Connect with us

ದಿನದ ಸುದ್ದಿ

ಮೇ ಅಂತ್ಯದೊಳಗೆ ಪ್ರತಿ ಜಿಲ್ಲೆಗೆ ಎರಡು ಕೋವಿಡ್ ಪರೀಕ್ಷಾ ಲ್ಯಾಬ್

Published

on

ಸುದ್ದಿದಿನ,ದಾವಣಗೆರೆ: ಸರ್ಕಾರದ ಕ್ರಮಗಳು ಮತ್ತು ಜನರ ಸಹಕಾರದಿಂದ ಮಾತ್ರ ಕೊರೊನಾ ನಿಗ್ರಹ ಸಾಧ್ಯ. ಜನರ ಜೀವ ಮತ್ತು ಜೀವನವನ್ನು ಸುಸ್ಥಿತಿಗೆ ತರಲು ಸರ್ಕಾರ ಹಗಲಿರುಳು ಶ್ರಮಿಸುತ್ತಿದ್ದು ಜನರು ಸಹಕರಿಸಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ.ಸುಧಾಕರ್ ಮನವಿ ಮಾಡಿದರು.

ಶನಿವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕೋವಿಡ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಡೀ ಜಗತ್ತನ್ನು ಕಣ್ಣಿಗೆ ಕಾಣದೊಂದು ವೈರಾಣು ನಡುಗಿಸುತ್ತಿದೆ. ವಿಶ್ವದಲ್ಲಿ ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ನಮ್ಮ ದೇಶ ಕೊರೊನಾ ನಿಯಂತ್ರಣ ಮಾಡುತ್ತಾ ಇದೆ. ದೇಶದಲ್ಲಿ ಸುಮಾರು 60 ಸಾವಿರ ಪಾಸಿಟಿವ್ ಪ್ರಕರಣಗಳಿದ್ದು, ನಮ್ಮ ರಾಜ್ಯ 13 ನೇ ಸ್ಥಾನದಲ್ಲಿ ಇದೆ.

ಮಾನ್ಯ ಮುಖ್ಯಮಂತ್ರಿಗಳು ಆರಂಭದಲ್ಲಿ ತೆಗೆದುಕೊಂಡ ಮುನ್ನೆಚ್ಚರಿಕೆ ಕ್ರಮಗಳಿಂದಾಗಿ ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಸಾಧ್ಯವಾಗುತ್ತಿದೆ. ಜೀವ ಉಳಿಸುವ ಜೊತೆಗೆ ಜನಜೀವನ ಸುಧಾರಣೆ ಎರಡೂ ಕೆಲಸಗಳನ್ನು ಸಮತೋಲನದಿಂದ ಸರಿದೂಗಿಸಬೇಕಿದೆ. ಕೊರೊನಾ ಕೂಡ ಇರುತ್ತದೆ. ಆದರೆ ನಾವು ಅದರಿಂದ ದೂರ ಇರಬೇಕು.

ನಾಲ್ಕು ಟಿ

ಟ್ರ್ಯಾಕಿಂಗ್, ಟ್ರೇಸಿಂಗ್, ಟೆಸ್ಟಿಂಗ್ ಮತ್ತು ಟ್ರೀಟ್‍ಮೆಂಟ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಕೊರೊನಾ ನಿಗ್ರಹಿಸಲಾಗುತ್ತಿದೆ. ಕೊರೊನಾ ನಿಯಂತ್ರಣ ಕೇವಲ ಸರ್ಕಾರದ ಕೈಯಲ್ಲಿಲ್ಲ ಬದಲಾಗಿ ಎಲ್ಲ ಜನತೆ ಸಹಕಾರ ಅತ್ಯಗತ್ಯವಾಗಿದೆ ಎಂದರು.

ಕೊರೊನಾ ಸಾಮಾಜಿಕ ಕಳಂಕ ಅಲ್ಲ,ಅನಗತ್ಯ ಆತಂಕ ಬೇಡ

ಕೊರೊನಾ ರೋಗಕ್ಕೆ ನಿಖರವಾದ ಚಿಕಿತ್ಸೆ ಇಲ್ಲ. ಎಷ್ಟೋ ಅಂತೆ-ಕಂತೆಗಳು ಆಗಿ ಹೋಗಿವೆ. ಈ ನಿಟ್ಟಿನಲ್ಲಿ ಸರ್ಕಾರ ಪ್ರತಿದಿನ ಹೊಸ ಮಾರ್ಗಸೂಚಿಗಳನ್ನು ನೀಡುವ ಮೂಲಕ ಕೊರೊನಾ ನಿಯಂತ್ರಣದಲ್ಲಿ ಶ್ರಮ ವಹಿಸುತ್ತಿದೆ.

ಕೊರೊನಾ ಸಾಮಾಜಿಕ ಕಳಂಕ ಅಲ್ಲ. ಯಾರಿಗೆ ಬೇಕಾದರೂ ಬರಬಹುದು. ಸೋಂಕಿನ ಬಗ್ಗೆ ಭಯ ಬೇಡ. ಯಾವ ವೈರಾಣುವೂ ಜನರನ್ನು ಸೋಲಿಸಿಲ್ಲ. ಬದಲಾಗಿ ಜನರು ವೈರಾಣುವನ್ನು ಸೋಲಿಸಿದ್ದಾರೆ. ಕೊರೊನಾವನ್ನೂ ಸೋಲಿಸಲು ಸ್ವಲ್ಪ ಸಮಯ ಬೇಕು. ಆದ ಕಾರಣ ಜನರು ಅಂತರ ಕಾಯ್ದುಕೊಳ್ಳುವ ಮೂಲಕ, ಸ್ವಚ್ಚತೆ, ಮಾಸ್ಕ್ ಧರಿಸುವ ಮೂಲಕ ಹಾಗೂ ಸರ್ಕಾರದ ನಿಯಮ, ಸೂಚನೆಗಳನ್ನು ಪಾಲಿಸುವ ಮೂಲಕ ಕೊರೊನಾ ನಿಗ್ರಹಿಸಲು ಸಹಕರಿಸಬೇಕು.

ಜನರಿಗೆ ಸಮರ್ಪಕ ಮಾಹಿತಿ ಮತ್ತು ಧೈರ್ಯ ತುಂಬಬೇಕು

ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಬಂದ ಪ್ರಕರಣಗಳ ಪೈಕಿ ಈಗಾಗಲೇ ಶೇ.50 ಗುಣಮುಖರಾಗಿದ್ದಾರೆ. ಶೇ 80 ರಷ್ಟು ಜನರು ಚಿಕಿತ್ಸೆ ಇಲ್ಲದೆಯೇ ಗುಣಮುಖರಾಗುತ್ತಾರೆ. ಮರಣ ಪ್ರಮಾಣ ಶೇ.3.1 ರಷ್ಟಿದ್ದು, ಅದರಲ್ಲೂ ಹೃದಯ ತೊಂದರೆ, ಕ್ಯಾನ್ಸರ್, ಡಯಾಬಿಟಿಕ್ ಇತರೆ ತೊಂದರೆಯಿಂದ ಬಳಲುವವರು ಮರಣಕ್ಕೆ ತುತ್ತಾಗುವ ಸಂಭವ ಹೆಚ್ಚಿದೆ. ಆದ್ದರಿಂದ ಜನರಲ್ಲಿ ಭಯ ಬೇಡ. ಆದರೆ ಅಂತರ ಕಾಯ್ದುಕೊಂಡು, ಸ್ವಚ್ಚತೆ ಕಾಪಾಡಿಕೊಂಡು ನಿಯಮಗಳನ್ನು ಪಾಲಿಸಬೇಕು. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಜನರಿಗೆ ಸಮರ್ಪಕ ಮಾಹಿತಿ ಮತ್ತು ಧೈರ್ಯವನ್ನು ತುಂಬಬೇಕೆಂದರು.

ಆರೋಗ್ಯಸೇತು ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಜಿಲ್ಲೆಯ ಎಲ್ಲ ಜನತೆ ಆರೋಗ್ಯಸೇತು ಆ್ಯಪ್ ನ್ನು ಡೌನ್‍ಲೋಡ್ ಮಾಡಿಕೊಳ್ಳಬೇಕು. ಜನಪ್ರತಿನಿಧಿಗಳು, ಅಧಿಕಾರಿಗಳು ಈ ಆಪ್ ಬಗ್ಗೆ ಸಾಕಷ್ಟು ಪ್ರಚಾರ ನೀಡಬೇಕು. ಈ ಆ್ಯಪ್‍ನ ಸಹಾಯದಿಂದ ತಾವು ಸೋಂಕಿತರಿಂದ ಎಷ್ಟು ಅಂತರದಲ್ಲಿದ್ದೀರಿ ಎಂದು ತಿಳಿಯುತ್ತದೆ. ಹಾಗೂ ಸೋಂಕಿತರು ಹತ್ತಿರ ಬಂದರೆ ಸೂಚನೆ ನೀಡುತ್ತದೆಯಾದ್ದರಿಂದ ಎಲ್ಲರೂ ಈ ಆಪ್‍ನ್ನು ಡೌನ್‍ಲೋಡ್ ಮಾಡಿ ಬಳಕೆ ಮಾಡಿಕೊಳ್ಳಬೇಕೆಂದು ಕರೆ ನೀಡಿದರು.

5 ಹೊಸ ಪ್ರಕರಣ

ಶನಿವಾರ ಜಿಲ್ಲೆಯಲ್ಲಿ ಹೊಸದಾಗಿ 5 ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿವೆ. ಆದರೆ ಯಾವುದೂ ಹೊಸ ಪ್ರಕರಣ ಅಲ್ಲ. ಹಿಂದಿನ ಪಾಸಿಟಿವ್ ಪ್ರಕರಣದ ಸಂಪರ್ಕ ಇರುವವರಾಗಿದ್ದಾರೆ ಎಂದರು.

ಸಿ ಜಿ ಆಸ್ಪತ್ರೆ ಕೋವಿಡ್ ಆಸ್ಪತ್ರೆ

ಜಿಲ್ಲೆಯ ಚಿಗಟೇರಿ ಆಸ್ಪತ್ರೆ ಕೋವಿಡ್ ಆಸ್ಪತ್ರೆಯಾಗಿದ್ದು 300 ಹಾಸಿಗೆಗಳ ವ್ಯವಸ್ಥೆ ಇದೆ. ಇತರೆ ಆರೋಗ್ಯದ ಸಮಸ್ಯೆಗಳಿಗೆ ಬಾಪೂಜಿ, ಎಸ್‍ಎಸ್ ಆಸ್ಪತ್ರೆ ಸೇರಿದಂತೆ ಇತರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ಖಾಸಗಿ ಆಸ್ಪತ್ರೆಗಳು ಈ ವೇಳೆ ತೆರೆದು ಚಿಕಿತ್ಸೆ ನೀಡದಿದ್ದಲ್ಲಿ ಅವರ ಪರವಾನನಿ ರದ್ದುಪಡಿಸಲಾಗುವುದು ಎಂದರು.

ಮೇ 17 ರವರೆಗೆ 60 ವರ್ಷ ಮೇಲ್ಪಟ್ಟವರು, 10 ವರ್ಷದೊಳಗಿನ ಮಕ್ಕಳು ಹೊರ ಹೋಗಬಾರದು. ಹಾಗೂ ನಗರದ ಕೆಲ ಬಡಾವಣೆಗಳ ಹಾಸ್ಟೆಲ್‍ಗಳಲ್ಲಿ ಕ್ವಾರಂಟೈನ್ ಇರಿಸಿರುವ ಬಗ್ಗೆ ಭಯ ಬೇಡ. ಇದರಿಂದ ನಿವಾಸಿಗಳಿಗೆ ಯಾವುದೇ ರೀತಿ ತೊಂದರೆ ಇಲ್ಲ ಎಂದರು.

ಅನೇಕರು ಕೊರೊನಾ ಹಿನ್ನೆಲೆಯ ಮಾನಸಿಕ ಖಿನ್ನತೆಯಂತರ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದರೆ 104 ಸಹಾಯವಾಣಿಗೆ ಕರೆ ಮಾಡಿದಲ್ಲಿ ಆಪ್ತ ಸಮಾಲೋಚನೆ ವ್ಯವಸ್ಥೆ ಮಾಡಲಾಗಿದೆ. ಆಪ್ತಮಿತ್ರ ಮತ್ತು ಟೆಲಿ ಐಸಿಯು ವ್ಯವಸ್ಥೆಯನ್ನೂ ರಾಜ್ಯ ಮಟ್ಟದಲ್ಲಿ ಪರಿಣಿತ ತಜ್ಞರಿಂದ ಮಾಡಲಾಗಿದ್ದು, ಸರ್ಕಾರ ಕೊರೊನಾ ನಿಗ್ರಹ ಮತ್ತು ಜನರ ಜೀವ ಉಳಿಸಲು ಮಾಡಬೇಕಾದ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ಆನರೂ ಸಹಕರಿಸಬೇಕು. ಶುಚಿತ್ವ, ಅಂತರ, ಮಾಸ್ಕ್ ಬಳಸಬೇಕು. ಎಲ್ಲರಿಗೂ ಎನ್ 95, ಸರ್ಜಿಕಲ್ ಮಾಸ್ಕ್ ಬೇಡ. ಹತ್ತಿಯ ಮರು ಬಳಸಬಹುದಾದ ಮಾಸ್ಕ್ ಧರಿಸಬಹುದು ಎಂದರು.

ವೈದ್ಯರು ಮತ್ತು ಹೌಸ್‍ಸರ್ಜನ್‍ಗಳ ಸೇವೆ ದೊಡ್ಡದಾಗಿದ್ದು, ದಾವಣಗೆರೆಯ ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿರುವ ಹೌಸ್‍ಸರ್ಜನ್ ಮತ್ತು ಪಿಜಿ ವಿದ್ಯಾರ್ಥಿಗಳಿಗೆ 18 ತಿಂಗಳಿಂದ ಶಿಷ್ಯ ಭತ್ಯೆ ಬಂದಿಲ್ಲವೆಂಬ ಮಾಹಿತಿ ಲಭ್ಯವಾಗಿದೆ. ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರದಿಂದ ಭತ್ಯೆ ಪಾವತಿಯಾದ ಬಗ್ಗೆ ಆಡಿಟ್ ಆಕ್ಷೇಪಣೆ ಹಿನ್ನೆಲೆ ಭತ್ಯೆ ನಿಲ್ಲಿಸಲಾಗಿದೆ. ಈ ಬಗ್ಗೆ ಚರ್ಚಿಸಿ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದರು.

ಸಭೆಯಲ್ಲಿ ಜಗಳೂರು ಶಾಸಕ ಎಸ್.ವಿ.ರಾಮಚಂದ್ರ, ಹರಿಹರ ಶಾಸಕರಾದ ರಾಮಪ್ಪ, ವಿಧಾನಪರಿಷತ್ ಶಾಸಕ ನಾರಾಯಣಸ್ವಾಮಿ ಮಾತನಾಡಿದರು. ಶಾಸಕ ಪ್ರೊ.ಲಿಂಗಣ್ಣ, ಜಿ ಪಂ ಅಧ್ಯಕ್ಷೆ ಯಶೋಧಮ್ಮ ಮರುಳಪ್ಪ, ಪಾಲಿಕೆ ಆಯುಕ್ತ ಬಿ.ಜಿ.ಅಜಯಕುಮಾರ್, ದೂಡಾ ಅಧ್ಯಕ್ಷ ಶಿವಕುಮಾರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ್ ನಾಯಕ್ ಇತರೆ ಅಧಿಕಾರಿಗಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಭಾಗವಾರು ಫಲಿತಾಂಶದ ವಿಶ್ಲೇಷಣೆ

ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗ (Commerce)

ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.

ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.

ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.

ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

Published

on

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.

ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending