ದಿನದ ಸುದ್ದಿ
ಉತ್ತಮ ಇಳುವರಿ, ಒಳ್ಳೆಯ ಲಾಭ ಶೇಂಗಾ ಬೆಳೆಯ ಬೇಸಾಯ ಕ್ರಮಗಳು : ಮಿಸ್ ಮಾಡ್ದೆ ಓದಿ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/05/groundnut_Suddidina.jpg&description=ಉತ್ತಮ ಇಳುವರಿ, ಒಳ್ಳೆಯ ಲಾಭ ಶೇಂಗಾ ಬೆಳೆಯ ಬೇಸಾಯ ಕ್ರಮಗಳು : ಮಿಸ್ ಮಾಡ್ದೆ ಓದಿ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/05/groundnut_Suddidina.jpg&description=ಉತ್ತಮ ಇಳುವರಿ, ಒಳ್ಳೆಯ ಲಾಭ ಶೇಂಗಾ ಬೆಳೆಯ ಬೇಸಾಯ ಕ್ರಮಗಳು : ಮಿಸ್ ಮಾಡ್ದೆ ಓದಿ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ದಾವಣಗೆರೆ: ಪ್ರಸ್ತುತ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬಿತ್ತನೆ ಪೂರ್ವ ಉಳುಮೆ ಕಾರ್ಯ ಮುಗಿದಲ್ಲಿ, ಮಣ್ಣಿನ ತೇವಾಂಶದ ಹದ ನೋಡಿ ಶೇಂಗಾ ಬಿತ್ತನೆ ಮಾಡಬಹುದಾಗಿದೆ. ಶೇಂಗಾ ಒಂದು ಪ್ರಮುಖ ದ್ವಿದಳ ಎಣ್ಣೆಕಾಳು ಬೆಳೆಯಾಗಿದ್ದು, ಎಲ್ಲಾ ರೀತಿಯ ಹವಾಗುಣಕ್ಕೂ ಹೊಂದಿಕೊಳ್ಳುವ ಗುಣ ಹೊಂದಿದ್ದು, ಎಲ್ಲಾ ರೀತಿಯ ಮಣ್ಣಿನಲ್ಲೂ ಬೆಳೆಯಬಹುದಾಗಿದೆ.
ಸುಧಾರಿತ ಬೇಸಾಯ ಕ್ರಮಗಳು ಹಾಗೂ ಆಯಾ ಪ್ರದೇಶಕ್ಕೆ ಹೊಂದಿಕೊಳ್ಳುವಂತಹ ತಳಿಗಳ ಆಯ್ಕೆಯನ್ನು ರೈತರು ಅಳವಡಿಸಿಕೊಂಡಲ್ಲಿ ಉತ್ತಮ ಇಳುವರಿಯ ಜೊತೆಗೆ ಒಳ್ಳೆಯ ಲಾಭ ಪಡೆಯಬಹುದಾಗಿದೆ.
2020 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಸುಮಾರು 13,285 ಹೆಕ್ಟೇರ್ ಪ್ರದೇಶದಲ್ಲಿ ನೆಲಗಡಲೆ ಬೆಳೆಯುವ ಗುರಿ ಹೊಂದಲಾಗಿದ್ದು, ಜಗಳೂರು, ಹೊನ್ನಾಳಿ, ನ್ಯಾಮತಿ, ದಾವಣಗೆರೆ ಭಾಗದಲ್ಲಿ ಬೆಳೆಯಲಾಗುವುದು.
ಬಿತ್ತನೆ ಕಾಲ
ಮುಂಗಾರು ಮಳೆಯಾಶ್ರಿತ ನೆಲಗಡಲೆಯನ್ನು ಮೇ ತಿಂಗಳ ಎರಡನೇ ವಾರದಿಂದ ಜುಲೈ ತಿಂಗಳ ಎರಡನೇ ವಾರದೊಳಗೆ ಬಿತ್ತನೆ ಮಾಡಬಹುದು.
ಸುಧಾರಿತ ತಳಿಗಳ ಆಯ್ಕೆ: ತಳಿಗಳು
ಟಿ.ಎಂ.ವಿ-2, ಜಿ.ಪಿ.ಬಿ.ಡಿ-4 & 5, ಜಿ-252, ಕೆ-6. ಪ್ರಮಾಣಿತ ಬಿತ್ತನೆ ಬೀಜವನ್ನು ಪ್ರತಿ ಮೂರು ಹಂಗಾಮಿನಲ್ಲೊಮ್ಮೆ ಬಳಸಬೇಕು. ಪ್ರಮಾಣಿತ ಬಿತ್ತನೆ ಬಳಸಿದ ಮಾದರಿ ಬೆಳೆ ತಾಕಿನಿಂದ ಬಿತ್ತನೆ ಬೀಜ ಆಯ್ಕೆ ಮಾಡಬಹುದಾಗಿದೆ.
ಬೀಜೋಪಚಾರ
ಬೀಜ ಬಿತ್ತನೆ ಮಾಡುವ ಮೊದಲು ಪ್ರತಿ ಕಿ.ಗ್ರಾಂ ನೆಲಗಡಲೆ ಬೀಜಕ್ಕೆ 2.5 ಗ್ರಾಂ ಥೈರಾಮ್ ಪುಡಿಯನ್ನು ಬೆರಸಿ, ನೆರಳಿನಲ್ಲಿ ಒಣಗಿಸಬೇಕು, ನಂತರ ಒಂದು ಎಕರೆ ಬಿತ್ತನೆ ಬೀಜಕ್ಕೆ 150 ಗ್ರಾಂ ರೈಜೋಬಿಯಂ & 400 ಗ್ರಾಂ. ಪಿ.ಎಸ್.ಬಿ. ಜೈವಿಕ ಗೊಬ್ಬರಗಳನ್ನು ಅಂಟು ದ್ರಾವಣ ಬಳಸಿ ಉಪಚರಿಸಿ ಬಿತ್ತನೆಗೆ ಬಳಸಬೇಕು.
ಗೊಣ್ಣೆ ಹುಳು – ಗೆದ್ದಲು ಹುಳುಗಳ ಬಾಧೆ ಇದ್ದಲ್ಲಿ ಕಿ.ಗ್ರಾಂ ಬಿತ್ತನೆ ಬೀಜಕ್ಕೆ 15 ಮಿ.ಲೀ. ಕ್ಲೊರೋಫೈರಿಫಾಸ್ನ್ನು ಬೀಜಕ್ಕೆ ಹಾನಿಯಾಗದಂತೆ ಲೇಪಿಸಿ ಬಿತ್ತನೆ ಮಾಡುವುದು. ಬೀಜೋಪಚಾರದ ಸಮಯದಲ್ಲಿ ಮೊದಲು ಕೀಟನಾಶಕದಿಂದ ಉಪಚರಿಸಿ ನಂತರ ಜೈವಿಕ ಗೊಬ್ಬರದಿಂದ ಉಪಚರಿಸಬೇಕು.
ಬೀಜ ಪ್ರಮಾಣ – ಅಂತರ
ಪ್ರತಿ ಎಕರೆಗೆ 45 ಕಿ.ಗ್ರಾಂ ಬಿತ್ತನೆ ಬೀಜವನ್ನು 30 ಸೆಂ.ಮೀ x 15 ಸೆಂ.ಮೀ ಅಂತರದ ಸಾಲಿನಲ್ಲಿ ಬಿತ್ತ ಬಹುದಾಗಿದೆ.
ಅಂತರ ಬೆಳೆ
ಶೇಂಗಾ ಬೆಳೆಯಲ್ಲಿ 4 ರಿಂದ 6 ಸಾಲಿಗೆ ಒಂದು ಸಾಲು ತೊಗರಿ ಬೆಳೆಯಬಹುದು. ಇಡಿ ಶೇಂಗಾ ಬೆಳೆ ಬಿತ್ತನೆ ಮಾಡುವಾಗ ಕೊತ್ತುಂಬರಿ, ಹೆಸರು, ಅಲಸಂದೆ, ಉದ್ದು, ನವಣೆ, ಸಾಸುವೆ ಬೆಳೆಗಳನ್ನು ಶೇಂಗಾ ಸಾಲಿನಲ್ಲಿಯೇ ಮಿಶ್ರ ಬೆಳೆಯಾಗಿ ಬೆಳೆಯುವುದರಿಂದ ಉತ್ಪಾದಕತೆ ಮತ್ತು ಆದಾಯ ಹೆಚ್ಚಿಸಬಹುದಾಗಿದೆ.
ಪೋಷಕಾಂಶ ನಿರ್ವಹಣೆ
ಭೂಮಿಯನ್ನು ಚೆನ್ನಾಗಿ ಹದ ಮಾಡಿದ ನಂತರ ಶಿಫಾರಸ್ಸು ಮಾಡಿದ 4 ಟನ್ ಸಾವಯವ ಗೊಬ್ಬರವನ್ನು ಬಿತ್ತನೆಗೆ 2-3 ವಾರ ಮೊದಲು ಬಿತ್ತನೆ ಸಮಯದಲ್ಲಿ ಬಳಸಬೇಕು ಹಾಗೂ ರಸಾಯನಿಕ ಗೊಬ್ಬರಗಳಾದ 10 ಕಿ.ಗ್ರಾಂ
ಸಾರಜನಕ
20 ಕಿ.ಗ್ರಾಂ ರಂಜಕ, 10 ಕಿ.ಗ್ರಾಂ ಪೊಟ್ಯಾಷ್ನ್ನು ಬಿತ್ತನೆ ಸಮಯದಲ್ಲಿ ಹಾಕುವುದು.ಎಕರೆಗೆ 4 ಕಿ.ಗ್ರಾಂ ಸತುವಿನ ಸಲ್ಫೇಟ್ ಹಾಗೂ 4 ಕಿ.ಗ್ರಾಂ ಬೋರಾಕ್ಸ್ನ್ನು ಸಾವಯವ ಗೊಬ್ಬರಗದೊಂದಿಗೆ ಮಿಶ್ರಣ ಮಾಡಿ ಬಿತ್ತುವ ಸಂದರ್ಭದಲ್ಲಿ ಎರಚಬೇಕು.
ಸಾಮಾನ್ಯವಾಗಿ ರೈತರು ಸಾರಜನಕ, ರಂಜಕ, ಪೊಟ್ಯಾಷ್ ಗೊಬ್ಬರವನ್ನು ಬಳಸುತ್ತಾರೆ. ಆದರೆ ಎಣ್ಣೆಕಾಳು ಬೆಳೆಯಾದ ನೆಲಗಡಲೆಗೆ ಕ್ಯಾಲ್ಸಿಯಂ ಮತ್ತು ಗಂಧಕದ ಅವಶ್ಯಕತೆ ಅಗತ್ಯವಾಗಿರುವುದರಿಂದ ರೈತ ಬಾಂಧವರು ಇತರೆ ಗೊಬ್ಬರಗಳ ಜೊತೆಗೆ ಜಿಪ್ಸಂನ್ನು ಬೆಳೆಗೆ ಪೂರೈಸುವುದು ಅತ್ಯವಶ್ಯಕವಾಗಿದೆ. ಇದರಿಂದಾಗಿ ಕಾಯಿ ಗಟ್ಟಿಯಾಗುವಿಕೆ, ಎಣ್ಣೆ ಅಂಶ ಜಾಸ್ತಿಯಾಗುವುದರಿಂದ ಜೊಳ್ಳು ಬೀಜಗಳು ಕಡಿಮೆಯಾಗಿ ಶೇ. 18 ರಿಂದ 20 ರಷ್ಟು ಇಳುವರಿ ಹೆಚ್ಚಾಗುವುದು.
ಬಿತ್ತನೆ ಸಮಯದಲ್ಲಿ ಎಕರೆಗೆ 2 ಕ್ವಿಂಟಾಲ್ ಜಿಪ್ಸಂ ಅನ್ನು ಸಾಲಿನ ಮಧ್ಯೆ ಹಾಕುವುದು. ಅಥವಾ 40 ರಿಂದ 45 ದಿನದ ಬೆಳೆಗೆ / ಹೂ ಬಿಡುವ ಹಂತದ ಸಮಯದಲ್ಲಿ 2 ಸಾಲುಗಳ ಮಧ್ಯೆ ಹಾಕಿ ಎಡೆ ಹೊಡೆಯುವುದು. ಮೂಟೆ ಲೆಕ್ಕದಲ್ಲಿ ರಸಗೊಬ್ಬರ ಬಳಸದೇ ಮಣ್ಣು ಪರೀಕ್ಷೆ ಆಧಾರದ ಮೇಲೆ ರಸಗೊಬ್ಬರ ಬಳಸಬೇಕು. ರಸಗೊಬ್ಬರಗಳನ್ನು ಅಧಿಕೃತ ಮಾರಾಟಗಾರರಿಂದ ನಿಗಧಿತ ಬಿಲ್ಲು ಪಡೆದು ಖರೀದಿಸಬೇಕು.
ಕಳೆ ನಿರ್ವಹಣೆ
ಬಿತ್ತಿದ ದಿವಸ – ಮಾರನೆ ದಿವ ಎಕರೆಗೆ 1 ಲೀಟರ್ ಅಲಾಕ್ಲೋರ್ 50 ಇ.ಸಿ. ಅಥವಾ 800 ಮು.ಲೀ.ಮೆಟಾಲ್ಕ್ಲೋರ್ 50 ಇ.ಸಿ. ಕಳೆನಾಶಕವನ್ನು 300 ಲೀ. ನೀರಿನಲ್ಲಿ ಬೆರಸಿ ಸಿಂಪರಣೆ ಮಾಡಬೇಕು. ಸಿಂಪರಣೆ ಸಮಯದಲ್ಲಿ ಮಣ್ಣಿನಲ್ಲಿ ಸಾಕಷ್ಟು ತೇವಾಂಶವಿರಬೇಕು.
ಅಂತರ ಬೇಸಾಯ
ಬಿತ್ತಿದ 15 ದಿವಸಗಳ ನಂತರ, 10 ದಿವಸಗಳ ಅಂತರದಲ್ಲಿ 3 ಬಾರಿ ಕುಂಟೆ ಹಾಯಿಸಬೇಕು. ಯಾವುದೇ ಕಾರಣಕ್ಕೂ ಬಿತ್ತಿದ 45 ದಿವಸಗಳ ನಂತರ ಕುಂಟೆ ಹಾಯಿಸಬಾರದು ಎಂದು ಕೃಷಿ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.
ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.
ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ಅಂತರಂಗ4 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ7 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ2 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ3 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ3 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ14 hours agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

