Connect with us

ದಿನದ ಸುದ್ದಿ

ಶ್ವಾನಗಳ ಕೌಶಲ್ಯದಿಂದ ಕೋವಿಡ್-19 ರೋಗಿಯ ಪತ್ತೆ : ನಡೆಯುತ್ತಿದೆ ಸಂಶೋಧನೆ

Published

on

  • ಡಾ. ಕಮಲೇಶ್ ಕುಮಾರ್ ಕೆ ಎಸ್, ಪಶುವೈದ್ಯಾಧಿಕಾರಿಗಳು, ಶಿವಮೊಗ್ಗ

ಮ್ಮ ಸಂಚರಣೆಗೆ ನಾವು ದೃಷ್ಟಿಯ ಮೇಲೆ ಹೇಗೆ ಅವಲಂಬಿತರಾಗಿರುತ್ತೇವೆಯೋ ಹಾಗೆಯೇ ಶ್ವಾನಗಳು ದೃಷ್ಟಿಯ ಜೊತೆಗೆ ಮುಖ್ಯವಾಗಿ ಅವುಗಳ ಮೂಗಿನ ಗ್ರಾಹಕಗಳ (receptors) ಮೇಲೆ ಹೆಚ್ಚು ಅವಲಂಬಿತವಾಗಿರುತ್ತವೆ. ಪ್ರಸ್ತುತ ಪ್ರಪಂಚದಾದ್ಯಂತ ಇರುವ ಸಾಕು ನಾಯಿಗಳು ತೋಳದಿಂದ ಉಗಮಗೊಂಡಿವೆ ಎಂದು ವೈಜ್ಞಾನಿಕವಾಗಿ ಸಾಬೀತಾಗಿದೆ.

ಕಾಡು ಪ್ರಾಣಿಗಳಾದ ತೋಳಗಳು ಸಾಮಾನ್ಯವಾಗಿ ತಮ್ಮ ನೈಸರ್ಗಿಕ ವಾಸನೆ ಗ್ರಹಿಕೆ (natural scent detection) ಕೌಶಲ್ಯದಿಂದ ಇನ್ನೊಂದು ಪ್ರಾಣಿಯನ್ನು, ತಮ್ಮ ಪ್ರದೇಶವನ್ನು ಅಥವ ಬೇಟೆಯನ್ನು ಹುಡುಕುತ್ತ ಜೀವನ ಸಾಗಿಸುತ್ತವೆ. ಇದೇ ಸಾಮರ್ಥ್ಯವು ಶ್ವಾನಗಳಿಗು ತಳೀಯವಾಗಿ (genetically) ಬಂದಿದೆ ಹಾಗೂ ನಮ್ಮ ಹಿರಿಯರು ಇದನ್ನೇ ಬಳಸಿಕೊಂಡು ತಮ್ಮ ಸಂರಕ್ಷಣೆ, ಪ್ರಾಣಿ ಬೇಟೆ ಮತ್ತು ಕುರಿಹಿಂಡು ಕಾಯುವ ಕಾವಲಿಗಾಗಿ ಬಳಸಿದ್ದಾರೆ.

ಸಾಮಾನ್ಯವಾಗಿ ಸಾಕುಪ್ರಾಣಿಯನ್ನಾಗಿ ಸಾಕುವ ಶ್ವಾನಗಳು ಬುದ್ಧಿವಂತಿಕೆ, ನೆನಪಿನ ಶಕ್ತಿ, ವಿಧೇಯತೆ, ಆಟವಾಡುವ, ಗಮನಿಸುವ ಹಾಗೂ ಪ್ರೇರಣೆ ನೀಡುವ ನೈಪುಣ್ಯತೆಯನ್ನು ಹೊಂದಿರುವುದು ನಮ್ಮೆಲ್ಲರಿಗು ತಿಳಿದಿರುವ ಸಂಗತಿ. ಇದೆಲ್ಲದಕ್ಕೂ ಮಿಗಿಲಾಗಿ ಶ್ವಾನಗಳಿಗೆ ವಾಸನೆ ಗ್ರಹಿಸುವ ಶಕ್ತಿ ಅತ್ಯಧಿಕವಾಗಿ ಇರುತ್ತದೆ. ಅವು ಮಾನವನಿಗಿಂತ ಸುಮಾರು 10,000 ದಿಂದ 1,00,000 ಪಟ್ಟು ಹೆಚ್ಚು ವಾಸನೆಯನ್ನು ಗ್ರಹಿಸುವ ಶಕ್ತಿ ಹೊಂದಿರುತ್ತವೆ ಎಂದು ವಿಜ್ಞಾನಿಗಳು ನಿರೂಪಿಸಿದ್ದಾರೆ.

ಅದರಲ್ಲೂ ಬೇಟೆಯಾಡುವ ಜಾತಿಗೆ ಸೇರಿದ ಶ್ವಾನಗಳು ಹೆಚ್ಚು ವಾಸನೆಯನ್ನು ಗ್ರಹಿಸುತ್ತವೆ. ಮನುಷ್ಯರಿಗೆ ಹೋಲಿಸಿದರೆ, ನಮಲ್ಲಿ 6 ಮಿಲಿಯನ್ ನಷ್ಟು ಇರುವ ವಾಸನೆ ಕಂಡು ಹಿಡಿಯುವ ಗ್ರಾಹಕಗಳು ಶ್ವಾನಗಳಲ್ಲಿ 300 ಮಿಲಿಯನ್ ನಷ್ಟು ಇರುತ್ತವೆ. ಅವುಗಳ ಮೂಗಿನ ಹಾಗು ಮೆದುಳಿನ (hemispheric specific brain) ರಚನೆಯು ಬಹಳಷ್ಟು ವಿಶೇಷ ಹಾಗು ವೈವಿಧ್ಯವಾಗಿರುತ್ತದೆ.

ಪ್ರಪಂಚದಾದ್ಯಂತ ಅತ್ಯುತ್ತಮವಾದ ವಾಸನೆ ಗ್ರಹಿಕೆ ಕೌಶಲ್ಯ ಹೊಂದಿರುವ ಹತ್ತು ತಳಿಯ ಶ್ವಾನಗಳು ಹೀಗಿವೆ.

  1. ಬ್ಲಡ್ ಹೌನ್ಡ್ (Blood hound)
  2. ಬಾಸೆಟ್ ಹೌನ್ಡ್ (Basset hound)
  3. ಬೀಗಲ್ (Beagle)
  4. ಜರ್ಮನ್ ಶಫರ್ಡ್ (German Shephered)
  5. ಲ್ಯಾಬ್ರೆಡರ್ ರಿಟ್ರೆವರ್ (Labrador Retriever
  6. ಬೆಲ್ಜಿಯನ್ ಮಲಿನೋಯ್ಸ್ (Belgian Malinois)
  7. ಬ್ಲ್ಯೂಟಿಕ್ ಕೂನ್ ಹೌನ್ಡ್ (Blue tick Coonhound)
  8. ಬ್ಲಾಕ್ ಅಂಡ್ ಟಾನ್ ಕೂನ್ ಹೌನ್ಡ್ (Black & tan coonhound)
  9. ಗೋಲ್ಡನ್ ರಿಟ್ರೆವರ್ (Golden Retriever)
  10. ಡಾಶ್ ಹೌನ್ಡ್ (Dachshund)

ಈ ಬೇಟೆ ತಳಿಗಳೆಲ್ಲವು ನುರಿತ ತರಬೇತುದಾರರಿಂದ ತರಬೇತಿ ಪಡೆದ ನಂತರ ಸೈನ್ಯ, ಪೊಲೀಸ್ ಇಲಾಖೆ ಹಾಗು ಬಾಂಬ್ ನಿಷ್ಕ್ರಿಯ ದಳ ಹಾಗೂ ವಿವಿಧ ಇತ್ಯಾದಿ ಕ್ಷೇತ್ರಗಳಲ್ಲಿ ತಮ್ಮ ಇರುವಿಕೆಯನ್ನು ಸಾವಿರಾರು ಉದಾಹರಣೆಗಳಿಂದ ತೋರಿಸಿವೆ. ಆದರೂ ಇದಕ್ಕೆ ಮಿಗಿಲಾಗಿ ವೈದ್ಯಕೀಯ ಕ್ಷೇತ್ರದಲ್ಲಿ ರೋಗ ಪತ್ತೆ ಹಚ್ಚುವಲ್ಲಿ ನೆರವು ನೀಡುವಲ್ಲಿ ಶ್ವಾನಗಳ ಪಾಲು ಅಪಾರ.

1980 ರಲ್ಲೇ ಕ್ಯಾನ್ಸರ್ ರೋಗವನ್ನು (ಶ್ವಾಶಕೋಶ ಹಾಗು ಸ್ಥನ ಕ್ಯಾನ್ಸರ್) 97% ನಷ್ಟು ನಿಖರತೆಯಿಂದ ಕಂಡುಹಿಡಿಯುವಲ್ಲಿ ಶ್ವಾನಗಳು ಯಶಸ್ವಿಯಾಗಿವೆ. ಮೆದುಳು ಮತ್ತು ನರಮಂಡಲಕ್ಕೆ ಸಂಬಂದಿಸಿದ ರೋಗವಾದ ಪಾರ್ಕಿನ್ಸನ್ (Parkinson) ರೋಗ, ಮಲೇರಿಯಾ (Malaria) ಹಾಗೂ ಇತರೆ ರೋಗಗಳನ್ನು ತಮ್ಮ ಚಾಣಾಕ್ಷತನದಿಂದ ಕಂಡುಹಿಡಿದಿವೆ. ಮುಖ್ಯವಾಗಿ ಶ್ವಾನಗಳು ಸೇವಿಸುವ ಆಹಾರ, ಹೊಟ್ಟೆ ಹಾಗೂ ಕರುಳಿನಲ್ಲಿನ ಸೂಕ್ಷ್ಮಾಣು ಜೀವಿಗಳು, ದೇಹದ ಸ್ಥಿತಿ ಹಾಗೂ ವೈದ್ಯಕೀಯ ಆರೈಕೆ ಅವುಗಳ ಈ ಕೌಶಲ್ಯದ ಮೇಲೆ ಪರಿಣಾಮ ಬೀರುತ್ತವೆ.

ಇಂಗ್ಲೆಂಡಿನಲ್ಲಿ ಈ ಕೌಶಲ್ಯಗಳುಳ್ಳ ಶ್ವಾನಗಳನ್ನು ಯಾವುದೇ ಲಕ್ಷಣಗಳಿಲ್ಲದ ಕೊರೊನ ವೈರಸ್ ಪೀಡಿತ ವ್ಯಕ್ತಿಯನ್ನು ಮೊದಲ ಹಂತದಲ್ಲಿ ಪತ್ತೆಹಚ್ಚುವಲ್ಲಿ ಬಳಸಲು ಸಂಶೋಧನೆ ನಡೆಯುತ್ತಿದೆ. ಉಸಿರಾಟ, ಉಗುಳು, ರಕ್ತ ಹಾಗೂ ಮೂತ್ರದಲ್ಲಿರುವ ಆವಿಯಾಗುವ ಸಾವಯವ ಸಂಯುಕ್ತಗಳನ್ನು (volatile organic compounds) ಬಳಸಿಕೊಂಡು ವಾಸನೆ ಮುದ್ರೆ (odour imprinting) ಮಾಡುತ್ತಿದ್ದಾರೆ. ಈ ರೀತಿ ಮುದ್ರೆಯಾದ ನಂತರ ಶ್ವಾನಗಳು ರೋಗ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಬಹುದು.

ಇನ್ಫಲೂಎಂಜಾ (Influenza) ರೋಗದಲ್ಲಿ ಉಸಿರಾಟದ ವಾಸನೆ ಇರುವ ರೀತಿಯಲ್ಲಿ ಕೊರೊನ ವೈರಸ್ ಪೀಡಿತರಿಗೂ ಇದ್ದಲ್ಲಿ ಅವರನ್ನು ಕಂಡುಹಿಡಿಯುವುದು ಸುಲಭವಾಗಬಹುದು ಎಂಬ ಅಭಿಪ್ರಾಯ ವಿಜ್ಞಾನಿಗಳದು. ಇಷ್ಟೆಲ್ಲಾ ಆದರೆ ಕೇವಲ ಆಸ್ಪತ್ರೆ ಅಲ್ಲದೆ ಸೂಕ್ಷ್ಮ ಪ್ರದೇಶಗಳಾದ ವಿಮಾನ ನಿಲ್ದಾಣ, ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಶ್ವಾನಗಳು ಕಾರ್ಯನಿರ್ವಹಿಸಬಹುದಾಗಿದೆ. ಇದು ಎಷ್ಟರಮಟ್ಟಿಗೆ ಉಪಯೋಗವಾಗುವುದೊ ಎಂದು ಕಾದು ನೋಡಬೇಕಿದೆ.

(ಡಾ. ಕಮಲೇಶ್ ಕುಮಾರ್ ಕೆ ಎಸ್,
ಪಶುವೈದ್ಯಾಧಿಕಾರಿಗಳು
ಪಶುಚಿಕಿತ್ಸಾಲಯ, ಮತ್ತೂರು,
ಶಿವಮೊಗ್ಗ
ಈ ಮೇಲ್ : kskamalesh93@gmail.com
ಫೋನ್ : 9164282969)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending