ದಿನದ ಸುದ್ದಿ
ಯಾರು ಈ ಬಿ ಎಂ ಬಶೀರ್ ? ಏನಿದು ವಾರ್ತಾಭಾರತಿ ? ನಾಡು ನುಡಿಗೆ ಇವರ ಕೊಡುಗೆ ಏನು ?
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/05/bm_basheer_Suddidina.jpg&description=ಯಾರು ಈ ಬಿ ಎಂ ಬಶೀರ್ ? ಏನಿದು ವಾರ್ತಾಭಾರತಿ ? ನಾಡು ನುಡಿಗೆ ಇವರ ಕೊಡುಗೆ ಏನು ?', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/05/bm_basheer_Suddidina.jpg&description=ಯಾರು ಈ ಬಿ ಎಂ ಬಶೀರ್ ? ಏನಿದು ವಾರ್ತಾಭಾರತಿ ? ನಾಡು ನುಡಿಗೆ ಇವರ ಕೊಡುಗೆ ಏನು ?', 'pinterestShare', 'width=750,height=350'); return false;" title="Pin This Post">
- ರವಿರಾಜ್ ಗೌಡ
ಹಿರಿಯ ಪತ್ರಕರ್ತ ಬಿ ಎಂ ಬಶೀರ್ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಲ್ಲಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬೆಂಬಲಿಸಿ ಬರೆದ ಎರಡೇ ಸಾಲಿನ ಪ್ರತಿಕ್ರಿಯೆ ವಿವಾದಕ್ಕೆ ಕಾರಣವಾಗಿದೆ. ಫೇಸ್ ಬುಕ್ ನಲ್ಲಿ ಯಾರು ಬಶೀರಾ ? ಬಶೀರನ ಸಾಧನೆಗಳು ಏನು ? ನಾವು ಮಾಡಿದ್ದಷ್ಟು ಹೋರಾಟಗಳನ್ನು ಬಶೀರ ಮಾಡಿದ್ದಾನಾ ? ಎಂದು ಸಾಮಾಜಿಕ ಜಾಲತಾಣದಲ್ಲಿ ಕೇಳಲಾಗುತ್ತಿದೆ.
ಉಪ್ಪಿನಂಗಡಿ ಬಳಿಯ ಮಠ ಎಂಬಲ್ಲಿ ಜನಿಸಿದ ಬಿ ಎಂ ಬಶೀರರು ಪತ್ರಿಕೋದ್ಯಮ ಚಳುವಳಿ ಕಾರಣಕ್ಕಾಗಿಯೇ ಸಹೋದರ ಬಿ ಎಂ ರಶೀದರನ್ನು ಕಳೆದುಕೊಂಡರು. ಲಂಕೇಶ್ ನಲ್ಲಿ ಕೆಲಸ ಮಾಡುತ್ತಿದ್ದ ಬಿ ಎಂ ರಶೀದರ ಅನುಮಾಸ್ಪದ ಸಾವು ಬಿ ಎಂ ಬಶೀರರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಿಲ್ಲ. ಅಷ್ಟೊಂದು ಸೈದ್ದಾಂತಿಕ ಬದ್ದತೆ, ದೈರ್ಯವಂತಿಕೆ ಬಿ ಎಂ ಬಶೀರ್ ಗೆ ಇತ್ತು. ಪತ್ರಿಕೋಧ್ಯಮದಲ್ಲಿ ಜನಪರ ಚಳುವಳಿಗಳ ಜೊತೆ ನಿಂತ ಬಿ ಎಂ ಬಶೀರರು ನಾಡಿನ ಚಳುವಳಿಗಳ ಪ್ರಮುಖ ಭಾಗವೇ ಆಗಿದ್ದರು.
ಮುಂಬಯಿನ ಕರ್ನಾಟಕ ಮಲ್ಲ ಪತ್ರಿಕೆಯಲ್ಲಿ 5 ವರ್ಷಗಳ ಕಾಲ ದುಡಿದ ನಂತರ ಜನವಾಹಿನಿ ಪತ್ರಿಕೆಯಲ್ಲಿ ಹಿರಿಯ ಸಂಪಾದಕರಾಗಿ 5 ವರ್ಷ ಕೆಲಸ ಮಾಡಿದ್ದಾರೆ. ಪ್ರಸ್ತುತ “ವಾರ್ತಾ ಭಾರತಿ” ಕನ್ನಡ ದೈನಿಕದಲ್ಲಿ ಸುದ್ದಿ ಸಂಪಾದಕನಾಗಿ ಕಳೆದ ಹನ್ನೆರಡು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಫೇಸ್ ಬುಕ್, ವಾಟ್ಸಪ್ ಗಳಂತಹ ಸಾಮಾಜಿಕ ಜಾಲತಾಣ ಇಲ್ಲದೇ ಇದ್ದ ಸಂದರ್ಭದಲ್ಲಿ ವಾರ್ತಾಭಾರತಿ ಪತ್ರಿಕೆ ಕನ್ನಡಿಗರು, ರೈತರ ಜೊತೆ ಗಟ್ಟಿಯಾಗಿ ನಿಂತಿತ್ತು.
ವಿಶೇಷ ಅರ್ಥಿಕ ವಲಯಕ್ಕೆ ಒಎನ್ ಜಿಸಿ ಕಂಪನಿಯು 3000 ಎಕರೆ ರೈತರ ಭೂಮಿ ಸ್ವಾಧೀನ ಮಾಡಿದಾಗ ರೈತರ ಜೊತೆ ನಿಂತ ಮೂರು ಪತ್ರಿಕೆಗಳಲ್ಲಿ ವಾರ್ತಾಭಾರತಿಯೂ ಒಂದು. ಅದಕ್ಕಾಗಿ ಅದು ನಷ್ಟ ಮಾಡಿಕೊಂಡಿದ್ದು ಕೋಟಿ ಕೋಟಿ ರೂಪಾಯಿಗಳ ಜಾಹೀರಾತು. ಎಲ್ಲಾ ಪತ್ರಿಕೆಗಳು ಮುಖಪುಟ ಜಾಹೀರಾತು ಹಾಕಿ ಕಂಪನಿ ಪರ ಇದ್ರೆ ವಾರ್ತಾಭಾರತಿ ಮಾತ್ರ ಅಭಿಯಾನದ ರೀತಿಯಲ್ಲಿ ರೈತರ ಪರ ನಿಂತಿತ್ತು.
ಕನ್ನಡ ಸಾಹಿತ್ಯ ಲೋಕಕ್ಕೆ ಬಿ ಎಂ ಬಶೀರರ ಕೊಡುಗೆಯೂ ಮಹತ್ವದ್ದು. ಕನ್ನಡದಲ್ಲಿ ಹನಿಗತೆ ಪ್ರಾಕಾರವನ್ನು ಸಮರ್ಥವಾಗಿ ಬಳಸುತ್ತಿರುವರಲ್ಲಿ ಬಶೀರರು ಪ್ರಮುಖರು. ಜೊತೆಗೆ ಉತ್ತಮ ಕವಿಯೂ ಹೌದು. ಮುಂಬಯಿ ವಿಶ್ವ ವಿದ್ಯಾನಿಲಯದಲ್ಲಿ ಕನ್ನಡ ಸಾಹಿತ್ಯದಲ್ಲಿ, ಚಿನ್ನದ ಪದಕದೊಂದಿಗೆ ಎಂ.ಎ. ಪದವಿ ಪಡೆದಿದ್ದ ಬಿ ಎಂ ಬಶೀರರು ಹಲವು ಪುಸ್ತಕಗಳನ್ನು ಬರೆದಿದ್ದಾರೆ.
ಪ್ರವಾದಿಯ ಕನಸು (ಕವನ ಸಂಕಲನ), ಬಾಳೆಗಿಡ ಗೊನೆ ಹಾಕಿತು (ಕಥಾ ಸಂಕಲನ), ಅಂಗೈಯಲ್ಲಿ ಆಕಾಶ (ಹನಿಗತೆಗಳ ಸಂಕಲನ), ಬಾಡೂಟದ ಜೊತೆಗೆ ಗಾಂಧೀ ಜಯಂತಿ (ಲೇಖನಗಳ ಸಂಗ್ರಹ), ನನ್ನ ಮಸೀದಿ ಧ್ವಂಸಗೈದವರಿಗೆ ಕೃತಜ್ಞ-ಸೂಫಿ ಕಣ್ಣಲ್ಲಿ ಹನಿಗಳು(ಹನಿ ಕವಿತೆಗಳು), ಅಮ್ಮ ಹಚ್ಚಿದ ಒಲೆ(ಕವನ ಸಂಕಲನ) ಅವರ ಪ್ರಮುಖ ಪ್ರಕಟಿತ ಪುಸ್ತಕಗಳು. ಈ ರೀತಿಯ ಸಾಹಿತ್ಯ ಸೇವೆಗಾಗಿ ಮುದ್ದಣ ಕಾವ್ಯ ಪ್ರಶಸ್ತಿ, ಮೈಸೂರು ಚದುರಂಗ ಪ್ರತಿಷ್ಥಾನ ಪ್ರಶಸ್ತಿ, ಲಂಕೇಶ್ ಪ್ರಶಸ್ತಿಗಳು ಅವರನ್ನು ಅರಸಿಕೊಂಡು ಬಂದಿವೆ.
ಕರಾವಳಿಯ ಮುಸ್ಲಿಂ ಕೋಮುವಾದ ಮತ್ತು ಹಿಂದೂ ಕೋಮುವಾದವನ್ನು ಸಮಾನಾಗಿ ನೋಡುವ ಬಿ ಎಂ ಬಶೀರರು ಎರಡೂ ವರ್ಗಗಳಿಂದ ದಾಳಿಗೆ ಒಳಗಾದವರು. ಎರಡೂ ವಾದಿಗಳ ನೈತಿಕ ಪೊಲೀಸ್ ಗಿರಿ, ಹಿಡನ್ ಅಜೆಂಡಾಗಳನ್ನು ಪತ್ರಿಕೆಯ ಮೂಲಕ ಬಯಲುಗೊಳಿಸಿದವರು. ಎಲ್ಲಾ ಕನ್ನಡ ಪತ್ರಿಕೆಗಳು ಹಿಂದಿ ಗುಲಾಮಗಿರಿ, ಹಿಂದುತ್ವವಾದ, ಶ್ರೀಮಂತರ ಪರ ಇರೋ ಸಂಧರ್ಭದಲ್ಲಿ ಅದರ ಪ್ರವಾಹಕ್ಕೆ ಎದುರಾಗಿ ವಾರ್ತಾಭಾರತಿ ಹಾಗೋ ಹೀಗೋ ಈಜಾಡುತ್ತಾ ಜನರಿಗಾಗಿ ಹೋರಾಡುತ್ತಿದೆ. 25 ವರ್ಷದ ಸಾಹಿತ್ಯ ಮತ್ತು ಪತ್ರಿಕೋದ್ಯಮದ ಬದುಕಿನಲ್ಲಿ ಬಿ ಎಂ ಬಶೀರರು ಸಮಾಜಕ್ಕಾಗಿ ತನ್ನ ಕುಟುಂಬದವರನ್ನು, ಹಣವನ್ನು ಕಳೆದುಕೊಂಡರೇ ಹೊರತು ಬಂಗಲೆಗಳನ್ನು ಕಟ್ಟಲಿಲ್ಲ, ಆದಾಯದ ಮೂಲಕ್ಕಾಗಿ ಉದ್ಯಮಗಳನ್ನು ಸ್ಥಾಪಿಸಲಿಲ್ಲ. ಆದ್ದರಿಂದಲೇ ರಾಜಿರಹಿತ ಬದುಕು ಸಾದ್ಯವಾಯಿತು.
ಬಿ ಎಂ ಬಶೀರ್ ಮತ್ತು ಅವರ ಕುಟುಂಬದ ತ್ಯಾಗ, ಬಲಿದಾನದ ಇತಿಹಾಸ, ರಾಜಿರಹಿತ ಪತ್ರಿಕೋದ್ಯಮದ ಹಿನ್ನಲೆಯೇ ಒಂದು ದೊಡ್ಡ ಹೋರಾಟದ ಇತಿಹಾಸ. ಇಂತವರನ್ನು ಯಾವುದೋ ಆಶಯದ ಪ್ರತಿಕ್ರಿಯೆಯನ್ನು ತಿರುಚಿ ಗುರಿಯಾಗಿಸೋದು ಕನ್ನಡದ ಜನ ಚಳುವಳಿಗೆ ಮಾಡುವ ದ್ರೋಹವಲ್ಲದೆ ಇನ್ನೇನೂ ಅಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.
ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.
ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ6 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ದಿನದ ಸುದ್ದಿ7 days agoಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
-
ಅಂತರಂಗ3 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ6 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ1 day agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ3 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ2 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ

