Connect with us

ದಿನದ ಸುದ್ದಿ

ಮೇ 31 ರವರೆಗಿನ ಲಾಕ್‍ಡೌನ್ ಮಾರ್ಗಸೂಚಿಗಳು : ಮಿಸ್ ಮಾಡ್ದೆ ಓದಿ

Published

on

ಸುದ್ದಿದಿನ,ದಾವಣಗೆರೆ: ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಲಾಕ್‍ಡೌನ್ ಕುರಿತ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಈ ಕೆಳಗಿನಂತೆ ಆದೇಶ ಹೊರಡಿಸಿದ್ದಾರೆ.

ಈ ಮಾರ್ಗಸೂಚಿಗಳನ್ನು ಎಲ್ಲಾ ಇಲಾಖೆಗಳಿಗೆ, ಪೊಲೀಸ್ ವರಿಷ್ಟಾಧಿಕಾರಿಗಳಿಗೆ, ಸ್ಥಳೀಯ ಅಧಿಕಾರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಾಹಕ ದಂಡಾಧಿಕಾರಿಗಳು, ಆಯುಕ್ತರು, ಮಹಾನಗರಪಾಲಿಕೆ ಮತ್ತು ಇತರೆ ಇಲಾಖೆ ಮುಖ್ಯಸ್ಥರು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಈ ಮೂಲಕ ಆದೇಶಿಸಲಾಗಿದೆ. ಈ ಮಾರ್ಗಸೂಚಿಗಳು ಮೇ.31 ರವರೆಗೆ ಜಾರಿಯಲ್ಲಿರುತ್ತದೆ.

1. ಚಟುವಟಿಕೆಗಳು ನಿಷೇಧ

ವೈದ್ಯಕೀಯ ಸೇವೆಗಳು, ಏರ್ ಆಂಬುಲೆನ್ಸ್, ಭದ್ರತಾ ಉದ್ದೇಶಗಳು ಹಾಗೂ ಕೇಂದ್ರಿಯ ಗೃಹ ಮಂತ್ರಾಲಯದಿಂದ ಅನುಮತಿಸಲಾದ ಉದ್ದೇಶಗಳನ್ನು ಹೊರತುಪಡಿಸಿ, ಎಲ್ಲಾ ದೇಶೀಯ ಮತ್ತು ಅಂತರಾಷ್ಟ್ರೀಯ ಪ್ರಯಾಣ ವಿಮಾನಯಾನ.

ಶಾಲೆಗಳು, ಕಾಲೇಜುಗಳು, ಶೈಕ್ಷಣಿಕ/ತರಬೇತಿ/ಕೋಚಿಂಗ್ ಸಂಸ್ಥೆಗಳು ಇತ್ಯಾದಿಗಳು ಮುಚ್ಚಲ್ಪಡುತ್ತವೆ. ಆನ್‍ಲೈನ್/ದೂರ ಶಿಕ್ಷಣ ಕಲಿಕೆಗೆ ಅನುಮತಿಸಲಾಗಿದೆ ಮತ್ತು ಪ್ರೋತ್ಸಾಹಿಸುವುದು.

ಆರೋಗ್ಯ/ಪೊಲೀಸ್/ಸರ್ಕಾರಿ ಅಧಿಕಾರಿಗಳು/ಆರೋಗ್ಯ ಪಾಲನೆ ಕಾರ್ಯಕರ್ತರು, ಪ್ರವಾಸಿಗರನ್ನು ಒಳಗೊಂಡಂತೆ, ಸಿಲುಕಿಕೊಂಡಿರುವ ವ್ಯಕ್ತಿಗಳು ತಂಗಿದ್ದ ಮನೆಗಳನ್ನು ಹೊರತುಪಡಿಸಿ ಕ್ವಾರಂಟೈನ್ ಸೌಲಭ್ಯಕ್ಕಾಗಿ, ಬಸ್ ಡಿಪೋ, ರೈಲ್ವೆ ಸ್ಟೇಷನ್ ಮತ್ತು ವಿಮಾನ ನಿಲ್ದಾಣಗಳಲ್ಲಿ ನಡೆಸುವ ಕ್ಯಾಂಟೀನ್‍ಗಳನ್ನು ಹೊರತುಪಡಿಸಿ, ಹೋಟೆಲ್‍ಗಳು/ರೆಸ್ಟೋರೆಂಟ್‍ಗಳು ಹಾಗೂ ಇತರೆ ಅತಿಥ್ಯ ಸೇವೆಗಳನ್ನು ನಿಷೇಧಿಸಿದೆ.

ಆಹಾರ ಪದಾರ್ಥಗಳು/ಪಾರ್ಸೆಲ್‍ಗಳನ್ನು ಮನೆ ವಿತರಣೆಗಾಗಿ ರೆಸ್ಟೋರೆಂಟ್‍ಗಳ ಅಡಿಗೆ ಮನೆಗಳನ್ನು ನಿರ್ವಹಿಸಲು ಅನುಮತಿ ನೀಡಲಾಗಿದೆ.

ಎಲ್ಲಾ ಸಿನಿಮಾ ಮಂದಿರಗಳು, ಶಾಪಿಂಗ್ ಮಾಲ್‍ಗಳು, ಜಿಮ್‍ಗಳು, ಈಜುಕೊಳಗಳು, ಮನರಂಜನಾ ಪಾರ್ಕ್‍ಗಳು, ಬಾರ್‍ಗಳು ಮತ್ತು ಆಡಿಟೋರಿಯಂಗಳು, ಸಮಾವೇಶ ಮಂದಿರಗಳು ಮತ್ತು ಇಂತಹ ಇತರೆ ಸ್ಥಳಗಳು, ಕ್ರೀಡಾ ಸಂಕೀರ್ಣಗಳು ಮತ್ತು ಸ್ಟೇಡಿಯಂಗಳನ್ನು ತೆರೆಯಲು ಅನುಮತಿಸಲಾಗಿದೆ. ಆದರೆ ಪ್ರೇಕ್ಷಕರಿಗೆ ಅನುಮತಿ ಇರುವುದಿಲ್ಲ.

ಎಲ್ಲಾ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕøತಿಕ, ಧಾರ್ಮಿಕ ಕಾರ್ಯಕ್ರಮಗಳು, ಇತರೆ ಗುಂಪುಗೂಡುವಿಕೆ, ದೊಡ್ಡ ಸಭೆಗಳು, ಎಲ್ಲಾ ಧಾರ್ಮಿಕ ಸ್ಥಳಗಳು, ಪೂಜನೀಯ ಸ್ಥಳಗಳನ್ನು ಸಾರ್ವಜನಕರಿಗೆ ಮುಚ್ಚತಕ್ಕದ್ದು, ಧಾರ್ಮಿಕ ಸಭೆಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ.

2. ಕಂಟೈನ್‍ಮೆಂಟ್ ವಲಯಗಳನ್ನು ಹೊರತುಪಡಿಸಿ, ಅನುಮತಿ

ಪ್ರಯಾಣಿಕರ ವಾಹನಗಳು ಮತ್ತು ಬಸ್ಸುಗಳ ಅಂತರ-ರಾಜ್ಯ, ಚಲನೆ, ರಾಜ್ಯಗಳ ಪರಸ್ಪರ ಒಪ್ಪಿಗೆಯೊಂದಿಗೆ ಅನುಮತಿಸಿದೆ. ಕೆಎಸ್‍ಆರ್‍ಟಿಸಿ/ಎನ್‍ಇಕೆಆರ್‍ಟಿಸಿ/ಎನ್‍ಡಬ್ಲ್ಯೂಕೆಆರ್‍ಟಿಸಿ ಬಸ್‍ಗಳ ಅಂತರ ರಾಜ್ಯ ಸಂಚಾರಕ್ಕೆ ಮುಂಚಿತವಾಗಿ ಸಂಬಂಧಿಸಿದ ರಾಜ್ಯಗಳ ಒಪ್ಪಿಗೆಯನ್ನು ಮತ್ತು ಕರ್ನಾಟಕ ರಾಜ್ಯ ಸರ್ಕಾರದ ಅನುಮತಿ ಪಡೆಯತಕ್ಕದ್ದು.

ರಾಜ್ಯಾದ್ಯಂತ ಪ್ರವಾಸಿ ವಾಹನಗಳು, ರೈಲುಗಳು ಮತ್ತು ಬಸ್‍ಗಳು ಒಳಗೊಂಡಂತೆ ಸಾರಿಗೆ ಬಸ್ ಸೇವೆ, ಮಫೋಸಿಲ್ ಬಸ್ ಸರ್ವೀಸ್ ಮತ್ತು ಖಾಸಗಿ ಬಸ್‍ಗಳ ಸಾಮಾಜಿಕ ಅಂತರ ಕ್ರಮಗಳನ್ನು ಕೈಗೊಂಡು ಸಂಚರಿಸಲು ಅನುಮತಿಸಿದೆ. ಜನರ ಮತ್ತು ವಾಹನದ ಅಂತರ ಜಿಲ್ಲಾ ಸಂಚಾರಕ್ಕೆ ಯಾವುದೇ ಪಾಸ್ ಅಗತ್ಯವಿಲ್ಲ.

ವ್ಯಕ್ತಿಗಳ ಚಲನೆಗಾಗಿ ಪ್ರಾಮಾಣಿತ ಕಾರ್ಯಾಚರಣಾ ವಿಧಾನದ (ಎಸ್‍ಒಪಿ) ಅನುಬಂಧ-1 ರಲ್ಲಿ ಉಲ್ಲೇಖಿಸಿರುವಂತೆ ಕಾರ್ಯನಿರ್ವಹಿಸುವುದನ್ನು ಮುಂದುವರೆಸಲಾಗಿದೆ.

ಟ್ಯಾಕ್ಸಿಗಳ (ಚಾಲಕ ಮತ್ತು ಗರಿಷ್ಠ ಇಬ್ಬರು ಪ್ರಯಾಣಿಕರು) ಆಟೊ ರಿಕ್ಷಾಗಳು (ಚಾಲಕ ಮತ್ತು ಇಬ್ಬರು ಪ್ರಯಾಣಿಕರು) ಮತ್ತು ಮ್ಯಾಕ್ಸಿ ಕ್ಯಾಬ್‍ಗಳು, ಸಂಗ್ರಹಕಾರ ಸೇವೆಗಳನ್ನು ಸಾಮಾಜಿಕ ಅಂತರ ಕ್ರಮಗಳನ್ನು ಕೈಗೊಂಡು ಸಂಚರಿಸಲು ಅನುಮತಿಸಿದೆ. ಕ್ಷೌರ ಅಂಗಡಿಗಳು, ಸ್ಪಾ ಮತ್ತು ಸಲೂನ್‍ಗಳು ಸೇರಿದಂತೆ ಎಲ್ಲಾ ಅಂಗಡಿಗಳು ಕಾರ್ಯ ನಿರ್ವಹಿಸಿ ಅನುಮತಿಸಿದೆ.

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣಗಳ ಇಲಾಖೆಯಿಂದ ಹೊರಡಿಸಲಾಗುವ ಪ್ರಾಮಾಣಿತ ಕಾರ್ಯಾಚರಣ ವಿಧಾನದ ಪ್ರಕಾರ ಕ್ಷೌರ ಅಂಗಡಿಗಳು, ಸ್ಪಾಗಳು ಮತ್ತು ಸಲೂನ್‍ಗಳು ಕಾರ್ಯ ನಿರ್ವಹಿಸಲು ಅನುಮತಿಸಲಾಗಿದೆ. ಈ ಮಾರ್ಗಸೂಚಿಗಳು ಮತ್ತು ರಾಷ್ಟ್ರೀಯ ನಿರ್ದೇಶನಗಳಿಗೆ (ಅನುಬಂಧ-2) ಒಳಪಟ್ಟ ನಿರ್ದಿಷ್ಟ ಸಮಯಗಳ ನಡುವೆ ಸರ್ಕಾರಿ, ಪುರಸಭೆಯ ಉದ್ಯಾನಗಳು ಸಾರ್ವಜನಿಕರಿಗಾಗಿ ತೆರೆದಿರುತ್ತದೆ.

3. ಕೋವಿಡ್-19 ನಿರ್ವಹಣೆಗೆ ರಾಷ್ಟ್ರೀಯ ನಿರ್ದೇಶನಗಳು

ಕೋವಿಡ್-19 ನಿರ್ವಹಣೆಗೆ ರಾಷ್ಟ್ರೀಯ ನಿರ್ದೇಶನಗಳು, ಅನುಬಂಧ-2ರಲ್ಲಿ ನಿರ್ದಿಷ್ಟಪಡಿಸಿದಂತೆ ಜಿಲ್ಲೆಯಾದ್ಯಂತ ಅನುಸರಿಸುವುದು.

4. ಕಂಟೈನ್‍ಮೆಂಟ್, ಬಫರ್, ಕೆಂಪು, ಕಿತ್ತಳೆ ಮತ್ತು ಹಸಿರು ವಲಯಗಳು

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಮಾರ್ಗಸೂಚಿಗಳನ್ನು ಗಣೆನೆಗೆ ತೆಗೆದುಕೊಂಡು ಕಂಟೈನ್ಮೆಂಟ್ ವಲಯಗಳು ಮತ್ತು ಬಫರ್ ವಲಯಗಳನ್ನು ಜಿಲ್ಲೆಯ ಪ್ರಾಧಿಕಾರಿಗಳು ಗುರುತಿಸುತ್ತವೆ.

ಕಂಟೈನ್ಮೆಂಟ್ ವಲಯಗಳಲ್ಲಿ ಅಗತ್ಯ ಚಟುವಟಿಕೆಗಳನ್ನು ಮಾತ್ರ ಅನುಮತಿಸಲಾಗಿದೆ. ವೈದ್ಯಕೀಯ ತುರ್ತುಸ್ಥಿತಿಗಳನ್ನು ಹೊರತುಪಡಿಸಿ ಮತ್ತು ಅಗತ್ಯ ಸರಕು ಮತ್ತು ಸೇವೆಗಳ ಪೂರೈಕೆಯನ್ನು ಕಾಪಾಡಿಕೊಳ್ಳಲು ಈ ವಲಯಗಳಲ್ಲಿ ಅಥವಾ ಹೊರಗೆ ಜನರ ಚಲನೆ ಇಲ್ಲ ಎಂದು ಖಚಿತಪಡಿಸಿಕೊಳ್ಳಲು ಕಟ್ಟುನಿಟ್ಟಾದ ಪರಿಧಿಯ ನಿಯಂತ್ರಣ ಇರುತ್ತದೆ. ಮೇಲಿನ ಉದ್ದೇಶಕ್ಕಾಗಿ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹೊರಡಿಸಿರುವ ಮಾರ್ಗಸೂಚಿಗಳನ್ನು ಗಣನೆಗೆ ತೆಗೆದುಕೊಳ್ಳುವುದು.

ಕಂಟೈನ್ಮೆಂಟ್ ವಲಯಗಳಲ್ಲಿ ಅಗತ್ಯವಿರುವಂತೆ ತೀವ್ರವಾದ ಸಂಪರ್ಕ ಪತ್ತೆ ಹಚ್ಚುವಿಕೆ, ಮನೆ-ಮನೆಗೆ ಕಣ್ಗಾವಲು ಮತ್ತು ಇತರೆ ವೈದ್ಯಕೀಯ ಸೇವೆಗಳು ಇರುತ್ತವೆ.

ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಉತ್ತಮ ಮೇಲ್ವಿಚಾರಣೆಗಾಗಿ ಮಾತ್ರ ತಾಲ್ಲೂಕು/ವಾರ್ಡ್‍ಗಳನ್ನು ಕೆಂಪು, ಕಿತ್ತಳೆ, ಮತ್ತು ಹಸಿರು ಬಣ್ಣಗಳಾಗಿ ವರ್ಗೀಕರಿಸುತ್ತದೆ. ಈ ಮಾರ್ಗಸೂಚಿಗಳ ಅಡಿಯಲ್ಲಿ ಅನುಮತಿಸಲಾದ ಚಟುವಟಿಕೆಗಳಿಗೆ ಯಾವುದೇ ಹೆಚ್ಚಿನ ನಿರ್ಬಂಧಗಳನ್ನು ವಿಧಿಸುವ ಉದ್ದೇಶದಿಂದ ಈ ವಲಯಗಳ ವರ್ಗೀಕರಣವನ್ನು ಉಲ್ಲೇಖಿಸುವಂತಿಲ್ಲ.

5. ಕಫ್ರ್ಯೂ

ಪ್ರತಿದಿನ ರಾತ್ರಿ 7 ರಿಂದ ಬೆಳಿಗ್ಗೆ 7 ರವರೆಗೆ ಎಲ್ಲಾ ಚಟುವಟಿಕೆಗಳ ವ್ಯಕ್ತಿಗಳ ಸಂಚಾರವನ್ನು ಕಟ್ಟುನಿಟ್ಟಾಗಿ ನಿಷೇಧಿಸತಕ್ಕದ್ದು. ಭಾನುವಾರದಂದು ಹೆಚ್ಚುವರಿಯಾಗಿ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ಸಹ ಎಲ್ಲಾ ಅವಶ್ಯಕವಲ್ಲದ ಚಟುವಟಿಕೆಗಳ ವ್ಯಕ್ತಿಗಳ ಸಂಚಾರವನ್ನು ನಿಷೇಧಿಸಿದೆ (ಭಾನುವಾರದಂದು ಪೂರ್ಣ ದಿನದ ಲಾಡ್‍ಡೌನ್ ಇರುತ್ತದೆ) ಈ ಉದ್ದೇಶಕ್ಕಾಗಿ ಜಾರಿ ಮಾಡಲಾಗಿರುವ ಸಿ.ಆರ್.ಪಿ.ಸಿ ಸೆಕ್ಷನ್ 144 ರಡಿಯಲ್ಲಿ ನಿಷೇಧಾಜ್ಞೆ ಆದೇಶ (ಕಫ್ರ್ಯೂ)ವನ್ನು ಕಟ್ಟುನಿಟ್ಟಿನ ಅನುಪಾಲನೆಯನ್ನು ಖಾತರಿಪಡಿಸತಕ್ಕದ್ದು.

6. ದುರ್ಬಲ ವ್ಯಕ್ತಿಗಳ ರಕ್ಷಣೆ

ಅಗತ್ಯ ಮತ್ತು ಆರೋಗ್ಯ ಉದ್ದೇಶಗಳನ್ನು ಹೊರತುಪಡಿಸಿ, 65 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು, ಸಹ ಅಸ್ವಸ್ಥತೆ ಹೊಂದಿರುವ ವ್ಯಕ್ತಿಗಳು, ಗರ್ಭಿಣಿಯರು ಮತುತ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಇರತಕ್ಕದ್ದು

7. ಅನುಮತಿ

ನಿರ್ದಿಷ್ಟವಾಗ ನಿಷೇಧಿಸಲಾಗಿರುವ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಚಟುವಟಿಕೆಗಳನ್ನು ಅನುಮತಿಸಲಾಗಿದೆ. ಆದಾಗ್ಯೂ ಕಂಟೈನ್‍ಮೆಂಟ್ ವಲಯಗಳಲ್ಲಿ ಮೇಲಿನ ಪ್ಯಾರಾ 5(2) ರಲ್ಲಿ ಉಲ್ಲೇಖಿಸಿರುವಂತೆ ಅಗತ್ಯ ಚಟುವಟಿಕೆಗಳನ್ನು ಮಾತ್ರ ಅನುಮತಿಸಲಾಗಿದೆ.

ಇದಲ್ಲದೇ ಸರ್ಕಾರ ಆದೇಶಧ ಮೇರೆಗೆ ಪರಿಸ್ಥಿತಿಯ ಮೌಲ್ಯಮಾಪನದ ಆಧಾರದ ಮೇಲೆ ವಿವಿಧ ವಲಯಗಳಲ್ಲಿ ಕೆಲವು ಇತರೆ ಚಟುವಟಿಕೆಗಳನ್ನು ನಿಷೇಧಿಸಬಹುದು ಅಥವಾ ಅಗತ್ಯವೆಂದು ಪರಿಗಣಿಸುವಂತಹ ನಿರ್ಬಂಧಗಳನ್ನು ವಿಧಿಸಬಹುದು.

8. ಆರೋಗ್ಯ ಸೇತು ಬಳಕೆ

ಆರೋಗ್ಯ ಸೇತು ಸೋಂಕಿನ ಸಂಭವನೀಯ ಅಪಾಯವನ್ನು ಮೊದಲೇ ಗುರುತಿಸಲು ಅನುವು ಮಾಡಿಕೊಡುತ್ತದೆ ಮತ್ತು ಇದರಿಂದ ವ್ಯಕ್ತಿಗಳು ಮತ್ತು ಸಮುದಾಯ ಕಾಪಾಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತದೆ.

ಕಚೇರಿಯ ಮತ್ತು ಕೆಲಸದ ಸ್ಥಳಗಳಲ್ಲಿ ಸುರಕ್ಷತೆಯನ್ನು ಖಾತರಿಪಡಿಸುವ ಉದ್ದೇಶದಿಂದ ಉದ್ಯೋಗದಾತರು ಮತ್ತಮ ಪ್ರಯತ್ನದ ಆಧಾರದ ಮೇಲೆ ಆರೋಗ್ಯ ಸೇತು ಆಪ್‍ನ್ನು ಎಲ್ಲಾ ಉದ್ಯೋಗಿಗಳು ಮೊಬೈಲ್ ಪೋನ್‍ಗಳ ಹೊಂದಾಣಿಕೆಯನ್ನು ಹೊಂದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಬೇಕು.

ಹೊಂದಾಣಿಕೆಯ ಮೊಬೈಲ್ ಫೋನ್‍ಗಳಲ್ಲಿ ಆರೋಗ್ಯ ಸೇತು ಅಪ್ಲಿಕೇಷನ್‍ನ್ನು ಸ್ಥಾಪಿಸಲು ಮತ್ತು ಅಪ್ಲಿಕೇಶನ್‍ನಲ್ಲಿ ನಿಯಮಿತವಾಗಿ ಅವರ ಆರೋಗ್ಯ ಸ್ಥಿತಿಯನ್ನು ನವೀಕರಿಸಲು ಜಿಲ್ಲಾ ಮತ್ತು ಮಹಾನಗರಪಾಲಿಕೆ/ಪುರಸಭೆ ಅಧಿಕಾರಿಗಳು ಸಾರ್ವಜನಿಕರಿಗೆ ಸಲಹೆ ನೀಡುವುದು. ಅಪಾಯದಲ್ಲಿರುವ ವ್ಯಕ್ತಿಗಳಿಗೆ ಸಮಯಕ್ಕೆ ಸರಿಯಾಗಿ ವೈದ್ಯಕೀಯ ಚಿಕಿತ್ಸೆ ನೀಡಲು ಇದು ಅನುಕೂಲವಾಗಲಿದೆ.

09. ನಿರ್ದೇಶನಗಳು

ಕೆಲವು ಸಂದರ್ಭಗಳಲ್ಲಿ ವ್ಯಕ್ತಿಗಳು ಮತ್ತು ಸರಕುಗಳ ಚಲನೆಯನ್ನು ಖಚಿತಪಡಿಸಿಕೊಳ್ಳಲು ವಿಶೇಷ ನಿರ್ದೇಶನಗಳು.

ಯಾವುದೇ ನಿರ್ಬಂಧವಿಲ್ಲದೆ ವೈದ್ಯಕೀಯ ವೃತ್ತಿಪರರು, ದಾದಿಯರು ಮತ್ತು ಪ್ಯಾರಾ ವೈದ್ಯಕೀಯ ಸಿಬ್ಬಂದಿ, ನೈರ್ಮಲ್ಯ ಸಿಬ್ಬಂದಿ ಮತ್ತು ಆಂಬುಲೆನ್ಸ್ ಅಂತರ-ರಾಜ್ಯ ಮತ್ತು ರಾಜ್ಯದೊಳಗಿನ ಚಲನೆಯನ್ನು ಅನುಮತಿಸಲಾಗಿರುತ್ತದೆ.

ಖಾಲಿ ಟ್ರಕ್‍ಗಳನ್ನು ಒಳಗೊಂಡಂತೆ ಅಂತರ್-ರಾಜ್ಯ ಸರಕು ಸಾಗಾಣಿಕೆಗೆ ಎಲ್ಲಾ ತಾಲ್ಲೂಕುಗಳು ಅನುಮತಿಸತಕ್ಕದ್ದು.

ನೆರೆಯ ರಾಷ್ಟ್ರಗಳೊಂದಿಗೆ ಒಪ್ಪಂದಗಳ ಅಡಿಯಲ್ಲಿ ಭೂ-ಗಡಿ ವ್ಯಾಪಾರಕ್ಕಾಗಿ ಸರಕು ಸಾಗಣೆಯನ್ನು ಯಾವುದೇ ತಾಲ್ಲೂಕುಗಳು ತಡೆಯಬಾರದು.

10. ಮಾರ್ಗಸೂಚಿ

ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು.

ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ಹೊರಡಿಸಲಾದ ಈ ಮಾರ್ಗಸೂಚಿಗಳನ್ನು ಸ್ಥಳೀಯ ಆಡಳಿತಗಳು ಯಾವುದೇ ರೀತಿಯಲ್ಲಿ ದುರ್ಬಲಗೊಳಿಸಬಾರದು.

ಎಲ್ಲಾ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳು ಮೇಲಿನ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು.

ನಿಯಂತ್ರಣ ಕ್ರಮಗಳನ್ನು ಅನುಷ್ಟಾನಗೊಳಿಸುವ ಸಲುವಾಗಿ ಈಗಾಗಲೇ ದಿನಾಂಕ: 25.03.2020 ರಂದು ನೇಮಿಸಲಾಗಿರುವ ಆಯಾ ಸ್ಥಳೀಯ ಅಧಿಕಾರ ವ್ಯಾಪ್ತಿಯಲ್ಲಿ ಮಾರ್ಗಸೂಚಿಯ ಸಮಗ್ರ ಅನುಷ್ಟಾನಕ್ಕೆ ಜವಾಬ್ದಾರರಾಗಿರುತ್ತಾರೆ.

11. ದಂಡನೀಯ ಉಪಬಂಧಗಳು

ಕೋವಿಡ್-19 ನಿರ್ವಹಣೆಯ ಲಾಕ್‍ಡೌನ್ ಕ್ರಮಗಳನ್ನು ರಾಷ್ಟ್ರೀಯ ನಿರ್ದೇಶನಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಯು, ವಿಪತ್ತು ನಿರ್ವಹಣಾ ಕಾಯ್ದೆ 2005 ರ ಸೆಕ್ಷನ್ 51 ರಿಂದ 60 ರ ಉಪಬಂಧಗಳು, ಅಲ್ಲದೇ, ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ರ ಅಡಿಯಲ್ಲಿನ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಅವರ ವಿರುದ್ದ ಕ್ರಮ ಜರುಗಿಸಬಹುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending