Connect with us

ದಿನದ ಸುದ್ದಿ

ಭೀಮೋದ್ಯಮಿಗಳ ಯಶೋಗಾಥೆ : ಚಿನ್ನ-ಬೆಳ್ಳಿ ಪ್ರಮೋದ್ ಎಂಬ ದಲಿತ ಯುವಕನ ಸಕ್ಸೆಸ್ ಸ್ಟೋರಿ

Published

on

  • ನಾಗರಾಜ್ ಹೆತ್ತೂರ್

ದುಕಿಗಾಗಿ ಚಿನ್ನ ಗಿರವಿ ಇಟ್ಟವ ಮುಂದೊಂದು ದಿನ ಚಿನ್ನದಂಗಡಿಯ ಮಾಲೀಕನಾದ. ಕೇವಲ 95 ಸಾವಿರದಿಂದ 70 ಕೋಟಿ ವ್ಯವಹಾರ ನಡೆಸುವ ಪ್ರಮೋದ್ ಅವರು,

  • ಅಂಬೇಡ್ಕರ್ ಇಲ್ಲದಿದ್ದರೆ ನಾನಿಲ್ಲ….! ಈ ಯಶಸ್ಸಿಗೆ ಅವರೇ ಕಾರಣ
  • ಕೇವಲ 95 ಸಾವಿರದ ಮೂಲ ಬಂಡವಾಳ ಈಗ ವಾರ್ಷಿಕ 70 ಕೋಟಿ ವ್ಯವಹಾರ
  • ದಲಿತರು ಜ್ಯೂಯಲರಿ ಶಾಪ್ ಮಾಡುತ್ತಾರಾ ಎಂದು ನಕ್ಕು ಅವಮಾನಿಸಿದ್ದರು

ಅದು 1995 ರ ಇಸವಿ. ಡಿಗ್ರಿ ಓದುತ್ತಿದ್ದ ಆ ಯುವಕನ ತಲೆಯಲ್ಲಿ ಏನಾದರೂ ಬ್ಯುಸಿನೆಸ್ ಮಾಡಬೇಕೆಂಬ ಹಂಬಲ. ಮದ್ಯಾಹ್ನ ಕಾಲೇಜು ಮುಗಿಯುತ್ತಿತ್ತು. ಆ ಸಮಯದಲ್ಲಿ ಏನು ಮಾಡು ವುದು? ತಲೆಯಲ್ಲಿ ನೂರೆಂಟು ಯೋಚನೆ. ಕಾಲೇಜು ನಡುವೆ ಪಾರ್ಟ್ ಟೈಂ ಗೆ ಸೇರಿಕೊಂಡಿದ್ದು ಜ್ಯೂಯಲರಿ ಶಾಪ್ ಒಂದಕ್ಕೆ ಕೆಲಸಗಾರನಾಗಿ. ಕಣ್ಣೆದುರಿಗೆ ಇದ್ದ ಚಿನ್ನವನ್ನು ನೋಡಿದಾಗ ಇದು ನಮ್ಮಂತಹವರಿಗಲ್ಲ ಅಂದುಕೊಂಡಿದ್ದೆ ಹೆಚ್ಚು. ಇಷ್ಟಕ್ಕೂ ದಲಿತರು ಚಿನ್ನ ಬೆಳ್ಳಿ ಕ್ಷೇತ್ರದಲ್ಲಿ ಕಾಲಿರಿಸಿ ಉಳಿದುಕೊಳ್ಳುವುದುಂಟೆ? ಚಿನ್ನ, ಬೆಳ್ಳಿ ಉದ್ಯಮ ಎಂದರೆ ಅದು ಮಾರ್ವಾಡಿ, ಸೇಠುಗಳ ಉದ್ಯಮ. ಆ ಉದ್ಯಮದಲ್ಲಿ ದಲಿತರು ಕಾಲುಡಲು ಸಾಧ್ಯವೇ ..? ಹಾಗೆ ಸುಮ್ಮನೆ ನೆನಪಿಸಿಕೊಳ್ಳಲೂ ಅಸಾಧ್ಯದ ಮಾತು.

ವಾಸ್ತವದಲ್ಲಿ ಯಾವ ದಲಿತ ಕುಟುಂಬದಿಂದ ಬಂದವನೂ ಕಲ್ಪಿಸಿಕೊಂಡಿರುವುದೂ ಇಲ್ಲ. ಆದರೆ ಆ ಯುವಕ ಯಾರೂ ತುಳಿಯದ ಹಾದಿಯಲ್ಲಿ ಹೋಗಲು ಬಯಸಿದ್ದ. ಅಲ್ಲಿ 2 ವರ್ಷ ಕೆಲಸ ಮಾಡಿದ್ದಾಯಿತು. ಅನುಭವ ಪಡೆದಿದ್ದೂ ಆಯಿತು. ಅಷ್ಟರಲ್ಲಿ ಡಿಗ್ರಿ ಮುಗಿದಿತ್ತು. ನಾನೇಕೆ ಚಿನ್ನಬೆಳ್ಳಿ ಕ್ಷೇತ್ರಕ್ಕೆ ಕಾಲಿಡಬಾರದು…,? ನಾನೂ ಒಂದು ಜ್ಯೂಯಲರಿ ಅಂಗಡಿ ತೆರಯಬಾರದೇಕೆ? ಅದೊಂದು ದಿನ ಈ ಯೋಚನೆ ತಲೆಗೆ ಹೊಳೆದಿತ್ತು. ಅದೊಂದು ದಿನ ಆ ಕೆಲಸಕ್ಕೆ ಕೈ ಹಾಕಿದ ಆ ಹುಡುಗ ಮತ್ತೆ ಹಿಂದೆ ನೋಡಲೇ ಇಲ್ಲ.

ಸ್ನೇಹಿತರೊಬ್ಬರು ಗಿರವಿ ಇಟ್ಟು ಕೊಟ್ಟ ಐವತ್ತು ಸಾವಿರ ರೂಪಾಯಿ ಮತ್ತು ಬ್ಯಾಂಕ್‍ನಿಂದ ಕೊಟ್ಟ ತೊಂಬತ್ತೈದು ಸಾವಿರ ರೂಪಾಯಿಯಲ್ಲಿ ಆರಂಭಿಸಿದ ಚಿನ್ನ ಬೆಳ್ಳಿ ವಹಿವಾಟು ಇಂದು ವರ್ಷಕ್ಕೆ ಐವತ್ತು ಕೋಟಿ ವಹಿವಾಟು ನಡೆಸುತ್ತಿದೆ. ಜಾತಿ- ಧರ್ಮಗಳನ್ನು ಮೀರಿ ಆ ಯುವಕ ಒಬ್ಬ ಯಶಸ್ವಿ ಉದ್ಯಮಿಯಾಗಿ ಹೊರ ಹೊಮ್ಮಿದ್ದಾರೆ. ನಂಬಿಕೆ ಮತ್ತು ಕೆಲಸದ ಮೇಲೆ ಶ್ರದ್ಧೆ ಇದ್ದರೆ ದಲಿತರು ಯಾವುದೇ ಕ್ಷೇತ್ರದಲ್ಲಿ ಯಶಸ್ವಿಯಾಗಬಹುದು ಎಂದು ತೋರಿಸಿದ್ದಾರೆ ಹಾಸನದ ಆಕಾಶ್ ಜ್ಯೂಯಲರ್ಸ್ ಮಾಲೀಕ ಬಿ.ಎನ್ ಪ್ರಮೋದ್. ಅವರು ಬೆಳೆದ ಪರಿಯನ್ನು ಅವರ ಬಾಯಿಂದಲೇ ಕೇಳೋಣ:

ಕೈಯ್ಯಲ್ಲಿ ಬಿಡಿಗಾಸಿಲ್ಲದೇ ಆರಂಭಿಸಿದ ಆಕಾಶ್ ಜ್ಯೂಯಲರ್ಸ್

ಪಾರ್ಟ್ ಟೈಂ ನಲ್ಲಿ ನಾನು ಕೆಲಸ ಮಾಡ ಬೇಕೆಂದು ಓಡಾಡುತ್ತಿದ್ದಾಗ ಇಲ್ಲೊಬ್ಬರು ರಾಜಾಸ್ತಾನದವರಿದ್ದರು. ಅಂಗಡಿ ಹೆಸರು ಮನೋಜ ಬ್ಯಾಂಕರ್ಸ್ನ ಮಾಲೀಕ ಶಾಂತಿ ಲಾಲ್ ಗುಲ್ ಗುಲಿಯಾ ಅವರ ಹತ್ತಿರ ಸೇರಿಕೊಂಡೆ. ಡಿಗ್ರಿಗೆ ಹೋಗುತ್ತಲೇ ಫ್ರೀ ಟೈಂ ನಲ್ಲಿ ಅಂಗಡಿಯಲ್ಲಿ ಪಾರ್ಟ್ ಟೈಂ ಕೆಲಸವನ್ನು 2 ವರ್ಷ ಮಾಡಿದೆ. ಒಳ್ಳೆ ಅನುಭವ ಸಿಕ್ಕಿತು. ನಾವೇ ಏಕೆ ಮಾಡಬಾರದು ಎಂದು ಮನಸ್ಸಾಯಿತು. ಪಾರ್ಟ್‍ನರ್ ಯಾರೂ ಇರಲಿಲ್ಲ, ಮನೆಯಲ್ಲಿ ಬಡತನ. ಕೈಯ್ಯಲ್ಲಿ ಹಣವಿಲ್ಲ. ಆದರೂ ಒಂದು ಗಟ್ಟಿ ನಿರ್ಧಾರ ತೆಗೆದುಕೊಂಡೆ. ಆಗ ನನ್ನೊಂದಿಗೆ ಇದ್ದದ್ದು ಆತ್ಮವಿಶ್ವಾಸ ಮಾತ್ರ.

ದುಡ್ಡಿಗೆ ಏನು ಮಾಡುವುದು ಎಂದು ಯೋಚಿಸಿದಾಗ ನನ್ನ ಕೈ ಹಿಡಿದವರು ದೂಪ ಪೇಪರ್ ಏಜೆನ್ಸಿ ನಡೆಸುತ್ತಿದ್ದ ದೊರೆಸ್ವಾಮಿ. ಜೀವನದಲ್ಲಿ ಅವರನ್ನು ಮರೆಯುವಂತೆಯೇ ಇಲ್ಲ. `ಸಾರ್ ಅಂಗಡಿ ಮಾಡುತ್ತಿದ್ದೇನೆ’ ಅವರು ಮರು ಮಾತ ನಾಡಲಿಲ್ಲ. ಯಾಕೆಂದರೆ ನನ್ನ ಮೇಲೆ ಅವರಿಗೆ ನಂಬಿಕೆ ಇತ್ತು. ಅವರ ಮನೆಯಲ್ಲಿದ್ದ ಚಿನ್ನ ಅಡವಿಟ್ಟು 50 ಸಾವಿರ ತಂದುಕೊಟ್ಟರು.

ಆ ಕಾಲಕ್ಕೆ ಅದು ದೊಡ್ಡ ಮೊತ್ತ. ಅದನ್ನು ತೆಗೆದುಕೊಂಡು ಹೋಗಿ ಅಡ್ವಾನ್ಸ್ ಕೊಟ್ಟೆ. ಇನ್ನೊಬ್ಬರಿಗೆ ಗಿರವಿ ಇಟ್ಟು ತಂದ ಹಣದಲ್ಲಿ ಒಂದು ಸಣ್ಣ ಟೇಬಲ್- ಕುರ್ಚಿ ಹಾಕಿಕೊಂಡು ಕಳಿತೆವು. ಆಗ ಶುರುವಾಗಿದ್ದು ಆಕಾಶ್‍ ಜ್ಯೂಯಲರ್ಸ್. ನನ್ನ ಈ ಉದ್ಯಮದ ಹಿಂದೆ ಬೆನ್ನೆಲುಬಾಗಿ ನಿಂತವರು ಶಾಂತಿ ಲಾಲ್ ಗುಲ್ ಗುಲಿಯಾ. ಅವರನ್ನೂ ಎಂದೂ ಮರೆಯುವಂತಿಲ್ಲ.

ದಲಿತರು ಜ್ಯೂಯಲರಿ ಶಾಪ್ ಮಾಡುತ್ತಾರಾ ಎಂದು ನಕ್ಕು ಅವಮಾನಿಸಿದ್ದರು

ಅಂಗಡಿ ತೆರೆದಿದ್ದಾಯಿತು, ಮೂಲ ಬಂಡವಾಳ ಬೇಕಲ್ಲವೇ..? ನಂತರ ಪಿಎಂಆರ್ ವೈ ಪ್ರಧಾನಮಂತ್ರಿ ಜವಹಾರ್‍ಲಾಲ್ ಯೋಜನೆಗೆ ಅರ್ಜಿ ಹಾಕಿದೆ. ಆಗಲೂ ಒಂದು ಕತೆ. ನಮ್ಮವರು (ದಲಿತರು) ಡಿಫಾಲ್ಟರ್ ಆಗಿದ್ದರು, ನೀವು ಸರಿಯಾಗಿ ಹಣ ಕಟ್ಟುವುದಿಲ್ಲ ನಿಮಗೆ ಕೊಡುವುದಿಲ್ಲ ಎಂದರು.

ಮೊದಲನೆಯದಾಗಿ ನಾನು ಸೆಲೆಕ್ಟೆ ಆಗಲಿಲ್ಲ. ಕಾರಣ, ಜ್ಯುಯಲರಿ ಶಾಪ್ ಮಾಡುವುದು ಅದು ದಲಿತರು…? ನನ್ನ ಮಾತು ಕೇಳಿ ಅಲ್ಲಿನ ಆಯ್ಕೆ ಸಮಿತಿ ಅಧಿಕಾರಿಗಳು ನಕ್ಕು ಅವಮಾನ ಮಾಡಿ ಕಳುಹಿದ್ದರು. ಅದೊಂದು ಅಪರಾಧ` ಎಂಬಂತೆ ನನ್ನ ನೋಡಿದ್ದರು. `ಅದು ನಿಮ್ಮಂತಹವರಿಗಲ್ಲ ಹೋಗಯ್ಯ’ ಎಂದು ಕುಹಕವಾಡಿದ್ದರು. ಇನ್ನೂ ಹೇಳುವುದಾದರೆ ಸರಕಾರದಿಂದ ಇಂತಹ ಸ್ಕೀಂ ಗೆ ಸಾಲವೇ ಇರಲಿಲ್ಲ.

ದಿ.ಚಂದ್ರ ಪ್ರಸಾದ್ ತ್ಯಾಗಿ ಹೇಳಿ ಸಾಲ ಕೊಡಿಸಿದರು

ಆಗ ನನಗೆ ನೆನಪಾಗಿದ್ದು ದಿ. ಚಂದ್ರಪ್ರಸಾದ್ ತ್ಯಾಗಿ. ಅಗವರು ಕೊಳಚೆ ನಿರ್ಮೂಲನಾ ಮಂಡಳಿ ಅಧ್ಯಕ್ಷರಾಗಿದ್ದರು. ಅವರ ಮನೆಗೆ ಹೋಗಿ ವಿಚಾರ ಹೇಳಿದೆ. ಆಗವರು ಡಿಐಸಿ ಅಧಿಕಾರಿಗಳಿಗೆ ಕರೆ ಮಾಡಿ ಚಿನ್ನ ಬೆಳ್ಳಿ ಅಂಗಡಿ ತೆರೆಯಲು ಯಾರಾದರೂ ದಲಿತರು ಅರ್ಜಿ ಹಾಕಿದ್ದಾರೆನ್ರಿ ಎಂದು ವಿಚಾರಿಸಿದರು.

ಅವರ ಮಾತಿಗೆ ಒಪ್ಪಿದ ಅಧಿಕಾರಿಗಳು ಒಲ್ಲದ ಮನಸ್ಸಿನಿಂದಲೇ ಸೆಲೆಕ್ಷನ್ ಮಾಡಿಸಿದರು. ಅಲ್ಲಿ ಸೆಲೆಕ್ಟ್ ಆದೆ. ಆದರೆ ಬ್ಯಾಂಕಿನಲ್ಲಿ ಮತ್ತೆ ರಿಜೆಕ್ಟ್ . ವಿಜಯ ಬ್ಯಾಂಕಿನ ಮೆನೆಜರ್ `ನಿಮ್ಮವರು ಕಟ್ಟುವುದಿಲ್ಲ ಹೋಗ್ರಿ ‘ಎಂದುಬಿಟ್ಟರು. ನಾನು ಅವರೆದುರು ನಿಂತು ನೇರವಾಗಿಯೇ ಹೇಳಿದೆ ಸಾರ್ ಕೊಡಿ, ನನಗೆ ಬೇರೆಯವರ ಕತೆ ಗೊತ್ತಿಲ್ಲ. ನಾನು ಕಟ್ಟುತ್ತೇನೆ ಎಂದೆ.

ಕೇವಲ 95 ಸಾವಿರದ ಮೂಲ ಬಂಡವಾಳ

ಅದೇನೋ ನನ್ನ ಅದೃಷ್ಟ. ಏಳೂವರೆ ಸಾವಿರ ಸಬ್ಸಿಡಿ ಸೇರಿ 95 ಸಾವಿರದ ಚೆಕ್ ಕೊಟ್ಟರು ಅದೇ ನನ್ನ ಮೂಲ ಬಂಡವಾಳ. ಇದನ್ನು ತೀರಿಸಲು 7 ವರ್ಷ ಬೇಕು. ಆದರೆ ಶೃದ್ಧೆಯಿಂದ ಕೆಲಸ ಮಾಡಿದೆ. ಯಶಸ್ಸು ಸಿಕ್ಕಿತು. 3 ವರ್ಷಕ್ಕೆ ಸಾಲ ತೀರಿಸಿದೆ. ನನಗೆ ಸಾಲ ಕೊಟ್ಟ ಮ್ಯಾನೇಜರ್ ಬೆಂಗಳೂರಿನಲ್ಲಿ ಚೀಪ್ ಮ್ಯಾನೆಜರ್ ಆಗಿದ್ದರು.

ಹೋಗಿ ಅವರಿಗೆ ಕೊಟ್ಟೆ. ಅವರು ಅಚ್ಚರಿಯಿಂದ ಕೂರಿಸಿಕೊಂಡು ಮಾತನಾಡಿಸಿದರು. ಅವರಿಗೆ ಹೇಳಿದೆ `ನಮ್ಮಂತಹವರು ಬಂದರೆ ಕೊಡಿ’ ಕೆಲವರು ಹಾನೆಸ್ಟ್ ಆಗಿರುತ್ತಾರೆ ಎಂದೆ. ಆ ಮೆನೆಜರ್ ಈಗ ನಿವೃತ್ತಿ ಆಗಿದ್ದಾರೆ. ಆದರೆ ಇವತ್ತಿಗೂ ನಮ್ಮ ಕಸ್ಟಮರ್. ಈಗಲೂ ಬರುತ್ತಾರೆ ಈಗವರು ಮಂಗಳೂರಿನಲಿದ್ದಾರೆ. ಅತಿ ಕಡಿಮೆ ಹಣ ಹಾಕಿ ಈ ಎತ್ತರಕ್ಕೆ ಬೆಳೆದೆ. ಇದು ಬೆಳೆದು ಬಂದ ಹಾದಿ ಇದು ಎನ್ನುತ್ತಾರೆ ಪ್ರಮೋದ್.

ಪೆಟ್ರೋಲ್ ಬಂಕ್ ಮಾಲೀಕರಾಗಿಯೂ ಯಶಸ್ವಿ

ಒಂದು ಚಿಕ್ಕ ಅಂಗಡಿ ಮಾಡಿದ್ದು. 13 ವರ್ಷ ಕೆಲಸ ಮಾಡಿದೆ. ಇಂದು ದೊಡ್ಡ ಶೋರೂಂ ಮಾಡಿದ್ದೇನೆ. ಮಂಗಳೂರಿನಲ್ಲಿ ಪೆಟ್ರೋಲ್ ಬಂಕ್ ಮಾಡಿದ್ದೇನೆ. ಅದರಲ್ಲೂ ಯಶಸ್ವಿಯಾದೆ. 25 ರಿಂದ 30 ಮಂದಿಗೆ ಕೆಲಸ ಕೊಟ್ಟಿದ್ದೇನೆ. ತಿಂಗಳಿಗೆ ಲಕ್ಷಾಂತರ ರುಪಾಯಿ ಸಂಬಳ ನೀಡುತ್ತೇನೆ. ವಾರ್ಷಿಕವಾಗಿ ಏನಿಲ್ಲವೆಂದರೂ 80 ಕೋಟಿ ವಹಿವಾಟು ನಡೆಯುತ್ತಿದೆ ಎನ್ನುತ್ತಾರೆ.

ಚಿನ್ನ ಬೆಳ್ಳಿ ವರ್ತಕರ ಸಂಘದ ಕಾರ್ಯದರ್ಶಿಯಾಗಿ

ಚಿನ್ನ -ಬೆಳ್ಳಿ ವರ್ತಕರ ಸಂಘದ ಕಾರ್ಯದರ್ಶಿಯೂ ಆಗಿರುವ ಅವರು, ಅಸೋಸಿಯೇಷನ್ ಆರಂಭದಿಂದಲೇ ಇದ್ದವರು. ವರ್ತಕರೊಂದಿಗೆ ತಮ್ಮ ಒಡನಾಟದ ಬಗ್ಗೆ ಹೇಳುವುದಿಷ್ಟು `ನಾವು ಎಲ್ಲರೊಂದಿಗೆ ಚೆನ್ನಾಗಿರಬೇಕು, ಮೇಲಾಗಿ ಇತರೆ ವರ್ಗದವರೊಂದಿಗೆ ಬೆಳೆಯಬೇಕು. ಇದಕ್ಕಾಗಿ ಬ್ರಾಡ್ ಮೈಂಡ್ ಬೆಳೆಸಿಕೊಳ್ಳಬೇಕು. ಇತರೆ ವರ್ಗದವರ ಜೊತೆ ಬಿದ್ದಾಗ ಹೆಚ್ಚು ಕಲಿತುಕೊಳ್ಳಬಹುದು.

ಇಲ್ಲಿ ನಂಬಿಕೆಯೇ ಮುಖ್ಯ. ದಲಿತ ಎನ್ನುವುದಕ್ಕಿಂತಲೂ ಒಳ್ಳೆಯ ಉದ್ದಿಮೆದಾರರಾಗ ಬೇಕು.ಸತ್ಯ ಹೇಳಬೇಕೆಂದರೆ ದಲಿತರೊಂದಿಗೆ ಇದ್ದು ಬೆಳೆಯಲು ಕಷ್ಟ. ಆದರೆ ಇತರೆ ಜನಾಂಗದವರೊಂದಿಗೆ ಬೆಳೆಯಬೇಕು. ಇಲ್ಲದಿದ್ದರೆ ಎಲ್ಲಿರುತ್ತೇವೆಯೋ ಅಲ್ಲೇ. ನಾವು ಅವರಿಂದ ಕಲಿತುಕೊಳ್ಳಬೇಕು. ಯಾಕೆ ಅವರು ಬೇಗ ಮುಂದುವರೆಯುತ್ತಾರೆ ಅವೆಲ್ಲವನ್ನೂ ನೋಡ ಬೇಕು.

ಜನ ಈಗ ನನ್ನನ್ನು ಉದ್ಯಮಿಯಾಗಿ ನೋಡುತ್ತಾರೆ

ಈಗ ನನ್ನ ಕಸ್ಟಮರ್ಸ್ ಮತ್ತು ಹೊರಜಗತ್ತು ನನ್ನನ್ನು ದಲಿತ ಎನ್ನುವುದಕ್ಕಿಂತಲೂ ಒಳ್ಳೆಯ ಉದ್ದಿಮೆದಾರನಾಗಿ ನನ್ನನ್ನು ನೋಡುತ್ತಾರೆ. ಇತ್ತೀಚೆಗಷ್ಟೆ ರಾಜ್ಯ ಜ್ಯೂಯಲರಿ ಅಸೋಸಿಯಷನ್. ಇಡೀ ರಾಜ್ಯದಲ್ಲಿ ಈ ಉದ್ಯಮದಲ್ಲಿರುವ ದಲಿತರ ಪೈಕಿ ನಾನು ಮತ್ತು ಬೆಂಗಳೂರಿನಲ್ಲಿರುವ ಒಬ್ಬರು.

ಯಾವುದನ್ನು ನಾವು ಜೀವನದ ಪ್ರಮುಖ ವಸ್ತು, ಕೈಗೆಟಗದ ವಸ್ತು ಎಂದು ಕೊಂಡಿದ್ದೇವೋ ಅದೇ ಚಿನ್ನವನ್ನು ಇಂದು ಮಾರಾಟ ಮಾಡುತ್ತೇವೆ, ಇಂಪೋರ್ಟ್ ಮಾಡಿಕೊಳ್ಳುತ್ತೇವೆ. ನಮ್ಮದು ಚಿನ್ನದೊಂದಿಗೆ ಬದುಕು ಎನ್ನುವಂತಾಗಿದೆ. ಇದೇ ಚಿನ್ನವನ್ನು ಅಡ ಇಟ್ಟು ಅಂಗಡಿ ಕಟ್ಟಿದ್ದು ಎಂದರೆ ಒಂದು ಕ್ಷಣ ನಂಬಲು ಆಗುವುದಿಲ್ಲ.

ಬಡ ಕುಟುಂಬದಲ್ಲಿ ಹುಟ್ಟಿ ಕೋಟಿಗಟ್ಟಲೆ ವ್ಯವಹಾರ

ನಾನು ಹುಟ್ಟಿದ್ದು ಹಾಸನ ತಾಲ್ಲೂಕು ದೊಡ್ಡಬಾಗನಹಳ್ಳಿಯಲ್ಲಿ. ತಂದೆ ನಿಂಗಯ್ಯ, ತಾಯಿ ಜಯಮ್ಮ, ಡಿಗ್ರಿ ಮುಗಿದ ಸಂದರ್ಭ ನನ್ನ ತಂದೆ ತೀರಿಕೊಂಡರು. ಶಿಕ್ಷಣ ಇಲಾಖೆಯಲ್ಲಿ 4 ನೇ ದರ್ಜೆ ನೌಕರರಾಗಿದ್ದರು. ತೀರಿಕೊಂಡ ನಂತರ ತಂದೆಯ ಕೆಲಸ ನನಗೆ ಬಂತು, ತಿರಸ್ಕರಿಸಿದೆ. ನನಗೆ ಬಿಸಿನೆಸ್ ಮಾಡುವ ಹಂಬಲ. ಅಂದು ಮನೆಯವರೆಲ್ಲ ತುಂಬಾ ಒತ್ತಾಯ ಮಾಡಿದ್ದರು ಅವತ್ತು ಸರಕಾರಿ ಕೆಲಸಕ್ಕೆ ಹೋಗಿದ್ದರೆ ಈ ಮಟ್ಟಕ್ಕೆ ಬೆಳೆಯಲು ಆಗುತ್ತಿರಲಿಲ್ಲ.

ನಾವು 4 ಜನ ಇಬ್ಬರು ಗಂಡು ಇಬ್ಬರು ಹೆಣ್ಣು. ನಾನೇ ಕೊನೆ ಯವನು ಸಹೋದರ ಜಯರಾಂ ಶಿಕ್ಷಣ ಇಲಾಖೆ ಯಲ್ಲಿ ಪ್ರಥಮ ದರ್ಜೆ ನೌಕರಾಗಿದ್ದಾರೆ. ನನ್ನ ಈ ಯಶಸ್ಸಿನ ಹಿಂದೆ ಸಹೋದರ ಜಯರಾಂ ಅವರ ಪಾತ್ರ ಬಹುಮುಖ್ಯವಾಗಿದೆ. ಹಾಗೇ ಅತ್ನಿ ಎಂಸಿಇ ಕಾಲೇಜಿನ ಪ್ರೊಫೆಸರ್ ಅತ್ನಿ ಕೃಷ್ಣ, ಹಾಗೂ ಅತ್ನಿ ಮಹದೇವ್ ಹಾಗೂ ಸ್ನೇಹಿತರ ಮಾರ್ಗದರ್ಶನ ನನ್ನ ಜೀವನದಲ್ಲಿ ಪ್ರಮುಖ ಪಾತ್ರ ವಹಿಸಿದೆ ಎನ್ನುತ್ತಾರೆ ಪ್ರಮೋದ್.

ಬದುಕುವ ಛಲ ಇದ್ದರೆ ನಾವೂ ಈ ಕ್ಷೇತ್ರದಲ್ಲಿ ಯಶಸ್ವಿಯಾಗಬಹುದು

ಈ ಕ್ಷೇತ್ರದಲ್ಲಿ ಬರಲು ಐಡಿಯಾಸ್‍ಬೇಕು ಕೋಟ್ಯಾಂತರ ಹಣ ಬೇಡ . ಸ್ವಲ್ಪವೇ ಇದ್ದರೂ ಸಾಕು. ಈ ಕ್ಷೇತ್ರದಲ್ಲೂ ಜಯಿಸಬಹುದು ಹಾಗೆ ಆಸಕ್ತಿ ಇರುವ ಯುವಕರು ಬಂದರೆ ನಾನು ದಾರಿ ಹೇಳುತ್ತೇನೆ. ಅಂದ ಹಾಗೆ ಜ್ಯೂಯಲಿರಿ ಶಾಪ್ ಮಾಡಲೆಂದು ಸರಕಾರದಿಂದ ಯಾವ ಸ್ಕೀಮ್ ಕೂಡ ಇಲ್ಲ. ನಾನು ಇಲ್ಲಿಗೆ ಬರಲು ಸಹಾಯ ಮಾಡಿ ದವರೆಲ್ಲ ಇತರೆ ವರ್ಗದವರು, ಶೆಟ್ಟರು, ಗೌಡರು ಅವರೇ ಈ ಫೀಲ್ಡಿಗೆ ಕರೆತಂದವರು .

ಬಹುಶಃ ನಾನೇ ನಾದರೂ ನಮ್ಮ ಜಾತಿಯವರ ಜೊತೆ ಹೋಗಿದ್ದರೆ ಅವರನ್ನು ಎದುರಿಸುವುದು ಕಷ್ಟವಾಗುತ್ತಿತ್ತು ಎಂದು ಪ್ರಾಮಾಣಿಕವಾಗಿ ಹೇಳುತ್ತಾರೆ. ಚಿನ್ನ ಬೆಳ್ಳಿ ವರ್ತಕರೆಂದರೆ ಅದು ಸೇಟು, ಮಾರ್ವಾಡಿಗಳದ್ದು ಎಂಬಂತಿರುವ ಕ್ಷೇತ್ರದಲ್ಲಿ ದಲಿತ ಯುವಕನೊಬ್ಬ ಈ ಪರಿ ಬೆಳೆದು ನಿಂತಿದ್ದು ಯಶೋ ಗಾಥೆಯೇ ಸರಿ. ಉದ್ಯಮ ವಲಯಕ್ಕೆ ಹೊರಡುವರಿಗೆ ಪ್ರಮೋದ್ ಮತ್ತು ಅವರು ಕಟ್ಟಿ ಬೆಳೆಸಿದ ಆಕಾಶ ಜ್ಯೂಯಲರ್ಸ್ ಮಾದರಿಯಾಗಿದೆ ಎಂದರೆ ತಪ್ಪಿಲ್ಲ.

ಪ್ರಾಮಾಣಿಕತೆ ಮತ್ತು ತಾಳ್ಮೆ ಇದ್ದರೆ ಸಕ್ಸಸ್

ನಮ್ಮ ದಲಿತ ಯುವಕರು ಈ ಕ್ಷೇತ್ರಕ್ಕೆ ಬರುತ್ತಿದ್ದಾರೆ ಅದರೂ ಭಯ. ಇಲ್ಲಿ ಉಳಿದುಕೊಳ್ಳಬೇಕು ಎಂದರೆಪ್ರಾಮಾಣಿಕತೆ, ನಂಬಿಕೆ, ಆತ್ಮವಿಶ್ವಾಸ ಮತ್ತು ಶ್ರಮ ಹಾಗಿದ್ದರೆ ಮಾತ್ರ ಉದ್ಯಮ ಕ್ಷೇತ್ರದಲ್ಲಿ ಮುಂದೆ ಬರಬಹುದು. ಅದರಲ್ಲೂ ಕಾಯುವ ತಾಳ್ಮೆ ಬೇಕು. ಇನ್ನೂ ಕೆಲವರು ಭಯದಿಂದ ಬರುತ್ತಿಲ್ಲ. ಬಜೆಟ್ ಗೆ ತಕ್ಕಂತೆ ವ್ಯವಹಾರ ಮಾಡಿ ಇತಿಮಿತಿ ಸಮಸ್ಯೆಗಳು ಬರುತ್ತವೆ. ವ್ಯಾಪಾರ ಒಂದು ಕಲೆ, ಹಾಗೆಯೇ ತಾಳ್ಮೆ ಬೇಕು ನನ್ನ ಈ ಸಕ್ಸೆಸ್ ಪ್ರಯಣದಲ್ಲಿ ಈಗ ನನ್ನ ಪತ್ನಿ ನ್ಯಾ ಕೈ ಜೋಡಿಸಿದ್ದಾರೆ.

ಬಿಇ ಕಂಪ್ಯೂಟರ್ ಸೈನ್ಸ್ ಮಾಡಿರುವ ಇವರು ನನ್ನ ಜ್ಯೂವೆಲರಿ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದಾರೆ. ಜೊತೆಗೆ ವಿನೀಸ್ ಎನ್ ಪ್ರಮೋದ್ ಎಂಬ ಮಗಳಿದ್ದಾಳೆ.ಜ್ಯೂವೆಲ್ಲರಿಯನ್ನು ಇನ್ನೂ ಎತ್ತರಕ್ಕೆ ವಿಸ್ತರಿಸುವ ಉದ್ದೇಶ ಹೊಂದಿದ್ದೇವೆ. ಹಾಗೆ ನೊಂದವರಿಗೆ, ನಿರ್ಗತಿಕರಿಗೆ ಕೈಲಾದ ಸಹಾಯ ಮಾಡುತ್ತೇವೆ.

ಬಹುಮುಖ್ಯವಾಗಿ ಉದ್ಯಮ ಕ್ಷೇತ್ರಕ್ಕೆ ಬರುವರಿಗೆ ಸದಾ ಪ್ರೋತ್ಸಾಹಿಸಲು, ಯಾವುದೇ ಸಲಹೆ ಸಹಕಾರ ಕೊಡಲು ನಾನು ಸಿದ್ದನಿದ್ದೇನೆ. ಯಾರೂ ಬೇಕಾದರೂ ನನ್ನನ್ನು ಸಂಪರ್ಕಿಸಬಹುದು. ಆದರೆ ಹಣವನ್ನೇ ಮಾಡಬೇಕೆಂದು ಬರಬೇಡಿ ಎನ್ನುತ್ತಾರೆ ಪ್ರಮೋದ್.

ರಾಷ್ಟ್ರಪತಿ ಕೆ.ಆರ್. ನಾರಾಯಣ್ ನನ್ನ ಬಗ್ಗೆ ಕೇಳಿ ಬೆನ್ನುತಟ್ಟಿದ್ದರು

ಅಬ್ದುಲ್ ಕಲಾಂ ಹೇಳಿದಂತೆ, ಯಾವಾಗಲೂ ನಾವು ದೊಡ್ಡ ದೊಡ್ಡ ಕನಸುಗಳನ್ನೇ ಕಾಣಬೇಕು. ನಾನು ರಾಷ್ಟ್ರಪತಿಯನ್ನು ನೋಡುತ್ತೇನೆಂದು ಅಂದುಕೊಂಡವನೂ ಅಲ್ಲ. ಆದರೆ ಕೆ.ಆರ್. ನಾರಾಯಣ್ ಅವರನ್ನು ನೋಡಿ ಕೈ ಕುಲುಕು ಮಾತನಾಡಿದ್ದರು. ಅದು ನನ್ನ ಸ್ಮರಣೀಯವಾದ ಘಟನೆ. ಹಾಗೆ ಮಂತ್ರಿಗಳಾದ ಜಾರ್ಜ್ ಫರ್ನಾಂಡಿಸ್, ಬಂಗಾರು ಲಕ್ಮಣ್ ಹಾಗೂ ದೇಶದ ನಮ್ಮ ಸಮುದಾಯದ ಎಲ್ಲಾ ಎಂಪಿಗಳನ್ನು ಒಮ್ಮೆ ಭೇಟಿ ಮಾಡಿದ್ದು ಜೀವನದ ಬಹುಮುಖ್ಯ ಘಟನೆಗಳು ಒಬ್ಬ ಉದ್ಯಮಿಯಾಗಿ ಇದೆಲ್ಲ ಸಾಧ್ಯವಾಯಿತು. ರಾಷ್ಟ್ರಪತಿ ಭವನದಲ್ಲಿ ಅವರನ್ನು ಮುಟ್ಟಿ ಮಾತನಾಡಿಸಿದ್ದು ನನ್ನ ಜೀವನದ ಅವಿಸ್ಮರಣೀಯ ಹಾಗೂ ಅದ್ಭುತ ಕ್ಷಣಗಳು .
ಬಾಬಾಸಾಹೇಬರಿಲ್ಲದಿದ್ದರೆ ನಾನಿಲ್ಲ….! ಈ ಯಶಸ್ಸಿಗೆ ಅವರೇ ಕಾರಣ.

ಹೌದು…! ನನ್ನ ಎಲ್ಲಾ ಬೆಳವಣಿಗೆ, ಸಾಧನೆಯ ಯಶಸ್ಸಿನ ಹಿಂದಿನ ಆದರ್ಶ ಬಾಬಾಸಾಹೇಬ್ ಅಂಬೇಡ್ಕರ್. ಅವರೇ ನನ್ನ ದೇವರು. ಅವರು ಕೊಟ್ಟ ಭಿಕ್ಷೆಯಿಂದ ನಾವು ಈ ಮಟ್ಟಕ್ಕೆ ಬಂದಿದ್ದೇವೆ. ಅವರಿಲ್ಲದಿದ್ದರೆ ನಾನು ಈ ಕ್ಷೇತ್ರಕ್ಕೆ ಬರಲು ಸಾಧ್ಯವೇ ಇರುತ್ತಿರಲಿಲ್ಲ. ನನ್ನ ಮೊದಲ ಸ್ಪೂರ್ತಿ. ಅವರಿಂದಲೇ ನಾನು ಈ ಮಟ್ಟಕ್ಕೆ ಬೆಳೆಯಲು ಕಾರಣವಾಯಿತು. ನಾನೊಬ್ಬ ಅಂಬೇಡ್ಕರ್ ಅನುಯಾಯಿ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ.

(ಪ್ರಮೋದ್ , ಆಕಾಶ್ ಜ್ಯೂಯಲರ್ಸ್ ಮಾಲೀಕರು, ಹಾಸನ ಮೊ- 9448330416)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending