ಅತೀರೇಖಾ ಮಾರ್ಗಗಳನ್ನು ಬುದ್ಧ ಕೈಬಿಟ್ಟಿದ್ದೆ ಅಲ್ಲದೆ ಸುಖ ಶಾಂತಿ ಪ್ರಜ್ಞೆಯ ಮಾರ್ಗವಾದ ಮನುಷ್ಯರನ್ನು ನಿಬ್ಬಾಣದ ಕಡೆಗೆ ಕರೆದೊಯ್ಯುವ ಮಾರ್ಗ ಕಂಡು ಹಿಡಿದರು ಅದುವೇ ಮದ್ಯಮ ಮಾರ್ಗ ಅಥವಾ ಅಷ್ಟಮಾರ್ಗ.

ದುಃಖ್ಖ ನಿವಾರಣೆಗಾಗಿ ಮದ್ಯಮ ಮಾರ್ಗವು 8 ಅಂಶಗಳನ್ನು ಹೊಂದಿದೆ.

  1. ಸರಿಯಾದ ದೃಷ್ಟಿ
  2. ಸರಿಯಾದ ಸಂಕಲ್ಪ
  3. ಸರಿಯಾದ ಮಾತು
  4. ಸರಿಯಾದ ಕೆಲಸ
  5. ಸರಿಯಾದ ಜೀವನೋಪಾಯ
  6. ಸರಿಯಾದ ಪ್ರಯತ್ನ
  7. ಸರಿಯಾದ ಅರಿವು
  8. ಸರಿಯಾದ ಏಕಾಗ್ರೆತೆ

ಪ್ರಕೃತಿಗೆ ಹತ್ತಿರವಾದ, ತಮ್ಮ ಅನುಭವದ ಮೂಲಕ ಕಂಡು ಕೊಂಡ ಬುದ್ಧರ ಅಂತಿಮ ಸತ್ಯವೇ ಅವರ ಧಮ್ಮ, ಧಮ್ಮ ಎಂಬ ಪಾಳಿ ಪದಕ್ಕೆ ಧರ್ಮ ಎಂಬ ಪದವು ಪದವಲ್ಲ, ಧಮ್ಮವೆಂದರೆ ಸರ್ವರ ಹಿತ ಸರ್ವರ ಸುಖ,’ನಾನು ಹೇಳಿದೆ ಎಂದೂ ಒಪ್ಪಿಕೊಳ್ಳಬೇಡಿ, ಬನ್ನೀ… ನಿಮ್ಮ ಅನುಭವದ ಮೂಲಕ ಇಲ್ಲಿ ಈಗಲೇ ಪರೀಕ್ಷಿಸಿ ಇಷ್ಟವಾದರೆ ಒಪ್ಪಿಕೊಳ್ಳಿ, ಇಲ್ಲಾವಾದರೆ ಬಿಟ್ಟುಬಿಡಿ ಎಂಬ ಮಾತನ್ನು ಬುದ್ಧರನ್ನು ಬಿಟ್ಟರೆ ಜಗತ್ತಿನ ಯಾವ ಧರ್ಮಗುರುಗಳು ಹೇಳಿರುವುದು ಕಂಡು ಬರುವುದಿಲ್ಲ.

ಮುಂದುವರಿದು ನಾನು
ದೇವಾಮಾನವನಲ್ಲ, ಯಾವುದೇ ನಾನು ಮುಕ್ತಿಧಾತನಲ್ಲ, ಕೇವಲ ಮಾರ್ಗಧಾತನಷ್ಟೇ, ನಿಮಗೆ ನೀವೇ ಬೆಳಕಾಗಿ, ಎಂದೂ ನೈತಿಕತೆಯ ಸತ್ಯದ ನಡೆ, ಕತ್ತಲಿನಿಂದ ಬೆಳಕಿನಡೆ, ಅಸತ್ಯದಿಂದ ಸತ್ಯದ ಕಡೆಗೆ ಕರೆದೊಯ್ಯುವ ಜ್ಞಾನದ ದೀಪವೇ ಬುದ್ಧರ ಧಮ್ಮ, ಬುದ್ಧರ ನಂತರ ಉತ್ತರಾಧಿಕಾರಿ ಯಾರು? ಎಂಬ ಶಿಷ್ಯ ಆನಂದನ ಪ್ರಶ್ನೆಗೆ ಉತ್ತರವಾಗಿ ಭಗವಾನ್ ಬುದ್ಧರು “ಧಮ್ಮಕ್ಕೆ ಧಮ್ಮವೇ ಉತ್ತರಾಧಿಕಾರಿ”ಎಂದೂ ಇಡೀ ವಿಶ್ವವನ್ನು ಧಮ್ಮವೇ ಮುನ್ನಡೆಸಲಿದೆ ಎಂದರು. ಬಹುಜನರಿಗೆ ಹಿತವಾದ, ಬಹುಜನರಿಗೆ ಸುಖವಾದ, ಲೋಕಕ್ಕೆ ಧಮ್ಮವನ್ನು ನೀಡಿ ಇಡೀ ಜಗತ್ತಿಗೆ ಬೆಳಕಾಗಿ ಇಂದಿಗೂ ಪ್ರಜ್ವಲಿಸುತಿದ್ದಾರೆ. ಬಂಧುಗಳೇ ಇಂದು ಅವರ ಜನ್ಮದಿನ, ಅವರ ತತ್ವ ಸಿದ್ಧಾಂತಗಳು ಸರ್ವರಿಗೂ ದಾರಿ ದೀಪಾವಾಗಿ, ಇಡೀ ವಿಶ್ವವು ಸುಖ ಶಾಂತಿ ನೆಮ್ಮದಿಯಿಂದ ನೆಲಸುವಂತಾಗಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.

ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.

4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್

Published

on

ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ರಂಗಸ್ವಾಮಿ ಟಿ.ಆರ್. ವಹಿಸಿ, ವಿದ್ಯಾರ್ಥಿಗಳಿಗೆ ಲಭ್ಯವಾಗಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ವಿಶೇಷ ಉಪನ್ಯಾಸದಲ್ಲಿ ಶ್ರೀ ವಿಶ್ವನಾಥ್ ಡಿ.ಆರ್., ಉಪನ್ಯಾಸಕರು ಹಾಗೂ ಪತ್ರಿಕಾ ವರದಿಗಾರರು, ಕೆ. ಬೇವಿನಹಳ್ಳಿ ಅವರು “ಸ್ವಾಮಿ ವಿವೇಕಾನಂದ ಮತ್ತು ಯುವಜನತೆ” ವಿಷಯದ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ಸ್ವಾಮಿ ವಿವೇಕಾನಂದರ ಜೀವನ ಸಾಧನೆ, ವ್ಯಕ್ತಿತ್ವ ಹಾಗೂ ದೇಶಭಕ್ತಿ ಕುರಿತು ವಿವರಿಸಿ, ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಅನುಸರಿಸಿ ಉತ್ತಮ ಆಚಾರ-ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಯುವಜನತೆ ತಮ್ಮ ಶಕ್ತಿಯನ್ನು ಸಮಾಜಸೇವೆ ಹಾಗೂ ದೇಶದ ಅಭಿವೃದ್ಧಿಗೆ ಬಳಸಬೇಕು ಎಂದು ಕರೆ ನೀಡಿದರು.

“ಎದ್ದು ನಿಲ್ಲಿ, ಜಾಗ್ರತವಾಗಿರಿ, ಗುರಿ ಸಾಧಿಸುವ ತನಕ ನಿಲ್ಲಬೇಡಿ” ಎಂಬ ಸ್ವಾಮಿ ವಿವೇಕಾನಂದರ ಅಮೂಲ್ಯ ವಾಕ್ಯವನ್ನು ಉಲ್ಲೇಖಿಸಿ, ಯುವಕರಲ್ಲಿ ಆತ್ಮವಿಶ್ವಾಸ ಮತ್ತು ಗುರಿನಿಷ್ಠೆ ಬೆಳೆಸುವಂತೆ ಪ್ರೇರೇಪಿಸಿದರು.

ಶ್ರೀ ಎ. ಜಯಪ್ಪ ಅವರು ಎನ್‌.ಎಸ್‌.ಎಸ್‌. ಕಾರ್ಯಚಟುವಟಿಕೆಗಳು ಸಮಾಜಸೇವೆ ಹಾಗೂ ಸಾಮಾಜಿಕ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.

ಶ್ರೀ ಪಿ.ವಿ. ಸತೀಶ್ ಅವರು ಹಳ್ಳಿ ಜೀವನದ ಮಹತ್ವ ಹಾಗೂ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿದರು.

ಉಪನ್ಯಾಸಕಿ ಕಾವ್ಯ ಶ್ರೀ ಅವರು ಮಹಿಳಾ ಸಬಲೀಕರಣದ ಕುರಿತು ಮಾತನಾಡಿ, ಮಹಿಳೆಯರು ಶಿಕ್ಷಣ ಹಾಗೂ ಆತ್ಮವಿಶ್ವಾಸದಿಂದ ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನವನ್ನು ಪಡೆಯಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರಾದ ವಾಗೀಶ್ ಸುದರ್ಶನ ಎಸ್.ಸಿ., ವಿಜಯ, ಹನುಮಂತಪ್ಪ ಯು., ಕೆ.ಎಸ್‌. ಬಸವರಾಜು, ಕೆ. ರೇವಣಸಿದ್ಧಪ್ಪ ಮುಂತಾದವರು ಭಾಗವಹಿಸಿದ್ದರು.

ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಹಾಗೂ ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್ ಹಾಗೂ ಉಪನ್ಯಾಸಕರಾದ ಶ್ರೀ ಶಾಂತಕುಮಾರ್ ಉಪಸ್ಥಿತರಿದ್ದರು.

ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಎರಡನೇ ದಿನದ ಶಿಬಿರವು ಮುಕ್ತಾಯಗೊಂಡಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಲೋಕಾಯುಕ್ತ ಪೋಲಿಸ್ ಇನ್ಸ್‌ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

Published

on

ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ್ ಎ.ಬಿ. ವಹಿಸಿದ್ದರು.

ಮುಖ್ಯ ಉಪನ್ಯಾಸಕರಾಗಿ ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಇವರ ಪೋಲಿಸ್ ಇನ್ಸ್‌ಪೆಕ್ಟರ್ ಶ್ರೀ ಪ್ರಭು ಬಿ. ಸೂರಿನ ಭಾಗವಹಿಸಿ “ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ” ಕುರಿತು ಸಮಗ್ರ ಮಾಹಿತಿ ನೀಡಿದರು. ಕರ್ನಾಟಕ ಲೋಕಾಯುಕ್ತದ ಸ್ಥಾಪನೆ ಮತ್ತು ಹಿನ್ನೆಲೆ, ಸಂಸ್ಥೆಯ ವ್ಯಾಪ್ತಿ, ದೂರು ಸಲ್ಲಿಸುವ ವಿಧಾನ, ವಿಚಾರಣೆ ಕ್ರಮ, ಭ್ರಷ್ಟಾಚಾರ ತಡೆ ಕಾಯ್ದೆಯ ಪ್ರಮುಖ ಅಂಶಗಳು, ಲೋಕಾಯುಕ್ತ ಸಂಸ್ಥೆಯ ವೈಶಿಷ್ಟ್ಯತೆಗಳು, ಹಗರಣಗಳ ತನಿಖಾ ವಿಧಾನ ಹಾಗೂ ಸರ್ಕಾರಿ ಹಣದ ದುರುಪಯೋಗ ತಡೆ ಕ್ರಮಗಳ ಬಗ್ಗೆ ವಿವರಿಸಿದರು. ಉಪನ್ಯಾಸದ ಅಂತ್ಯದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು.

ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಹೆಚ್.ಆರ್. ತಿಪ್ಪೇಸ್ವಾಮಿ ಅವರು ಯುವಜನತೆ ಹಾಗೂ ಸಾಮಾಜಿಕ ಸಾಮರಸ್ಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.

ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಮತ್ತು ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್, ಗ್ರಾಮದವರಾದ ಬಸವರಾಜ್, ಹಾಲಪ್ಪ, ಮಹದೇವಪ್ಪ, ಕುರಿಯರ್ ದುರುಗಪ್ಪ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಭ್ರಷ್ಟಾಚಾರ ವಿರೋಧಿ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending