ದಿನದ ಸುದ್ದಿ
ನಿಮ್ಮ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲಾಗುವುದು : ಇಂದೇ ಕರೆ ಮಾಡಿ
ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ.
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹ, ಇನ್ನು ಇತ್ಯಾದಿ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ತಾಂತ್ರಿಕ್ ವಿಧಾನಗಳಿಂದ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
9945410150
ಮೇಷ ರಾಶಿ
ಹಿರಿಯರ ಹಿತಾಸಕ್ತಿಯನ್ನು ಕಡೆಗಣಿಸಬೇಡಿ, ಅವರ ಬೇಕು ಬೇಡಗಳಿಗೆ ನಿಮ್ಮಿಂದ ಸಕಾರಾತ್ಮಕ ಉತ್ತರ ವಿರಲಿ. ಪಿತ್ರಾರ್ಜಿತ ಆಸ್ತಿಗಳಲ್ಲಿ ಜಯ ಸಂಪಾದನೆ ಆಗಲಿದೆ. ವೈಯಕ್ತಿಕ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರೆಯುವುದು ನಿಶ್ಚಿತ. ಗುರುಮುಖೇನ ಮಾರ್ಗದರ್ಶನದಿಂದ ಬಹುದೊಡ್ಡ ಯೋಜನೆಯನ್ನು ರೂಪಿಸುವಿರಿ. ಸಾಲಬಾಧೆಯಿಂದ ಮುಕ್ತರಾಗಲು ಪ್ರಯತ್ನಿಸುವುದು ಮುಖ್ಯ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ವೃಷಭ ರಾಶಿ
ಕಚೇರಿ ಕೆಲಸಗಳಲ್ಲಿ ಹಾಗೂ ನಿಮ್ಮ ಕೌಟುಂಬಿಕ ವ್ಯಾಜ್ಯಗಳು ಮಾನಸಿಕ ಚಿಂತೆ ತರಲಿದೆ. ಉದ್ಯೋಗದಲ್ಲಿ ಹೊಸ ಕೆಲಸದ ಅವಕಾಶ ಸಿಗುವುದು. ಯಶಸ್ಸಿಗೆ ಬೇಕಾಗಿರುವ ಸೌಕರ್ಯ ಹಿರಿಯರಿಂದ ಪ್ರಾಪ್ತಿಯಾಗಲಿದೆ. ಸಂಗಾತಿಯೊಡನೆ ಪ್ರೇಮದಿಂದ ಕಾಲ ಕಳೆಯುತ್ತೀರಿ. ಮಕ್ಕಳ ಭವಿಷ್ಯಕ್ಕಾಗಿ ಉತ್ತಮವಾದ ಮಾರ್ಗವನ್ನು ಹುಡುಕುವ ಸಾಧ್ಯತೆ ಇದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮಿಥುನ ರಾಶಿ
ನಿಮ್ಮ ಮಾತುಗಳು ಹಾಗೂ ಕೆಲಸವು ಗೆಲುವಿನ ದಾರಿ ಸೂಚಿಸುತ್ತದೆ. ಜನಗಳ ಜೊತೆಗೆ ಹೆಚ್ಚಾಗಿ ಬೆರೆಯುವಿರಿ. ಒಡನಾಡಿಗಳ ಯೋಗ ಕ್ಷೇಮ ವಿಚಾರಿಸುವ ವ್ಯವಧಾನ ತೋರಿಸುತ್ತೀರಿ. ಕುಟುಂಬದಲ್ಲಿ ಸಂತೋಷಕರ ವಾತಾವರಣ ಪ್ರಾಪ್ತಿಯಾಗಲಿದೆ. ಮನಸ್ಸಿಗೆ ಮುದ ನೀಡುವ ಕಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಇಚ್ಚಿಸುವಿರಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕರ್ಕಾಟಕ ರಾಶಿ
ಕೆಲಸದ ಜಾಗದಲ್ಲಿ ಅನಗತ್ಯವಾಗಿ ನಿಮ್ಮ ವಿರುದ್ಧ ದೋಷಾರೋಪಗಳು ಮಾಡುವ ಸಾಧ್ಯತೆ ಇದೆ. ಆತ್ಮೀಯ ವ್ಯಕ್ತಿಗಳಿಂದ ಮೋಸ ಹೋಗುವ ಪ್ರಮೇಯ ಬರಬಹುದು. ಕೆಲವರು ನಿಮ್ಮ ಹಿತ ಬಯಸುವ ಜನಗಳು ನಿಮ್ಮ ಕಷ್ಟಕ್ಕೆ ಬೆಂಬಲವಾಗಿ ನಿಲ್ಲಲಿದ್ದಾರೆ. ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಳ್ಳಬೇಡಿ. ಆದಷ್ಟು ದೈಹಿಕ ಕ್ಷಮತೆಯನ್ನು ಕಾಪಾಡಿಕೊಳ್ಳಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಸಿಂಹ ರಾಶಿ
ಹಣಕಾಸಿನ ವ್ಯವಹಾರ ಉತ್ತಮ ರೀತಿಯಲ್ಲಿ ನಡೆಯಲಿದೆ. ಅಗತ್ಯ ಆರ್ಥಿಕ ಅಭಿವೃದ್ಧಿ ಕಾಣಬಹುದು. ಉದ್ಯಮ ವಲಯದಲ್ಲಿ ಬೆಳವಣಿಗೆ ಆಗಲಿದೆ. ಖರೀದಿ ಮತ್ತು ಮಾರಾಟ ಪ್ರಕ್ರಿಯೆಗಳು ಸರಾಗವಾಗಿ ನಡೆಯುವುದು. ಶೈಕ್ಷಣಿಕ ವಿಷಯ ಪ್ರಗತಿಯಲ್ಲಿದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕನ್ಯಾ ರಾಶಿ
ನಿಮ್ಮ ಪ್ರತಿಯೊಂದು ನಡೆಯು ಪ್ರಶಂಸೆಗೆ ಪೂರಕ ವಾತಾವರಣ ಸೃಷ್ಟಿಸುತ್ತದೆ. ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿ ಜನಮನ್ನಣೆ ಗಳಿಸುವಿರಿ. ಕೆಲಸದಲ್ಲಿ ಹೆಚ್ಚಿನ ಅವಕಾಶಗಳು ಪ್ರಾಪ್ತಿಯಾಗಲಿದೆ. ನಿಮ್ಮ ಪರಿಶ್ರಮಕ್ಕೆ ತಕ್ಕ ಬೆಲೆ ಸಿಗಲಿದೆ. ಕೆಲಸದ ಒತ್ತಡ ಹಾಗೂ ಓಡಾಟಗಳಿಂದ ಆರೋಗ್ಯದಲ್ಲಿ ಬದಲಾವಣೆಯಾಗಬಹುದು, ಆದಷ್ಟು ಎಚ್ಚರಿಕೆ ಇರಲಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ತುಲಾ ರಾಶಿ
ಭಾವನಾ ಜೀವಿಯಾಗಿ ಕಂಡುಬರುತ್ತೀರಿ. ಕಷ್ಟದ ವಿಚಾರಗಳಿಗೆ ನೀವು ಸ್ಪಂದಿಸುವ ಮನೋಭಾವ ಎಲ್ಲರೂ ಶ್ಲಾಘಿಸಲಾದ್ದಾರೆ. ಮಕ್ಕಳ ಪ್ರಗತಿಯ ಬಗ್ಗೆ ಆದಷ್ಟು ಗಮನ ವಹಿಸಬೇಕಾಗಿದೆ. ನಿಮ್ಮಿಂದ ನಡೆಯಬೇಕಾಗಿರುವ ಶುಭಕಾರ್ಯವನ್ನು ಜ್ಞಾಪಿಸಿಕೊಳ್ಳಲಿದ್ದೀರಿ, ಇದಕ್ಕೆ ಅವಶ್ಯಕ ತಯಾರಿ ಸಹ ನಡೆಯುವ ಸಾಧ್ಯತೆಗಳು ಕಂಡು ಬರುತ್ತದೆ. ಕ್ರಯವಿಕ್ರಯ ಗಳಲ್ಲಿ ಗೆಲುವಿನ ನಗೆ ಕಂಡುಬರುತ್ತದೆ. ಸಂತೋಷದ ಸಮಾರಂಭಗಳಿಗೆ ಕುಟುಂಬದೊಡನೆ ಪಾಲ್ಗೊಳ್ಳಲಿದ್ದೀರಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ವೃಶ್ಚಿಕ ರಾಶಿ
ಆರೋಗ್ಯದ ಸಮಸ್ಯೆ ನಿಮಗೆ ಹೆಚ್ಚು ತೊಂದರೆ ನೀಡಬಹುದಾಗಿದೆ. ಎಲ್ಲರಲ್ಲೂ ಬೆರೆಯುವ ನಿಮ್ಮ ಸ್ವಭಾವ ಆಕರ್ಷಣೆಯ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುತ್ತದೆ. ಮೋಜಿನ ಮತ್ತು ಮನರಂಜನೆಗಾಗಿ ಅವಕಾಶ ಸಿಗಲಿದೆ. ಹೆಚ್ಚುವರಿ ಜ್ಞಾನ ಪಡೆಯಲು ಸಶಕ್ತರಾಗಿ, ಕೌಶಲ್ಯಗಳಲ್ಲಿ ಸಮಯವನ್ನು ವಿನಿಯೋಗಿಸುವುದು ಸೂಕ್ತ. ನಿಮ್ಮ ಮಡದಿಯು ಇಂದು ನಿಮ್ಮ ಕಣ್ಣಿಗೆ ಅತಿಸುಂದರವಾಗಿ ಕಾಣುತ್ತಾರೆ. ನಿಮ್ಮಲ್ಲಿನ ಉತ್ಸಾಹದಿಂದ ಅನುಕೂಲಕರ ಪಲಿತಾಂಶ ಬರಲಿದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಧನಸ್ಸು ರಾಶಿ
ಹಣಕಾಸಿನ ಸಮಸ್ಯೆಗೆ ಉತ್ತಮ ಮಾರ್ಗಗಳನ್ನು ಯೋಚಿಸುತ್ತೀರಿ ಹಾಗೂ ಕಾರ್ಯಗಳನ್ನು ರಚನಾತ್ಮಕವಾಗಿ ಮಾಡಲಿದ್ದೀರಿ. ಬಾಲ್ಯ ಸ್ನೇಹಿತರನ್ನು ಸಂದಿಸ ಬಹುದಾದ ದಿನವಿದು. ಕುಟುಂಬದ ಸದಸ್ಯರೊಂದಿಗೆ ಒತ್ತಡದ ಪರಿಸ್ಥಿತಿಯನ್ನು ಅನುಭವಿಸುವ ಸಾಧ್ಯತೆ ಇದೆ. ಆದಷ್ಟು ವೈಯಕ್ತಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮಕರ ರಾಶಿ
ವ್ಯಾಪಾರಗಳಲ್ಲಿ ನಿಮ್ಮ ಸ್ವಂತ ಅಭಿಪ್ರಾಯವಿರಲಿ ಇತರರ ನಿರ್ಧಾರಗಳಿಗೆ ನೀವು ಮಣಿಯಬೇಡಿ. ಆತ್ಮೀಯರು ಇಂದು ನಿಮಗಾಗಿ ಉಡುಗೊರೆಯನ್ನು ನೀಡುವ ಸಾಧ್ಯತೆ ಕಂಡುಬರುತ್ತದೆ, ಇದು ನಿಮಗೆ ಆಶ್ಚರ್ಯ ತರುವುದು ನಿಶ್ಚಿತ. ಮಾಡುವ ಕೆಲಸದಲ್ಲಿ ಸುಲಭ ದಾಯಕ ವಿಚಾರಗಳು ನಡೆಯಲಿದೆ. ನಿಮ್ಮಲ್ಲಿನ ಅಪಾರ ವಿಶ್ವಾಸ ಮತ್ತು ಜ್ಞಾನದಿಂದ ಕೆಲಸದಲ್ಲಿ ಉತ್ತಮ ಬದ್ಧತೆ ತೋರಿಸುತ್ತೀರಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕುಂಭ ರಾಶಿ
ಆರ್ಥಿಕವಾಗಿ ಮುಂದುವರಿಯುವ ಎಲ್ಲ ಲಕ್ಷಣಗಳು ಕಂಡು ಬರುತ್ತದೆ. ಕೆಲಸವನ್ನು ಬೇಗನೆ ಮುಗಿಸಿ ವಿಶ್ರಾಂತಿ ತೆಗೆದುಕೊಳ್ಳುವ ಮನೋಭಾವನೆಯಲ್ಲಿ ಇರುವಿರಿ. ಹೂಡಿಕೆಗಳ ಬಗ್ಗೆ ಹೆಚ್ಚಿನ ಗಮನ ಅಗತ್ಯವಿದೆ. ಇರುಳು ಕಂಡ ಬಾವಿಗೆ ಹಗಲು ಬಿದ್ದಂತೆ, ವ್ಯವಹಾರಗಳನ್ನು ನೋಡಿ ಸಹ ಮೋಸ ಹೋಗುವ ಸಾಧ್ಯತೆ ಇದೆ ಎಚ್ಚರ. ಬಂದು ವರ್ಗಗಳೊಡನೆ ವಿಶ್ವಾಸವನ್ನು ಕಾಯ್ದುಕೊಳ್ಳಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮೀನ ರಾಶಿ
ಉದ್ಯೋಗ ಸ್ಥಳದಲ್ಲಿ ಮೇಲಾಧಿಕಾರಿಗಳು ಹಾಗೂ ಸಹವರ್ತಿಗಳಿಂದ ಪ್ರಶಂಸೆ ದೊರೆಯಲಿದೆ. ನಿಮ್ಮ ಅಭಿಪ್ರಾಯಗಳನ್ನು ಕಡೆಗಣನೆ ಮಾಡುವರು ಆದಷ್ಟು ಕೆಲಸದ ಬಗ್ಗೆ ಮಾತ್ರ ಚಿಂತನೆ ನಡೆಸಿ. ಹಣಕಾಸಿನ ವ್ಯವಹಾರ ಉತ್ತಮವಾಗಿ ನಡೆಯಲಿದೆ. ಆರೋಗ್ಯವನ್ನು ಕಾಪಾಡಿಕೊಳ್ಳಿ. ಉತ್ತಮ ಆಹಾರ ಸೇವನೆಯು ಒಳಿತು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಗಿರಿಧರ ಭಟ್
ನಿಮ್ಮ ಸಮಸ್ಯೆಗಳ ಸಮಾಲೋಚನೆಗಾಗಿ ಲಭ್ಯರಿದ್ದಾರೆ. ಪರಿಹಾರ ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ.
9945410150

ದಿನದ ಸುದ್ದಿ
ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’
ಸುದ್ದಿದಿನ,ದಾವಣಗೆರೆ: ನಗರದ ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಥಮ ವರ್ಷದ ಹಾಗೂ ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ರಶ್ಮಿ . ಸಿ. ಹೆಚ್ ಅವರು ಉದ್ಘಾಟಿಸಿದರು.
ಸನಾವುಲ್ಲಾ ನವಿಲೇಹಾಳು ಅವರು ಉಪನ್ಯಾಸ ಮಾಡಿ ಹೊಸ ತಲೆಮಾರಿನವರು ಸಮಾಜಿಕ ಜಾಲತಾಣಗಳಲ್ಲಿ ಗೇಮ್ , ರೀಲ್ಸ್ ಇತರೆ ವಿಷಯಗಳಲ್ಲಿ ಮುಳುಗಿ ಬಿಕ್ಕಟ್ಟಿಗೆ ಸಿಲುಕಿದ್ದಾರೆ. ಶಿಕ್ಷಣ ಪಡೆದು ಉತ್ತಮ ವ್ಯಕ್ತಿತ್ವ ಕಟ್ಟಿಕೊಳ್ಳಬೇಕು. ತ್ಯಾಗ ಮತ್ತು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆಕೊಟ್ಟರು.
ಉಪಸ್ಥಿತರಿದ್ದ ಕಾಲೇಜಿನ ಕುಲಸಚಿವರಾದ ಶ್ರೀ ಜಗದೀಶ್ ಹೆಚ್ ಅವರು ಮಾತನಾಡಿ ವಿದ್ಯಾರ್ಥಿಗಳು ತಮಗೆ ಎದುರಾಗುವ ಸಮಸ್ಯೆಗಳನ್ನು ಮೆಟ್ಟಿನಿಂತು ಶಿಕ್ಷಣಕ್ಕೆ ಮೊದಲ ಆದ್ಯತೆ ಕೊಡಬೇಕು ಎಂದರು. ಸಿಸಿಟೆಕ್ ಮ್ಯಾನೇಜರ್ ಆದ ಶ್ರೀ ಶಿವಕುಮಾರ ಸ್ವಾಮಿ ಎಸ್.ಹೆಚ್. ಸಂಯೋಜಕರಾದ ಶ್ರೀ ಮತಿ ಆಸೀಯಾ ಬಾನು ಬಿ. ಪ್ರಾಸ್ಥಾವಿಕವಾಗಿ ಮಾತನಾಡಿದರು ಹಾಗೂ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಬೃಂದ ಕಾರ್ಯಕ್ರಮ ನಿರೂಪಿಸಿದರು,
ವೈಷ್ಣವಿ, ಲಾವಣ್ಯ, ಭಾವನ ಪ್ರಾರ್ಥಿಸಿದರು, ಉಪನ್ಯಾಸಕಿ ಪ್ರಿಯಾಂಕ ಟಿ ಎಸ್ ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್ ಸಂಜೀವ್ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.
ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.
ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್, ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಒಂದು ಮೊಬೈಲ್ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days agoನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
-
ದಿನದ ಸುದ್ದಿ1 day agoಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
ದಿನದ ಸುದ್ದಿ2 days agoದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
-
ದಿನದ ಸುದ್ದಿ2 days agoಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್
-
ದಿನದ ಸುದ್ದಿ8 hours agoಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’

