ದಿನದ ಸುದ್ದಿ
ನಿಮ್ಮ ಭವ್ಯ ಭವಿಷ್ಯದ ಸುಖಕ್ಕಾಗಿ ಇಂದೇ ಕರೆಮಾಡಿ
ಶ್ರೀ ಮಂಜುನಾಥ ಸ್ವಾಮಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ.
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹ, ಇನ್ನು ಇತ್ಯಾದಿ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ತಾಂತ್ರಿಕ್ ವಿಧಾನಗಳಿಂದ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
9945410150
ಮೇಷ ರಾಶಿ
ಪ್ರವಾಸದ ಅನುಭವದಿಂದ ಮನಸ್ಸು ಪ್ರಶಾಂತವಾಗಿರುತ್ತದೆ. ಬಂಧುಗಳ ಸಂಭ್ರಮದ ವಾತಾವರಣದಲ್ಲಿ ಕುಟುಂಬದ ಸಮೇತವಾಗಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಹಿರಿಯರ ಮಾತಿನ ಬಗ್ಗೆ ಅಸಡ್ಡೆ ಮಾಡುವುದು ಒಳ್ಳೆಯದಲ್ಲ. ಗುರುಹಿರಿಯರ ಆಶೀರ್ವಾದ ಎಲ್ಲಾ ಯೋಜನೆಗಳಿಗೆ ಬೇಕಾಗಲಿದೆ. ಹೂಡಿಕೆಗಳ ಬಗ್ಗೆ ವಿಶೇಷ ಆಸಕ್ತಿ ವಹಿಸುವುದು ಒಳ್ಳೆಯದು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ವೃಷಭ ರಾಶಿ
ಇಂದು ಆರ್ಥಿಕ ವ್ಯವಹಾರದಲ್ಲಿ ಹಿನ್ನಡೆ ಕಂಡುಬರಲಿದೆ. ಸಾಲ ನೀಡುವ ಪ್ರಮೇಯ ಬಂದರೆ ಆದಷ್ಟು ನಯವಾಗಿ ತಿರಸ್ಕರಿಸುವುದು ಒಳ್ಳೆಯದು. ಈ ದಿನ ವಿಶಿಷ್ಟವಾದಂತಹ ಅನುಭವಗಳು ನಿಮ್ಮಲ್ಲಿ ಕಾಣಬಹುದಾಗಿದೆ. ಶಕ್ತಿದೇವತೆಗಳ ಆರಾಧನೆಗೆ ತಯಾರಿ ನಡೆಸುವಿರಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮಿಥುನ ರಾಶಿ
ಸಾಧು-ಸಂತರ ಪುಣ್ಯ ದರ್ಶನದಿಂದ ನಿಮ್ಮಲ್ಲಿ ನಿಗೂಢವಾದ ಚೈತನ್ಯ ಹೊರಹೊಮ್ಮುವ ಸಾಧ್ಯತೆಯಿದೆ. ಆಧ್ಯಾತ್ಮದ ತುಡಿತ ಹೆಚ್ಚಾಗಿ ಕಂಡುಬರಲಿದೆ. ಆಂತರಿಕ ಮನಸ್ಸಿನಲ್ಲಿರುವ ಗೊಂದಲಗಳು ನಿವಾರಣೆ ಯಾಗುತ್ತದೆ ಹಾಗೂ ಜೀವನದ ಸ್ಪಷ್ಟ ದಾರಿ ಗೋಚರವಾಗಲಿದೆ. ಆರ್ಥಿಕ ವ್ಯವಹಾರದಲ್ಲಿ ಸಮಸ್ಯೆಗಳು ಯಾವುದೇ ಕಾರಣಕ್ಕೂ ಈದಿನ ಸುಳಿಯುವುದಿಲ್ಲ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕರ್ಕಾಟಕ ರಾಶಿ
ಕೆಲವು ಮಾರಾಟ ಪ್ರಕ್ರಿಯೆಗಳು ತಡವಾಗುವ ಸಾಧ್ಯತೆ ಕಂಡುಬರುತ್ತದೆ. ಸಂಗಾತಿಯ ಮನಸ್ಸಿನ ಪ್ರೇಮ ನಿಮ್ಮನ್ನು ಸುಂದರ ದಿನ ವಾಗಿಸುವುದರಲ್ಲಿ ಸಂಶಯವಿಲ್ಲ. ಆತ್ಮೀಯ ವ್ಯಕ್ತಿಗಳು ನಿಮ್ಮ ಯೋಜನೆಗಳಲ್ಲಿ ಹಸ್ತಕ್ಷೇಪ ನಡೆಸಬಹುದಾದ ಸಾಧ್ಯತೆ ಇದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಸಿಂಹ ರಾಶಿ
ನಿಮ್ಮ ಕೆಲಸ ಅನುಷ್ಠಾನ ಆಗುವವರೆಗೂ ಅದರ ಗೌಪ್ಯತೆಯನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ. ಹತ್ತಿರದ ಬಂಧುಗಳಿಂದ ವಿನಾಕಾರಣ ವ್ಯಾಜ್ಯಗಳು ಸೃಷ್ಟಿಯಾಗುವ ಸಾಧ್ಯತೆಯಿದೆ, ಆದಷ್ಟು ಇಂದು ಮಾತಿಗೆ ಮಾತು ಬೆಳೆಸುವುದು ಕಡಿಮೆ ಮಾಡಿಕೊಳ್ಳಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕನ್ಯಾ ರಾಶಿ
ಅಪರಿಚಿತರ ಹೊಸ ಸ್ನೇಹವು ನಿಮಗೆ ದೊಡ್ಡಮಟ್ಟದ ಸಮಸ್ಯೆಯನ್ನು ನೀಡಬಹುದು. ಹಣಕಾಸಿನ ಲೆಕ್ಕಾಚಾರವು ನಿಖರವಾಗಿ ಇರುವಂತೆ ನೋಡಿಕೊಳ್ಳುವುದು ಮುಖ್ಯ. ಮಕ್ಕಳ ಹಿತಾಸಕ್ತಿಯನ್ನು ಕಡೆಗಣಿಸದೇ ಅವರ ನವೀನ ಕಾರ್ಯಾರಂಭಕ್ಕೆ ನಿಮ್ಮ ಬೆಂಬಲ ಅವಶ್ಯಕವಾಗಿ ಇರಲಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ತುಲಾ ರಾಶಿ
ಸ್ವಾದಿಷ್ಟಕರ ಭೋಜನ ವ್ಯವಸ್ಥೆ ಈ ದಿನ ನಿಮಗೆ ಸಂತೋಷ ತರಲಿದೆ. ಆರ್ಥಿಕ ವಿಷಯವಾಗಿ ಅಲೆದಾಟ ಹೆಚ್ಚಾಗುವ ಸಾಧ್ಯತೆ ಕಾಣಬಹುದು. ಮೇಲಾಧಿಕಾರಿಗಳಿಂದ ಕೆಲಸದ ಒತ್ತಡ ಹೆಚ್ಚಾಗುತ್ತದೆ. ಸಮಯದ ಪರಿಧಿಯಲ್ಲಿ ನಿಮಗೆ ಹೆಚ್ಚುವರಿ ಜವಾಬ್ದಾರಿ ನೀಡುವ ಸಾಧ್ಯತೆ ಇದೆ. ನಿಮ್ಮ ಮನಸ್ಸಿನಲ್ಲಿ ಹೊಳೆಯುವ ಆಲೋಚನೆ ದೊಡ್ಡಮಟ್ಟದ ಯೋಜನೆಗೆ ಸಹಕಾರಿಯಾಗಲಿದೆ. ಇಂದು ಹಳೆಯ ಮಿತ್ರರು ಆಕಸ್ಮಿಕವಾಗಿ ಭೇಟಿಯಾಗುವ ಸಾಧ್ಯತೆ ಇದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಕಲ್ಪನೆ ಸಕಾರ ವಾಗಲಿದೆ. ದುಂದುವೆಚ್ಚ ಮಾಡುವುದನ್ನು ಆದಷ್ಟು ನಿಲ್ಲಿಸಿ. ಉಳಿತಾಯದತ್ತ ಗಮನ ನೀಡಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ವೃಶ್ಚಿಕ ರಾಶಿ
ಪ್ರೀತಿಪಾತ್ರರನ್ನು ಉಡುಗೊರೆ ಮೂಲಕ ಅವರನ್ನು ಇನ್ನು ಹತ್ತಿರ ಆಗುವುದು ಈ ದಿನ ಕಾಣಬಹುದು. ದೀರ್ಘಾವಧಿಯ ಹೂಡಿಕೆಗಳು ಲಾಭಾಂಶ ತಂದುಕೊಡಲಿದೆ. ಅತಿಯಾಗಿ ಹಣ ಖರ್ಚು ಮಾಡಿ ಸಮಸ್ಯೆಯಲ್ಲಿ ಸಿಲುಕಬೇಡಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಧನಸ್ಸು ರಾಶಿ
ಕೆಲವು ವಿತಂಡವಾದಗಳು ನಿಮ್ಮ ವ್ಯಕ್ತಿತ್ವಕ್ಕೆ ಸಮಸ್ಯೆ ತರಬಹುದು. ಆರ್ಥಿಕವಾಗಿ ನಿಮ್ಮ ಸಾಹಸ ಕಾರ್ಯಗಳು ಮುಂದುವರೆಯಲಿದೆ. ಅಗತ್ಯ ಹಣಕಾಸು ಆದಾಯ ಬರಲಿದೆ. ನಿರಾಸಕ್ತಿಯ ಕಾರ್ಮೋಡ ನಿಮ್ಮಲ್ಲಿ ಆವರಿಸಬಹುದು. ದೂರದ ಊರಿನ ಪ್ರಯಾಣ ಮಾಡಬೇಕಾದ ಅನಿವಾರ್ಯ ಬರಬಹುದಾಗಿದೆ. ಆರ್ಥಿಕ ವ್ಯವಹಾರದಲ್ಲಿ ಉತ್ತಮ ಲಾಭಾಂಶಗಳು ಬರಲಿದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮಕರ ರಾಶಿ
ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿ ಈದಿನ ನಿರೀಕ್ಷಿಸಬಹುದು. ನಿಮ್ಮ ಕೆಲಸಕ್ಕೆ ಕುಟುಂಬಸ್ಥರು ಸಹಕಾರ ನೀಡಲಿದ್ದಾರೆ. ಸಂಗಾತಿಯ ನಡುವಿನ ಭಿನ್ನಾಭಿಪ್ರಾಯವನ್ನು ಈದಿನ ಸರಿಪಡಿಸಿಕೊಳ್ಳಲು ಮುಂದಾಗಿ. ಹೆಚ್ಚುವರಿ ಕೆಲಸದ ಒತ್ತಡದಿಂದ ಮಾನಸಿಕ ಕ್ಲೇಶಗಳು ಆಗುವ ಸಾಧ್ಯತೆ ಇದೆ. ನಿಮ್ಮ ಆರೋಗ್ಯದಲ್ಲಿ ಏರುಪೇರು ಆಗಬಹುದು ಅದರ ಬಗ್ಗೆ ಗಮನವಹಿಸಿ. ಕುಟುಂಬದ ಹಿತಾಸಕ್ತಿಯನ್ನು ಕಡೆಗಣಿಸದೆ ಎಲ್ಲಾ ಬೆಳವಣಿಗೆಯಲ್ಲಿ ನಿಮ್ಮ ಪಾಲ್ಗೊಳ್ಳುವಿಕೆಯನ್ನು ಖಾತ್ರಿಪಡಿಸಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕುಂಭ ರಾಶಿ
ಆರ್ಥಿಕ ಹಿನ್ನಡೆ ನಿಮ್ಮ ಯೋಜನೆಗಳಿಗೆ ಸಾಕಷ್ಟು ತೊಂದರೆ ನೀಡಬಹುದು. ಪ್ರತಿಭೆಗೆ ಸೂಕ್ತ ಅವಕಾಶ ಸಿಗಲಿದೆ. ಕೆಲಸದಲ್ಲಿ ಹೆಚ್ಚಿನ ಅವಿಷ್ಕಾರಗಳು ಕಾಣಬಹುದು. ಯೋಜನೆಯ ನಿಮಿತ್ತ ಪ್ರಯಾಣಿಸುವ ದಿನವಿದು. ಕುಟುಂಬದೊಡನೆ ದೈವ ದೇಗುಲಕ್ಕೆ ಭೇಟಿ ನೀಡುವ ಸಾಧ್ಯತೆ. ಆತ್ಮೀಯ ವ್ಯಕ್ತಿಗಳನ್ನು ಆದಷ್ಟು ನಿಮ್ಮ ವ್ಯವಸ್ಥೆಯಲ್ಲಿ ಉಳಿಸಿಕೊಳ್ಳಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮೀನ ರಾಶಿ
ಬಹು ವಿಶ್ವಾಸದಿಂದ ಯೋಜನೆಗಳಲ್ಲಿ ಪಾಲ್ಗೊಳ್ಳುವಿರಿ. ಹೆಚ್ಚಿನ ಅವಕಾಶ ಹಾಗೂ ಉತ್ತಮ ಸ್ಥಾನ ಈ ದಿನ ನಿರೀಕ್ಷಿಸಬಹುದು. ಮನೆ ಕಟ್ಟುವ ವಿಷಯದಲ್ಲಿ ಅಡೆತಡೆಗಳು ಉಂಟಾಗುವ ಸಾಧ್ಯತೆ. ಮಾಡುವ ಕೆಲಸ ವಿಳಂಬವಾಗಬಹುದು ಆದಕಾರಣ ಸಮಯದ ಪರಿಪಾಲನೆ ಮಾಡಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಗಿರಿಧರ ಭಟ್
ನಿಮ್ಮ ಸಮಸ್ಯೆಗಳ ಸಮಾಲೋಚನೆಗಾಗಿ ಲಭ್ಯರಿದ್ದಾರೆ. ಪರಿಹಾರ ಮಾರ್ಗದರ್ಶನಕ್ಕಾಗಿ
ಇಂದೇ ಕರೆ ಮಾಡಿ.
9945410150

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.
2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.
3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.
5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.
6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.
7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.
8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.
9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್ಗಳ ಸಮತೋಲನಕ್ಕೆ ಬಹಳ ಮುಖ್ಯ.
10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.
ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರ ಪುರಷ್ಕೃತ ಕೃಷಿಯೋನ್ನತಿ ಯೋಜನೆಯಡಿ ‘’ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು’’ (National Mission on Edible Oil – Oilseeds (NMEO-OS) ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.
ಎಣ್ಣೆಕಾಳು ಬೆಳೆಗಾರರು ಮತ್ತು ಮೌಲ್ಯ ಸರಪಳಿ ಪಾಲುದಾರರನ್ನು (Value Chain Partners) ಸಂಸ್ಕರಣಾದಾರರೊಂದಿಗೆ ಸಂಪರ್ಕಿಸಲು ಮತ್ತು ಅವರಿಗೆ ಮಾರುಕಟ್ಟೆ ಕಲ್ಪಿಸುವುದರೊಂದಿಗೆ ಉತ್ತಮ ಲಾಭವನ್ನು ಪಡೆಯುವಂತೆ ಖಾತ್ರಿಪಡಿಸುವುದು ಯೋಜನೆಯ ಗುರಿಗಳಲ್ಲಿ ಒಂದಾಗಿದೆ.
ಸದರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು, ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಪಡೆಯಲು/ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲ ಸೌಕರ್ಯ ಸೌಲಭ್ಯ ಪಡೆಯಲು ಗರಿಷ್ಠ ಯೋಜನಾ ವರದಿಯ ಶೇ.33 ರಷ್ಟು ಅಥವಾ ರೂ.9.99 ಲಕ್ಷಕ್ಕೆ ಮೀರದಂತೆ ಅನುದಾನವನ್ನು ನೀಡಲಾಗುವುದು. ಸದರಿ ಯೋಜನೆಯ ಘಟಕದಡಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆಯನ್ನು ಪರಿಗಣಿಸಲಾಗುವುದಿಲ್ಲ.
ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಸರ್ಕಾರ / ಸರ್ಕಾರೇತರ ಸಂಸ್ಥೆಗಳು, FPOs ಗಳು ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯೋಜನೆಯ ಮಾರ್ಗಸೂಚಿಯನ್ವಯ ಜಿಲ್ಲಾ ಕಾರ್ಯಕಾರಿ ಸಮಿತಿಯಲ್ಲಿ ಫಲಾನುಭವಿ ಆಯ್ಕೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಆಶ್ರಯ ಯೋಜನೆ – ಆವಧಿ ವಿಸ್ತರಣೆ
-
ದಿನದ ಸುದ್ದಿ5 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ5 days agoಕವಿತೆ | ದೇವರ ಹೂವು
-
ದಿನದ ಸುದ್ದಿ7 days agoಗರಿಕೆ ಹುಲ್ಲಿನ ಜ್ಯೂಸ್ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
-
ದಿನದ ಸುದ್ದಿ3 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ3 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

