Connect with us

ದಿನದ ಸುದ್ದಿ

ಕಠಿಣ ಸಮಸ್ಯೆಗಳಿಗೆ ಇಲ್ಲಿದೆ ಸೂಕ್ತ ಪರಿಹಾರ : ಕರೆಮಾಡಿ

Published

on

ಶ್ರೀ ದುರ್ಗಾ ಪರಮೇಶ್ವರಿ ಅಮ್ಮನವರ ಸ್ಮರಣೆಯನ್ನು ಮಾಡುತ್ತಾ ಈ ದಿನದ ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ.

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹ, ಇನ್ನು ಇತ್ಯಾದಿ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ತಾಂತ್ರಿಕ್ ವಿಧಾನಗಳಿಂದ ಪರಿಹಾರ ಶತಸಿದ್ಧ.

ಇಂದೇ ಕರೆ ಮಾಡಿ.
9945410150

ಮೇಷ ರಾಶಿ

ನಿಮ್ಮ ಜ್ಞಾನ ಮಟ್ಟದಿಂದ ಉತ್ತಮ ಸಾಧನೆ ರೂಪರೇಷೆ ಮಾಡುವಿರಿ. ಶೈಕ್ಷಣಿಕ ಸಂಬಂಧಪಟ್ಟ ವಿಚಾರಗಳಲ್ಲಿ ಉತ್ತಮ ನಿರ್ವಹಣೆ ತೋರುವಿರಿ. ಕೆಲಸದಲ್ಲಿ ಬಡ್ತಿಯ ಭಾಗ್ಯ ಆಗುವುದು ಖಚಿತವಾಗುತ್ತದೆ. ಕುಟುಂಬದ ಕಾರ್ಯಗಳಿಗೆ ಸಾಧ್ಯವಾದಷ್ಟು ಸಹಾಯ ಮಾಡುವ ಗುಣವನ್ನು ಬೆಳೆಸಿಕೊಳ್ಳಿ, ನಿಮ್ಮ ವರ್ಚಸ್ಸು ಹೆಚ್ಚುತ್ತದೆ. ಕೆಲಸದ ಬಗೆಗಿನ ವಿಷಯಗಳಲ್ಲಿ ಉತ್ತಮ ಫಲಿತಾಂಶ ಕಂಡು ಬರುತ್ತದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ವೃಷಭ ರಾಶಿ

ಕುಟುಂಬದ ಹಿತಾಸಕ್ತಿಗಾಗಿ ವಿಶೇಷ ಯೋಜನೆಗಳು ಮಾಡುವ ಸಿದ್ಧತೆ ನಡೆಸುತ್ತೀರಿ. ಕ್ರಿಯಾಶೀಲತೆಯಿಂದ ಈ ದಿನ ಕೆಲಸಗಳನ್ನು ಆರಂಭಿಸಲಿದ್ದೀರಿ. ಹಳೆಯ ಸಾಲಗಳನ್ನು ಯಶಸ್ವಿಯಾಗಿ ವಸೂಲಿ ಮಾಡುವ ಸಾಧ್ಯತೆ ಇದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮಿಥುನ ರಾಶಿ

ನಿಮ್ಮ ಕನಸಿನ ಯೋಜಿತ ಕಾರ್ಯಗಳು ನನಸಾಗುವ ಸಂದರ್ಭ ಎದುರಾಗುತ್ತದೆ. ಧಾರ್ಮಿಕ ಚಟುವಟಿಕೆಗಳಲ್ಲಿ ವಿಶೇಷ ಆಸಕ್ತಿ ವಹಿಸುವ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಿಕೊಳ್ಳುವ ದಿನವಿದು. ಸನ್ಯಾಸಿಯ ಮನಸ್ಥಿತಿ ನಿಮ್ಮ ವಿಚಾರಗಳಿಗೆ ವಿರುದ್ಧವಾಗಿ ವರ್ತಿಸಬಹುದು. ಹೊಸ ವಾಹನ ಖರೀದಿ ಪ್ರಕ್ರಿಯೆಗಳನ್ನು ಈಗ ಸದ್ಯಕ್ಕೆ ಬೇಡ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕರ್ಕಾಟಕ ರಾಶಿ

ಬಂಡವಾಳದ ಸಮಸ್ಯೆಗೆ ಪರಿಹಾರ ದೊರಕಲಿದೆ. ಮಕ್ಕಳ ಬೆಳವಣಿಗೆಗಾಗಿ ನೀವು ಅವರಿಗೆ ಸಹಕಾರ ನೀಡುವುದು ಒಳ್ಳೆಯದು. ಹೊಸತನದ ಆಲೋಚನೆ ನಿಮಗೆ ಶುಭದಾಯಕ ಕ್ಷಣಗಳನ್ನು ದಯಪಾಲಿಸುತ್ತದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಸಿಂಹ ರಾಶಿ

ಮಾಡುವ ವೃತ್ತಿಯಲ್ಲಿ ಸಂಪೂರ್ಣ ಬೆಂಬಲ ಸಿಗಲಿದೆ. ನಿಮ್ಮ ವಿಚಾರಗಳಲ್ಲಿ ಬದಲಾವಣೆ ಕಾಣಬಹುದು. ಚಿಂತನೆಗಳ ಸಾಕ್ಷಾತ್ಕಾರವು ಪೂರ್ಣ ಫಲವನ್ನು ನೀಡಲಿದೆ. ಆರ್ಥಿಕ ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತದೆ. ಕುಟುಂಬದಲ್ಲಿನ ಮನಃಸ್ತಾಪ ಕೊನೆಗೊಳ್ಳುವ ಸಂದರ್ಭ ಬಂದಿದೆ. ಬಂಧುಮಿತ್ರರೊಡನೆ ಶುಭಕಾರ್ಯದ ಬಗ್ಗೆ ಚರ್ಚೆ ನಡೆಸುವಿರಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕನ್ಯಾ ರಾಶಿ

ಅಪರಿಚಿತರ ಸಂಘದಿಂದ ಆದಷ್ಟು ಅಂತರ ಕಾಯ್ದುಕೊಳ್ಳಿ. ಧಾರ್ಮಿಕ ವಿಧಿ ವಿಧಾನಗಳನ್ನು ಪೂರ್ಣವಾಗಿ ಪೂರೈಸಲಿದ್ದೀರಿ. ಮಕ್ಕಳ ಯೋಜನೆಗೆ ನಿಮ್ಮ ಬೆಂಬಲ ಅವಶ್ಯಕವಾಗಿ ಬೇಕಾಗಿದೆ, ಅವರ ಪ್ರತಿಯೊಂದು ಕಾರ್ಯಕ್ಕೆ ತಿದ್ದಿತೀಡಿ ಉತ್ತಮಪಡಿಸಿ. ಕುಟುಂಬದ ಆನಂದ ಕ್ಷಣಗಳನ್ನು ಸವಿಯುವ ಸಂದರ್ಭ ಬರಲಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ತುಲಾ ರಾಶಿ

ದೃಢ ಮನಸ್ಥಿತಿಯಿಂದ ಮಾಡಿದ ಕಾರ್ಯಗಳು ಬಲುಬೇಗನೆ ಯಶಸ್ಸು ನೀಡುವುದು ಖಚಿತ. ನಿಮ್ಮ ಯೋಜನೆಗಳಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವನ್ನು ತೆಗೆದು ಹಾಕಲು ಪ್ರಯತ್ನಿಸಿ. ಪಾಲುದಾರಿಕೆ ವ್ಯವಹಾರ ಮಾಡುವುದು ಬೇಡ. ವ್ಯಾಪಾರದಲ್ಲಿ ಈ ದಿನ ಉತ್ತಮ ವಹಿವಾಟು ನಿರೀಕ್ಷಿಸುವ ಸಾಧ್ಯತೆ ಇದೆ. ಆರ್ಥಿಕವಾಗಿ ಪ್ರಗತಿದಾಯಕ ಬೆಳವಣಿಗೆ ಕಂಡುಬಂದರು ಅನಗತ್ಯ ಖರ್ಚು ಗಳಿಂದ ಹೊರೆ ಹೆಚ್ಚಾಗಲಿದೆ. ಮಕ್ಕಳಿಗೆ ವಿದ್ಯೆ ಹಾಗೂ ಬದುಕಿನ ಪಾಠವನ್ನು ಕಲಿಸಿ ಅವರಿಗೆ ಹಣ ನೀಡುವುದು ಒಳ್ಳೆಯದಲ್ಲ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ವೃಶ್ಚಿಕ ರಾಶಿ

ಜಮೀನು ಖರೀದಿಯ ಬಯಕೆಗೆ ಸಕಾರಾತ್ಮಕವಾದ ಸ್ಪಂದನೆ ಸಿಗಲಿದೆ. ಉದ್ಯೋಗದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಎದುರಾಗಬಹುದು, ಜಾಣ್ಮೆಯ ಮಾತುಗಳನ್ನಾಡುವುದರಿಂದ ಉದ್ಯೋಗದಲ್ಲಿನ ಸಮಸ್ಯೆಯನ್ನು ನಿವಾರಿಸಬಹುದಾಗಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಧನಸ್ಸು ರಾಶಿ

ಮಾಡುವ ಕೆಲಸದಿಂದ ಪ್ರಶಂಸೆ ಸಿಗಲಿದೆ. ನಿಮ್ಮ ಸಹಕಾರವನ್ನು ಹಲವರು ಬಯಸಿ ಬರಲಿದ್ದಾರೆ. ಹಣಕಾಸಿನ ವಿಷಯದಲ್ಲಿ ಜಾಗೃತೆ ಇರಲಿ. ನೀವು ಮಕ್ಕಳ ಬೆಳವಣಿಗೆಗೆ ನೀವು ಸಹ ಶ್ರಮ ಪಡಬೇಕಾಗಿದೆ. ಆತ್ಮೀಯರು ನಿಮ್ಮ ದೊಡ್ಡಮಟ್ಟದ ಕೆಲಸಗಳಿಗೆ ಸಹಾಯದ ಹಸ್ತ ನೀಡಲಿದ್ದಾರೆ. ಸೌಂದರ್ಯದ ಆರಾಧನೆಯನ್ನು ಮಾಡುವ ತವಕ ನಿಮ್ಮಲ್ಲಿ ಕಾಣಬಹುದು. ಯೋಜನೆಯ ವಿಷಯವಾಗಿ ಉತ್ತಮ ವಾದ ಮಂಡನೆ ಮಾಡಲಿದ್ದೀರಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮಕರ ರಾಶಿ

ನಿಮ್ಮ ವಿಷಯದಲ್ಲಿ ಅನಗತ್ಯ ತೊಂದರೆ ನೀಡುವವರನ್ನು ಈ ದಿನ ನಿಮ್ಮಿಂದಲೇ ಮೆಚ್ಚುಗೆ ಮಾತನಾಡಿ ಇದು ನಿಮ್ಮ ಸಮಸ್ಯೆ ನಿವಾರಣೆ ಮಾಡುತ್ತದೆ. ಪ್ರವಾಸದ ಚಿಂತನೆ ಮಾಡುವ ಸಾಧ್ಯತೆ ಇದೆ. ನಿಮ್ಮ ನಯವಾದ ವ್ಯಕ್ತಿತ್ವದಿಂದ ಸಮಸ್ಯೆಗಳನ್ನು ಪರಿಹಾರ ಮಾಡುವಿರಿ. ಪ್ರೇಮದ ಬಗ್ಗೆ ಆಸಕ್ತಿ ನಿಮ್ಮಲ್ಲಿ ಮೂಡುವುದು ಕಂಡುಬರುತ್ತದೆ. ದೈನಂದಿನ ಜೀವನಕ್ಕೆ ಅಗತ್ಯವಿರುವ ಕೆಲವು ಶೈಕ್ಷಣಿಕ ತರಬೇತಿಗಳನ್ನು ಪಡೆಯಲು ಮುಂದಾಗುತ್ತೀರಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕುಂಭ ರಾಶಿ

ಹೊಸದಾಗಿ ಬರುವ ಕೆಲಸಕ್ಕೆ ನೀವು ಆತುರದಿಂದ ವರ್ತಿಸುವುದು ಬೇಡ ಯೋಜನೆಯ ಸಮಗ್ರವಾಗಿ ಅಧ್ಯಯನ ಮಾಡಿ ಮತ್ತು ವಿಳಂಬಮಾಡದೆ ಪಡೆದುಕೊಳ್ಳಿ. ಈ ದಿನ ನಿಮ್ಮಿಂದ ಗೃಹ ಕಾರ್ಯಗಳು ನಡೆಯಲಿದೆ, ಇದು ಮಡದಿಯ ಮನಸ್ಸಿಗೆ ಸಂತೋಷ ನೀಡುತ್ತದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮೀನ ರಾಶಿ

ಕುಟುಂಬದಲ್ಲಿ ಜೀವನದ ಏಳಿಗೆಗಾಗಿ ಚರ್ಚೆಗಳನ್ನು ನಡೆಸುವಿರಿ. ವ್ಯವಹಾರದಲ್ಲಿ ಉತ್ತಮ ಮಾತುಗಳು ಮತ್ತು ನೈಜತೆಯನ್ನು ಬೆಳೆಸಿಕೊಳ್ಳಿ. ಉದ್ಯೋಗ ಮಾಡಲು ಅವಕಾಶಗಳು ಹೆಚ್ಚಳವಾಗುತ್ತದೆ. ಈ ದಿನ ಸ್ನೇಹಮಯವಾಗಿದ್ದು ಹಲವರನ್ನು ಸ್ನೇಹಿತರನ್ನಾಗಿ ಮಾಡಿಕೊಳ್ಳುವಿರಿ. ನೆನೆಗುದಿಗೆ ಬಿದ್ದಿರುವ ಕಾರ್ಯವನ್ನು ಸಾಕಾರಗೊಳಿಸಲು ನಿಮ್ಮಿಂದ ಪ್ರಯತ್ನ ನಡೆಯಲಿದೆ. ಸಂಬಂಧಿಕರ ಭೇಟಿ ಹೊಸ ಹುಮ್ಮಸ್ಸು ಅಥವಾ ಆಲೋಚನೆ ತಂದುಕೊಡುತ್ತದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಗಿರಿಧರ ಭಟ್
ನಿಮ್ಮ ಸಮಸ್ಯೆಗಳ ಸಮಾಲೋಚನೆಗಾಗಿ ಲಭ್ಯರಿದ್ದಾರೆ. ಪರಿಹಾರ ಮಾರ್ಗದರ್ಶನಕ್ಕಾಗಿ

ಇಂದೇ ಕರೆ ಮಾಡಿ.
9945410150

ದಿನದ ಸುದ್ದಿ

ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.

ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.

4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್

Published

on

ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ರಂಗಸ್ವಾಮಿ ಟಿ.ಆರ್. ವಹಿಸಿ, ವಿದ್ಯಾರ್ಥಿಗಳಿಗೆ ಲಭ್ಯವಾಗಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ವಿಶೇಷ ಉಪನ್ಯಾಸದಲ್ಲಿ ಶ್ರೀ ವಿಶ್ವನಾಥ್ ಡಿ.ಆರ್., ಉಪನ್ಯಾಸಕರು ಹಾಗೂ ಪತ್ರಿಕಾ ವರದಿಗಾರರು, ಕೆ. ಬೇವಿನಹಳ್ಳಿ ಅವರು “ಸ್ವಾಮಿ ವಿವೇಕಾನಂದ ಮತ್ತು ಯುವಜನತೆ” ವಿಷಯದ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ಸ್ವಾಮಿ ವಿವೇಕಾನಂದರ ಜೀವನ ಸಾಧನೆ, ವ್ಯಕ್ತಿತ್ವ ಹಾಗೂ ದೇಶಭಕ್ತಿ ಕುರಿತು ವಿವರಿಸಿ, ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಅನುಸರಿಸಿ ಉತ್ತಮ ಆಚಾರ-ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಯುವಜನತೆ ತಮ್ಮ ಶಕ್ತಿಯನ್ನು ಸಮಾಜಸೇವೆ ಹಾಗೂ ದೇಶದ ಅಭಿವೃದ್ಧಿಗೆ ಬಳಸಬೇಕು ಎಂದು ಕರೆ ನೀಡಿದರು.

“ಎದ್ದು ನಿಲ್ಲಿ, ಜಾಗ್ರತವಾಗಿರಿ, ಗುರಿ ಸಾಧಿಸುವ ತನಕ ನಿಲ್ಲಬೇಡಿ” ಎಂಬ ಸ್ವಾಮಿ ವಿವೇಕಾನಂದರ ಅಮೂಲ್ಯ ವಾಕ್ಯವನ್ನು ಉಲ್ಲೇಖಿಸಿ, ಯುವಕರಲ್ಲಿ ಆತ್ಮವಿಶ್ವಾಸ ಮತ್ತು ಗುರಿನಿಷ್ಠೆ ಬೆಳೆಸುವಂತೆ ಪ್ರೇರೇಪಿಸಿದರು.

ಶ್ರೀ ಎ. ಜಯಪ್ಪ ಅವರು ಎನ್‌.ಎಸ್‌.ಎಸ್‌. ಕಾರ್ಯಚಟುವಟಿಕೆಗಳು ಸಮಾಜಸೇವೆ ಹಾಗೂ ಸಾಮಾಜಿಕ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.

ಶ್ರೀ ಪಿ.ವಿ. ಸತೀಶ್ ಅವರು ಹಳ್ಳಿ ಜೀವನದ ಮಹತ್ವ ಹಾಗೂ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿದರು.

ಉಪನ್ಯಾಸಕಿ ಕಾವ್ಯ ಶ್ರೀ ಅವರು ಮಹಿಳಾ ಸಬಲೀಕರಣದ ಕುರಿತು ಮಾತನಾಡಿ, ಮಹಿಳೆಯರು ಶಿಕ್ಷಣ ಹಾಗೂ ಆತ್ಮವಿಶ್ವಾಸದಿಂದ ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನವನ್ನು ಪಡೆಯಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರಾದ ವಾಗೀಶ್ ಸುದರ್ಶನ ಎಸ್.ಸಿ., ವಿಜಯ, ಹನುಮಂತಪ್ಪ ಯು., ಕೆ.ಎಸ್‌. ಬಸವರಾಜು, ಕೆ. ರೇವಣಸಿದ್ಧಪ್ಪ ಮುಂತಾದವರು ಭಾಗವಹಿಸಿದ್ದರು.

ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಹಾಗೂ ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್ ಹಾಗೂ ಉಪನ್ಯಾಸಕರಾದ ಶ್ರೀ ಶಾಂತಕುಮಾರ್ ಉಪಸ್ಥಿತರಿದ್ದರು.

ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಎರಡನೇ ದಿನದ ಶಿಬಿರವು ಮುಕ್ತಾಯಗೊಂಡಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಲೋಕಾಯುಕ್ತ ಪೋಲಿಸ್ ಇನ್ಸ್‌ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

Published

on

ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ್ ಎ.ಬಿ. ವಹಿಸಿದ್ದರು.

ಮುಖ್ಯ ಉಪನ್ಯಾಸಕರಾಗಿ ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಇವರ ಪೋಲಿಸ್ ಇನ್ಸ್‌ಪೆಕ್ಟರ್ ಶ್ರೀ ಪ್ರಭು ಬಿ. ಸೂರಿನ ಭಾಗವಹಿಸಿ “ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ” ಕುರಿತು ಸಮಗ್ರ ಮಾಹಿತಿ ನೀಡಿದರು. ಕರ್ನಾಟಕ ಲೋಕಾಯುಕ್ತದ ಸ್ಥಾಪನೆ ಮತ್ತು ಹಿನ್ನೆಲೆ, ಸಂಸ್ಥೆಯ ವ್ಯಾಪ್ತಿ, ದೂರು ಸಲ್ಲಿಸುವ ವಿಧಾನ, ವಿಚಾರಣೆ ಕ್ರಮ, ಭ್ರಷ್ಟಾಚಾರ ತಡೆ ಕಾಯ್ದೆಯ ಪ್ರಮುಖ ಅಂಶಗಳು, ಲೋಕಾಯುಕ್ತ ಸಂಸ್ಥೆಯ ವೈಶಿಷ್ಟ್ಯತೆಗಳು, ಹಗರಣಗಳ ತನಿಖಾ ವಿಧಾನ ಹಾಗೂ ಸರ್ಕಾರಿ ಹಣದ ದುರುಪಯೋಗ ತಡೆ ಕ್ರಮಗಳ ಬಗ್ಗೆ ವಿವರಿಸಿದರು. ಉಪನ್ಯಾಸದ ಅಂತ್ಯದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು.

ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಹೆಚ್.ಆರ್. ತಿಪ್ಪೇಸ್ವಾಮಿ ಅವರು ಯುವಜನತೆ ಹಾಗೂ ಸಾಮಾಜಿಕ ಸಾಮರಸ್ಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.

ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಮತ್ತು ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್, ಗ್ರಾಮದವರಾದ ಬಸವರಾಜ್, ಹಾಲಪ್ಪ, ಮಹದೇವಪ್ಪ, ಕುರಿಯರ್ ದುರುಗಪ್ಪ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಭ್ರಷ್ಟಾಚಾರ ವಿರೋಧಿ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending