Connect with us

ದಿನದ ಸುದ್ದಿ

ನಿತ್ಯ ಭವಿಷ್ಯ- ಶನಿವಾರ | ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ : ಕರೆಮಾಡಿ

Published

on

ಶ್ರೀ ದುರ್ಗಾ ಆಂಜನೇಯ ಸ್ಮರಣೆಯನ್ನು ಮಾಡುತ್ತಾ ಈ ದಿನದ ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ.

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹ, ಇನ್ನು ಇತ್ಯಾದಿ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ತಾಂತ್ರಿಕ್ ವಿಧಾನಗಳಿಂದ ಪರಿಹಾರ ಶತಸಿದ್ಧ.

ಇಂದೇ ಕರೆ ಮಾಡಿ.
9945410150

ಮೇಷ ರಾಶಿ

ಕಚೇರಿ ವ್ಯಾಜ್ಯಗಳಲ್ಲಿ ನಿಮ್ಮ ಹಿತ ನೆರವೇರುವ ಸಾಧ್ಯತೆ ಇದೆ. ಕಾರ್ಯಗಳು ಮಾಡುವ ಮುನ್ನ ಕೆಲಸದ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ. ಸಂಗಾತಿಯೊಡನೆ ಮನೋರಂಜನಾತ್ಮಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಹೊಸ ಒಪ್ಪಂದಗಳನ್ನು ಈ ದಿನ ಮಾಡಲು ಬಯಸುವಿರಿ, ಎಚ್ಚರ ಇರಬೇಕಾದ ಸಮಯವಿದು ಯೋಜನೆಯ ಲಾಭಾಂಶವಾಗಿ ಕಂಡರೂ ಸಹ ಅದು ಒಳಭಾಗದಲ್ಲಿ ನಕಾರಾತ್ಮಕ ಫಲಿತಾಂಶದಿಂದ ಕೂಡಿರಬಹುದು.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ವೃಷಭ ರಾಶಿ

ಸಾಲಕೊಡುವ ಪ್ರಮೇಯ ಬಂದರೆ ಆದಷ್ಟು ಈ ದಿನ ನಯವಾಗಿ ತಡೆಹಿಡಿಯುವುದು ಒಳಿತು. ಗೃಹಾಲಂಕಾರಕ್ಕೆ ಹೆಚ್ಚಿನ ಒತ್ತು ನೀಡುವಿರಿ. ಈ ದಿನ ಪ್ರೀತಿಯ ಭಾವನೆಯಲ್ಲಿ ಕಾಲ ಕಳೆಯುವ ಸಾಧ್ಯತೆ ಇದೆ. ಗಣ್ಯರ ಭೇಟಿ ಮಾಡುವ ಅವಕಾಶ ನಿಮಗೆ ಸಿಗಲಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮಿಥುನ ರಾಶಿ

ಈದಿನ ಇತರರಿಗಾಗಿ ನೀವು ಸಮಯವನ್ನು ವಿನಿಯೋಗಿಸಲು ಪ್ರಯತ್ನಿಸುವಿರಿ. ಅಪ್ರಸ್ತುತ, ಅಸಂಬದ್ಧ ವಿಚಾರಗಳಲ್ಲಿ ಹೆಚ್ಚು ಕಾಲಹರಣ ಮಾಡುವುದು ಬೇಡ. ಉದ್ಯೋಗದಲ್ಲಿನ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಲು ಮುಂದಾಗಿ. ನಿಮ್ಮ ಸಮಸ್ಯೆಯನ್ನು ಪತ್ನಿಯ ಜೊತೆಗೆ ಹಂಚಿಕೊಳ್ಳುವುದರಿಂದ ಪರಿಹಾರದ ಮಾರ್ಗಗಳು ದೊರೆಯಲಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕರ್ಕಾಟಕ ರಾಶಿ

ಮಾತಿನಲ್ಲಿ ನೈಜತೆ ಇರಲಿ ಇದರಿಂದ ಅವಕಾಶಗಳು ನಿಮ್ಮ ಖಾತೆಗೆ ಸೇರಲಿದೆ. ನಿಮ್ಮ ಹಾಸ್ಯ ಸ್ವಭಾವದಿಂದ ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವಿರಿ. ಕುಟುಂಬದ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷವಾದ ಯೋಜನೆಗಳನ್ನು ರೂಪಿಸುವ ಸಾಧ್ಯತೆಯಿದೆ. ನಿಮ್ಮ ವೃತ್ತಿರಂಗದಲ್ಲಿ ಉತ್ತಮ ಹಂತದ ಬೆಳವಣಿಗೆ ಕಾಣಲಿದ್ದೀರಿ. ಯೋಜನೆಯನ್ನು ಹೊಸ ಸಂಪರ್ಕ ಹಾಗೂ ವಿಸ್ತರಣೆಯಿಂದ ಬಲಗೊಳಿಸುವ ಸಾಧ್ಯತೆ ಇದೆ. ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಸುಂದರ ಪ್ರದೇಶದ ತಾಣಗಳಿಗೆ ಭೇಟಿ ನೀಡಲು ಪ್ರಯತ್ನಿಸುವುದು ಒಳ್ಳೆಯದು.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಸಿಂಹ ರಾಶಿ

ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಮಯವಿದು. ಇನ್ನೊಬ್ಬರನ್ನು ನಂಬಿ ಜೀವನ ನಡೆಸುವುದನ್ನು ತ್ಯಜಿಸತಕ್ಕದ್ದು. ಕೆಲಸದಲ್ಲಿ ಆದಷ್ಟು ಪಾಲ್ಗೊಳ್ಳಿ. ಸೋಮಾರಿತನ ಅಥವಾ ಅಂಜಿಕೆಯ ಸ್ವಭಾವನ್ನು ತೆಗೆದಿಟ್ಟು ಮುನ್ನಡೆಯಿರಿ. ದೈವ ಕೃಪಾಕಟಾಕ್ಷಕ್ಕೆ ಮೊರೆಹೋಗುವ ಸಾಧ್ಯತೆ ಕಾಣಬಹುದು. ಯಶಸ್ವಿದಾಯಕ ನಿರ್ಣಯಗಳು ನಿಮ್ಮಿಂದ ಈ ದಿನ ಬರಲಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕನ್ಯಾ ರಾಶಿ

ಹಣಕಾಸಿನ ವ್ಯವಹಾರ ನಿಮ್ಮ ವಿಚಾರದಂತೆ ನಡೆಯಲಿದೆ. ವ್ಯವಹಾರದಲ್ಲಿ ಆದಷ್ಟು ಇನ್ನೊಬ್ಬರ ಹಸ್ತಕ್ಷೇಪವನ್ನು ತಡೆಗಟ್ಟಿ. ನೀವು ಮಾಡುವ ಕಾರ್ಯಗಳು ಪ್ರಶಂಸೆ ಪಡೆಯಲಿದೆ. ನಿಮ್ಮ ವಿಚಾರಗಳಂತೆ ಯೋಚಿಸುವ ಗೆಳೆಯರು ಸಿಗಬಹುದು. ಅಸಾಧ್ಯವಾದ ಕಾರ್ಯಗಳನ್ನು ಸಲೀಸಾಗಿ ಮಾಡಿಮುಗಿಸುವ ವಿಚಾರಶಕ್ತಿ ನಿಮ್ಮಲ್ಲಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ತುಲಾ ರಾಶಿ

ಹಣಕಾಸಿನ ವಿಚಾರಗಳಲ್ಲಿ ಇಂದು ಬಹುತೇಕ ಹಿನ್ನಡೆ ಕಾಣಬಹುದು. ಕುಂಟುತ್ತಿರುವ ನಿಮ್ಮ ಅರ್ಥವ್ಯವಸ್ಥೆಯನ್ನು ಸರಿದಾರಿಗೆ ತೆಗೆದುಕೊಂಡು ಬರಬೇಕಾಗಿದೆ. ಹಿತವಚನಗಳನ್ನು ಸಮಾಧಾನಚಿತ್ತದಿಂದ ಕೇಳುವುದು ಒಳಿತು.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ವೃಶ್ಚಿಕ ರಾಶಿ

ಹಿರಿಯರ ಬಗ್ಗೆ ಗೌರವವನ್ನು ರೂಡಿಸಿಕೊಳ್ಳಿ. ಮಾತಿನಲ್ಲಿ ವಿನಯತೆ ಇದ್ದರೆ ನಿಮ್ಮ ಕಾರ್ಯಗಳು ಸುಲಭವಾಗುತ್ತದೆ. ಬಂಧು ವರ್ಗದಿಂದ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಜಮೀನು ಮಾರಾಟ ಮಾಡುವ ಯೋಚನೆ ನೆನೆಗುದಿಗೆ ಬೀಳಬಹುದಾದ ಸಾಧ್ಯತೆ ಕಾಣುತ್ತದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಧನಸ್ಸು ರಾಶಿ

ಬಲಿಷ್ಠ ವ್ಯಕ್ತಿತ್ವದವರಾದ ನೀವು ಕೆಲವು ಮಾನಸಿಕ ಚಿಂತೆಗಳಿಂದ ಕುಗ್ಗ ಬಹುದಾದ ಸಾಧ್ಯತೆ ಇದೆ. ಕುಟುಂಬದಲ್ಲಿ ವಾದ-ವಿವಾದಗಳು ಹೆಚ್ಚಾಗುವ ಸಾಧ್ಯತೆಯಿದೆ. ನಿಮ್ಮ ವೈಯಕ್ತಿಕವಾದ ವಿಷಯಗಳು ಚರ್ಚಾಸ್ಪದವಾಗಿ ಕಾಣಿಸಬಹುದಾದ ಸಾಧ್ಯತೆ ಇದೆ. ಬಹುನಿರೀಕ್ಷಿತ ಯೋಜನೆಯು ನಿಮ್ಮ ಆರ್ಥಿಕ ವ್ಯವಸ್ಥೆಯನ್ನು ಸದೃಢರನ್ನಾಗಿ ಮಾಡಲಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮಕರ ರಾಶಿ

ಹಣಕಾಸಿನಲ್ಲಿ ಉತ್ತಮ ಆದಾಯ ಇಂದು ನಿರೀಕ್ಷಿಸಬಹುದು. ಮಿತ್ರ ವರ್ಗದಲ್ಲಿ ಅಸೂಯೆ ಹೆಚ್ಚಾಗುವ ಸಾಧ್ಯತೆ ಕಾಣಬಹುದು. ನಿಮ್ಮಲ್ಲಿನ ಪ್ರತಿಭೆಗೆ ಹೇರಳವಾದ ಅವಕಾಶಗಳು ದೊರೆಯಲಿದೆ. ದಂಪತಿಗಳಲ್ಲಿ ಮನಸ್ತಾಪಗಳನ್ನು ತೆಗೆದು ಹಾಕುವ ನಿಟ್ಟಿನಲ್ಲಿ ಕಾರ್ಯ ಆರಂಭಿಸಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕುಂಭ ರಾಶಿ

ಅಧ್ಯಯನಶೀಲತೆ ಎಂಬುದು ನಿರಂತರವಾಗಿರಲಿ, ಮನಸ್ಸು ಚಂಚಲ ಮಾಡಿಕೊಂಡು ಶಿಕ್ಷಣದ ಬಗ್ಗೆ ಅಲಕ್ಷ ಮಾಡಬೇಡಿ. ನೌಕರಿಯ ವಿಷಯದಲ್ಲಿ ಉತ್ತಮ ಪ್ರತಿಫಲ ನಿಮಗೆ ದೊರೆಯಲಿದೆ ಆದರೆ ಪ್ರಯತ್ನ ಮುಂದುವರೆಯುವುದು ಒಳ್ಳೆಯದು. ಮಕ್ಕಳಿಗಾಗಿ ಇಂದು ಅಧಿಕ ಹಣಕಾಸು ಖರ್ಚು ಮಾಡುವ ಸಾಧ್ಯತೆ ಇದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮೀನ ರಾಶಿ

ಹೊಸ ವಸ್ತುಗಳ ಖರೀದಿಗೆ ಇಂದು ಅವಕಾಶ ದೊರೆಯಲಿದೆ. ಗಳಿಸಿರುವ ಸ್ನೇಹವನ್ನು ಉಳಿಸಿಕೊಂಡು ಹೋಗುವುದು ನಿಮ್ಮ ವ್ಯಕ್ತಿತ್ವ ಪ್ರಕಾಶಮಾನವಾಗಿಸುತ್ತದೆ. ಕುಟುಂಬಕ್ಕಾಗಿ ಒಂದು ಉತ್ತಮ ಕೆಲಸ ಮಾಡುವ ಅವಕಾಶ ಲಭಿಸಲಿದೆ. ಸಂಗಾತಿಯ ಕೆಲವು ಪ್ರಶ್ನೆಗಳು ನಿಮಗೆ ಮನಸ್ಸಿನಲ್ಲಿ ಬಹು ಕಾಡಲಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಗಿರಿಧರ ಭಟ್
ನಿಮ್ಮ ಸಮಸ್ಯೆಗಳ ಸಮಾಲೋಚನೆಗಾಗಿ ಲಭ್ಯರಿದ್ದಾರೆ. ಪರಿಹಾರ ಮಾರ್ಗದರ್ಶನಕ್ಕಾಗಿ

ಇಂದೇ ಕರೆ ಮಾಡಿ: 9945410150

ದಿನದ ಸುದ್ದಿ

ಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಡಿಸಿ ಗಂಗಾಧರ್ ಸ್ವಾಮಿ

Published

on

ಸುದ್ದಿದಿನ,ದಾವಣಗೆರೆ:ನಗರದ ಎಂಸಿಸಿ ಬ್ಲಾಕ್ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆಬ್ರವರಿ 23 ರಂದು ಉದ್ಯೋಗ ಮೇಳ ನಡೆಯಲಿದೆ, ಮೇಳದಲ್ಲಿ ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ಕಾರ್ಯಕ್ರಮ ಯಶಸ್ವಿಗೆ ಅಧಿಕಾರಿಗಳು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅವರು ತಿಳಿಸಿದರು .

ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು .

ಬೃಹತ್ ಉದ್ಯೋಗ ಮೇಳಕ್ಕಾಗಿ ಈಗಾಗಲೇ ಪೋರ್ಟಲ್ ಮೂಲಕ ನೋಂದಣಿ ಆರಂಭವಾಗಿದ್ದು, 45ಕ್ಕೂ ಹೆಚ್ಚು ಕಂಪನಿಗಳು ನೋಂದಾಯಿಸಿಕೊಂಡಿವೆ. ಇನ್ನು ಸುಮಾರು 20 ಕಂಪನಿಗಳು ಬರುವ ಸಾಧ್ಯತೆ ಇದೇ, ಇದರಲ್ಲಿ ಐಟಿ, ಮಾಸ್ಟರ್ ಡಿಗ್ರಿ, ಐಟಿಐ ಮತ್ತು ಎಸ್‌ಎಸ್‌ಎಲ್‌ಸಿ, ಪಿಯುಸಿ ಅಭ್ಯರ್ಥಿಗಳಿಗೆ ಐಟಿ ವಲಯ ಬ್ಯಾಂಕ್ ಕ್ಷೇತ್ರ, ಮಾರ್ಕೆಟಿಂಗ್ ಮ್ಯಾನೇಜ್ಮೆಂಟ್, ಫಾರ್ಮಸಿಟಿಕಲ್ ಸೇರಿದಂತೆ ಇನ್ನು ಅನೇಕ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ನೀಡುವ ವಿವಿಧ ಕಂಪನಿಗಳು ಸೇರಿವೆ. ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವಂತೆ ಕಾಲೇಜುಗಳಿಗೆ ಪತ್ರ ವ್ಯವಹಾರ ಮಾಡಿದ್ದು ಪ್ಲೇಸ್‌ಮೆಂಟ್ ಆಫೀಸರ್‌ಗಳ ಭೇಟಿ ಮಾಡಲಾಗಿದೆ ಎಂದು ತಿಳಿಸಿದರು.

ಸಾಮಾಜಿಕ ಜಾಲತಾಣದಲ್ಲಿ, ಪೋಸ್ಟರ್‌ಗಳು, ಜಿಂಗಲ್ಸ್ ಮತ್ತು ಸ್ವಚ್ಛ ಭಾರತ್ ವಾಹನಗಳ ಮೂಲಕ ವ್ಯಾಪಕ ಪ್ರಚಾರ ಮಾಡಲು ಕೈಗೊಳ್ಳಬೇಕು, ಸುಮಾರು 4,000 ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಸಾಧ್ಯತೆ ಇದೆ, ಆದುದರಿಂದ ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕು,
ವಿದ್ಯಾರ್ಥಿಗಳಿಗೆ ಲಘು ಉಪಹಾರ, ನೀರು, ಪ್ರಾಥಮಿಕ ಆರೋಗ್ಯ ಕೇಂದ್ರದ ಆಂಬುಲೆನ್ಸ್ ವ್ಯವಸ್ಥೆ, ವಿಶೇಷ ಬಸ್ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.

ಸುಮಾರು 1,200 ಅಭ್ಯರ್ಥಿಗಳು ಈಗಾಗಲೇ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಗೆ ಸಚಿವರು, ಗಣ್ಯರನ್ನು ಆಹ್ವಾನಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಬೃಹತ್ ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಸಿಇಒ ಗಿತ್ತೆ ಮಾಧವ ವಿಠಲ್ ರಾವ್, ಯೋಜನಾ ನಿರ್ದೇಶಕ ಮಹಾಂತೇಶ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending