ದಿನದ ಸುದ್ದಿ
ಎಲ್ಲಾ ಬುದ್ಧರುಗಳ ಬೋಧನೆಯ ತಿರುಳೆ ಈ ಗಾಥೆ..!
- ಶಿವಸ್ವಾಮಿ, ಬೌದ್ಧುಪಾಸಕರು
“ಸಬ್ಬ ಪಾಪಸ್ಸ ಅಕರಣಂ,
ಕುಸಲಸ್ಸ ಉಪಸಂಪದಾ,
ಸಚಿತ್ತ ಪರಿಯೋದಪನಂ,
ಏತಂ ಬುದ್ಧಾನಸಾಸನಂ “
– ಧಮ್ಮಪದ, -183.
ಈ ಗಾಥೆಯು ಒಬ್ಬ ಸಾಧಕನು ಅಷ್ಟಾಂಗ ಮಾರ್ಗವನ್ನು ತನ್ನ ನಿತ್ಯಜೀವನದಲ್ಲಿ ಹೇಗೆ ಪಾಲಿಸಬೇಕೆಂಬುದನ್ನು ಹೇಳುತ್ತದೆ.
‘ಸಬ್ಬ ಪಾಪಸ್ಸ ಅಕರಣಂ‘ – ಕೆಟ್ಟದನ್ನು ಮಾಡದಿರುವುದು ಅಂದರೆ ಸರಿಯಾದ ಮಾತಾನ್ನಾಡುವ,ಸರಿಯಾದ ಕೆಲಸವನ್ನು ಮಾಡುವ ಮತ್ತು ಸರಿಯಾದ ಜೀವನೋಪಾಯದ ವಿಚಾರಕ್ಕೆ ಸಂಬಂಧಿಸಿದೆ.ಯಾರು ಮಾತು,ಕೃತಿ ಮತ್ತು ಸಂಪಾದನೆಯಲ್ಲಿ ಕೆಡಕನ್ನು ಮಾಡುವುದಿಲ್ಲವೋ ಅವರು ಶೀಲವನ್ನು ಪಾಲಿಸುತ್ತಾರೆ.
‘ಕುಸಲಸ್ಸ ಉಪಸಂಪದಾ‘, ಕುಶಲವನ್ನು ಸಂಪಾದಿಸುವುದು ಧ್ಯಾನಕ್ಕೆ (ಸಮಾಧಿ) ಸಂಬಂದಿಸಿರುವುದು ಸರಿಯಾದ ಪ್ರಯತ್ನ,ಸರಿಯಾದ ಮಾನಸಿಕ ಜಾಗ್ರತೆ ಮತ್ತು ಸರಿಯಾದ ಏಕಾಗ್ರತೆ ಒಳಗೊಂಡಿದೆ. ಯಾರು ಸಮತಾ ಧ್ಯಾನದ ಮೂಲಕ ಮನಸ್ಸನ್ನ ತರಬೇತಿಗೊಳಿಸಿಕೊಳ್ಳುತ್ತಾರೊ ಅವರು ಅನಂದವನ್ನು ಬೆಳೆಸಿಕೊಳ್ಳುತ್ತಾರೆ.ಆ ಮೂಲಕ ಚೇತೋ ವಿಮುಕ್ತಿಯನ್ನು ( ಮನಸ್ಸಿನಿಂದ ಬಿಡುಗಡೆ) ಪಡೆಯುತ್ತಾರೆ.
‘ಸಚಿತ್ತ ಪರಿಯೋದಪನಂ‘, ಮನಸ್ಸನ್ನು ಪರಿಶುದ್ಧಗೊಳಿಸಿಕೊಳ್ಳುವುದು ಪ್ರಜ್ಞೆಗೆ ಸಂಬಂಧಪಟ್ಟಿದೆ. ಈ ಪ್ರಜ್ಞೆಯಲ್ಲಿ ಸರಿಯಾದ ದೃಷ್ಟಿ ಮತ್ತು ಸರಿಯಾದ ಸಂಕಲ್ಪ ಅಥವಾ ಆಲೋಚನೆ ಸೇರಿಕೊಂಡಿವೆ. ಯಾರು ವಿಪಸ್ಸನ ಧ್ಯಾನದ ಮೂಲಕ ಮನಸ್ಸನ್ನು ವಿಕಸನಗೊಳಿಸುತ್ತಾರೊ ಅವರು ಎಷ್ಟೇ ಸೂಕ್ಷ್ಮ ವಿರುವ ಮಾನಸಿಕ ಕೊಳಕುಗಳನ್ನು ಬುಡಮೇಲು ಮಾಡಿ ಆ ಮೂಲಕ ಮನಸ್ಸು ಪರಿವರ್ತನೆಯಾಗಿ ಸಂಸಾರ ಬಂಧನದಿಂದ (ಮತ್ತೆ ಮತ್ತೆ ಹುಟ್ಟುವ) ಬಿಡುಗಡೆ ಹೊಂದುತ್ತಾರೆ.
ಶೀಲ ಸಮಾಧಿ ಪ್ರಜ್ಞೆ ಈ ಮೂರನ್ನು ಸಾಧನೆಯಲ್ಲಿ ತರುವುದೆಂದರೆ ಮೂರು ರೀತಿಯ ಭಿನ್ನವಾಗಿದೆ ಮಾನಸಿಕ ಕ್ರಿಯೆಗಳು ಮತ್ತು ಬದುಕಿನ ರೀತಿಗಳಾಗಿವೆ.ಇವು ಯಾವುವೆಂದರೆ ಸಿಕ್ಖಾ (ತರಬೇತಿ), ಭಾವನಾ (ಮನಸ್ಸಿನ ಬೆಳವಣಿಗೆ) ಮತ್ತು ವಿಶುದ್ಧಿ (ಮನಸ್ಸಿನ ಶುದ್ಧೀಕರಣ) ಸಿಕ್ಖಾ ಎಂದರೆ ಶೀಲದ ಮೂಲಕ ತನ್ನನ್ನು ತಾನೇ ತಯಾರು ಮಾಡಿಕೊಳ್ಳುವುದು – ಅದು ಪಂಚಶೀಲಗಳು ಮತ್ತು ಅಷ್ಟಶೀಲಗಳು ದಶಶೀಲಗಳು ಹಾಗೆಯೇ 227 ಭಿಕ್ಕು ನಿಯಮಗಳು ಅಥವಾ ಸನ್ಯಾಸಿ ನಿಯಮಗಳು.
ಒಬ್ಬನು ತನ್ನನ್ನು ಕಮ್ಮ ವಾಚಾ,ಕಮ್ಮ ಕಮ್ಮಂತ, ಕಮ್ಮ ಆಜೀವ(ಮಾತು ಕ್ರಿಯೆ ಜೀವನೋಪಾಯ) ಶೀಲಗಳ ಮೂಲಕ ಗುಣವರ್ಧನೆ ಮತ್ತು ನೈತಿಕ ಬಲವನ್ನು ಹೊಂದುತ್ತಾನೆ.ಶೀಲವನ್ನು ಶ್ರಿಮಂತಗೊಳಿಸಿದಷ್ಟೂ ಆತನ ನಡವಳಿಕೆ ಶುದ್ಧವಾಗಿ ಮನಸ್ಸು ಪರಿಶುದ್ಧವಾಗುತ್ತದೆ.
ಯಾರು ಧ್ಯಾನದಲ್ಲೇ ಸಾಧನೆಗೈದು ಮುಂದುವರಿಯುತ್ತಾರೊ ಅವರು ಮಾನಸಿಕ ಏಕಾಗ್ರತೆಯನ್ನು ಬೆಳೆಸಿಕೊಳ್ಳುತ್ತಾರೆ.ಈ ಮೂಲಕ ಮಾನಸಿಕ ಸ್ಥಿತಿಗಳಿಗೂ ಮೀರಿದ ಸಮಾಧಿ ಸ್ಥಿತಿ ಅಥವಾ ಜಾನದ ಹಂತಕ್ಕೆ ತಲುಪುತ್ತಾರೆ. ಬೌದ್ಧ ಧಮ್ಮದಲ್ಲಿ 40 ಕ್ಕೂ ಹೆಚ್ಚು ರೀತಿಯ ಧ್ಯಾನಗಳಿವೆ ಪ್ರಮುಖವಾದವು ಸಮತಾ ಮತ್ತು ವಿಪಸ್ಸನಾ,ಸಮತಾ ಧ್ಯಾನವು ಸಮಾಧಿಯ ವಿವಿಧ ಸ್ತರಗಳಿಗೆ ಕೊಂಡೊಯ್ದು ಮನಸ್ಸನ್ನು ಉನ್ನತ ಸ್ಥಿತಿಗಳಿಗೆ ಕರೆದೊಯ್ಯುತ್ತದೆ,ಮನಸ್ಸು ಎಲ್ಲ ರೀತಿಯ ಮಾನಸಿಕ ಅಡೆತಡೆಗಳಿಂದ ಅಂದರೆ ಧ್ಯಾನ ಶೀಲ ಪಾರಮಾರ್ಥಿಕ ಬೆಳವಣಿಗೆಗೆ ಅಡ್ಡಿ ಬರುವ ಸಂಗತಿಗಳಿಂದ ಮುಕ್ತವಾಗುತ್ತದೆ.ಹೀಗೆ ಒಬ್ಬನು ಉತ್ತಮ ಸ್ಥಿತಿಗಳತ್ತ ಸಾಗುತ್ತಾನೆ.
ಈ ಮಾನಸಿಕ ಅಡೆತಡೆಗಳು ಇಂದ್ರಿಯ ಸಂಬಂಧ ಆಸೆಗಳು,ದ್ವೇಷ, ಸೋಮಾರಿತನ, ಅಶಾಂತಿ ಅನುಮಾನ.ಒಮ್ಮೆ ಮನಸ್ಸು ಅಡೆತಡೆಗಳಿಂದ ಹೊರತಾದಲ್ಲಿ ಚಿತ್ತವಿಶುದ್ಧಿಯಾಗುತ್ತದೆ.ಮನಸ್ಸೊಂದೇ ಶುದ್ಧಿಯಾಗುವುದರಿಂದ ಸಂಸಾರಿಕ ತಾಪತ್ರಯಗಳಿಂದ ಮುಕ್ತಿ ದೊರಕದು.ಉತ್ತಮ ಮಾನಸಿಕ ಸ್ಥಿತಿಗಳನ್ನು ಬೆಳೆಸಿಕೊಳ್ಳುವುದರ ಮೂಲಕ ಒಬ್ಬನು ಹಲವಾರು ಲೋಕೋತ್ತರ ಶಕ್ತಿಗಳನ್ನು ಅಥವಾ ಜ್ಞಾನದ ಸ್ಥಿತಿಗಳನ್ನು ಪಡೆಯುತ್ತಾನೆ.
ಯಾರು ಸಮತಾ ಧ್ಯಾನಕ್ಕಿಂತ ಭಿನ್ನವಾದ ವಿಪಸ್ಸನಾ ಧ್ಯಾನದಲ್ಲಿ ಸಾಧನೆಗೈಯುತ್ತಾರೊ ಅವರು ವಾಸ್ತವತೆಗಳ ವಿಭಿನ್ನ ಹಂತಗಳನ್ನು ಬೆಳೆಸಿಕೊಳ್ಳುತ್ರಾರೆ. ಧ್ಯಾನಾವಸ್ಥೆಯ ಈ ವಿವಿಧ ಮಜಲುಗಳು ಮಾನಸಿಕ ಕೊಳಕುಗಳನ್ನು ಬುಡಮೇಲು ಮಾಡಿ ಮನಸ್ಸನ್ನು ಪರಿಶುದ್ಧಗೊಳಿಸುವುದಲ್ಲದೆ ಪರಿವರ್ತನೆಯನ್ನು ಮಾಡುತ್ತವೆ. ಪರಿವರ್ತಿತಗೊಂಡ ಮನಸ್ಸು ಲೋಕೀಯ ಚಿತ್ತದಿಂದ ಲೋಕೋತ್ತರ ಚಿತ್ತಸ್ಥಿತಿಗೆ ಹೊಗುತ್ತದೆ.
4 ರೀತಿಯ ಲೋಕೋತ್ತರ ಚಿತ್ತ ಸ್ಥಿತಿಗಳಿವೆ;ಅಂದರೆ ಧ್ಯಾನದ ಉನ್ನತ ಸ್ಥಿತಿಯನ್ನು ಮೀರಿರುವ ನಿಬ್ಬಾಣವನ್ನು ಮುಟ್ಟಿರುವ ಚಿತ್ತ ಸ್ಥಿತಿ,ಕಾಮಲೋಕ (ಇಂದ್ರಿಯ ಸಂಬಂಧ ಆಸೆಗಳಿಂದ ಕೂಡಿದ ವಲಯ) ರೂಪಲೋಕ (ಸೂಕ್ಷ್ಮ ವಸ್ತುಗಳಿಂದ ಕೂಡಿದ ವಲಯ) ಅರೂಪ ಲೋಕ (ರೂಪರಹಿತ ಸಂಗತಿಗಳಿಂದ ಕೂಡಿದ ವಲಯ) ಈ ಮೂರು ರೀತಿಯ ಅಸ್ತಿತ್ವಗಳಿಂದ ಕೂಡಿದ ಲೋಕೀಯ ಚಿತ್ತಸ್ಥಿತಿಯನ್ನು ಮೀರಿರುವ ಲೋಕೋತ್ತರ ಚಿತ್ತ.
ತಾನೇ ತನ್ನ ಅಕುಶಲ ಕರ್ಮಗಳಿಂದ (ಪಾಳಿಯಲ್ಲಿ ಕಮ್ಮಗಳು )ಸೃಷ್ಟಿಸಿಕೊಂಡ ಸಂಯೋಜನೆಗಳನ್ನು ನಾಶಮಾಡಿಕೊಂಡ ಮೇಲೆ ಮನಸ್ಸು ಮೇಲೆ ಹೇಳಿದ ಮೂರು ಅಸ್ತಿತ್ವ ವಲಯಗಳನ್ನು ಮೀರುತ್ತಾ ಬಿಡುಗಡೆಯತ್ತಾ ಪಯಣಿಸುತ್ತಾದೆ.ಈ ಸಂಯೋಜನೆಗಳೇ ಮುಂದಿನ ಹುಟ್ಟಿಗೆ ಅಥವಾ ಪುನಬ್ಭವಕ್ಕೆ ಕೊಂಡಿಯಾಗುತ್ತವೆ.ಒಮ್ಮೆ ಈ ಸಂಯೋಜನೆಗಳು ಮುರಿದವೆಂದರೆ ಮನಸ್ಸು ಪ್ರಾಪಂಚಿಕ ಅಸ್ತಿತ್ವದಿಂದ ವಿಮುಕ್ತಿಗೊಳ್ಳುತ್ತದೆ.4 ಲೋಕೋತ್ತರ ಫಲ ಚಿತ್ತದಿಂದ ಉದ್ಭವವಾಗುವ 4 ಹಂತಗಳ ಬಿಡುಗಡೆ ಇದೆ.ಈ 4 ಲೋಕೋತ್ತರ ಸ್ಥಿತಿಗಳ ಸಂಯೋಜನೆಗಳನ್ನು ನಾಶ ಮಾಡುತ್ತಾ ಹೋಗುತ್ತದೆ ಈ ಮೂಲಕ ಮನಸ್ಸು ಬಿಡುಗಡೆಗೊಂಡು ಪರಿಶುದ್ಧವಾಗುತ್ತದೆ.
ಕೊನೆಯ ಸಾಲು “ಏತಂ ಬುದ್ಧಾನುಸಾಸನಂ” ಇದರಲ್ಲಿ 3 ರೀತಿಯ ತರಬೇತಿ ಭೋಧನೆ ಇದೆ
ಅವು ಸಿಕ್ಖಾ (ಮನಸ್ಸಿನ ತರಬೇತಿ),
ಭಾವನ (ಮನಸ್ಸಿನ ಬೆಳವಣಿಗೆ), ಮತ್ತು ವಿಶುದ್ಧಿ (ಪರಿಶುದ್ಧಿ) ಇವೇ ಎಲ್ಲಾ ಬುದ್ಧರುಗಳ ಭೋಧನೆಯ ತಿರುಳು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.
ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.
4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್
ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ರಂಗಸ್ವಾಮಿ ಟಿ.ಆರ್. ವಹಿಸಿ, ವಿದ್ಯಾರ್ಥಿಗಳಿಗೆ ಲಭ್ಯವಾಗಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ವಿಶೇಷ ಉಪನ್ಯಾಸದಲ್ಲಿ ಶ್ರೀ ವಿಶ್ವನಾಥ್ ಡಿ.ಆರ್., ಉಪನ್ಯಾಸಕರು ಹಾಗೂ ಪತ್ರಿಕಾ ವರದಿಗಾರರು, ಕೆ. ಬೇವಿನಹಳ್ಳಿ ಅವರು “ಸ್ವಾಮಿ ವಿವೇಕಾನಂದ ಮತ್ತು ಯುವಜನತೆ” ವಿಷಯದ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ಸ್ವಾಮಿ ವಿವೇಕಾನಂದರ ಜೀವನ ಸಾಧನೆ, ವ್ಯಕ್ತಿತ್ವ ಹಾಗೂ ದೇಶಭಕ್ತಿ ಕುರಿತು ವಿವರಿಸಿ, ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಅನುಸರಿಸಿ ಉತ್ತಮ ಆಚಾರ-ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಯುವಜನತೆ ತಮ್ಮ ಶಕ್ತಿಯನ್ನು ಸಮಾಜಸೇವೆ ಹಾಗೂ ದೇಶದ ಅಭಿವೃದ್ಧಿಗೆ ಬಳಸಬೇಕು ಎಂದು ಕರೆ ನೀಡಿದರು.
“ಎದ್ದು ನಿಲ್ಲಿ, ಜಾಗ್ರತವಾಗಿರಿ, ಗುರಿ ಸಾಧಿಸುವ ತನಕ ನಿಲ್ಲಬೇಡಿ” ಎಂಬ ಸ್ವಾಮಿ ವಿವೇಕಾನಂದರ ಅಮೂಲ್ಯ ವಾಕ್ಯವನ್ನು ಉಲ್ಲೇಖಿಸಿ, ಯುವಕರಲ್ಲಿ ಆತ್ಮವಿಶ್ವಾಸ ಮತ್ತು ಗುರಿನಿಷ್ಠೆ ಬೆಳೆಸುವಂತೆ ಪ್ರೇರೇಪಿಸಿದರು.
ಶ್ರೀ ಎ. ಜಯಪ್ಪ ಅವರು ಎನ್.ಎಸ್.ಎಸ್. ಕಾರ್ಯಚಟುವಟಿಕೆಗಳು ಸಮಾಜಸೇವೆ ಹಾಗೂ ಸಾಮಾಜಿಕ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ಶ್ರೀ ಪಿ.ವಿ. ಸತೀಶ್ ಅವರು ಹಳ್ಳಿ ಜೀವನದ ಮಹತ್ವ ಹಾಗೂ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿದರು.
ಉಪನ್ಯಾಸಕಿ ಕಾವ್ಯ ಶ್ರೀ ಅವರು ಮಹಿಳಾ ಸಬಲೀಕರಣದ ಕುರಿತು ಮಾತನಾಡಿ, ಮಹಿಳೆಯರು ಶಿಕ್ಷಣ ಹಾಗೂ ಆತ್ಮವಿಶ್ವಾಸದಿಂದ ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನವನ್ನು ಪಡೆಯಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರಾದ ವಾಗೀಶ್ ಸುದರ್ಶನ ಎಸ್.ಸಿ., ವಿಜಯ, ಹನುಮಂತಪ್ಪ ಯು., ಕೆ.ಎಸ್. ಬಸವರಾಜು, ಕೆ. ರೇವಣಸಿದ್ಧಪ್ಪ ಮುಂತಾದವರು ಭಾಗವಹಿಸಿದ್ದರು.
ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಹಾಗೂ ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್ ಹಾಗೂ ಉಪನ್ಯಾಸಕರಾದ ಶ್ರೀ ಶಾಂತಕುಮಾರ್ ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಎರಡನೇ ದಿನದ ಶಿಬಿರವು ಮುಕ್ತಾಯಗೊಂಡಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು
ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ್ ಎ.ಬಿ. ವಹಿಸಿದ್ದರು.
ಮುಖ್ಯ ಉಪನ್ಯಾಸಕರಾಗಿ ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಇವರ ಪೋಲಿಸ್ ಇನ್ಸ್ಪೆಕ್ಟರ್ ಶ್ರೀ ಪ್ರಭು ಬಿ. ಸೂರಿನ ಭಾಗವಹಿಸಿ “ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ” ಕುರಿತು ಸಮಗ್ರ ಮಾಹಿತಿ ನೀಡಿದರು. ಕರ್ನಾಟಕ ಲೋಕಾಯುಕ್ತದ ಸ್ಥಾಪನೆ ಮತ್ತು ಹಿನ್ನೆಲೆ, ಸಂಸ್ಥೆಯ ವ್ಯಾಪ್ತಿ, ದೂರು ಸಲ್ಲಿಸುವ ವಿಧಾನ, ವಿಚಾರಣೆ ಕ್ರಮ, ಭ್ರಷ್ಟಾಚಾರ ತಡೆ ಕಾಯ್ದೆಯ ಪ್ರಮುಖ ಅಂಶಗಳು, ಲೋಕಾಯುಕ್ತ ಸಂಸ್ಥೆಯ ವೈಶಿಷ್ಟ್ಯತೆಗಳು, ಹಗರಣಗಳ ತನಿಖಾ ವಿಧಾನ ಹಾಗೂ ಸರ್ಕಾರಿ ಹಣದ ದುರುಪಯೋಗ ತಡೆ ಕ್ರಮಗಳ ಬಗ್ಗೆ ವಿವರಿಸಿದರು. ಉಪನ್ಯಾಸದ ಅಂತ್ಯದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು.
ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಹೆಚ್.ಆರ್. ತಿಪ್ಪೇಸ್ವಾಮಿ ಅವರು ಯುವಜನತೆ ಹಾಗೂ ಸಾಮಾಜಿಕ ಸಾಮರಸ್ಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.
ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಮತ್ತು ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್, ಗ್ರಾಮದವರಾದ ಬಸವರಾಜ್, ಹಾಲಪ್ಪ, ಮಹದೇವಪ್ಪ, ಕುರಿಯರ್ ದುರುಗಪ್ಪ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಭ್ರಷ್ಟಾಚಾರ ವಿರೋಧಿ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ7 days agoಬ್ಯಾಕ್ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
-
ಅಂಕಣ5 days agoನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
-
ದಿನದ ಸುದ್ದಿ5 days agoಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್ ಚೀಟಿ ಇಲ್ಲದೆ ಅಕ್ರಮ ಸಾಗಾಣಿಕೆ ; ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲು..!?
-
ದಿನದ ಸುದ್ದಿ7 days ago‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
-
ದಿನದ ಸುದ್ದಿ5 days agoಕೆ. ಶಿವರಾಜಕುಮಾರ್ ಅವರಿಗೆ ಪಿಎಚ್ ಡಿ ಪದವಿ
-
ದಿನದ ಸುದ್ದಿ4 days agoಶಿಕ್ಷಕರು, ವಾರ್ಡನ್ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ
-
ದಿನದ ಸುದ್ದಿ3 days agoಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

