ದಿನದ ಸುದ್ದಿ
ಮಾನ್ಯ ಮುಖ್ಯಮಂತ್ರಿಗಳೇ “ವಿಥೌಟ್ ಲಾಠಿ ಡ್ಯೂಟಿ” ಎಂಬ ಕಾನೂನು ಜಾರಿ ಮಾಡಿ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/05/police_lathi_Suddidina.jpg&description=ಮಾನ್ಯ ಮುಖ್ಯಮಂತ್ರಿಗಳೇ “ವಿಥೌಟ್ ಲಾಠಿ ಡ್ಯೂಟಿ” ಎಂಬ ಕಾನೂನು ಜಾರಿ ಮಾಡಿ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/05/police_lathi_Suddidina.jpg&description=ಮಾನ್ಯ ಮುಖ್ಯಮಂತ್ರಿಗಳೇ “ವಿಥೌಟ್ ಲಾಠಿ ಡ್ಯೂಟಿ” ಎಂಬ ಕಾನೂನು ಜಾರಿ ಮಾಡಿ', 'pinterestShare', 'width=750,height=350'); return false;" title="Pin This Post">
- ಕಾವ್ಯ ಪ್ರಿಯ ಶಿವು
ಜನಸೇವೆಯೇ ಜನಾರ್ದನ ಸೇವೆ ಸರಕಾರದ ಕೆಲಸ ದೇವರ ಕೆಲಸವೆಂದು ನಮ್ಮ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದ ಪೂರ್ವದಿಕ್ಕಿನ ಪ್ರವೇಶದ್ವಾರದ ಗೋಡೆಯ ಮೇಲೆ ಬರೆದಿರುವ ಉಕ್ತಿ. ದೇಶ ಸಂವಿಧಾನ ಕಾನೂನು ಸುವ್ಯವಸ್ಥೆ ರಕ್ಷಣೆ ಆಡಳಿತ ಅಧಿಕಾರ ಯಾರಿಗಾಗಿ ಜನಸೇವೆಗಾಗಿ ದೇಶದ ಅಭಿವೃದ್ಧಿಗಾಗಿ ದೇಶದ ಒಕ್ಕೂಟ ವ್ಯವಸ್ಥೆಯನ್ನು ಆಡಳಿತದ ಅನುಕೂಲಕ್ಕಾಗಿ ಅಧಿಕಾರವನ್ನು ವಿಭಜಿಸಿಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಮ್ಮನ್ನು ಅಳುತ್ತಾವೆ.
ಆಳುವ ದೊರೆ ದೇಶದ ಮತ್ತು ರಾಜ್ಯದ ಪ್ರಜೆಗಳನ್ನು ತನ್ನ ಮನೆಯ ಸದಸ್ಯರಂತೆ ಸ್ವಂತ ಮಕ್ಕಳಂತೆ ಸೋದರ ಸೋದರಿಯರಂತೆ ಜಾತಿಭೇದವಿಲ್ಲದೆ ಲಿಂಗಬೇಧವಿಲ್ಲದೆ ವರ್ಗಭೇದವಿಲ್ಲದೆ ಭಾರತೀಯರಾದ ನಾವೆಲ್ಲರೂ ಒಂದೇ ಎಂಬ ಐಕ್ಯತೆ ಮನೋಭಾವದಿಂದ ಪ್ರತಿಯೊಬ್ಬ ವ್ಯಕ್ತಿಯ ಜೀವನದ ಮೌಲ್ಯವನ್ನು ಎತ್ತಿ ಹಿಡಿದು ಮತ್ತು ಅವನ ತಪ್ಪುಗಳನ್ನು ತಿದ್ದುವ ಮೂಲಕ ವಿಚಾರ ವಿನಿಮಯಳಲ್ಲಿ ಆದ ತಪ್ಪುಗಳನ್ನು ಪರಿಶೀಲಿಸಿ ಸರಿಪಡಿಸಿಕೊಳ್ಳಬೇಕು. ಕಾಪಾಡುವ ನೈತಿಕತೆ ಇಲ್ಲದವನಿಗೆ ಶಿಕ್ಷ ಕೊಡುವ ನೈತಿಕತೆಯು ಕೂಡ ಇರುವುದಿಲ್ಲ. ಇಡೀ ದೇಶ ಕರೋನ ಎಂಬ ಕಾಯಿಲೆಗೆ ತತ್ತರಿಸಿಹೋಗಿದೆ.
ಜನಸಾಮಾನ್ಯರು ಮೂಲಭೂತ ಅಗತ್ಯತೆಗಳನ್ನು ಹುಡುಕಿಕೊಂಡು ಅನಿವಾರ್ಯವಾಗಿ ರೋಡಿಗೆ ಬರುವಂತಾಗಿದೆ. ಬಂದ ನಾಗರಿಕರನ್ನು ಕರ್ತವ್ಯ ನಿರತ ಪೊಲೀಸರು ಆತ್ಮೀಯವಾಗಿ ಅವರ ಜೊತೆಗೆ ಚರ್ಚಿಸಿ ಸತ್ಯಾಸತ್ಯತೆಗಳ ಬಗ್ಗೆ ಅವಲೋಕನ ಮಾಡಿ ಸರಿಯಾದ ರೀತಿಯಲ್ಲಿ ಸರಕಾರ ಕೈಗೊಂಡಿರುವ ಕಾನೂನುಗಳ ಬಗ್ಗೆ ಅರಿವು ಮೂಡಿಸಬೇಕು. ಹಾಗೂ ಒಂದು ವೇಳೆ ಒಬ್ಬ ಪ್ರಜೆ ತಪ್ಪು ಮಾಡಿದ್ದೆ ಆದರೆ ಅವನನ್ನು ಕೂಡಲೇ ಬಂಧಿಸಿ ಕಾನೂನಿನ ರೀತಿಯಲ್ಲಿ ಕ್ರಮಕೈಗೊಂಡು ತಪ್ಪಿಗೆ ಶಿಕ್ಷೆಯನ್ನು ವಿಧಿಸಲು ನ್ಯಾಯಾಂಗಕ್ಕೆ ಒಪ್ಪಿಸಬೇಕು. ತಪ್ಪು ಮಾಡಿದ ಅಪರಾಧಿಯ ಮೇಲೆ ಯಾವುದೇ ಕಾರಣಕ್ಕೂ ಕೈ ಮಾಡುವಂತಿಲ್ಲ.
ಬಂಧಿಸಿದ 24 ಗಂಟೆ ಒಳಗಡೆ ಅವನನ್ನು ನ್ಯಾಯಾಲಯಕ್ಕೆ ಒಪ್ಪಿಸಬೇಕು. ಹೀಗಿರುವಾಗ ಒಬ್ಬ ಅಮಾಯಕನ ಮೇಲೆ ನಾಲ್ಕು ಐದು ಜನ ಪೊಲೀಸರು ಸೇರಿಕೊಂಡು ಜೀವ ಹೋಗುವರೆಗೆ ಹೊಡೆದು ಸಾಯಿಸುವುದು ಎಂದರೆ ಎಂಥ ಅಮಾನವೀಯ ಕೃತ್ಯ. ನಮ್ಮ ದೇಶ ಪ್ರಪಂಚದ ಇತರೆ ರಾಷ್ಟ್ರಗಳಿಗೆ ಮಾದರಿ ರಾಷ್ಟ್ರ. ಉತ್ತರ ಕೊರಿಯಾ ಜಪಾನ್ ಜರ್ಮನಿ ಫ್ರಾನ್ಸ್ ಇಟಲಿ ಇತರೆ ಸರ್ವಾಧಿಕಾರಿ ಧೋರಣೆ ರಾಷ್ಟ್ರಗಳಂತೆ ನಮ್ಮಲ್ಲಿ ಅರಸೊತ್ತಿಗೆ ಆಳ್ವಿಕೆ ಇಲ್ಲ. ಇಲ್ಲಿ ಪ್ರಜೆಗಳೇ ಪ್ರಭುಗಳು ಪ್ರಜೆಗಳಿಂದ ಪ್ರಭು. ಅಧಿಕಾರ ಎಂಬುದು ದೇಶದ ಪ್ರಜೆಗಳು ರೂಪಿಸಿದ ಶಕ್ತಿಯೆಂದು ಸಂವಿಧಾನದ ಪಿತಾಮ ವಿಶ್ವರತ್ನ ಮಹಾಜ್ಞಾನಿ ಬಾಬಾಸಾಹೇಬ್ ಅಂಬೇಡ್ಕರ್ ಅವರು ವ್ಯಾಖ್ಯಾನಿಸುತ್ತಾರೆ.
ಪ್ರತಿಯೊಂದಕ್ಕೂ ಕಾನೂನು ಇದೆ ಆ ಕಾನೂನನ್ನು ಯಾರು ಕೂಡ ಕೈಗೆತ್ತಿಕೊಳ್ಳಬಾರದು. ಒಂದು ವೇಳೆ ಅಂತ ದುಸ್ಸಾಹಸಕ್ಕೆ ಕೈ ಹಾಕಿದರೆ ಆ ವ್ಯಕ್ತಿ ಯಾರೇ ಆಗಿರಲಿ ಅಂಥವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕಾನೂನಿನ ಸೂಕ್ತ ಕ್ರಮಗಳನ್ನು ಜರುಗಿಸಿ ತಪ್ಪಿಗೆ ತಕ್ಕ ಶಿಕ್ಷೆಯನ್ನು ವಿಧಿಸಬೇಕು. ಪೊಲೀಸರಲ್ಲಿ ಮಾನಸಿಕ ಸಾಮರ್ಥ್ಯದ ಶಕ್ತಿ ಅತ್ಯಂತ ಕಡಿಮೆ ಪ್ರಮಾಣದಲ್ಲಿರುತ್ತದೆ. ಅವರಿಗೆ ಮಾನವೀಯತೆ ಮನುಷ್ಯತ್ವ ಭ್ರಾತೃತ್ವ ಜೀವನದ ಮೌಲ್ಯ ಎತ್ತಿಹಿಡಿಯುವ ನೈತಿಕ ಮೌಲ್ಯದ ಪಾಠ ಮಾಡಿಸಬೇಕು. ಬಾಯಿಬಿಟ್ಟರೆ ವೇದ ಉಪನಿಷತ್ತು ಭಗವದ್ಗೀತೆಯ ಸಂಸ್ಕೃತ ವಾಕ್ಯವನ್ನು ನಾಲಿಗೆ ಮೇಲೆ ಹರಿದಾಡುತ್ತವೆ.
ಇವರೇನು ತಾಯಿ ಗರ್ಭದಿಂದ ಜನಿಸಿ ಬಂದವರಲ್ಲವೇ. ಇವರಿಗೆ ಅಕ್ಕ-ತಂಗಿ ಅಣ್ಣ-ತಮ್ಮ ಹೆಂಡತಿ ಮಕ್ಕಳು ಬಂಧು ಭಗಿನಿಯರು ಇಲ್ಲದ ಅನಾಥರೇ. ಅವಾಚ್ಯ ಶಬ್ದಗಳನ್ನು ಬಳಸಿದರೆ ಅಂಥವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿ ರಿಟ್ ಅರ್ಜಿಯ ಮೂಲಕ ಪರಿಹಾರವನ್ನು ಪಡೆದುಕೊಳ್ಳುವ ಅವಕಾಶ ನಮ್ಮ ನ್ಯಾಯಾಂಗದಲ್ಲಿ ಇದೆ. ನಮ್ಮ ದೇಶ ಸುಸಂಸ್ಕೃತವಾದ ದೇಶ ಇಲ್ಲಿ ಯಹೂದಿಗಳು ತತ್ವಜ್ಞಾನಿಗಳು ಚಿಂತಕರು ಸಾಹಿತಿಗಳು ಧಾರ್ಮಿಕ ಸುಧಾರಕರು ಸಾಮಾಜಿಕ ಚಿಂತಕರು ವಚನಕಾರರು ಕೀರ್ತನಕಾರರು ದಾಸರು ಸಂತರು ಶರಣರು ಸೂಫಿಗಳು ಕಾಲಜ್ಞಾನಿಗಳು ಹುಟ್ಟಿ ತಮ್ಮ ಜ್ಞಾನದ ಬೆಳಕನ್ನು ನೀಡಿ ಹೋಗಿದ್ದಾರೆ.
ಶಾಂತಿ ಸುವ್ಯವಸ್ಥೆ ಸಹಬಾಳ್ವೆ ಸೌಹಾರ್ದತೆ ಬ್ರಾತುತ್ವ ಮನುಷ್ಯ ಪ್ರೇಮ ಸಾಮರಸ್ಯ ಐಕ್ಯತೆಯ ಮನೋಭಾವನ್ನು ಬಿತ್ತಿ ಹೋಗಿದ್ದಾರೆ. ಇಂಥ ಮಹನೀಯರ ಜೀವನದ ಆದರ್ಶಗಳು ವಾರದಲ್ಲಿ ಒಂದು ದಿನವಾದರೂ ಉತ್ತರಕುಮಾರನ ಪೌರುಷತ್ವದ ಪೊಲೀಸರಿಗೆ ಪಾಠ ಮಾಡಬೇಕಾಗಿದೆ. ಏಕೆಂದರೆ ಇವರ ದರ್ಪ ದೌರ್ಜನ್ಯ ದಬ್ಬಾಳಿಕೆ ಆಡಳಿತ ಅಧಿಕಾರ ಚಲಾಯಿಸುವುದು ಹೇನ್ನಿದ್ದರೂ ನಿರ್ಗತಿಕರ ಮೇಲೆ ಬಡವರ ಮೇಲೆ ಶೋಷಿತರ ಮೇಲೆ ಕೂಲಿಕಾರ್ಮಿಕರ ಮೇಲೆ ಅನಾಥರ ಮೇಲೆ ಬಡವನ ಸಿಟ್ಟು ದವಡೆಗೆ ಮೂಲ ಎಂಬ ಗಾದೆಯಂತೆ ಶಕ್ತಿ ಹೀನರೇ ಇಲ್ಲಿ ಬಲಿಪಶುವಾಗಿದ್ದಾರೆ.
ಒಬ್ಬ ರಾಜಕಾರಣಿಯ ಮಗ ಉದ್ಯಮಿಯ ಮಗ ಒಬ್ಬ ಎಸ್ಪಿ ಅಥವಾ ಜಿಲ್ಲಾಧಿಕಾರಿಯ ಮಗ ಸಿನಿಮಾ ನಟರ ಮಗ ಅನ್ಯಾಯ ಕೊಲೆ ಸುಲಿಗೆ ಶೋಷಣೆ ಅತ್ಯಾಚಾರ ಕೋಮು ಸಂಘರ್ಷ ಗದ್ದಲಗಳು ಉಂಟು ಮಾಡಿದರೂ ಕಂಡರೂ ಕಾಣದಂತೆ ಬಾಲ ಮುದುರಿಕೊಂಡು ಹುಲ್ಲು ಕಿತ್ತಿದ ಹಾವಿನಂತೆ ತಲೆಯಾಡಿಸುವ ನಪುಂಸಕ ಪೊಲೀಸರ ವರ್ತನೆ ಹೆಚ್ಚಾಗುತ್ತಿದೆ. ಹಾಗಂತ ಎಲ್ಲಾ ಪೊಲೀಸರು ಕೆಟ್ಟವರಲ್ಲ ಹಾಗೆಯೇ ಎಲ್ಲಾ ಪೊಲೀಸರು ಒಳ್ಳೆಯವರು ಅಲ್ಲ. ಅಲ್ಪಬುದ್ಧಿ ವಿನಾಶಕ್ಕೆ ಕಾರಣವಾಗುತ್ತದೆ ಎಂಬುದಕ್ಕೆ ಪೊಲೀಸರೇ ಜೀವಂತ ಉದಾಹರಣೆ. ಲಾಕ್ ಡೌನ್ ಎಂಬ ನೆಪದಲ್ಲಿ ಪೋಲಿಸ್ ಗೂಂಡಾ ವರ್ತನೆ ದೇಶದ್ಯಾಂತ ಕ್ರೂರ ಪ್ರವೃತ್ತಿಯ ನರ್ತನೆ ತಾಂಡವಾಡುತ್ತಿದೆ.
ಇಂಥ ಅವಹೇಳನಕಾರಿ ದುರ್ಘಟನೆಗಳು ಸಾಮಾಜಿಕ ಜಾಲತಾಣಗಳಲ್ಲಿ ರಾರಾಜಿಸುತ್ತಿವೆ ನಾಡಿನ ಮತ್ತು ದೇಶದ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ದೃಶ್ಯಗಳು ಕಂಡರೂ ಕಾಣದಂತೆ ಆಡಳಿತವರ್ಗದ ಅಧಿಕಾರಿಗಳು ಮತ್ತು ರಾಜಕಾರಣಿಗಳು ಷಂಡರಂತೆ ಸಂಬಂಧವಿಲ್ಲದಂತೆ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ರಾಜಕೀಯ ಮಾಡುತ್ತಿದ್ದಾರೆ. ಬೀದಿಗಳಲ್ಲಿ ಗಲ್ಲಿಗಳಲ್ಲಿ ಲಾಠಿಯೇಟು ತಿಂದವರು ಗಂಜಿಗೆ ಗತಿಯಿಲ್ಲದ ನಿರ್ಗತಿಕರು.
ದಿನನಿತ್ಯದ ಜೀವನಕ್ಕೆ ಅತ್ಯಗತ್ಯ ವಸ್ತುಗಳನ್ನು ಸಿಗದೇ ಇದ್ದ ಸಂದರ್ಭದಲ್ಲಿ ಅನಿವಾರ್ಯವಾಗಿ ಅವುಗಳನ್ನು ಹುಡುಕಿಕೊಂಡು ಬಂದ ಅಮಾಯಕರ ಮೇಲೆ ಏಕಾಏಕಿ ಮಾರಣಾಂತಿಕ ಹಲ್ಲೆ ಮಾಡುವುದು ಯಾವ ಪುರುಷಾರ್ಥ. ಇದನ್ನು ನೋಡಿಕೊಂಡು ಸುಮ್ಮನೆ ಕುಳಿತಿರುವ ಮಂತ್ರಿ ಮಹನೀಯರು ಪುರುಷ ಹೀನರು ಸಂಬಂಧಪಟ್ಟ ಮಂತ್ರಿಗಳು ಕೂಡಲೇ ಗೂಂಡಾ ಪ್ರವೃತ್ತಿಯ ಪೊಲೀಸ್ ವ್ಯಕ್ತಿಯ ಮೇಲೆ ಸೂಕ್ತವಾದ ಕಾನೂನು ಕ್ರಮಗಳನ್ನು ಕೈಗೊಂಡು ಅವನನ್ನು ಶಿಕ್ಷೆಗೆ ಒಳಪಡಿಸಿ ಸೇವೆಯಿಂದ ಖಾಯಂ ಆಗಿ ವಜಾಗೊಳಿಸಬೇಕು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ಎಸ್ಎಲ್ಸಿ ಫಲಿತಾಂಶ| ಗುರುಕುಲ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ; ಶೇ. 98 ಅಂಕಗಳೊಂದಿಗೆ ಮದಿಹಾ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: 2025–26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ನಗರದ ಪ್ರತಿಷ್ಠಿತ ಶಾಲೆಗಲ್ಲಿ ಒಂದಾದ ಗುರುಕುಲ ಶಾಲೆ (Gurukul School) ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಮ್ಮೆ ತನ್ನ ವರ್ಚಸ್ಸನ್ನು ಸಾಬೀತುಪಡಿಸಿದೆ. ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿನಿ ಮದಿಹಾ ಸಾಧನೆಯ ಶಿಖರದಲ್ಲಿ
ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿ ಮದಿಹಾ ಅವರು ಒಟ್ಟು ಶೇ. 98 ಅಂಕಗಳನ್ನು ಗಳಿಸುವ ಮೂಲಕ ಶಾಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಸಾಧನೆಗೈದಿದ್ದಾರೆ. ಈಕೆಯ ಸಾಧನೆಯು ಸಹಪಾಠಿಗಳಿಗೆ ಮತ್ತು ಕಿರಿಯ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದೆ. ಅಲ್ಲದೇ ಕುಶಾಲ್ ಶೇ. 97 ದ್ವಿತೀಯ ಹಾಗೂ ಸಮರ್ಥ್ 95.5 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.
ಗಮನ ಸೆಳೆದ ಫಲಿತಾಂಶ: ಈ ಬಾರಿಯ ಫಲಿತಾಂಶದಲ್ಲಿ ವಿದ್ಯಾರ್ಥಿಗಳ ಸಾಧನೆ ಮೆಚ್ಚುವಂತಿದೆ.
ಡಿಸ್ಟಿಂಕ್ಷನ್ ಸಾಧಕರು: 15 ವಿದ್ಯಾರ್ಥಿಗಳು ಶೇ. 90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿ ಡಿಸ್ಟಿಂಕ್ಷನ್ನಲ್ಲಿ ಉತ್ತೀರ್ಣರಾಗಿದ್ದಾರೆ.
ಪ್ರಥಮ ಶ್ರೇಣಿ: ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಉತ್ತಮ ಫಲಿತಾಂಶ: ಉಳಿದ ಎಲ್ಲಾ ವಿದ್ಯಾರ್ಥಿಗಳು ಸಹ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವ ಮೂಲಕ ಶಾಲೆಯು ನೂರಕ್ಕೆ ನೂರರಷ್ಟು ಫಲಿತಾಂಶದತ್ತ ದಾಪುಗಾಲು ಹಾಕಿದೆ.
ಯಶಸ್ಸಿನ ಹಿಂದಿನ ಶಕ್ತಿ:
ವಿದ್ಯಾರ್ಥಿಗಳ ಈ ಭವ್ಯ ಸಾಧನೆಗೆ ಶಾಲೆಯ ವ್ಯವಸ್ಥಿತ ಮಾರ್ಗದರ್ಶನವೇ ಕಾರಣ ಎಂದು ಆಡಳಿತ ಮಂಡಳಿ ತಿಳಿಸಿದೆ. ಶಾಲಾ ಕಾರ್ಯದರ್ಶಿ ಅಬ್ದುಲ್ ಸರ್ ಅವರ ನಿರಂತರ ಮಾರ್ಗದರ್ಶನ, ಆಡಳಿತ ಮಂಡಳಿಯ ಬೆಂಬಲ, ಮುಖ್ಯೋಪಾಧ್ಯಾಯರ ಸಮರ್ಥ ನಾಯಕತ್ವ ಹಾಗೂ ಶಿಕ್ಷಕ ವೃಂದದವರ ಅವಿರತ ಪರಿಶ್ರಮ ಈ ಯಶಸ್ಸಿಗೆ ಬುನಾದಿಯಾಗಿದೆ.
ಈ ಕುರಿತು ಸಂತಸ ವ್ಯಕ್ತಪಡಿಸಿರುವ ಶಾಲಾ ಕಾರ್ಯದರ್ಶಿ ಅಬ್ದುಲ್, “ವಿದ್ಯಾರ್ಥಿಗಳ ಏಕಾಗ್ರತೆ, ಪೋಷಕರ ಸಹಕಾರ ಮತ್ತು ಶಿಕ್ಷಕರ ಬೋಧನಾ ಶೈಲಿಯಿಂದ ಈ ಮೈಲಿಗಲ್ಲು ಸಾಧ್ಯವಾಗಿದೆ. ಈ ಯಶಸ್ಸು ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಇನ್ನಷ್ಟು ಉನ್ನತ ಗುರಿಗಳನ್ನು ತಲುಪಲು ಪ್ರೇರಣೆಯಾಗಲಿ,” ಎಂದು ಹಾರೈಸಿದ್ದಾರೆ.
ಶಾಲೆಯ ಈ ಸಾಧನೆಗೆ ಪೋಷಕರು ಮತ್ತು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭಕೋರಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕ್ಷೇತ್ರ ಪುನರ್ವಿಂಗಡಣೆ ಮಸೂದೆ ; ಬಿಜೆಪಿ ಷಡ್ಯಂತ್ರ ಬಯಲು : ಕವಿತಾ ಚಂದ್ರಶೇಖರ್ ಕಿಡಿ
ಸುದ್ದಿದಿನ,ದಾವಣಗೆರೆ: ಬಿಜೆಪಿಯು ಪಂಚರಾಜ್ಯಗಳ ಚುನಾವಣೆಗಮನದಲ್ಲಿಟ್ಟುಕೊಂಡು ತರಾತುರಿಯಲ್ಲಿ ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಮಂಡನೆ ಮಾಡಲು ಹೋಗಿ ಮುಖಭಂಗಕ್ಕೀಡಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಕವಿತಾ ಚಂದ್ರಶೇಖರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರದ ಹುನ್ನಾರ ದೇಶದ ಜನರ ಮುಂದೆ ಬಯಲಾಗಿದೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮಹಿಳಾ ಮೀಸಲಾತಿ ಮಸೂದೆಯನ್ನು ಕಾಂಗ್ರೆಸ್ ವಿರೋಧಿಸುತ್ತಿದೆ. ಮಹಿಳೆಯರ ವಿರೋಧಿ ಕಾಂಗ್ರೆಸ್ ಪಕ್ಷ ಎಂದು ಹೇಳುತ್ತಿರುವ ಬಿಜೆಪಿಯು ಮಹಿಳೆಯರ ಭಾವನೆ ಜೊತೆ ಚೆಲ್ಲಾಟ ಆಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಸುದ್ದಿಗೋಷ್ಟಿಯಲ್ಲಿ ಪ್ರಶ್ನಿಸಿದ್ದಾರೆ.
ಪ್ರತಿಪಕ್ಷಗಳು ಡಿಲಿಮಿಟೇಶನ್ ಮಸೂದೆಗೆ ವಿರೋಧ ವ್ಯಕ್ತಪಡಿಸಿವೆಯೇ ವಿನಾಃ ಮಹಿಳಾ ಮೀಸಲಾತಿ ಮಸೂದೆಗಲ್ಲ. ಕೇಂದ್ರ ಸರ್ಕಾರವು ಪ್ರಾಮಾಣಿಕವಾಗಿದ್ದರೆ 2023 ರ ಕಾನೂನನ್ನು ಜಾರಿಗೆ ತರಬೇಕು.
ನಾರಿ ಶಕ್ತಿ ವಂದನ ಚೌಕಟ್ಟು ಎಂದು ವ್ಯಾಪಕವಾಗಿ ಕರೆಯಲ್ಪಡುವ 2023ರ ಕಾನೂನು, ಶಾಸಕಾಂಗಗಳಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿಯ ಅನುಷ್ಠಾನವನ್ನು ಹೊಸ ಜನಗಣತಿಯನ್ನು ಪೂರ್ಣಗೊಳಿಸಿ ನಂತರ ಡಿಲಿಮಿಟೇಶನ್ ಬಗ್ಗೆ ಚರ್ಚಿಸಿ
ಅನುಷ್ಠಾನಗೊಳಿಸಲಿ. ಅದನ್ನು ಬಿಟ್ಟು ವಿನಾಕಾರಣ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕೇಂದ್ರ ಸರ್ಕಾರಕ್ಕೆ ಸೋಲಾಗಿರುವುದು “ಪ್ರಜಾಪ್ರಭುತ್ವದ ಗೆಲುವು. ಭಾರತದ ಒಕ್ಕೂಟ ರಚನೆ ಬದಲಾಯಿಸಲು ಮುಂದಾಗಿದ್ದಕ್ಕೆ ತಕ್ಕ ಶಾಸ್ತಿಯಾಗಿದೆ. ಪ್ರಜಾಪ್ರಭುತ್ವ ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಪಿತೂರಿಗೆ ತಕ್ಕ ಉತ್ತರ ನೀಡಲಾಗಿದೆ. ಇದು ಸಂವಿಧಾನಕ್ಕೆ ಸಿಕ್ಕ ಗೆಲುವು, ದೇಶಕ್ಕೆ, ವಿರೋಧ ಪಕ್ಷದ ಒಗ್ಗಟ್ಟಿಗೆ ಸಿಕ್ಕ ಗೆಲುವು.
ಉತ್ತರ ಭಾರತದಲ್ಲಿ ಹೆಚ್ಚು ಸ್ಥಾನಗಳನ್ನು ಸೃಷ್ಟಿಸಿ ಹೇಗಾದರೂ ಅಧಿಕಾರದಲ್ಲಿ ಉಳಿಯಬೇಕೆಂಬ ಬಿಜೆಪಿಯ ಪಿತೂರಿ ಜನರಿಗೆ ಅರ್ಥವಾಗಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಕಡಿಮೆ ಸ್ಥಾನ ಆಗುವ ಆತಂಕ ಇದೆ. ಯಾವುದೇ ರೀತಿಯಲ್ಲಿಯೂ ಚರ್ಚಿಸದೇ ಏಕಾಏಕಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಜಾರಿಗೆ ಮುಂದಾಗಿದ್ದೇಕೆ ಎಂದು ಕವಿತಾ ಚಂದ್ರಶೇಖರ್
ಪ್ರಶ್ನಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಎಸ್ ಎಲ್ ಸಿ ಫಲಿತಾಂಶ | ಭರತ್ ಜಿ ರಾಜ್ಯಕ್ಕೆ ಪ್ರಥಮ ; ನನ್ನ ಕ್ಷೇತ್ರದ ವಿದ್ಯಾರ್ಥಿ ಸಾಧನೆಗೆ ಸಲ್ಯೂಟ್ ಶಾಸಕ ಕೆ.ಎಸ್.ಬಸವಂತಪ್ಪ ಹರ್ಷ
ಸುದ್ದಿದಿನ,ದಾವಣಗೆರೆ:ಇವತ್ತು ನನಗೆ ಬಹಳ ಸಂತೋಷದ ದಿನ. ನನ್ನ ಕ್ಷೇತ್ರದ ಕಬ್ಬಳ ಗ್ರಾಮದ ಒಬ್ಬ ರೈತ ಕುಟುಂಬದಿಂದ ಬಂದ ಜಿ.ಭರತ್ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 625ಕ್ಕೆ 625 ಅಂಕ ಪಡೆದಿರುವುದು ನನಗೆ ಬಹಳ ಹೆಮ್ಮೆ ತಂದಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.
ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಶಾಲೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಜಿ.ಭರತ್ ಮತ್ತು ಪೋಷಕರನ್ನು ಅಭಿನಂದಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಕ್ಷೇತ್ರದ ವಿದ್ಯಾರ್ಥಿ ಇಷ್ಟು ದೊಡ್ಡ ಸಾಧನೆ ಮಾಡಿರುವುದು ಸಂತಸದ ವಿಷಯ. ವಿದ್ಯಾ ಲಕ್ಷ್ಮಿ ಶಾಲೆಯವರು ಬಹಳ ಪ್ರಾಮಾಣಿಕವಾಗಿ ಮಕ್ಕಳ ಶಿಕ್ಷಣದ ಬಗ್ಗೆ ಆಸಕ್ತಿ ತೋರಿಸಿ ಅವರನ್ನು ಉನ್ನತ ಮಟ್ಟಕ್ಕೆ ತರಲು ಶ್ರಮಿಸಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು.
ನಮಗೆ ಮೊದಲ ಆದ್ಯತೆ ದೇಗುಲಗಳಿಗಿಂತ ಶಾಲೆಗಳಿಗೆ ಇರಬೇಕು. ಇಂತಹ ಶಾಲೆಯೆಂಬ ದೇಗುಲದಿಂದ ಹೊರ ಬರುವ ಭರತ್ನಂತಹ ಮಕ್ಕಳು ಮುಂದಿನ ದಿನಗಳಲ್ಲಿ ಈ ದೇಶದ ಉನ್ನತ ಅಧಿಕಾರಿಗಳಾಗಿ ಅಥವಾ ವಿಜ್ಞಾನಿಗಳಾಗಿ ಸೇವೆ ಸಲ್ಲಿಸುವಂತಾಗಲಿ ಎಂದು ಶುಭ ಹಾರೈಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


