ದಿನದ ಸುದ್ದಿ
ಕೋವಿಡ್ ನಂತರದ ಭಾರತ
- ಕೇಸರಿ ಹರವೂ
‘ಕೋರೋನಾದೊಂದಿಗೆ ಬದುಕುವುದನ್ನು ಕಲಿಯಿರಿ’ ಎನ್ನುವ ಸಂದೇಶ ನಮ್ಮ ಪ್ರಭುತ್ವದಿಂದ ರವಾನೆಯಾಗಿದೆ. ಇದರರ್ಥ ಕೋರೋನಾ ನಮ್ಮಲ್ಲಿ ಇನ್ನೂ ಒಂದಷ್ಟು ಕಾಲ ಕಾಡುತ್ತಲೇ ಇರುತ್ತದೆ ಎಂದು. ಇದು ಜಾಗತಿಕವಾಗಿಯೂ ನಿಜ. ಹಾಗಾಗಿ ನಮ್ಮಲ್ಲೂ ನಿಜ. ಆದರೆ ಅನೇಕ ರಾಷ್ಟ್ರಗಳು, ವಿಜ್ಞಾನಿಗಳು ಇದನ್ನು ಹೇಳಿ ಹಲವು ವಾರಗಳೇ ಆದವು. ನಮ್ಮ ದೇಶ ಈಗ ಹೇಳುವುದಕ್ಕೆ ಕೆಲವು ಕಾರಣಗಳಿವೆ.
ಈ ಸಂದೇಶ ನಾವು ಕೋರೋನಾವನ್ನು ಪೂರ್ತಿಯಾಗಿ ಹಿಮ್ಮೆಟ್ಟಿಸುವಲ್ಲಿ, ಸೋಂಕು ತಡೆಯುವಲ್ಲಿ ವಿಫಲರಾಗಿದ್ದೇವೆ ಎಂದೂ ಹೇಳುತ್ತದೆ. ನಮ್ಮಲ್ಲಿ ಸೋಂಕು ತೀರಾ ಕಡಿಮೆ ಪ್ರಮಾಣದಲ್ಲಿ ಇದ್ದಾಗಲೇ ಎಂಟು ವಾರಗಳ ಕಾಲ ಲಾಕ್ಡೌನ್ ಹೇರಿ ಕಾಲಹರಣ ಮಾಡಲಾಯಿತು. ಈಗ ಸೋಂಕು exponential ಆಗಿ ಹರಡುವುದಕ್ಕೆ ಆರಂಭವಾಗಿದೆ.
ನಿಜಕ್ಕೂ ಲಾಕ್ಡೌನ್ ಅವಶ್ಯ ಎಂದು ವೈಜ್ಞಾನಿಕವಾಗಿ ಎನಿಸಿದ್ದರೆ ಅದನ್ನು ಈಗ ಜಾರಿಗೊಳಿಸಬೇಕಿತ್ತು. ಈಗಲೂ ಅದು ದೇಶದಾದ್ಯಂತ ಬೇಕಿಲ್ಲ ಎಂದೇ ಹಲವು ತಜ್ಞರು ಹೇಳುತ್ತಾರೆ. ಆದರೆ ನಾವು ಇನ್ನಷ್ಟು ದಿನ ಆರ್ಥಿಕ ಚಟುವಟಿಕೆಗಳನ್ನು ಸ್ಥಗಿತಗೊಳಿಸುವುದು ಸಾಧ್ಯವೇ ಇಲ್ಲದಂತಾ ಪರಿಸ್ಥಿತಿಯಲ್ಲಿ ಸಮುದಾಯ ಹರಡುವಿಕೆಗೆ ತಯಾರಾಗಿ ಲಾಕ್ಡೌನ್ ಅನ್ನು ಕ್ರಮೇಣ ಸಡಿಲಿಸಲು ಆರಂಭಿಸಿದ್ದೇವೆ.
ಪ್ರಭುತ್ವ ಈಗ ಹೇಳಿರುವ ಈ ಹೇಳಿಕೆ ನಮ್ಮನ್ನು ಈ ಎಂಟು ವಾರಗಳ ಲಾಕ್ಡೌನಿನಲ್ಲಿ ದೇಶದಲ್ಲಿ ನಡೆದ ವಿದ್ಯಮಾನಗಳನ್ನು ಮತ್ತೊಮ್ಮೆ ನೋಡಲು ತೊಡಗಿಸುತ್ತದೆ. ಈ ನೋಟ ನಮ್ಮ ದೇಶ ಇನ್ನುಮುಂದೆ ಹೇಗೆ ಸಾಗುತ್ತದೆ ಎನ್ನುವುದಕ್ಕೆ ಕೆಲವು ಸುಳಿವುಗಳನ್ನೂ ಕೊಡುತ್ತದೆ.
ಲಾಕ್ಡೌನಿನ ಮೂಲ ಉದ್ದೇಶವನ್ನು ಸಾಕಷ್ಟು ವಿಫಲಗೊಳಿಸಿದ್ದರೂ, ಪ್ರಭುತ್ವ ತನ್ನ ಕೆಲವು ಉದ್ದೇಶಗಳನ್ನು ಈಡೇರಿಸಿಕೊಂಡಿದೆ.
ಪೌರತ್ವ ತಿದ್ದುಪಡಿ ಕಾಯ್ದೆಯ ವಿರೋಧೀ ಹೋರಾಟದ ಕಾವನ್ನು ಬಹುತೇಕ ತಣ್ಣಗಾಗಿಸುವಲ್ಲಿ ಅದು ಸಫಲವಾಗಿದೆ. ಹೋರಾಟ ತನ್ನ ಉಚ್ಛ್ರಾಯ ಸ್ಥಿತಿಯಲ್ಲಿದ್ದು, ಜಗತ್ತಿನಾದ್ಯಂತ ಪೌರತ್ವ ತಿದ್ದುಪಡಿಯ ವಿರುದ್ಧ ದನಿಯೆದ್ದಿದ್ದಾಗ, ಆ ಮುಜುಗರದಿಂದ ತಪ್ಪಿಸಿಕೊಳ್ಳಲು ಹೆಣಗುತ್ತಿದ್ದ ಪ್ರಭುತ್ವ ಪ್ರತಿಯೊಬ್ಬರಲ್ಲೂ ಮಹಾಮಾರಿಯ ಸಾಂಕ್ರಾಮಿಕದ ಆತಂಕದ ವಾತಾವರಣವನ್ನು ಹುಟ್ಟಿಹಾಕಿತು. ಲಾಕ್ಡೌನ್ ಒಂದೇ ಪರಿಹಾರ ಎಂದು ಅದನ್ನು ಹೇರಿ, ಪರ ಮತ್ತು ವಿರೋಧಿಗಳೆಲ್ಲರೂ ಸಹಕರಿಸುವಂತೆ ಮಾಡುವಲ್ಲಿ ಅದು ಯಶಸ್ವಿಯಾಯಿತು. ಮತ್ತೊಮ್ಮೆ ದೇಶದಲ್ಲಿ ಆ ಮಟ್ಟಕ್ಕೆ ಕಾವು ಏರಲು ದೊಡ್ಡ ಸಂಕಲ್ಪ ಮತ್ತು ಸಮಯ ಎರಡೂ ಬೇಕು.
ಸೋಂಕು ಹರಡುವಿಕೆಗೆ ಮುಸ್ಲಿಮರೇ ಮುಖ್ಯ ಕಾರಣ ಎಂದು ಜನರ ಮನಸ್ಸಿನಲ್ಲಿ ಯಶಸ್ವಿಯಾಗಿ ಬಿತ್ತಿ ತನ್ನ ಮುಸ್ಲಿಂ ವಿರೋಧೀ ನೀತಿಯನ್ನು ಅದು ಸಮರ್ಥಿಸಿಕೊಂಡಿದೆ. ಇದು ತನ್ನ ದೀರ್ಘಕಾಲದ ನೀತಿಗಳಲ್ಲಿ ಒಂದು. ಕೊರೋನಾ ಇದನ್ನು ಸುಲಭದಲ್ಲಿ ಸಾಧ್ಯವಾಗಿಸಿದ್ದು ಆ ನೀತಿಗೆ ಒದಗಿಬಂದ ದೊಡ್ಡ ಲಾಭ. ಇಂದು ಮಾವಿನ ಫಸಲು ಕೊಳ್ಳುವ ವರ್ತಕರಿಂದ ಹಿಡಿದು, ಬೇರೆಬೇರೇ ಕಸುಬುಗಳಿಗೆ ಹಳ್ಳಿಗಳಿಗೆ ಬರುತ್ತಿದ್ದ ಮುಸ್ಲಿಮರನ್ನು ಜನ ಕಾಣುತ್ತಿರುವ ರೀತಿಯೇ ಬೇರೆಯಾಗಿದೆ. ಸಾಮಾಜಿಕ ಅಂತರದ ಪರಾಕಾಷ್ಟೆ ಇದು.
ಪರಿಷ್ಕೃತ ಕರಡು ಕಾರ್ಮಿಕ ನೀತಿ ಲೋಕಸಭೆಯಲ್ಲಿ ಮಂಡನೆಯಾಗಿತ್ತು. ಬಲಪಂಥೀಯ ಬಿಎಮ್ಮೆಸ್’ನಿಂದ ಹಿಡಿದು ಎಲ್ಲ ಕಾರ್ಮಿಕ ಸಂಘಟನೆಗಳಿಂದ ಈ ನೀತಿಗೆ ದೊಡ್ಡ ವಿರೋಧವಿದ್ದು, ಅದು ಪಾಸ್ ಆಗುವುದು ಅತ್ಯಂತ ಕಠಿಣವಾಗಿತ್ತು. ಲಾಕ್ಡನ್ ಸಡಿಲಗೊಳಿಸುತ್ತಿರುವ ಈ ಸಂದರ್ಭದಲ್ಲಿ ಕಾರ್ಮಿಕರನ್ನು ಹೇಗೆ ನಡೆಸಿಕೊಳ್ಳುತ್ತಿವೆ ದೇಶದ ಮತ್ತು ರಾಜ್ಯಗಳ ಪ್ರಭುತ್ವಗಳು ಎನ್ನುವುದು ನಮ್ಮ ಕಣ್ಣಮುಂದೆಯೇ ಇದೆ.
ಇನ್ನೂ ಮೇಲಾಗಿ, ಆರು ರಾಜ್ಯಗಳು ಕಾರ್ಮಿಕ ಹಕ್ಕುಗಳನ್ನು ಮೂರು ವರ್ಷಗಳ ಕಾಲ ಅಮಾನತಿನಲ್ಲಿಟ್ಟಿವೆ. ಕಾರ್ಮಿಕರ ಎಲ್ಲ ಹಕ್ಕುಗಳನ್ನೂ, ಇದ್ದ ಅಲ್ಪ ಭದ್ರತೆಯನ್ನೂ ಒಂದೇ ಏಟಲ್ಲಿ ತೊಡೆದುಹಾಕುವಂತೆ ಮಾಡಿತು ಈ ಕೊರೋನಾ. ಆರ್ಥಿಕತೆಯ ಚೇತರಿಕೆಗಾಗಿ ಈ ಕ್ರಮ ಅತ್ಯಗತ್ಯ ಎಂದು ಬಿಂಬಿಸುವ ಪ್ರಯತ್ನ ನೇರವಾಗಿ ಕಾಣುತ್ತದೆ.
ಇದು ನಮ್ಮ ಕಾರ್ಪೊರೇಟ್ ಧಣಿಗಳಿಗೆ ಬಹುದೊಡ್ಡ ಕೊಡುಗೆಯಾಗಿ ಬರಲಿದೆ. ಬಹಳ ಹಿಂದಿನಿಂದಲೇ ಕೆಲವು ಅನುಕೂಲಕರ ವಾತಾರಣಗಳನ್ನು ಬಯಸಿದ್ದ ಕಾರ್ಪೋರೇಟುಗಳಿಗೆ ಈಗ ಲೀಲಾಜಾಲವಾಗಿ ತಮ್ಮ ಕಾರ್ಮಿಕ ನೀತಿಗಳನ್ನು ಬದಲಿಸಿಕೊಂಡು ಲಾಭ ಬಡಿಯುವ ಅವಕಾಶ ಒದಗಿ ಬಂದಿದೆ. ಈ ಲಾಭ ನಮ್ಮ ಪರಿಸರ, ಭೂಬಳಕೆ, ಕಾರ್ಮಿಕ ನೀತಿ, ಮಾನವ ಸಂಬಂಧಗಳ ಮೇಲೆ ದೊಡ್ಡ ವ್ಯತಿರಿಕ್ತ ಪರಿಣಾಮ ಬೀರಲಿದೆ. ಜನರ ಅನುಭವದಲ್ಲಿದ್ದ ಅಲ್ಪಸ್ವಲ್ಪ ಸಂಪನ್ಮೂಲಗಳೂ ಕಾರ್ಪೊರೇಟ್ಗಳ ಪಾಲಾಗಲಿದ್ದು, ನಾವು ಕಾರ್ಪೊರೇಟ್ಗಳ ಮುಂದೆ ಇನ್ನಷ್ಟು ಕೈಚಾಚಿ ಬದುಕುವ ಅನಿವಾರ್ಯತೆಯನ್ನು ಸೃಷ್ಟಿಸುತ್ತದೆ.
‘ಕೋರೋನಾ ನಮಗೆ ಪಾಠ ಕಲಿಸಿದೆ. ಜಾಗತೀಕರಣ, ಬಂಡವಾಳಶಾಹೀ ಅರ್ಥವ್ಯವಸ್ಥೆ ಎಲ್ಲಕ್ಕೂ ಉತ್ತರವಲ್ಲ ಎನ್ನುವುದನ್ನು ಜಗತ್ತು ಕಲಿತಿದೆ. ನಮ್ಮ ಜಗತ್ತು ಸಮಾಜಸ್ನೇಹಿಯಾಗಿ, ಪರಿಸರ ಸ್ನೇಹಿಯಾಗಿ ಬದಲಾಗಲಿದೆ’ ಎನ್ನುವ ಆಶಾವಾದ ಕೆಲವರದು. ಆದರೆ, ಕಾರ್ಮಿಕರ ಹಕ್ಕುಗಳನ್ನು ಅಮಾನತಿನಲ್ಲಿಟ್ಟಿರುವ ಕ್ರಮವೊಂದೇ ಸಾಕು ಕೋವಿಡ್ ನಂತರದ ಆರ್ಥಿಕತೆ ಅದಕ್ಕೆ ತದ್ವಿರುದ್ಧವಾಗಿ ತಯಾರಾಗುವುದಕ್ಕೆ. ಕೊರೋನಾದಂಥಾ ಸಾಂಕ್ರಾಮಿಕವನ್ನು ಸಮರ್ಥವಾಗಿ ನಿಭಾಯಿಸಲು ಸರ್ಕಾರಗಳಿಗೆ ಶಕ್ತಿ ಸಾಲುವುದಿಲ್ಲ, ಖಾಸಗೀ ವ್ಯವಸ್ಥೆಯೂ ದೊಡ್ಡದಾಗಿ ಸಜ್ಜುಗೊಳ್ಳಬೇಕು ಎನ್ನುವ ಹೊಸ ವಾದ ಹುಟ್ಟಲಿದೆ.
ಆ ವಾದವನ್ನು ನಮ್ಮ ಪ್ರಭುತ್ವಗಳೂ ಒಪ್ಪಿಕೊಳ್ಳುತ್ತವೆ. ಅದೇ ಕಾರಣಕ್ಕಾಗಿ ಅಲ್ಲದಿದ್ದರೂ ತಮ್ಮ ಅನುಕೂಲಕ್ಕಾಗಿ ಶಕ್ತಿಕೇಂದ್ರಗಳು ಒಪ್ಪುತ್ತವೆ. ಅಲ್ಲಿಂದ ಮುಂದೆ ಖಾಸಗೀ ಶಿಕ್ಷಣ, ಆರೋಗ್ಯ ಸೇವೆ, ಸಂಪರ್ಕ, ಸಾಗಣೆ, ಆಹಾರ ಸರಬರಾಜು ಎಲ್ಲ ಕ್ಷೇತ್ರಗಳಿಗೂ ಇದು ವಿಸ್ತರಿಸುತ್ತದೆ. ಇವೆಲ್ಲವೂ ಇನ್ನಷ್ಟು ವಿಸ್ತರಣೆಯಾಗಲಿವೆ ಮತ್ತು ದುಬಾರಿಯಾಗಲಿವೆ. ಸಾವಿರ ಕಿಮೀ ಗಟ್ಟಲೆ ನಡೆಯುವವರು, ರೈಲಿನ ಕೆಳಗೆ ಸಾಯುವ ಗುಂಪುಗಳು ಸಾಮಾನ್ಯವಾಗಲಿವೆ.
ಇವೆಲ್ಲವನ್ನೂ ಪ್ರಭುತ್ವ ಜನತೆಗೆ ಒಪ್ಪಿಸಿ ಮುನ್ನಡೆಯುತ್ತಿರಬೇಕಾಗುತ್ತದೆ. ಹಾಗಾದರೆ ಏನು ಮಾಡಬೇಕು? ಸರ್ಜಿಕಲ್ ಸ್ಟ್ರೈಕ್, ಪುಲ್ವಾಮಾ, ಮುಂತಾದವು ಈಗ ಸಾಲುವುದಿಲ್ಲ. ದೇಶದ ಗಡಿಗಳನ್ನು ರಕ್ಷಿಸುವ ಜೊತೆಗೆ ಕಳಕೊಂಡ ಆಕ್ರಮಿತ ಪ್ರದೇಶಗಳನ್ನು ಮತ್ತೆ ವಶಮಾಡಿಕೊಳ್ಳಬೇಕು. ದೇಶಭಕ್ತರು ಯಾರೂ ಇದನ್ನು ಬೇಡ ಎನ್ನಲಾರರು. ಬದಲಿಗೆ ಒಕ್ಕೊರಳಿನಿಂದ ಜೈ ಎಂದೇ ಅಂದಾರು.
ಈಗಾಗಲೇ ಗೂಗಲ್ ತನ್ನ ಮ್ಯಾಪಿನಲ್ಲಿ LOC ಅಳಿಸಿಹಾಕಿದೆ. ಅದರ ಹಿಂದಿನ ಒತ್ತಡ ಏನಿರಬಹುದು ಲೆಕ್ಕ ಹಾಕಿ. ಭಾರತೀಯರಾದ ನಮಗೆ ಇದು ಅತ್ಯಂತ ಸ್ವಾಗತಾರ್ಹ ವಿಚಾರ. ನಮ್ಮ ಹವಾಮಾನ ಇಲಾಖೆ POKಯ ಪೂರ್ಣ ಹವಾಮಾನ ವರದಿಯನ್ನು ಕೊಡಲು ಶುರು ಮಾಡಿದೆ. ಯುದ್ಧ ಸಾಮಗ್ರಿಗಳ ಹೊಸ ಒಪ್ಪಂದಗಳು ನಮ್ಮಲ್ಲಿ ಆಗ್ತಿವೆ. ಯುದ್ಧೋನ್ಮಾದವನ್ನು ಉಣಬಡಿಸಲು ಪ್ರಯತ್ನ ನಡೆಯುತ್ತಿದೆಯೇ? ಅಥವಾ ಯುದ್ಧಕ್ಕೇ ತಯಾರಿ ನಡೆಯುತ್ತಿದೆಯೇ? ಯೋಚಿಸಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.
ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.
ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.
ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್
ಜಿಲ್ಲೆಯಲ್ಲಿ 1.37 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ: ಡಿಎಚ್ಒ ಡಾ. ಷಣ್ಮುಖಪ್ಪ
ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ವಿಶೇಷ ಅಭಿಯಾನದಲ್ಲಿ ಯಾವುದೇ ಒಂದು ಮಗುವೂ ಸಹ ಲಸಿಕೆಯಿಂದ ವಂಚಿತವಾಗದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಅವರು ಸೂಚಿಸಿದರು.
ಅವರು ಭಾನುವಾರ ಪಾಷನಗರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಬ್ದುಲ್ ರೆಹಮಾನ್ ಎಂಬ 4 ತಿಂಗಳ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶ ಸೇರಿದಂತೆ ಎಲ್ಲಾ ಭಾಗಗಳ ಅರ್ಹ ಮಕ್ಕಳಿಗೂ ಲಸಿಕೆ ತಲುಪಬೇಕು. ಆರೋಗ್ಯ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಷಣ್ಮುಖಪ್ಪ ಎಸ್. ಅವರು ಮಾತನಾಡಿ, ಜಿಲ್ಲೆಯನ್ನು ಸಂಪೂರ್ಣ ಪೋಲಿಯೋ ಮುಕ್ತವಾಗಿಸಲು ಆರೋಗ್ಯ ಇಲಾಖೆ ಪಣತೊಟ್ಟಿದೆ. ಜಿಲ್ಲೆಯಲ್ಲಿ ಒಟ್ಟು 18,28,153 ಜನಸಂಖ್ಯೆಯಿದ್ದು, 3,79,338 ಮನೆಗಳಿವೆ. ಇವುಗಳಲ್ಲಿ ಗುರುತಿಸಲಾಗಿರುವ 5 ವರ್ಷದ ಒಳಗಿನ 1,37,339 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ವಿವರ ನೀಡಿದರು.
ಇದಕ್ಕಾಗಿ ಜಿಲ್ಲಾದ್ಯಂತ 1,090 ಲಸಿಕಾ ಬೂತ್ಗಳನ್ನು ಸ್ಥಾಪಿಸಲಾಗಿದೆ. ಬೂತ್ಗಳಲ್ಲಿ ಲಸಿಕೆ ಹಾಕುವುದರ ಜೊತೆಗೆ, ಜೂನ್ 29 ರಿಂದ ಜುಲೈ 1 ರವರೆಗೆ ಒಟ್ಟು 3 ದಿನಗಳ ಕಾಲ ಜಿಲ್ಲೆಯ ಎಲ್ಲಾ ಮನೆ-ಮನೆಗೆ ತೆರಳಿ 5 ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುವುದು. ಈ ಕಾರ್ಯಕ್ರಮವನ್ನು 2 ಹಂತಗಳಲ್ಲಿ 3 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಲಸಿಕಾ ಅಭಿಯಾನದ ಯಶಸ್ಸಿಗಾಗಿ ಮನೆ-ಮನೆ ಭೇಟಿ ತಂಡ, ಟ್ರಾನ್ಸಿಸ್ಟ್ (ಸಾರಿಗೆ ನಿಲ್ದಾಣಗಳ ತಂಡ) ಮತ್ತು ಸಂಚಾರಿ (ಮೊಬೈಲ್) ತಂಡ ಹೀಗೆ ಮೂರು ಪ್ರಮುಖ ವಿಭಾಗಗಳ ತಂಡಗಳನ್ನು ರಚಿಸಲಾಗಿದೆ. ನಿಯೋಜಿತ ಸಿಬ್ಬಂದಿ ಹಾಗೂ ಮೇಲ್ವಿಚಾರಕರು ಸಕ್ರಿಯವಾಗಿ ಕಾರ್ಯನಿರ್ವಹಿಸಲಿದ್ದು, ವಲಸೆ ಕಾರ್ಮಿಕರ ಮಕ್ಕಳು, ಹರವಿಗಿ ಹೋಗುವ ಕುಟುಂಬಗಳ ಮಕ್ಕಳು ಸೇರಿದಂತೆ ಒಂದೂ ಮಗುವು ಲಸಿಕೆಯಿಂದ ವಂಚಿತವಾಗದಂತೆ ಕಟ್ಟುನಿಟ್ಟಿನ ನಿಗಾ ಇಡಲಾಗುವುದು ಎಂದು ತಿಳಿಸಿದರು.
ಡಾ. ರೇಣುಕಾರಾಧ್ಯ ಆರ್.ಸಿ.ಹೆಚ್.ಒ ಅವರು ಮಾತನಾಡಿ, ಭಾರತವನ್ನು ಪೋಲಿಯೋ ಮುಕ್ತ ದೇಶವನ್ನಾಗಿಸಲಾಗಿದೆ ಆದರೆ ಪ್ರಸ್ತುತ ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳಲ್ಲಿ 5 ಪೋಲಿಯೋ ಪ್ರಕರಣಗಳು ಪತ್ತೆಯಾಗಿವೆ. ಅಲ್ಲಿನ ನಾಗರಿಕರು ಭಾರತಕ್ಕೆ ಬಂದು ಹೋಗುವ ಸಾಧ್ಯತೆ ಇರುವುದರಿಂದ, ವೈರಸ್ ಮತ್ತೆ ಇಲ್ಲಿ ಹರಡಬಾರದು ಎಂಬ ಮುಂದಾಲೋಚನೆಯಿಂದ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಈ ಪಲ್ಸ್ ಪೋಲಿಯೋ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಪಲ್ಸ್ ಪೋಲಿಯೋ ನೊಡೆಲ್ ಅಧಿಕಾರಿ ಡಾ.ಚಂದ್ರಶೇಖರ್ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.
ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.
ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.
ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.
ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.
ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


